ಒಟ್ಟು 2071 ಕಡೆಗಳಲ್ಲಿ , 115 ದಾಸರು , 1458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೆನ್ನ ಸಖಿಯೇ ಕರೆದು ತೋರಿಸೇ ಪ ಕರೆದು ತೋರಿಸೇ ಕಂಜನಯ್ಯಾನಾ| ಕರಿವರ ದಾಯಕ ಕರುಣಾ ಸಾಗರನಾ 1 ಸರಸಿಜ ಲೋಚನ ಮುಕುಟ ಕುಂಡಲನಾ| ಕೌಸ್ತುಭ ಕೇಯೂರ ಧರನಾ 2 ಮದನ ಶರಕ ಗುರು ಮಾಡುವರೇನೇ| ಮಧುಹರ ಮುನಿವದು ಉಚಿತ ವೇನೇ 3 ಒಂದರಗಳಿಗೆಯ ಮರೆದಿರ ಲಾರೆ| ಇಂದು ನೀ ಧನ್ಯಳ ಮಾಡಲೆ ನೀರೆ4 ಬೆರೆದು ಬಿಡುವನಲ್ಲಾ ಸಕಲಂತರ್ಯಾಮಿ| ನೆರೆದನು ಗುರು ಮಹಿಪತಿ ಸುತಸ್ವಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೊ ಕೃಷ್ಣ ಬಾರೊ ಕೃಷ್ಣ ಬಾರೊ ಕೃಷ್ಣ ಮನದಸದನಕೆ ಪ ತೊರೊ ಕೃಷ್ಣ ತೊರೊಕೃಷ್ಣ ತೊರೊಕೃಷ್ಣ ಚರಣ ಬಡವಗೆ ಅ ಶಿರವ ನಿಡುವೆ ಚರಣದಲ್ಲಿದುರಿತಹರಣ ಕರುಣಭರಿತನೆ ಪೊರೆವ ಧರಣಿ ಧರಿಪನೆ 1 ಸಿರಿಯಮದದಿ ಮರೆತೆ ನಿನ್ನ ಕರೆದು ಪೊರೆಯೊ ಶರಣರಕ್ಷಕಾ ಅಳಿವೆ ಕ್ಷೇಮ ಧಾಮನೆ 2 ವೇದವಿನುತ ಮೋದಭರಿತ ಸಾಧುಚರಿತ ಆದಿ ಕಾರಣಾ ಕಾಯೊ ಬಂಧನೀಡ್ವನೇ3 ನೀರಜಾಕ್ಷ ವಾರಿನಿಲಯ ಸೂರಿಗಮ್ಯ ಪೂರ್ಣಧಾಮನೆ ಸರ್ವನಾಮ ಸರ್ವಕರ್ಮ ಸರ್ವಶ್ರೇಷ್ಟಸರ್ವ ಪ್ರೇರಕಾ 4 ಇಂದಿರೇಶ ನಂದಪೂರ್ಣ ಸುಂದರಾಂಗ ಬಂಧಮೋಚಕ ಕುಂದುರಹಿತ ವಂದನಾರ್ಹ ಬಿಂದು ಬಿಂಬ ಕಂಧರಾಶ್ರಯ 5 ಭುವನ ವಿತತ ಭುವನಮೂಲ ಭುವನ ಪಾಲ ಭುವನನಾಶಕ ಭುವನ ಭಿನ್ನ ಸ್ತವನ ಪ್ರೀಯ ಕವನವರಿಯೊ ಕವಿಬಿರೀಡಿತ ಭಕುತಿದಾಯಕ ಶಕುತ “ಶ್ರೀಕೃಷ್ಣವಿಠಲ” ಯುಕುತಿ ಗೊಲಿಯ ಲಕುಮಿನಾಯಕ
--------------
ಕೃಷ್ಣವಿಠಲದಾಸರು
ಬಾರೊ ನೀ ಭಕುತರ ಸುರಧೇನು ಪ ಕರಗಳ ಮುಗಿವೆನು ಅ.ಪ. ಮೂರು ಲೋಕದ ದೊರೆ ನೀನಾಗಿರೆ ನೀರಿನೊಳೀಪರಿಯಾಟವು ತರವೆ ಕೂರುಮ ರೂಪದಾಕಿಟಿ ನರಮೃಗದಾ ಕಾರನೆನುತ ಪರಿಹಾಸವ ಮಾಳ್ಪರು 1 ಪೋರ ನಗುತ ಬಲಿಯನು ವಂಚಿಸಿ ಮೀರಿದ ಕೋಪದಿ ಮಾತೆಯನಿರಿದು ನಾರಿಯ ನೀಗುತ ಮಾವನ ಕೊಂದು ಜಾರಿದ ವಸನದ ರಾಹುತನೆಂಬರು2 ವಾರಿಧಿಯೊಳು ನಿನಗಾಟವು ಸಲ್ಲದು ಕೋರಿದ ಕೊಡುವೆನು ಬಾರೆನ ದೊರೆಯೆ ವಾರಿಜಾಭನೆ ಕರೆ ಕರೆ ಮಾಡದೆ ಶ್ರೀರಂಗೇಶವಿಠಲನೆ ಬೇಗದಿ 3
--------------
ರಂಗೇಶವಿಠಲದಾಸರು
ಬಾರೊ ಮುಂದಿರೊ ಪರನಾರಿಸಹೋದರಮಾರ ನಿನಗಾರ ಮುದ್ದತಾರ ವೀರಹನುಮ ಪ. ಮರಗಳ ಮುರಿದೆ ಕರೆಕರೆದು ನೆರೆದಸುರರಶಿರಂಗಳ ತರಿದೆ ನಿನ್ನ ಸರಿಯಾರೋ ವೀರ ಹನುಮ 1 ಕಂಡೆ ನಿನ್ನ ಬಲವ ಸುಪ್ರಚಂಡ ರಿಪುಕುಲವತುಂಡು ತುಂಡಿಕ್ಕಿ ಮೆರೆದೆ ಬಲುಗಂಡೆ ವೀರ ಹನುಮ 2 ಎನ್ನೊಡೆಯ ಶ್ರೀಹಯವದನಗೆ ರನ್ನದ ಕನ್ನಡಿಯಂತೆ ಪ್ರಸನ್ನ ಮೋಹದ ......ಬಾಳು ಬಾಳು ವೀರ ಹನುಮ 3
--------------
ವಾದಿರಾಜ
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು
ಬಾರೊ ಸುದಾಮ ಬಾರೆನ್ನ ಮಿತ್ರ ದಾರಿ ನಮ್ಮಲ್ಲಿಗೆ ತೋರಲಿಲ್ಲೇನೊ ಪ ನಿನ್ನಯ ಪತ್ತೆಯು ಸಿಕ್ಕಲಿಲ್ಲೆನಗೆ ಎನ್ನಯ ಪತ್ತೆಯು ನಿನಗತಿ ಸುಲಭ ಎನ್ನತ್ತಿಗೆ ಕ್ಷೇಮದಿಂದಿರುವಳೆ ಪೇಳೊ ನಿನ್ನತ್ತಿಗೆ ಕ್ಷೇಮದಿರುವಳು ಕೇಳು 1 ಸತಿಸುತರನು ಕಾಣದುಂಟೇನೊ ಚಿಂತೆ ಸತಿಸುತರನ್ನಿಲ್ಲಿ ಕರೆಸುವೆ ಕಾಣೊ ನೀ ತಂದ ಒಡವೆಗಳೇನೇನು ತೋರೊ ಪೃಥುಕದ ಗಂಟನೆ ಬಿಚ್ಚೊ ನೀ ಬೇಗ 2 ಪೃಥುಕೈಕÀ ಮುಷ್ಟಿಯ ತಿಂದಾಗುತಿರಲು ಕ್ಷಿತಿಪತಿ ಕರವನೆ ಪಿಡಿದಳು ಭೈಷ್ಮೀ ಪೃಥುಕದ ಮುಷ್ಟಿಗೆ ಮೋಕ್ಷವ ಕೊಡುವಿ ಮತ್ತಿನ್ನು ತಂದರೆ ಕೊಡುವುದೇನರಸ 3 ತಟ್ಟಿ ಮುದ್ದಾಡಿ ಸುದಾಮನ ಬಿಡನು ಪುಟ್ಟಾದ ಮಕ್ಕಳ ಬಿಟ್ಟು ಬಂದಿರುವಿ ಕಷ್ಟವು ನಿನಗೇನೊ ಮಿತ್ರ ನಾನಿರಲು 4 ರಾಜೇಶ ಹಯಮುಖ ಚರಣಾಬ್ಜಗಳನು ಭಜಿಸುತ್ತ ನೀ ಪೋಗು ಮರೆಯದೆ ಮಿತ್ರನ ಮೂಜಗದೊಳಗಿಂಥ ಮಿತ್ರನೆಲ್ಲಿಹನು 5
--------------
ವಿಶ್ವೇಂದ್ರತೀರ್ಥ
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ ಮನೆಗೆ ಪ ಬಾರೋ ನಮ್ಮ ಮನೆಗೆ ವಾರೀಜನಾಭನೆಬಾರಿ ಬಾರಿಗು ನಿನ್ನ ಸಾರಿ ಕರೆವೆ ಕೃಷ್ಣ ಅ.ಪ. ಗೋಪಿ ಮಾನುನಿಯರು ಸ್ವಾಮಿ 1 ಕುಂದ ಚಂಪಕ ಜಾಜಿವೃಂದ ಶೋಭಿಪ ಮುಖ ಗಂಧವರ್ಚಿಪ ಕೃಷ್ಣ2 ಇಂದುವದನ ನಿನ್ನ ಚಂದವ ನೋಡಲುದಿವಿಜೇಂದ್ರರು ಬಂದಿಹರು ಇಂದಿರೇಶನೆ ಕೃಷ್ಣ 3
--------------
ಇಂದಿರೇಶರು
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಕೃಷ್ಣ ತುರುವು ಕಾಯಲು ಕಳುಹಿದಳು ತನ್ನಬಾಲನ ಗೋಪಿಯು ಮುದ್ದಿಸುತಿಹಳು ಪ ಕರೆದು ಪಾಲನು ಕುಡಿಸುತಿಹಳು ನಿಂಬುಪರಿಮಳುಪ್ಪಿನಕಾಯ ಬುತ್ತಿ ಕಟ್ಟಿದಳುಸುರಭಿಯ ಮೊಸರು ಬೆಣ್ಣೆಯನು ದೋಸೆಸುರುಳಿ ಹೋಳಿಗೆ ಮಂಡಿಗೆಯ ಕಟ್ಟಿದಳುಸಂಡಿಗೆಯ ಕಟ್ಟಿದಳು 1 ಕರುಗಳೆಲ್ಲ ಕೂಡಿಸಿದಳು ನಿನ್ನಪರಿವಾರದವರು ಬಂದಾರೆ ನೋಡುನೀನು ಬಲರಾಮನು ಜೋಡು ಇಲ್ಲೇಯಮುನಾ ತೀರದಲ್ಲಿ ಆಡೋಹತ್ತಿರದಲ್ಲಿ ಆಡೋ 2 ಕೂಸಿಗೆ ಕುಂಚಿ ಹೊಚ್ಚಿದಳು ಬಿದ್ದಕೇಶಗಳೆಲ್ಲವು ತೀಡುತ್ತಲಿಹಳುಭೂಷಣಂಗಳ ಇಡುತಿಹಳುಇಂದಿರೇಶನ ಕೈಯ್ಯಲ್ಲಿ ಕೋಲು ಕೊಟ್ಟಿಹಳು(ಮುರಲಿ) ಕೊಳಲ ಕೊಟ್ಟಿಹಳು 3
--------------
ಇಂದಿರೇಶರು
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಾಲಗೋಪಾಲ ಬಲುಜಾಣನೆ ಗೋಪಮ್ಮ ನೀಲ ಮೇಘಶ್ಯಾಮನೆ ಬಹುಶೂರನೇ ಜಾರನೇಚೋರನೇ ಪ ನಾರಿಯರೆಲ್ಲರು ನೀರ ತರುತಲಿರೆ ನೀರ ಕೊಡವನೆಲ್ಲ ಒಡೆದ ಗೋಪಮ್ಮ 1 ಸಣ್ಣ ಸಣ್ಣ ಹುಡುಗರ ಬಣ್ಣಿಸಿ ಕರೆತಂದು ಕಣ್ಣ ಬಿಡಿರೆನುತಲೆ ಸುಣ್ಣ ತೊಡೆದು ಪೋದ 2 ಅಂಗನೆಯರು ಪುಣ್ಯಗಂಗೆ ಮೀಯುತಲಿರೆ ರಂಗನಾಗ ದಿವ್ಯಾಂಗ ವಸ್ತುವ ನೊಯ್ದ ಗೋಪಮ್ಮ 3 ದಡದ ಮರವನೇರಿ ಉಡುವ ಸೀರೆಯನೆಲ್ಲ ಕೊಡದೆ ಕಾಡಿದ ಕೃಷ್ಣ ಮಾನ ಭಂಗವ ಮಾಡಿ 4 ತಾಳಲಾರೆವು ನಿಮ್ಮ ಮಗನ ಲೂಟಿಯ ನಾವು ಹೇಳೆ ಭೀಮನ ಕೋಣೆ ಲಕ್ಷ್ಮೀಲೋಲನಿಗೊಮ್ಮೆ ಗೋಪಮ್ಮ 5
--------------
ಕವಿ ಪರಮದೇವದಾಸರು
ಬಾಲಗೋಪಾಲ ಹಸೆಗೆ ಲೀಲೆಯಿಂದ ಬರ್ಪುದೈ ಪ ನೀಲಮೇಘನಿಭ ಸುರೂಪ ಕಾಲಕಾಲವಂದ್ಯ ಬೇಗ ಅ.ಪ ಸಾರಸಾಕ್ಷ ಸರ್ವರಕ್ಷ ಘೋರದೈತ್ಯಸಂಹಾರ ನಾರದಾದಿವಂದ್ಯ ನಮಿಸಿ ನೀರೆಯರು ಕರೆಯುವರು 1 ಸಾಮಜ ಧ್ರುವ ಭಕ್ತ ವರದ ಸಾಮಗಾನ ಲೋಲನೇ ಕಾಮಜನಕ ಕರುಣಪೂರ ಸ್ವಾಮಿಪ್ರೇಮ ತೋರುತ 2 ಅಜಸುಪೂಜ್ಯ ತ್ರಿಜನರಾಜ್ಯ ಭಜಕಜನ ಮನೋಹರ ರಜತಹೇಮಪೀಠಕೀಗ [ಬೇಗ] ಜಾಜಿ ಕೇಶವನೇ 3
--------------
ಶಾಮಶರ್ಮರು