ಒಟ್ಟು 36720 ಕಡೆಗಳಲ್ಲಿ , 136 ದಾಸರು , 10408 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಶ್ರೀಪಾದರಾಜರು ಕಾಪಾಡು - ಕಾಪಾಡು ಶ್ರೀ ಪಾದರಾಯ ಪ ಪಾಪೌಘಗಳನಳಿದು ಶ್ರೀಪತಿಯ ತೋರೀ ಅ.ಪ. ನಾಡಿನೊಳು ಪೆಸರಾದ ಮೂಡಲಾದ್ರಿಗೆ ಪೋಪಮೂಡಬಾಗಿಲ ಕಾಯ್ವ ಪ್ರಾಣನಾಶ್ರಯಿಸೀ |ಮೂಡಬಾಗಿಲ ಪುರದಿ ನರಸಿಂಹ ಕ್ಷೇತ್ರದಲಿ |ಈಡು ಇಲ್ಲದೆ ಮೆರೆವ ಯತಿ _ ಸಾರ್ವಭೌಮಾ 1 ಹತ್ತಾರು ನಾಲ್ಕಾದ ಶಾಕಪ್ರತಿ ದಿನದಲ್ಲಿಉತ್ತಮೋತ್ತಮಗಿತ್ತು ಉಂಬ ಮಹಿಮಾ |ಕೃತ್ರಿಮ ಸ್ವಭಾವ ನೃಪ ಪರಿಕಿಸಲು ಪೋಗೆ ಹರಿಮತ್ತೊದಗಿಸಿದ ವ್ಯಾಳ್ಯಕ್ಕೆ ಹರಿಕೃಪಾ ಪಾತ್ರ 2 ವಿಪ್ರ ಬ್ರಹ್ಮತ್ಯವನು ಶಂಖದುದಕದಿ ಕಳೆಯೆಅಪ್ರಬುದ್ಧರು ನಗಲು ಗೆರೇಣ್ಣೆ ವಸನಾ |ಕ್ಷಿಪ್ರ ಶುದ್ದಿಯಗೈದೆ ಪ್ರೋಕ್ಷಿಸುತ ಶಂಖದಲಿಅಪ್ರಮೇಯನ ಕರುಣ ನಿನ್ನೊಳೆಂತುಂಟೋ 3 | ಅಹವು ರಾತ್ರಿಗಳಭಿಧ ಆದಿತ್ಯ ಸಂಸ್ಥಿತನುಅಹರ್ನಿಶೀ ನರನಾಡಿ ಸ್ಥಿತನಾಗಿಹಾ |ಬೃಹತಿ ನಾಮಕಗನ್ನ ಋಗ್ರಹಸ್ಯವನರುಪಿಬೃಹತಿ ಸಾಸಿರಗಳಿಪ ಸಂಧಾನವಿತ್ತೂ 4 ವಾದಿಗಳ ಎದೆಶೂಲ ವಾದ ಗ್ರಂಥದಿ ಪೂರ್ಣಬೋಧ ಶಿಷ್ಯರ ಹಿತವ ಕಾದು ಜಗದೀ |ವೇದ ವೇದ್ಯನು ಗುರು ಗೋವಿಂದ ವಿಠ್ಠಲನಪಾದ ಧೃವ ಧ್ಯಾನದಲಿ ಮೆರೆಯುತಿಹ ಗುರುವೇ 5
--------------
ಗುರುಗೋವಿಂದವಿಠಲರು
ಶ್ರೀ ಶ್ರೀಪಾದರಾಜರು ಧರೆಯೊಳು ಮೂರೇಳು ಕುಮತರ ಭಾಷ್ಯವಕಿರುಕು ಹಾವಿಗೆ ಎಂದದಿ ರಚಿಸೆಚರಣದಿಂದಲಿ ತುಳಿದು ಶತ್ರು ಖಳರಾ ಕರೆದುಮೊರೆಯಿಡುತಿವೇ ಶಾಸ್ತ್ರಸೆರೆಯ ಬಿಡಿಸೀರೆಂದು ಪ . . . ಹರಿಪ್ರೀತಿಗಾಗೆ ನಿರ್ಮಿಳ ಸುಕೃತಂಗಳಾಧರಿಸಿದಾ ಕುಸುಮಪರಿಮಳಂಗಳಾನರನೊಬ್ಬ ದೂಷಿಸೆ ಕೇಳಿ ಸರ್ವವನುಳುಹೆಅರಕ್ಷಣದಿ ಅವನ ತನು ಬಿರಿಯೆ ರಕ್ಷಿಸಿದೆ 2 ಸುರನಾಥಪುರಕಂದು ಘನ ಪುಷ್ಪವಿಮಾನದಿಸರಿವುತ್ತಲಿರೆ ರಘುನಾಥೇಂದ್ರರವರಯೋಗಿ ವೃಂದಾವನ ಪ್ರದಕ್ಷಿಣೆ ಗೈಸಿಕರೆದು ಭಾಷಿಸಿ ಕಳುಹಿದಾಶ್ಚರ್ಯ ಚರಿತಾ 3 ಸರಸಿಜಾಕ್ಷನ ಧ್ಯಾನದೊಳಿರೆ ವ್ಯಾಸಮುನಿಯಾಉರಗ ಬಂಧಿಸಲು ಧ್ಯಾನದೊಳೀಕ್ಷಿಸಿಮರುತ ವೇಗದಿ ಪೋಗಿ ಫಣಿಪನೊಡನೆ ಭಾಷಿಸಿತೊಡರು ಬಿಡಿಸಿದ ಅಹಿಪಾಶವ ಗುರುರಾಯ 4 ಸಿರಿಕೃಷ್ಣ ಪದಕಂಜಭೃಂಗನೆಂದಿನಿಸುವವರ ಹೇಮವರ್ಣತೀರ್ಥರ ಕುವರಸುರನರೋರುಗರೋಳು ಪ್ರಖ್ಯಾತರೆನಿಸುವಅರಿಶರಭ ಭೇರುಂಡನೆನಿಪ ಶ್ರೀಪಾದರಾಯ 5
--------------
ವ್ಯಾಸರಾಯರು
ಶ್ರೀ ಸಂತಾನ ಗೋಪಾಲಕೃಷ್ಣ 141 ಗೋಪಿ ವಿನುತ ಧಾಮ ಅನಂತಾಸನ ಯೈದಿ ವಿಪ್ರನಿಗೆ ಸುಪುತ್ರನ್ನ ತಂದಿತ್ತ ಘೃಣೀಯೇ 1 ಅಂದು ವೈರಾಟಿಯು ಪಾಹಿ ಪಾಹಿ ಮಹಾ ಯೋಗಿನ್ ದೇವ ದೇವ ಜಗತ್ ಪತೇ ನಾನ್ಯಂ ತತ್ ಅಭಯಂ ಪಸ್ಯೆ ಎಂದು ನಾಥನೇ ನಿನ್ನ ಮೊರೆ ಹೋಗಲು ಅವಳ ಉದರ ಪ್ರವೇಶಿಸಿ ಶಿಶುವ ರಕ್ಷಿಸಿದ ಚಕ್ರಿ 2 ಸುಸ್ಪಟಿಕ ಕಾಂತಿಮಾನ್ ಶಿವ ಶಿವಾ ಪೋಲು ಈ ದಂಪತಿಗಳು ಯಥಾ ಯೋಗ್ಯ ಪ್ರೇಮ ಪರಸ್ಪರ ಬೆಳೆಸಿ ಹರಿ ಗುರು ಭಕ್ತಿ ವರ್ಧಿಸಿ ಸುಪುತ್ರ ಸಂತಾನ ಭಾಗ್ಯವಿತ್ತು ಸಲಹುದು 3 ಕಲ್ಯಾಣ ತಮರೂಪ ಅಂಬುಜ ಸುದರ್ಶನ ಬಲು ಚೆÀಲುವ ಶಂಖ ಕೌಮೋದಕೀಧರನೇ ಮಾಲಕ್ಷ್ಮೀ ವಕ್ಷನೀ ವರ ಅಭಯ ಪ್ರದನಾಗಿ ಸಲುಹುತಿಯೇ ಭಕ್ತರನ ಗುರುಗ ಶ್ರೀ ಕೃಷ್ಣ 4 ಗುರುಗಳೋಳಿಪ್ಪ ವರ ವಾಯು ಅಂತರ್ಗತನೇ ವಾರಿಜಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸ ಶರಣು ಭಾಗೀರಥಿ ಜನಕ ಪಾವನ ನಾಮನೇ ಪೂರ್ಣ ಕಾಮನೇ ಭಕ್ತ ವಾಂಛಿತ ಪ್ರದನೇ 5 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಜ್ಞಾನರು ಪಾದ ಕಂತುಪಿತನ ದಿವ್ಯಪಾದಾ ಪಾದ ಕೊಡುವಂಥ ಪಾದಾ ಪ ಪಾದ ಬಿಡಿಸುವ ಪಾದಾ ಪಾವನ ಮಾಡ್ವ ಪಾದಾ 1 ಬಿಡಿಸುವ ಪಾದಾ ಭಕ್ತ ಜನರಿಗೆ ಭಾಗ್ಯದ ಪಾದಾ ಸತ್ಯಜ್ಞಾನಾನಂದರ ದಿವ್ಯ ಪಾದಾ 2 ತುಳಸಿಯ ತಂದ ಪಾದಾ ಜರಿದು ಷಡ್ವೈರಿಗಳ ಗೆದ್ದ ಪಾದಾ ಪರಮ ಮಂಗಳಕರವಾದ ಪಾದಾ 3
--------------
ಹನುಮೇಶವಿಠಲ
ಶ್ರೀ ಸತ್ಯಧೀರರು ಚಾರು ಚರಣಗಳಿಗೆರಗುವೆನು ಪ ವರಮತಿಗುಣಗನ ಮಣಿಯೆ ಅ.ಪ. ಯತಿ ಆಶ್ರಮದಿ ಸೀತಾ ಪತಿಯ ಪೂಜಿಸುತಿರೆ ಮತಿಹೀನರಪಹಾಸ್ಯ ಮಾಡಿದರೆ ಪರಿಯಂತ ಹರಿಸೇವೆಯಾ ಅತಿ ಭಕುತಿಯಿಂದಲಿ ಮಾಡಿದ್ಯೋ ಜೀಯಾ ಹಿತದಿಂದ ಕೈಗೊಂಡ ದಶರಥನಂದ ರಘುರಾಯ ಯತಿವರನೆ ನಿನ್ನಯ ಕ್ಷಿತಿಯೊಳಗೆ ಹರಿ ಪ್ರತಿ ದಿಗಂತ ಪರಿಹರಿಸಿದ ವರಕೀರ್ತಿ ಆಶ್ರಯದಿಂದ ಬಂದೆ 1 ವರಮಧ್ವಮತಾಭಿಮಾನಿಯೆ ನಿನ್ನಯ ದರುಶನದಿಂದ ಪಾವನನಾದೆನೋ ದೊರಕಾದೊ ಯಂದಿಗೆಲ್ಲರಿಗೆ ಈ ಗುರುಗಳ ವರಸೇವಾ ಸರ್ವಜ್ಞ ಪೀಠಕೆ ಸರಸ ಶೋಭಿಸುವಾ ಹರಿವಾಯುಗಳಲಿ ನಿಶ್ಚಯದ ಭಕುತಿಯನು ಪಾಲಿಸುವಾ ನಿರುತದಲಿ ಕಾವಾ ಪರಮಭಕ್ತರ ಭಾಗ್ಯನಿಧಿಯಂದರಿದು ಹಂಬಲಿಸುತಲಿ ನಿನ್ನಯ ಚರಣಕೆರಗಿದೆ ತ್ವರದಿ ಕರುಣಿಸಿ ಪೊರೆಯೊ ಶರಣರ ಸಂಜೀವಾ 2 ಆನಂದಜ್ಞಾನದಾಯಕನಾಜ್ಞೆಯಿಂ ಸತ್ಯಜ್ಞಾನಾ- ನಂದಗಿತ್ತಿ ಉತ್ತಮಪದವಾ ಗಾನಲೋಲನ ಜಗತ್ಪಾಲನ ಪ್ರಿಯನೇ ತವ ಸೇವಾ ತನುವನೊಪ್ಪಿಸಿ ಇಡುವೆ ನಿನ್ನಡಿಗಳ ಮೇಲೆ ಶಿರವಾ ಸೇವಕನೋ ಅನುಚಿತೋಚಿತಕರ್ಮ ಕೃಷ್ಣಾರ್ಪಣವೆನುವ ಸುಮನವ ಕೊಡು ನೀ 3
--------------
ಹನುಮೇಶವಿಠಲ
ಶ್ರೀ ಸತ್ಯಪರಾಯಣರು ನೋಡು ಮನವೆ ಸತ್ಯಪರಾಯಣರ ಪದಗಳ ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ ನಾರಾಯಣನ ಜಗತ್ಕಾರಣನೆನಿಸಿದಾ ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1 ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ ತಾಮಸ ಮತದವರ ಮತವ ಮುರಿದು ಹಾಕಿದಾ ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2 ವರ ಕದರುಂಡಲಗೀಶನ್ನೊಡೆಯ ರಾಮನ್ನ ನಿರುಪಮಾನಂದ ತೀರ್ಥ ಸುಪ್ರೇಮನ್ನ ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
--------------
ಕದರುಂಡಲಗೀಶರು
ಶ್ರೀ ಸತ್ಯಬೋಧರು ನೋಡಿದೇ | ಗುರುವರರ ನಾ ನೋಡಿದೇ ಪ ಪಾದ | ಈಡಾಡಿ ಶಿರವನುಬೇಡೆ ಭಕ್ತಿ ಜ್ಞಾನ ನೀಡುತ ಪೊರೆವರ ಅ.ಪ. ಪಾದ ತಾಮರಸವ ಧರಿಸಿಭೂಮಿಯೊಳಗೆ ಚರಿಸಿ | ಮೆರೆಸಿದ ಗುರುಗಳ 1 ಶೇಷರೂಪಿಲಿ ಬಂದ ಹರಿಯಾ | ಗುಪ್ತಭಾಷೆಯ ಕೇಳುತ್ತ ಗೃಹವಾ | ಪೊಕ್ಕುಮೀಸಲೆಂದೆನಿಸಿದ ಧನವಾ | ಲೇಸಾಯಾಸಿಲ್ಲದೆ ತೆಗಿಸ್ಯದನಾ | ಆಹಏಸೇಸೋ ಜನುಮದಿ | ಪೋಷಿಸಿರೂವದನಶ್ರೀ ಶಗರ್ಪೀಸುತಲಿ ತೋಷವ ಪಡಿಸಿದರ 2 ವಿನುತ ಗುರುಗೊವಿಂದ ವಿಠಲನಪಾದ ಪಿಡಿದು ಸವಣೂರಲಿ ಮೆರೆವರ3
--------------
ಗುರುಗೋವಿಂದವಿಠಲರು
ಶ್ರೀ ಸತ್ಯಸಂಧರು ಸತ್ಯ ಬೋಧರ ಕಂಡ | ಯತಿವರ್ಯ ಸತ್ಯಸಂಧ ಕೃತ್ಯ ನಿಮ್ಮದು ಆನಂದಾ ಪ ಸ್ತುತ್ಯುಯತ್ಯಾಶ್ರಮವ ವಹಿಸುತಪ್ರತ್ಸಹತ ಸಚ್ಚಾಸ್ತ್ರ ಬೋಧಕಪ್ರತ್ಯರ್ಥಿ ಮಾಯ್ಗಳ ಖಂಡಿಸುತಭೃತ್ಯ ಜನಕಭೀಷ್ಟ ಗರೆವಾ ಅ.ಪ. ಗಂಗೆಮೀಯಲು ಸಾಧು ಸಂಗದಿ ತೆರಳುತ್ತಅಂಗಜಾರಿಯ ಪುರದೀ |ಮಂಗಳಾಂಗನು ಹರಿಪದಾಬ್ಜದಿಬೃಂಗರೆನಿಸುತ ಪೂಜೆಯ ಗೈಯ್ಯಲುರಂಗ ಹರಿಪಾದಾರವಿಂದವಕಂಗಳಿಂದಲಿ ಕಂಡಯತಿಯ 1 ಗಯ ಗಧಾದರ ನಂಘ್ರಿಪ್ರಿಯವಿಂದ ಭಜಿಸಲುನಯಸುತ್ತ ಪರಿವಾರವಾ |ಮಾಯಿಗಳ ದುರ್ವಾದ ಖಂಡಿಸಿಹೇಯಮತವಿದ್ವಂಸ ಗೈಯ್ಯುತರಾಯದಶರಥ ಸುತನು ರಾಮಗೆಜಯಪತ್ರಾರ್ಪಿಸಿದ ಮಹಿಮ 2 ವಿಷ್ಣುಪಾದವ ಮನ ಮುಟ್ಟಿ ಭಜಿಸಲು ಪೋಗೆದುಷ್ಟಗಯಾಳವಾರರು |ದಿಟ್ಟತನದಲಿ ಕದವಮುಚ್ಚಲು |ಶ್ರೇಷ್ಠ ಯತಿಗಳ ಭಕ್ತಿಗೊಲಿಯುತಥಟ್ಟನೇ ಕದತೆರೆಯಲಂದಿನಅಟ್ಟಹಾಸದಿ ಪೂಜೆಗೈದ 3 ಬಾಳಲಜ್ಜೆಲಿಗಯ | ವಾಳರು ಶರಣೆನ್ನೆಲಾಲಿಸುವರ ಭಿನ್ನ ಪ |ಮೂಲರಾಮರ ಸೇವೆಯನುಗಯೆವಾಳರೆಲ್ಲರು ಮಾಡಲೆನುತಲೀಲೆಯಿಂ ಮುದ್ರಾಂಕಗೈದಘಜಾಲವನು ತಾ ಕಳೆದ ಯತಿಯ 4 ಮಹಿಷಿ ಕ್ಷೇತ್ರದಿಅಂಗವೃಂದಾವನವ ಪೊಗಿಸುತರಂಗಗುರು ಗೋವಿಂದ ವಿಠಲನಮಂಗಳ ಧ್ಯಾನದಲಿರುತಿಹ 5
--------------
ಗುರುಗೋವಿಂದವಿಠಲರು
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಸುಬ್ರಹ್ಮಣ್ಯಸ್ತುತಿ ಮಾಮವ ಸುಬ್ರಹ್ಮಣ್ಯ ಹೈವiವತಿಸುತ ಘನಕಾರುಣ್ಯ ಪ ಕಾಮಿತದಾಯಕ ಭೀಮಪರಾಕ್ರಮ ಸಾಮಗಾನಪ್ರಿಯ ಕೋಮಲಕಾಯ ಅ.ಪ ವೇಲಾಯುಧ ಸಂಭ್ರಾಜಿತ ವರದಾ ನೀಲಕಂಠವಾಹನ ಚಿರಸುಖದಾ ಶ್ರೀಲಲಿತಾ ಮನಾಕರ್ಷಿತ ನಾದ [ಬಾಲ]ಕೇರಳಪುರವಾಸ ವಿನೋದ 1 ಭವಭಯನಾಶನ ಪವನ ಷಡಾನನ ರವಿಸಮಲೋಚನ ನವಮಣಿಸದನಾ ಭುವನಮನೋಹರ ಸಾಸಿರವದನಾ ಶಿವಪ್ರಿಯನಂದನ ತಾರಕದಮನಾ 2 ಸಂತನಾನತ ಶಾಂತವಿನೀತ ಸಂತತ ಮಾತಾ ಲಲಿತಾ ಸಹಿತಾ ಚಿಂತಿತಾರ್ಥದಾತಾರಾ ಕೃಪಾಯುತ ಅಂತರಾತ್ಮ ಮಾಂಗಿರಿಪತಿ ಶೋಭಿತ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಸುಮಧ್ವ ವಿಜಯಸ್ಥ ಅಷ್ಟೋತ್ತರ ಶತನಾಮಾವಳಿ ನಮಿಸುವೆ ಜಗದ್ಗುರುಗಳೇ ಪ ಅಮಿತ ಮಹಿಮನ ವಿಮಲ ಪದಪದ್ಮ ತೋರ್ವುದೆಮಗೇ ಅ.ಪ. ಭೂರಿ ವಿಶ್ವ ಭೂಷಣರೇ ಪಾಹಿಮಾಂ ಪಾಹಿ 1 ಪರಿಪೂರ್ಣ ಪ್ರಮತಿಯೇ | ಪುರುಸಂಖ್ಯ ಪೂರ್ಣೇಕ್ಷ ಅರವಿಂದ ಲೋಚನರೆ | ಗುರುಮತ್ಯಮಿತ ಬುದ್ಧಿ ಮರುದಂಶ ಪ್ರಚುರಧೀ | ಪುರು ಕರುಣ ಆಂಬುಧಿಯ ಮೇರೆಯನು ಮೀರಿದವರೆ || ಸರುವಿತ್ ಪೂರ್ಣದೃಕ್ | ಉರುಮತಿಯೆ ಸಕಲಜ್ಞ ಸರುಧೀ ಪೃಥು ಹೃದಾ | ಪುರುಧೀ ಪ್ರಭೂತಧೀಃ ಪರಮ ಆನಂದ ಸತ್ತೀರ್ಥ ಸೂರಿರಾಜಾಧಿ ರಾಜರೆ ಪಾಹಿ ಪಾಹಿ 2 ಫುಲ್ಲ ಬೋಧ ಬಹುಲ ಪ್ರಬೋಧರೇ | ಮಹೀಷ್ಟ ಸುಹೃದಯರೇ ಬಹುಲ ಬೋಧಾಖ್ಯರೇ | ಮಹಾ ಪುರುಷೋತ್ತಮನ ದಾಸರೊಳಧಿಕನೆ ಪಾಹಿ 3 ನಮೊ ನಮೋ ಧೀರಮತಿ | ನಮೊ ಪೃಥೂ ದರ್ಶನರೆನಮೊ ನಮೋ ಸುಖ ತೀರ್ಥ | ನಮೊ ಪೃಥುಲ ಚೇತಾತ್ಮನಮೊ ನಮೋ ಪೃಥುಮತಿಯೆ | ನಮೊ ನಮೊ ಸಮಗ್ರ ಧೀರ್ಸುಸ್ಮಿತೇಂದುಗಳೆ ಪಾಹಿ || ನಮೊ ವಿಪುಲ ಹೃದಯರೇ | ಅಮಂದಧಿಯೆ ಶುದ್ಧಧೀಃ ನಮೊ ನಮೋ ಸುವಿಚಾರ | ನಮೊ ದಾನವರ್ಭೀಮ ನಮೊ ಪುಷ್ಟ ಬುದ್ಧಿಯೇ | ನಮೊ ಪೃಥುಲ ಹರಿ ನಿಗೂಢ ಮೂರ್ತಿಯೆ ಪಾಹಿ ಪಾಹಿ4 ಆನಂತ ಬೋಧಾಖ್ಯ | ಅನೂನ ಬೋಧರು ಎನಿಪಆನಂದ ತೀರ್ಥಾಖ್ಯ | ಅನುಮಾನ ತೀರ್ಥರೇಸ್ವರ್ಣವರ್ಣಾಭಿಧರೆ | ಧನ್ಯ ಪ್ರವರರು ಎನಿಪ ಆದೀನ ಸತುವಾಭಿಧರೆ ||ಅನಂತಧಿಯ ಮಧ್ವ ಸು | ಪೂರ್ಣ ಸಂಖ್ಯ ಧೀರದಿಹನುಮಂತ ಕೃಷ್ಣೇಷ್ಟ | ಪ್ರಾಣೇತ ಪ್ರಾಜ್ಯೇಕ್ಷಆನಮಿಸಿ ಬೇಡ್ವೆ ಸಂ | ಪೂರ್ಣ ಪ್ರಮತಿಯೆ ತವ ಚರಣ ತೋರಿಸಿ ಸಲಹುವುದೂ 5 ಪಾಹ್ಯದ ಭ್ರಮನೀಷ | ಪಾಹಿ ಪ್ರಚುರ ಪ್ರಜ್ಞಪಾಹಿ ವಿಪುಲ ಪ್ರಮತಿ | ಪಾಹಿ ಆಯುತ ಚೇತಪಾಹಿ ಪೃಥು ಪ್ರಬೋಧಾ | ಪಾಹಿ ಪ್ರಬರ್ಹ ಬೋಧಾಖ್ಯರೇ ಪಾಹಿ ಪಾಹಿ ||ಪಾಹ್ಯ ಮಂದಮನೀಷ | ಪಾಹ್ಯದ ಭ್ರಸುಸಂಖ್ಯಪಾಹಿ ಬೃಹತು ಪ್ರಬೋಧ | ಪಾಹ್ಯತಿ ಭದ್ರ ಭಾಷಣಪಾಹ್ಯ ಪೂರ್ವ ಪುರುಷ | ಪಾಹಿ ದಶಧಿಷಣಾರ್ಯಾ ವರ್ಯ ಚರ್ಯರೇ ಪಾಹಿ 6 ಸಿರಿ ಮಾಧವನ | ಗುಣ ಸಾಧಕಾಗ್ರಣಿಯೆ ಪಾಹಿಮಾಂ ಪಾಹಿ ಪಾಹಿ 7 ವಾಸುದೇವ ಪರಿ | ಶಿಕ್ಷಣದಿ ದಕ್ಷನೆನಿಸುವನಿಗೇ ಜಯವಾಗಲಿ ||ಜಯ ಹರಿಗಧಿಷ್ಠಾನ | ಜಯ ಮುಖ್ಯ ಪ್ರತಿ ಬಿಂಬಜಯ ಜಯತುದಾರಮತಿ | ಜಯ ಹರಿದಯಿತ ವರನೆಜಯ ಶ್ರೀ ಮದಾನಂದ | ತೀರ್ಥಾರ್ಯವರ್ಯ ಜಯ ಜಯತು ನಿಮ್ಮ ಪದಗಳಿಗೇ 8 ಮಧ್ವಾಖ್ಯ ಶೃತಿಪ್ರತೀ | ಪಾದ್ಯರೆಂದೆನಿಸುತಲಿಮಧ್ವ ವಿಜಯಾಖ್ಯ ಪ್ರ | ಸಿದ್ಧ ಗ್ರಂಥದಿ ಪೊಳೆವಮಧ್ವಗುರು ತವನಾಮ | ಶಬ್ದಾಖ್ಯ ಮಣಿಗಳಷ್ಟೋತ್ತರದ ಮಾಲೆಯನ್ನೂ ||ಮುದ್ದು ಮೋಹಜ ತಂದೆ | ಮುದ್ದು ಮೋಹರಲಿರುವಮಧ್ವಗುರುವೇ ನಿಮ್ಮ | ಹೃದ್ಗುಹದಲಿರುವಂಥಮುದ್ದು ಗುರುಗೋವಿಂದ | ವಿಠ್ಠಲನಿಗರ್ಪಿಸುವೆ ಉದ್ಧರಿಪುದೆಮ್ಮ ಸತತ 9
--------------
ಗುರುಗೋವಿಂದವಿಠಲರು
ಶ್ರೀ ಹಯಗ್ರೀವ ಮಂತ್ರಸ್ತೋತ್ರ ಜ್ಞಾನ ಬಲಾನಂದಾದಿ ಸರ್ವಗುಣ ವಾರಿನಿಧಿ ಅನಿಷ್ಟಹರ ಇಷ್ಟಪ್ರದ ಹಯಗ್ರೀವ ಅನಘ ಸನ್ನುತ ಸೇವ್ಯ ಘನ ದಯಾಂಬುಧೇ ನಮೋ ಗುರುಗ ಲಕ್ಷ್ಮೀಶ ಪ ಕಮಲಾಸನ ಋಷಿಯು ಗಾಯತ್ರಿಛಂದಸ್ಸು ಅಮಲಾಷ್ಟಾಕ್ಷರ ಮಂತ್ರ ದೇವತೆ ಹಯಾಸ್ಯ ಸೋಮ ಮಂಡಲ ಸ್ಥಿತನು ಅಕಳಂಕ ಕಾಂತಿಮಾನ್ ಅಮೃತ ತನ್ನಯ ಸ್ವರೂಪ ಕಿರಣ ಸುರಿಸುವನು 1 ನಾಶರಹಿತನು ಅವ್ಯಯ ನಿತ್ಯೋ ನಿತ್ಯಾನಾಮ ಅಂಡ ಬಹಿರಂತರದಿ ಎಲ್ಲೂ ಪುಸ್ತಕ ಚಿನ್ಮುದ್ರೆಯು ಶಂಖಾಕ್ಷ ಮಾಲಾಧರ ಕಾಶಿಸುತಿಹ ತುರಗ ವದನ ಸರ್ವಜ್ಞ2 ಪೂರ್ಣ ಜ್ಞಾನಾತ್ಮನು ಪೂರ್ಣ ಐಶ್ವರ್ಯಾತ್ಮ ಪೂರ್ಣ ಪ್ರಭಾತ್ಮನು ಪೂರ್ಣ ತೇಜಾತ್ಮಾ ಪೂರ್ಣಾನಾನಂದಾತ್ಮನು ಪೂರ್ಣ ಶಕ್ತ್ಯಾತ್ಮನು ಪೂರ್ಣ ಗುಣನಿಧಿ ಸದಾ ನಿರ್ದೋಷ ಈಶ 3 ಪ್ರತಿವಾದಿ ಜಯಪ್ರದನು ಸರ್ವ ವಿದ್ಯಾದಾತ ಬುದ್ದಿ ಸ್ಥೈರ್ಯ ಸತ್ಜ್ಞಾನ ವರ್ಚಸ್ಸು ಈವ ಮುಕ್ತ್ತಿಸಾಧನೆ ಅಪರೋಕ್ಷಜ್ಞಾನವನಿತ್ತು ಸಾಧು ಅಧಿಕಾರಿಗಳ ಯೋಗಕ್ಷೇಮ ವಹಿಪ 4 ಏಕದಶÀ ಶತÀ ಸಹಸ್ರಾನಂತ ರೂಪನೇ ಸ್ವಗತ ಭೇದ ವಿಲ್ಲದ ಸುಪೂರ್ಣ ಸ್ವತಂತ್ರ ಶ್ರೀಕದಶ ವಿಧಿಪಿತ ಪ್ರಸನ್ನ ಶ್ರೀನಿವಾಸ ನಮೋ ವ್ಯಾಂ ಕಪಿಲದತ್ತÀ ವರಾಹಹಯಗ್ರೀವ 5 ಶ್ರೀ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಹಯಗ್ರೀವ ವಿಠಲ | ಮೋಹ ಕಳೆದಿವನಾ ಪ ಸಾಹಸಿಗಗಾಭೀಷ್ಟ | ದೋಹನನು ಆಗೋ ಅ.ಪ. ಮಾಣವಕ ಭಕ್ತಿಯಲಿ | ಮಾನ್ಯರನು ಸೇವಿಸುವಜ್ಞಾನವಂತನ ಮಾಡಿ | ಪ್ರಾಜ್ಞನೆಂದೆನಿಸೋ ಜ್ಞಾನ ನಿಧಿ ನಿನ್ನೊಲಿಮೆ | ಕಾಣದಲೆ ಪರಿತಪಿಸಿಜ್ಞಾನದಂಕುರಕಾಗಿ | ಬಿನೈಸುತಿಹೆನೋ 1 ಸುಜನ ಸಂಗದಿ ಹರಿಯ | ಭಜನೆಯೊದಗಲಿ ಇವಗೆಋಜು ವಾದಿರಾಜರಲಿ | ನಿಜ ಭಕ್ತಿ ಬರಲೀಗಜ ವರದನಂಘ್ರಿಗಳ | ನಿಜ ಮನದಿ ಕಾಂಬಂಥಯಜನ ಭಜನೆಗಳೊದಗಿ | ಪ್ರಜೆಗಳಲಿ ಮೆರೆಸೋ 2 ಭೃತ್ಯ ವತ್ಸಲನೇ 3 ನಾನು ನನ್ನದು ಎಂಬ | ಹೀನ ಭಾವವ ಕಳೆದುಏನೇನು ತಾ ಮಾಳ್ಪ | ಮಾನಸಾದಿಗಳಾಪ್ರಾಣಾಂತರಾತ್ಮಕಗೆ | ದಾನ ಮಾಳ್ಪಂತೆಸಗಿಜ್ಞಾನಾಯು ರೂಪಕನ | ಮಾನ್ಯಮತ ತಿಳಿಸೋ 4 ಕೈವಲ್ಯ ಪ್ರದನೇತಾವಕನ ಸಲಹೆಂಬ | ಆವ ಭಿನ್ನಪ ಸಲಿಸೆಓವಿ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು