ಒಟ್ಟು 115 ಕಡೆಗಳಲ್ಲಿ , 44 ದಾಸರು , 111 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುಟ್ಟ ಬಾಲನೆ ಮನೆ ಕಟ್ಟೀಲಾಡೋಕೆಟ್ಟ ಗೋಪರ ಮನೀಗ್ಹೋಗಬ್ಯಾಡಾ ಪ ನಿನ್ನ ಮಗನು ಮೆದ್ದು ಬೆಣ್ಣೆ ಪಾಲ್ ಮೊಸರನೆಉಣ್ಣೀಸುತಲೆ ಬೆಕ್ಕಿಗುಂಡನಮ್ಮಸಣ್ಣ ಮಕ್ಕಳ ಕೈಯ್ಯ ಕಣ್ಣಿನಿಂದಲೆ ಕಟ್ಟಿಓಡುತಲಿಹರಮ್ಮಾ ನೋಡೆಂಬರೋ 1 ಕಂದಯ್ಯಾ ಗೋಪೆಯರ ಮಂದಿರಕ್ಹೋಗದೆಇಂದು ಹುಟ್ಟಿದ ದಿನಾ ಎರಕೋ ಕೂಸಮಂದಿರದೊಳು ವಿಪ್ರವೃಂದವ ಪೂಜಿಸಿಛಂದಛಂದದ ವಸ್ತ ತಂದಿಡುವೆ 2 ಮಂದಿ ಮಕ್ಕಳು ನೋಡು ಛಂದದಿ ತಮ್ಮನೆಮುಂದಲೆ ಊರೊಳಗಾಡೆಂಬರೊನಿಂದ ಧಾಂಧಲೆ ಭಾಳ ಬಂದು ಹೇಳುವರಲ್ಲೋಇಂದೆಲ್ಲಿ ಪೋಗದಿರಿಂದಿರೇಶಾ 3
--------------
ಇಂದಿರೇಶರು
ಪುಷ್ಪಧರಿಸುವ ಉತ್ಸವಗೀತೆ ಪುಷ್ಪವನ್ನುಧರಿಸುವ ಉತ್ಸವ ನೋಡುವ ಬನ್ನಿ ಭಕ್ತವತ್ಸಲನರಾಣಿ ರಂಗನಾಯಕಿಗಿಂದು ಪ. ವೈಶಾಖಮಾಸದಲಿ ಕೃಷ್ಣಪಕ್ಷದಲಿ ಲಕ್ಷ್ಮೀಗೆ ಪುಷ್ಪವನ್ನು ಧರಿಸುವ ಅರ್ತಿಯ ನೋಡುವ ಬನ್ನಿ 1 ವಿಧವಿಧದ ಪುಷ್ಪವ ಮುಡಿಸಿ[ದರು] ಮದನನಮಾತೆಯ ಶಿರಸಿಗೆ 2 ಪಂಕಜನಾಭನರಾಣಿ ಪರಮಕಲ್ಯಾಣಿ ನೀಲವೇಣಿ ಪಂಕಜಪಾಣಿ ಕೀರವಾಣಿ ಸುಶೋಣೀ 3 ಸುರರು ಅಸುರರು ಕೂಡಿ ಶರಧಿಮಥನವ ಮಾಡೆ ಭರದಿಂದ ಉದಿಸಿಬಂದ ವರಲಕ್ಷ್ಮೀದೇವಿಗಿಂದು 4 ಜಯವಿಜಯರಿಗಾಗಿ ಜನಿಸಿ ತಾ ಭೂಮಿಯಲಿ [ಗೆದ್ದ] ಇಂದು 5 ಸೃಷ್ಟಿಭಾರವನಿಳುಹಲೆಂದು ಕೃಷ್ಣಮೂರುತಿ ಜನಿಸಿ [ಒಲಿದ] ಭೀಷ್ಮಕನುದರದಿ ಬಂದ ರುಕ್ಮಿಣೀದೇವಿಗೆ ಇಂದು6 ಮಲ್ಲೆ ಮಲ್ಲಿಗೆ ವಕುಳ ಮಂದಾರ ಪಾರಿಜಾತ[ವ] ಫುಲ್ಲನಾಭನರಾಣಿಗೆ ಲೋಲಾಕ್ಷಿಯರು ಮುಡಿಸಿದರು 7 ತಾಳೆ ಚಂಪಕ ಕಮಲಮಾಲೆ ಸುರಗಿ ಜಾಜಿಯ ನೀಲವರ್ಣನರಾಣಿಗೆ ಲೋಲಾಕ್ಷಿಯರು ಮುಡಿಸಿದರು 8 ಮರುಗ ದವನ ಪಚ್ಚೆತೆನೆಯು ಸುಗಂಧರಾಜವ ಪರಮ ಸುರರು ತಂದು ಮುಡಿಸುವರು 9 ವಸಂತೋತ್ಸವಕೆಂದು ವಸುಧೀಶನರಸಿ ತಾನು ಕುಶಲದಿಂದಲೆ ಬಂ[ದಳಾವ]ಸಂತಮಂಟಪಕಿಂದು 10 ರತ್ನದ ಕೆಂಪಿನ ಕಿರೀಟವಿಟ್ಟು ತಿದ್ದಿದ ಕಸ್ತೂರಿಬಟ್ಟು ಮುತ್ತುಸುತ್ತಿದ ಮೂಗಿನಬಟ್ಟು ಹರಿದ್ರಾವಸ್ತ್ರವನುಟ್ಟು 11 ಕರ್ಪೂರದ ಚೂರ್ಣದಿ ಮಿಂದು ಭಕ್ತರಿಟ್ಟ ನೈವೇದ್ಯವನುಂಡು [ತಾ]ಪೊರಟಳು ಮಿತ್ರೆಯರ ಕೋಲಾಟವ ನೋಡುತ್ತ ತನ್ನರಮನೆಗೆ 12 ಹುಟ್ಟಿದಮನೆ ಕ್ಷೀರಾಬ್ಧಿ ಹೊಕ್ಕಮನೆ ಶ್ರೀವೈಕುಂಠವ ಬಿಟ್ಟು ಭಕ್ತರ ಸಲಹುವೆನೆಂದು ಬಂದ ವೆಂಕಟರಂಗನರಸಿಗೆ 13
--------------
ಯದುಗಿರಿಯಮ್ಮ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತಿ ಪಾಶದಿ ಕಟ್ಟುತ ಹರಿಯನು ನಿತ್ಯದಲಿರು ಮನವೇ ಪ. ಭಕ್ತಿಗೆ ಮೆಚ್ಚುತ ಅಚ್ಚುತ ತಾನೆ ಬಹ ನಿಶ್ಚಯವಿದು ಮನವೆ ಅ.ಪ. ಅನುದಿನ ನಾರಾಯಣನೆಂದಣುಗಗೆ ಕ್ಷಣದಿ ಕಂಬದಿ ಬಂದ ದನುಜನ ಮುರಿದ ಗುಣನಿಧಿಯನು ನೀ ಕ್ಷಣ ಬಿಡದನುದಿನ ನೆನೆ ಮನವೇ 1 ಕಲ್ಲಾಗಿದ್ದಹಲ್ಲೆ ಪೊರೆದು ಶಿವ ಬಿಲ್ಲ ಮುರಿದ ರಾಮನ ನಲ್ಲೆ ಕುಬ್ಜೆಯ ಡೊಂಕನೆ ತಿದ್ದಿದ ಖುಲ್ಲ ಕಂಸನ ಗೆದ್ದಾ ಕೃಷ್ಣನ 2 ಅಂಬರೀಷ ದ್ವಾದಶಿ ವ್ರತವನು ಮಾಡೆ ಮುನಿ ಪುಂಗವ ಜರಿಯುತಿರೆ ರಂಗನ ಚಕ್ರದಿಂದ್ಹುಟ್ಟಿದನರಿಯ ದೇವ ಈ ಅಂಗ ಭಂಗರಕೆ ಚಾಟಿ ಶ್ರೀ ಶ್ರೀನಿವಾಸನು 3
--------------
ಸರಸ್ವತಿ ಬಾಯಿ
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಮನುಜದನುಜ ರಿವರೆವೆ ನೋಡಿ | ದನುಜನು ದೈತ್ಯರೊಳೆನ ಬ್ಯಾಡಿ ಪ ಹರಿ ನೆನೆಯುತ ಹರಿಕಥೆಗಳ ಕೇಳುತ | ಹರಿ ಭಕುತಿಗೆ ಬೆರೆದವ ಮನುಜಾ | ನಿರುತ ಆಹಾರ ನಿದ್ರೆ ಚರಟ ಮಾತುಗಳಾಡಿ | ಬರಿದೆವೆ ದಿನಗಳೆವವ ದನುಜಾ 1 ಪರರ ಸದ್ಗುಣ ವಾಲಿಸಿಕೊಳುತಲಿ | ಸಕ | ಲರಿಗೆ ಮನ್ನಿಸುವವನೇ ಮನುಜಾ | ಗರುವ ಹಿಡಿದು ತನ್ನ ಹೊಗಳುತ ಅನ್ಯರ | ಬರಿದೆ ನಿಂದಿಸುವವನೆ ದನುಜಾ 2 ಪಥ | ಸರ್ಕನೆ ತಿಳಿದವ-ನೆವೆ ಮನುಜಾ | ಮೂರ್ಖತನ ಹಿಡಿದು ಸಾಧು ಸಂತರಲಿಕು | ತರ್ಕವ ಮಾಡುವವನೆ ದನುಜಾ 3 ಹುಟ್ಟಿದರಲಿ ಸಂತುಷ್ಟದಿ ಕವಳವ | ನಿಷ್ಠೆಗೆ ತಾರದವನೆ ಮನುಜಾ | ನೃಪರ ನಂಬಿ ಲಾಭಾ ಲಾಭ ಕೊಡುವ | ಸೃಷ್ಟೀಶನನು ಮರೆತವ ದನುಜಾ 4 ತಂದೆ ಮಹಿಪತಿ ಭೋಧವ ಮನದಲಿ | ತಂದು ಹರುಷವ ಪಡುವವ ಮನುಜಾ | ದಂದುಗ ಚಿತ್ತದಿ ಹೇಳಿದ ಮಾತಿಗೆ | ಸಂದೇಹ ಬಟ್ಟವನವ ದನುಜಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾರು ಇದ್ದರೇನು ನಿನ್ನ ಪಥಕೆ ಬಾರರೋ ಶ್ರೀಹರಿ ಮುರಾರಿ ಎಂದು ಗತಿಯ ನೋಡಿ ಕೊಂಡಿರೋ ಪ ಹೊನ್ನು ಹಣವು ಚಿನ್ನ ಚಿಗುರು ಬಣ್ಣ ಬಂಗಾರವಿರಲು ಎನ್ನವರು ತನ್ನವರು ಎಂದು ಬರುವರೋ ಅನ್ನಕಿಲ್ಲದಿರಲು ಕೆಟ್ಟು ಅಲ್ಲಿ ಪರಿಕಾಲದಲ್ಲಿ ನಿನ್ನ ಕುಶಲವಾರ್ತೆಗಳನು ಮುನ್ನ ಕೇಳರೋ 1 ಇಂದು ಹಬ್ಬ ಹುಣ್ಣಿಮೆಂದು ಬಂಧು ಬಳಗವೆಲ್ಲನೆರೆದು ತಿಂದು ನಿನ್ನ ಹಿಂದೆ ಮುಂದೆ ತಿರುಗು ತಿಪ್ಪರೋ ಬಂಟ ಬಹಳ ಭಾಗ್ಯವೆಲ್ಲ ಕುಂದಿ ಹೋದ ಕಾಲದಲ್ಲಿ ಮುಂದೆ ಸುಳಿಯರೋ 2 ತುಂಬಿ ಇರಲು ಎಡದೆ ಬಿಡದೆ ನೆಂಟರಿಷ್ಟರೆಂದು ತಿಂಬರೋ ವಡವೆ ವಸ್ತು ನಷ್ಟವಾಗಿ ಬಡತನವು ಬಂದ ಬಳಿಕ ಬಿಡುವ ಕೈಯ ನಿನ್ನ ನೊಂದ ನುಡಿಯ ನುಡಿಸರೋ 3 ಮಡದಿ ಮಕ್ಕಳೆಲ್ಲ ನಿನ್ನ ಒಡನೆ ಹುಟ್ಟಿದವರು ಸಹಿತ ಕಡು ಮಮತೆಯಿಂದಲವರು ನೋಡಿ ನಡೆವರೋ ಉಡಲು ತೊಡಲು ಒಡಲಿಗಿಷ್ಟು ಕಡಿಮೆಯಾಗಿ ಎಂದು ಹೊಡೆದು ಕೊಂಬರೋ 4 ಮೃತ್ಯುನಿನ್ನ ಹತ್ತಿರಿದ್ದು ಹೊತ್ತು ವೇಳೆ ನೋಡುತಿಹುದು ವ್ಯರ್ಥವಾಗಿ ಇವರ ನಂಬಿ ಕತ್ತೆ ಕೆಡದಿರೋ ಸತ್ತು ಹುಟ್ಟಿ ಸಾಯ ಬೇಡಿ ಚಿತ್ತದಲ್ಲಿ ಭೀಮನಕೋಣೆ ಗೊತ್ತಿಲಿದ್ದ ಲಕ್ಷ್ಮೀಪತಿಯ ಒತ್ತಿ ಭಜಿಸಿರೋ 5
--------------
ಕವಿ ಪರಮದೇವದಾಸರು
ರಾಮಾ ರಾಮಾ ಎಂಬ ನಾಮ ಜಿಹ್ವೆಯೊಳಿರುವನೇಮವನೆ ಸ್ಥಿರನಿಜವ ಮಾಡೋ ರಾಮರಾಮ ದಶರಥರಾಮ ಪಟ್ಟಾಭಿರಾಮ ರಘುರಾಮ ಸೀತಾರಾಮ ರಾಮ(ರಾಮ) ಪ ಬಾಲತನವೆಂಬುದೆಂತು ಲೀಲೆಯಿಂದಲಿ ಸಂತು ಮೇಲೆ ಯೌವನವು ಬಂತೋ ರಾಮಲೋಲಲೋಚನೆಯರ ವಿಶಾಲರತಿಸುಖದೊಳಗೆ ವೋಲಾಡುತಿದ್ದೆನಲ್ಲೋ ರಾಮಕಾಳು ಜರೆ ಮುಸುಕಿ ಕೈಕಾಲು ಕಸದಿಂ ಮುರುಪಿ ನಾಲಿಗೆಯ ಧೃತಿ ತಪ್ಪಿತೋ ರಾಮಕಾಲನವರಿಗೆ ಕರುಣವಿಲ್ಲ ನೀ ಕೈಬಿಟ್ಟ ಮೇಲೆ ರಕ್ಷಿಸುವರಿಲ್ಲಾ ರಾಮ 1 ಹೆತ್ತ ತಾಯಿ ಮೊಲೆವಾಲನುಂಡುದಕೆ ಪಡಿಗೆಟ್ಟೆ ಸಪ್ತಶರನಿಧಿ ಸಾಲದೋ ರಾಮಸತ್ತು ಹುಟ್ಟಿದ ದೇಹದಸ್ಥಿಗುಪಮಿಸೆ ಮೇರುಮಸ್ತಕಕ್ಕತ್ಯಧಿಕವೋ ರಾಮಚಿತ್ರಗುಪ್ತರು ಕರ್ಮಗಳನು ಬರೆಬರೆದು ಬೇಸತ್ತು ಬೆಂಡಾದರಲ್ಲೋ ರಾಮಅತ್ಯಂತ ಕರುಣರಸವೆನ್ನ ಮೇಲೆ ನಿನಗಿರ್ದರೆ ಮುಕ್ತಿಯನು ಕೊಟ್ಟು ಸಲಹೋ ರಾಮ2 ತಂದೆ ತಾಯ್ಗಳು ನೀನೆ ಬಂಧುವರ್ಗವು ನೀನೆ ಮುಂದೆ ರಕ್ಷಿಪನು ನೀನೆ ರಾಮಮುಂದುಗಾಣದೆ ಬಹು ಮದಾಂಧತನದಲಿನಡೆದು ಮಂದಮತಿಯಾಗಿದ್ದೆನೋ ರಾಮಮುಂದಾದರೂ ತಂದೆ ತಾಯಿಯ ಜಠರದಿ ಬಾರದಂದವನು ಮಾಡಿ ಸಲಹೋ ರಾಮಚಂದ್ರಶೇಖರ ಕೆಳದಿ ರಾಮೇಶ್ವರನು ನೀನೆ ಎಂದು ನಾನಿಂದು ತಿಳಿದೆ ರಾಮ 3
--------------
ಕೆಳದಿ ವೆಂಕಣ್ಣ ಕವಿ
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ
ಶೇಷಶಯನ ನಿನ್ನ ಪರಮ ಭಾಗವತರ ಸಹವಾಸದೊಳಿರಿಸು ಕಂಡ್ಯ ಎನ್ನನು ಪ ಬೇಸರಿಸದೆ ನಿನ್ನ ಹೃದಯಾಬ್ಜದೊಳಗಿರುವದಾಸರೊಳಿರಿಸು ಕಂಡ್ಯ ಎನ್ನನುಅ ತಂದೆಯೊಡಲನು ಸೀಳಿಸಿದವರೊಳು, ದೇ-ವೇಂದ್ರನ ತಲೆಗೆ ತಂದವರೊಳು, ದು-ರ್ಗಂಧ ಪೆಣ್ಣಿಗೆ ಚಂದನದ ಕಂಪನಿತ್ತಂಥಬಾಂಧವರೊಳಗಿರಿಸು ಕಂಡ್ಯ ಎನ್ನನು 1 ತೋಯಜವೆಂಬ ಪುಷ್ಪದ ಪೆಸರವರೊಳುತಾಯ ಸೊಸೆಗೆ ಮಕ್ಕಳಿತ್ತವರೊಳುಆಯದಿ ದ್ವಾದಶಿ ವ್ರತವ ಸಾಧಿಸಿದಂಥರಾಯರೊಳಿರಿಸು ಕಂಡ್ಯ ಎನ್ನನು2 ಗಿಳಿನಾಯಿ ಪೆಸರಿನವರೊಳು, ಮುಗಿಲಹೊಳೆಯ ಹೊಟ್ಟೆಲಿ ಹುಟ್ಟಿದವರೊಳುಕೆಳದಿಯ ಜರಿದು ಶ್ರೀಹರಿದಿನ ಗೆದ್ದಂಥಹಳಬರೊಳಿರಿಸು ಕಂಡ್ಯ ಎನ್ನನು3 ಅನುದಿನ ಸ್ಥಿರರಾಜ್ಯವಾಳಿದಕಿಂಕರರೊಳಿರಿಸು ಕಂಡ್ಯ ಎನ್ನನು 4 ಕಾಟಿಗೆ ಕಾಸಿಲ್ಲದವರು ರಾಯರ ಪಂಕ್ತಿಊಟವ ಬಯಸಿದಂತೆ ನಾ ಬೇಡಿದೆನಾಟಕಧರ ನೆಲೆಯಾದಿಕೇಶವ, ನಿ-ನ್ನಾಟದೊಳಿರಿಸು ಕಂಡ್ಯ ಎನ್ನನು 5
--------------
ಕನಕದಾಸ