ಒಟ್ಟು 7317 ಕಡೆಗಳಲ್ಲಿ , 130 ದಾಸರು , 4853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಏನು ಹಾವಳಿ ಮಾಡುತಿಹನಮ್ಮ ಗೋಪಮ್ಮ ಕೇಳೆಏನು ಹಾವಳಿ ಮಾಡುತಿಹನಮ್ಮ ಪ ಏನು ಹಾವಳಿ ಮಾಡುತಿಹಮನೆ ಓಣಿಯಲಿ ಕ್ರೀಡಿಸುವ ಮಕ್ಕಳನುತಾನು ಅಳಿಸುವ ಹಿಡಿಯ ಪೋಗಲುವೇಣುನೂದುತ ಮೋಹಿಸುವನು ಅ.ಪ. ಮನಿಯೊಳು ತಾ ಪೊಕ್ಕು ನೋಡುವನೆ ಪಾಲ್ಮೊಸರ ಕೊಡಗಳಮನಸಿನಂದದಿ ತಿಂದು ಒಡೆಯುವನೆತಿನಿಸಿ ಬೆಕ್ಕಿಗೆ ಕ್ಷಣವು ತಡೆಯದೆ ವನಿತೆರೆಲ್ಲರು ಹಿಡಿಯ ಕೂಸಿನತನುವು ಧರಿಸಿ ನಿಂತ ಕಟಿಯಲಿ ಸ್ತನವ ತಿಂಬುವ ವನರುದೇಕ್ಷಣ1 ತರುಗಳಾಲಯದಲ್ಲಿ ತಾ ಬರುವಕರೆಸದಲೆ ಮುಂಚಿತ ತೊರಿಸಿ ಮೊಲೆಗಳ ಪಾಲ ತಾ ಕುಡಿದಕರಸಿಕೊಳ್ಳದೇ ಸುರಭಿ ತಿರುಗಲು ಸರಣಿಯೊಳು ತಾ ನಿಂತು ನಗುತಲಿ ತರುಣಿಯರ ಹೆರಳ್ಹಿಡಿದುಜಗ್ಗುತ ಕರದಿ ಸಿಗದಲೆ ಭರದಿ ಓಡುವ 2 ಕೂಸಿನಂದದಿ ತೊಡೆಯೊಳಾಡುವನೆ ಕ್ಷಣದೊಳಗೆ ಪತಿಗಳವೇಷಧರಿಸಿ ಮೋಸ ಮಾಡುವನೆತಾಸು ಘಳಿಗೆ ಬಿಡದೆ ನಮ್ಮ ನಿವಾಸ ಮಾಡುತ ಕಾಡುತಿಹಇಂದಿರೇಶವಚ್ಛವ ಸಾಕು ಮಾಡು ಹೇ ಶುಭಾಂಗಿ3
--------------
ಇಂದಿರೇಶರು
ಏನು ಹೇಳಲಿ ನಿನಗ ಮನವೇ ನಾ ಇನ್ನೇನು ಹೇಳಲಿ ನಿನಗೆ ಶ್ರೀನಾಥನಂಘ್ರಿಯ ನೀನೋಲೈಸದಿಹುದೇನೋ ಪ ಮನುಷ್ಯದೇಹ ಧರಿಸಿ ಸದ್ಗತಿಯ | ಜ್ಞಾನದಾರಿ ತ್ಯಜಿಸಿ ನೀ ಭಕುತಿ ಸುಖ | ಖೂನವಿಲ್ಲದೆ ಚರಿಸಿ | ಏನೂ ಇಲ್ಲದೆ ವಿದ್ಯಾ ಮಾಟಕ ಭ್ರಮಿಸಿಹುದೇನಾ 1 ವಿಷಯ ಸುಖ ಹರಿದು ಸಂಸಾರದಿ | ನಿಶಿದಿನದಲಿ ಸವೆದು ತಾಪತ್ರಯ | ಘಸಣಿಯೊಳಗ ಕುದಿದು | ಪಶುವಿನ ಪರಿಯಲಿ ಯಚ್ಚರ ಮರೆದಿಹುದೇನಾ 2 ಇನ್ನಾರೆ ಹಿತವರಿಯೋ ಸದ್ಗುರುವಿನ | ಮನ್ನಿಸಿ ಗತಿ ಪಡಿಯೋ ಹರಿಯ ನಾಮವಾ | ಚನ್ನಾಗಿ ನಂಬಿ ನಡಿಯೋ | ಸನ್ನುತ ಮಹಿಪತಿ ಬೋಧಾಮೃತ ಸವಿಯದೇನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಹೇಳಿದರೇನು ಪಾಮರ ಜ್ಞಾನಿಯಾಗಬಲ್ಲನೇ | ನಡೆವ ಮನುಜಗೆ ಪ ಎತ್ತಿಗುತ್ತಮ ಲಿಂಗ ಮುದ್ರೆಯನ್ನೊತ್ತಿದ್ದರೆ ಬಸವನೆಂಬರು | ಕತ್ತೆಯನು ಹಿಡಿ ತಂದು ವತ್ತಲು ಕತ್ತೆಯಲ್ಲದೆ ಬಸವನಪ್ಪುದೆ 1 ಚಿನ್ನ ಬಿಳುಪಿರೆ ಪುಟವನಿಕ್ಕಲು ಬಣ್ಣ ಹೆಚ್ಚುತ ಬಾಹುದು | ಬಿಟ್ಟುದೋರುದೆ 2 ಸ್ವಾತಿ ಜಲಬಿಂದುದುರೆ ಸಿಂಪಿನೊಳಿಂತು ಮೌಕ್ತಿಕವಾಹುದು | ಅಂತ ಘಲ್ಲಿಯೊಳಹದೆ ಜಗದೋಳು ತಾತ ಮಹಿಪತಿ ಕಂದ ಸಾರಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಹೇಳಿದರೇನು ಹೀನ ಮನಕ | ತಾನು ಎಚ್ಚರ ಹಿಡಿಯ ದನಕಾ ಪ ಬೂದಿಯೊಳಗ ಹೋಮ ಮಾಡಿದಂತೆ | ಬೋಧಾನುಗೃಹ ಕಳವದು ಮರೆತಕೆ 1 ಹರಿ ಕೀರ್ತನೆ ಇರಲಿಲ್ಲಾ | ಬರಡು ಮಾತಿಗೆ ಸುಖ ಪಡುದಲ್ಲಾ 2 ಒಮ್ಮೆಯಾದರೂ ಹರಿ ಹರಿಯಂದು | ಝಮ್ಮೆನೆವೆ ಪಶ್ಚಾತಾಪ ಬಾರದೆಂದು 3 ಗಾಳಿಯಂತೆ ಓಡಾಡುವದು ನೋಡಿ | ಕಾಲೂರಿ ನಿಲ್ಲದು ಮತಿಗೇಡಿ 4 ತಂದೆ ಮಹಿಪತಿ ದಯವಾಗದನಕ | ಒಂದು ಹಿಡಿಯದು ಸ್ವಹಿತ ವಿವೇಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನುಕಾರಣ ಯೆನಗೆ ತಿಳಿಯದಿದೇಕೋ ನೀನುದ್ಧರಿಸುವುದಕೋ ಕೆಡಿಸುವುದಕೋ ಕೃಷ್ಣ ಪ ಸುರರು ಹಬ್ಬವ ಕೆಡಿಸೆ ಸುರಪತಿಯು ಕೋಪದಲಿ ಭರದಿಂದ ಕಲ್ಲು ಮಳೆಯನು ಕರೆಯಲಾಗ ಕಿರುವೆರಳ ತುದಿಯಲ್ಲಿ ಗಿರಿಯ ನೀನಾಂತು ಹಗ ಲಿರುಳೇಳು ದಿನ ಬೋವಿಗಳಂತೆ ಕೊಡೆವಿಡಿದ 1 ಭವ ತಿಮಿರ ಶರಧಿಯದಾಂಟಿಸುವ ವೋಲು ಸುರಿವ ಮಳೆಗತ್ತಲೆಗೆ ಬೋವಿಯಾಗಿ ಕರದಲ್ಲಿ ಕೊಡೆ ದೀವಟಿಗೆಯ ಪಿಡಿದೆನ್ನ ಮನೆ ಪರಿಯಂತ ಕಳುಹಿ ಕ್ಷುಧೆಯಾಯಿತೆಂಬುದೇನು 2 ಕೊಟ್ಟ ಕಜ್ಜಾಯಂಗಳಿಗೆ ನೀ ಸೆರಗೊಡ್ಡಿ ಕಟ್ಟಿ ಕೊಂಡೊಯ್ದು ಲಕ್ಷ್ಮಿಯ ಬಳಿಯೊಳು ಇಟ್ಟರ್ಧವನು ಎನ್ನ ಸಂತತಿಗೆ ನೀಕರುಣಿಸಿದೆ ಇಷ್ಟರೊಳಗೆ ವೈಕುಂಠಪತಿ ಚೆನ್ನಿಗರಾಯಾ 3
--------------
ಬೇಲೂರು ವೈಕುಂಠದಾಸರು
ಏನುಕೌತುಕವೊ ಮ'ಪತಿರಾಯರದು ಘನಮ'ಮೆ ತಿಳಿಯದುಮೋಹಶಾಸ್ತ್ರಗಳ ರಚಿಸಲು ಬೇಕೆಂದು ಹರಿಯಾಜ್ಞೆಯನರಿದುಈ ಮ'ಯೊಳವತರಿಸಿ ಬಂದನೆಂದು ರುದ್ರಾಂಶನೆ ಅಹುದುಪದ್ಯ ಪದ್ಯಗಳಲಿ ಅತಿಗೂಢ ಅರ್ಥ 'ಹುದು ಮೂಢರಿಗೆ ತಿಳಿಯದದು 5ಮ ಎನ್ನಲು ಮನ ಪ್ರಸನ್ನವಾಗುವದು ಮ'ಮೆಯ ತಿಳಿಯುವದು' ಎನ್ನಲು 'ಡಿಸುವದು 'ತದಹಾದಿ ಸುಜನರ ಕೈವಾರಿಪ ಎನ್ನಲು ಪರಿಪರಿಯ ಕಷ್ಟದೂರಾ ಪರಮಾದರಕೆದ್ವಾರಾತಿ ಎನ್ನಲು ತಿಳಿಯಾಗುವದೈ ಬುದ್ಧಿ ಸರ್ವಾಂಗಶುದ್ಧಿ 6ಮ'ಪತಿರಾಯರು ತಪವಗೈದಸ್ಥಾನಾ ಅಲ್ಲಿಯ ವೃಂದಾವನಾಮೂರುಕ್ಷೇತ್ರ ಶಾಲಿಗ್ರಾಮದ ಸವನಾ ಮ'ಮೆಯು ಪರಿಪೂರ್ಣಾತೀರ್ಥ ಭಾ'ಯೊಳು ಸುರನದಿ ಅವತರಣಾ ಮ'ಪತಿ ಸುತಕೃಷ್ಣಾಕರುಣಾನಿಧಿ ಭೂಪತಿ'ಠ್ಠಲ ಪ್ರಿಯನಾ ಸಂತತ 'ಡಿಚರಣಾ7
--------------
ಭೂಪತಿ ವಿಠಲರು
ಏನುಗತಿ ಏನುಗತಿ ಇನಕುಲೇಶ ಹೀನ ವಿಷಯದಿ ಮನ ಶ್ವಾನನಂತಿಟ್ಟ ಎನಗೇನು ಪ ಮೂರು ಗುಣಗಳಿಂದ ಮೂರು ತಾಪಗಳಿಂದ ಮೂರು ಈರೆರಡೊಂದು ಮದಗಳಿಂದ ಮೂರು ಐದಾರಿಂದ ಮರೆತು ತನು ಮೂಲಗಳ ಸ್ಮರಿಸದೇ ನರಹರಿಯ ನರಕಕ್ಕೆ ಗುರಿಯಾದ ಎನಗೆ 1 ಅತಿಥಿಗಳಿಗನ್ನ ಬಲು ಹಿತದಿ ಕೊಡದೆಲೆ ಪರ ಸತಿಯ ಸಂಗದಿ ನೆಲಸಿ ಹಿತವ ಮರೆದು ರತಿಪತಿಪಿತ ನಿನ್ನ ಸ್ತುತಿಸದೆ ಮತಿಗೆಟ್ಟು ಕ್ಷಿತಿಯೊಳಗೆ ನಾನೊಬ್ಬ ಯತಿಯಂತೆ ಚರಿಪ 2 ಇನ್ನಾದರೆನ್ನ ಪಾವನ್ನ ಮಾಡಲು ನಿನ್ನ ಘನ್ನ ಉಪಕೃತಿ ಮರಿಯೆ ಶ್ರೀ ನರಹರಿಯೆ ನಿನ್ನ ಪೊರತನ್ಯರನು ಮನ್ನಿಸುವರ ಕಾಣೆ ಬೆನ್ನ ಬಿದ್ದೆನೊ ದಯವನ್ನು ಮಾಡೆಲೋ ಬೇಗ3
--------------
ಪ್ರದ್ಯುಮ್ನತೀರ್ಥರು
ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಧ್ರುವ ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1 ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2 ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನುತ್ತೀರ್ಣಾಗುವೆನು | ಗುರುವಿಗೆ ಪ ಜನಿತು ಪನಿತನು ವಿದ್ಯದಾಯಕನು | ಉಣಲುಡಲೀವನು ಭಯವ ನಿವಾರಿಪನು 1 ತನ್ನ ತಾನೊಲಿದಾ ಕರುಣವಗರದಾ | ಚಿನುಮಯ ಸುಖದಾ ದಾರಿಯ ದೋರಿಸಿದಾ 2 ತಂದೆ ಮಹಿಪತಿ ಸ್ವಾನಂದ ಮೂರ್ತಿಕಂದನ ಸಾರ್ಥಿ ಆಗಿಹ ಘನಕೀರ್ತಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನುಮಾಡಿದಿ ಬಂದು ಈ ನರದೇಹದಿ | ಜ್ಞಾನ ಸಾಧನ ಹೇಳು ಪ ಭವ | ಕಾನನವಿಡಿದೆಲ್ಲೋ ಅ.ಪ ಮಾನವ ಜನುಮದಿ | ನಿನ್ನ ತಂದನಲ್ಲೋ ಪ್ರಾಣೀ | ಪನ್ನಗಶಯನನ ಘನ್ನ ವಿಶ್ವಾಸದ | ಲಿನ್ನು ವಿರಹಿತಾದೆಲ್ಲೋ ಪ್ರಾಣಿ 1 ಕಂಡಪಥಕ ಹರಿದಂಡಲೆಯದೆನೆಲೆ | ಗೊಂಡವರೊಳು ಕೂಡೋ ಪ್ರಾಣಿ | ಖಂಡಿಸಿ ಸಂಶಯ ಪುಂಡರೀಕಾಕ್ಷನ | ಕೊಂಡಾಡುತ ಬಾಳೋ ಪ್ರಾಣಿ 2 ಹಿಂದಿನ ಮರವಿಗೆ ಇಂದಿಗೆ ನೀರೆರಿ | ಮುಂದ ಸ್ವಹಿತ ನೋಡೋ ಪ್ರಾಣಿ | ತಂದೆ ಮಹಿಪತಿ ನಂದನ ಪ್ರಭುದಯ | ದಿಂದ ಸಾರ್ಥಕ ಮಾಡೋ ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆ ನಾರಿ ಕನಸುತೋರಿ ಹಾರಿತಲ್ಲೆ ಪ ಫೋರ ಪಾತಕವ ಕೊಂದೂ ಒಳ್ಳೆ ತಾರೆಬೆಳಕಿನ ಚಂದಾ ಅ.ಪ ಇಂದಿರಾಪತಿ ತಾ ಮಂದಹಾಸದೊಳು ಕುಂದರದನೆಯ ಕೂಡಿ ನನ್ನ ನಿಂದೆ ತಂದ ಸರಿಮಾಡಿ ಕಳ್ಳ ಬಂದು ಪೋದ ಕರತಂದು ತೋರೆಮತ್ತೆ ನಿಂದು ಭಜನೆಯ ಮಾಡಿ 1 ಬಾರೊ ಧೀರ ಅಂದ್ರೆ ನೀರ ಆಟದೊಳು ತೋರಿ ಮಾಡಿದನು ಮೋಸಾ ಭವ ದೂರನಾದ ವೆಂಕಟೇಶಾ ರಂಗ ದಾರಿಕಾಣೆ ಕಂಡು ತೋರೋ ನಿನ್ನ ಪಾದ ಗುರುವು ತುಲಸಿ ರಾಮದಾಸ 2
--------------
ಚನ್ನಪಟ್ಟಣದ ಅಹೋಬಲದಾಸರು
ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು