ಒಟ್ಟು 3015 ಕಡೆಗಳಲ್ಲಿ , 118 ದಾಸರು , 2173 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನನ್ನ ಕರ್ಮವು ಬಂದು ಇನ್ನು ಬಾಧಿಸುತಿರೆ ಅನ್ಯರೇನ ಮಾಡುವರೈ ಪ ಕನ್ನೆ ಶಿರೋಮಣಿ ದ್ರೌಪತಿ ವರದನೆ ಎನ್ನ ಪಾಲಿಸೊವೋ ಪ್ರಸನ್ನ ರಂಗನಾಥ ಅ.ಪ ಭಿಕ್ಷಕ್ಕೆ ಬಂದಾಗ ಲಕ್ಷ್ಯವಿಡದೆ ಹೋಗಿ ಸಾಕ್ಷಿಯ ನಾಕಂಡೆನೈ ಪಕ್ಷಿ ವಾಹನನೆ ನೀರಕ್ಷಿಸಬೇಕಯ್ಯ ಸಾಕ್ಷಾತನೆಂತೆಂಬೊ ಮೋಕ್ಷಾಧಿಕಾರಿಯೆ 1 ದೋಷಕ್ಕೆ ಗುರಿಯಾದೆನೈ ಆಶೆಯ ಬಿಡಿಸಯ್ಯಾ ಶ್ರೀ ವೆಂಕಟರಮಣ ದೋಷರಹಿತ ಗುರುವು ದಾಸ ತುಲಸೀರಾಮ 2
--------------
ಚನ್ನಪಟ್ಟಣದ ಅಹೋಬಲದಾಸರು
ನನ್ನವ್ವ ಕಲ್ಲ ಬಿಡೆ ಈ ಧೋತ್ರವಚೆನ್ನಾಗಿ ಒಗೆಯಬೇಕು ಪ ಕರ್ಮ ಹೋಗುವ ಹಾಗೆಚೆನ್ನಕೇಶವನ ಪ್ರಸಾದಕ್ಕೊದಗಬೇಕು ಅ ಉಟ್ಟ ಧೋತ್ರವು ಮಾಸಿತು - ಮನದೊಳಗಿರುವದುಷ್ಟರೈವರುಗಳಿಂದ ಕಷ್ಟ ದುರಿತಗಳುಬಿಟ್ಟು ಹೋಗುವ ಹಾಗೆ ಮುಟ್ಟಿ ಜಲದೊಳುಗಟ್ಯಾಗಿ ಒಗೆಯಬೇಕು 1 ವೇದವನೋದಬೇಕು ಮನದೊಳಗಿದ್ದಭೇದವ ಕಳೆಯಬೇಕುಸಾದರಣೆಯಿಂದ ತಿಳಿದು ನಿಶ್ಚಯವಾಗಿಕ್ರೋಧಕರ್ಮಗಳೆಲ್ಲ ಬಿಟ್ಟು ಹೋಗುವ ಹಾಗೆ 2 ವೇಲಾಪುರದ ಚೆನ್ನಕೇಶವನ ಸೇವೆಗೆಆಲಸ್ಯವನು ಮಾಡದೆಕೋಲ ಹಿಡಿದು ದ್ವಾರಪಾಲಕನಾಗುವೆನೀಲ ಕುಂತಳೆ ಕಲ್ಲ ಬಿಟ್ಟು ಆ ಕಡೆ ಸಾರೆ 3
--------------
ಕನಕದಾಸ
ನನ್ನಿಂದ ನಾನೇ ಜನಿಸಿ ಬಂದೆನೆ ದೇವಎನ್ನ ಸ್ವತಂತ್ರವು ಲೇಶವಿದ್ದರು ತೋರು ಪ ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮಅ ಜನನಿಯ ಜಠರದಲಿ ನವಮಾಸ ಪರಿಯಂತಘನದಿ ನೀ ಪೋಷಿಸುತಿರೆ, ನಾನುಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದವನಜಾಕ್ಷ ನೂಕಿದವನು ನೀನಲ್ಲವೆ 1 ಎಲವುಗಳ ಜಂತೆ ಮಾಡಿ ನರಗಳ ಹುರಿಯಿಂಹೊಲಿದು ಚರ್ಮವ ಹೊದಿಸಿ ದೇಹದೊಳುಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿನೆಲಸಿ ಚೇತನವನಿತ್ತವ ನೀನಲ್ಲವೆ 2 ಜನಿಸಿದಾರಭ್ಯದಿಂದ ಇಂದಿನ ಪರಿಯಂತಘನಘನ ಪಾಪ ಸುಕರ್ಮಂಗಳನುಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲಅನುಭವಿಸುವುದು ಜೀವನೊ ನೀನೊ ದೇವ 3 ಅಂಧಕನ ಕೈಲಿ ಕೋಲಿತ್ತು ಕರೆದೊಯ್ಯುವಾಮುಂದಾಳು ತಪ್ಪಿ ಗುಂಡಿಗೆ ಕೆಡಹಲುಅಂಧಕನ ತಪ್ಪೊ ಅದು ಮುಂದಾಳಿನ ತಪ್ಪೊಹಿಂದಾಡಬೇಡ ಎನ್ನೊಳು ತಪ್ಪಿಲ್ಲವೊ 4 ಕಂದನ ತಾಯಿ ಆಡಿಸುವಾಗ ಅದು ಪೋಗಿಅಂದಿ ಬಾವಿಯ ನೋಡುವುದನು ಕಂಡುಬಂದು ಬೇಗನೆ ಬಾಚಿ ಎತ್ತಿಕೊಳ್ಳದಿದ್ದರದುಕಂದನ ತಪ್ಪೊ ಮಾತೆಯ ತಪ್ಪೊ ಪರಮಾತ್ಮ 5 ಭಾರ ನಿನ್ನದೊ ದೂರು ನಿನ್ನದೊ ಕೃಷ್ಣನಾರಿ ಮಕ್ಕಳು ತನುಮನ ನಿನ್ನದಯ್ಯಕ್ಷೀರದೊಳಗದ್ದು ನೀರೊಳಗದ್ದು ಗೋವಿಂದಹೇರನೊಪ್ಪಿಸಿದ ಮೇಲೆ ಸುಂಕವೆ ದೇವ 6 ನ್ಯಾಯವಾದರೆ ದುಡುಕು ನಿನ್ನದೊ, ರಂಗ, ಮತ್ತ-ನ್ಯಾಯವಾದರೆ ಪೇಳುವರಾರುಮಾಯಾರಹಿತ ಕಾಗಿನೆಲೆಯಾದಿಕೇಶವಕಾಯಯ್ಯ ತಪ್ಪನೆಣಿಸದೆ ದೇವ 7
--------------
ಕನಕದಾಸ
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಿ ಕೆಟ್ಟವರಿಲ್ಲವೊ ಸದ್ಗುರುವಿನ ನಂಬಿ ಕೆಟ್ಟವರಿಲ್ಲವೊ ನಂಬದೆ ಗುರುವಿನ ಜ್ಞಾನದ ಬೋಧವ ಹುಂಬತನವ ಮಾಡಿ ಕೆಟ್ಟರೆ ಕೆಡಲಯ್ಯ ಪ ಕೇಳಬೇಡೆಲೊ ದುಃಖವಾ ಏಳು ಎಚ್ಚರಗೊಳ್ಳು ಕೀಳುತನವ ಬಿಡು ಹೇಳಿಕೊಡುವೆನೆಂಬ ಗುರುವಿನ ನುಡಿಯನು 1 ದೇಹಬುದ್ಧಿಯ ಬಿಡಿಸಿ ವಿವೇಕದಿ ದೇವಬುದ್ದಿಯನಿರಿಸಿ ಸೋಹವೆಂಬುವ ಮಹಾಮಂತ್ರವ ಬೋಧಿಸಿ ಮೋಹವನೋಡಿಸಿ ಕಾಯುವ ಗುರುವಿನ 2 ಸಂಚಿತ ಮೊದಲಾದ ಕರ್ಮವ ನೀಗಿಸಿ ಹಂಚಿಕೆಯಿಂದಲಿ ಮುಕ್ತನ ಮಾಡುವ ಪಂಚಕಸಾಕ್ಷಿ ಶ್ರೀಗುರುವಿನ ಬೋಧವ 3 ಸ್ವಾನುಭವನೀಡುವಾ ಏನೊಂದು ಬಯಸದೆ ಜ್ಞಾನದಾನವ ಮಾಳ್ಪ ಜ್ಞಾನಿ ಶಂಕರಗುರುರಾಯನ ನುಡಿಯನು 4
--------------
ಶಂಕರಭಟ್ಟ ಅಗ್ನಿಹೋತ್ರಿ
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನಂಬಿ ಭಜಿಸಿರೋ _ ಜನರೆಲ್ಲರೂ _ ನಂಬಿ ಭಜಿಸಿರೊ ಪ ಅಂಬುಜಾಕ್ಷ ಪ್ರಿಯಾ _ ನಮ್ಮ ಜಯರಾಯರಾ ಅ.ಪ ಕ್ಲೇಶ ಯಾತಕೇ ಕಾಸು ಕಳಕೊಂಡು _ ಅತಿಘಾಸಿ ಯಾತಕೇ ಶ್ರೀಶನಂಘ್ರಿ ಭಜಕರಾದ _ ವಾಸವಾವೇಶರಿವರ ಪಾದ ಆಶೆಯಿಂದ ಭಜಿಸಲೂ _ ವಾಸುದೇವನೊಲಿವನು 1 ನೇಮ ಯಾತಕೇ _ ನಿಷ್ಠೆ ಯಾತಕೇ ಹೋಮ ಯಾತಕೇ _ ಕಷ್ಟಯಾತಕೇ ಪ್ರೇಮದಿಂದಲೀ _ ಇವರ ಭಜಿಸಲೂ ತಾಮಸಗುಣ _ ತಾನೇ ಓಡೋದು 2 ಮಧ್ವಶಾಸ್ತ್ರದ _ ಚಂದ್ರರಿವರು ಅದ್ವೈತವಾದವ _ ಗೆದ್ದಸಿಂಹರು ಮಧ್ವರಾಯರಾ _ ಮುದ್ದುಮೊಮ್ಮಗ ಸಿದ್ಧಸೇವ್ಯರು _ ಸುಧೆಯ ಕರ್ತರು 3 ಇವರ ಧ್ಯಾನವೂ _ ಜ್ಞಾನದಾಯಕಾ ಇವರ ಪೂಜೆಯೂ _ ಪಾಪನಾಶನ ಇವರ ಸ್ಮರಣೆ _ ಕಲಿವಿ ಭಂಜನೆ ಇವರ ಸೇವೆಯು _ ಮುಕ್ತಿಸೋಪಾನ 4 ಶ್ರೀಕಳತ್ರನಾ _ ಆಜ್ಞೆಯಿಂದಲಿ ನಾಕದಿಂದಲೀ _ ಇಲ್ಲಿ ಬಂದರು ಏಕಮನದಿ _ ಶರಣು ಹೋಗಲು ಪಾಪನಾಶನ _ ಪುಣ್ಯವೆಗ್ಗಳಾ 5 ಮಳಖೇಡದೀ _ ನೆಲಸಿ ಇಪ್ಪರೂ ನಳಿನನಾಭನ _ ಒಲಿಸುತನುದಿನಾ ನಲಿಸಿ ಮನದೊಳು _ ಒಲಿಸುವಾತನೆ ಶೀಲವಂತನು _ ಧನ್ಯ ಮಾನ್ಯನು6 ನರನ ವೇಷದಿ _ ಸುರರ ಒಡೆಯನೊ ಹರಿಯ ಕರುಣದಿ _ ಮೆರೆಯುತಿರ್ಪರು ಶರಣಜನರ _ ದುರಿತರಾಶಿಯ ತರಿದು ಶೀಘ್ರದಿ _ ಪೊರೆಯುತಿಪ್ಪರು7 ಎತ್ತಿನ್ವೇಷದಿ _ ವಾತದೇವನ ಪ್ರೀತಿ ಪಡೆದು _ ಖ್ಯಾತಿಆದರು ಮತ್ತೆ ಯತಿಯಾಗಿ _ ಕೀರ್ತಿಯಿಂದಲಿ ಬಿತ್ತರಿಸಿದರು, ತತ್ತ್ವಶಾಸ್ತ್ರವ 8 ಕಾಗಿನೀನದೀ _ ತೀರವಾಸರು ವಿಗತರಾಗರು _ ನಿತ್ಯತೃಪ್ತರು ಜಾಗರೂಕದಿ _ ಪೊಗಳಿ ಪಾಡಲು ನಿಗಮವೇದ್ಯನು _ ಬೇಗ ಪೊರೆಯುವ 9 ಶೇಷಾವೇಷದಿ _ ವಾಸಿಸುವರು ಶೇಷಶಯನನ _ ದಾಸರೀವರು ಬೆಸರಿಲ್ಲದೆ _ ಆಸೆ ತೊರೆದು ದಾಸನೆನ್ನಲು _ ಪೋಷಿಸೂವರು 10 ಕೆರೆಯ ಏರಿಯು _ ಬಿರಿದು ಪೋಗಲು ಮೊರೆಯ ಇಟ್ಟರು _ ಇವರ ಅಡಿಗೆ ಭರದಿ ಕರುಣದಿ ಹರಿಯ ಸ್ತುತಿಸಿ ಕರದಿ ಮುಟ್ಟಲು _ ಏರಿ ನಿಂತಿತು 11 ಯರಗೋಳದ _ ಗುಹೆಯ ಒಳಗೆ ಮರುತದೇವನ _ ಕರುಣದಿಂದಲಿ ಪರಿಪರಿಯಲಿ _ ಬರೆದು ಟೀಕೆಯ ಕರೆದು ಸುರಿದರು _ ತತ್ತ್ವಕ್ಷೀರವ 12 ಇವರ ನಾಮವು _ ವಿಜಯ ಸೂಚಕ ಇವರ ಕೀರ್ತನೆ _ ಭವಕೆ ಔಷಧ ಇವರ ಕರುಣದಿ _ ಅನಿಲನೊಲಿವನು ಇವರ ಶಿಷ್ಯರೇ _ ಅವನಿಶ್ರೇಷ್ಠರು 13 ಸರ್ವಕ್ಷೇತ್ರದ _ ಯಾತ್ರೆಯಾ ಫಲ ಸರ್ವದಾನವ _ ಮಾಡಿದ ಫಲ ಇವರ ಪಾದವ _ ನಂಬಿ ಭಜಿಸಲು ತವಕದಿಂದಲಿ _ ತಾನೇ ಬರುವುದು 14 ಜಯತೀರ್ಥರ _ ಹೃದಯವಾಸಿಯು ವಾಯುಹೃದಯಗ _ ಕೃಷ್ಣವಿಠ್ಠಲನು ದಯದಿ ನುಡಿಸಿದಾ _ ಪರಿಯು ಪೇಳಿದೆ ಜೀಯ ಕೃಷ್ಣನೆ _ ಸಾಕ್ಷಿ ಇದಕ್ಕೆ15
--------------
ಕೃಷ್ಣವಿಠಲದಾಸರು
ನಂಬಿಗಿಲ್ಲಾ ಈ ಮನಸಿನಾ ಪ ಒಂದು ನೆನೆಯೆ ಮತ್ತೊಂದು ನೆನೆಯುತಾ | ಒಂದರೆ ಘಳಿಗೆ ಹೊಂದದೆ ಸದ್ಗುಣ | ಕೂಪ ಹೋಗುವಂದದಿ ವಿಷಯ | ಮ | ದಾಂಧದಿ ಜೀವನ ಬಂಧಿಸುದೈಯ್ಯಾ 1 ಧೀರ ಶಾಸ್ತ್ರ ವಿಚಾರ ಕರ್ಮದಿ | ಶೂರರ ತಪ ವಿಹಾರರ ಜಗದೊಳು | ಆರಾದರಾಗಲಿ ಕ್ರೂರ ಕರ್ಮದಾ | ಗಾರ ಹುಗಿಸಿ ಘನ ಹೊರುವದೈಯ್ಯಾ 2 ಪುಣ್ಯದ ದಾರಿಗೆ ಕಣ್ಣವ ದೆರಿಯದು | ಅನ್ಯಾಯದಿ ಒಡಲನೇ ಹೊರುವದು | ಸನ್ನತ ಮಹಿಪತಿ ಚಿನ್ನನ ಪ್ರಭುದಯ | ಮುನ್ನಾದರ ಇನ್ನಾನರಿಯೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೆ ಧನ್ವಂತ್ರಿ ನಿನ್ನ ಕರುಣಾಂಬುಧಿ ಚಿನ್ಮಯ ಪರಿಪಾಲಿಸೆನ್ನ ಪ. ದೇವಾಸುರರೆಲ್ಲ ಸೇರಿ ಏಕ ಭಾವದಿಂದಲಿ ತಮ್ಮ ಸಾಹಸವ ತೋರಿ ತಾವಾಗಿ ಕಡೆಯಲಂಬುಧಿಯ ಭವ ನಾವನ ಸಮಯದಿ ಬಂದಿಯನ್ನೊಡೆಯ 1 ಕುಲಿಶಧರಗೆ ಯುಕ್ತಿ ಕಲಿಸಿ ಬಲಿವಲ ಶಂಬರಾದಿ ದೈತ್ಯರ ಮೋಹಗೊಳಿಸಿ ಕಲಶಪೂರಿತ ದಿವ್ಯ ಸುಧೆಯ ದೇವ ಬಲಕಿತ್ತು ಸಲಿಸಿದ ಸಾಮ್ರಾಜ್ಯನಿಧಿಯ 2 ಪೂರ್ಣೇಂದು ಗಣಜಾಯಿ ಸುಮುಖಾ ಶ್ಯಾಮ ವರ್ಣ ಸುಬಾಲಕ ದುರ್ಜನ ವಿಮುಖಾ ಸ್ವರ್ಣಾವದಾತ ಸುವಾಸ ದಿವ್ಯ ಕರ್ಣಾಭರಣಾದಿ ಭೂಷ ಸುನಾಸಾ 3 ದೀರ್ಘಪೀವರ ದೋರ್ದಂಡ ಪಂಚ ಶುಭ ಶುಂಡಾ ಜನಿತ ಬ್ರಹ್ಮಾಂಡ ವ್ಯಾಧಿ ವರ್ಗವ ಓಡಿಸುವರೆ ಸುಪ್ರಚಂಡಾ 4 ಕಂಬುಗ್ರೀನ ಪರೇಶ ಅರು- ಣಾಂಬುಜಾಕ್ಷ ಸುಖ ಚಿದ್ಘನ ವೇಷಾ ನಂಬಿದವರ ಕಾವ ಶ್ರೀಶಯನ ನಿಂಬಾಗಿ ರಕ್ಷಿಸು ಶ್ರೀ ವೆಂಕಟೇಶಾ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ ಪ ಇಂಬಾಗಿ ದಡ ಸೇರಿಸೆನ್ನನೇನಂಬಿಗ ತುಂಬಿ ನದಿ ಸೂಸುತಲಿದೆ ನೋಡಂಬಿಗ ಅ.ಪ. ಕರ್ಮವೆಂಬ ಪ್ರವಾಹವ ನೀ ನೋಡಂಬಿಗ ಚರ್ಮದಿಂದೇಳು ಹೊದ್ದಿಕಿ ಅಂಬಿಗ ಮರ್ಮ ಒಂಭತ್ತು ರಂಧ್ರ ಉಂಟಂಬಿಗ ಶರ್ಮವಿದಕೆ ಕಾಯದ್ಹರಿಗೋಲಂಬಿಗ 1 ಆಳ ಬಹಳ ಗೊತ್ತಾಗದಂಬಿಗ ಶೆಳವು ಘನ ಉಳ್ಳುಹುದು ನೋಡಂಬಿಗ ಸುಳಿಗಾಳಿಗೆ ಸಿಗಿಸದಿರೊ ಅಂಬಿಗ ಬಳಸಿ ಕೊಂಡೊಯ್ಯೋದು ಒಳ್ಳೇದೆ ಅಂಬಿಗ 2 ಸಂಚಿತಾಪ್ತಿ ಇವರೊಳುಂಟಂಬಿಗ ಭಾರ ಜಡಿಯೋದು ನೀ ನೋಡಂಬಿಗ ವಂಚಕ ಮಾತು ರಾಗವು ಹೆಚ್ಚಂಬಿಗ ಚಂಚಲಗೊಂಡು ಭ್ರಮಿಸೋದು ಕಾಣಂಬಿಗ 3 ಆಶಾಜಲ ಮೇಲೆ ಮೇಲೆ ಬರುವುದಂಬಿಗ ಮೋಸ ಮಾಡುವುದೇನೊ ಕೊನೆಗೆ ಅಂಬಿಗ ಪೊಸ ಪೊಸ ಕಾಮತೆರೆ ತುಂಬಾಯಿತಂಬಿಗ ಲೇಶವಾದರು ಬತ್ತದು ನೋಡಂಬಿಗ4 ಅಷ್ಟ ಆನೇ ಒಳಗಿಟ್ಟುಕೊಂಡಿಹುದಂಬಿಗ ಹುಟ್ಟು ಹಾಕೋದು ಬಿಟ್ಟು ಜಲ್ಲೆ ಕೊಳ್ಳಂಬಿಗ ಬೆಟ್ಟ ಆರಕ್ಕೆ ಸಿಕ್ಕಿಸದೆ ನೋಡಂಬಿಗ ನೆಟ್ಟ ನಡುವಿನ ಪಥದಿ ಒಯ್ಯೋ ಅಂಬಿಗ 5 ಸುತ್ತ ಕಾರ್ಮುಗಿಲು ಬಂತಲ್ಲೊ ಅಂಬಿಗ ಹತ್ತು ಹನಿಗಳು ಬಿತ್ತು ನೋಡಂಬಿಗ ಎತ್ತಿ ನಡೆಸೋದು ಶಕ್ತಿ ನಿನ್ನದು ಕಾಣಂಬಿಗ ಹತ್ತಿಸೊ ಭಕ್ತಿದಡಕಿನ್ನಂಬಿಗ 6 ಮರಕಟಿ ಸೇರಿಹದಿದರೊಳಗಂಬಿಗ ಕರೆಕರೆಗೆ ಗುರಿ ಮಾಡೊದಿದೆ ಅಂಬಿಗ ಸರಿಯಾಗಿ ನಡೆಸೊ ಇನ್ನಾದರಂಬಿಗ ವರದವಿಜಯ ರಾಮಚಂದ್ರವಿಠಲ ನೀನಂಬಿಗ 7
--------------
ವಿಜಯ ರಾಮಚಂದ್ರವಿಠಲ
ನಂಬಿದೇ ನರಹರಿಯೆ ನಾ ಪ ನಂಬಿದೆನೊ ಬ್ರಹ್ಮಾದಿ ವಂದಿತ ಪೂರ್ಣ ಸುಗುಣ ಕಂದಂಬ ನಿರುಪಮ ನಿತ್ಯಮುಕ್ತಾಮುಕ್ತ ಜೀವದ ವಿಶ್ವ ಭಾಸಕ ಮುಕ್ತಿದನೇಕನೆಂಬುದಾ ಅ.ಪ ನೊಂದು ನೊಂದೆನೊ ಭವದಿ ಹಿಂದುಮುಂದನು ಕಾಣೆ ಬಂಧ ನೀಡುವ ನೀನೆ ಬಂಧಾ ಬಿಡಿಸಲುಬೇಕೊ ಸ್ವಾಮಿ ಸಂಶಯವೆಂದು ಪೊಗಳುವೆ ಪೂರ್ಣ ಪೂರ್ಣಾನಂದ ಸಜ್ಜನನಂದ ಕಾಮದ ಸಾಮ ಪೂರ್ಣಚಂದ್ರ ಸುತೇಜಭವಹರ 1 ಕರ್ಮ ಅಡ್ಡಿಯಾಗಿದೆ ಸುಖಕೆ ವಡ್ಡುವೆ ಸರ್ವಸ್ವನಿನಗೆ ದೊಡ್ಡವನು ನೀವಲಿಯೆ ಎನ್ನಯ ದಡ್ಡತನ ನಿನ್ನೇನುಮಾಳ್ಪದು ಸಡ್ಡೆಮಾಡದೆ ದೋಷರಾಶಿಯ ಮಮತೆ ತೊಲಗಿಸಿ ಗುಡ್ಡಹೊತ್ತ ಮಹಾಂತರೊಡೆಯನೇ 2 ಸಿರಿ “ಕೃಷ್ಣವಿಠಲ”ನೆ ನಿನ್ನಾಕರುಣವೆ ತಾರಕ ಇನ್ನುಮುನ್ನು ನಿನ್ನ ನಂಬಿಹೆ ಜ್ಞಾನಮಾನವ ನೀಡ್ವದಾತನೆ ಸಣ್ಣವನ ಪಿಡಿದಿನ್ನು ನೀ ಪ್ರಸನ್ನನಾಗೆಲೊ ದೇವದೇವನೆ ನಿನ್ನದಾಸರ ಭಾಗ್ಯವೊಂದೇ ಸಾಕು ಸಾಕೈಯೆಂದು ಬೇಡುವೆ ಅನ್ಯರೊಳ್‍ರತಿ ಇಲ್ಲದಿರಲೈ ಮಾನ್ಯ ಮಧ್ವರ ಮತದಿ ನಿಲಿಸು 3
--------------
ಕೃಷ್ಣವಿಠಲದಾಸರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಂಬು ನಂಬು ನಂಬು ಮನವೆ ಅಂಬುಜಾಕ್ಷನ ಪ್ರಭುವ ಪಾದ ಇಂಬು ನಿನಗೆ ದೊರಕುವುದು ತುಂಬಿ ಮಂಗಳ ಪ ದುಷ್ಟ ಅನ್ನ ದುಷ್ಟ ಸಂಗ ಭ್ರಷ್ಟ ಭಾವದಿಂದ ಮನವು ಕೆಟ್ಟು ಬೆದರಿ ಸವಿಯುಗೊಳ್ಳದು ಶಿಷ್ಟರನುಭವ 1 ಸತ್ಯಹರಿಯು ಜಗದ್ಗುರುವು ಸತ್ಯ ಮಧ್ವಶಾಸ್ತ್ರ ಫಲವು ಸತ್ಯ ಮಹಿಮ ಗುರುಕರುಣ ಸತ್ಯ ನಿತ್ಯದಿ 2 ಭಾರತ ಭಾಗವತವ ಕೇಳು ಭರತನಣ್ಣನ ಚರಿತೆ ಕೇಳು ಖರೆಯು ಹರಿಯ ಭಕ್ತರೀಗೆ ನಿರುತ ಮಂಗಳ 3 ನಿರುತ ವಿದಯ ಲೋಭಿಗಳ ದುರುಳ ದುರ್ಬಲ ಭಾವ ತಿಳಿದು ಹರಿಯ ಮೆರೆಯೆ ಸಕಲ ಭಯವು ಮರುಳು ಮಾಳ್ಪವು 4 ಕರಿಯ ಧ್ರುವನ ಅಸುರ ಬಾಲನ ನರನ ಸತಿಯು ಭೀಷ್ಮ ಕುಚೇಲ ವರದ ದೇವನ ದಾಸರ ಭಜಿಸು ನಿರುತ ದೃಢದಲಿ 5 ಹಿಂದೆ ಎಷ್ಟೊ ಕಾಲದಿಂದ ಕುಂದು ನೋಡದೆ ನಿನ್ನ ಬಿಡದೆ ಮುಂದು ತಂದ ಬಗೆಯ ತಿಳಿಯೊ ಸಂದೇಹ ಪೋಪದು 6 ಕಾಲಿಗೆ ಬಿದ್ದ ದೀನರನ್ನು ಕರ್ಮ ಮೀರಿ ಪೊರೆವ ಬಾಳ ಕರುಣಿ ಮಹಾ ವಿಜಯ ರಾಮಚಂದ್ರನು7 ಹಿಂದೆ ಪೇಳ್ದ ವಾಕ್ಯವೆಲ್ಲಿ ಇಂದು ಬಿಡದೆ ಫಲಿಸುವೋವು ಮಂದನಾಗದೆ ಪ್ರಭುವ ಪಾದ ದ್ವಂದ್ವ ಬಿಡದಿರು 8 ನಿತ್ಯ ಹನುಮ ಭೀಮ-ಮಧ್ವ ಭೃತ್ಯರ ಶಿರೋರತನುನಿವನು ಸತ್ಯ ಮಹಿಮ ಜಯೇಶವಿಠ- ಲಾಪ್ತ ಸತ್ಯವು 9
--------------
ಜಯೇಶವಿಠಲ
ನಂಬು ನಂಬು ಶ್ರೀನರಹರಿ ಪಾದವÀ ನರನೇ ಪಾಮರನೆ ಪಾತಕ ಕೃಷ್ಣಾ ಮೂರ್ತಿಯನ್ನೇ ಪ ಸಾಧು ಸಜ್ಜನ ಸಂತರ ಸಲಹುವ ಸಕಲ ಲೋಕ ಕರ್ತನಾ ಮೇದಿನಿ ಭಕ್ತರ ಮನದಲಿ ಚರಿಸುವ ಮಂಗಳ ಮಹಿಮನ ಆದಿಮೂರುತಿ ಆನೇಕ ಚರಿತಾ ಅನಂತ ಅವತಾರನಾ ಅನುದಿನ ಮರೆಯದೆ ನೀ ಯಿನ್ನಾ 1 ಶ್ರೀನಿವಾಸ ಆಶ್ರಿತ ಜನಪೋಷಕ ಶಾಶ್ವತನಾಗಿಹನಾ ಗಾನಲೋಲ ಶ್ರೀವೇಣುನಾದನ ಕರಿರಾಜ ವರದನ ದಾನವಾಂತಕನ ದಶರಥತನಯನ ದೇವಾದಿದೇವನ್ನ ಮಾನವ ಮದನ ಜನಕನಾದನಾ 2 ಭೂಸುರ ನಾಯಕನ ಮಾಧವ ಗೋವಿಂದನ ಮುಕ್ಕುಂದನಾದ ಅವನಾ 'ಹೆನ್ನೆವಿಠ್ಠಲನಾ’ 3
--------------
ಹೆನ್ನೆರಂಗದಾಸರು
ನಮಸ್ತೆ ವಿಮಲೆ ಕೋಮಲೆ ರಮಾದೇವಿನಮಸ್ತೆ ನಮಸ್ತೆ ಪ. ತರುಣಿ ಶಿರೋಮಣಿ ನಿನ್ನ ಶೀಲ ಸೌಂದರ್ಯವನುಧರೆಯೊಳು ವರ್ಣಿಸುವ ಕವಿಯು ದಾವಸ್ವರಮಣನೆನಿಪ ರಮಣನುರದೊಳೆಂದೆಂದು ನೀ-ನರಮನೆಯ ಮಾಡಿ ಭಾಪುರೆ ಮೆರೆದೆಲೆಲೆ1 ತನ್ನ ಮೈಯಿಂದ ಮಕ್ಕಳ ಸೃಜಿಸಿ ಯುಗಯುಗದಿನಿನ್ನ ತಾರುಣ್ಯ ಲಾವಣ್ಯಗಳನುಮನ್ನಿಸಿ ಪೊರೆವ ಹರಿಯ ಪಟ್ಟದ ರಮಣಿ ಜಗ-ನ್ಮಾನ್ಯೆ ಚೈತನ್ಯೆ ಲಾವಣ್ಯೆ ಗುಣಗಣಸದನೆ2 ಕರ ವಕ್ತ್ರನೇತ್ರಗಳು ಪೂರ್ಣ ಹಯವದನ ಕೈಕೊಂಡ ನಿನ್ನ ಗಂಡಸ್ವರ್ಣಸಮವರ್ಣೆ ಕರ್ಣಾಯತಾಕ್ಷಿ 3
--------------
ವಾದಿರಾಜ