ಒಟ್ಟು 241 ಕಡೆಗಳಲ್ಲಿ , 54 ದಾಸರು , 234 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ಪ ಜಲಜನಾಭನ ಮರೆತು ಜಲದಲ್ಲಿ ಮಿಂದು ಹೆ ಬ್ಬುಲಿ ಬಣ್ಣದಂತೆ ನಾಮಗಳ ಧರಿಸಲೇನು 1 ಸನಕಾದಿ ಮುನಿವಂದ್ಯ ಮನಸಿಜ ಜನಕಾ ನಮ್ಮನನು ಕಾಯುತಿರೆ ಭೂಮಿಧನವೇ ಜೀವನನೆಂಬುವಗೆ 2 ಶಿರಿಗೋವಿಂದ ವಿಠಲನ ಸಂಸ್ತುತಿಸುವ ಹರಿದಾಸನ ತಿರಸ್ಕರಿಸುವ ದುರುಳಗೆ 3
--------------
ಅಸ್ಕಿಹಾಳ ಗೋವಿಂದ
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನನಗ್ಯಾಕೆ ಬಡತನವು ಸನಕಾದಿನುತ ನಿನ್ನ ಬೆನ್ನು ಬಲವಿರಲು ಪ ಪುಂಡಗಂಡನು ಇರಲು ಹೆಂಡತಿಯ ಭೋಗ ಭೂ ಮಂಡಲದೊಳಗಿನ್ನುತ್ವವ್ಯಾಕೋ ಭಂಡರಕ್ಕಸಹರ ಪುಂಡಮಂಡಲತ್ರಯದೋ ಮಂಡೆ ಮೇಲಿರಲು 1 ಜನರಿಗೆ ಕಾಣದ ಧನವ ಕೂಡಿಟ್ಟು ಅನುದಿನ ಹಿಗ್ಗುವವರಿಗೆ ಬಡತನವುಂಟೇನೊ ಧಣಿಯಾಗಿ ಮೂಲೋಕವನು ಉದರದಿಟ್ಟಾಳ್ವ ಪಾದ ಮನಮಂದಿರದಿರಲು 2 ಕಲ್ಪಿತಸಂಸಾರ ಅಲ್ಪೆಂದು ನಿಜವಾಗಿ ಕಲ್ಪಿಸಿಕೊಂಡವರು ಅಲ್ಪರೇನಯ್ಯ ಕಲ್ಪತರು ಶ್ರೀರಾಮನ ಕಲ್ಪಾಂತರರಿಬಳಿ ಕಲ್ಪರಲ್ಲಿಗೆ ಹೋಗಿ ಅಲ್ಪರಿವರೇನೊ 3
--------------
ರಾಮದಾಸರು
ನಮಿಸುವೆ ಕೇಶವ ರಂಗನ ನಮಿಸುವೆ ಪ್ರಣವ ಸ್ವರೂಪನ ಪ ಸನಕ ಸುಸೇವಿತ ಕೃಷ್ಣನ1 ಸರಸದಿ ದಾಸರಿಗೊಲಿಯುವ ಹರಿಯ ಪರಮ ಪಾವನ ಮೂರ್ತಿಯ 2 ಪನ್ನಗಶಯನನ ಹರಿ ಮಾಧವನ ಚನ್ನಿಗ ಕೇಶವ ದೇವನ 3 ದೂರ್ವಾಪುರ ಮಧ್ಯದಿ ನೆಲೆಸಿರುವ ಸರ್ವಜಗದೇಕಾತ್ಮನ 4
--------------
ಕರ್ಕಿ ಕೇಶವದಾಸ
ನಮೋ ನಮೋ ನಂದಕುಮಾರ ನಿನ- ಗೆದುರ್ಯಾರೊ ಯದುಕುಲ ವೀರ ಭಜಿ- ಸುವ ಭಕ್ತ ಜನರುದ್ಧಾರ ಮಾಡೊ ಪರಮ ದಯಾಳು ನೀ ಸರ್ವ ಸ್ವತಂತ್ರ ನಿನ್ನ ಧ್ವಜ ವಜ್ರಾಂಕುಶ ರೇಖಾ ವೆಂಕಟಾದ್ರೀಶ ನಮೋ ನಮೋ ಪ ಶ್ರೀಶ ಜಗದ್ಭರಿತ ನೀನು ಒಂದು- ಕಾಸಿಗ್ವಿಷಯಗಳಲ್ಲ ನಾನು ನಿನ್ನ ದ(ರ್ಶ)ನ ಹಾರೈಸುವೆನು ಪರಮ ನುಗ್ರ(ಹ)ದಿ ಪಾಲಿಸೋ ನೀನು ಹರೇ ದೋಷರಹಿತ ಎನ್ನ ದೋಷನಾಶನ ಮಾಡಿ ಶೇಷಶಯನ ಶ್ರೀನಿವಾಸ ನೀ ದಯಮಾಡೊ1 ಬಾಯಿ ಬೀಗವನ್ಹಾಕಿ ಚರಿಯೆ ಗಂ- ಡಾರತಿ(?) ಶಿರದ ಮೇಲ್ಹೊರೆಯೆ ನಿನ್ನ ನಾಮವ ಕೊಂಡಾಡಲರಿಯೆ ಪಾದ- ಚಾರ್ಯಾಗಿ ಬರುವುದೀಪರಿಯೆ ತಿಳಿದು ಮಾನ್ಯದೊಕ್ಕಲು ಎಂದು ಬಹುಮಾನದಿಂದಿಟ್ಟು ಮಾಧವ ಕರುಣದಿ 2 ಬಾಡಿಗಿದ್ದರಾಯನ್ಹಿಡಿಯ (?) ನಿನ್ನ ಅನುಮತಿಲ್ಲದೆ ದಾರಿ ನಡೆಯ ಬ್ಯಾಡ ಬಿಡು ಲೋಭಿತನವ ಎ- ನ್ನೊಡೆಯ ಬಿಡದೆ ಕಾಡುತ ಕಾಸು ಕವಡೆ ಕಡ್ಡಿ ಕಣಜಕ್ಕೆ ಈ ಪರಿ ಗಳಿಕೆ ದೇಶದ ಮೇಲೆ ಕಾಣೆನು 3 ಮುಡಿಪು ಬೇಡುವುದ್ಹೇಳೊ ಎಷ್ಟು ನಿನ್ನ ಬಡಿತ ತಡೆಯಲಾರೆ ಪೆಟ್ಟು ಮಡಿ ಮೈಲಿಗೆಂದರೆ ಅತಿಸಿಟ್ಟು ನಾ ಬಿಚ್ಚಾಡುವೆನೊ ಬೀಡ ಬಿಟ್ಟು ಪ ್ರ- ಸಾದ ತೀರ್ಥ ಬೇಕಾದರೆ ಕ್ರಯಕಟ್ಟಿ ಗಂ- ಟ್ಯಾರಿಗೆ ಮಾಡುವಿ ಹೇಳೆನಗೊಂದಿಷ್ಟು 4 ಸತಿಗೆ ಮಾಡುವೆ ಲಕ್ಷ್ಮೀಪತಿಯೆ ನಿನ ಸುತ ಸತ್ಯಲೋಕದಧಿಪತಿಯೆ ಅತಿ ಹಿತ ಭಕ್ತರಿಗೆ ಭಿಕ್ಷೆಗತಿಯೇ ನೀಡಲು ಧನವೊಲ್ಲದೆ ಬೇಡುವರೊ ಸದ್ಗತಿಯ ನಿನ- ಗತಿಯಾಸೆ ಘನತ್ಯಲ್ಲ ಗತಿಪ್ರದಾಯಕ ಕೇಳೊ ಪೃಥುವೀಶ ನಿನ್ನದಲ್ಲವೆ ಸಕಲೈಶ್ವರ್ಯ 5 ಕನಕಗಿರಿದೊರೆಯೆಂಬೊದೆಲ್ಲೊ ಬಂದ ಜನಕೆ ಅನ್ನವ ನೀಡಲೊಲ್ಲ್ಯೊ ಜಗ- ಜನಕ ನಿನ್ನನು ಕಾಣಲಿಲ್ಲೋ ನಾನಿ- ರ್ಧನಿಕನೆಂಬುವುದು ನೀ ಬಲ್ಲ್ಯೊ ಎನ- ಗನುಕೂಲ ಧೈರ್ಯವ ಕೊಟ್ಟು ನಿನ್ನ ದರುಶನ ಸನಕಾದಿಗಳೊಡೆಯ ನಿನ್ನ ಮನಕೆ ಬಂದರೆ ನೀಡೊ6 ಶಂಕರ ಸುರರಿಂದ್ವಂದಿತನೊ ನಾ ಕಿಂಕರ ನರರಿಂದ ನಿಂದಿತನೊ ನೀ ಮಂಕುಜನರ ಪಾಪ ಪರಿಹಾರಕನೊ ಹರೇ ಶಂಖ ಚಕ್ರಾಂಕಿತ ಭೀಮೇಶಕೃಷ್ಣನ ನಾಮ ಶಂಕೆಯಿಲ್ಲದೆ ಕೊಟ್ಟು ವೆಂಕಟ ದಯಮಾಡೊ 7
--------------
ಹರಪನಹಳ್ಳಿಭೀಮವ್ವ
ನವರತ್ನದ ಮಂಟಪದಿ ಮೆರೆವೊ ಸುಖಾಸನಕೆ ಈಗ ನವಮೋಹನ ರಘುರಾಮನೆ ನೀನು ಬಾ ಬೇಗ ಪ. ದಶರಥನುದರದಿ ಜನಿಸಿ ಅಸುರ ತಾಟಕಿಯನು ಸಂಹರಿಸಿ ಋಷಿಗಳ್ಯಾಗವ ಕಾಯ್ದದು ನೀನು ಋಷಿ ಪತ್ನಿಯರನು ಉದ್ಧರಿಸೀ ಪತಿವ್ರತೆಯೆನಿಸಿದ ಅತುಳ ಮಹಿಮ ಶ್ರೀರಾಮ ಬಾ ಬೇಗ ಅತುಳ ಮಹಿಮ ಶ್ರೀರಾಮ ಬಾ ಬೇಗ1 ಶಿವಧನುವೆತ್ತಿದ ಧೀರ ಸೀತಾದೇವಿಯ ಕರವನೆ ಪಿಡಿವಾ ತವಕದಿ ಮುರಿದಾಯೋಧ್ಯಯಾಳಿದ ಶ್ರೀ ಶ್ರೀನಿವಾಸನೆ ನೀನು ಬಾ ಬೇಗ ಸುಖಾಸನಕೆ 2
--------------
ಸರಸ್ವತಿ ಬಾಯಿ
ನಾಚಿಕಿಲ್ಲೆ ಮನವೆ ಲೋಚಿ ಬಿಟ್ಟ ದನವೆ ಊಚ ನೀಚಕಾಗಿ ಹೊಡೆದಾಡುದಿನ್ನು ಗುಣವೆ 1 ಹೇಸಿಕಿಲ್ಲೆಂಬುದು ವಿಷಯದೊಳು ನಿಂದು ವ್ಯಸನಕಾಗಿ ಫಸಿಗೆ ಬೀಳುವದೆ ನಿನ್ನ ಕುಂದು 2 ಜನಿಸಿ ಯೋನಿಯಮುಖ ಏನು ಕಂಡ್ಯೊ ಸುಖ ಶ್ವಾನಸೂಕರದ ಜನ್ಮ ತಾಳಿದಿ ಅನೇಕ 3 ಭವ ಬವಣಿಗೆ ಬುದ್ಧಿ ಇದೆ ಶರಣುಹೋಗು ಸದ್ಗುರುವಿಗೆ 4 ಪಿಡಿದು ಗುರುಪಾದ ಪಡಿಯೊ ನಿಜಬೋಧ ಮೂಢ ಮಹಿಪತಿ ನಿನಗಿದೆ ಸುಪ್ರಸಾದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ಹರಿ ನಾಮವ ಭಜಿಪಗೆ ನರಕದ ಭಯವುಂಟೆ ನಾರದ ಸನಕ ಸನಂದನ ಸುರನರ ಪಾಲಿತ ಕರುಣಾಕರನರಹರಿ ಎಂದು ಪ ಖಗರಾಜಗಳುಕದ ಉರಗನುಂಟೆ ದೊಡ್ಡ ಮೃಗರಾಜ ಗಳುಕದ ಆನೆಯುಂಟೆ ನಿತ್ಯ ಜಗದುದರನೆ ಜಗದೊಡೆಯ ಜಾಹ್ನವಿಪಿತ ತ್ರಿಗುಣ ನಿರ್ಗುಣನೆಂದು1 ತ್ರಯಂಬಕ ನುರಿಗಣ್ಣ ಲುಳಿದವರುಂಟೆ ಬಲಿಬಂಧನ ನರಹರಿ ಎಂದು 2 ಕುಳಿಶಕಳುಕದ ಪರ್ವತವುಂಟೆ ಚಲುವ ನಳಿನ ಮಿತ್ರನ ಮುಂದೆ ತಮವುಂಟೆ ಕಾಮ ಚೆಲುವ ಜಲಜಮಿತ್ರ ಕುಲಲಲಾಮನೆ ಎಂದು 3 ಹರಿಯೆ ರಕ್ಷಿಸಲು ಕೊಂದವರುಂಟೆ ಮನ ಮುರಿದು ಕೊಂದರೆ ಕಾವವರುಂಟೆ ಮುರಹರ ನಾರಾಯಣ ನರಹರಿ ಕರಿವರದ ಪಾಲಿತ ಸುರನರರ ಸೇವಿತನೆಂದು 4 ಹುತಾಶನನಿಗಳುಕದ ಕಾನನವುಂಟೆ ವನರುಹಾಂಬಕ ವಾಯುತನಯ ಕೋಣೆಯ ಲಕ್ಷ್ಮಿರಮಣ ಸನಕ ಸುತ ಚಿನುಮಯಾತ್ಮಕನೆಂದು 5
--------------
ಕವಿ ಪರಮದೇವದಾಸರು
ನಿತ್ಯ ಚರಣ ಕಮಲವನ್ನು ಭವ ಹರಣ ನಾರಾಯಣ ಪ ಕನಸಿನ ಸಂಸಾರ ನೆನಸದಂತೆ ಎನ್ನಾ ಮನಸ್ಸು ಶ್ರೀಹರಿನಿಜ ಬರಿವಿನೊಳ್ ನಿಲಿಸಯ್ಯಾ 1 ಮಂದ ಬುದ್ಧಿಲಿ ನಿಜಾನಂದವನರಿಯದೇ ಬಂಧನೆಗೊಳಗಾದೆ ತಂದೆ ನೀ ರಕ್ಷಿಸೊ2 ದುರಿತಗಳೆಲ್ಲವ ಹರಣಗೊಳಿಸಿ ನಿಜ ಸ್ಮರಣೆಯೊಳಿರುವಂತೆ ಕರುಣದಿ ನೋಡೆನ್ನಾ 3 ಶಬರಿಯ ಕಾಯ್ದೆಯಾ ಬದರಿಯ ಫಲವುಂಡು ವಿಭು ಪರಮಾನಂದಾ ಪ್ರಭೆಯೊಳಗಿರಿಸೆನ್ನಾ 4 ನೆನೆವರ ಮನದಾ ಕೊನೆಯಲಿ ಮಿನುಗುವ ಸನಕಸನಂದನ ವಂದಿತನೀದೇವಾ 5 ವಾಸುದೇವನೇ ನಿನ್ನ ದಾಸಿ ಶಾಂತಿಘನ ವಾಸ ಸ್ವಸುಖವೀವ ಕೇಶವಾಶ್ರಮಗುರು 6
--------------
ಶಾಂತಿಬಾಯಿ
ನಿತ್ಯ ಶುಭಮಂಗಳಂ ಪ. ವಸುದೇವತನಯನಿಗೆ ವೈಕುಂಠನಿಲಯನಿಗೆಕುಸುಮನಾಭನಿಗೆ ಕೋಮಲರೂಪಗೆಯಶೋದೆನಂದನಗೆ ವಸುಧೆಯ ರಮಣನಿಗೆನಸುನಗೆಯೊಳೊಪ್ಪುವ ನರಸಿಂಹಗೆ1 ಕೌಸ್ತುಭ ಹಾರಗೆಕನಕಾಂಬರಧರನಿಗೆ ಕಾರುಣ್ಯರೂಪನಿಗೆಸನಕಾದಿ ಮುನಿವಂದ್ಯ ನರಸಿಂಹಗೆ2 ಪಂಕಜನಾಭನಿಗೆ ಪಾಂಚಾಲಿರಕ್ಷÀಕಗೆಲಂಕೆಯನು ವಿಭೀಷಣನಿಗಿತ್ತವಗೆಕುಂಕುಮಾಂಕಿತನಿಗೆ ಕುವಲಯನೇತ್ರನಿಗೆಬಿಂಕದಿಂದಲಿ ಮೆರೆವ ನರಸಿಂಹಗೆ 3 ಪಕ್ಷಿವಾಹನನಿಗೆ ಪರಮಪಾವನನಿಗೆಕುಕ್ಷಿಯೊಳು ಜಗವನಿಂಬಿಟ್ಟವನಿಗೆಲಕ್ಷುಮೀಕಾಂತನಿಗೆ ಲಕ್ಷಣವಂತನಿಗೆಲಕ್ಷಣದೊಳೊಪ್ಪುವ ನರಸಿಂಹಗೆ4 ಭಕ್ತವತ್ಸಲನಿಗೆ ಭವದುಃಖದೂರನಿಗೆಮುಕ್ತಿದಾಯಕಗೆ ಚಿನ್ಮಯರೂಪಗೆಮಿತ್ರೆರುಕ್ಮಿಣಿ ಸತ್ಯಭಾಮೆಯರರಸನಿಗೆನಿತ್ಯಕಲ್ಯಾಣ ಶ್ರೀಹಯವದನಗೆ 5
--------------
ವಾದಿರಾಜ
ನಿತ್ಯ ಸುಪ್ರೀತ ಸರ್ವೋತ್ತಮ ಹರಿಯೆ ಚಿತ್ತಜನಯ್ಯ ಚಿನ್ಮಯ ಎನ್ನ ದೊರೆಯೆ ಪ. ಅರಿಯೆ ನಾನಾ ವಾಹನಾದಿ ವಿಧಿಯನು ಮರಿಯೆನು ಮನದಲ್ಲಿ ಮಂದಭಾವವನು ವರದೇಶ ನಿನ್ನಯ ಚರಣಾರವಿಂದವ ನೆರೆನಂಬಿದವನೆಂಬ ಪರಿಯಿಂದ ದಯವಾಗು 1 ಇಂದಿರಾವರವಿಧಿವಂದ್ಯ ಸರ್ವೇಶಾ- ನಿತ್ಯ ಸುಂದರ ವೇಷಾ ಮಂದ ಬುದ್ಧಿಯೊಳೆಂತು ಒಲಿಸುವೆ ಶ್ರೀಶಾ ತಂದೆ ನೀ ಕರುಣದಿ ಸಲಿಸಭಿಲಾಷಾ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನಿನ್ನ ನೆನೆದು ವಂದಿಸುವೆ ಚಂದನ ಮೂರ್ತಿಯನ್ನ ಸನಕಾದಿ ವಂದ್ಯ ಶೇಷಾಚಲನಾಯಕ ಅನಿಮಿಷ ಪತಿಯೆನ್ನ ಮನೆಯಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ಪ ನಿನಗಿಂತ ಕುಂದೇನೋ ಸನಕಾದಿಗಳ ಸ್ವಾಮಿಮನಸಿಜನೊಡೆಯನೆ ಕನಕಗರ್ಭನ ಜನಕ ಅ ಮಚ್ಚ್ಯಾವತಾರ ನೀನಾದರೆ - ಆಕೆಮಚ್ಚ್ಯಗಂಗಳೆ ತಾನಾದಳೊಹೆಚ್ಚಿನ ಶಂಖವ ಪಿಡಿದರೆ - ಆಕೆನಿಚ್ಚ ಶಂಖಕಂಠಳಾದಳಯ್ಯ 1 ನೀಲವರ್ಣ ನೀನಾದರೆ - ಆಕೆನೀಲಕುಂತಳೆ ತಾನಾದಳೊಲೋಲ ಕಮಲನಾಭನಾದರೆ - ಆಕೆಬಾಲ ಕಮಲಮುಖಿಯಾದಳಯ್ಯ2 ಬೆಟ್ಟವ ನೀನೊಂದು ಪೊತ್ತರೆ - ಆಕೆಬೆಟ್ಟದಂಥ ಕುಚವೆರಡು ಪೊತ್ತಳೊಮೆಟ್ಟಿ ಶೇಷನ ನೀ ತುಳಿದರೆ - ಆಕೆಕಟ್ಟಿ ಬಾಸೆಗೆ ಶೇಷನ ನಿಲಿಸಿಹಳಯ್ಯ3 ಗಜರಾಜವರದ ನೀನಾದರೆ - ಆಕೆಗಜಗಮನೆಯು ತಾನಾದಳಯ್ಯನಿಜ ನರಸಿಂಹ ನೀನಾದರೆ - ಆಕೆಭಜಿಸಿ ಸಿಂಹಮಧ್ಯೆಯಾದಳಯ್ಯ 4 ಈ ಪರಿಯೊಳು ನೀನು ಜನಿಸಿದೆ - ಭಲೆಭಾಪುರೆ ಬಾಡದೊಳು ನೆಲೆಸಿದೆಗೋಪಿಯರ ಮೋಹ ಸಲಿಸಿದೆ - ಚೆಲುವಶ್ರೀಪತಿ ಆದಿಕೇಶವರಾಯ ಮೆರೆದೆ5
--------------
ಕನಕದಾಸ
ನಿನಗೆ ಅಂಜುವನಲ್ಲ ನೀರಜಾಕ್ಷ ಪ ಮನವಚನ ಕಾಯದಿಂ ನಿನ್ನವರಿಗಂಜುವೆನುಅ ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು ಯೋಗ ಮಾರ್ಗದಿ ನಿನ್ನ ಭಜಿಸುತಿರಲು ಯೋಗ ಕುಂಭೋದ್ಭವನು ಬಂದು ಶಾಪವೆ ಕೊಡಲು ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ 1 ಗುಣವಂತರೀರ್ವರು ಜಯವಿಜಯರು ನಿನ್ನ ಅನುಗಾಲ ಬಾಗಿಲನು ಕಾಯುತಿರಲು ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ 2 ನೃಗರಾಯ ಪುಣ್ಯ ಬರಬೇಕೆನುತ ವಿಪ್ರರಿಗೆ ನಿಗಮೋಕ್ತಿಯಿಂದ ಗೋದಾನ ಕೊಡಲು ಜಗಳ ಪುಟ್ಟಿತು ನೋಡು ಅನ್ಯೋನ್ಯರೊಡಗೂಡಿ ಮಿಗೆ ಶಾಪ ಕೊಡಲವನನೊಪ್ಪಿಸಿದ ಬಗೆ ಬಲ್ಲೆ 3 ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ 4 ಅನಪರಾಧಿಗಳಿಗೆ ಇನಿತಾಯಿತೋ ದೇವ ಎನಗೆ ತನಗೆಂಬುವರಿಗಾವ ಗತಿಯೊ ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ 5
--------------
ವಿಜಯದಾಸ
ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ ಪ ಸನಕ ಸನಂದನ ಮುನಿಜನರಾಡುವ | ಘನ ಸುಖ ಮಾರ್ಗದಿನಡಿಯೋ ಹರಿಯ ಭಜಿಸಿ1 ಕುಂಟಿಣಿ ಗಣಿಕಾ ಜ ಮೇಳ ರುದ್ಧರಿಸಿದಾ | ಕಂಠದಿ ನಾಮವ ಜಡಿಯೋ ಹರಿಯ ಭಜಿಸಿ2 ಗುರುವರ ಮಹಿಪತಿ ನಂದನು ಸಾರಿದಾ | ಶರಣರ ಸಂಗವ ವಿಡಿಯೋ ಹರಿಯ ಭಜಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು