ಒಟ್ಟು 141 ಕಡೆಗಳಲ್ಲಿ , 51 ದಾಸರು , 135 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಚ್ಚಬ್ಯಾಡ ನೀರುಗುಳ್ಳೆಗೆ ಸರಿಯಾದ ಕುತ್ಸಿತ ದೇಹವೆಂದಿಗು ಸ್ಥಿರವಲ್ಲ ನ- ಮ್ಮಚ್ಚುತನಾನಂತನ ನೆನವುತ ಅನುಗಾಲ ಸ್ವಚ್ಛನಾಗಲು ಹರಿ ಮೆಚ್ಚುವನು ಪ. ಸ್ವಾತಂತ್ರ್ಯ ಲೇಶವಾದರು ನಿನಗಿಲ್ಲದೆ ಪಾತಕ ಫಲಕಿನ್ನು ಗುರಿಯಾದಿಯಲ್ಲದೆ ಯಾತರ ಸುಖವೆಂದೀ ಸಂಸಾರ ಕೂಪದಿ ಪ್ರೀತಿ ಬಡುವಿ ಪಂಚಬಂಧದಲಿ ವಾತ ಪಿತ್ತ ಶ್ಲೇಷ್ಮ ಪೂಯ ಸೃಕ್ಪೂರಿತ ಘಾತವಾಗುವುದೊಂದು ನಿಮಿಷಾರ್ಧದಲಿ ಜಗ- ನ್ನಾಥ ನಂಬಿದರೆಂದಿಗು ಪದಪಂಕ- ಜಾತಪತ್ರದ ನೆರಳಿರಿಸುವನು 1 ದೇಹವೆ ಸ್ಥಿರವಿಲ್ಲವಾದ ಮೇಲಿದರ ಸ- ನ್ನಾಹವಾಗಿರುವದನೇನೆಂದು ಗ್ರಹಿಸುವಿ ಗೇಹಧನಾಪತ್ಯ ಸ್ನೇಹವೆಲ್ಲವು ವ್ಯರ್ಥ ಮೋಹವಲ್ಲದೆ ನಿಶ್ಚಯವಲ್ಲವು ಐಹಿಕಾಮುಷ್ಮಿಕವೆಂಬ ಸಕಲ ಸುಖ ದೋಹನ ಧೇನು ಸರ್ವೇಶ್ವರ ಹರಿಯ ಸ- ಮಾಹಿತ ಮನದಿಂದ ಭಜಿಸೆ ನಿನ್ನನು ಪಕ್ಷಿ ವಾಹ ಕೈ ಬಿಡದೆ ಕಾಪಾಡುವನು 2 ಒಂದು ದಿವಸ ನೀರೊಳದ್ದದಿದ್ದರೆ ದು- ರ್ಗಂಧ ಭೂಯಿಷ್ಠವು ಸಹಿಸಲಸಾಧ್ಯವು ಹಿಂದಿನ ಕರ್ಮಾನುಬಂಧವು ತಿಳಿಯದು ಮುಂದಿನ ಹೊಂದಿಕೆ ಒಂದಾದರು ಇಂದಿರಾವರ ವೆಂಕಟೇಶನ ಪಾದಾರ- ವಿಂದ ಧ್ಯಾನಗಳೆಂಬದೊಂದೆ ಪರಮಸುಖ ವೆಂದು ತಿಳಿದು ಭಕ್ತಿಯಿಂದ ಭಜಿಸು ನಮ್ಮ ತಂದೆ ಬಿಡದೆ ಕಾವನೆಂದೆಂದಿಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೊಂದು ಬಳಲಿದೆ ದೇವ ಇಂದಿರೇಶ ಸರ್ವೇಶ ಶ್ರೀಶ ತಂದೆ ರಕ್ಷಿಸಿ ಸಲಹೊ ಶ್ರೀನಿವಾಸ ಪ ಕಂದರ್ಪಜನಕ ಕಾರುಣ್ಯವಾರಿಧಿ ದೇವ ಕಂಸಾರಿ ಶೌರಿ ಅ.ಪ ಸ್ನಾನಜಪತಪವ ನೇಮಗಳ ಬಿಟ್ಟೆ ಮೌನವನು ಬಿಟ್ಟೆ ದಾನಧರ್ಮವ ಕೊಡದೆ ಕೈಬಿಟ್ಟೆ ಶ್ರೀನಿವಾಸನ ಪೂಜೆನೇಮ ನಿಷ್ಠೆ ಮಾಡದಲೆ ಬಿಟ್ಟೆ ಶ್ವಾನ ಸೂಕರನಂತೆ ಹೊರೆದೆ ಹೊಟ್ಟೆ ಏನ ಪೇಳಲಿ ಪರರ ದ್ರವ್ಯಪಹರಿಸುತಿಹ ಹೀನ ಜನರ ಸಂಗಮಾಡಿ ಬಳಲಿ ಬರಿದೆ 1 ಹಿಂದಿನ ಪಾಪ ದುಷ್ಕರ್ಮ ಫಲವೋ ಇದು ನಿನ್ನ ಒಲವೊ ಸುಂದರಾಂಗನೆ ರಕ್ಷಿಸೆನ್ನ ಸಲಹೊ ಭವ ಕರೆ ಕರೆಯೋ ಭವಬಂಧ ಸೆರೆಯೊ ಇಂದಿರಾರಮಣ ಬಿಡಿಸೆನ್ನ ಪೊರೆಯೊ ಹಿಂದೆ ಮುಂದೆನಗೆ ಗತಿ ನೀನೆಂದು ನಂಬಿದೆ ದೇವ ಮಂದರೋದ್ಧಾರಿ ಮುಚುಕುಂದ ವರದನೆ ಸ್ವಾಮಿ 2 ಬಿಡುತಿಹೆನು ಬಾಯ ಸುಮನಸರವೊಡೆಯ ಬಿಡು ನಿನ್ನ ಮಾಯ ಕಮಲಸಂಭವ ಜನಕ ಬಿಡದೆ ಕಯ್ಯ ಪೊರೆಯುವದು ಶ್ರೇಯ ಕಮಲಾಕ್ಷ ನಮಿಸಿ ಮುಗಿಯುವೆನು ಕಯ್ಯ ಕಮಲ ಪತ್ರಾಕ್ಷ ಸುಜನರ ಕಲ್ಪತರುವೆ ಹೃ- ತ್ಕಮಲದಿ ಪೊಳೆವ ಶ್ರೀ ಕಮಲನಾಭ ವಿಠ್ಠಲ 3
--------------
ನಿಡಗುರುಕಿ ಜೀವೂಬಾಯಿ
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ನೋಡಿದ್ಯಾ ಗುರುರಾಯರ ನೋಡಿದ್ಯಾ ಪ ನೋಡಿದ್ಯಾ ಮನವೆ ನೀನಿಂದು - ಕೊಂ - ಡಾಡಿದ್ಯ ಪುರದಲ್ಲಿ ನಿಂದು - ಆಹಾ ಮಾಡಿದ್ಯ ವಂದನೆ ಬೇಡಿದ್ಯ ವರಗಳ ಈಡು ಇಲ್ಲದೆ ವರ ನೀಡುವೊ ಗುರುಗಳ ಅ.ಪ ಸುಂದರ ತಮ ವೃಂದಾವನದಿ ತಾನು ನಿಂದು ಪೂಜೆಯ ಕೊಂಬ ಮುದದಿ - ಭಕ್ತನೀ ನಂದ ನೀಡುವೆನೆಂದು ತ್ವರದಿ ಇಲ್ಲಿ ಬಂದು ನಿಂತಿಹನು ಪ್ರಮೋದಿ ಆಹಾ ಹಿಂದಿನ ಮಹಿಮವು ಒಂದೊಂದೆ ತೋರುವಾ ಮಂದಜನರ ಹೃ - ನ್ಮಂದಿರಗತರನ್ನ 1 ದೂರದಿಂದಲಿ ಬಂದ ಜನರ - ಮಹ ಘೋರ ವಿಪತ್ಪರಿಹಾರಾ - ಮಾಡಿ ಸಾರಿದಭಿಷ್ಟವು ಪೂರಾ - ನೀಡಿ ಪಾರುಮಾಡುವ ತನ್ನ ಜನರಾ - ಆಹಾ ಆರಾಧಿಸುವರ ಸಂ -ಸಾರವಾರಿಧಿಯಿಂದ ಸೂರಿ ಕೊಡುವೊರನ್ನ 2 ಪಾದ - ಯುಗ ಸತ್ಯಪೂರ್ವಕದಿ ನಂಬೀದ - ನಿಜ ಭೃತ್ಯನಪೇಕ್ಷಮಾಡೀದ - ಕಾರ್ಯ ಸತ್ಯಮಾಡುವ ಪೂಜ್ಯಪಾದ - ಆಹಾ ಮತ್ರ್ಯಾದಿ ಸುರರೊಳು - ಎತ್ತ ನೋಡಿತಗಿನ್ನು ಉತ್ತುಮರಾರಯ್ಯ - ಭತ್ಯವತ್ಯಲರನ್ನ 3 ಅಂತರದಲಿ ತಾನು ನಿಂತು ಜನ ಸಂತತ ಕಾರ್ಯಗಳಿಂತು - ಮಾಡಿ ಕಂತುಪಿತಗೆ ಅರ್ಪಿಸ್ಯಂತು ತಿಳಿಸ ದಂತೆ ಎಮ್ಮೊಳಗಿರೊವೊ ತಂತು - ಆಹಾ ಸಂತತ ಕರ್ಮಗಳಂತು ಮಾಡುತ ಜೀವ ರಂತೆ ಗತಿಯು ತಾ ಪ್ರಾಂತಕ್ಕೆ - ನೀಡುವರ 4 ಅಗಣಿತ ಮಹಿಮವಗಾಧಾ - ಬಹು ಸುಗುಣನಿಧಿ ಮಹಾ ಭೋಧ - ನಾನು ಪೊಗಳುವದೇನು ಸಮ್ಮೋದ - ತೀರ್ಥ ಮೊದಲಾದ ಸುರರ ಪ್ರಮೋದ - ಆಹಾ ಮೊಗದಿಂದ ಶ್ರೀಗುರು ಜಗನ್ನಾಥ ವಿಠಲ ಸಂ ಮೊಗನಾದ ಕಾರಣ ಜಗದಿ ಮೆರೆವೊರನ್ನ 5
--------------
ಗುರುಜಗನ್ನಾಥದಾಸರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ
ಪೊರೆದ್ಯಾಕೋ ಸೀತಾನಾಥ ತಂದೆ ಮಂದರಧರ ಎನ್ನೊಳ್ದಯ ಮಾಡಲೊಲ್ಲ್ಯಾಕೋ ಸೀತಾನಾಥ ಪ ಕರಿರಾಜ ನಿಮ್ಮಯ ಚರಣ ಸರೋಜಕ್ಕೆ ಸೀತಾನಾಥ ಹರಿ ಬರೆದೋಲೆ ನಿನ್ನನು ಕರೆಕಳುಹಿದನೇನೊ ಸೀತಾನಾಥ ತರುಣಿ ದ್ರೌಪದಿ ತನ್ನ ಅವಮಾನಕಾಲಕ್ಕೆ ಸೀತಾನಾಥ ಸಿರಿವರ ನಿನ್ನ್ವೊಯ್ಕುಂಠಕೆ ತಾರು ಕೊಟ್ಟಿರ್ದಳೇ ಸೀತಾನಾಥ 1 ಕಂಬದಿ ಬಾರೆಂದಂಬುಧಿಗೆ ಬಂದ್ಹೇಳ್ದನೇ ಸೀತಾನಾಥ ಡೊಂಬೆ ಮಾಡುವ ದೂರ್ವಾಸಮುನಿಯಂದು ಸೀತಾನಾಥ ನಿನ್ನ ಬೆಂಬಲಿಟ್ಟು ಅಂಬರೀಷ ವ್ರತಗೈದನೇ ಸೀತಾನಾಥ 2 ವರಧ್ರುವ ಧರೆಯೊಳು ಜನಿಸುವ ಕಾಲಕ್ಕೆ ಸೀತಾನಾಥ ದೇವ ಕರವ ಪಿಡಿದು ನಿಮ್ಮ ಜೊತೆಲಿ ಕರೆತಂದನೇ ಸೀತಾನಾಥ ಪರಮಪಾಪಿ ಅಜಮಿಳನಗೆ ಪದವಿಯು ಸೀತಾನಾಥ ದೇವ ಕರುಣಿಸಿದವನಿನಗೆ ನೆರವಾಗಿರ್ದನೇನೊ ಸೀತಾನಾಥ 3 ಛಲದ ರಾವಣನಳಿದು ವರವಿಭೀಷಣನಿಗೆ ಸೀತಾನಾಥ ಲಂಕ ಕರುಣಿಸಿ (ದಿವೈಕುಂ) ಠ ಬಾಗಿಲೊಳಿರ್ದನೇ ಸೀತಾನಾಥ ಸೀತಾನಾಥ ಅವ ಇಳೆಯೊಳು ನಿಮಗೆ ಪಕ್ಷದ ಗೆಳೆಯನೆ ಸೀತಾನಾಥ 4 ಹಿಂದಿನ ಹಿರಿಯರವರನು ದುರಿತದಿಂ ಸಲಹಿದಿ ಸೀತಾನಾಥ ಇದು ಚೆಂದವೆ ನಿನಗೆ ಕಂದನ ಬಿಡುವುದು ಸೀತಾನಾಥ ಕಂಟಕ ಬೇಗ ಬಯಲ್ಹರಿಸಯ್ಯ ಸೀತಾನಾಥ ರಂಗ ಸಿಂಧುಶಯನ ಮಮ ತಂದೆಯೇ ಶ್ರೀರಾಮ ಸೀತಾನಾಥ 5
--------------
ರಾಮದಾಸರು
ಪ್ರಾಣಮತ ನರಸಿಂಹ | ವಿಠಲ ಪೊರೆ ಇವಳಾ ಪ ಜ್ಞಾನಗಮ್ಯನೆ ದೇವ | ಅನ್ನಂತ ಮಹಿಮಾ ಅ.ಪ. ಹಿಂದಿನದ ಸತ್ಸುಕೃತ | ದಿಂದ ವೈಷ್ಣವಪತಿಯಪೊಂದಿಹಳೊ ದೇವೇಶ | ಮಂದರೋದ್ಧಾರಿ |ಚೆಂದುಳ್ಳ ಮಧ್ವಮತ | ಸಂಧಾನ ತಿಳಿಯಲ್ಕೆ |ಇಂದೀವರಾಕ್ಷ ಹರಿ | ಚೋದಿಸೋ ಇವಳಾ 1 ಬೋಧ ಬೋಧ ದೊರಕಿಸುದೇವಆದಿ ಮೂರುತಿ ಹರಿಯೆ | ಬಾದರಾಯಣನೆ2 ಪತಿಸುತರು ಹತರಲ್ಲಿ | ವ್ಯಾಪ್ತನಾಗಿಹ ನಿನ್ನಸ್ಥಿತಿಗತಿಯನೇ ತಿಳಿದು | ಚಿಂತಿಸುವ ಪರಿಯಾಹಿತದಿಂದ ತಿಳಿಸುತ್ತ | ಸಾಧನ ಸುಸತ್ಪಥದಿರತಿಯನೆ ಕೊಟ್ಟಿವಳ | ಉದ್ದರಿಸೋ ದೇವಾ 3 ತೊಡರು ಬರಲಿ | ಅಡವಿಯಲಿ ತಾನಿರಲಿಮೃಡನುತನೆ ನಿನ್ನ ಸ್ಮøತಿ | ಬಿಡದಲೇ ಕೊಟ್ಟುಕಡು ಗುಂಭ ಸಂಸ್ಕøತಿಯ | ಮಡುವಿನಿಂದಡಬಾಕಿಬಿಡದಿವಳ ಪೊರೆಯುವುದು | ಕಡುದಯಾ ಪೂರ್ಣ4 ಗುರುಭಕ್ತಿ ಹರಿಭಕ್ತಿ | ವೈರಾಗ್ಯ ಭಾಗ್ಯದಲಿಪರಮರತಿಯನೆ ಕೊಟ್ಟು | ಹರಿ ಸ್ಮರಣೆಯೆಂಬಾವರವಜ್ರ ಕವಚವನೆ | ತೊಡಿಸೆಂದು ಪ್ರಾರ್ಥಿಸುವೆಮರುತಾಂತರಾತ್ಮಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದೆನೊ ರಂಗ ಬಂದೆನೊ ಹಿಂದಿನ ಸುಕೃತದಿ ತಂದೆ ನಿನ್ನ್ಹುಡುಕುತ ಪ ಹಲವು ಜನುಮಜನುಮಗಳಲಿ ತಿರುತಿರುಗಿ ತೊ ಳಲಿತೊಳಲಿ ಬಂದು ಬಳಲಿ ಮರುಗಿ ಹೊಲಸಿನ ಮಲಮೂತ್ರ ಕುಣಿಲಿ ಕೊರಗಿ ಎಲುವೊಂದು ಗಿರಿಯೋಪಾದಿಯಲಿ ಆಹ ಇಳೆಯೊಳು ಬಿದ್ದಿಹ್ಯವು ಬಲು ಬಲು ಹೊಲೆಬವಣೆ ಯಲಿ ನೋಯಲಾರದೆ ಕಳವಳಗೊಳುತ 1 ಜಡÀಸದೃಸ ಶರೀರಗಳ್ಹೊತ್ತು ಬಿಡದೆ ಎಡರು ತೊಡರಿನೊಳಗೆ ಬೆರೆತು ಕೆಡುವ ಪೊಡವಿಸುಖಕೆ ಮನವಿತ್ತು ದೃಢವನ್ಹಿಡಿಯದೆ ಮರೆವಿನಿಂ ಸಂಪತ್ತು ಆಹ ಒಡನೊಡನ್ಹುಟ್ಟ್ಹುಟ್ಟ ಕಡುಕಷ್ಟಬಡುವಂಥ ಸುಡಗಿಯ ತಡಿಯದೆ ಗಡಗಡ ನಡುಗತ್ತ 2 ನೋಡೆಲೊ ಕರುಣಾಂತರಂಗ ದಯವ ಮಾಡೆಲೊ ಸುಗುಣ ಶುಭಾಂಗ ಅಭಯ ನೀಡೆಲೊ ನಿರುತ ನೀಲಾಂಗ ದುರ್ಭವ ಕಡಿಯೆಲೊ ಭವಭಯಭಂಗ ಆಹ ತೊಡರು ಕಡೆಮಾಡಿ ಎನಗೆ ಮುಕ್ತಿ ನೀಡಿ ಸಲಹು ಎಂದು ಬೇಡುತ ಶ್ರೀರಾಮ 3
--------------
ರಾಮದಾಸರು
ಬಿನ್ನಪ ಲಾಲಿಸಯ್ಯ ಭಕ್ತಪರಾಧ- ವನ್ನು ಕ್ಷಮಿಸಬೇಕಯ್ಯ ಪ. ಅನ್ಯಾಯ ಕಲಿಕಾಲಕ್ಕಿನ್ನೇನು ಗತಿ ಸುಪ್ರ- ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತಅ.ಪ. ಮಕ್ಕಳ ಮಾತೆಯಂದದಿ ಕಾಯುವ ಮಹ- ದಕ್ಕರದಿಂದ ಮುದದಿ ಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತು ರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನು ದಿಕ್ಕಿಲ್ಲದವರ ಧಿಕ್ಕಾರ ಗೈದರೆ ಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ- ವರ್ಕಳಮಣಿ ನಿನಗಕ್ಕಜವಲ್ಲವು ಕುಕ್ಕುಟಧರವರ ಮುಕ್ಕಣ್ಣತನಯ1 ಜಾತಿ ನೀತಿಯನು ಬಿಟ್ಟು ಡಾಂಭಿಕತನದ ರೀತಿಗೆ ಪ್ರೀತಿಪಟ್ಟು ಸೋತು ಹಣವ ಕೊಟ್ಟು ಖ್ಯಾತರೆಂಬುವ ಗುಟ್ಟು ಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿ ಯಾತುಧಾನರ ಗುಣ ಯಾತಕ್ಕರಿಯದು ಭೂತೇಶ್ವರಸಂಜಾತ ಸುರನರ- ವ್ರಾತಾರ್ಚಿತ ಪುರಹೂತಸಹಾಯಕ ನೂತನಸಗುಣವರೂಥ ಪುನೀತ2 ಯಾವ ಕರ್ಮದ ಫಲವೋ ಇದಕಿ- ನ್ಯಾವ ಪ್ರಾಯಶ್ಚಿತ್ತವೋ ಯಾವ ವಿಧವೊ ಎಂಬ ಭಾವವರಿತ ಪುರುಷ ಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲ ದೇವ ಲಕ್ಷ್ಮೀನಾರಾಯಣನ ಪಾದ ಸೇವಕನೀ ಮಹಾದೇವನ ಸುತ ಕರು- ಣಾವಲಂಬಿಗಳ ಕಾವ ನಮ್ಮಯ ಕುಲ- ದೇವ ವಲ್ಲೀಪತಿ ಪಾವಂಜಾಧಿಪ3
--------------
ತುಪಾಕಿ ವೆಂಕಟರಮಣಾಚಾರ್ಯ
ಭವಸಾಗರ ದಾಟುವ ಬಗೆ ಪೇಳಯ್ಯ ಭವನಂಗಳಿಗೊಡೆಯ ಭವಸಾಗರ ದಾಟುವ ಬಗೆ ಪೇಳಯ್ಯಾ ಪ ಕ್ಷಿತಿಯೊಳು ದಾನವರತಿ ಪೆರ್ಚಿಹರು ಮಿತಿಮೀರಿ ಮೆರೆವೋರು ಕ್ಷಿತಿಪತಿ ನಿನ್ನನೆ ಮರೆತಿಹರು ಶ್ರುತಿಗಳ ಕಾಡ್ವರು ಸತಿ ಮಾತೆಯರಿಯರು ಧರ್ಮವೆನುತಿಹರು1 ಹಿಂದಿನ ಜನ್ಮದಿ ಕಲಿಶೇವಕರು ನಿಂದಕರುನ್ಮತ್ತರು ಹೊಂದೀ ದ್ವಿಜ ಜನ್ಮವ ದ್ವಿಜರಿಗಸುರರು ಕುಂದದೆ ಬೇಡಿಪರು ತಂದೆ ತವದಾಸರ ನೆರೆ ದೂಷಿಪರು ಕುಂದದೆ ಪೋಲಿಪರು ಹೊಂದಿಸದೀರೆನಗೆಂದಿಗೆ ಖಳರನು 2 ನರಜನ್ಮದಿ ಯಾತ್ರೆಯ ಚರಿಸಲಿಲ್ಲಾ ವರವ್ರತಗಳೆ ಇಲ್ಲಾ ಹರಿಪಾದತೀರ್ಥದ ಪಾನಗಳಿಲ್ಲಾ ಹರಿಪೂಜೆ ಮೊದಲಿಲ್ಲಾ ವರತೀರ್ಥದೆಂದಿಗೂ ಮೀಯಲಿಲ್ಲ ಹರಿಕೀರ್ತನವಿಲ್ಲಾ ನರಸಿಂಹವಿಠ್ಠಲ 3
--------------
ನರಸಿಂಹವಿಠಲರು
ಭಾವದ ಪೊಂಬ್ಹರಿವಾಣ ಭಕುತಿಯಾ | ತೀವಿದಾರತಿ ಜ್ಞಾನಜ್ಯೋತಿಯಾರುತಿಯಾ ಪ ಆರುತಿ ಬೆಳಗುವೆನಾ | ನಮ್ಮಯ್ಯಗೆ ಆರುತಿ ಬೆಳಗುವೆನಾ | ಶ್ರೀ ಗುರುವಿಗೆ ಆರುತಿ ಬೆಳಗುವೆನಾ 1 ಮುಖದಲಿ ನುಡಿಯುತ ನಾಮಾವಳಿಯಾ | ಸಕಲರು ಪ್ರೇಮದಿ ಹಾಕಿ ಚಪ್ಪಾಳೆಯಾ 2 ನಯನದಿ ನೋಡಿ | ಶರಣವ ಮಾಡಿ | ಭಯವ ನೀಡಾಡಿ | ಶೃುತಿಗಳಪಾಡಿ3 ಇಂದಿನದಿನದಾನಂದವು ನಮಗೆ | ಹಿಂದಿನ ಪುಣ್ಯ ಇದಿರಿಟ್ಟಿತು ಈಗ4 ಒಡಲ್ಹೊಕ್ಕು ಮಹೀಪತಿ ನಂದ ನೊಡೆಯನಾ | ಪಡೆವ ಬನ್ನಿರೋ ಬೇಗ ಮುಕುತಿಯ ಸದನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಮನವೇ ನೀ ಬರಿದೆಜನ್ಮ ವ್ಯರ್ಥಗಳೆವರೆ ಬಂಗಾರದಥಾ ಪ ಮನವೇ ನೀ ಬರಿದೇ ಜನ್ಮ ವ್ಯರ್ಥಗಳೆವರೆ ಬಂಗಾರದಂಥಾ | ಮರೆವ ದಿನಗಳ ಜರಿವರೇ ನರದೇಹವಿದು ಅ.ಪ ದೊರೆಯದಿನ್ನು ಮತ್ತ ತರುವರ ಏನಾದರೇನೀ | ಹರಿಯ ಸ್ಮರಣೆಯ ಬಿಡುವರೇ | ಅರಿವ ಪಂಥ ವಿಡಿದು ಜನ್ಮ ಮರಣ ಬಲಿಯಾ ತಪ್ಪಿಸದೇ | ತಿಗಳಿ ಹುಳುವಿನಂತೆ ಸಿಕ್ಕ ತನ್ನ ತಾ ಮರೆವರೇ 1 ಕೇಳೆಲೋ ನೀ ಪೊಡವಿಯೊಳಗಿದ್ದ ಸಾಯಸಾ | ಉದಯದಲೆದ್ದು ಬಿಡುವದೆ ಮಲಮೂತ್ರ ಕೆಲಸಾ | ಮಧ್ಯಾನ್ಹದಲಿ ವಡಲ ತುಂಬುವ ಕೆಲಸಾ | ನಿಶಿಕಾಲದಲ್ಲಿ ವಡನೆ ಮಲಗುವ ಕೆಲಸಾ | ಪಡೆದ ತಾಯಿಯವ್ವನೆಂಬ ದೃಢವನವಾ ಕಡಿಯಲು | ಕೊಡಲಿಯಂತೆ ಹುಟ್ಟಿ ಬಂದೆ ಮಡದಿ ಮಕ್ಕಳುದ್ದೇಶಾ 2 ಮನವೇ ನೀ ಹಿಂದಿನವ ಗುಣ ಜರಿದು ಸದ್ಭಾವ ಭಕು | ತಿಂದ ನಡುವಳಿ ಬಿರಿದು | ಸದ್ಗುರುವೀನ | ದ್ವಂದ್ವ ಪಾದಗಳ ವಿಡಿದು | ಅವರ ದಯ | ದಿಂದ ಗತಿ ಮುಕ್ತಿ ಪಡೆದು | ಇಂದು ಧನ್ಯನಾಗೆಲೋ ಮುಕುಂದ ನಾಮ ನೆನೆದು ನೀ | ತಂದೆ ಮಹಿಪತಿ ನಿಜನಂದನುಸುರಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರಗವ್ವ ತಂಗಿ ಮರಗವ್ವ ದುರುಳ ಗುಣದ ಸವಿ ಸುರಿಯವ್ವ ಪ ಪರಿಪರಿಯಿಂದಲಿ ಹರಿಹರಿಯೆನ್ನದೆ ದುರಿತದುರುಲಿನೊಳು ಬಿದ್ದೆವ್ವ ಅ.ಪ ಗುರುಹಿರಿಯರನು ಜರೆದೆವ್ವ ಪರಿಪರಿ ಪಾಪ ಕಟ್ಟಿಕೊಂಡೆವ್ವ ಹರಿಶರಣರ ಸೇವೆ ಅರಿಯವ್ವ ಹರಿಹ್ಯಾಂಗೊಲಿತಾನು ನಿನಗವ್ವ 1 ಹಿಂದಿನ ಕರ್ಮದು ನೋಡವ್ವ ಮುಂದೆ ಚಂದಾಗಿ ತಿಳಕೊಂಡುಳಿಯವ್ವ ಮಂದರಧರ ಗೋವಿಂದನ ಮಾನಸ ಮಂದಿರದೊಳಗಿಟ್ಟು ಭಜಿಸವ್ವ 2 ಗುರುವರ ಶ್ರೀರಾಮ ಚರಣವ್ವ ತಂಗಿ ಅನುದಿನ ಸ್ಮರಿಸವ್ವ ಶರಣ ಜನರ ಪ್ರಿಯ ಕರುಣಾಕರನು ನಿನ್ನ ಪೊರೆಯದೆ ಎಂದಿಗೆ ಇರನವ್ವ3
--------------
ರಾಮದಾಸರು