ಒಟ್ಟು 388 ಕಡೆಗಳಲ್ಲಿ , 63 ದಾಸರು , 354 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಾರಿಗೆಲ್ಲಿಹದು ಫುಲ್ಲನಾಭನ ಸೇವೆ ಸುಲಭವಲ್ಲವಿದು ದುರ್ಲಭ ಸದ್ಗುರು ಮಾರ್ಗ ಧ್ರುವ ಕೋಟ್ಯಾನುಕೋಟಿಗೊಬ್ಬ ಮುಟ್ಟಿ ಕಂಡಿದರಲಿ ನೆಟ್ಟಿಸಿ ತನ್ನೊಳು ತಾ ದೃಷ್ಟಿಸಿ ಗುರುಪಾದ 1 ಮಾತಿನಂತಲ್ಲವಿದು ಜ್ಯೋತಿರ್ಮಯದ ಸುಖ ನೆÉೀತಿನೆÉೀತಿವೆಂಬುದು ಶ್ರುತಿ ಸಾರುತದ ವಾಕ್ಯ 2 ಹರಡಿಸಿರಾಗದು ಮೂರುಲೋಕದೊಳಗ ಕರುಣಿಸಿದರಾಹುದು ಗುರು ಕೃಪೆಯಿಂದ 3 ವರ್ಮ ತಿಳಿಯದೆಂದೆಂದು ಕರ್ಮತಮಂಧರಿಗೆ ಬ್ರಹ್ಮ ಸುಖದೋರುವ ಸ್ವಾಮಿ ಸದ್ಗುರು ಧರ್ಮ 4 ಸೇವೆ ಸೂತ್ರನರಿಯದ ಭಾವಿ ಮಹಿಪತಿಗೆ ಭಾವಭಕ್ತಿಯ ಕೊಟ್ಟು ಪಾವನಗೈಸಿದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಏಕಾಂತದಲಿ ಬಂದು ಮಾತು ನುಡಿದೆ ಶ್ರೀ | ಕಾಂತ ನಿನಗಿದು ಸುಲಭವಾಗಿದೆ ನೋಡು ಪ ಪರಧನವನಪಹರಿಸಿಕೊಂಡು ಬೆಳೆದು ಇದ್ದ | ವರ ಮನೆಯೊಳಗಡಲೇತÀಕೆ | ನಿರುತ ಎನ್ನ | ಹೃದಯವೆಂಬೊ ಗಾಡಾಂಧಕಾರ | ಭರಿತವಾಗಿದೆ ಇಲ್ಲಿ ಅಡಗಬಾರದೆ ಬಂದು 1 ಕೇವಲ ಹಕ್ಕಲದ ವನದೊಳು ಪೊಕ್ಕು ಬೇಟೆ | ಕಾವಲಾರಣ್ಯ ಇಲ್ಲಿ ವಿಂಡೂ ತುಂಬಿದೆ | ಸಾವಧಾನದಿ ಬೇಟೆ ಆಡÀಬಾರದೆ ಬಂದು 2 ವೈಕುಂಠ ಮೂರು ಸ್ಥಾನದಲಿ ಮುಕ್ತರಿಗೆ | ಬೇಕಾದದೀಯಾಬೇಕು ಕಡಿಮೆ ಇಲ್ಲಾ | ನೀ ಕೇಳು ಎನ್ನಲ್ಲಿ ಸರಿ ಬಂದಂತೆಯಲ್ಲದೆ | ವಾಕು ಪೇಳುವೆ ನಿಲ್ಲು ವಿಜಯವಿಠ್ಠಲ ಬಂದು3
--------------
ವಿಜಯದಾಸ
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನಿದು ಎಲೆ ಮನ ಏನು ಇದು ನೆನೆಸಿದರೆದೆ ಝಲ್ಲೆನುವುದು ಪ ನಾನು ಯಾರೆಂಬುವ ಖೂನವ ತಿಳಿಯದೆ ಶ್ವಾನನಂದದಿ ಕೆಟ್ಟ ಹೀನಭವಕೆ ಬಿದ್ದು ಅ.ಪ ಏತಕ ಬಂದದ್ದೀ ಜನುಮಕ್ಕೆ ತಲೆಯೆತ್ತಿ ನೋಡದೆ ಕೂತಿಮುಂದಕೆ ನೀತಿಗೇಡಿ ಮಹಪಾತಕನು ಯಮ ದೂತರು ನಿಂತಾರೊ ಎಳಿಲಿಕ್ಕೆ 1 ಬೀಳಬೇಡೋ ಮಾಯದ ಜಾಲಕ್ಕೆ ಘಳಿಲನೆ ತಿಳಿತಿಳಿ ಸುಲಭದಿ ಸಮಯವು ಬಲಿಸಿ ಹರಿಯ ಧ್ಯಾನ ಕಾಲನ ನೂಕೋ 2 ಹುಟ್ಟಿಬಂದಿ ಶಿಷ್ಟಪದ ಪಡಿಲಿಕ್ಕೆ ಮರ್ತುಬಿಟ್ಟಿ ನಿಂತಿ ಬಿಟ್ಟಗಂಟ್ಹೊರಲಿಕ್ಕೆ ಭ್ರಷ್ಟಗುಣವ ಬಿಟ್ಟು ದಿಟ್ಟರಾಮನ ಗಟ್ಟ್ಯಾಗಿ ನಂಬಿ ಮುಟ್ಟು ಮುಕ್ತಿಪದಕೆ3
--------------
ರಾಮದಾಸರು
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ
ಏನು ವರ್ಣಿಸಿದ ಕವೀಶ್ವರ ನಾರಿಯಜ್ಞಾನಕೆ ಹಾನಿಯ ಮುಕ್ತಿಗೆ ಮೃತ್ಯುವಕಾನನ ರೂಪು ನರಕ ಕುಂಡವೆಂಬಳತಾನು ಕೆಡಲು ಸುಳ್ಳು ಸ್ತುತಿ ಮಾಡಿದ ಪ ಗುದ್ದಲಿ ಮೂಗನು ಸಂಪಿಗೆ ನನೆ ಎಂದಬುದ್ದಲಿ ಮುಖವನು ಪದ್ಮಮುಖವೆಂದಇದ್ದಲಿ ತನುವನು ಇಂದ್ರನೀಲವೆಂದಹದ್ದಿನ ಕೈಯನು ಹರಿ ಸುಂಡಲೆಂದ 1 ಬೆಳ್ಳುಳ್ಳಿ ಹಲ್ಲನು ದಾಳಿಂಬ ಬಿತ್ತವೆಂದಹುಲ್ಲೆಗಣ್ಣೆಂದನು ಸುಳಿಗಣ್ಣಮಲ್ಲಿಗೆ ಮೊಳೆಯೆಂದನು ಮುರುಕಿ ಮಾತುಗಳನ್ನುಜೊಲ್ಲು ಸುರಿವುದಕೆ ಅಮೃತವೆಂದನು 2 ಕುಂಭ ಕುಚವೆಂದನು ಮಾಂಸದ ಮುದ್ದೆಯಬಿಂಬಾಧರವೆಂದನು ಹಂದಿಯ ತುಟಿಯಕಂಬ ಬಾಳೆ ಎಂದನು ಕೊರಡು ತೊಡೆಯನುಬಿಂಬ ಕನ್ನಡಿ ಎಂದನು ಕುಣಿಗಲ್ಲವ 3 ಕಲಹಂಸ ನಡಿಗೆಯೆಂದ ಕೋಣನ ನಡಿಗೆಯಅಳಿಕುಂತಳವೆಂದ ಮುರುಟು ಕೂದಲನುಬಲು ಸಿಂಹನಡುವೆಂದ ಮೊಸಳೆ ನಡುವನ್ನುಹೊಳೆವ ಬೊಂಬೆಯೆಂದ ಕೊಳಕು ಮೈಯನ್ನು 4 ಹೊಲಸು ಮೂಳಿಗೆ ನಾನಾ ಹೋಲಿಕೆಗಳನಿಟ್ಟುತಿಳಿದಂತೆ ಕವಿತಾನು ವರ್ಣಿಸಿದ ಕೊಂಡಾಡಿಸುಲಭ ಚಿದಾನಂದ ಸುಪಥವ ಕಾಣದಲೆಕಳಕೊಂಡ ಕವಿತಾನು ಬಹು ಪುಣ್ಯ ಪಥವ 5
--------------
ಚಿದಾನಂದ ಅವಧೂತರು
ಏನೂ ಸಾರ್ಥಕವಿಲ್ಲವೋ ಪ ಏನೂ ಸಾರ್ಥಕವಿಲ್ಲ ಜ್ಞಾನಮಾರ್ಗಗಳಿಲ್ಲ ಮಾನಸ ಸ್ಥಿರವಿಲ್ಲ ಶ್ರೀನಾಥನಿದಬಲ್ಲ ಅ.ಪ ಎರಡುಕಂಬದ ಮೇಲೆ ಇರುವ ಪಂಜರವಿದು ಬರಿಯಡಂಭದ ಜಗವು ಸ್ಥಿರವೆಂಬ ತನುವಿನೊಳು 1 ತೈಲವಿಲ್ಲದ ದೀಪ ಮಲಿನವಾಗುವ ತೆರದಿ ಸುಲಭದೊಳಿಹ ಪ್ರಾಣ ತೊಲಗಿದ ಬಳಿಕಿನ್ನು 2 ಸಂತೆಗೈದಿದ ಜನದಂತೆ ಪಂಚೇಂದ್ರಿಯವ ನಾಂತ ದೇಹವು ವ್ಯರ್ಥ ಅಂತರಾತ್ಮನು ಹೋಗೆ 3 ರಸನೆ ತೊದಲುವ ಮೊದಲು ಅಸುವು ಪೋಗುವ ಮೊದಲು ಅಸುರಾರಿ ಎಂಬ ಮಧುವ ರಸನೆಯೊಳಿಡೋ ಮನುಜ4 ದಿನದಿನ ಹರಿಕೃಷ್ಣ ವನಮಾಲಿಯ ನುತಿಸೋ ತನುವ ಪ್ರಾಣವ ಬಿಡುವ ದಿನವನರಿಯೆ ನೀನು 5 ದೇವದೇವನೆ ನಿನ್ನ ಸೇವಕನೆಂದೆನ್ನ ಭಾವಿಸೋ ಮದನಾಂಗ ಮಾವಿನಕೆರೆರಂಗ6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏನೆಂದು ಪೇಳಲಿ ಹರಿಶರಣರ ನಿಜ ಆನಂದ ಸೌಭಾಗ್ಯದಲಂಕಾರ ಪ ಆನಂದ ಪರಮ ಆನಂದ ಹರಿಧ್ಯಾ ನಾನಂದ ಸಂಪದ ಶೃಂಗಾರ ಅ.ಪ ಮಾಧವನ ನಾಮಮಕುಟಿಟ್ಟಹ್ಯರು ಮಧು ಸೂದನನ ಭಕ್ತಿ ಕವಚ ತೊಟ್ಟಿಹ್ಯರು ಯಾದವನ ಜಪಮಾಲ್ಯ್ಹಾಕಿಹ್ಯರು ಯ ಶೋದ ಬಾಲನ ದಯ ಪಡೆದಿಹ್ಯರು 1 ಶ್ರೀಶನ ಧ್ಯಾಸಶಸ್ತ್ರ ಧರಿಸಿಹ್ಯರು ದೋಷ ರಾಶಿಪರ್ವತ ತರಿದೊಟ್ಟಿಹ್ಯರು ಪಾಶ ಜೈಸಿ ನಿರ್ಭೀತಾಗಿಹ್ಯರು 2 ಸರಕು ತುಂಬಿಹ್ಯರು ನರ ಹರಿ ಪ್ರೇಮ ನೌಕೆ ಏರಿಹ್ಯರು ವರದ ಶ್ರೀರಾಮಮಂತ್ರ ಪಠಿಸುವರು ಭವ ಶರಧಿ ಸುಲಭದಿಂದ ದಾಂಟುವರು 3
--------------
ರಾಮದಾಸರು
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ಪ ತುಂಬಿ ಭಾನು ಪ್ರಭೆ ಚಂದಮಾಮಅ ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ 1 ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ 2 ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ 3 ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ 4 ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ 5 ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ 6 ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮಸುಲಭ ಪದವಿದು ನಳಿನಜಾಂಡದೊಳು ಚಂದಮಾಮ 7 ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ 8 ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ 9
--------------
ಕನಕದಾಸ
ಒಳಿತಲ್ಲ ನಿನ್ನ ತಳ್ಳಿ ಅಭಿಮಾನದೇವಿ ಎಲೆ ತಾಯೆ ನಮಿಸುವೆನು ದೂರಾಗೆ ಮಾಯಿ ಪ ಬಗೆಗೊಂಡು ಬ್ರಹ್ಮನ ತಲೆಯೊಂದು ಕಳೆದಿಟ್ಟು ಹೆಗಲೇರಿ ಶಿವನ ಸುಡುಗಾಡದಿಳಿಸಿದಿ ಜಗರಕ್ಷಕನನು ಹತ್ತು ಅವತಾರದೆಳಸಿದಿ ನಿಗಯಿಟ್ಟಂದ್ರನ ಮೈ ಛಿದ್ರ ಮಾಡಿಟ್ಟಿ 1 ಸೆರೆಹಿಡಿದು ತಾರಕನ ಆರೆದಿನದವನಿಂ ಕೊಂದಿ ಕರಪಿಡಿದು ಹಿರಣ್ಯನ ಅಸಮವರ ಸುಟ್ಟಿ ನೆರೆಯಾಗಿ ರಾವಣ ಆರುಕೋಟ್ಯಾಯುಷ್ಯ ಉರುತರದ ಸಿರಿಯೆಲ್ಲ ಮಾಯ ಮಾಡಿಟ್ಟಿ 2 ಸೆಳೆಕೊಂಡು ಕುರುಪನ ಕುಲನಾಶ ಮಾಡಿಟ್ಟಿ ಒಲಿದು ಕಲಿಯುವಗೆಲ್ಲ ನುಂಗಲ್ಹತ್ತಿರುವಿ ಸುಲಭದೆನ್ನನು ಬಿಟ್ಟು ಅಗಲದಿರ್ದರೆ ನಿನಗೆ ಜಲಜಾಕ್ಷ ಶ್ರೀರಾಮನೊನರುಹಂಘ್ರ್ಯಾಣೆ 3
--------------
ರಾಮದಾಸರು
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಂಡುಕೊಳ್ಳಿರೋ ಸುಖ ಸ್ವಾತ್ಮವ ಕಂಡುಕೊಳ್ಳಿರೋ ಧ್ರುವ ಕಣ್ಣಿಟ್ಟರ ತಾಂ ಕಾಣಿಸುತದೆ ಚೆನ್ನಾಗನುಭವಕಿದಿರಿಡುತದೆ 1 ಮನವಿಟ್ಟರಲನುಗೂಡುತಲ್ಯದೆ ನೆನೆದರೆ ನಿಜಘನ ನೀಡುತಲ್ಯದೆ 2 ಲಯವಿಟ್ಟರ ದಯಬೀರುತಲ್ಯದೆ ಶ್ರಯ ಸುಖ ಸುರಮಳೆಗರೆಯತಲ್ಯದೆ 3 ಭಾವಕ ಅತಿಸುಲಭವಾಗ್ಯದೆ ಆವಾಗ ತಾನೆಲೆ ನಿಭವಾಗ್ಯದೆ 4 ಮಹಿಪತಿ ಮನೋಹರ ಮಾಡುತಲ್ಯದೆ ಬಾಹ್ಯಾಂತ್ರವು ತಾನೆವೆ ಆಗ್ಯದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು