ಒಟ್ಟು 7653 ಕಡೆಗಳಲ್ಲಿ , 132 ದಾಸರು , 4671 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯಾ ಏಳು ಕಂದಾ | ಏಳು ಪರಮಾನಂದಾ | ಏಳು ಈರೇಳು ಜಗದೊಡೆಯ ಶ್ರೀಮುಕುಂದಾ ಪ ಮೊರೆವದೊಂದೇಗಾಲಿ | ಪರಿವಹರಿವೇಗಮಂ | ಜರಿದು ಯೇಳು ಕುದುರೆಂಗಳದರಾ | ಪೋರವರುಣನಿಂದ ಭೋರ್ಗರೆವ ಸ್ಯಂದನದೊಳಗ | ಮೆರೆವ ದಿನಕರ ಉದಯವಾದ ಪೂರ್ವಾದ್ರಿಯಲಿ 1 ಬಿರಿಯೆ ಕಮಲದ ಮೋಗ್ಗೆ ಕರಿಯೆ ಗೋವತ್ಸಗಳು | ಪರಿಯೆ ನಕ್ಷತ್ರಗಳು ಗಗನದೊಳಗ || ಸರಿಯೆ ಚೋರ್ವಿರಹಿಗಳು ವರಿಯದಂತಾಲಯಕೆ | ದೆರಿಯ ಕಣ್ಣೆವಿಯಗಳು ನಿದ್ರೆಗೈದಿದ ಜನರು 2 ಓಡುತಿದೆ ಕತ್ತಲೆಯು ಬಾಡುತಿದೆ ಕುಮುದ ಮುಖ | ಕೂಡುತಿವೆ ಚಕ್ರವಾಕಂಗಳೀಗ | ಆಡುತೆಳೆದುಂಬಿ ಚಲ್ಯಾಡುತಿದೆ ಮಧುರನವ | ಪಾಡುತಿದೆ ಮಹೀಪತಿ ಸುತನಾಮ ಕೀರ್ತಿಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ. ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ ಮನುಜರೆಲ್ಲರೂ ಕಾದಿಹರು ದರುಶನಕೆ ಸನಕಾದಿ ವಂದಿತ ಸರ್ವೇಶನೆಂತೆಂದು ವಿನಯದಿಂದಲಿ ನುತಿಪರು ಭಾಗವತರು 1 ತಾರೆಗಳಡಗಿತು ಕಮಲಗಳರಳಿತು ಪೂರ್ವ ದಿಕ್ಕಿನಲಿ ತೋರುವ ರವಿ ಉದಯ ಭೇರಿ ತುತ್ತೂರಿ ನಗಾರಿ ಬಾರಿಸುತಿದೆ ಸಾರಿ ಕೂಗುತಲಿದೆ ಕೋಳಿ ವೃಂದಗಳು 2 ಬಾಲಲೀಲೆಗಳಿಂದ ಗೋವಳರೊಡನಾಡಿ ಭಾಳ ಆಯಾಸವಾಗಿಹುದೆ ಕಂದಯ್ಯ ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ ಬಾಲಯತಿಗಳು ಪೂಜಿಸುವರೇಳಯ್ಯ 3 ಬಿಸಿಬಿಸಿ ನೀರು ಪಂಚಾಮೃತವೆರೆಯುತ ಹಸನಾದ ಪಾಲು ಸಕ್ಕರೆ ಉಂಡೆಗಳು ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4 ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ ಶ್ರುತಿ ವೇದತತಿಗಿಂತ ಚತುರ ಮಾತಿನೊಳು ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5
--------------
ಅಂಬಾಬಾಯಿ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಏಳು ನಿದ್ದೆಯು ಸಾಕು ರಂಗನಾಥ ಪ ತಾಳು ತಾಳೆನಲೇಕೆ ಮಾಂಗಿರಿ ನಿವಾಸ ಅ.ಪ ಜಗವ ಪೋಷಿಪಚಿಂತೆ | ಮಿಗಿಲಾದ ದೇವಂಗೆ ಸೊಗಸಾದ ನಿದ್ದೆಯಾಪರಿವುಂಟೇ ನಗಜಗವ ಪೊತ್ತವನ ಬಳಗವು ಏನೆಂಬೇ ನಗೆಬೇಡ ಕಣ್ತೆರೆಯೊ ಮಾಂiÀiಕಾರ 1 ನಿದ್ದೆಗೆಡಿಸಲು ಪಾಪ ಇದ್ದರೆ ನನಗಿರಲಯ್ಯ ಸದ್ದಿಲ್ಲದಿಹುದೇ ಭಕ್ತರು ಹಾಡಿ ಕುಣಿಯೇ ಒದ್ದಮುನಿಗಾ ಪಾಪವಿದ್ದಿತೇ ಕರುಣಾಳು ಎದ್ದು ಬಾ ಬಾರೈಯ ಮಾರನಯ್ಯ 2 ಬಲ್ಲೆ ಬಲ್ಲೆನು ನಿನ್ನ ಚೆಲ್ಲಾಟಗಳನೆಲ್ಲ ಬೆಲ್ಲವನು ಕಂಡಿರುವೆ ಮುತ್ತದಿಹುದೇ ಸಿರಿ ಮಾಂಗಿರಿಯ ರಂಗ [ಒಲ್ಲೆನದೆ ಈಯಯ್ಯ ಎನಗು ಬೆಲ್ಲದಸವಿಯ]3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಏಳು ಪೀಠಕೇ ನಳಿನದಳಾಂಬಕೇ ಜಗನ್ನುತೆ ಪ. ಬಾಲೇಂದುನಿಭ ಫಾ¯ ಶ್ರಿತಪರಿಪಾಲೇ ಕೋಮಲೇ ಅ.ಪ ಕುಂದರದನೆ ಮಂದಗಾಮಿನೀ ವಂದಿತಾಮರ ವೃಂದಾರ ವೃಂದಾನಂದಪ್ರದೇ 1 ತೋರಮುತ್ತಿನ ಚಾರುಪೀಠಕೆ ಸಾರಿಬಾ ವರ ಸಾರಸಾನನೇ ನಾರೀಮಣಿಯರೆ ಸಾರಿಕರುವರು ಮೀರಿದಾನಂದದಿಂದ 2 ಶೇಷಶೈಲ ನಿವಾಸಿನೀ ನತ ಪೋಷಿಣೀ ಜಯಶ್ರೀ ರಮಾಮಣಿ ಯಾಸಾ ಸಾರಸನೇತ್ರೇ ಕಮಲಾವಾಸೇ ದಯೆತೋರಿಸೇ 3
--------------
ನಂಜನಗೂಡು ತಿರುಮಲಾಂಬಾ
ಏಳು ಬೆಳಗಾಯಿತು ಬಾಲಕೃಷ್ಣಬಹಳ ಮಕ್ಕಳು ನಿನ್ನ ಕೇಳುತಿಹರೋ ಪ ಬರುವಿ ಮನೆಯೊಳಗೆಂದು ಕರೆದು ಪಾಲನು ರುಚಿರತರುಣಿಯರು ಬಚ್ಚಿಟ್ಟು ಶರಣದೊಳಗೆಸರಸ ಮೊಸರನೆ ಕಡೆದು ತ್ವರದಿ ಬೆಣ್ಣೆಯ ತೆಗೆದುಮರೆಮಾಡಿ ಮೂಲೆಯೊಳು ಸುರಿಸುತಿಹರೊ 1 ತರಣಿ ಬಂದಾ2 ಏಸು ಪುಡುಗರು ನಮ್ಮ ವಾಸದೆದುರಿಗೆ ನಿಂತುಘೋಷದಿಂದಲೆ ವತ್ಸರಾಶಿ ತುರುವಾಕೂಸೆ ಕರೆವರು ನಿನ್ನ ಭೂಷಿಸುವೆ ಬೇಗೇಳುತಾಸು ಹೊರಗ್ಹೋಗಿ ಇಂದಿರೇಶ ಬಾ ಬೇಗ 3
--------------
ಇಂದಿರೇಶರು
ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಏಳು ರಂಗಯ್ಯ ನೀನೇಳು ಕೃಷ್ಣಯ್ಯ ಏಳಯ್ಯ ದೊರೆ ಬೆಳಗಾಯಿತೇಳೆಂದು ಪಾಲ್ಗಡಲೊಡೆಯ ಹರಿಯನೆಬ್ಬಿಸಿದಳಂದು ಬಾಲೆ ಯಶೋದೆಯು ಬಹು ಸಂಭ್ರಮದಿಂದ ಪ ಶಕ್ರನುಪಟಳವ ನೀ ಪರಿಹರಿಸಬೇಕು ವಿಕ್ರಮದಿ ಗೋವರ್ಧನ ಎತ್ತಬೇಕು ಚಕ್ರಧರ ನಿನ್ನ ಮಧುರೆಗೆ ಕರೆದೊಯ್ಯೆ 1 ಮಾವ ಕಂಸನು ನಿನ್ನ ಬಾ ಎಂದನಂತೆ ಸಾವು ಅವನಿಗೆ ಸಮೀಪದಲಿದೆಯಂತೆ ದೇವಕಿ ವಸುದೇವ ಸೆರೆಯಲಿರುವರಂತೆ ಕಾವುದಕೆ ನೀ ಪೋಗಲೇಬೇಕಂತೆ 2 ಬಿಲ್ಲ್ಹಬ್ಬದಲಿ ಜಯಶೀಲನಾಗಬೇಕು ಖುಲ್ಲ ರಕ್ಕಸ ದಲ್ಲಣನೆನಿಸಬೇಕು ಬಲ್ಲಿದ ಮಗಧನ ಕೊಲ್ಲಿಸಲುಬೇಕು 3 ದೇವಿ ದ್ರೌಪದಿಗೆ ಸುಚೇಲವೀಯಬೇಕು ಭಾವಮೈದುಗೆ ಬೋವÀನಾಗಬೇಕು ಪಾವಿನ ಶರದಿಂದವನ ಪೊರೆಯಬೇಕು ಯಾವತ್ತು ಭೂ ಭಾರವನಿಳುಹಬೇಕು 4 ಮಧ್ವರಾಯರ ಹೃತ್ಪದ್ಮದಿ ನಿಲಬೇಕು ಇದ್ದು ಉಡುಪಿಯೊಳು ಪೂಜೆಗೊಳಲುಬೇಕು ಶುದ್ಧ ವೈಷ್ಣವರಿಷ್ಟಗಳ ಸಲಿಸಬೇಕು ಮುದ್ದು ರಂಗೇಶವಿಠಲನೆನಿಸಬೇಕು 5
--------------
ರಂಗೇಶವಿಠಲದಾಸರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳುತಲೆದ್ದು ಮನವೆ ನೀ ವಲೀ ನಿಜಖೂನ ಕುಲಕೋಟಿ ಉದ್ಧರಿಸುವ ನೆಲೆನಿಭ ಸ್ಥಾನ ಬೆಳಗಾಗಲಿಕ್ಕೇರಿತು ನೀ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 1 ಒಳಮುಖನಾಗರಿಯೋ ನೀ ಸುಲಲಿತ ಜ್ಞಾನ ಅಲೇಶ ಮಾಡದೆ ನೀ ಬ್ಯಾಗ ಬಲಿ ನಿಜಧ್ಯಾನ ಥಳಥಳಗುಡುತಲ್ಯದ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 2 ತೊಳಿಬೇಕೆಲೊ ಮನದ ಹೀನ ಮಲಿನಗುಣ ಕರ್ಮ ತಮಂಧತನ ಕಳೆಕಾಂತಿಯುಳ್ಳ ಕರುಣಾರ್ಣವ ಸ್ವಾಮಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 3 ಸಲೆ ಮೊರೆಹೊಕ್ಕು ನೀ ಸದಾಬಲಿ ಭಕ್ತಿ ಪೂರ್ಣ ಅನುದಿನ ಸದ್ವಸ್ತು ಶರಣ ಸಕಳ ಸುರವುತಲ್ಯದೆ ಬಲ್ಲ ಸ್ವಾಮಿ ಕರುಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 4 ಇಳೆಯೊಳಿದೆ ಸಕಲಪುಣ್ಯಶಿರೋನಿಧಾನ ಘಳಿಸುವದೊಂದೆ ಸುಫಳಿತ ಸುದಿವ್ಯ ಘನ ತಿಳಿಯೊ ಸುಮನವೆ ಮಹಿಪತಿಸ್ವಾಮಿ ಪೂರ್ಣ ಒಲುವಾಂಗೆ ಮಾಡು ಗುರುಮೂರ್ತಿಗೆ ಸುನಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಳುಪೀಠಕೆ ನಳಿನಸಂಭವೆ ಜಗನ್ನುತೆ ಪ ಬಾಲೇಂದು ನಿಭಫಾಲೆ ಶ್ರೀತಪರಿಪಾಲೆ ಕೋಮಲೆ ಅ.ಪ. ಸಿಂಧುನಂದನೆ ಇಂದುಸೋದರಿ ಕುಂದರದನೆ ಮಂದಗಾಮಿನಿ ವಂದಿತಾಖಿಲವೃಂದಾರಕ ವೃಂದಾನಂದಪ್ರದೆ 1 ತೋರಮುತ್ತಿನ ಚಾರುಪೀಠಕೆ ಸಾರುಬೇಗನೆ ಸಾರಸಾನನೆ ನಾರೀರನ್ನೆಯರು ಸಾರಿಕರೆವರು ಮೀರದಾನಂದದಿಂ 2 ಶೇಷಶೈಲನಿವಾಸಿನೀ ನತಪೋಷದಾಯಿನಿ ಶ್ರೀರಮಾಮಣಿ ಯಾಸಾಸಾರಸನೇತ್ರೆ ಕಮಲಾವಾಸೇ ದಯೆತೋರಿಸೆ 3
--------------
ನಂಜನಗೂಡು ತಿರುಮಲಾಂಬಾ