ಒಟ್ಟು 2522 ಕಡೆಗಳಲ್ಲಿ , 120 ದಾಸರು , 1811 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನನೆ ನೀ ಕಾಣಣ್ಣನಿನ್ನ ಕಾಣುವುದರಿಯಣ್ಣನಿನ್ನಯ ದೇಹದೊಳಣ್ಣನಿನಗೆ ಹೇಳುವೆನಣ್ಣ ಪ ಕಣ್ಣನೆ ಮುಚ್ಚಣ್ಣ ಕಪ್ಪನು ಲಕ್ಷಿಸೋ ಅಣ್ಣಹೊನ್ನು ಕಳೆಗಳಣ್ಣ ಹುಟ್ಟುವುದು ಮುಂದಣ 1 ಕಪ್ಪದು ಅಡಗಲಿ ಅಣ್ಣ ಕಪ್ಪಿನ ಸ್ಥಳ ಹಿಡಿಯಣ್ಣಕುಪ್ಪಳಿಸುವುದು ಬೆಳಗಣ್ಣ ಕಾಡು ಕಿಚ್ಚಿನಂತಣ್ಣ 2 ದೃಷ್ಟಿಯಲಿ ದ್ರಷ್ಟಿವಣ್ಣ ದೃಷ್ಟಿಯ ನೆಲೆಯಾಗಲಣ್ಣಶಿಷ್ಟ ಚಿದಾನಂದನಣ್ಣ ಸಾಕ್ಷಾತ್ ನೀನಹೆಯಣ್ಣ3
--------------
ಚಿದಾನಂದ ಅವಧೂತರು
ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು
ನಿನ್ನವಳೆನಿಸೊ ಎನ್ನ ಘನ್ನ ಗೋಪಾಲ ನಿನ್ನವಳೆನಿಸೊ ಎನ್ನ ಪ. ಅನ್ಯರೊಬ್ಬರ ಕಾಣೆ ಮನ್ನಿಸುವರ ಜಗದಿ ನಿನ್ನ ಹೊರತು ಇಲ್ಲ ಪನ್ನಗಾದ್ರಿವಾಸ ಅ.ಪ. ಜನನ ಮರಣ ಕಷ್ಟ ಘನಭವ ಜಲಧಿಯೊಳ್ ಮುಣಗಿ ಮುಣಗಿ ದಡವನು ಕಾಣದಿರುವೆನೊ 1 ದುಷ್ಟ ವಿಷಯಗಳ ಅಟ್ಟಿ ದೂರದಿ ನಿನ್ನ ಶ್ರೇಷ್ಠ ನಾಮಾಮೃತ ಕೊಟ್ಟು ಪುಷ್ಟಿಯನಿತ್ತು 2 ಭಕ್ತಿ ಜ್ಞಾನವು ನಿನ್ನ ಭಕ್ತ ಸಂಗವು ವಿ- ರಕ್ತಿ ಪಥವ ತೋರಿ ಮುಕ್ತಿಯ ಪಾಲಿಸಿ 3 ನಿತ್ಯ 4 ಸಾರ ಉದ್ಘೋಷಿಸುವಂತೆ ಬುದ್ಧಿಪ್ರೇರಕನಾಗಿ ಶುದ್ಧ ಜ್ಞಾನವನಿತ್ತು 5 ನಿನ್ನ ಪದುಮ ಪಾದವನು ನಂಬಿದ ಎನ್ನ ನಿನ್ನ ದಾಸಳೆನಿಸಿ ಘನ್ನ ಮಾರ್ಗವ ತೋರಿ6 ಅಂತರಂಗದ ಧ್ಯಾನ ನಿಂತು ನೀ ನಡಿಸುತ ಅಂತರಂಗದಿ ನಿನ್ನ ಶಾಂತರೂಪವ ತೋರಿ 7 ತಂದೆ ಮುದ್ದುಮೋಹನ ಗುರುಹೃದಯ ಮಂದಿರ ನಿವಾಸ ಎಂದೆಂದಿಗಗಲದೆ 8 ಗೋಪಾಲಕೃಷ್ಣವಿಠ್ಠಲದೇವ ಸರ್ವೇಶಆಪನ್ನಿವಾರಕ ಆಪದ್ಭಾಂದವನಾಗಿ9
--------------
ಅಂಬಾಬಾಯಿ
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ನಿಮ್ಮ ನುಡಿಗಳ ಕೇಳಲೆನಗೆ ಹೊತ್ತೆಲ್ಲಿಯದುನಮ್ಮ ಗೃಹಕೃತ್ಯಗಳು ಬಹಳವಾಗಿಹವೊ ಪನಮ್ಮಯ್ಯನೊಂದು ಗ್ರಾಮವನೇಕಸ್ವಾಮ್ಯದಲಿತಮ್ಮ ದಂಪತಿಗಳುಪಭೋಗಕೆಂದುತಮ್ಮಲ್ಲಿ ತಾವೆ ಸಂವಾದಿಸಿದರವರಲ್ಲಿಹಮ್ಮು ಕಡೆಯಾದ ಹದಿಮೂವರುದಿಸಿದರೂ 1 ಕ್ಲೇಶ ಬಡಿಸುವರು 2ಸ್ತ್ರೀ ಕಾಮನೆ ರಾಗ ಪ್ರತಿಕೂಲದಿಂ ದ್ವೇಷ ಬೇಕೆಂಬದನೆಕಾದುನುಳಿಯೆ ಕ್ರೋಧಾಆಕ್ರಮಿಸಿ ಸಕಲವನು ಬಚ್ಚಿಡುವನವ ಲೋಭಸಾಕು ಗುರುಹಿರಿಯರೆಂಬವರರಿಯೆ ಮೋಹಾ 3ನಿತ್ಯವಲ್ಲದ ಸಿರಿಯ ನಂಬಿ ಬೆರೆತಿಹಮದನುಉತ್ತಮರ ಕೂಡೆ ಸೆಣೆಸುವನು ಮತ್ಸರನುಮತ್ತೆ ಈಷ್ರ್ಯನು ದುಃಖನನ್ಯರಿಗೆ ಬಗೆಯುತಿಹವ್ಯರ್ಥದಿಂ ಬಸವಳಿಯುತಿಹನಸೂಯಕನು 4ದಂಭವನೆಂಬವನಲ್ಲಿ ಪುರುಷಾರ್ಥವಿಸಿಕಿಲ್ಲಹಂಬಲಿಸುತಿಹ ದರ್ಪಕೊಬ್ಬಿ ಬರಿದೆಉಂಬರೊಬ್ಬರಿಗಿಲ್ಲ ಸಕಲವೂ ನನಗೆಂದುದೊಂಬಿಯಲಿ ನಾ ಸಿಕ್ಕಿ ಬಳಲುತಿಹೆನಾಗಿ 5ವೃತ್ತಿಯೆರಡದರಲ್ಲಿ ಫಲವೆರಡು ಜನ್ಮಕ್ಕೆಬಿತ್ತಿ ಬೆಳೆವರೆ ಚೌಳು ಜಲವ ಕಾಣೆಒತ್ತರಿಸಿ ಬರುತಿರುವ ಜ್ಞಾತಿಗಳ ಬೆಂಕಿಯಲಿಹೊತ್ತು ಹೊತ್ತಿಗೆ ಬರಿದೆ ದಹಿಸುತಿಹೆನಾಗೀ 6ಬರಿಯ ಭ್ರಾಂತಿನ ಬಲೆಯ ಬೀಸಿ ನೋಡುತ್ತಿರುವತಿರುಪತಿಯ ವೆಂಕಟನ ಚರಣಗಳನುಕರಗಳಲಿ ಬಿಗಿಯಪ್ಪಿ ಶಿರವೆರಗಿ ಗುರುಮುಖದಿಅರುಪಿದುದ ನಿಲಿಸೆಂದು ಬೇಡಿಕೊಳುತಿಹೆನು 7ಕಂ||ತನುವಿನೊಳಭಿಮಾನವಿರಲೀಘನತರ ಸಂಸಾರ ದುಃಖ ತೊಲಗದು ಸತ್ಯತನು ನಿತ್ಯತೆದೋರ್ದಕಾರಣಮನದೊಡನಿಂತೆಂದು ಜೀವನನು ವಾದಿಸಿದಂ
--------------
ತಿಮ್ಮಪ್ಪದಾಸರು
ನಿರುತದಿಂದಿಳೆಯೊಳು ಅರಸಿ ನೋಡಲು ಕಾಣೆ ಗುರು ಸತ್ಯಜ್ಞಾನರಿಗೆ ಪ ಸರಿ ಇಲ್ಲಿವರ ಚರಣಕಮಲವ ನಿತ್ಯ ದುರಿತ ಹರಿಪರ ಅ.ಪ ಸತ್ಯ ಜ್ಞಾನ ಗುರೋ ನೀ ಗತಿ ಎಂದವರ ನಿತ್ಯದಿ ಬಿಡದೆ ಕಾಯ್ವ ಅತ್ಯಾದರದಿ ಮಧ್ವಮತ ಸ್ಥಾಪಕರಾಗಿ ಮಿಥ್ಯಾ ಜ್ಞಾನಗಳಳಿದ | ಮೆರೆದ 1 ಸತ್ಯಧೀರರಿಂದ ಯತ್ಯಾಶ್ರಮ ಪಡೆದು ರತ್ಯಾದಿ ವಿಷಯವ ಬಿಟ್ಟು ಯತ್ಯಾಶ್ರಮೋಕ್ತ ಕೋಪತ್ಯಾಗಾದಿಗಳನು ವ್ಯತ್ಯಾಸಿಲ್ಲದೆ ನಡೆಸಿ | ಶೋಭಿಸಿ2 ಗುರು ಆರಾಧನಿ ದಿನ ತೀರ್ಥವ ಕೊಡುತಿರೆ ವರ ಸುವಾಸಿನಿ ಒಬ್ಬಳೂ ಕರವ ನೀಡಲು ಬಂದು ಅರಿತು ವಿಧವತ್ವ ನೆರಪೇಳ್ದರಪರೋಕ್ಷದಿ | ಭೂತಳದಿ 3 ಭರದಿಂದ ಸುರಿಯುತ್ತಿರೆ ಮೊರೆಯಿಡೆ ಎಡಬಲದವರು ಅದನು ಕೇಳೆ ದೂರಸ್ಥಳಿಹಳೆಂದ್ಹೇಳಿರು | ಪಂಕ್ತಿಯಲಿ 4 ಈ ರೀತಿಯಿಂದಲಿ ತೋರಿಸಿ ಮಹಿಮೆಯ ಇರಿಸೆ ಮಂತ್ರಿಸಿ ಫಲವ ಭರದಿ ಸುರಿವ ಮಳೆ ತ್ವರಿತದಿ ನಿಲ್ಲಲು ಅರಿತು ವಿಚಾರಿಸಲು | ನಿಜವಿರಲು5 ಪತಿ ಪೂಜೆ ಸಾವಧಾನದಿ ಮಾಡಲು ಇವರ ಮನೋಧಾರಡ್ಯ ಜವದಿ ಜಯಾಮುನಿ ಅವನಿಗರುಹಬೇಕೆಂದು | ತಾ ಬಂದು 6 ಬರುತಿರೆ ಉರಗಾಕಾರದಿಂದಲಿ ಬಂದು ಅರಿಯದ ಜನರು ಕೂಗೆ ಮಾರಮಣನ ಧ್ಯಾನ ಜರಿಯದೆ ಅವರಿಗೆ ತೋರಿದರಭಯವನು | ವಿಚಿತ್ರವನು 7 ಭೂವೈಕುಂಠದಿ ವಿಶ್ವರೂಪದರ್ಶನಕ್ಹೋಗೆ ಮಾರ್ಗವ ಕೊಡದಿರಲು ಭಾವದಿ ಧ್ಯಾನಿಸೆ ಶ್ರೀ ವಲ್ಲಭನಾಮ ಧರಿಸದೀರಾಧರಿಸೇ | ಧರಿಸಿ 8 ಈ ವಿಧ ಮಹಿಮೆಯ ತೋರಿಸಿ ಜಗದೊಳು ಗೋದಾತೀರದಿ ಶೋಭಿಪ ಅವನಿಪ ಮಹೇಂದ್ರ ಭುವನ ಶ್ರೀ ನರ ಹರಿ ನಿನ್ನ ಮಾಘಸಿತದಿ | ಸ್ಮರಿಸಿದ9
--------------
ಪ್ರದ್ಯುಮ್ನತೀರ್ಥರು
ನಿಲ್ಲು ನಿಲ್ಲು ಕೃಷ್ಣ ನಿನ್ನ ಸೊಲ್ಲ ಮುರಿಯ ಬಂದೆವು ಸೊಲ್ಲ ಮುರಿಯ ಬಂದೆವು ಈ ಕಳ್ಳತನವ ಸಹಿಸೆವು 1 ದಿಕ್ಕು ರಕ್ಷಿಪರಿಗೆ ದಿಕ್ಕು ಕಾಣದಂತೆ ಇರುವುದು ಸೊಕ್ಕು ಮುರಿದು ನಿಮ್ಮ ಕಾರ್ಯ ಧಿಕ್ಕರಿಸುವೆ ಕ್ಷಣದಲಿ 2 ಈಡುಮಾಡಲೇಕೆ ಇಂಥ ಕೇಡಿಗೆ ಈ ಅಬಲೆಯ ನೋಡಿ ಎಮ್ಮ ಅವಿತುಕೊಂಡ ಹೇಡಿ ಇವನ ಬಿಡುವೆನೆ 3 ಎಂಟು ಜನ ದಿಕ್ಪಾಲಕರು ಸೊಂಟ ಮುರಿವ ರಾಣಿಯ ಶೌರಿ ತಂಟೆಗಾರು ಬರುವರು 4 (ಸತ್ಯಭಾಮೆ ಮತ್ತು ದೇವೇಂದ್ರನ ವನಪಾಲಕರ ಸಂವಾದ)
--------------
ವಿದ್ಯಾಪ್ರಸನ್ನತೀರ್ಥರು
ನಿಲ್ಲು ನಿಲ್ಲೆಲೋ ನಿನ್ನ ಚಲ್ವಮೋರೆಯ ನೋಡಿ ಕಳ್ಳ ನಿನ್ನಯ ಬಿಡೆನೋ ಶ್ರೀ ಕೃಷ್ಣ ಪ ಬೆಣ್ಣೆ ಪಾತ್ರೆಯೊಳೇಕೆ ನಿನ್ನ ಕರವನಿಟ್ಟೆ ಸಣ್ಣತನವಿದಲ್ಲವೇ ನಂದಕುಮಾರ ಅ.ಪ ಕೋಮಲಾಂಗಿಯೇ ಇಂಥ ಸಾಮಾನ್ಯ ವಿಷಯದ ನೀ ಮರೆತುದು ತರವೇ ಯೋಚಿಸಿ ನೋಡು ಈ ಮೃದುವಸ್ತುವು ಕಲ್ಲು ಎದೆಯ ನಿನ್ನ ಧಾಮದಲ್ಲಿರಬಹುದೇ ಯೋಚಿಸಿ ನೋಡು 1 ನಾ ಕರುಣಾಮಯ ಲೋಕ ಸುಂದರನೆಂದು ಏಕೆ ಹೆಮ್ಮೆಯ ತೋರುವೆ ಗೋಕುಲನಾಥ ಆ ಶಕಟನ ಪುಡಿ ಮಾಡಿ ಪಾದಗಳಿಂದ ನೀ ಕೋಮಲನೆಂಬುದ ನಾ ಕಾಣೆನೇ 2 ಕೇಳಿ ಕೋಪಿಸಬೇಡ ಬಾಲನೆನ್ನನು ಎತ್ತಿ ಲಾಲನೆಯನು ಮಾಡಿದಿ ಪ್ರಸನ್ನಳು ಬಾಲೆ ನಿನ್ನಯ ಇಷ್ಟು ಸ್ಥೂಲ ಕುಚವು ತಗಲಿ ಕಾಲು ಕಠಿಣವಾಯಿತೇ ಪೇಳುವೆ ನಿಜ 3
--------------
ವಿದ್ಯಾಪ್ರಸನ್ನತೀರ್ಥರು
ನಿಲ್ಲು ಬಾರೊ ದಯಾನಿಧೆ ಪ ನಿಲ್ಲು ಬಾರೋ ಸರಿಯಲ್ಲ ನಿನಗೆ ಲಕ್ಷ್ಮೀ ವಲ್ಲಭ ಮನ್ಮನದಲಿ ಬಿಡದೆ ಬಂದು ಅ ಅತಿ ಮೃದುವಾದ ಹೃತ್ಯತ ಪತ್ರಸದನದಿ ಶಾ ಶ್ವತವಾಗಿ ಭವ್ಯ ಮೂರುತಿ ಭಕ್ತವತ್ಸಲ 1 ತನುಮನಧನದ ಚಿಂತೆಯ ಬಿಟ್ಟು ತ್ವತ್ಪದ ವನರುಹ ಧೇನಿಪೆ ಮನುಮಥನಯ್ಯ 2 ಆಶೆಪುಟ್ಟಿತು ನಿನ್ನಲ್ಲೀ ಸಮಯದಲಿ ಪಾ ರಾಶರವರದ ಪೂರೈಸು ಬಯಕೆಯ 3 ನಾನಾವ್ರತಂಗಳ ನಾನನುಕರಿಸಿದೆ ಶ್ರೀನಿಧಿ ನಿನ್ನಂಘ್ರಿ ಕಾಣಬೇಕೆನುತಲಿ4 ಯಾತರ್ಯೋಚನೆ ಮನಸೋತ ಬಳಿಕ ಪುರು ಹೂತವಂದಿತ ಜಗನ್ನಾಧವಿಠ್ಠಲರೇಯ 5
--------------
ಜಗನ್ನಾಥದಾಸರು
ನೀ ಕರುಣದಿಂದ ಪಾಲಿಸದಿದ್ದರೆ ಇನ್ನುನಾ ಕಾಣೆ ಮನ್ನಿಸುವರ ಪ. ಸಾಕಾರ ಮೂರುತಿ ಸರ್ವೋತ್ತಮನೆನೀ ಕಾಯೊ ಪರಾಕುಮಾಡದೆ ಎನ್ನನು ದೇವ ಅ.ಪ. ಗುರುಹಿರಿಯರನು ಕಂಡು ತರಳತನದಲಿ ನಾನುಚರಣಕೆರಗದೆ ತಿರುಗಿದೆವರ ಸಕಲ ಸಂಪದವ ಬೇಡಿ ಬಯಸುತ ನಿನ್ನಸ್ಮರಣೆಯನು ಮರೆತಿದ್ದೆನೊಸ್ಮರನ ಬಾಣಕೆ ಸಿಲುಕಿ ಪರಸತಿಗೆ ಮರುಳಾಗಿದುರ್ಗತಿಗೆ ನೆಲೆಯಾದೆನೊಸಿರಿಯರಸನೆ ನಿನ್ನ ಚರಣವನು ನಂಬಿದೆನೊಕರುಣದಿಂ ಕಡೆಹಾಯಿಸೊ 1 ಆರುಮಂದಿಗಳೆಂಬ ಕ್ರೂರವೈರಿಗಳಿಂದಗಾರಾದೆನವರ ದೆಸೆಗೆಮಾರಿಹಬ್ಬದÀ ಕುರಿಯು ತೋರಣವ ಮೆಲುವಂತೆತೋರುತಿದೆ ಎನ್ನ ಮತಿಗೆಘೋರ ಸಂಸಾರವೆಂಬೋ ವಾರಿಧಿಯ ದಾಟಿಸುವಚಾರುತರ ಬಿರುದು ನಿನಗೆಮಾರನಯ್ಯನೆ ನಿನ್ನ ಚರಣವನು ನಂಬಿದೆನುಪಾರಗಾಣಿಸೊ ಎನ್ನನು 2 ಹಲವು ಜನ್ಮಗಳಲ್ಲಿ ಬಲುನೊಂದು ಬಾಯಾರಿತೊಳತೊಳಲಿ ಬಳಲುತಿಹೆನುಸಲೆ ಉದರ ಪೋಷಣೆಗೆ ತಲೆಹುಳುಕ ನಾಯಂತೆಹಲವು ಮನೆ ತಿರುಗುತಿಹೆನೊಜಲದ ಮೇಲಿನ ಗುಳ್ಳೆಯಂತಿಪ್ಪ ಈ ದೇಹನೆಲೆಯೆಂದು ನೆಚ್ಚುತಿಹೆನೊಜಲಜನಾಭನೆ ನಿಮ್ಮ ಮಹಿಮೆಯನು ಪೊಗಳುವೆನುಚೆಲುವ ಶ್ರೀ ಹಯವದನ ರನ್ನ 3
--------------
ವಾದಿರಾಜ
ನೀ ತಂದೆ ನಾಕಂದನಯ್ಯ ರಂಗಯ್ಯ ಪ ಪಾತಕಿಯು ನಾನೆಂದೆ ಘಾತಕನು ನಾನೆಂದೆ ನೀತಿಗಳ ಕಲಿಸೆಂದೆನೈ ತಂದೆ ನಿನ್ನ ಹಿಂದೆ ಅ.ಪ ತಂದೆ ನೀ ಕರೆತಂದೆ ಎಂದು ನಂಬುತೆ ಬಂದೆ ತಂದೆ ನೀ ಕೈಬಿಟ್ಟು ಹಿಂದೆ ನಿಂದೆ ನಿಂದೆಯಲಿ ನಾನೊಂದೆ ಬಂದೆ ಭವದಲ್ಲಿ ಮಂದರೋದ್ಧಾರ ಗೋಪಾಲ ತಾಪವತಂದೆ 1 ಹಿಂದೆ ಜನ್ಮಂಗಳಲಿ ಬೆಂದು ಬಳಲಿದೆನಯ್ಯ ಇಂದು ನರಜನ್ಮದಲಿ ಬಂದೆನಯ್ಯ ಬಂಧು ಬಳಗವಕಾಣೆ ಕಂದು ಕುಂದಿದೆನಯ್ಯ ಇಂದೀವರಾಕ್ಷ ಸಾನಂದ ಭೈರವೀಪ್ರಿಯಾ2 ಮುಂದಿನಾ ಪಥವಾವುದೆಂದರಿಯೆ ಮದನಾಂಗ ಮಂದಮತಿಯನು ನೀಗಿಸೆಂದೆನುವೆ ರಂಗ ಬಂದ ಸುಖದು:ಖಗಳನೊಂದೆಣಿಸು ನೀಲಾಂಗ ಕರವ ಪಿಡಿ ಮೋಹನಾಂಗ 3 ಎಂದು ತವಪಾದಾರವಿಂದವನು ಸೇರಿಸುವೆ ಅಂದು ಜನ್ಮವು ಸಫಲವೆಂದು ನಂಬಿರುವೆ ಮುಂದೆ ಜನ್ಮಗಳಿಲ್ಲ ಎಂದು ನಾನಂಬಿರುವೆ ಸಂದೇಹವೇತಕೆ ನಿನ್ನ ಸೂತ್ರದೋಲ್ ಮೆರೆದೆ 4 ಮಂದಾಕಿನೀಜನಕ ನಂದಗೋಪನ ಕಂದ ಇಂದೀವರಾಕ್ಷ ಮುಚುಕುಂದವರದಾ ಎಂದೆಂದು ವಂದನೆಯ ಮಾಳ್ಪುದೆನಗಾನಂದ ಇಂದದನು ಕರುಣಿಸೈ ಮಾಂಗಿರಿಯ ಗೋವಿಂದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಬಲು ಒಳಗೆ ಒಳಗೆ | ಇಲ್ಲವು ಜಗದೊಳು ನಿನ್ನಂಥಾಕಿ ಎಂಥಾಕಿ ಎಂಥಾಕಿ ಪ ಕಣ್ಣಿನೊಳಗೆ ನೀ ಬರುವೆ |ಕಣ್ಣ ತೆರೆದರೆ ಕಾಣಿಸದಿರುವೆ 1 ನಿನ್ನಯ ರೂಪವು ಮುಚ್ಚಿ |ಎಲ್ಲಾ ರೂಪಕೆ ತಗಲಿತು ಮಚ್ಚಿ 2 ಭವತಾರಕ ಭಜಕರಿಗೊಲಿವೆ |ಭಾವಿಕ ಜನರಾನಂದದಿ ನಿಲುವೆ 3
--------------
ಭಾವತರಕರು
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀದಯಮಾಡಿ ಸಲಹೊ ಎನ್ನ ಪರಮಾತ್ಮ ಭವ ತೊಡರು ಬಿಡಿಸೊ ಪರಮಾತ್ಮ ಪ -----ಸಂಖ್ಯಾನೂರು ಬಳಲುತಿರೆ ಪರಮಾತ್ಮ ಇವರ ಸಂಚಿತವು ಏನೋ ಕಾಣೆನು ಪರಮಾತ್ಮ ಕೋಟಿ ಉದ್ಯೋಗದವರು ---- ಪರಮಾತ್ಮ ಪ್ರಪಂಚಕ್ಕೆ ಸರಿ ಕಾಣಲಿಲ್ಲ ಪರಮಾತ್ಮ 1 ನಾನಾ ಪರಿಯಿಂದ ನಡೆದೆ ಕಷ್ಟದಿಂದ ಪರಮಾತ್ಮ ನಿಮ್ಮ ಧ್ಯಾನವು ಎನ್ನ ಮನಕೆ ನಿಲಕದು ಪರಮಾತ್ಮ ------- ಜೀವಕೆ ಇನ್ನು ಪರಮಾತ್ಮ ಸುಜ್ಞಾನಿಗಳಿಗೆ ಜೀವನ ನೀನು ಪರಮಾತ್ಮ 2 ಸಾರಜಗವ ರಕ್ಷಿಸುವಂಥ ಪರಮಾತ್ಮ ನಿ- ಸ್ಸಾರ ಮಾಡುವರೆ ಎನ್ನ ಪರಮಾತ್ಮ ವೀರ ' ಹೊನ್ನ ವಿಠ್ಠಲಾ’ ಶ್ರೀ ಪರಮಾತ್ಮ ಗುಣ ಗಂಭೀರ ಪುಣ್ಯಪರುಷ ಕೇಳೊ ಪರಮಾತ್ಮ 3
--------------
ಹೆನ್ನೆರಂಗದಾಸರು
ನೀನಲ್ಲದಿನ್ನಾರು ಸಲಹುವರು ಹರಿಯೆ ಪ ನಾನನ್ಯರನು ಕಾಣೆನೆಲ್ಲಿಯೂ ಕೇಳ್ದರಿಯೆ ಅ.ಪ. ಪೋರ ಶಶಿಹಾಸನನು ತಂದೆ ತಾಯ್ಸಲುಹಿದರೆಧೀರ ಪ್ರಲ್ಹಾದನನು ತಂದೆ ತಾಯ್ ಸಲುಹಿದರೆವೀರ ಕರ್ಣನ ಹಡೆದ ತಾಯಿ ಸಲುಹಿದಳೆನಾರಿ ದ್ರೌಪದಿಯನ್ನು ಭರ್ತೃಗಳು ಸಲುಹಿದರೆ 1 ಕರ್ಣ ತಾ ಸಲುಹಿದನೆಕಡುಗಲಿಯ ವಾಲಿಯನು ಸುಗ್ರೀವ ಸಲುಹಿದನೆಗಡ ಬಬ್ರುವಾಹನನು ತಂದೆಯನು ಸಲುಹಿದನೆ 2 ಪುಸಿಯಲ್ಲದೆಲ್ಲವನು ಸಲಹುವಾತನೆ ನೀನುಪಿಸುಣರೈ ಸಲಹುವರು ತಾವೆಂದು ಗಳಹುವರುಉಸಿರು ಗದುಗಿನ ವೀರನಾರಾಯಣನೆ ನೀನು 3
--------------
ವೀರನಾರಾಯಣ