ಒಟ್ಟು 1792 ಕಡೆಗಳಲ್ಲಿ , 51 ದಾಸರು , 1465 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಮಾಣ ಕೊಟ್ಟ ತರುವಾಯ ತಪ್ಪುವ ನೀನಲ್ಲ ಪ ಅಸುರ ತಾರಕನು ಸುಮನಸರ ಬಳಲಿಸುತಿರಲು ಬಿಸಿಗಣ್ಣವನ ತಪಸು ಹಾನಿಮಾಡಿ ಶಶಿವದನೆ ಪಾರ್ವತಿಯಲ್ಲಿ ಗರ್ಭವನಿಡಿಸಿ ಹಸುಳೆ ಕೈಯಿಂದ ರಾಕ್ಷಸನ ಕೊಲ್ಲಿಸಿದೆ 1 ಶಂಬರ ದೈತ್ಯಜನ ವರದಿಂದ ಅನಿಮಿಷ-ಕ ದಂಬವನು ಸೋಲಿಸಿ ಮೆರೆವುತಿರಲು ಅಂಬುತನಯುದರದಲ್ಲಿ ಹೊಕ್ಕು ಬೆಳೆದದು ಬಂಡು ಅಂಬರರು ನಲಿಯೆ ವನಶಿರವ ಚಂಡಾಡಿದಾ 2 ಮನಮುಟ್ಟಿ ನಿನ್ನನು ವಂದನೆಮಾಡಿ ನರಗೆ ಮನದ ತಾಪವ ಬಿಡಿಸಿ ಮುಕ್ತಿ ಕೊಡುವಾ ಸಿರಿ ವಿಜಯವಿಠ್ಠಲರೇಯನ ಅನುಸರಿಸಿ ಬಾಳುವಂತೆ ಏಕಚಿತ್ತವನೀವಾ 3
--------------
ವಿಜಯದಾಸ
ಪ್ರಹ್ಲಾದ ವರದ ವಿಠಲ | ಕಾಪಾಡೊ ಇವಳಾ ಪ ಆಹ್ಲಾದವನೆ ಕೊಟ್ಟು | ಸಂತೈಸೊ ಹರಿಯೇ ಅ.ಪ. ಮಣಿ | ಉಪದೇಶ ಬೇಡುವಳೋಬೋಧಿಸಿಹೆ ಅಂಕಿತವ | ಶೀದ ಪೊರೆ ಇವಳಾ 1 ಕಾಮ ಮದ ಮಾತ್ಸರ್ಯ | ಸ್ತೋಮವನೆ ಕಳೆದುಸತ್‍ಕಾಮಗಳ ಪೂರೈಸು | ಸೋಮಧರವಂದ್ಯಾ |ಕಾಮ ಜನಕನೆ ತಾರ | ತಮ್ಯವನೆ ತಿಳಿಸುತ್ತನೇಮದಿಂ ಭೇದಗಳ ಪ್ರೇಮದಲಿ ತಿಳಿಸೋ 2 ಭಕ್ತ ಭಕ್ತರ ಅಸದ್ | ಭಕ್ತಿ ಮಾಡಲಿ ಇವಳುಮುಕ್ತಿ ಮಾರ್ಗದ ಹಾದಿ | ಯುಕ್ತಿಯಲಿ ಅರಿತೂಗೋಪ ಗುರು ಗೋವಿಂದ | ವಿಠ್ಠಲನ ಕೀರ್ತಿಸುತೆಉತ್ತರಿಸಲೀ ಭವವ | ಉತ್ತಮೋತ್ತಮನೇ3
--------------
ಗುರುಗೋವಿಂದವಿಠಲರು
ಪ್ರಾಣ ನಿನ್ನಂಘ್ರಿ ಸಿರಿರೇಣು ಕಾಣು ಯೋನಿಯಲಿ ಬಂದೆ ನೊಂದೆ ಗುರುವೆ ನೀನೆ ಗತಿಯೊ ಪ ಭರತ ಭಾರತಿರಮಣ ಭಾರತ ಪ್ರತಿಪಾದ್ಯ ಭರದಿಂದಲಿ ಎನ್ನಭಾರ ವಹಿಸುವ ಭರಣ ಭಾರದ್ವಾಜಾತ್ಮಜ ಭಾರಭಂಗಾ 1 ಗತಿ ಅಗತಿ ಗಮನಗರ್ಭ ಸ್ವರ್ಗ ನರಕ ಈ ಕ್ಷಿತಿ ಲೋಕಾಂತದಲ್ಲಿ ಬಳಲಿ ಮತಿಯ ಕಾಣದೇ ಮಂತ್ರಿ ರಾಜ ಮಹಾತತುವೇಶ ಬಲವತ್ವ್ಸರೂಪ2 ಪಂಚಾಹುತಿಯಲಿ ಹಾಕದಿರೋ ಜೀವೇಶ ಸಂಚಿತಾವಳಿ ಸರ್ವನಾಶಾ ಪಂಚದ್ವಾರದಲಿ ಶ್ರೀ ಹರಿಯ ಪೂಜಿಪ ಪುಣ್ಯ ಸಂಚಕನೆ ಪುರುಷಾಕಾರನೀಯೋ 3 ಅಪೂಪ ಬಹುರೂಪ ಹರಿಚಾಪ ಪ್ರತಾಪ ಕಪಿಕುಲಾಂಬುಜ ದಿನಪ ಸುರಪ ರಿಪು ವಿಪಿನಕಾಲ ಮಹಾ ಗುಪುತ ವ್ಯಾಪ್ತ ಸುಪ್ತಿ ಸ್ವಪನ ಜಾಗೃತಕಾರ್ಯಫಲದಾ4 ರಾಜಿಸುವ ರಾಗವಿದೂರಾ ವಾಜಿರೂಪ ವಾಶಿಷ್ಟ ವಂದ್ಯಾ ವರದಾ ಮಜ್ಜಗದ್ಗುರು ಮುಖ್ಯ ಪ್ರಾಣಾ 5 ಪೂರ್ವೋತ್ತರಂಗ ಸಂಧಿ ಸಂಧಾನ ವಿಶಿಷ್ಟಾ ಈರ್ವ ಸ್ಥಾನದಲಿ ನೀನೇ ಸರ್ವದಲಿ ಧ್ಯಾನವನು ಇತ್ತು ಪಾಲಿಸು ನಿತ್ಯ ಮೂರ್ತಿ 6 ಮಾನವ ರೂಪಾ ಮಾನಾಭಿಮಾನಿಗಳೊಡಿಯಾ ಆನಂದತೀರ್ಥಪದ ಭಕ್ತ ಅನಾಥಬಂಧು ವೈರಾಗ್ಯ 7 ಸಮಸ್ತ ಪರಮಾಣು ತಿಳಿಸೋ ಸಾಮ ಸೂರ್ಯಸ್ಥಿತನೆ ಸೂತ್ರಾ8 ಇಪ್ಪತ್ತೆರಡು ಸ್ಥಾನದಲಿ ಪ್ರಭುವೆ ಜಗ ದಪ್ಪ ಚತುರದ್ವಾರವಾಸ ಅಪ್ರತಿಮಲ್ಲ ಶ್ರೀ ವಿಜಯವಿಠ್ಠಲನ್ನ ಅಪ್ಪಿಕೊಂಡು ಮೆರೆದ ಧೀರಾ 9
--------------
ವಿಜಯದಾಸ
ಪ್ರಾಣದೇವ ನೀ ಕಾಯೊ ಕರುಣಿ ಸತತ ಪಾಲಿಸು ಸುಖದಾತ ಪ. ಪ್ರಣಾಪಾನವ್ಯಾನೊದಾನತೋಷ ಭಾರತೀಶ ಅ.ಪ. ತ್ರಿವಿಧ ಜೀವರ ಶ್ವಾಸ ನಿಯಾಮಕನೆ ಶ್ರೀ ಹರಿ ಸೇವಕ ನೀನೆ ಭವ ಇಂದ್ರಾದಿಗಳಿಂದಲಿ ವಂದಿತನೆ ಭಾರತಿಗತಿ ಪ್ರಿಯನೆ ತ್ರಿವಿಧ ಶ್ವಾಸ ಜಪ ನಿರ್ಲಿಪ್ತದಿ ಜಪಿಸಿ ಜೀವರ ಗತಿಗೈಸಿ ನವವಿಧ ಭಕ್ತಿಯ ಹರಿಚರಣದಿ ನಿರುತ ಚರಿಸುವ ಮತಿದಾತ 1 ತತ್ವಾಧೀಶರ ಪ್ರೇರಕ ಮಹಪ್ರಾಣ ಜೀವರ ಸುತ್ರಾಣ ವ್ಯಾಪ್ತಜಗದಿ ಶ್ರೀ ಹರಿ ಲಕುಮಿಯ ಸಹಿತ ಬಳಿತ್ಥಾ ಸೂಕ್ತ ಸ್ತುತ ಸತ್ವ ಗುಣದ ಜೀವರ ಸದ್ಗತಿದಾತ ಸುಜ್ಞಾನ ಪ್ರದಾತ 2 ತ್ರೇತೆಯಲ್ಲಿ ಶ್ರೀ ರಾಮದಾಸ್ಯ ಚರಿಸಿ ದಶಶಿರನನು ಮುರಿಸಿ ಮಾತೆ ಕೊಟ್ಟ ಭಿಕ್ಷಾನ್ನ ಉಂಡು ಸುಖಿಸಿ ಬಕ ಹಿಡಿಂಬಕರೊರಸಿ ಪಾತಕಿ ಮಾಯವಾದಿ ಜೈಸಿ ಸದ್ಗ್ರಂಥವ ರಚಿಸಿ ಖ್ಯಾತ ಗೋಪಾಲಕೃಷ್ಣವಿಠ್ಠಲ ಪ್ರಿಯ ನಮೋ ಚಳ್ಳಕೆರೆನಿಲಯ 3
--------------
ಅಂಬಾಬಾಯಿ
ಪ್ರಾಣದೇವನ ನಮಿಪೆ ನಮೋ ಪ್ರಾಣಕಧೀಶನೆ ಶರಣು ನಮೋ ಕಾಣಿಸು ಹರಿಯಂಘ್ರಿಯನು ನಮೋ ಪ್ರಾಣ ಪಂಚÀರೂಪಾತ್ಮ ನಮೋ ಪ. ಅಂಜನೆ ಆತ್ಮಜ ಕುವರ ನಮೋ ಸಂಜೀವನ ಗಿರಿ ತಂದೆ ನಮೋ ನಂಜುಂಡನ ಪ್ರಿಯ ಜನಕ ನಮೋ ಕಂಜಾಕ್ಷನ ದಾಸಾರ್ಯ ನಮೊ1 ಆಪ್ತವರ್ಗ ನಿರ್ಧೂತ ನಮೋ ಶಕ್ತ ಜರಾದಿ ಹಂತ ನಮೋ ತಪ್ತಕಾಂಚನ ಸುದೀಪ್ತ ನಮೊ 2 ಏಕವಿಂಶತಿ ಮತಧ್ವಂಸ ನಮೋ ಶ್ರೀಕಳತ್ರಪ್ರಿಯ ಪಾತ್ರ ನಮೋ ಏಕ ಚತುರ ನವಗ್ರಂಥ ನಮೋ ಜೋಕೆಯಿಂದ ನಿರ್ಮಿಸಿದೆ ನಮೋ 3 ಮುಕ್ತ ಜೀವರ ಸ್ತುತ್ಯ ನಮೋ ಯುಕ್ತಿವಂತ ಜಗದ್ವ್ಯಾಪ್ತ ನಮೋ ಶಕ್ತಿವಂತ ಶುದ್ಧಾತ್ಮ ನಮೋ ಭಕ್ತಭರಿತ ಹರಿಪ್ರೀತ ನಮೋ 4 ನಮೋ ನಮೋ ಶ್ರೀಗೋಪಾಲ ಕೃಷ್ಣವಿಠ್ಠಲನಿಗೆ ಪ್ರಿಯಬಾಲ ನಮೋ ನಮೋ ಶ್ರೀ ಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ 5
--------------
ಅಂಬಾಬಾಯಿ
ಪ್ರಾಣದೇವನೆ ನಿನ್ನ ಧ್ಯಾನಿಸದೆ ಮನದಿ ಬಲು ಹೀನನಾದೆನೊ ಲೋಕದಿ ಪ ಪಾದ ಧ್ಯಾನಮಾಡುವ ಮುಖ್ಯ- ಪ್ರಾಣನೀನೆಂದು ಮನಸಾರ ಪೂಜಿಸದೆ ಶ್ರೀ ಅ.ಪ ಶರಧಿ ಬಂಧಿಸಿ ದಶಶಿರನಳಿದ ಪಾದ ಸ್ಮರಣೆ ಮಾಡುತಲಿ ನಿತ್ಯ ಧರಣಿಸುತೆಯಳ ತಂದು ಪರಮ ಸಂಭ್ರಮದಿಂದ ಮೆರೆವದೇವನ ಸ್ಮರಿಸುತ ನರರೂಪದಿಂದ ದಶರಥನ ಪುರದಲಿ ನಿಂತ ಪರಮಾತ್ಮನಿಗೆ ನಮಿಸುತ ಸುರರು ಸ್ತುತಿಸಲು ಪರಮಹರುಷದಿಂದಾಲಿಸುತ ಹರಿಯ ಮೆಚ್ಚಿಪ ನಮ್ಮ ಗುರುಪವಮಾನ ಶ್ರೀ 1 ಅಂದು ಆ ಬಕನ ಭಯದಿಂದ ಸಜ್ಜನರೆಲ್ಲ ಕುಂದಿರಲು ಭಯವ ಹರಿಸಿ ಅಂಧಕನ ಸುತನ ಬಂಧಿಸುತ ರಣದೊಳಗೆ ಯದು- ನಂದನಗೆ ಪ್ರೀತಿ ಪಡಿಸಿ ಕೊಂದು ಬಿಸುಡಲು ಜರಾಸಂಧನನು ವಸುದೇವ ಕಂದ ನೋಡುತಲಿ ಸುಖಿಸಿ ಇಂದಿರಾರಮಣ ಮುಕುಂದನನು ಪೂಜಿಸುವ ಸುಂದರ ಭೀಮ ನಿಸ್ಸೀಮನಹುದೆಂದು ಶ್ರೀ2 ಪತಿತ ಸಂಕರದಿಂದ ಮತವೆಲ್ಲ ಕೆಡಲು ಶ್ರೀ- ಪತಿಯ ಧ್ಯಾನವು ಮಾಡುತ ಯತಿ ಶಿರೋಮಣಿಯಾಗಿ ಶ್ರುತಿ ಸ್ಮøತಿಗಳಣಿ ಮಾಡಿ ಹಿತವ ಜನರಿಗೆ ತೋರುತ ಎಸೆವ ಘನಗಿರಿಯಲ್ಲಿ ಅಸದಳ ಹನುಮರೆಂ- ದೆಸೆದು ಮಿಗೆ ಶೋಭಿಸುತಲಿ ವಾರಿ ದಡದಲಿ ಕಮಲನಾಭ ವಿಠ್ಠಲನ ಸ್ಮರಿಸಿ ಧೀರ ಹನುಮಂತನಪಾರ ಮಹಿಮನೆಂದು ವನಗಿರಿಯ ಗುಹೆಗಳಲಿ ಹನುಮಂತನೆಂದೆನುತ ಎಣಿಸಲಳವಲ್ಲವೋ ಘನಪರಾಕ್ರಮಿ ಮುಖ್ಯ 3
--------------
ನಿಡಗುರುಕಿ ಜೀವೂಬಾಯಿ
ಪ್ರಾಣದೇವರ ಸ್ತೋತ್ರ ನೋಡಿದ್ಯಾ ಸೀತಮ್ಮ ನೀ ನೋಡಿದ್ಯಾ || ಪ || ನೋಡಿದ್ಯಾ ಹನುಮನಾರ್ಭಟವ - ಹಾಳುಮಾಡಿದ ಕ್ಷಣದಲಿ ವನವಾ ||ಆಹಾ|| ಝಾಡಿಸಿ ಕಿತ್ತು ಈಡ್ಯಾಡಿ ವೃಕ್ಷಂಗಳ ಕೊಂ-ಡಾಡುವ ನಿನ್ನಯ ಕೋಡಗನ್ಹರುಷವಾ || ಅ.ಪ. || ಮಾತೆ ನಿನ್ನಾಜ್ಞೆಯ ಕೊಂಡು - ಆರಭೀತಿಯಿಲ್ಲದೆ ಫಲ ಉಂಡು -ದೈತ್ಯದೂತ ಬರಲು ಭಾರಿ ಹಿಂಡೂ||ಆಹಾ||ವಾತ ಜಾತ ಬಂದ ಪಾತಕಿಗಳನೆಲ್ಲತಾ ವಕದಿ ಕೊಂದು ಭೂತಳಕ್ಹಾಕಿದಾ 1 ಸೊಕ್ಕಿ ರಾವಣನೆಂಬ ಗಂಡ - ಮಹ ಲಕುಮಿಯನೆ ಕರಕೊಂಡ - ರಾಮ ರಕ್ಕಸಾಂತಕ ಆಕೆ ಗಂಡ - ಕಪಿ-ಗಿಕ್ಕಿರೆಂದ ಯಮದಂಡ ||ಆಹಾ||ಮಿಕ್ಕ ಖಳರು ಕೂಡಿ ಲೆಕ್ಕಿಸಿ ಮಾತಾಡಿಸಿಕ್ಕರೆ ಬಿಡನೆಂದು ದಿಕ್ಕು ಪಾಲಾದ 2 ಎಷ್ಟೇಳ್ಹಲವನ ಪ್ರತಾಪ - ನೋಡುಸುಟ್ಟನೆಂಬ ಲಂಕಾ ದ್ವೀಪ - ಎಂಥಗಟ್ಟಿಗ ನೋಡೆ ನಮ್ಮಪ್ಪ ||ಆಹಾ||ಸೃಷ್ಟೀಶ ಕೇಶವ ವಿಠ್ಠಲರಾಯನ ಮುಟ್ಟಿ ಭಜಿಸಲಜ ಪಟ್ಟಾಳೆನೆಂದ್ಹೋದಾ
--------------
ಕೇಶವವಿಠ್ಠಲರು
ಪ್ರಾಣೇಶ ಹರಿ ವಿಠಲ | ಪೊರೆಯ ಬೇಕಿವಳಾ ಪ ನಿನಲ್ಲದಿನ್ನಿಲ್ಲ | ಪ್ರಾಣಾಂತರಾತ್ಮಾ ಅ.ಪ. ಸಾರ ಕೂಪದಿಂದ |ಕಾರುಣ್ಯ ಮೂರುತಿಯೆ | ಆರು ಅನ್ಯರ ಕಾಣೆನೀರ ಜಾಸನ ವಂದ್ಯ | ನಿರ್ಮಲಾತ್ಮಕನೇ 1 ಕನ್ಯೆಮಣಿ ಇವಳೀಗೆ | ನಿನ್ನ ನಾಮಾಮೃತದಬೆಣ್ಣೆಯನು ಉಣಿಸುತ್ತ | ಕಾಪಾಡೊ ಇವಳಾಚಿನ್ನುಮಯ ಶ್ರೀ ಹರಿಯೆ | ಸಮ್ಮೋದ ಪಾಲಿಸುತಚೆನ್ನಾಗಿ ಪೊರೆ ಇವಳ | ಅನ್ನಂತ ಮಹಿಮಾ 2 ಸಾಧು ಸತ್ಸಂಗವನು | ನೀ ದಯದಿ ಕೊಟ್ಟವಳಸಾಧನವ ಗೈಸುವುದೊ ಮಾಧವನೆ ದೇವಾ |ಆಧ್ಯಂತ ರಹಿತ ಹರಿ | ವೇದಾಂತ ವೇದ್ಯನೆಕಾದುಕೋ ಬಿಡದಿವಳ | ಮಧ್ವಮುನಿ ವಂದ್ಯಾ 3 ಕಾಮ ಜನಕನೆ ದೇವ | ಕಾಮಿತವ ಕರುಣಿಸುತನೇಮ ನಿಷ್ಠೆಯನಿತ್ತು | ನೀ ಮುದದಿ ದೇವಾ |ಪಾಮರಳ ಉದ್ಧರಿಸೋ | ಶ್ರೀ ಮನೋಹರ ಹರಿಯೆಸಾಮಜಾಸದ್ವಂದ | ಸಾಮ ಸನ್ನುತನೇ 4 ಕೇವಲಾನಂದವೆನೆ | ಶಾಶ್ವತದ ಸುಖಕಾಗಿಬಾಳ್ವ ಅಳವಡಿಸುತ್ತ | ಕಾವುದೋ ಇವಳಾ |ಗೋವಿಂದಂ ಪತಿಯೆ ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಪ್ರಾಯಶ್ಚಿತ್ತವು ಎನಗೆ ಇಲ್ಲವಯ್ಯಾ ಪ ನಾಯಿಯಂತೆ ಕಂಡ ಕಂಡಲ್ಲಿ ತಿಂಬುವಗೆ ಅ.ಪ ಮಾನಸದಿ ತ-ದೇಕ ಧ್ಯಾನದಲ್ಲೇ ಕುಳಿತು ಜ್ಞಾನಿಗಳ ಸಹವಾಸ ಮಾಡದಲೆ ಹೀನರಾಶ್ರೈಸೆ ನಾಲಿಗ್ಯೆ ಹಿತವನೆ ಬಯಸಿ ಮೀನು ಗಾಣಕೆ ಬಿದ್ದು ಮಿಡುಕುವಂದದಲಿ 1 ಸರಸರನೆ ಕಂಠವನು ಗರಗಸದಿ ಕೊಯ್ದರೂ ತರಹರಿಸದೇ ಪರರ ಮನೆಯನ್ನವನ್ನು ಕರದಲಿ ಸ್ಪರ್ಶ ಸಲ್ಲದು ಎಂದು ಪೇಳುತಿರೆ ಹಿರಿದಾಗಿ ಕುಳಿತು ಭುಂಜಿಸುವ ಪಾತಕಿಗೆ2 ಪರರಿತ್ತ ಕೂಳಿನಲಿ ಅವರ ಕುಲಕೋಟಿ ಸಾ- ವಿರ ಜನುಮದಲಿ ಅರ್ಜಿಸಿದ ಪಾಪ ಬೆರೆತಿಹುದು ಎಂದ್ಹೇಳಿ ಕೇಳಿ ಕೇಳಿ ನಗುತ ಹರುಷದಿಂ ಕುಳಿತು ವಿಷವುಂಬ ಪಾತಕಿಗೆ 3 ಯಾತ್ರೆಯ ಪೋಪಲ್ಲಿ ತಿಥಿ ಮತಿ ಹವ್ಯದಲಿ ಮತ್ತೆ ಕುಲಹೀನದಲಿ ಅನ್ನ ತಿಂದು ನಿತ್ಯ ಹಿಂಗದಲೆ ಈ ನೀಚ ಒಡಲನು ಹೊರೆವ ತೊತ್ತು ಬಡುಕಗೆ ಪುಣ್ಯವೆತ್ತ ದೊರಕುವುದೊ 4 ಕ್ಷಿಪ್ರ ಪ್ರಾಯಶ್ಚಿತ್ತ ಪೊಂದಿಹುದು ಕೇಳಯ್ಯಾ ಈ ಪೃಥ್ವಿಯೊಳಗೆಲ್ಲ ನಿನ್ನ ನಾಮ ಕಾಯ ವಿಜಯವಿಠ್ಠಲರೇಯ ಸುಪ್ರಸಾದವನಿತ್ತು ಶುದ್ಧಾತ್ಮನನು ಮಾಡು 5
--------------
ವಿಜಯದಾಸ
ಫಾಲಲಿಪಿ ಪರಿಹರಿಸಿಕೊಂಬರುಂಟೆ |ಕಾಲನಾಮಕ ನಿನ್ನ ಕ್ಲಪ್ತದಲಿ ಬರೆದಿದ್ದ ಪ ಸಾಲು ಸ್ಫಟಿಕದ ರತ್ನಮಯವಾದ ಮನೆ ಇರಲು ವಿಶಾಲ ಪರ್ನದ್ದಾದರಿರಬಾರದೆ ||ಆಳುಗಳು ಬಹುಮಂದಿ ಇದ್ದವಗೆನುಡಿದ ಮಾತಾಲಿಸುವ ನರನೊಬ್ಬನಿರಬಾರದೆ 1 ಜ್ಞಾನದಲಿ ಹರಿರೂಪ ಬಹಿರಂತರದಿ ನೋಳ್ಪಆನಂದದಲಿ ಸತತ ಇದ್ದವಗೆ ||ಧ್ಯಾನದಲಿ ಕ್ಷಣಮಪಿ ಕರುಹು ಕಾಣಿಸಿಕೊಂಬ ದೀನ ಮನವಾದರೂ ಇರಬಾರದೆ 2 ಕೋಟಿ ದ್ರವ್ಯವು ಇದ್ದು ನೀಟ ಕವಡಿ ಇಲ್ಲದೆಕಾಟ ಕಾಣದೆ ಸೊರಗಿ ಮರುಗಿದಂತೆ ||ಹಾಟಕಾಂಬರಧಾರ ಗುರು ವಿಜಯವಿಠ್ಠಲರೇಯದಾಟುವರಿಲ್ಲ ನಿನ್ನ ಪ್ರಬಲ ಶಾಸನವ 3
--------------
ಗುರುವಿಜಯವಿಠ್ಠಲರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3
--------------
ಭೂಪತಿ ವಿಠಲರು
ಬಂದ ದುರಿತಗಳೆಲ್ಲ ಪರಿಹರಿಸಿ ಪೊರೆವದು ಪ ಎಷ್ಟು ಪರಿಯಲಿ ನಿನ್ನ ಎಷ್ಟು ನಾ ಮೊರೆ ಇಡಲು ಕಷ್ಟವನು ಕಳೆವ ಭರ ಕಾಣಲಿಲ್ಲ ದೃಷ್ಟಿಲಿ ನೋಡದೆ ಹೋಗಿ ದಣಿಸುವ 1 ಸಾರ್ಥಕವು ಏನು ಎನ್ನ ಸಲಹದಿರಲು ಕೀರ್ತಿವಂತನು ಎನಿಸಿಕೊಂಡು ಕಾಯದಿರೆ ಅಪಕೀರ್ತಿ ಬಾರದೆ ನಿನಗೆ ಅಧಿಕ ಜನರೊಳಗೆ 2 ಧಾರುಣಿಯೊಳಧಿಕರಿನ್ನಾರು ನಿನಗಿನ್ನು ತೋರು ಮಾರಜನಕನಾದ ಮಹಾಮಹಿಮನೆ ಧೀರ 'ಹೊನ್ನಯ್ಯ ವಿಠ್ಠಲ’ ದೀನ ರಕ್ಷಕನೆಂದು ಸಾರುತದೆ ನಿಮ್ಮ ಕೀರ್ತಿ ಸಕಲ ಲೋಕದಲಿ 3
--------------
ಹೆನ್ನೆರಂಗದಾಸರು
ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ