ಒಟ್ಟು 5714 ಕಡೆಗಳಲ್ಲಿ , 131 ದಾಸರು , 3405 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಿತಾರ್ಥದಾಯಿನೇ | ತುಳಸಿ ಕಲ್ಯಾಣಿ ಶ್ಯಾಮಾ ವಿಶಾಲನಯನೇ ಪ ಹಸುರು ಕಂಚುಕಧರೆ ಆನಂದ ರಸಿಕೇ ಶಶಿ ಬಿಂಬಸಮ ಸುಂದರಮುಖೇ ಉಸಿರುಬಿಡದೆ ನಿನ್ನ ಕೊಸರುವೆ ವರಗಳ ಹಸನಾಗಿ ಕೊಡುವೆನೀ ಅತಿಶಯದಿಂದಲಿ 1 ಬಣ್ಣಾದ ಸರಪಳಿ ಹಾಕಿದ ಕೊರಳೇ ಬಟ್ಟ ಮುತ್ತಿನ ಹರಳೇ ಹುಣ್ಣಿಮೆ ಚಂದ್ರನಂತೆ ಸುಂದರಮುಖದವಳೇ ಪನ್ನಂಗ ಶಯನಗೆ ಮಾಡಿದೆ ಮರುಳೇ 2 ಬಡನಡುವಿಗೆ ಒಡ್ಯಾಣಾ | ರುಳಿ ಪೈಜಣ ಕಡಗಾ ಕಂಕಣ ಹೊಳಿಯುವ ಜಾಣೆ | ನಡೆದು ಬಾರೆ ಶ್ರೀ ನರಸಿಂಹವಿಠಲನ ಪಾದ ಬಿಡದೆ ಭಜಿಪೆನಮ್ಮ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ
ಕಾಯಬೇಕು ಶ್ರೀ ತ್ರಿವಿಕ್ರಮÁಯಜನಯ್ಯ ಕಂಜನಯನ ಪ . ಆರು ನಿನ್ನ ಬಣ್ಣಿಪರು ಅಮರಗುಣನಿಲಯಸಾರಿದ ದೇವೇಂದ್ರನಿಗೆ ಸಕಲಸಂಪದವಿತ್ತೆ 1 ಈರೇಳು ಲೋಕಂಗಳನು ಇಷ್ಟಷ್ಟು ಎನ್ನದ ಮುನ್ನಈರಡಿಯ ಮಾಡಿದೆ ನೀ ಮುಕುಂದ ಮುರಮರ್ದನ 2 ಪಾವನ್ನ ಗಂಗಾಜಲವು ಪಾದವೆಂಬ ಪದುಮವÀ ತೊ-ಳೆವ ನೀರುಗಡವಿನ್ನು ತೋರೊಮ್ಮೆ ಹಯವದನ 3
--------------
ವಾದಿರಾಜ
ಕಾಯಯ್ಯಾ ಎನ್ನದಯದೀ ಸಿಂಹಾದ್ರೀಶಾ ಪ ಅಖಿಲದೊಳಗೆ ಅತಿ ದುರ್ಜನ ಪ್ರಭೆಯಲಿ ನಿಖಿಳ ಧರ್ಮಗಳಡಗಲು ಕಂಡು ಭಕುತರ ಗೋಸುಗ ಅವತಾರವತಾಳಿ ಪ್ರಕಟಿಸಿದಿಳೆಯೊಳು ಚಿನ್ಮಯನೇ1 ಪರಿ ಸಾಧನದಿಂದಲಿ ದೇಹವ ನಿರುಪಮ ವಜ್ರದಂದದಿ ಮಾಡೀ ಮೆರೆವ ಗೋರಕ್ಷಗ ಬೋದಿಸ್ಯಕಲ್ಪಿತ ಶರೀರವ ಮಾಡಿ ನಿಲಿಸಿದೆಯ್ಯಾ2 ಅನಸೂಯಾ ಜಠರದಲುದ್ಭವಿಸಿ ಅನುದಿನ ಮುನಿ ಮಾನಸಲಿರುವಾ ಅನುಪಮ ಚರಿತನೆ ಮಹಿಪತಿ ನಂದನ ಮನ ದೈವಾಗಿಹೆ ಘನ ಕರುಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೆ ಶ್ರೀ ಹರಿ ಜಾಯೆ ಸಜ್ಜನಪ್ರೀಯೆ ಸುರಮುನಿ ಗೇಯೆ ಪ ಕಾಯ ನಿನ್ನದುಕಾಯೇ ಕರುಣಾಬ್ಧಿಯೇಅ.ಪ. ಪದ್ಮ ಮಂದಿರೆ ಪದ್ಮ ಗಂಧಿನಿಪದ್ಮಕುಚ ರಾಣಿ ಪದ್ಮಶರ ಮಾತೇಪದ್ಮ ಬಾಂಧವೆ ಪದ್ಮರಿಪು ತಾಯೆ ||ಪದ್ಮಿ ಪದ್ಮಾಕ್ಷಿ ಪದ್ಮಾಭಿನ್ನ ಪದ್ಮಪಾದ ಹೃ-ತ್ಪದ್ಮದೊಳಗಿಟ್ಟ ಮುದ್ದು ಮಹಾ ಲಕುಮೀ 1 ವೃಷ್ಟಿ ಗರೆಯಾಲುಈ ಕೊಲ್ಲೂರೊಳು ನೀ ಕರುಣದಿ ನಿಂದೀ 2 ನಿನ್ನ ಪಾದಾಬ್ಜವನ್ನು ಅನುದಿನಸನ್ನುತಿಸುವೆ ಚೆನ್ನ ವಿಜಯ ರಾ-ಯನ್ನ ಮನೆ ಮುಂದೆ ಕುನ್ನಿಯನ್ನೇ ಮಾಡಿ ಎನ್ನ ಪುಟ್ಟಿಪುದು ||ಪನ್ನಗವೇಣಿ ಘನ್ನ ದುರಿತಾಬ್ಧಿಯನ್ನೆ ದಾಟಿಸಿನಿನ್ನ ಆಳ್ವ ಮೋಹನ ವಿಠ್ಠಲ ರಾಯನ್ನ ಎನಗೆ ತೋರೆ 3
--------------
ಮೋಹನದಾಸರು
ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ಪ ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ 1 ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ 2 ಡಿಂಗರಿಗ ಮಾತ್ರ ನಾನಾಗಿಹೆನೆಂದು 3
--------------
ಕನಕದಾಸ
ಕಾಯೊ ಕರುಣಾಬ್ಧಿ ಗುರು ಎನಗೆ ದಯವುಳ್ಳ ಸ್ವಾಮಿ ನೀನಹುದೊ ಜಗದೊಳಗೆ ಧ್ರುವ ಶಿರದಲಭಯವ ನೀಡಿ ಕರುಣದಯದಲಿ ನೋಡಿ ಹರುಷ ಮನವನು ಮಾಡಿ ದುರಿತಭವ ಈಡ್ಯಾಡಿ ಗುರುತ ನಿಜ ಮಾಡರಹು ನೀಡಿ ಪರಮ ಗತಿ ಇದರಿಡಿ ವರಕೃಪೆಯ ಮಾಡಿ 1 ಒಂದು ಪಥವನು ತಿಳಿಸಿ ದ್ವಂದ್ವ ಭೇದವನಳಿಸಿ ಕುಂದ ದೋಷವ ತೊಳಿಸಿ ಒಂದರೊಳು ನಿಲಿಸಿ ನೆಲೆಗೊಳಿಸಿ ಸಂದು ಜನ್ಮಗಳಳಿಸ್ಯಾನಂದ ಸುಖ ಹೊಳಿಸಿ 2 ಕರುಣಿಸೊ ಗುರು ಎನಗೆ ಶರಣ ಹೊಕ್ಕಿದೆ ನಿಮಗೆ ದೋರುದನುಭವ ಈಗೆ ಕರಗಿ ಮನವೆರಗುವ್ಹಾಂಗೆ ಸ್ಮರಣ ಸುಖ ಎದುರಿಡು ಬ್ಯಾಗೆ ತರಣೋಪಾಯದಲೆನೆಗೆ ಪೊರೆಯೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಮಿತ ಫಲದ ಕಾಯೊ ಕಾಯೊ ಪ ಕಾಯೊ ಕಾಯೊ ಎನ್ನ ಕಾಯಜನಯ್ಯನೆ ಕಾಯದಿದ್ದರೆನ್ನ ಕಾವವರಾರೊ ಅ.ಪ ಎಂದೆಂದಿನ ಕರ್ಮಗಳನೆಣಿಸುತಲಿ ಕಂದಿಸಿ ಕುಂದಿಸಿ ಬಂಧಿಪರೇನೋ 1 ತಾಳಲಾರೆ ಈ ಕಾಲನ ಬಾಧೆಯು ಬೇಳುವೆ ನಿನ್ನಯ ಕಾಲಿಗೆ ಸ್ವಾಮಿ 2 ಆಲಸ ಮಾಡದೆ ಆರ್ತಿಗಳೋಡಿಸಿ ಪಾಲಿಪುದೆನ್ನನು ಪಾವನ ಮೂರ್ತೆ3 ಮಾಡಿದ ಪಾಪಗಳೋಡಿಸಿ ಸುಖದಿಂ ದಾಡಿಸು ಕಣ್ಣಿಗೆ ಕಾಣಿಸಿಕೊಂಡು 4 ವಾಸುದೇವವಿಟ್ಠಲ ನೀ ಎನಗಿನ್ನು ವಾಸಿ ಮಾಡಿಸಿ ಕೀರ್ತಿಯ ಪಡೆಯೊ 5
--------------
ವ್ಯಾಸತತ್ವಜ್ಞದಾಸರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು
ಕಾಲ ಕಳೆಯಬೇಡ ಮನವೇ ಮೂಳನಾಗಬೇಡ ಪ ಕಾಳು ಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲ ಮೋಹಿಸಿ ಹೊತ್ತು ಹಾಳುಮಾಡಿಕೊಂಡು ಅ.ಪ ನಿನ್ನೊಳು ಹುಡುಕಾಡಿ ಹರಿಯ ಉನ್ನತಕೃಪೆ ಪಡಿ ಕಣ್ಣುಮುಚ್ಚಿ ಪರರ್ಹೆಣ್ಣಿನ ಹೊಲೆಮೈ ಬಣ್ಣಕೆ ಮನಸೋತು ಠೊಣ್ಯನೆನಿಸಿಕೊಂಡು 1 ನೋಡಿ ತಿಳಿದು ಭವಮೂಲ ಹುಡುಕಾಡಿ ಹಿಡಿಯೋ ನಿಜವ ರೂಢಿಸುಖಕೆ ಮನನೀಡಿ ಸನ್ಮಾರ್ಗದ ಜಾಡು ತಿಳಿಯದೆಮತಾಡಣೆಗೊಳಪಟ್ಟು 2 ಅರಿತು ಶ್ರೀರಾಮಚರಣ ನಿರುತದಿ ಗುರುತು ಹಿಡಿಯೋ ಜಾಣ ಪರಲೋಕ ಸಾಧನ ಸುರತು ಷರತು ಮಾಡಿಕೊಂಡು ಪರಕೆ ಪರಮ ಪರತರ ಮುಕ್ತಿ ಸುಖ ಸುರಿ 3
--------------
ರಾಮದಾಸರು
ಕಾಲ ತಪ್ಪದು ನಿನಗೆಂದಿಗು ಮರುಳೆಒಳ್ಳಿತಾಗಿ ಕೇಳಿಕೋ ಹಿರಿಯರನು ಮರುಳೆನಾಳೆ ನಾಡದೋ ಆವಾಗಲೋ ತನು ನಿತ್ಯವಲ್ಲಕಾಲಕೆ ಸಿಕ್ಕಬೇಡ ಮರುಳೆ ಪ ಆಳುವ ಮಠಪತಿ ಊರಲ್ಲಿ ತನ್ನನ್ನುಹೂಳ್ಯಾರು ಎನಬಾರದೆ ಮರುಳೆಮೂಳ ಸಂಸಾರ ನೆಚ್ಚಲು ಕೆಡುವೆಆಲೋಚನೆ ಮಾಡಿಕೋ ಮರುಳೆ 1 ಮನವುಳ್ಳವರು ಇಹರೆ ಸಂಸಾರವೇನೆಂಬೆ ನೀನು ಸಂಗವ ಮರೆವೆ ಮರುಳೆಮಾನಿನಿ ಸುತರ ಮೋಹಕೆ ಬಿದ್ದುನಿನಗಾಗುವ ಮಾನಹಾನಿಯ ಕಾಣೆ ಮರುಳೆ 2 ಸಂಸಾರಕಾಂಕ್ಷೆಯ ಮನದಿ ತ್ಯಾಗವ ಮಾಡುಸಂಸಾರವಿದು ಮಾರಿಯು ಮರುಳೆಹಂಸ ಚಿದಾನಂದ ಸದ್ಗುರು ಹೊಂದಿಯೇನೀ ಸದಾಸುಖಿಯಾಗು ಮರುಳೆ 3
--------------
ಚಿದಾನಂದ ಅವಧೂತರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕಾಲಮಹಿಮೆ ಕೇಳಿ ಜಗದಾಲೋಚನೆ ತಾಳೀ ಪ ಕೀಳು ಖೂಳರಿಗೆ ಮೇಲು ಹಾಸಿಗೆ ಮಂಚ ಬಾಲಾಜಿ ಭಜನೆ ಜನಕೆ ಜೋಳಿಗೆ ಯೀ ಪ್ರಪಂಚಾ 1 ಉತ್ತಮಪುರುಷರಿಗೆಲ್ಲ ತುತ್ತಿಗೆ ಮಾನಹೋಗಿ ಹೆತ್ತವ್ವೆ ಹೋಗೆ ಕಳ್ಳ ಚಿತ್ತರ್ಗೆ ಮಂಚಾ ತೂಗೆ 2 ಡಂಬಾಚಾರಿಗಳಿಗೆಲ್ಲಾ ಕೊಂಬು ಕುದುರೆಯಗಾಡಿ ಶಂಬೂನುತರೂ ಪಾಪಿಗಾಡಿಗಳ ಹಿಂದೆ ವೋಡೆ 3 ನಿಚ್ಚಾ ಮುತ್ತೈದೆರ್ಗೆಲ್ಲಾ ಅಂಜಿಕೆ ಅರುಶನವಿಲ್ಲಾ ಬಿಚ್ಚಾಲೆಯಿಲ್ಲದ ರಂಡೇರ್ಹೆಚ್ಚಿ ಹೀಗಾಯಿತಲ್ಲ 4 ದೋಷರಹಿತ ಹರಿದಾಸ ತುಲಸೀರಾಮಾ ದೇಶಿಕಾ ತನ್ನ ನಿಜದಾಸಾನ ಮಾಡಿಕೊಂಡಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ