ಒಟ್ಟು 388 ಕಡೆಗಳಲ್ಲಿ , 75 ದಾಸರು , 340 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒದಗಿ ಬಂದಿತು ಯೋಗ ಒದಗಿ ಬಂದಿತು ಯೋಗ ಪ ಪದುಮೆಯರಸನು ರಥದೊಳಿರುವ ದರುಶನ ಭಾಗ್ಯ ಅ.ಪ ಭುಜಗಶಯನನು ದಿವ್ಯ ರಜತ ರಥದಲಿ ಬರಲು ಸುಜನರೆಲ್ಲರು ಸೇರಿ ಭಜನೆ ಮಾಡುವ ಭಾಗ್ಯ 1 ಅಂಗನಾಮಣಿಯರೆ ರಂಗವಲ್ಲಿಯೆ ಎತ್ತಿ ಮಂಗಳಾಂಗನು ದೀರ್ಘ ಮಾಂಗಲ್ಯವನೆ ಕೊಡುವ 2 ಬಾಲಕರ ಸಡಗರ ಬಾಲೆಯರ ವೈಯ್ಯಾರ ಬಾಲ ವೃದ್ಧರು ಸ್ವಾಮಿಯೋಲಗದಿ ಸಹಕಾರ 3 ಜಯಘೋಷಗಳ ಮಾಡೆ ಭಯಗಳನು ಬಿಡಿರಿ ಮನ ಬಯಕೆಗಳ ಆನಂದಮಯನು ನೀಡುವ ನಗುತ 4 ತನ್ನಿ ಫಲಕುಸುಮಗಳ ಧನ್ಯರಾಗಿರಿ ಕಣ್ಣಾರ ನೋಡಿ ಪ್ರಸನ್ನ ಶ್ರೀ ನಿಲಯನನು 5
--------------
ವಿದ್ಯಾಪ್ರಸನ್ನತೀರ್ಥರು
ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
ಕಂಡಿರ ಮಧುರ ನಾಥನ ಕಂಡವರು ಪೇಳಿ ದಮ್ಮಯ್ಯ ಪ ದುಂಡು ಮುಖದ ಮೋಹನಾಂಗನು ಕೊಂಡು ಪೋದನೆಮ್ಮ ಮನವ ಅ.ಪ ಮಲ್ಲಿಗೆ ತುಳಸಿ ಮಾಲತಿ ಎಲ್ಲಿ ಪೋದನು ಪೇಳಿ ಕೃಷ್ಣನು ವಲ್ಲಭನ ಚರಣಗಳಲಿ ನಿಮ್ಮನು ಸಲ್ಲಿಸಿದ ಹಂಗೆಮ್ಮೊಳಿದ್ದರೆ 1 ತೋರಿದೆರೆ ನಯನಾಭಿರಾಮನ ಸೇರುವೆ ಅವನಂಘ್ರಿಯುಗಳಕೆ ಭೂರಿ ತರದುಪಕಾರ ನಿಮಗೆ ಸ ತ್ಕಾರ ಬರುವುದು ವಿಧಿಭವರಿಂದ 2 ಪದ್ಮೆಯರಸನು ನಿಮ್ಮೊಳಿರುವ ಸುದ್ದಿ ಬಲ್ಲೆವು ತೋರದಿದ್ದರೆ ಪದ್ಮಸಂಭವ ಪಣೆಯ ಬರಹವ ತಿದ್ದಿ ಪೇಳಿರಿ ಪದ್ಮಗಳಿರ 3 ಪಾರಿಜಾತ ಸುಜಾತ ನಂದಕು ಮಾರ ಮಣಿಯೊಂದನು ಕೊಡಲಾರೆಯ ಹೇರು ವಿಧ ವಿಧ ರತ್ನ ಮಣಿಗಳ ಸೂರೆಗೈವ ಅಭೀಷ್ಠಪ್ರದಾತ 4 ಕೇಳಲೇನುಪಯೋಗವಿವರು ಪೇಳಲಾರರು ಸುದ್ದಿ ಎಮಗೆ ತಾಳಲೆಂತು ಪ್ರಸನ್ನ ಕೃಷ್ಣನೆ ಕೇಳೆಲೆಮ್ಮಯ ಮೊರೆಯ ದಯದಿ 5
--------------
ವಿದ್ಯಾಪ್ರಸನ್ನತೀರ್ಥರು
ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ಕಮಲಾಲಯ ವಿಠಲ | ಕಾಪಾಡೊ ಇವಳಾ ಪ ಅಮಿತ ಮಹಿಮಾತ್ಮಾ ಅ.ಪ. ಪಾದ | ವಂದನೆಯ ಬಯಸೀಬಂದಿಹಳು ಎನ್ನಲ್ಲಿ | ಕಂದರ್ಪಪಿತ ನಿನ್ನ |ಅಂದ ದಾಸ್ಯವ ಬಯಸಿ | ಪ್ರಾರ್ಥಿಸುತ್ತಿಹಳೋ 1 ಮನ್ನಿಸುತ ಮನ್ಮನದ | ಬಿನ್ನಪವ ಸಲಿಸುತ್ತನನ್ನೆಯಿಂ ತೈಜಸನು | ನೀನೇವೆ ಆಗೀಚೆನ್ನಮುತ್ತೈದುಳ್ಳ |ಹೆಣ್ಣೆನ್ಯ ರೂಪದಲಿಸನ್ನಿಹಿತ ದಂಕಿತವೆ ಸೂಚಿಸಿದೆ ಹರಿಯೇ 2 ವಜ್ರ ಕವಚವ ತೊಡಿಸಿಶ್ರೇಷ್ಠಭಕುತಳ ಗೈಯ್ಯೊ | ವಿಷ್ಠರ ಶ್ರವನೇ 3 ಎಲ್ಲೆಲ್ಲೂ ನೀನಿದ್ದು | ಬೆಲ್ಲದಚ್ಚಿನ ಪರಿಯಮಲ್ಲ ಮರ್ಧನ ಕೃಷ್ಣ | ಕೈಪಿಡಿದು ಇವಳಾಬಲ್ಲವರ ಸಂಗದಲಿ | ಚೆಲ್ವತವ ಮಹಿಮೆಗಳಸಲ್ಲಲಿತ ಮನದಲ್ಲಿ ಕೇಳುವಂತೆಸಗೋ 4 ಪತಿಸುತರುಹಿತರಲ್ಲಿ | ವಿತತ ನಿನ್ನಯಮೂರ್ತಿಅತಿಶಯಂಗಳ ಕಂಡು | ಮರುತಮಾರ್ಗದಲೀಹಿತ ಗುರು ಗೋವಿಂದ | ವಿಠಲನ್ನ ಸೇವಿಸುವಮತಿಯನೇ ಕೊಡು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕರುಣೆ ತೋರಿಸೊ ದೇವಾ ಕರಿವರದನೆ ಪ. ಕರುಣ ತೋರಿಸೊ ದೇವ ಗರುಡಗಮನ ನಿನ್ನ ಕಮಲ ಧ್ಯಾನ ನಿರುತ ನೆನೆವ ಹರಿಅ.ಪ. ವೇದಾಂತ ವೇದ್ಯ ನೀನೆ ಆದಿನಾರಾಯಣ ಸಾಧುವಂದಿತನು ನೀನೆ ದೇವೇಶನೆ ವೇದವ್ಯಾಸನು ನೀನೆ ಬಾದರಾಯಣ ನೀನೆ ಭವ ಭಯಹರ ನೀನೆ 1 ಚಿಂತೆ ಕೊಡುವ ನೀನೆ ಚಿಂತಿತಾರ್ಥನು ನೀನೆ ಅಂತಕ ದೂತರಿಂದೆಳೆಸುವ ನೀನೆ ಸರ್ವ ಅಂತರ್ಯಾಮಿ ಅಂತÀರಂಗದಿ ನಿಂತು ಪ್ರೇರಿಸಿ ನಿನ ಪಾದ ಪಂಥದಿ ಸ್ತುತಿಗೊಂಡು ಸಂತಸ ಪಡುವವ ನೀನೆ2 ಮಾನುನಿ ದ್ರೌಪದಿಯಾ ಮೊರೆಯ ಕೇಳಕ್ಷಯ ನೀನೆ ಪಾಲಿಸಲಿಲ್ಲವೆ ಶ್ರೀ ಕೃಷ್ಣ ನೀನಿತ್ತು ಸಲಹಿದ ಶ್ರೀ ಶ್ರೀನಿವಾಸ ದೊರೆ ಗಾನಲೋಲನೆ ಭಕ್ತರ ಸಲಹುವೆನೆಂಬುವ ಆಭಯ ಹಸ್ತವ ನೀನಿತ್ತು ಸಲಹೆನ್ನದೇವಾಧಿದೇವ 3
--------------
ಸರಸ್ವತಿ ಬಾಯಿ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆದು ತನ್ನಿ ಭರದಿಬನ್ನಿ ಸಿರಿಯನಿದಿರ್ವಂದು ನೀವು ಸಿರಿಯನಿದಿರ್ವಂದು ಭರದಿ ಕರೆದುತನ್ನಿ ಮೋದದಿ ಪ. ಕೋಟಿಸೂರ್ಯಚಂದ್ರರೆನಿತುಂ ಸಾಟಿಯಲ್ಲವೆನಿಸುವ ನೋಟಮಾತ್ರದಿಂದ ಜಗವ ನಾಟ್ಯರಂಗ ವೆನಿಸುವ 1 ಕಡಲ ತನಯೆ ಎನಿಸೆ ಮತ್ತೆ ಕಡಲಮಧ್ಯದಲ್ಲಿ ನೆಲಸಿ ಕಡಲಶಯನನ ಮಡದಿಯಾಗಿ ಬಿಡದೆ ನಮ್ಮ ಪೊರೆವಳ 2 ಶೇಷಶೈಲವಾಸನುರದಿ ವಾಸವಾಗಿ ಶರಣರ ಆಸೆಯನ್ನು ನಲಿಸುತಿರುವ ಭಾಸುರಾನನೆ ಲಕ್ಷ್ಮಿಯ 3
--------------
ನಂಜನಗೂಡು ತಿರುಮಲಾಂಬಾ
ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವದೇವ ನಿನಗೆ ನಾ ಕೈಮುಗಿದು ಬೇಡ್ವೆ ಕಾಮಜಪಿತ ಎನ್ನ ಕಾಯಮೋಹ ಬಿಡಿಸೈ ಪ ಮಸಣಬುದ್ದಿಯ ಮರೆಸು ಪುಸಿನುಡಿಯ ಪರಿಹರಿಸು ವಸನ ಒಡವ್ಯೆಂದೆಂಬ ವ್ಯಸನ ಕಡೆಹಾಯ್ಸು ದಿಸೆಗೆಡಿಸಿ ಬಳಲಿಸುವ ಹಸಿವು ತೃಷೆಯನಡಗಿಸಿ ಹಸನಗೆಡಿಸುವ ಮಮ ರಸನೆರುಚಿ ಕೆಡಿಸು 1 ಅಳದ್ಹೋಗ್ವ ಇಳೆಸುಖದ ಹಲುಬಾಟವನೆ ಬಿಡಿಸು ಮಲಿನಸಂಸಾರಮಾಯ ಕಳವಳಿಕೆ ತಪ್ಪಿಸು ಸಲೆ ಸಾಧುಸಂತತಿಯ ಬಳಗದೊಳು ಕೂಡಿಸು ಹೊಳೆಯಮನಸಿನ ಸಕಲ ಚಲನೆ ದೂರೆನಿಸುತ 2 ದೋಷರಾಶಿಯ ತೊಡೆದು ಮೋಸಪಾಶವ ಕಡಿದು ಆಸೆ ನಾಶಗೈದು ನಿರ್ದೋಷನೆನಿಸಿ ಶ್ರೀಶ ಶ್ರೀರಾಮ ನಿಮ್ಮ ಸಾಸಿರ ನಾಮವೆನ್ನ ಧ್ಯಾಸದಲಿ ಸ್ಥಿರನಿಲಿಸಿ ಪೋಷಿಸನುದಿನದಿ3
--------------
ರಾಮದಾಸರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ