ಒಟ್ಟು 1477 ಕಡೆಗಳಲ್ಲಿ , 107 ದಾಸರು , 1175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗ ಬಾರ ಕುರಂಗನಯನೆ ಮಂಗಳಾಂಗನ ಕರೆದುತಾರೆ ಪ ಅಂಗ ಸಂಗ ಸುಖವನಿತ್ತು ತಂಗೀ ಮನವ ಸೆಳೆದುಕೊಂಡ ಅ.ಪ ಸಂಚಿನಿಂದ ಒಳಗೆಬಂದು ಮಂಚಕೆನ್ನ ಗಂಡನ ಕಟ್ಟಿ ಮಿಂಚಿನಂತೆ ತೋರಿಪೋದ 1 ಕಂಚುಕದೊಳಿರುವ ಪಣ್ಗಳ ವಂಚಿಸದೆ ಕೊಡುಯೆಂದೆಂಬ ಸಂಚಿತಾರ್ಥದ ಪುಣ್ಯವೆಂದು ವಿರಿಂಚಿಪಿತನು ರೋಜಪಿಡಿದ 2 ಉಲ್ಲಸದೊಳಗಾಲಿಂಗಿಸುತ ಫುಲ್ಲಲೋಚನ ಪರವಶಗೈದ 3 ಮುನಿದುನಾನು ನಿಂದಿರಲು ಕನಿಕರದಿಂದ ಕುಣಿದು ಹಾಡಿ ಮನವನುಬ್ಬಿಸಿ ತನುವಮರೆಯಿಸಿ ಇವನತೆರದೊಳೆನ್ನನಾಳ್ದ 4 ಮೊಸರ ಕಡೆದು ಬೆಣ್ಣೆತೆಗೆಯೆ ಮೆಲ್ಲನೆ ಬೆನ್ನಹಿಂದೆ ಬಂದು ಅಸಮರೂಪ ತೋರುತಾಗ ಒಸೆಯುತದನು ಕದ್ದು ಮೆದ್ದ 5 ಹೋರಿಯೆನ್ನೊಡೆ ದಾರಿಬಿಡದೆ ಓರಿಗೆಯರ ಕಂಡು ಜಾರಿದ 6 ಕೊಳಲನೂದಿ ಒಳಗೆ ಬಂದು ಲಲನೆಯೇಳೆ ಎಂದವನ 7 ನೀರಮುಳಗಿ ಭಾರಹೊತ್ತು ಕೋರೆ ಮಸೆದ ನಾರಸಿಂಹ ಬುದ್ಧ ಕಲ್ಕಿ 8 ಪಕ್ಷಿವಾಹನ ಹೆಜ್ಜಾಜಿ ಯಧ್ಯಕ್ಷ ಚನ್ನಕೇಶವದೊರೆಯೆ ರಕ್ಷಿಸೆಂದು ನಂಬಿದವರ ಪಕ್ಷನಾಗಿ ಪಾಲನೆಗೈವ 9
--------------
ಶಾಮಶರ್ಮರು
ರಂಗ ಬಾರೋ ರಂಗ ಬಾರೋ ರಂಗ ಬಾರೋ ಶ್ರೀರಂಗ ಬಾರೋ ಪ ತುಂಗ ಕೃಪಾಂಬಿಕ ಮಂಗಳದಾಯಕ ಅ.ಪ ಮೆಲ್ಲಮೆಲ್ಲನೆ ಬಾ ಮೆಲ್ಲಡಿಯಿಡು ಬಾ ಮೆಲ್ಲುಲಿಯುಲಿ ಬಾ ಮೆಲ್ಲು ಬೆಣ್ಣೆಯ ಬಾ ಸಲ್ಲಲಿತಾಂಗ ಬಾ ಪಲ್ಲವಾಧರ ಬಾ ಫುಲ್ಲಲೋಚನ ಬಾ ಚೆಲ್ವಮೂರ್ತಿಯೆ ಬಾ1 ಗಂಗೆಯ ಜನಕ ಬಾ ಅಂಗಜಪಿತನೆ ಬಾ ಮೂರ್ತಿ ಬಾ ಹೊಂಗೊಳಲೂದು ಬಾ ಸಂಗೀತಲೋಲ ಬಾ ಮಾಂಗಿರಿಯರಸ ಬಾ ಬಾಬಾರೊಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ
ರಂಗನಾಥನ ನೋಡುವ ಬನ್ನಿ ಶ್ರೀ- ಪ ರಂಗನ ದಿವ್ಯ ವಿಮಾನದಲ್ಲಿಹನಅ.ಪ. ಕಮನೀಯಗಾತ್ರನ ಕರುಣಾಂತರಂಗನಕಾಮಿತಾರ್ಥವೀವ ಕಲ್ಪವೃಕ್ಷನಕಮಲದಳನೇತ್ರನ ಕಸ್ತೂರಿ ರಂಗನಕಾಮಧೇನು ಕಾವೇರಿ ರಂಗನ1 ವಾಸುಕಿಶಯನನ ವಾರಿಧಿನಿಲಯನವಾಸುದೇವ ವಾರಿಜನಾಭನವಾಸವಾದಿ ಭಕ್ತ ಹೃದಯಾಂಬುಜದಲ್ಲಿವಾಸವಾಗಿರುತಿಹ ವಸುದೇವಸುತನ2 ಮಂಗಳಗಾತ್ರನ ಮಂಜುಳಭಾಷನಗಂಗಾಜನಕ ಅಜಜನಕನಸಂಗೀತಲೋಲನ ಸಾಧುಸಮ್ಮತನರಂಗವಿಠಲ ರಾಜೀವನೇತ್ರನ 3
--------------
ಶ್ರೀಪಾದರಾಜರು
ರಂಗನ್ಯಾಕೆ ಬಾರ ತಂಗಿ ಮಂಗಳ ಮಹಿಮನ ದಿವ್ಯಾಂಗವ ಕಾಣದೆ ಎನ್ನಕಂಗಳು ಕಂಗೆಡುತಿವೆಪ. ರಂಗುಮಾಣಿಕದುಂಗುರದಂಗುಲಿಯ ಸನ್ನೆಯಿಂದಪೊಂಗೊಳಲೂದುವನ ತೋರೆ ರಮಣಿ ಅ.ಪ. ತಿಂಗಳು ಮೂಡಿತು ಪಿಕ ಸಂಗೀತವ ತೊಡಗಿತುಭೃಂಗ ತನ್ನಂಗನೆಯರ ಸಂಗಡ ನಲಿದು ಬಂದಶೃಂಗಾರವನದ ಮೃದು ತಂಗಾಳಿ ಬೀಸಿತು ನೋಡಾ-ನಂಗ ನೆಚ್ಚ ಬಾಣಗಳೆಂತೊ ಅಂತರಂಗವ ತಾಕಿದರೆನ್ನ ಇಂಗಿತವರಿತು ದೇವೋ-ತ್ತುಂಗ ಕಾಯದಿರೆ ಉಳಿವಂಗನ ನಾಕಾಣೆ ನಮ್ಮಪೆಂಗಳಿಗೆ ಬಂದ ಬಲುಭಂಗ ತನ್ನದಲ್ಲವೆ ಸಾ-ರಂಗಾಕ್ಷಿ ಬೇಗವನ ತೋರೆ ರಮಣಿ 1 ಕೌಸ್ತುಭ ರತ್ನಕರ್ಣಕುಂಡಲಸರಸಿಜಮುಖದಿ ಕಸ್ತೂರಿ ತಿಲಕವೆಸೆಯೆಪರಿಮಳಿಸುವ ಪೂಮಾಲೆಮೆರೆಯೆ ಪೊಳೆವ ಪೀತಾಂಬರದ ಸುತ್ತಲೊಲೆವಕಿರುಗೆಜ್ಜೆ ಮಣಿಮಯಕಾಂತಿ ಮಿಂಚುತಿರಲುಚರಣನೂಪುರ ಘಲುಘಲುಕೆನೆ ಕುಣಿವÀ ಶ್ರೀಹರಿಯನು ಕರೆದುತಾರೆ ರಮಣಿ 2 ಮಂದಜಾಸನನ ತಂದೆಯೆಂದೆನಿಪ ಗೋವಿಂದನಕಂದರ್ಪ ವೃಂದಾದಿಗಳ ಕಂದಿಸುವ ಕುಂದಿಲ್ಲದಸೌಂದರ್ಯಸಂದೋಹದೊಳಗೊಂದೊಂದನಾರು ಬಲ್ಲರುಎಂದೆಂದಿವನನು ಪೊಂದಿಪ್ಪಇಂದಿರೆ ಇವನ ಗುಣಸಾಂದ್ರ ಕಿರುಬೆರಳಿನಂದವನೋಡುತ್ತ ಆನಂದಸಿಂಧುವಿನೊಳ್ಮುಣುಗಿದಳಿಂದು ಹಯವದನ ಮುಕುಂದನ ತಂದೆನ್ನ ಮುಂದೆಇಂದುಮುಖಿ ಕರೆದುತಾರೆ ರಮಣಿ3
--------------
ವಾದಿರಾಜ
ರಂಗಯ್ಯ ನಿನಗ್ಯಾತಕೋ | ಹೇಳುವದು ಥರವೆ ಅಲ್ಲಾ ಪೂತನಿ ಮೊಲೆ ಉಂಡ ಪುಂಡಗೋವಿಂದ ಪ ನೆರೆಹೊರೆ ಮನಿಗಳಿಗ್ಹೋಗಿ | ಅವರ ನೆಲವಿಗಳಿಗೆ ನೀನು ಹುದಗಿ | ಮೇಲಿರುವಂಥ ಪಾಲು ಬೆಣ್ಣೆಗಾಗಿ | ಎರಡು ಕರದಿತ್ವರದಿ ನೀನು ಬಾಗಿ | ಇಂಥ ಪರಿಚೇಷ್ಟಿಗಳಲ್ಲಿ ಬಡವರಾಲಯ ಪೊಕ್ಕು | ದುರುಳತನವ ಮಾಡಿ ದೂರುತರುವರೇನೊ 1 ಮಂದಗಮನಿಯಳ ಕರವನ್ನು | ಹಿಡಿದು ಮಾನಭಂಗವ ಮಾಡುವದೇನು | ಇದು ಚಂದವೆ ಬುದ್ಧಿ ನಿಮಗಿನ್ನು | ಇಂಥಾ ಚಾಳಕತನ ಬಿಡಿಸುವೆನು | ಶ್ರೀ ಮಂದರೋದ್ಹರ ಮಹಾಮಹಿಮ ಪ್ರಕಾಶನೆ ನಂದದಿ----------------- 2 ಧರೆಯೊಳ್ಹೆನ್ನೆಯ ಪುರವಾಸ | ಧೊರಿ ಹೆನ್ನೆ ವಿಠಲನ ಈಶ | ಭಕ್ತರನ್ನ ಪೊರೆವ ಜಗದೀಶ | ತಾರಕನಾದ ಸರ್ವೇಶ | ಇನ್ನು ಪರಿಯಾದದಲ್ಲಿ ಮೊರೆಯದ ಕಾರಣ ನೀನಗೀಗ ಚನ್ನಾಗಿ ಬುದ್ಧಿಯಪೇಳ್ವೆನು3
--------------
ಹೆನ್ನೆರಂಗದಾಸರು
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ರಜತಗಿರೀಶ್ವರ ಮಹಾನುಭಾವ ಗಜಚರ್ಮಾಂಬರ ನಮೋ ನಮೋ ಪ ವಿಜಯರಾಮಾರ್ಚಿತ ಪದಕಮಲ ಅಜಸುತ ಸೇವಿತ ನಮೋ ನಮೋ ಅ.ಪ ವಾರಣಾಸಿ ಸುಕ್ಷೇತ್ರ ನಿವಾಸ ಪರಮೋಲ್ಲಾಸ ನಮೋ ನಮೋ ಭೂರಿ ವೈಭವಾನಂದ ವಿಲಾಸ ರವಿಶತಭಾಸಾ ನಮೋ ನಮೋ 1 ನಾದಾಲಂಕೃತ ವರದಾತಾ ಶ್ರೀ ಗೌರಿಯುತ ನಮೋ ನಮೋ ಭಾಗೀರಥೀಪ್ರಿಯ ಲೋಕನುತ ದೇವೇಂದ್ರಾತ ನಮೋ ನಮೋ2 ಮಂಗಳದಾಯಕ ಶಶಿಶಿಖರ ಸಂಗವಿದೂರಾ ನಮೋ ನಮೋ ಮಾಂಗಿರಿ ಶೃಂಗವಿರಾಜಿತಶಂಕರ ಶರಣಶುಭಂಕರ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಮಿಸುವೆವೆಂದಿಗೆ ಮುರಳೀಧರನ ಪ ಸುಮನಸವಂದಿತ ವಿಮಲ ಚರಿತನ ಅ.ಪ ಮಂದಮಾರುತ ಸುಮಗಂಧ ಬೀರುತಲಿರೆ ಸುಂದರವದನ ಗೋವಿಂದನ ನೊಸಲಲಿ1 ವನರುಹನೇತ್ರನ ಪರಮ ಪವಿತ್ರನ ವನಜಾಕ್ಷಿಯರೆಲ್ಲ ವನವಿಹಾರದಲಿ 2 ಹೇಮವಸನನ ಕೋಮಲ ರೂಪನ ಕಾಮಿನಿಯರು ನಾವು ಪ್ರೇಮವ ಬೀರುತ 3 ಕಲಭಾಷಣದಿಂದ ಸೆಳೆಯುತ ಮನವನು ಜಲಜಾಕ್ಷಿಯರೆಲ್ಲ ಜಲ ವಿಹಾರದಲಿ 4 ಭಾಸುರಾಂಗನ ಪರಿಹಾಸ ಮಾಡುತಲಿ ಬೇಸರವಿಲ್ಲದೆ ರಾಸಕ್ರೀಡದಿ 5 ಸಂಗೀತವ ಪಾಡಿ ರಂಗನ ಒಡಗೂಡಿ ಅಂಗನೆಯರೆಲ್ಲ ಅನಂಗ ಕೇಳಿಯಲಿ 6 ಬಿನ್ನನೆ ಬಾರೆಂದು ಕೆನ್ನೆಯ ಪಿಡಿಯುತ ಸನ್ನೆಯ ಮಾಡಿ ಪ್ರಸನ್ನಮುಖಿಯರು 7
--------------
ವಿದ್ಯಾಪ್ರಸನ್ನತೀರ್ಥರು
ರಾ‌ಘವೇಂದ್ರ ಗುರುರಾಯ ಬಾಗಿ ನಮಿಸುವೆ ಬೇಗ ಭಾಗವತ ಜನಪ್ರಿಯ ಪ ಮಧ್ವಮತಪಾರಾವಾರ | ಶುದ್ಧಪೂರ್ಣ ಸುಧಾಕರ ಅದ್ವೈತಾದ್ರಿ ಶತಧರ | ಉದ್ಧರಿಸೈ ಯೋಗೀಶ್ವರ 1 ಭೂಷ ಭೂಸುರ ಪರಿವಾರ ಪೋಷ ಪ್ರಹ್ಲಾದವತಾರ 2 ತುಂಗಾಭದ್ರಾ ಸುತೀರದಿ |ಶೃಂಗಾರ ಸದ್ವøಂದಾವನದಿ ಪಿಂಗಳ ಸನ್ನಿಭಾಂಗದಿ | ಕಂಗೊಳಿಸಿದ ದಯಾಂಬುಧಿ 3 ಮರುಥಾವೇಶ ಯಮಿವರಿಯಾ | ದುರಿತಾಹಿ ವೈನತೇಯ | ಪರಮೋದಾರ ಪರಿಮಳಾರ್ಯ | ತರಳನೆಂದು ಕರುಣಿಸಯ್ಯ 4 ಶಾಮಸುಂದರ ಭಕ್ತಾಗ್ರಣಿ | ಭೂಮಿಯೊಳು ನಿನಗಾರಣೆ | ಕಾಮಿತಾರ್ಥ ಚಿಂತಾಮಣಿ | ಸ್ವಾಮಿ ಶ್ರೀ ವ್ಯಾಸ ಸನೌನಿ 5
--------------
ಶಾಮಸುಂದರ ವಿಠಲ
ರಾಘವೇಂದ್ರಂ ಭಜೇಹಂ ||ಶ್ರೀ|| ಪ ಆಗಮಚಯ ವಿಜ್ಞಾನ ಸುಗೇಹಂ ಶ್ರೀಗದಾಬ್ಜ ಚಕ್ರಾಂಕಿತ ದೇಹಂ ಅ.ಪ ರಾಗ ಮೋಹನಾದಿ ರಹಿತಂ ಸುಚರಿತಂ ಭೋಗಿರಾಟ್ ಶಯನ ಗುಣಮತಿ ಮಹಿತಂ ಭಾಗವತೋತ್ತಮ ಮತಿ ಸುಮತಿಯುತಂ ಯೋಗಿ ಜನಹಿತಂ ಶ್ರೀ ಗುರು ನಿರುತಂ 1 ಅತಿಪಾವನ ಕಾಷಾಯ ಸುವಸನಂ ನತಜನೇಷ್ಟ ವಿಶ್ರಾಣನ ನಿಪುಣಂ ಧೃತ ದಂಡ ಕಮಂಡಲ ಶುಭಪಾಣಿಂ ಕೃತ ಹರಿಸುತಿ ಸಂಗೀತ ಸುವಾಣೀಂ 2 ನಿಜತಪಸಾ ಸಮುಜಾರ್ಜಿತ ತೇಜಂ ಸುಜನಾವನ ಗುಣಹಿತ ಸುರಭೂಜಂ ಹರಣ ಕೃಷ್ಣ ವಿಜಯವಿಠ್ಠಲರೇಯಂ ಅಜಿನಾಸನ ಸುಸ್ಥಿರ ಯತಿರಾಜಂ3
--------------
ವಿಜಯದಾಸ
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ರಾಮನಾಮ ಸ್ಮರಣೆಯ ಮಾಡದೆ ನೀ ಪಾಮರನಾಗದಿರೊ ಮನುಜ ಪಾಮರನಾಗದಿರೊ ಪ ತಾಮಸಗುಣಬಿಟ್ಟು ಪ್ರೇಮದಿಂದಲಿ ನಮ್ಮ ಸ್ವಾಮಿಯ ನೆರೆ ನಂಬಿರೋ ಅ.ಪ ದೇಹವನಿತ್ಯವೋ ಮೋಹಪಡಬ್ಯಾಡವೋ ಲೇಶ ಸುಖ ಕಾಣೆನು 1 ಹಗರಣವಹ ವ್ಯಕ್ತಿಗಳನು ನಂಬುತಾ ನಗೆಗೀಡಾಗದಿರೊ 2 ಹೊರಗೊಳಗಿದ್ದು ನಮ್ಮ ಗುರುರಾಮವಿಠ್ಠಲ ಕರತಳವಾಗುವುದು3
--------------
ಗುರುರಾಮವಿಠಲ