ಒಟ್ಟು 1347 ಕಡೆಗಳಲ್ಲಿ , 97 ದಾಸರು , 1063 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ ಪ ನಿನ್ನ ಜನುಮದ ದಿನವಿದು ನೋಡೊಘನ್ನ ತರದ ಸಂತೋಷ ನೀಡೊಬನ್ನವನ್ನು ನೀನಿಂತೀಡಾಡೊಮನ್ನಿಸಿ ಎನ್ನನು ದಯದಿ ಕಾಪಾಡೊ 1 ವನಿತೆ ಅಹಲ್ಯೆಯ ಶಾಪವ ಹರಿದೆದನುಜರುಪಟಳ ತಾಪವ ತರಿದೆಮನುಜರೆಲ್ಲರ ಧರ್ಮದಿ ಪೊರೆದೆಘನ ಸೌಖ್ಯವ ಭೋಗಿಸುವಂತಿರದೆ 2 ಕುಣಿಯುವದು ಮುದದಲಿ ಭಕ್ತರ ಗಡಣದಣಿಯದು ನೋಡೈ ಸೀತಾರಮಣಗುಣಿ ನೆ ಸುಖವಕೊಡು ಕರುಣಾಭರಣಮಣಿವೆ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ರಾಮಚಂದ್ರ ಹರಿ ವಿಠಲ | ನೀನಿವನ ಸಲಹೋ ಪ ಕರ ಪಿಡಿದು | ಕಾಮಿತವನಿತ್ತುಅ.ಪ. ಕರ ಪಿಡಿಯಯ್ಯ | ಪ್ರಹ್ಲಾದ ವರದಾಮರುತ ಮತ ದೀಕ್ಷೆಯಲಿ | ದೃಢವಾದ ಮತಿಯಿತ್ತುವರಗಳನೆ ನೀಡುವುದು | ಮರುತಾಂತರಾತ್ಮಾ 1 ತಾರತಮ್ಯವ ತಿಳಿಸೊ | ಪಂಚ ಭೇಧವ ತಿಳಿಸೋಕಾರ್ಯ ಕಾರಣ ನೀನೇ | ಬೇಡುವೆನು ನಿನ್ನಾಹರಿಯು ಸರ್ವೋತ್ತಮನು | ಮರುತ ಜೀವೋತ್ತಮನುನಿರುತ ನೀ ಸುಜ್ಞಾನ | ಅರಿವನೀಯುತ ಸ್ವಾಮೀ2 ನಾನು ನನ್ನದು ಎಂಬ | ಸಂಸ್ಕಾರವನೆ ಕಳೆದುನೀನು ನೀನೇ ಎಂಬ | ಉಪಾಯ ಒಲಿಸೇಕಾಣಿಸೋ ಹೃದ್ಗುಹದಿ | ಗಾನಲೋಲನೆ ದೇವಕೊನೇರಿ ವಾಸ ಹರಿ | ಪ್ರಾರ್ಥಿಸುವೆ ನಿನ್ನಾ 3 ಪತಿ ಅದ್ವೈತ ಸಿರಿ ಜಾನಕೀ ಪತಿಯೇ 4 ಕರ | ಪಿಡಿದು ಉದ್ಧರಿಸುತಲಿಪೊರೆಯೊ ಗುರು ಗೋವಿಂದ | ವಿಠಲ ಕಾರುಣ್ಯ 5
--------------
ಗುರುಗೋವಿಂದವಿಠಲರು
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ
ರಾಮದೂತ ನËಮಿಭಕುತ ಕಾಮಿತದಾತ ಸುರಶೇವಿತ ಪ ಈ ಮಹಿಯೊಳೂ ಗ್ರಾಮಕೂಡ್ಲಿಗಿ ಧಾಮಮಾರುತ ಪಾಹಿಸತತಅ.ಪ ಭೂಮಿಸುತೆಯ ಕ್ಷೇಮವಾರ್ತೆಯ ರಾಮಗರುಹಿದ ಪದಕೆರಗಿದ ಹೇ ಮಹಾತ್ಮನೆ ಪ್ರೇಮದಿ ರಘು ರಾಮ ನೀಡಿದ ಬ್ರಹ್ಮನ ಪದ 1 ಇಂದು ಕುಲದಿ ಬಂದು ಕೌರವ ವೃಂದ ಮಥಿಸಿದೆಯಾ ಪಾಂಡು ತನಯ ಪೊಂದಿದಿಯಾ ನಂದಗೋಪನ ಕಂದನ ಕೃಪೆಯಾ ಪಾಲಿಸಯ್ಯಾ 2 ವ್ಯಾಸಶಿಷ್ಯ ಯತೀಶ್ವರ ತವ ಶಾಸ್ತ್ರದಿ ಮತಿಯಾ ಕರುಣಿಸಯ್ಯಾ ಶ್ರೀಶಕಾರ್ಪರ ವಾಸ ಶ್ರೀನರ ಕೇಸರಿಗೆ ಪ್ರೀಯ ಮಧ್ವರಾಯಾ 3
--------------
ಕಾರ್ಪರ ನರಹರಿದಾಸರು
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ ಪ ತಾಮರಸಸಖ ಸುವಾಂಶಾಬ್ಧಿಶರ ತ್ಸೋಮಾ ಕಮಲಧೀಮ ಅ.ಪ. ಅಜ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ 1 ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ ನಾಭಿಜನ್ಮನಿಹ ನಗವರ ಸ್ಥಾನಕೆ ಬಂದ ಶುಭಗುಣ ವೃಂದಾ ವೈಭವದಿಂದಲಯೋಧ್ಯಾ ನಗರದಿ ಮೆರೆದಾ ಕಾಮಿತವೆÀರೆದಾ ಸ್ವಾಭಿಮಾನದಲಿ ಸತಿಯಳಿಗಿತ್ತನು ವರವಾ ದೇವರ ದೇವಾ 2 ಜಾಂಬವಂತನಿಗೆ ಜಾನಕಿರಮಣನು ಇತ್ತ ತನ್ನಯಧ್ಯಾತ ಸಂಭ್ರಮದಲಿ ವೇದಗರ್ಭನೊಡನಾಡ್ದಾ ಮುಕ್ತಿಯ ನೀಡ್ದಾ ಕುಂಭೀಶ್ವರನ ಸುಕೋಶದಿ ಬಹುದಿನ ವಾಸ ವೆಸಗಿದನೀಶಾ ಒಲಿದಾ ಮೋದದಿ ನಲಿದ 3 ಅಲವಬೋಧಮುನಿ ಅತಿಮೋದದಲರ್ಚಿಸಿದ ಸಲೆ ಮೆಚ್ಚಿಸಿದ ಇಳೆಯೊಳು ಬಹು ಯತಿಕರ ಪೂಜಿತನಾದ ಲೀಲ ವಿನೊದಾ ಕಳೆದ ಮನದೊಳು ಪೊಳೆದ ಪ್ರೀಯ ಕವಿಜನಗೇಯ 4 ವಾರಿಧಿಬಂಧನ ವಾನರ ನಾಯಕರಾಳ ದೈತ್ಯರ ಸೀಳ್ದಾ ಪದಾಂಬುಜನೀತಾ ತ್ರಿಗುಣಾತೀತ ಆರಾಧಿಪರಿಗೆ ಅಖಿಳಾರ್ಥಗಳನು ಕೊಡುವಾ ದುರಿತವ ತಡೆವ ನೀರಜಾಕ್ಷ ಜಗನ್ನಾಥ ವಿಠ್ಠಲ ನಿಶ್ಚಿಂತಾ ಸೀತಾಕಾಂತ 5
--------------
ಜಗನ್ನಾಥದಾಸರು
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ರಾಮಾನುಜ ಮತೋದ್ಧಾರಕತಾಮಸಗುಣಪಾಶಗಿರಿವಜ್ರದಂಡ ಪ ವ್ಯಾಸರ ತೋಳೆಂದು ನಂದಿಯ ಧ್ವಜದಲ್ಲಿಹೇಸದೆ ಕಟ್ಟಿ ಪೂಜಿಪರು ನೋಡವ್ಯಾಸರದೊಂದು ತೋಳಿಗೆ ಶಿವಶರಣನಸಾಸಿರ ತೋಳ್ಗಳ ತರಿದ ನಮ್ಮಯ್ಯ 1 ಹರಿ ಎಂಬ ಶಬ್ದವ ಕೇಳಿ ಪಿಟ್ಟಕ್ಕನುಹರನ ಹೊಟ್ಟೆಯಲ್ಲಿ ಪುಟ್ಟುವೆನೆಂಬಳುಹರಹರ ಎಂಬ ಶೈವರ ಏಳ್ನೂರುಶಿರಗಳನರಿದನು ನಮ್ಮ ತಾತಯ್ಯ2 ಪಾದ ಮೇಲು ತಿಳಿದು ನೋಡಣ್ಣ 3 ಲಿಂಗವೆ ಘನವೆಂದು ಹೆಚ್ಚಿ ಕುಣಿದಾಡುವಸಂಗನ ಶರಣರೆಲ್ಲರು ಕೇಳಿರಿಲಿಂಗಪ್ರಸಾದವು ಮುಟ್ಟದಂತಾಯಿತು ನಮ್ಮರಂಗನ ಪ್ರಸಾದವು ಲೋಕಪಾವನವು 4 ಧರೆಯೊಳು ವಿರಕ್ತರು ವೀರ ಪವಾಡವಇರಿದು ಎಬ್ಬಿಸುವೆವೆಂದಾಡುವರುಹರಿಯ ನಾಮಾವಳಿಯ ಅನುಮಾನವಿಲ್ಲದೆಯೆಧರಿಸಿದಲ್ಲದೆ ದೊರೆಯದು ಗತಿಯಣ್ಣ 5 ಹರಬಂದು ಓಂಕಾರ ಗುರುವೆ ಎನ್ನುತ ಕೃಷ್ಣನರಮನೆಯ ಮುಂದೆ ಭಿಕ್ಷವ ಬೇಡಲುಹರಿಯುಂಡ ಮೇಲೆ ಪ್ರಸಾದವ ನೀಡಲುಹರ ಉಂಡು ಬ್ರಹ್ಮ ಹತ್ಯೆ ಕಳಕೊಂಡ 6 ಶಿವ ಮಹಾದೇವನು, ಧರೆಗೆ ಹರಿಯೆ ದೈವಭುವನಕ್ಕೆ ಹರಿಹರರೇಕಸ್ಥರುಭವರೋಗ ಹರ ಕಾಗಿನೆಲೆಯಾದಿಕೇಶವನವಿವರ ತಿಳಿದು ಭಜಿಸಿರೊ ಭಕ್ತ ಜನರು7
--------------
ಕನಕದಾಸ
ರುದ್ರ ದೇವರು ಕಂಟಕವ ಪರಿಹರಿಸೊ ಶ್ರೀ ಕಂಠಮೂರುತಿಯೇ ಪ ಬಂಟನೆಂದೆನಿಸೆನ್ನ ವೈಕುಂಠಮೂರುತಿಗೇ ಅ.ಪ ತಂಟೆಸಂಸಾರದ ಲಂಪಟದಲೆನ್ನ ಮನ ಮರ್ಕಟದÀ ತೆರದಿ ಪರ್ಯಟನ ಮಾಡೆ ಅಂಟಿಕೊಂಡಿಹ ಈ ಭವಾಟವಿಯ ದಾಂಟಿಸುವೆ ನೆಂಟ ನೀನಹುದಯ್ಯ ಶಿತಿಕಂಠದೇವಾ 1 ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲ ಧೂರ್ಜಟಯೆ ನೀನೆ ಭವವರ್ಜಿತನ ಮಾಡೋ ದುರ್ಜಯವು ಎನ್ನ ಮನ ಆರ್ಜಿಸದೆ ಹರಿಭಕುತಿ ಪತಿ ಜನಾರ್ದನನೊಳ್ ಮನ ನಿಲ್ಲಿಸೋ2 ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದ ಅಂಬುರುಹ ತೋರಯ್ಯ ಶಂಭೋ ಮಹಾದೇವಾ ಕುಂಭಿಣಿಯೊಳು ಒಂದೆ ಇಂಬುತೋರದು ಎನಗೆ ವೈರಿ ಭವಭಯ ಹಾರೀ 3 ವಾಮದೇವನೆ ಕಾಯೊ ತಾಮಸಮತಿ ಹರಿಸಿ ಶ್ರೀ ಮನೋಹರನಲ್ಲಿ ಸನ್ಮನವ ನೀಡೋ ಸೋಮಶೇಖರ ಸುರಸ್ತೋಮದಲಿ ನಿನ್ನಂಥ ಪ್ರೇಮಿಗಳ ನಾ ಕಾಣೆ ಉಮೆಯರಸ ಸಲಹಯ್ಯ 4 ಶಿಕ್ಷಕನು ನೀ ಜ್ಞಾನಚಕ್ಷುವ ನೀಡು ವಿರೂ ಪಾಕ್ಷಮೂರುತಿ ಶ್ರೀ ವೇಂಕಟೇಶನ ಭಕ್ತ ಈ ಕ್ಷಿತಿಯೊಳ್ ಉರಗಾದ್ರಿವಾಸವಿಠಲನ ಪ್ರ ತ್ಯಕ್ಷದಲಿ ನೋಳ್ಪ ಶ್ರೀ ತ್ರ್ಯಕ್ಷಮೂರುತಿಯೇ 5
--------------
ಉರಗಾದ್ರಿವಾಸವಿಠಲದಾಸರು
ರುದ್ರ ಮಹದೇವ ವೀರಭದ್ರ ಭದ್ರ ಮಾರ್ಗೋಪದೇಶಿ ಅದ್ರಿಕುವರಿ ವಲ್ಲಭ ಪ ಕ್ಷುದ್ರ ಖಳರ ಉಪದ್ರವ ಪರಿಹರಿಸಿ ಉದ್ರೇಕ ಮಾಡು ಸುಜ್ಞಾನ ಭಕ್ತಿ ವೈರಾಗ್ಯವ ಕದ್ರುಜಧಾರಿ ರೌದ್ರ ಮೂರುತಿಯೆ ಅ.ಪ ಪೊಂದಿಸು ಹರಿಭಕ್ತರ ಸಂದಣಿ | ತ್ರಿಶೂಲಪಾಣಿ ವಂದಿಪೆನು ಸುರಾಗ್ರಣಿ ಬಂದಿಹ ವ್ಯಾಧಿಯ ಕಳೆಯೊ ಕಂದÀರ್ಪಹರ ಕರುಣಾಕರ ಶಿವನೆ 1 ದಾತ ಸಂಭೂತ ಭೂತಗಣಾಧೀಶ ವಿಖ್ಯಾತ ವಾತನೊಡೆಯನ ಗುಣ ಸಂಪ್ರೀತಿಯಲಿ ಪೊಗಳುವಂತೆ ಆತುರಮನ ನೀಡೊ ಯಾತರವನಲ್ಲವೊ 2 ನಿಟಿಲಾಕ್ಷಾಂಧಕಾಸುರ ಸಂಹಾರಿ | ಜಟಮಕುಟಧಾರಿ ಸ್ಪಟಿಕ ಹಾರಾಲಂಕಾರಿ ವಟು ವಿಜಯ ರಾಮಚಂದ್ರವಿಠಲನ ಸಂ ಪುಟದೊಳು ನಟಿಪಂತೆ ಪಟುತರ ಮಾಡೋ 3
--------------
ವಿಜಯ ರಾಮಚಂದ್ರವಿಠಲ
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ರುದ್ರದೇವರು ಇಂದು ಶೇಖರ ಶಿವ ನಂದಿವಾಹನ ಶೂಲಿ ಸ್ಕಂಧಗಣಪರ ತಾತ ದಂದಶೂಕಕಲಾಪ ಪುರಂದರ ಮುಖಸುರ ವೃಂದವಿನುತ ಪಾದಾದಿಂದ ಶೋಭಿತ ದೇವ ಕಂದು ಕಂಧರ ತ್ರಿಪುರ ಸಂದೋಹಹರ ಹರ ವಂದಿಸಿ ಬೇಡುವೆ ಫಲ ಸಂದೇಹಮಾಡದಲಿತ್ತು ನಂದ ನೀಡುವಿ ನೀನೆಂದು ನಿನ್ನಯ ಬಳಿಗೆ ಇಂದು ಪೂರ್ತಿಸೋ ಗುರೋ ಗಂಧವಾಹನ ತನಯಾ ಇಂದಿರಪತಿ ಗುರುಜಗನ್ನಾಥವಿಠಲಾ ನಂದಾ ಬಡುವನಿದಕೆ ಸಂದೇಹ ಇನಿತಿಲ್ಲಾ
--------------
ಗುರುಜಗನ್ನಾಥದಾಸರು
ರುದ್ರದೇವರು ಪಾಲಿಸೊ ಪಾರ್ವತಿ ರಮಣಾ ನಿನ್ನಪಾಲಿಗೆ ಬಂದೆನೊ ಪಾಲಿಸೆನ್ನದೆ ಪ ವೇದವೇದಾಂತ ಪುರಾಣಗಳೆಲ್ಲನೀದಯಾಳುವೆಂದು ಪೊಗಳುತಿರೆಹಾದಿಬೀದಿ ದೇವತೆಗಳಿಗೆರಗಿ ನಾಖೇದಬಟ್ಟು ನಿನ್ನ ಮೊರೆ ಹೊಕ್ಕೆ ಮಹದೇವ 1 ತುಂಗಾ ಕುಮದ್ವತಿ ಸಂಗಮೇಶ್ವರ ನಿನ್ನಕಂಗಳಿಂದಲಿ ನೋಡೂ ಕರುಣದಿಂದಕಂಗೆಟ್ಟು ಕಳವಳಿಸುತಿರೆ ನೀ ನೋಡಿಭಂಗಪಡಿಸಿದರೇನು ಭಾಗ್ಯವು ಬರುವದು 2 ಆಪತ್ತು ಕಳೆದು ಸಂಪತ್ತು ನೀಡಿ ನಿನ್ನರೂಪವ ತೋರಿಸೋ ತ್ವರಿತದಲಿಗೋಪತಿಕೃಷ್ಣವಿಠಲನೆಲ್ಲ ಲೋಕವವ್ಯಾಪಿಸಿರಲು ಸಂದೇಹ ವ್ಯಾತಕಯ್ಯಾ 3
--------------
ಗೋಪತಿವಿಠಲರು
ರುದ್ರದೇವರು ಶಿವನೆ ನಾ ನಿನ್ನ ಕರೆಯುವೆ ಬಾರೊ ಪ ಗಿರಿಜಾಮನೋಹರನೆ ಶಂಕರನೆ ಅ.ಪ. ನೀಲ ಹರಳಿನಂತ್ಹೊಳೆವುದು 1 ಬಾಲಮುನಿಯು ತನ್ನ ಕೇಳಿ ಮೃತಿಯನುನೀಲ ಲೋಹಿತಾ ನಿನ್ನ ಸೇವೆಯ ಮಾಡಿದನುಕಾಲನ ಜೈಸುತ ಬಹಳ ಆಯುಷ್ಯವಿತ್ತವ್ಯಾಳಚಲಾಂತಕ ಶ್ರೀಶೈಲದಿ ನಿಂತೆ 2 ಮಂದರುಗ್ಮಿಯು ತಪದಿಂದ ಒಲಿಸಲುಬಂದು ಶಾಪವ ನೀಡಿ ತಂದಿ ಕ್ಷಿತಿಯೊಳುಇಂದಿರೇಶನ ದ್ವೇಷ ಎಂದು ಮಾಡುವಿ ಶಾಪಅಂದೇ ಬರುವದು ಮಂದಿರಕೋ ಇತಿ 3
--------------
ಇಂದಿರೇಶರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ