ಒಟ್ಟು 120 ಕಡೆಗಳಲ್ಲಿ , 42 ದಾಸರು , 116 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಟ್ಟನ್ಯಭಜನೆಯ ಕಂಡು ಪ ಹೊಚ್ಚಿ ಸುಳಿದಟ್ಟಿ ಸುಡುವ ಅಡವಿಗಿಚ್ಚಿನ ಭಯಕೆ ಬೆಚ್ಚಿ ಅರಗಿನ ಮನೆಯ ಹೊಗುವವನಂತೆ ಅಚ್ಚರಿಯೆನಿಸೆ ದಹಿಪ ತಾಪತ್ರಯಕ್ಕಳುಕಿ ತುಚ್ಛ ದೈವಗಳ ಮರೆಯೊಗುವ ಮನುಜರಕಂಡು 1 ಉರಿಯ ಮಳೆಗರೆಯುತಿರೆ ತೃಣಗೇಹವನು ಹೊಕ್ಕು ಹರಣವನುಳುಹಿಕೊಂಬೆನೆಂಬಂತೇ ಉರುಬೆ ನಾನಾ ರೋಗಗಳುಳುಹಲು ಹಲವು ದೈವಗಳಿ ಗೆರಗಿ ಜೀವನಕೆ ಕಳಕಳಿಪ ಮನುಜರ ಕಂಡೂ 2 ಮುಗಿಲಗಲ ಧರೆ ಜರಿಯುತಿರೆ ಹುಲ್ಲಿನಣಬೆಯೊಡ್ಡಿ ಮಿಗೆ ಬಾಳ್ವೆನೆಂಬ ಮರುಳನಂದದೀ ಉಗಿದಸಿಯ ಮೃತ್ಯುವಿನ ಭಯಕೆ ನಾನಾದೇವ ತೆಗಳಮರೆಯೊಗುವ ಮನುಜರ ಕಂಡು 3 ಘುಡು ಘುಡಿಸಿ ಸಿಡಿಲೆರಗುತಿರೆ ತನ್ನ ಕೈ ವಿಡಿದ ಕೊಡೆಯ ಮರೆಗೊಂಡುಳಿವೆನೆಂಬಂತೇ ಮುಡಿವಿಡಿದೆಳೆವ ಕಾಲನ ಭಯಕೆ ನಾನಾದೈವ ದಡಿವಿಡಿದೆರಗಿ ಹಲು ಬಿಡುವ ಮನುಜರ ಕಂಡು 4 ಯಾತಮುಳಿದರೆ ಜಗದಲುಳಿದವರಾರು ಮ ತ್ತೀತನುಳುಹಿದನನು ಕೊಂದವನಾವ ಇ ದೇತಕರಿಯರೋ ನರರು ಅಕಟಕಟ ವೈಕುಂಠ ನಾಥ ಪರಿಪೂತನ ಪದಕಮಲವ ಭಜಿಸರೆಂದು 5 ನೀರಡಿಸಿ ಜಾಹ್ನವಿಯ ತೀರದಲಿ ಭಾವಿಯಾ ನೀರ ಕುಡಿವ ಮಾನವನ ತೆರದೀ ಹರಿಯ ಚರಣವಿರಲು ಭೂರಿದೈವಂಗಳಿನ್ನೇಕೆ ಭಜಿಸುವೆ ಮನುಜ ಹರಿ ಕಾರುಣ್ಯನಿಧಿ ವೈಕುಂಠವಲ್ಲಭ ಬೇಲೂರ ಚೆನ್ನಿಗರಾಯ ಕೃಪಾನಿಧಿಯಿರಲು 6
--------------
ಬೇಲೂರು ವೈಕುಂಠದಾಸರು
ಬಿಡಿ ಬಿಡಿ ಸಂದೇಹವನು ಪೊಡವಿ ಮನುಜರೆಲ್ಲಒಡೆಯನೊಬ್ಬನೆ ಜಗಕೆ ರಂಗವಿಠಲ ಪ ಹರಿಹರವಿರಿಂಚರೊಳು ಪರದೈವವಾರೆಂದುಪರಮ ಮುನಿಗಳು ವಿವಾದವನು ಮಾಡೆಸರಸಿಜಾತನ ಸುತನ ಭೃಗುವನಟ್ಟಲು ಪೋದಅರಿದು ಬಹೆನೆಂದು ಪದ್ಮಜನ ಸಭೆಗೆ1 ಮುನಿವರನು ಕಂಡು ಪದ್ಮಜಗೆ ವಂದಿಸದಿರಲುವನಜಭವ ಕೋಪವನು ಮಾಡಿ ಜರಿಯೆಮುನಿ ಪರಮ ತತ್ತ್ವ ಇವನಲ್ಲವೆಂದೆನೆ ಕನಲಿಮನಸಿಜವೈರಿಯ ಲೋಕಕೆ ಪೋದನು 2 ಹರ ಕಂಡು ಭೃಗುಮುನಿ ಬರಲು ತನ್ನನುಜನೆಂದುಭರವಸೆಯಲೆದ್ದು ತಕ್ಕೈಸ ಪÉÇೀಗೆ ಜರಿದು ಹರನನು ಮುಟ್ಟದಿರೆ ಶಂಕರನು ಕನಲಿಕರೆದ ಶೂಲವ ಜಡಿದು ಕೊಲಲುಬಗೆದ 3 ಹರನ ಕೋಪವ ಕಂಡು ಗಿರಿಜೆ ಚರಣವ ಪಿಡಿದುಕರುಣಿ ಮುನಿಯನು ಕಾಯಬÉೀಕೆಂದೆನಲುಮರಣ ಭಯದಿಂದ ನಿರ್ಮುಕ್ತನಾಗಿ ಮುನಿವರನು ಸರಸಿಜನಯ್ಯನಿಪ್ಪ ವೈಕುಂಠಕೆ ಪೋದನು 4 ಅಲ್ಲಿ ಮಹಲಕ್ಷುಮಿಯ ತೊಡೆಯಲ್ಲಿ ಪವಡಿಸಿ ಇರಲುಫುಲ್ಲನಾಭನ ಚರಣದಿಂದಲೊದೆಯೆಮೆಲ್ಲನೆ ಪಾದವ ಪಿಡಿದು ಮುನಿವರಗೆ ಪೊಡಮಟ್ಟುಇಲ್ಲಿ ಬಿಜಯಂಗೈಸಬೇಕೆಂದನು 5 ಪರಮ ಮುನಿ ನಿಮ್ಮ ಪದ ಸೋಂಕಲು ಪಾವನನಾದೆಚರಣರಜ ಪರಮ ಪಾವನ ಸುಲಭವೆಸಿರಿಗೆ ನೆಲೆವನೆಯಾದೆ ಪದಸಂಗದಿಂದಲೆನೆಪರಮ ಹರುಷದಲಿ ಮುನಿತನುವ ಮರೆದ 6 ಪರತತ್ವವನು ಕಂಡು ಬಂದು ಮುನಿವರನಂದುಒರೆಯೆ ಋಷಿವರರಿಗವರವರ ಪರಿಯಅರಿದರಾ ಮುನಿವರರು ಹರಿಯೆ ಪರದೈವವೆಂದುನೆರೆ ತಿಳಿದು ಭಜಿಸಿ ನರಹರಿಯ ಹರಿಯ 7 ಸುರರು ಕಡೆಯೆ ಕಡಲೊಳಗಿರ್ದಮಡದಿ ಮಹಾಲಕ್ಷುಮಿ ಅವತರಿಸಿ ಬರಲುಮೃಡ ಕಮಲಜ ಸುರಮುಖ್ಯರನು ಜರಿದು ಸಿಂಧುವಿನದಡದಲ್ಲಿ ಹರಿಯ ವರಿಸಿದಳು ವರನೆಂದು 8 ಕರಿಪತಿಯ ಸರಸಿಯೊಳು ಮೊಸಳೆ ಪಿಡಿಯಲು ಭರದಿಪರಮ ಪುರುಷ ಜಗತ್ಪತಿಯೆನಲುಗರುಡವಾಹನನಾಗಿ ಹರಿ ಬಂದವನ ಕಾಯ್ದಪರದೈವವಾರು ಜಗದೊಳಗೆ ಪೇಳಾ9 ರಾಜಸೂಯವ ಧರ್ಮಸುತ ಮಾಡೆ ಅವನಗ್ರ-ಪೂಜೆಗರುಹರು ಸುರರೊಳಾರೆಂದೆನಲುಭಾಜನನು ಸದ್ಗುಣನು ಕೃಷ್ಣನೊಬ್ಬನೆಯೆಂದುರಾಜಸಭೆಯಲಿ ದೇವವ್ರತ ನುಡಿದನು 10 ಗಂಗೆ ಈತನ ಪಾದಸಂಗದಿ ಪಾವನವೆನಲುಗಂಗಾಧರನು ಪರಮ ದಾಸನೆನಲುಮಂಗಳಾತ್ಮಕ ವಿಶ್ವಜನ್ಮಾದಿ ಕಾರಣನುರಂಗವಿಠಲರೇಯನ ನೆರೆನಂಬಿರೋ 11
--------------
ಶ್ರೀಪಾದರಾಜರು
ಭಕುತಿ ಸುಲಭವಲ್ಲ ಶ್ರೀ ಹರಿ ಭಕುತಿ ಸುಲಭವಲ್ಲ ಪ ಮುಕುತಿಗೆ ಯುಕುತಿ ಬೇರೆಯಿಲ್ಲ ಶ್ರೀ ಹರಿ ಅ.ಪ ಉರುತರ ಕ್ಲೇಶಕೆ ಗುರಿಯಾಗುತಿರಲು ಹರಿ ಹರಿಯೆನ್ನುತ ಕಿರುಚುತ ಸತತವು ಕ್ಲೇಶ ಹರಿಯನು ಸುಲಭದಿ ಮರೆವುದು ಭಕುತಿಯ ತರವಾಗುವುದೇ 1 ಭುವಿಯಲಿ ಬಹು ವಿಧ ಸುವಿನೋದಗಳ ಸವಿಯನು ಪೊಂದಲು ವಿವಿಧ ಭಾಗ್ಯಗಳ ಸುವಿನಯದಲಿ ಮಾಧವನನು ಬೇಡಲು ಹವನ ಹೋಮಗಳು ಭಕುತಿಯಾಗುವುದೇ 2 ಶ್ರವಣ ಮನನ ವಿಧಿಧ್ಯಾಸಗಳಿಂ ಸಿರಿಪತಿ ಗುಣಗಣದಲಿ ದೃಢಮತಿಯನು ಮಾಡುತ ತನುಮನಗಳನÀರ್ಪಣೆಯನು ಮಾಡುತ ಮನಸಿಜ ಜನಕ ಪ್ರಸನ್ನನಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆಯದೆ ಶ್ರೀಹರಿಯಮನದಲಿ ಸ್ಮರಿಸೊ ಗುರುಹಿರಿಯರ ಅನುಗ್ರಹವನು ಗಳಿಸೊ ಪ ಇಂದಿರೆ ರಮಣನ ಅನುದಿನ ಮಂದರ ಧರನಾ 1 ಬಗೆ ಬಗೆಯಲಿ ಶ್ರೀ ಭಗವಂತನ ಪಾದ ಯುಗವನು ನೆರೆನಂಬಿಯಿ-----ಎಂದೆಂದೂ 2 ಪರಿಪರಿ ನವವಿಧ ಭಕ್ತಿಯು ಸಾಧಿಸಿ ಪರ ಬ್ರಹ್ಮ ಪರಮಾನಂದನ 3 ಶರಧಿಶಯನನ ಶಾಂತ ನಿಧಾನನ ಅರವಿಂದ ನಯನನ ಹರಿಗೋವಿಂದನಾ 4 ದಿನಕರ ಕೋಟಿತೇಜ ವಿಲಾಸನ ಮಾನವ ರಕ್ಷಕನಾ 5 ಚಿತ್ತವು ಚಲಿಸದೆ ಚಿನ್ಮಯ ರೂಪನ ನಿತ್ಯಾನಂದನ ನಿಗಮಗೋಚರನಾ 6 ಭಾವಜನಯ್ಯನ ----- ಭಾವನಕೊಲಿದ ಜನ ಹೃದಯದಿ ಕುಣಿದಾಡುವ ನಾ7 ಜ್ಞಾನಾನಂದನ ಜ್ಞಾನಿಗಳರಸನ ಧೇನು ಪಾಲಕ ಜಗದೀಶನ ಮುಕುಂದನ 8 ಮಾಧವ ಮುನಿ ಗೋವಂದ್ಯನ ಶರಣರ ಪೊರೆವಾ ಬಿರುದಿರುವ ದೇವನಾ 9 ಇನಕುಲ ಭೂಷಣನ ವಿಶ್ವಲೋಕೇಶನ ದನುಜಾಂತಕ ಶ್ರೀ ದಾಮೋದರನಾ 10 ಪಾಂಡವ ಪಕ್ಷಕನ ಪರಮಾಣು ರೂಪ ಬ್ರಹ್ಮಾಂಡನಾಯಕ ಕೋದಂಡಧರನ ಇಂದೂ 11 ವಾರಿಧಿ ಬಂಧನ ವೈದೇಹಿ ತಂದನ ಮೀರಿದ ರಕ್ಕಸರ ಮದಿಸಿದವನಾ 12 ಪನ್ನಗ ಶಯನ `ಹೆನ್ನ ವಿಠ್ಠಲನ ' ಉನ್ನತ ಚರಿತನ ಇನ್ನು ಹರುಷದಲಿ 13
--------------
ಹೆನ್ನೆರಂಗದಾಸರು
ಮಾವಿನಕೆರೆ 7 ಮಾನಗಿರಿಯು ಹಲವಾಭಿಮಾನ ಗಿರಿಯು ಪ ಮಾನಗರಿ ಭಕ್ತಾಭಿಮಾನ ಮಾಂಗಿರಿಯು ಅ.ಪ ಭಾರತದ ದಕ್ಷಿಣದಿ ನೂರೆಂಟು ತಿರುಪತಿಯೊ ಳೋರಂತೆ ಮಹಿಮೆಗಳ ತೋರಿಸಲೈ ಕಾರುಣ್ಯ ಪರಿಪೂರ್ಣ ಸಿರಿವೆಂಕಟಾದ್ರೀಶ ಏರಿನಿಂದನು ನಮ್ಮ ಮಾಂಗಿರಿಯಲಿ 1 ಕಡುಸುಂದರಾಕೃತಿಯ ಬೆಡಗಿಂಗೆ ಮರುಳಾಗಿ ನಡೆತಂದ ಮಾನವರು ಕುಡಿದೃಷ್ಟಿಬೀರಿ ಪಿಡಿದು ಕೊಂಡೊಯ್ವೆವೆಂದಡಿಯಿಡಲು ರಂಗಯ್ಯ ಅಡಗಿಸಿದ ದೇಹವನು ಒರಳಿನಲ್ಲಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೊರೆಯ ಲಾಲಿಸಬೇಕು ಮರುಗಿ ದಮ್ಮಯ್ಯಾವರದ ಸದ್ಗುರುರಾಯ ವಾಸುದೇವಾರ್ಯ ಪ *ಜನನೀಯ ಜಠರಾದಿ ಜಪಿಸಿದ ಸ್ಥಿತಿಯಾನೆನೆಯಾದೆ ಮರೆತಂಥ ನೀಚಾ ನಾನಯ್ಯಾಸನಿಹವನ ಸೇರಾದೆ ಸುಜ್ಞಾನರಡಿಯಾಕಣುಗೆಟ್ಟು ದಾರಿಯಕಾಣೆ ಗುರುರಾಯಾ 1ಕಾಮಾದಿ ರಿಪುಗಾಳ ಕೂಟದಿ ನಿಂದುಪ್ರೇಮಪಾಶದ ಕಟ್ಟು ಬಿಗಿಯಾಗಿ ಬಂದುಭೀಮಸಂಸಾರದಿ ಬಿದ್ದನಿವನೆಂದುನೀ ಮನಕೆಚ್ಚರ'ತ್ತು ಸೆಳಕೊಂಡು 2ಕೊಳಚೆಯೊಳಿಪ್ಪಾ ಸೂಕರ ವಾಸನೆಯುತೊಲಗಿ ಪೋಗಲಿಯೆಂದು ತೋರ್ಪುದೆ ಮತಿಯುಹೊಲೆದೇಹ ನಾನೆಂಬ ಹಳೆಯ ಸಂಗತಿಯುಬಲಿತಿದೆ ನೀನಿದ ಬಿಡಿಸಿ ಸನ್ಮತಿಯ 3ಸಾಲವ ತಂದು ಸ' ಸ'ಯಾಗಿ ತಿಂದೂಬಾಳುತಿರೇ ಕೊಟ್ಟವ ಬಡ್ಡಿ ಬೇಕೆಂದುಕೇಳಿ ಬಾಧಿಸಲೇತಕೆ ಕಡಗೈದೆನೆಂದುಆಲೋಚಿಪಂತೆಚ್ಚರಾುತೆನಗಿಂದು 4ಬರುವುದು ಸುಖವೆಂದು ಬಲುಯತ್ನಗೈದುಸೊರಗಿದೆನಲ್ಲದೆ ಸುಖಗಾಣೆ ನೊಂದುಕರಣಕೆಚ್ಚರವೊ ಕರುಣಿಸಲ್ಪ'ದುಕರಪಿಡಿದುಳುಹೆಂದು ಕೂಗಿದೆನಿಂದು 5ುೀ ದಯಾರಸಕೆ ನಾನೀವೆನೇನುವನುಪಾದಪದ್ಮವ ನಂಬಿ ಪಾಲಿಸೆಂಬುವನುಆದರಿಸುತ ಭಕ್ತಿಯಾನಂದವನ್ನುವೇದವೇದ್ಯನೆ ಕೊಟ್ಟು ಸಲಹು ನೀನಿನ್ನು 6ಪುಟ್ಟಿದಂದಿನಿಂದಾ ಮಡಿ ಮಡಿಯಾಗಿ ದುಡಿದುಘಟ್ಟಿಗತನವನು ಗಳಿಸಬೇಕೆಂದುಹೊಟ್ಟೆ ಹೊರಕರೊಳಾಡಿ ಹುಸಿಯನೆ ನುಡಿದುಕೆಟ್ಟು ಸುಖಗಾಣದೆ ಕೂಗಿದೆನಿಂದು 7ಸಾಕಾುತಯ್ಯಾ ಸಂಸಾರ ಕೋಟಲೆಯುನಾ ಕಾಣೆ ಸುಖವನು ನಿ'ುಷವಾದರೆಯುನೀಕರಿಸುವರಿಂದ ನಿರ್ವೇದ ಗತಿಯುಸೋಕಲು ನಿನ್ನೊಳು ಸಿಕ್ಕಿತು ಮತಿಯು 8ಧರೆಯೊಳಜ್ಞರ ನೋಡಿ ದಯದಿಂದ ಮುದದಿನರದೇಹದಾಳಿ ಚಿಕನಾಗಪುರವರದಿಒರೆದು ವೇದಾಂತರ್ಥವನು 'ಸ್ತರದಿ 1ಉದ್ಧರಿಸಿದೆ1 ವಾಸುದೇವಾರ್ಯ ಸುಖ ಪಥದಿ 9(ಈ) ಸಾಮಾಜಿಕ ಕೃತಿಗಳು
--------------
ವೆಂಕಟದಾಸರು
ಯಚ್ಚತ್ತು ನಡಿ ಕಂಡ್ಯ ಮನವೇ ನಮ್ಮ ಅಚ್ಯುತನಂಘ್ರಿಗಳನು ನೆನೆ ಮನವೇ ನೀ ನೆನೆ ಕಂಡ್ಯ ಮನವೇ ಪ ಆಡದಿರಪವಾದಗಳನು ನೀನು ಕೊಂಡಾಡದಿರು ಚಿಲ್ಲರೆ ದೈವಗಳನು ಬೇಡಾಡದಿರುಭಯ ಸೌಖ್ಯಗಳನು ನೀ ಮಾಡಿ ಕಂಡ್ಯ ದುರ್ಜನರ ಸ್ನೇಹವನ್ನು ಸಜ್ಜನರ ದ್ವೇಷವನು 1 ಹಾಳು ಹರಟಿಗ್ಹೋಗ ಬ್ಯಾಡ ಕಂಡ ಕೂಳುಗಳನು ತಿಂದು ವಡಲ್ಹೊರಿಯ ಬೇಡ ಕಾಲ ವೃಥಾ ಕಳಿಯ ಬ್ಯಾಡ ನಮ್ಮ | ಶ್ರೀ ಹರಿ ದಯಮಾಡಾ 2 ನಾನು ಯೆಂಬುದು ಬಿಡು ಕಂಡ್ಯಾ ಎನ್ನ ಮಾನಾಭಿಮಾನದ ಹರಿಯನ್ನು ಕಂಡ್ಯಾ ಜ್ಞಾನಿಗಳೊಡನಾಡು ಕಂಡ್ಯಾ ವಿಷಯ ಬೀಳುವಿ ಯಮಕೊಂಡಾ 3 ಅನ್ಯಸ್ತ್ರೀಯರ ನೋಡಬ್ಯಾಡಾ ಹಿಂದೆ ಮಣ್ಣು ಕೂಡಿರುವರೆಗೊ ಕೇಳೊ ಮೂಢಾ ಅನ್ಯಶಾಸ್ತ್ರವನೋದ ಬ್ಯಾಡಾ ನಮ್ಮ ಮೈಮರೆದಿರ ಬ್ಯಾಡಾ4 ನರಜನ್ಮ ಬರುವೋದು ಕಷ್ಟ ಅಮ್ಮ ಹಿರಿದು ನೋಡೆಲೋ ವಿಪ್ರತ್ವವು ಶ್ರೇಷ್ಠ ಮರಳಿ ಬಾರದು ಉತ್ಕøಷ್ಟ ನಮ್ಮ ಕೇಳೆಲವೋ ಮರ್ಕಟ 5 ಗೋವಿಪ್ರರ ಸೇವೆ ಮಾಡೋ ಸೋಹಂ ಭಾವಗಳನು ಬಿಟ್ಟು ದಾಸತ್ವ ಕೂಡೋ ಕೇವಲ ವೈರಾಗ್ಯ ಮಾಡೋ ಎಂಟು ಲಜ್ಜೆಯನೀಡ್ಯಾಡೋ6 ಕಷ್ಟ ಪಡದೆ ಸುಖ ಬರದು ಕಂ ಗೆಟ್ಟ ಮ್ಯಾಲಲ್ಲದೆ ಕಷ್ಟ ತಿಳಿಯದು ದುಷ್ಟ ವಿಷಯದಾಶೆ ಜರಿದು ವಿಜಯ ವಿಠಲನೆನ್ನದೆ ಮುಕ್ತಿಯು ಬರದೂ, ಕೂಗೆಲವೊ ಬ್ಯಾದೆರದು 7
--------------
ವಿಜಯದಾಸ
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾಕೆಂದು ದಣುಕೊಂಡಿರಿ ಸುಮ್ಮನೆ ವೃಥಾ ನಾಮವೊಂದಿದ್ದಮೇಲೆ ಪ ಕಣ್ಣಾಣದವರವೋಲು ತಿರುಗುವಿರಿ ಚರಿಸುತಿದ್ದಾಮೇಲೆ 1 ಘಾಸಿ ಮಾಡುವುದೇಕೆ ದೇಹವನು ನೆಲೆಯನು ತಿಳಿಯದೆ 2 ತನ್ನಯ ಮಂದಿರವು ತನುವಿದುಸ್ಥಿರವಲ್ಲ ತೃಣವಿತ್ತು ಸಾರಿದೆ 3 ಸುಟ್ಟು ಹುಡಿಹುಡಿಗೊಂಬ ಶರೀರವನ್ನು ಬಡಿವಾರ ತರವಲ್ಲ 4 ಮತಿಗೆಟ್ಟು ಸುಮ್ಮನೆ ತೊಳಲದಿರು ಜ್ಯೋತಿಯ ಕೂಡುಕಂಡ್ಯಾ 5
--------------
ಕವಿ ಪರಮದೇವದಾಸರು
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ
ಯಾಕೆಲೊ ರಂಗ ನಿನಗಿಂತು ನಟನೆಯ ಮಾತು ಪ ಮಾಕಾಂತ ಕರೆಸಿದರೆ ಬಾರದಿಹ ಪೊಗರುಅ ತಸ್ಕರ ಬುದ್ಧಿ ಕಡೆಗೆ ಇರಿಸಿಬಾಲಕನ ವಂದರಿಸಿ ಬಹುಭಾಗ್ಯವಂತನೆನಿಸಿಎಲ್ಲರೊಳು ಸಲಿಗೆ ನಿಲಿಸಿದಳೊ ನಿಮ್ಮರಸಿ 1 ಕೆಸರ ಚೊಗೆಯಂ ಬಿಡಿಸಿ ಗುಂಜ ಸರವಂ ತೆಗೆಸಿಬಿಸರುಹ ಮಣಿಮಾಲೆ ಕಡೆಗೆ ಇಡಿಸಿಪೊಸ ಪೀತಾಂಬರ ಉಡಿಸಿ ನವರತ್ನವಂ ತೊಡಿಸಿವಸುಧೆಯೊಳು ಮಿಗಿಲಾಗಿ ನಿಲಿಸಿದಳೊ ನಮಿಸಿ 2 ಎನ್ನ ಮಾತನು ಕೇಳು ಮುನಿಸು ಕೃತ್ಯವ ಸೀಳುಇನ್ಯಾಕೆ ಯೋಚನೆ ಫಲವ ಪೇಳುಬಿನ್ನಹವನು ಕೇಳು ನೆರೆಗೂಡಿ ಸುಖಬಾಳುಚೆನ್ನ ಬಾಡದಾದಿಕೇಶವ ದಯಾಳು 3
--------------
ಕನಕದಾಸ
ರಾಮನಾಮ ಸ್ಮರಣೆಯ ಮಾಡದೆ ನೀ ಪಾಮರನಾಗದಿರೊ ಮನುಜ ಪಾಮರನಾಗದಿರೊ ಪ ತಾಮಸಗುಣಬಿಟ್ಟು ಪ್ರೇಮದಿಂದಲಿ ನಮ್ಮ ಸ್ವಾಮಿಯ ನೆರೆ ನಂಬಿರೋ ಅ.ಪ ದೇಹವನಿತ್ಯವೋ ಮೋಹಪಡಬ್ಯಾಡವೋ ಲೇಶ ಸುಖ ಕಾಣೆನು 1 ಹಗರಣವಹ ವ್ಯಕ್ತಿಗಳನು ನಂಬುತಾ ನಗೆಗೀಡಾಗದಿರೊ 2 ಹೊರಗೊಳಗಿದ್ದು ನಮ್ಮ ಗುರುರಾಮವಿಠ್ಠಲ ಕರತಳವಾಗುವುದು3
--------------
ಗುರುರಾಮವಿಠಲ
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ