ಒಟ್ಟು 448 ಕಡೆಗಳಲ್ಲಿ , 68 ದಾಸರು , 355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏ ನೀರೇ ತೋರೇ ರಂಗನಾ ಪ ರಂಗನಾ ಸಕಲಾಂತ ರಂಗನಾ | ಕೋಮಲ ಸುಂದ | ರಾಂಗನಾ ಭೂ ಭುಜ ಯದು ತುಂಗನಾ 1 ಸಿರಿ ಲೋಲನಾ | ನಯನಸುವಿ | ಮೃಗ ಮದಾಂಕ ಬಾಲನಾ2 ತಪನ ನಂತೆತೇಜಸ್ವರೂಪನಾ | ಪಾಂಡವರಸಂ ಸ್ಥಾಪನಾ ಮಹಿಪತಿಜ ರಕ್ಷಿಪನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನಾರಿಸುವಿ ಹರಿಯೇ ಎನ್ನವಗುಣಾ ಅನಂತಾನಂತ ತಪ್ಪು ಮಾಡಿದ ಪಾಮರೊಳೇನಾ ಪ ಉದಯ ಉದ್ಯೋಗನೆನುವೆ ಮಧ್ಯಾಹ್ನಕ ಕ್ಷುಧೆ ತೃಷೆಯಲ್ಲಿ ದಣಿವೆ ಇರುಳಿಗಿನ್ನು ವದಗಿ ನಿದ್ರೆ ಯನುವೆ ಇದರೊಳು ನಿನ್ನ ನಾಮನೆನೆಯದೆ ದಿನಗಳೆದೇನಾ 1 ನಿನ್ನ ಕಥೆಯಾ ಕೇಳದೇ ಮಂಗಳಂಗುಟ ಕಣ್ಣಿನೊಳಿಟ್ಟು ನೋಡದೇ ಸರ್ವಾಂಗದಿ ಚೆನ್ನಾಗಿ ಮಾಡದೇ ಎನ್ನ ಕಾಯವು ಸತಿಸುತರಿಗೆ ಮಾರಿದೇನಾ 2 ಹರಿ ಭಕ್ತಿ ಮುದ್ರೆ ಧರಿಸೀ ಹೆಮ್ಮಿಲಿ ದುರಾಚರಣೆ ಮಾಡಿದ ಕ್ಷಮಿಸೀ ಸತ್ಸಂಗದಿ ಅರಿವಿಗೆ ಮನನೀಲಿಸೀ ಹೊರೆವದು ಗುರು ಮಹಿಪತಿಸ್ವಾಮಿ ಕರುಣಿಸಿ ಎನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಕೆಟ್ಟೆಯಲ್ಲೋ ಮನುಜ ಹಾನಿಯಾದೆಯಲ್ಲೋ ಪ ಕಾಣದೆ ಏನೇನು ಗಾಣದೆತ್ತಿನಂತೆ ನಾನಾ ಯೋನಿಗಳು ಖೂನವಿಲ್ಲದೆ ತಿರುಗಿ ಅ.ಪ ಕಾಲ ಕಳೆದೆಯಲ್ಲ ಕಾಲದ ಮೂಲ ತಿಳಿಯಲಿಲ್ಲ ಮೂಳನಾದೆಯಲ್ಲ ಭವದ ಮಾಲ ಗೆಲಿಯಲಿಲ್ಲ ಕಾಳುಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲದಿ ಬಿದ್ದೆಮಧಾಳಿಗೀಡಾದೆಯಲ್ಲ 1 ನಾರಿ ನಿನ್ನವಳಲ್ಲ ಹುಟ್ಟಿದ ಪೋರ ನಿನಗಿಲ್ಲ ಯಾರಿಗೆಯಾರಿಲ್ಲ ನಿನ್ನ್ಹಿಂದೆ ಯಾರು ಬರುವುದಿಲ್ಲ ಧಾರುಣಿಸುಖವಿದು ಸಾರಮಯ ಸುವಿ ಚಾರದೆ ನೋಡದೆ ಘೋರನರಕಿಯಾದೆ 2 ಮನೆಮಾರು ನಿನಗಿಲ್ಲ ಗಳಿಸಿದ ಧನವು ನಿನ್ನದಲ್ಲ ಕ್ಷಣಿಕವಾದದ್ದೆಲ್ಲ ಜಗಸುಖ ನಿನಗೊಂದು ಸ್ಥಿರವಿಲ್ಲ ವನಜನಾಭ ನಮ್ಮ ಜನಕ ಶ್ರೀರಾಮನ ವನರುಹಂಘ್ರಿ ನಂಬಿ ಘನಮುಕ್ತಿ ಪಡೀಲಿಲ್ಲ 3
--------------
ರಾಮದಾಸರು
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಏನೆಂದು ಕರೆದರೆ ಬರುವಿ ನಿನ್ನ ಧ್ಯಾನಿಸಿ ಕರೆದರೆ ಬಾರದೆ ಇರುವಿ ಪ ದೀನದಯಾಳು ಶ್ರೀ ಅನಂತ ಮಹಿಮೆಂದು ಗಾನದಿಂ ಪಾಡಲು ಕೇಳದೆ ಇರುವಿಅ.ಪ ಸೊಪ್ಪಮೆದ್ದವನೆಂದೆನಲೆ ನಿನ್ನ ತಿಪ್ಪೆತಿರುಕನೆಂದು ಗೌಪ್ಯದಿಂ ಕರಿಲೇ ಕಪ್ಪುಮೈಯವನೆನ್ನಲೊಪ್ಪಿಕೊಂಡು ಬಂದು ಅಪ್ಪಿಕೊಂಡ್ವರವೀವ್ಯೋ ಮುಪ್ಪುರಾಂತಕನೆ 1 ಏಸುಕಾಲದ ಮುದುಕನೆನಲೇ ನಿನ್ನ ಆಸೆಕಾರನೆಂದು ಆಶಿಸಿ ಕರಿಲೇ ಹಾಸಿಕೆ ಕಾಣದೆ ಶೇಷನಮೇಲೇರಿ ವಾಸಿಸುವಿಯೆನಲು ಪೋಷಿಸುವೆಯೋ ಬಂದು 2 ಬಲುಬಲು ಕಪಟಿಯೆಂದೆನಲೇ ನೀ ಕಳವಿನೋಳ್ ಪ್ರವೀಣನೆಂದು ಕೂಗಲೇ ಕುಲಗೆಟ್ಟು ಭಕ್ತರ ಕಲೆಸಿ ಗುಪ್ತದಿಂದ ಕುಲದಿ ಬಿದ್ದವನೆನಲು ಒಲಿದು ಕಾಯುವೆಯೋ 3 ಆಲಯ ಕಾಣದೆ ಹೋಗಿ ನೀನು ಪಾಲಸಾಗರವಾಸನೆಂದು ಕರಿಲೇ ಬಾಲೆಯರುಡವ ದುಕೂಲ ಚೋರನೆಂದು ಮೇಲಾಕೂಗಲು ಪಾಲಿಸುವೆಯೋ ಒದಗಿ 4 ಅರಣ್ಯವಾಸಿಯೆಂದೆನಲೇ ನೀನು ನಾರಿಯಳ ಕಳಕೊಂಡನೆಂದು ಸಾರಲ್ಯೋ ಕೋರಿದವರ ಮನಸಾರ ವರನ ನೀಡ್ವ ಧೀರ ಶ್ರೀರಾಮನೆಂದ್ಹಾರೈಸಿ ಕರೆಯುವೆ 5
--------------
ರಾಮದಾಸರು
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಒಡಿಯ ನೀನಹುದೊ ಎನ್ನ ಬಡವನಾಧಾರಿ ನೀನು ಧ್ರುವ ಪೊಡವಿಯೊಳಗೆ ಎನ್ನ ಬಿಣದೆ ಸಲಹುತಿಹ್ಯ ಅಡಿಗಡಿಗೆ ತಂದು ನೀ ಪಡಿಯ ನಡೆಸುವ ಸ್ವಾಮಿ 1 ಪಿಡಿದು ಎನ್ನ ನೀ ಕೈಯ ಕಡೆಗಾಣಿಸುವಿ ಪೂರ್ಣ ಬಿಡಿಸಿ ಧಾವತಿಯಿಂದ ಕೊಡುವಿ ತಂದು ನಿಧಾನ 2 ಕೊಂಡಾಡಲಳವೆ ನಿನ್ನ ಮಂಡಲದೊಳು ಕೀರ್ತಿ ಪಿಂಡ ಬ್ರಹ್ಮಾಂಡ ಪರಿಪೂರ್ಣವಾಗಿಹ ದೇಹ 3 ಕೊಳದೆ ಸೇವೆಯ ನಿನ್ನ ಅಳೆದು ನಡೆಸುವ ಪಡೆಯ ಪಾಲಕನಹುದೊ ಎನ್ನ ಮೂಲೋಕದೊಡಿಯನೆ 4 ನಿತ್ಯನಿಜವಾಗ್ಯಾಗ ಹೊತ್ತು ನಡೆಸುವ ಪಡೆಯ ಭೃತ್ಯ ನಿಜ ದಾಸಮಹಿಪತಿಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವಿಂದು ಪುಣ್ಯತೇಜೋರಾಶಿಯ ಬಣ್ಣಬಣ್ಣದಲಿ ಭಾಸುವ ಪ್ರಭೆಯ ಧ್ರುವ ಹೇಳಲಿಕ್ಕೆ ಬಾರದು ಹೊಳೆವ ಪ್ರಕಾಶವು ಥಳಥಳಿಸುತಿಹುದು ಒಳಹೊರಗೆ ಝಳಿಝಳಿಸುತಿಹದು ಮೊಳೆಮಿಂಚಿನ ಪರಿ ಸುಳವ್ಹುದೋರಿತು ಕಳೆವರದೊಳಗೆ 1 ಒದಗಿಬಂತಿದಿರಿಟ್ಟು ಮೊದಲಿನ ಪುಣ್ಯದ ಫಲ ಸಾಧಿಸಿ ಕಂಡೆ ಸುಖಸದೋದಿತವ ಹಾದಿ ಸಿಲ್ಕಿತು ನೋಡಿ ಆದಿ ಅನಾದಿಯ ಭೇದಿಸಿತು ಮನಸು ನಿಜಬೋಧವ 2 ಭಾವ ಬಲಿದು ನೋಡಿ ದೇವಾಧಿದೇವನ ಸುವಿದ್ಯ ಸುರಸವ ಸವಿಸವಿದು ಪಾವನ್ನವಾಯಿತು ಮಹಿಪತಿ ಜೀವನವುಕಾವಕರುಣ ಗುರುದಯದಿಂದ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಿಸಲೊಲ್ಯಾ ಕರುಣಾನಿಧೇ ಪ ಕರುಣಿಸಲೊಲ್ಯಾ ನೀ ಕರುಣಸಾಗರ ನಿನ್ನ ಭವ ಅರಣ ದಾಟುವಂತೆ ಅ.ಪ ವಿಶ್ವವ್ಯಾಪಕನೆ ವಿಶ್ವಾಸುವಿಶ್ವ ನೀ ವಿಶ್ವ ಪ್ರೇರಕ ನಿನ್ನ ವಿಶ್ವಪಾದದೊಳು ನಾ ವಿಶ್ವಾಸಮಾಳ್ಪÀಂತೆ 1 ಜ್ಞಾನದಾಯಕನೆ ಜ್ಞಾನದಾಯಕ ಎನ್ನ ಜ್ಞಾನನಿಚಯ ನೀನೆ ಹಾನಿಮಾಡಿ ನಿನ್ನ ಜ್ಞಾನವನೈದೊಂತೆ 2 ಮಂದರೋದ್ಧರನೆ ಮಹಾರಾಯಾ ನಂದದಾಯಕನೆ ಇಂದಿರಾಪತಿ ನಿಜ ನಂದಕೊಡುವ ನಿನ್ನ ದ್ವಂದ್ವ ಚರಣದೊಳು ಸಂದೇಹವಿಲ್ಲದಂತೆ 3 ಕಾಮಿತಾರ್ಥವನೆ ಕಮಲಾಕ್ಷಾ ಕಾಮನ್ನಪಿತನೆ ಕಾಮಿತಾರ್ಥಗಳನ್ನು ಕಾಮಿಸದಲೆ ನಿನ್ನ ನಾಮವ ಭಜಿಸುವ ನೇಮಮತಿಯನಿತ್ತು 4 ಸೃಷ್ಟಿಕಾರಣನೆ ಶ್ರೀಕೃಷ್ಣಯ್ಯಾ ವೃಷ್ಣಿನಾಯಕನೆ ದುಷ್ಟಮತಿಯ ಬಿಡಿಸಿ ಶಿಷ್ಟಙÁ್ಞನವನಿತ್ತು ದಿಟ್ಟಗುರುಜಗನ್ನಾಥ ವಿಠಲ ನೀ ಎನ್ನ 5
--------------
ಗುರುಜಗನ್ನಾಥದಾಸರು
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು