ಒಟ್ಟು 1005 ಕಡೆಗಳಲ್ಲಿ , 96 ದಾಸರು , 782 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರವಣ ಶ್ರವಣಗಳೆನ್ನಿರಿ ಸರ್ವಕಾಲದಿ ನೀವುಶ್ರವಣವಾಗುವತನಕ ಶಿವನು ನೀವಾಗಲೆಂತೋಪಗುರುಮೂರ್ತಿಯನು ಕಂಡು ಗುಣವಿಭಾಗಿಸಿದಂತನರಪಶುವು ಕ್ರಿಮಿಕೀಟ ಸರ್ವಗಳಲಿಗುರುವು ಪರಿಪೂರ್ಣ ಗುಣಿಸಲಿಂತಾದನೆಂದುಹಿರಿದು ಸಮನಿಸಿ ನೋಡಿ ನಿಶ್ಚೈಸಿದರೆ ಸಾಲದೆ1ಜಾಗೃತದಿ ಸ್ವಪ್ನದಲಿ ಸುಷುಪ್ತಕಾಲದಿ ಕಂಡವರ್ಗವೆಲ್ಲವ ಗುರುವೆ ಎಂದು ತಿಳಿದುಭರ್ಗಪೂರಿತನೆಂದು ಭೇದವಿಡದೇ ಮನದಿ ಸ-ಮಗ್ರ ಸಂತೋಷನಾಗಿರುತಿರಲದೆ ಸಾಲದೆ2ಕ್ರೂರ ಸಂಕಟ ಕಷ್ಟ ನಷ್ಟ ದುಃಖದಲಿಆರು ಹೊದ್ದಿಹರೆಂದು ಇದನು ತಿಳಿದುಧೀರ ಚಿದಾನಂದಗುರುದಿವ್ಯ ಮೂರುತಿ ತಾನು-ದಾರನಾತನ ಚರಣವನು ನೆನೆಯೆ ಸಾಲದೆ3
--------------
ಚಿದಾನಂದ ಅವಧೂತರು
ಶ್ರವಣಮನನ ನಿಧಿ ಧ್ಯಾನವು ಯೋಗಕ್ಕೆಸಮನಿಸೆ ಸಾಧಕಂಗೇತಕೆ ಈ ಮೂರುಪನಿತ್ಯಗುರುಮುಖದಿಂದ ನಿಜವೇದಾಂತ ಸಾರವ-ನಿತ್ಯಕಾಲದಲ್ಲಿ ಕೇಳುತಲಿ ಇದ್ದುನಿತ್ಯಜೀವರಪರಮನಿಲುಗಡೆಗಳ ತಿಳಿದುಸತ್ಯತಾನೆಂದು ಕಂಡು ನಿಶ್ಚೈಸಿದುದೆ ಶ್ರವಣ1ವಾಸನೆಹರವಾಗಿ ಬಲಿದು ಆತ್ಮಾನಂದಕೆಸೂಸದೆ ಮನವನು ನಿಲ್ಲಿಸುತದೇಶಿಕೋತ್ತಮನಿಂದ ತನಗಾವ ಉಪದೇಶಬೇಸರಿಸದೆ ಮತ್ತೆ ಮತ್ತೆ ನೆನೆವುದೆ ಮನನ2ದಧಿಮಥನವ ಮಾಡೆನವನೀತತೇಲುವೊಲುಉದಧಿಮಥಿಸೆ ಅಮೃತ ತಾ ಬಂದಂತೆಮಥಿಸೆ ಕಾಷ್ಟಕ್ಕೆಕಾಷ್ಠಅಗ್ನಿ ತಾ ಪುಟಿದಂತೆವಿಧಿಸೆ ಈ ತೆರದಲಿ ತಾನದುವೆ ನಿಧಿಧ್ಯಾಸ3ಈ ಮೂರು ಸಾಧನಗಳಿರಬೇಕು ಯೋಗಕ್ಕೆಈ ಮೂರು ಸಾಧಿಸಲು ರಾಜಯೋಗಿ ತಾನುಇವರೊಳು ಒಂದು ಕಡಿಮೆಯಾದರು ಯೋಗಿಯಾಗನುಇಂತಿಲ್ಲದಿರೆ ನಿಜಮುಕ್ತಿ ದೊರಕದು4ಶ್ರವಣವೆಂಬುದು ಅದು ಸರ್ವಸಾಧನವಯ್ಯಶ್ರವಣ ಮನನವಾಗೆ ಶ್ರಮ ಪರಿಹಾರವುಶ್ರವಣ ಮನನ ನಿಧಿಧ್ಯಾಸ ಮೂರಾಗೆಶಿವನೆ ಆತನು ಚಿದಾನಂದ ದೇವನವನು5
--------------
ಚಿದಾನಂದ ಅವಧೂತರು
ಶ್ರೀ ಕೇಶವ ತೀರ್ಥ ಸ್ತೋತ್ರ107ಸೂರಿಪ್ರಾಪ್ಯ ಘೃಣಿಶೌರಿಶ್ರೀರಮಾಪತಿ ಪ್ರಿಯರುಸೂರಿವರ ಬ್ರಹ್ಮಣ್ಯ ತೀರ್ಥ ಆರ್ಯರ ಸುಸರೋಜಕರಜಾತ ಜಗತ್ಖ್ಯಾತ ವ್ಯಾಸರಾಜಾರ್ಯರಹಸ್ತಸುವ್ರತ ನಿಜೋತ್ಪನ್ನ ಕೇಶವ ತೀರ್ಥಾರ್ಯರ್ಗೆ ವಂದೇ ಪಮುಖ್ಯಪ್ರಾಣಪವಮಾನ ಸುರಮಾತರೀಶ್ವಗುರುಪ್ರದ್ಯುಮ್ನ ಅನಿರುದ್ಧ ಪುರುಷ ನರಸಿಂಹ ಶ್ರೀಶಪ್ರಜ್ಯೋತಿರ್ಮಯ ಉಗ್ರವೀರ ವಿಶ್ವವ್ಯಾಪಿ ವಿಷ್ಣುವುಮೃತ್ಯು ಮೃತ್ಯು ಸ್ತಂಭದಿಂ ಬಂದು ಪ್ರಹ್ಲಾದನ್ನ ಪೊರೆದ 1ನರಸಿಂಹನಾಜೆÕಯಿಂ ಪ್ರಹ್ಲಾದ ಸಿಂಹಾಸನವೇರೆನೆರೆದಿದ್ದ ಸುಮನಸರು ಹರಿಭಕ್ತ ಜನರುಸೂರಿಗಳುಆ ವೈಭವ ಕಂಡುಕೇಳಿಜಯಪರಾಕ್ಪರಾಕೆಂಬ ದಿವ್ಯಾನುಭವಜ್ಞಾನಿಕೇಶವ ತೀರ್ಥ2ಹಿಂದಿನ ಪ್ರಹ್ಲಾದಇಂದುವ್ಯಾಸಮುನಿರಾಜರಾಗಿದುಸ್ತರ್ಕ ಧ್ವಂಸಕರ ತರ್ಕತಾಂಡವ ಬೋಧಿಸಿಹಿತಕರ ನ್ಯಾಯ ಪೀಯೂಷವ ಉಣಿಸಿ ಆಹ್ಲಾದಚಂದ್ರಿಕಾಸುಖ ನೀಡಿ ಯತ್ಯಾಶ್ರಮ ಇತ್ತರಿವರ್ಗೆ 3ಶ್ರೀವ್ಯಾಸರಾಯರು ಅನುಗ್ರಹಿಸಿ ಕೇಶವ ತೀರ್ಥದಿವ್ಯ ನಾಮಾಂಕಿತವ ಪ್ರಣವಾದಿ ಮಂತ್ರ ಉಪದೇಶನಿವ್ರ್ಯಾಜ ನಿಶ್ಚಲ ಭಕ್ತಿಮಾನ್ ವಿನಯಸಂಪನ್ನ ಈಶಿಷ್ಯನಿಗೆ ಕೊಟ್ಟದ್ದು ಸಜ್ಜನರು ಹೊಗಳಿದರು 4ಶ್ರೀರಂಗದಲಿ ಉತ್ತರಾರಣ್ಯ ಬೀದಿಯಲ್ಲಿಹಶ್ರೀ ಕೃಷ್ಣಮಂದಿರದಿ ಶ್ರೀವ್ಯಾಸರಾಯ ಮಠದಿಚಾರುತರ ಚತುರ್ವಿಂಶತ್ ವಿಷ್ಣು ಮೂರ್ತಿಗಳುಂಟುತತ್ರಗೋಲಕ ಕ್ರಮದಿ ಶ್ರೀಹರಿಯ ಚಿಂತಿಪರು 5ಬ್ರಹ್ಮ ಗಾಯತ್ರಿ ಮನು ಇಪ್ಪತ್ತು ನಾಲ್ಕಕ್ಷರದಲಿತಂ ಆದಿ ಯಾತ್ ಅಂತ ಒಂದೊಂದರಲಿ ಒಂದುಹರಿಯಅಮಲ ಸುಪೂರ್ಣ ಕೇಶವಾದಿ ಕೃಷ್ಣಾಂತರೂಪಆ ಮೊದಲು ತಂ ಅಲ್ಲಿ ತಾರಕೇಶವನು ಧ್ಯಾತವ್ಯ 6ಬಲದಕೆಳಗಿನ ಕರದಿಪದ್ಮ ಮೇಲೆ ಶಂಖಜ್ವಲಿಪ ಚಕ್ರವು ಮೇಲಿನ ಎಡದ ಹಸ್ತದಲ್ಲಿಕೆಳಗಿನ ಎಡಕರದಿ ಗದೆಯ ಹಿಡಿದಿಹಜಲಜಸಂಭವ ಭವಾದ್ಯರ ಸ್ವಾಮಿ ಕೇಶವನು 7ದಶಪ್ರಮತಿ ಸರಸೀರುಹನಾಭ ನರಹರಿಅಸಮಮಾಧವಅಕ್ಷೋಭ್ಯ ಜಯವಿದ್ಯಾಧಿರಾಜಅಸಚ್ಛಾಸ್ತ್ರಗಿರಿಕುಲಿಶ ರಾಜೇಂದ್ರ ಜಯಧ್ವಜಶ್ರೀಶವಶಿ ಪುರುಷೋತ್ತಮ ಬ್ರಹ್ಮಣ್ಯ ವ್ಯಾಸತೀರ್ಥ 8ಹಂಸವಿಧಿ ಸನಕಾದಿಗಳಾರಭ್ಯ ಸನಾತನಸುಶೀಲ ಈಗುರುಪರಂಪರೆಯಲಿ ವ್ಯಾಸಮುನಿಸರೋಜ ಕರಜಾತ ಕೇಶವ ತೀರ್ಥರು ಹೀಗೆಕೇಶವನ್ನ ಧ್ಯಾನಿಸಿ ಒಲಿಸಿ ಕೊಂಡದ್ದು ಸಹಜ 9ಹರಿಪ್ರೀತಿ ಸಮರ್ಪಕ ಯತ್ಯಾಶ್ರಮ ಧರ್ಮಗಳಚರಿಸುತಗುರುಸೇವಾರತರಾಗಿ ಇರುತಿಹಬರುವ ಶಿಷ್ಯರಿಗೆ ಸೌಲಭ್ಯ ವಾತ್ಸಲ್ಯ ನೀಡುತಸೇರಿದರು ಪರಮತಿ ವೇಲೂರೆಂಬ ಕ್ಷೇತ್ರವನ್ನು 10ಶಲ್ಯ ರಾಜನ್ನ ಜ್ಞಾಪಿಸುವ ಶುಕವನ ಕ್ಷೇತ್ರದಿಂಒಳ್ಳೆಯ ರಸ್ತೆ ಹದಿನೈದು ಕ್ರೋಶ ದೂರದಿ ಇಹುದುಪ್ರಹ್ಲಾದ ವರದ ನಾರಸಿಂಹ ನಾಮಗಿರಿ ದೇವಿಬಲಜ್ಞಾನರೂಪ ಮಾರುತಿ ಇರುವ ನಾಮಕಲ್ಲು 11ನಾಮಶೈಲದಿಂದ ರಂಗ ತಾನೇ ತೋರಿದ ವೇಂಕಟರಮಣ ಪಶುಪತಿಕ್ಷೇತ್ರ ಕರೂರಿಗೆ ಹೋಗುವರಮಣೀಯಮಾರ್ಗಮಧ್ಯದಲ್ಲಿಯೇ ಇರುತಿಹವುಪರಮತಿ ವೇಲೂರು ಸುಪುಣ್ಯ ಕಾವೇರಿಯು 12ಸರ್ವಸುಗುಣಾರ್ಣವನುಅನಘಸರ್ವೋತ್ತಮನುಸರ್ವಕರ್ತಾಗಮೋದಿತನು ಜಿಜ್ಞಾಸ ಜನ್ಯ ಜ್ಞಾನಸಂವೃದ್ಧಿ ಸಾಧನಾನುಕೂಲ ಚತುರ್ವೇದಿ ಮಂಗಳದಿವ್ಯ ಪರಮತಿಯು ಅಲ್ಲಿ ಲೌಕೀಕರೇ ತುಂಬ 13ಸಪರಮತಿ ಸಮೀಪದಲ್ಲೆ ಚನ್ನಕೇಶವ ವೇಲಿಪುರವುಂಟು ಅದನ್ನ ವೇಲೂರೆಂದು ಹೇಳುವರುಪರಮತಿ ವೇಲೂರು ಕಾವೇರಿ ಪೋಷಿತವು ತೀರಪರಮಭಾಗವತಋಷಿ ಸಂಚಾರ ವಾಸಸ್ಥಾನ14ರಸಪೂರಿತ ಮಾವು ತೆಂಗು ಕದಲೀಫಲವೃಕ್ಷಬಿಸಜಮಲ್ಲಿಗೆ ಜಾಜಿಕುಸುಮಪರಿಮಳವುಹಂಸ ಪಾರಾವತ ತಿತ್ತರಾಶುಕ ಇಂಥಾ ಸುಪಕ್ಷಿಶ್ರೀಶನಂಘ್ರಿ ಸಂಬಂಧಿ ವರಜಾಯುಕ್ ಕಾವೇರೀ ಸರಿತ 15ಶ್ರೀಮನೋರಮ ಕೇಶವನ್ನ ಆರಾಧಿಸಿ ಧ್ಯಾನಿಸಲುಈ ಮನೋಹರ ಶಾಂತ ಸುಪವಿತ್ರ ಕ್ಷೇತ್ರವೆಂದುತಮ್ಮಯ ಬಾಹ್ಯ ಚಟುವಟಿಕೆಗಳ ನಿರೋಧಿಸಿಸಮೀರಸ್ಥ ಶ್ರೀಹರಿಯ ಧ್ಯಾನಾದಿರತರಾದರು 16ಯುಕ್ತಕಾಲದಿ ಈ ಸಂನ್ಯಾಸರತ್ನ ಕೇಶವಾರ್ಯರುಭಕ್ತಿವೈರಾಗ್ಯ ಯುಕ್ ಜ್ಞಾನ ಸಂಪನ್ನ ಶ್ರೀಹರಿಯಚಿಂತಿಸುತ ತ್ರಿಧಾಮನ ಪುರವನ್ನ ಯೈದಿದರುವೃಂದಾವನದಲ್ಲಿ ಒಂದಂಶದಲಿ ಇರುತಿಹರು 17ಕಾಲಧೀರ್ಘದಲಿ ಗ್ರಾಮಜನ ಬದಲಾವಣೆಯಿಂಎಲ್ಲಿ ವೃಂದಾವನ ಸ್ಥಾನ ಇದೆ ಎಂದು ಸರಿಯಾಗಿಹೇಳುವವರು ಸುಲಭದಿ ದೊರಕುವುದು ಶ್ರಮತಿಳಿದವರ ಸಹಾಯದಿಂ ಗುರುದಯದಿ ಸಾಧ್ಯ 18ಸದಾಪಾಣಿ ಭೀಮಸೇನ ಆರಾಧ್ಯ ಶ್ರೀಕೃಷ್ಣನು ಮತ್ತುಪದ್ಮಾಲಯಾಪತಿ ಪುಂಡರೀಕಾಕ್ಷನ್ನು ಶ್ರೀವಿಶ್ವನ್ನುಮಧ್ವಸ್ಥ ಪರಮಾತ್ಮನ್ನು ಸ್ಮರಿಸಿ ವೃಂದಾವನವಸಂದರ್ಶನ ಮಾಡಿ ಸೇವಾ ಸ್ವಗುರೂಪದೇಶವಿಧಿ19ಸ್ಮರಣ ದರ್ಶನ ಪ್ರದಕ್ಷಿಣ ನಮನ ಕೀರ್ತನಶಾಸ್ತ್ರಾಧ್ಯಯನ ಪ್ರವಚನ ಭಕ್ತಿಯಿಂದಲಿ ಪೂಜಾಪರಿಶುದ್ಧ ನೈವೇದ್ಯ ಎಷ್ಟೆಷ್ಟು ಸಾಧ್ಯವು ಅಷ್ಟುಹರಿಗುರು ಪಾದೋದಕ ಶುಭದ ಸರ್ವಾಭೀಷ್ಟದ 20ಆದರದಿ ಈ ಸ್ತೋತ್ರ ಪಠನ ಶ್ರವಣ ಮಾಳ್ಪರ್ಗೆಭಕ್ತಿಮೇಧಆಯುಷ್ಯ ಆರೋಗ್ಯ ಸೌಭಾಗ್ಯಗಳೀವಪದ್ಮಜನಪಿತನು ಶ್ರೀ ಪ್ರಸ್ನನ ಶ್ರೀನಿವಾಸನುವಂದೇ ವಿಧಿಮಧ್ವ ವ್ಯಾಸಮುನಿ ಕೇಶವಾರ್ಯಾಂತಸ್ಥ 21|| ಶ್ರೀ ಶ್ರೀ ಕೇಶವ ತೀರ್ಥ ಸ್ತೋತ್ರ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೋಪಾಲ ದಾಸಾರ್ಯವಿಜಯಶ್ರೀ ಲಕ್ಷ್ಮೀ137ಭಾಗಣ್ಣ ಗೋಪಾಲ ದಾಸಾರ್ಯರ್ ಪಾದಕ್ಕೆಬಾಗಿ ಶರಣಾದೆನು ಸತತ ನಿಶ್ಚಯದಿಜಗದಾದಿಕರ್ತಅಜಅಘದೂರ ಸುಗುಣಾಬ್ಧಿತುರಗಾಸ್ಯವಿಜಯಶ್ರೀನಿವಾಸ ಪ್ರಿಯತಮರು || ಭಾಗಣ್ಣಪನಾರಸುಗುಣಾರ್ಣವನು ಶ್ರೀರಮಾಪತಿ ಹಂಸಸರಿಸಿಜಾಸನಸನಕದೂರ್ವಾಸಇಂಥಾಪರಮೋತ್ಕøಷ್ಟಗುರುಪರಂಪರೆಗೆ ಶರಣೆಂಬೆಪುರುಷೋತ್ತಮಾಚ್ಯುತ ಪ್ರೇಕ್ಷರಿಗೆ ಶರಣು 1ಸದಾಗಮಾಮಾಯಗಳು ಬ್ರಹ್ಮ ಧಾಮವೆÉಂದುಉದ್ಘೋಷಿಸುತಿವೆ ಮುಖ್ಯವಾಯುದೇವಮಾತರಿಶ್ವಸೂತ್ರಪವಮಾನಮುಖ್ಯಪ್ರಾಣಪ್ರತಿರಹಿತ ಬಲಜ್ಞಾನರೂಪಹನುಮ ಭೀಮ ಮಧ್ವನ್ನ2ಪ್ರೋಚ್ಚಸುರವರ ವಾಯುವಿನ ತೃತೀಯಾವತಾರ ಮಧ್ವಅಚ್ಯುತಪ್ರೇಕ್ಷರಲಿ ಸಂನ್ಯಾಸಕೊಂಡುಪ್ರಚ್ಛನ್ನ ಬೌದ್ಧಾದಿ ಮತ ಪಂಕದಿ ಬಿದ್ದಿದ್ದಸಜ್ಜನರನ್ನುದ್ಧರಿಸಿ ಸತ್‍ಜ್ಞಾನವಿತ್ತ 3ಶ್ರೀ ಮಧ್ವಗುರು ವಂಶಸ್ಥಪದ್ಮನಾಭನರಹರಿಮಾಧವಾಕ್ಷೋಭ್ಯಜಯ ವಿದ್ಯಾಧಿರಾಜವಿದ್ಯಾಧಿರಾಜರ ಶಿಷ್ಯರು ಈರ್ವರುಸಾಧು ಉತ್ಕøಷ್ಟರೀ ತೀರ್ಥರ್‍ಗಳಿಗೆ ಶರಣು 4ಶ್ರೀ ವಿದ್ಯಾಧಿರಾಜರ ಪ್ರಥಮ ಶಿಷ್ಯ ರಾಜೇಂದ್ರಹಸ್ತಪದ್ಮ ಜಾತರು ಜಯಧ್ವಜಾರ್ಯಮಾಧವನ ಏಕಾಂತ ಭಕ್ತ ಪುರುಷೋತ್ತಮರುತತ್ಸುತ ಬ್ರಹ್ಮಣ್ಯರೀ ಸರ್ವರಿಗೂ ಶರಣು 5ಪದ್ಮನಾಭತೀರ್ಥಜ ಲಕ್ಷ್ಮೀಧರರ ವಂಶಜಾತ ಸುವರ್ಣವರ್ಣ ತೀರ್ಥಾಭಿದರಸುತಲಕ್ಷ್ಮೀ ನಾರಾಯಣ ಯತಿವರ್ಯ ಶ್ರೀಪಾದರಾಜರು ಈ ಸರ್ವರಿಗೂ ಶರಣು 6ಶಿಂಶುಮಾರಪುಚ್ಛಶ್ರಿತರ ಅವತಾರರೇವಸುಮತೀಖ್ಯಾತ ಶ್ರೀಪಾದರಾಜರಲಿಭಾಷ್ಯಾಧಿಗಳ ಕಲಿಯೇ ಬ್ರಹ್ಮಣ್ಯ ತೀರ್ಥರಶಿಷ್ಯವರ್ಯ ವ್ಯಾಸರಾಜರು ಸೇರಿದರು 7ವಾದಿಗಜಕೇಸರಿಮಧ್ವಮತೋದ್ಧಾರರುಮೇದಿನೀ ಪ್ರಖ್ಯಾತ ಮಹಾಭಾಗವತರುಸಾಧುಜನ ಆಹ್ಲಾದ ಶ್ರೀ ವ್ಯಾಸರಾಜರಲಿಸದಾ ಶರಣು ಪಾಲಿಪರುಪ್ರತಿಕ್ಷಣ ದಯದಿ8ಆನಂದ ಮುನಿಕರ ಅರವಿಂದ ಸಂಜಾತವಿಷ್ಣುತೀರ್ಥ ವಂಶಜ ವಾಗೀಶರಹಸ್ತವನರುಹೋತ್ಪನ್ನರು ಸುಮಹಾಮಹಿಮರುಘನದಯಾನಿಧಿ ವಾದಿರಾಜ ಸ್ವಾಮಿಗಳು9ಯುಕ್ತಿಮಲ್ಲಿಕಾ ಮೊದಲಾದ ತತ್ವಬೋಧಕವಾದಗ್ರಂಥ ಪದ್ಯ ಕೀರ್ತನೆಗಳ್ ಸಜ್ಜನರಿಗಿತ್ತುಸೋದೆಯಲ್ಲಿ ತ್ರಿವಿಕ್ರಮಮೂರ್ತಿ ನಿಲ್ಲಿಸಿಹರುಭೂಧರಹಯಾಸ್ಯಪ್ರಿಯತಮ ಶ್ರೀ ವಾದಿರಾಜಾರ್ಯ10ತೀರ್ಥಪಾದ ಶ್ರೀಪತಿಯು ಬ್ರಹ್ಮ ಶಿವಾದ್ಯಮರ ಸಹಸದಾ ಸನ್ನಿಹಿತವಾಗಿರುವ ಮತ್ತುತೀರ್ಥವನ ಕ್ಷೇತ್ರಗಳೊಳುತ್ತಮ ವೃಂದಾವನದಿಅತ್ಯಕ್ತ ದೇಹದಿ ಕುಳಿತಿಹರು ಗುರುರಾಟ್ 11ಬುಧರು ತಿಳಿದಂತೆಯೇ ಬ್ರಹ್ಮಾಂಡ ಪುರಾಣದಲ್ಲಿವಾದಿರಾಜರು ಭಾವೀಕಲ್ಪ ಮುಖ್ಯವಾಯುಎಂದು ಪ್ರಸಿದ್ಧರೀ ಸುದುಪಾಸ್ಯ ಮದ್ಗುರುವರ್ಯರಲ್ಲಿ ಶರಣಾದೆಸದಾನಮೋ ಲಾತವ್ಯಾಚಾರ್ಯ ಕರುಣಾಬ್ಧೆ 12ವಿದ್ಯಾಧಿರಾಜರ ಎರಡನೇ ಶಿಷ್ಯರುಕವೀಂದ್ರ ಪೀಳಿಗೆಯ ಶ್ರೀರಾಮಚಂದ್ರದ್ವಿತೀಯಶಿಷ್ಯ ವಿದ್ಯಾನಿಧಿ ವಂಶಜಾತರುಆದ್ಭುತಮಹಿಮರು ಕರುಣಿ ರಘೋತ್ತಮರು 13ಕಾಮಿತಪ್ರದ ಟೀಕಾಭಾವ ಬೋಧಾರ್ಯರುಎಮ್ಮಪಾಲಿಪ ರಘೋತ್ತಮರಿಗೆ ಶರಣುರಾಮಚಂದ್ರರ ಮೊದಲನೆ ಶಿಷ್ಯ ವಿಬುಧೇಂದ್ರಈ ಮಹಾತ್ಮರ ವಂಶಜರು ಸರ್ವರಿಗೂ ನಮಿಪೆ 14ದುರ್ಜನರ ಕುಮತಗಿರಿವಜ್ರ ವಿಜಯೀಂದ್ರರುಸಜ್ಜನರುದ್ಧಾಕರು ಸುಧೀಂದ್ರಸೂರಿನಿಜವಿರಾಗಿ ಯಾದವೇಂದ್ರ ವಿಜ್ಞಾನಿಯುಭಜಕಜನಸುರಧೇನುರಾಘವೇಂದ್ರಾರ್ಯ15ಯಾರುಹಿಂದೆ ಏಡಮೂಕ ಬ್ರಾಹ್ಮಣನಾಗಿದ್ದಾಗಯಾರದ್ವಾರಾ ಶ್ರೀ ವಾದಿರಾಜರು ಸ್ವಪ್ನದಲ್ಲಿಉತ್ಕøಷ್ಟ ಶುಭತಮ ವೃಂದಾವನಾಖ್ಯಾನ ತಾವೇ ಹೇಳಿದರುಆಸೂರಿ ವಿಶ್ವಪ್ರಿಯಾರ್ಯರಿಗೆ ಶರಣು 16ಸೂರಿಕುಲತಿಲಕರು ವಾದಿಕರಿಹರಿ ಖ್ಯಾತಸಿರಿವ್ಯಾಸರಾಯರಲಿ ಮುದ್ರಿಕೆಯಕೊಂಡನಾರದರ ಅವತಾರರೆಂದು ಪ್ರಸಿದ್ಧರುಪುರಂದರದಾಸಾರ್ಯ ಕರುಣಾಂಬುಧಿಗೆ ಆನಮಿಪೆ17ನಿರ್ಝರ ವೃಂದ ಋಷಿ ಭೃಗುಮುನಿಯೇ ಧರೆಯಲ್ಲಿವಿಜಯದಾಸಾರ್ಯರಾಗಿ ಮೆರೆದವರ್ಗೆ ಶರಣುವಿಜಯವಿಟ್ಠಲನೊಲಿಯೆ ಜ್ಞಾನ ಭಕ್ತಿಸತ್ತತ್ವಸಜ್ಜನರಿಗೆ ಬೋಧಿಸಿದ ನಿವ್ರ್ಯಾಜ ಕರುಣಿ 18ಆಲಸ್ಯದಿನಾ ಮೈಥಿಲೀಪತಿ ಪಲ್ಲಿಯಲ್ಲಿಮಲಗಿರಲು ಶ್ರೀ ಗೋಪಾಲದಾಸಾರ್ಯರುಬಲುಕರುಣದಲ್ಲಿ ಮುಂದೆ ನಿಂತು ಯತಿಕೃತಮಾಲೋಲ ಪೂಜೆನೋಡಿ ಒದಗಿದ ಗುರುವರ್ಯ 19ಉಮಾಸೂನು ವಿಘ್ನಹರ ಕ್ಷಿಪ್ರಪ್ರಸಾದನುಈ ಮಹೀಯಲ್ಲಿ ಗೋಪಾಲದಾಸರಾಗಿರಮಾಪತಿಯ ಸೇವಿಸಿ ಸಜ್ಜರನ್ನುದ್ಧರಿಸಿಹರುನಮಿಸಿ ಶರಣಾದೆ ಈ ಉದಾರ ಕರುಣಿಗೆ 20ಸುಪವಿತ್ರೆ ಸೌಭಾಗ್ಯಪ್ರದ ಮಂತ್ರಗಳನೆಗೆಉಪದೇಶಮಾಡಿದ ಕಪಿಗೋತ್ರದವರುಸುಪುಣ್ಯ ಶೇಶ್ಲೀಕರು ಉದಾರ ಸಾತ್ವಿಕರುಶ್ರೀಪತಿ ಕೃಷ್ಣಪ್ರಿಯ ಶ್ರೀರಾಮಾಚಾರ್ಯರಿಗೆ ಶರಣು 21ತರುಣತನಾರಭ್ಯ ಹರಿದಾಸತ್ವ ಒದಗಿಸಿಪರಿಪರಿ ವಿಧದಲ್ಲಿ ಔದಾರ್ಯದಿಂದಕಾರುಣ್ಯಬೀರಿ ಕಾಪಾಡುತಿರುವಂಥಾ ಈಹರಿಪ್ರತಿಮಾರೂಪ ಗುರುಸರ್ವರಿಗೂತಂದೆ ತಾಯಿಗೂ ಶರಣು 22ದಧಿಶಿಲಾ ಎಂಬುವರು ಆಡಂಬರ ಪ್ರಿಯರುಮಂದಿಗಳು ಮೊಸರು ಕಲ್ಲೆಂದು ಕರೆಯುವರುಸಾಧುವೈಷ್ಣವವಿಪ್ರಮುರಾರಿರಾಯರುಸಾಧ್ವಿ ವೆಂಕಮ್ಮ ದಂಪತಿ ಇದ್ದ ಕ್ಷೇತ್ರ 23ಪುತ್ರ ರತ್ನಗಳು ನಾಲ್ಕು ಈ ದಂಪತಿಗೆಅಗ್ರಜಭಾಗಣ್ಣ, ಸೀನಪ್ಪ, ದಾಸಪ್ಪತರುವಾಯ ರಂಗಪ್ಪ ನಾಲ್ಕನೆಯವನಾಗಿಗೌರವದಿ ಚರಿಸಿತು ಮುರಾರಿರಾಯರ ಕುಟುಂಬ 24ಸಂಸಾರಾವಸ್ಥೆಯಲ್ಲಿ ನಶ್ವರ ಸುಖ ದುಃಖಮಿಶ್ರವಾಗಿಯೆ ಉಂಟು ಆ ನಿಯತಿಯಲ್ಲಿಭೂಸುರವರ್ಯರು ಮುರಾರಿರಾಯರು ಸ್ವರ್ಗತಾ ಸೇರಿದರುಸತಿಸುತರನ್ನು ಬಿಟ್ಟು25ಬಾಲಕರನ್ನು ಪ್ರಿತ್ರವ್ಯರು ಲೆಕ್ಕಿಸದಿರಲುಮಾಲೋಲ ಪಾಲಿಸುವ ಕರ್ತನ್ನೇ ನಂಬಿಶೀಲೆ ವೆಂಕಮ್ಮ ಮಕ್ಕಳನ್ನ ಕರಕೊಂಡುಒಳ್ಳೆಯ ಜನಪದ ಶಂಖಪುರವೈದಿದಳು 26ಶಂಖಪುರ ಹತ್ತಿರವೇ ಹನೂಮಂತನ ಗುಡಿಮಕ್ಕಳ ಸಹ ಅಲ್ಲಿ ವಾಸಮಾಡಿಮುಖ್ಯ ಪ್ರಾಣದೇವರ ಸೇವಿಸಿದ ಫಲವಾಗಿಚಿಕ್ಕ ಜಮೀನು ಕೊಂಡಳು ದಾನವಾಗಿ 27ದಾನ ಕೊಟ್ಟವನಿಗೆ ಬಲು ಪುಣ್ಯ ದೊರೆಯಿತುದಾನಿಗಳುಭಾಗವತಶ್ರೇಷ್ಠರಾದ್ದರಿಂದಹನುಮ ಗೋಪಾಲಾನುಗ್ರಹದಿಂದ ಐವರೂಧಾನ್ಯಸಮೃದ್ದಿ ತೊರೆದರು ಆತಂಕ 28ಕುಲ್ಕರ್ಣಿ ಎಂಬಂಥ ಸರ್ಕಾರ ಅಧಿಕಾರಿವೆಂಕಮ್ಮನಲ್ಲಿ ಮಾತ್ಸರ್ಯ ದ್ವೇಷ ಬೆಳೆಸಿಸರ್ಕಾರ ಕೆರೆ ನೀರು ಕದ್ದು ಹೊಯಿಸಿದಳೆಂದು ಆಚಿಕ್ಕ ಜಮೀನ ಒಡಮೆ ಕಿತ್ತಿಕೊಂಡ 29ಸಾಧ್ವೀ ವೆಂಕಮ್ಮನಿಗೂ ಮಹಾತ್ಮ ತತ್ಪುತ್ರರಿಗೂಅಧಮ ಅಧಿಕಾರಿ ಮಾಡಿದ ದ್ರೋಹದಿಂದಪುತ್ರ ಸಂತಾನ ವಂಶಕ್ಷೀಣವಾಯಿತು ಅವಗೆಅಂದಿನಿಂದ ಕೆರೆ ಅದ್ಯಾಪಿ ನೀರಿಲ್ಲ ಆ ಕೆರೆಯಲ್ಲಿ 30ದೀನರಿಗೂ ಸಾಧು ಮಹಾತ್ಮರಿಗೂ ಮಾಳ್ಪಸಣ್ಣದೋ ದೊಡ್ಡದೋ ದ್ರೋಹಕ್ಕೆ ದಂಡನಾಅನುಭವ ಕ್ಷಿಪ್ರದಲ್ಲೋ ಮೆಲ್ಲಗೋ ಅಪರಾಧಿ ಮೂರ್ಖಗೆದೀನ ರಕ್ಷಕ ಸತ್ಪತಿ ಶ್ರೀಹರಿಈವ31ಭಾಗಣ್ಣ ಸೀನಪ್ಪ ದಾಸಪ್ಪ ರಂಗಪ್ಪಲೌಕಿಕ ವಿದ್ಯಾ ಕಲಿತು ಉಪಾಧ್ಯಾಯರಲ್ಲಿಭಾಗಣ್ಣನಿಗೆ ಶಾನುಭೋಗ ಮುಂಜಿಮಾಡಿಭಗವದ್ವಿಷಯ ಕಲಿತರೂ ಭಾಗಣ್ಣ 32ತತ್ಕಾಲ ಲೌಕಿಕ ಶ್ರೀತನ ಕೊರತೆ ನೋಡಿಬಂಧುಗಳಿವರನ್ನುದಾಸೀನಮಾಡಿದರುಇಂದಿರಾಪತಿವೆಂಕಟಕೃಷ್ಣಗೋಪಾಲಬಂದು ಶ್ರೀ ಒದಗಿಸಿದ ಕ್ಷಿಪ್ರದಲೆ ಇವರ್ಗೆ 33ಬ್ರಹ್ಮಚಾರಿ ಭಾಗಣ್ಣ ಗಾಯತ್ರೀ ಮಂತ್ರವಅಹರಹ ಸೂಕ್ಷ್ಮಾರ್ಥಅನುಸಂಧಾನವಿಹಿತ ಶ್ರದ್ಧಾ ಉದ್ಭಕ್ತಿಪೂರ್ವಕ ಜಪಿಸೆಶ್ರೀ ಹಯಾಸ್ಸ ನಾರಾಯಣನು ಒಲಿದ ಕ್ಷಿಪ್ರದಲೆ 34ವೇದೋಚ್ಚಾರಣವೇ ಗಾನವು ಜಗದ್ರಕ್ಷಣೆಯೇ ತ್ರಾಣವುಮಾಧವನೇ ಗಾಯತ್ರಿನಾಮ ಹಯಗ್ರೀವಭೂತಪೂರ್ಣವಾಗ್ವಶ್ರೀ ಪೃಥ್ವೀ ಆಶ್ರಯ ಶರೀರವ್ಯಾಪ್ತನುಹೃದಯ ಪ್ರಾಣಾಧಾರದಿವ ಪರಸ್ವರೂಪಪಾದತ್ರಯವು ಜಗತ್ಪಾದಸದೃಶ35ಜ್ಞಾನಸುಖ ಬಲಪೂರ್ಣ ಸರ್ವ ಜಗದಾದಿಕರ್ತದಿನಪತೇಜ ಸ್ಫೂರ್ತಿದ ಚೇಷ್ಟಕಾಧಾರಶ್ರೀ ನಾರಾಯಣದೇವ ನಿನ್ನ ಚಿಂತಿಪೆ ಭಜಿಪೆಅನುಪಮ ಸರ್ವೋತ್ತಮ ನಮೋ ಕೇಶವಾದಿ ನಾಮ 36ಲೌಕಿಕ ವಿಷಯಗಳೊಳ್ ಮನವಾಕ್ಕು ಚಲಿಸದೆಏಕಚಿತ್ತದಿ ಗಾಯತ್ರೀ ಪ್ರತಿಪಾದÀ್ಯಶ್ರೀ ಗಾಯತ್ರೀನಾಮ ನಾರಾಯಣನನ್ನಭಾಗಣ್ಣ ಜಪಿಸಿದರು ಕಂಡರು ಶ್ರೀಕರನ್ನ 37ಏಕಾಂತದಲ್ಲಿ ವೃಕ್ಷಮೂಲದಲ್ಲಿ ಕುಳಿತಿದ್ದಭಾಗಣ್ಣನ ಜಪಕೆಡಿಸಿ ಓರ್ವ ದುಷ್ಟಹಾಕಿದನು ಕುದಿನೀರು ಬೊಬ್ಬೆಗಳ್ ಅವನ ಮೇಲೆದ್ದವುಚಿಕಿತರಾಗಿ ಜನರು ಹೊಗಳಿದರು ಭಾಗಣ್ಣನ 38ಮತ್ತೊಂದುದಿನ ಇದಕೆÀ ಮುಂದೆಯೋ ಹಿಂದೆಯೋಸುತ್ತಿ ಭಾಗಣ್ಣ ವೃಕ್ಷಮೂಲದಲಿ ಸರ್ಪಹಿತದಿ ಆಶೀರ್ವದಿಸಿ ಪೋದಂತೆ ಪೋಯಿತುಇದು ನೋಡಿ ಜನರು ಕೊಂಡರು ಭೀತಿ, ಆಶ್ಚರ್ಯ ಮರ್ಯಾದೆ 39ಅಂದು ಮೃತಸರ್ಪ ಅರಿಯರಿಯರು ಶಮೀಕರು ಸಮಾಧಿಯಲಿಇಂದುತನ್ನ ಸರ್ಪ ಸುತ್ತಿರುವುದು ಭಾಗಣ್ಣ ಅರಿಯರುಇಂದಿರೇಶ ಒಲಿದವನಿವನೆಂದು ಶೇಷನೇ ಆಲಿಂಗಿಸಿದನೋಸ್ಕಂಧ ತನ್ನಯ ಸಹೋದರನೆಂದಪ್ಪಿ ಕೋಂಡನೋ 40ತತ್ವಮಾತೃಕಾನ್ಯಾಸಗಳ ಚರಿಸಿಮಂತ್ರ ಮೂಲಪ್ರಣವಅಷ್ಟಾಕ್ಷರೀ ಗಾಯತ್ರೀಭಕ್ತಿ ಪೂರ್ವಕ ಜಪಿಸಿ ಹೊರ ಒಳಗೆ ಶ್ರೀಹರಿಯವ್ಯಾಪ್ತಿವಿಜ್ಞಾನಪುಟ್ಟಿತು ಈ ಚೌತಾಪರೋಕ್ಷಿಗೆ41ವ್ಯಾಪ್ತಿ ದರ್ಶಿಯು ಇವರು ಶ್ರೀ ವಿಷ್ಣು ಅನುಗ್ರಹದಿಇಂದಿನ ಹಿಂದಿನ ಮುಂದಿನ ವಿಷಯ ಜ್ಞಾನವೇದ್ಯವಾಯಿತು ಹರಿಸ್ಮರಣಾ ಪೂರ್ವ ಆಲೋಚನದಿಬಂದು ಕೇಳುವವರಿಗೆ ಯೋಗ ಪೇಳಿದರು 42ಯೋಗಕ್ಷೇಮ ಸರ್ವಕೂ ನಿಯಾಮಕನು ಹರಿಯೇವೆಭಾಗಣ್ಣ ಈತತ್ವಜ್ಞಾನ ಪೂರ್ವಕದಿಲೌಕಿಕ ಧನ ಅಪೇಕ್ಷಿಸದಿದ್ದರೂ ಜನರುಬಾಗಿ ದ್ರವ್ಯಗಳಿತ್ತು ಬೇಡಿದರು ಸ್ವೀಕರಿಸೆ 43ಭವಿಷ್ಯ ಪೇಳುವುದರಲ್ಲಿ ಖ್ಯಾತಿ ಹರಡಿದ್ದಲ್ಲದೆಸರ್ವೇಶನ ಸ್ತೋತ್ರಕವನ ಪಟು ಎಂದುಸರ್ವರೂ ಕೊಂಡಾಡಿ ಆ ಊರಿಗೆ ಬಂದ ಪ್ರಖ್ಯಾತಕವಿಯನ್ನ ನಿಗ್ರಹಸಿ ಓಡಿಸಿದರು ಧೀರ 44ದಿಗ್ವಜಯ ಜಯಶೀಲನೆಂದು ಖ್ಯಾತ ಆಕವಿಭಾಗಣ್ಣ ಸೋಲಿಸಿ ಓಡಿಸಿದ್ದುಭಾಗಣ್ಣನ ಪ್ರಭಾವವ ಹರಡಿಸಿತು ನಾಡಲ್ಲಿಭಾಗಣ್ಣಗೆ ಸನ್ಮಾನ ಮಾಡಿದರು 45ಗದ್ವಾಲರಾಜನು ಇನ್ನೂ ಬಹು ಪ್ರಮುಖರುಬಂದು ನೇರವಾಗಿ ಭಾಗಣ್ಣನಲ್ಲಿವಂದಿಸಿ ಸನ್ಮಾನ ಪ್ರಶಸ್ತಿಗಳ ಅರ್ಪಿಸಿಪೋದರು ಶ್ಲಾಫಿಸುತ ತಮ್ಮ ತಮ್ಮ ಸ್ಥಳಕೆ 46ಹಿಂದೆ ದ್ರವ್ಯ ಹೀನನಾಗಿದ್ದ ಭಾಗಣ್ಣನಿಗೆಇಂದುಶ್ರೀಕೃಷ್ಣನ ಒಲುಮೆಯಿಂದಬಂದು ಸೌಭಾಗ್ಯ ಶ್ರೀ ದ್ರವ್ಯಗಳುಔದಾರ್ಯದಿ ದಾನಾದಿಗಳ್ ಮಾಡಿದರು 47ಇಷ್ಟರಲ್ಲೇ ಸೀನಪ್ಪ ದಾಸಪ್ಪ ರಂಗಪ್ಪಪ್ರೌಢವಯಸ್‍ಐದಿ ಗದ್ವಾಲು ಹೋಗೆ ಅಲ್ಲಿಮೌಢ್ಯ ಮಾತ್ಸರ್ಯದಿ ರಾಜ್ಯಾಧಿಕಾರಿಗಳುಕಡು ನಿರೋಧ ಮಾಡಿದರು ಮೂವರನ್ನು 48ವೆಂಕಟೇಶನ ಇಚ್ಛಾ ಈಮೂವರು ಅಣ್ಣಭಾಗಣ್ಣ ನಾಶ್ರಯದಲ್ಲೇವೆ ಇದ್ದುಅಗಲದೆ ಶ್ರೀಹರಿಗುಣಾನುವರ್ಣನಾಗಳಸುಗಾನ ಮಾಡುತ್ತಾ ಇರಬೇಕು ಎಂದು 49ಭಾಗಣ್ಣ ಅರ್ಯರು ಗದ್ವಾಲಿಗೆ ಪೋಗಿಸುಗುಣವಂತ ತಮ್ಮಂದಿರನ್ನ ಕರೆತಂದುಅಗಣಿತಗುಣಾರ್ಣವ ಶ್ರೀಯಃ ಪತಿಯ ಸೇವೆಗೆಯೋಗ್ಯೋಪದೇಶ ಪೂರ್ವಕ ತಯಾರು ಮಾಡಿದರು 50ದಾಸಪ್ಪ ಸೀನಪ್ಪ ರಂಗಪ್ಪ ತಮ್ಮ ಜ್ಞಾನಭಕ್ತಿಕಾಶಿಸಿ ವರ್ಧಿಪುದು ದಿನೇ ದಿನೇ ಹೆಚ್ಚಿಶ್ರೀ ಶ್ರೀನಿವಾಸನ ಪ್ರೀತಿಗೆ ಭಾಗಣ್ಣಚರಿಸುವ ಅನ್ನದಾನಾದಿಗಳಲ್ಲಿ ಸೇವಿಸಿದರು 51ದ್ರವ್ಯ ಧಾನ್ಯರಾಶಿಗಳು ತುಂಬಿದ್ದು ಕಂಡುದೇವ ಬ್ರಾಹ್ಮಣ ಸೇವೆಗೆ ಅಕ್ಕಿ ಹೆಚ್ಚು ಬೇಡೆಂದುಯಾವರೂ ಕಾಣದೆ ವೆಂಕಮ್ಮ ಮುಚ್ಚಿಡಲುಯಾವತ್ತೂ ಅಕ್ಕಿಯು ಹುಳುವಾಯ್ತು ಮರುದಿನ 52ಹರಿಬಲುಮೆಯಿಂದ ಭಾಗಣ್ಣ ಈ ರೀತಿ ತೋರಿಸಲುಹರಿಭಕ್ತಿ ವೈರಾಗ್ಯ ಹೆಚ್ಚಿತು ಮಾತೆಗೆಭಾರಿತರ ಕೀರ್ತನಾ ಸೇವೆ ಅತಿಶಯ ಚರ್ಯಅರಿತು ನಾಡೆಲ್ಲವೊ ಕೊಂಡಾಡಿತು ಭಾಗಣ್ಣನ 53ಉತ್ತನೂರು ಸಮೀಪವು ಐಜೀ ಎಂಬುವ ಗ್ರಾಮಉತ್ತಮ ಬ್ರಾಹ್ಮಣ ವೇಂಕಟನರಸಿಂಹಾಚಾರ್ಯದಂಪತಿಗೆ ಪುತ್ರರತ್ನ ವೇಂಕಟರಾಮಾಚಾರ್ಯಮಂದತನ ತೋರಿಸಿದ ಪುಸ್ತಕ ವಿದ್ಯೆಯಲ್ಲಿ 54ಭಾಗಣ್ಣ ಆರ್ಯರ ಪ್ರಭಾವದಲಿ ಆದರವೇಂಕಟನೃಸಿಂಹಾರ್ಯರ ಭಾರ್ಯೆಗೆ ಉಂಟುಭಾಗಣ್ಣನಲಿ ಪೋಗಿ ಮಗನ ತಿದ್ದುವ ಬಗೆಹೇಗೆಂದು ಅರಿಯಿರಿ ಎಂದಳು ಸಾಧ್ವೀ 55ಸಾಧ್ವೀ ಆಸ್ತ್ರೀರತ್ನಳಿಗೆ ಭಾಗಣ್ಣನುಔದಾರ್ಯದಿ ಒದಗುವ ಜ್ಞಾನಿವರ್ಯನೆಂದುಸುದೃಢದಿ ನಂಬಿದರೂ ಆಚಾರ್ಯ ಅರ್ಧಮನಸಿಂಪೋದರು ಕಂಡರು ಭಾಗಣ್ಣನ ಗುಡಿಯಲ್ಲಿ 56ವೇಂಕಟನೃಸಿಂಹಾರ್ಯ ತನ್ನ ಪಾಂಡಿತ್ಯ ಗುರುತನ ನೆನದುಆಕಸ್ಮಿಕ ಬೇಟಿಯಂತೆ ತೋರ್ಪಡಿಸಿವೇಂಕಟೇಶ ತುಳಸೀ ಸನ್ನಿಧಾನದಿ ಸಂಭಾಷಿಸಲುಶೀಘ್ರ ಕಂಡರು ಭಾಗಣ್ಣನ ಜ್ಞಾನಪ್ರಭಾವ 57ಭಾಗಣ್ಣ ಅಭಯವನಿತ್ತು ಆಚಾರ್ಯರನ್ನಹೋಗಿ ಬನ್ನಿ ಆತಂಕಬೇಡ ಮಹಾತ್ಮಮಗ ಸೂರಿಕುಲ ರತ್ನನು ವೇಂಕಟರಾಮಪ್ರಕಾಶಿಪುದು ಆತನ ಜ್ಞಾನಕ್ಷಿಪ್ರದಲೇ ಎಂದರು 58ಭಾಗಣ್ಣ ಆರ್ಯರು ಹೇಳಿದ ರೀತಿಯಲ್ಲೇವೇಂಕಟರಾಮಾರ್ಯ ಏಕವಾರ ಶ್ರವಣದಲ್ಲೇವೇಂಕಟನರಸಿಂಹಾಚಾರ್ಯ ಚಕಿತರಾಗುವಂತೆಅಕಳಂಕ ಪಾಂಡಿತ್ಯಪ್ರೌಢಿಮೆ ತೋರಿಸಿದ 59ಪ್ರತಿದಿನ ಐಜಿಯವರು ಭಾಗಣ್ಣ ದಾಸರೂ ಈರ್ವರುತತ್ವ ವಿಚಾರ ಹರಿಭಜನೆ ಮಾಡಿಒಂದು ದಿನ ಬ್ರಹ್ಮ ಜಿಜ್ಞಾಸ ಸ್ವಾರಸ್ಯದಲಿ ಸಾಯಂಸುಧ್ಯಾಕಾಲ ಅತಿಕ್ರಮವು ಆಯಿತು 60ಸೂರ್ಯಾಸ್ತ ಮನಃಪೂರ್ವಕರ್ತವ್ಯಕರ್ಮಬಿಟ್ಟದೋಷಪ್ರಾಯಶ್ಚಿತ್ತಾಘ್ರ್ಯ ಕೊಡಲಿಕ್ಕೆ ಇರಲುಭಯಬೇಡ ದೋಷವಿಲ್ಲ ಎಂದು ಭಾಗಣ್ಣಾರ್ಯಸೂರ್ಯನ್ನ ತಾನು ನೋಡಿ ತೋರಿಸಿದರು ಐಜೀಗೆ 61ಇಂದ್ರಜಾಲವಲ್ಲವು ಕ್ಷುದ್ರೋಪಾಸನಾದಿಗಳಿಂದಲ್ಲಅರ್ಧರಾತ್ರಿಯಲಿ ಸೂರ್ಯನ್ನ ನೋಡಿ ನೋಡಿಸಿದ್ದುಮಾಧವಶ್ರೀ ಮುಖ್ಯ ವಾಯುದೇವರು ರುದ್ರಸದಾ ಒಲಿದಿರುವ ಭಾಗಣ್ಣಗೆ ಇದು ಆಶ್ಚರ್ಯವಲ್ಲ 62ತೇಜೋಜಲ ಪೃಥ್ವೀಮುನಿಗಳು ಶ್ರೀ ಪ್ರಾಣರುದ್ರರುವಜ್ರ, ಅಗ್ನಿ, ವರುಣ ಪೃಥಿವ್ಯಾದಿ ಸರ್ವರೊಳಗೊರಾಜನೆ ನಿಯಮಿಸುವ ಅನಿರುದ್ಧ ಜಗದೀಶಜಗಜ್ಜನ್ಮಾದಿಕರ್ತ ಗಾಯತ್ರೀ ಭರ್ಗಸರ್ವಗನು 63ತೀರ್ಥಯಾತ್ರೆಯ ತೀರ್ಥರೂಪ ಭಾಗಣ್ಣ ತನ್ನಭ್ರಾತರೊಡಗೂಡಿ ಹೊರಟಿಹರುಮಂತ್ರಾಲಯ ವೇಂಕಟಗಿರಿ ಘಟಿಕಾದ್ರಿಹಸ್ತಿವರದಕಂಚಿ ಮೊದಲಾದ ಕ್ಷೇತ್ರ64ವೇಂಕಟ ಕೃಷ್ಣನ ಮುದ್ರೆಯಿಂ ಕವನಗಳಉತ್ಕøಷ್ಟ ರೀತಿಯಲ್ಲಿ ರಚಿಸಿ ಭಜಿಸುತ್ತಾಭಾಗಣ್ಣ ಆದವಾನೀಯಲ್ಲಿ ತಿಮ್ಮಣ್ಣಾರ್ಯರಲ್ಲಿಮುಕ್ಕಾಮು ಹಾಕಿದರು ಸ್ವಲ್ಪಕಾಲ 65ದಿವಾನು ತಿಮ್ಮಣ್ಣ ರಾಯರ ಉಪಚಾರಸರ್ವ ಅನುಕೂಲ ಆತಿಥ್ಯಕೊಳ್ಳುತ್ತಾದಿವ್ಯಮಾರುತೀ ಗುಡಿಗೆ ಪ್ರತಿದಿನ ಪೋಗಿಸೇವೆಸಲ್ಲಿಸಿದರು ಭಾಗಣ್ಣ ಶ್ರೀಹನುಮನಿಗೆ 66ಶ್ರೀ ವಿಜಯದಾಸಾರ್ಯರು ಶ್ರೀ ವ್ಯಾಸದೇವರ ಕಂಡುಶ್ರೀವರ ಒಲಿದು ಪುರಂದರಾರ್ಯರ ಕೈಯಿಂದದಿವ್ಯನಾಮಾಂಕಿತ ಬೀಜಾಕ್ಷರಗಳ ಹೊಂದಿಭುವಿಯಲಿ ಪ್ರಖ್ಯಾತರಾಗಿ ಬಂದಿದ್ದರಾಗ 67ವಿಜಯವಿಟ್ಠಲದಾಸರಾಯರು ತಮ್ಮನಿಜ ಶಿಷ್ಯವೃಂದದಲಿ ವ್ಯಾಸವಿಜಯಸಾರಥಿಗೋಪಾಲಹಯವದನಭಜನೀಯ ಈ ಮೂರು ಅಂಕಿತಕೊಡಬೇಕಾಗಿತ್ತು 68ಗೋಪಾಲವಿಠ್ಠಲಸುನಾಮಭಾಗಣ್ಣಗೆಸುಪ್ರಿಯ ಮನದಿಂದ ಇತ್ತು ಹಯವದನಸುಪವಿತ್ರ ಅಂಕಿತ ಚೀಕಲಪರವಿ ಆನಂದನಿಗೆಕೃಪಾಂಬುಧಿ ವಿಜಯದಾಸಾರ್ಯ ಇತ್ತರು 69ಶ್ರೀಪುರಂದರದಾಸಾರ್ಯರನುಗ್ರಹದಲಿಸುಪುಣ್ಯವಂತನು ಸಹನ ಶಾಲಿಯಾದಶ್ರೀಪಪ್ರಿಯ ತಿಮ್ಮಣ್ಣ ವೇಣುಗೋಪಾಲನಾಮತಾಪೊಂದಿದ ವಿಜಯದಾಸರು ಕೃಪದಿ ಕೊಡಲು 70ಶೋಭನ ಜ್ಞಾನಪ್ರದ ವ್ಯಾಸ ನಾಮಾಂಕಿತವಸುಬ್ಬಣ್ಣ ಕಲ್ಲೂರು ಪಂಡಿತೋತ್ತಮಗೆಲಭಿಸುವಂತೆ ವಿಜಯದಾಸ ಮಹಂತರುಕೃಪೆಯಿಂದ ಒದಗಿಸಿದರು ಔದಾರ್ಯನಿಧಿಯು 71ಗೋಪಾಲ ವಿಟ್ಠಲಾಂಕಿತದಲಿ ಭಾಗಣ್ಣಶ್ರೀಪಪ್ರಿಯತಮ ಪದ್ಯ ಸುಳಾದಿಗಳ ರಚಿಸಿಸುಪುಣ್ಯವಂತ ಸೀನಪ್ಪ ದಾಸಪ್ಪ ಈರ್ವರಿಗೂಉಪದೇಶ ಮಾಡಿದರು ಮಂತ್ರೋಪೇತ ನಾಮಾಂಕಿತಗಳನ್ನು 72ಕರಿರಾಜವರದನು ಗರುಡವಾಹನಸಿರಿವರವಾಸು ದೇವನೇ ವರದರಾಜನೆಂದೂಧರೆಯಲುತ್ತಮ ಕಂಚೀಪುರದಿ ಇರುವವನು ನಾಮವರದಗೋಪಾಲ ವಿಟ್ಠಲನಾಮ ಶ್ರೀನಿವಾಸನಿಗೆ 73ಇತರಾದೇವಿಯ ಸುತನೆನಿಸಿ ಮಹಿದಾಸನಾಮದಲಿಪ್ರಾದುರ್ಭವಿಸಿದ ಶ್ರೀಯಃಪತಿಗೆ ಪ್ರಿಯತಮವುಬೃಹತೀ ಸಹಸ್ರದಲಿ ವಿಷ್ಣು ನಾಮ ವಿಶ್ವಶಬ್ದಕ್ಕೆವಾಯುದೇವಾಂತರ್ಗತನು ಎಂದು ಜೆÕೀಯ 74ಮಧ್ವಾ ್ಯಖ್ಯ ವಾಯುದೇವರಗುರುಮಹಿದಾಸವೇದವ್ಯಾಸ ಹಂಸಾಖ್ಯ ಕಪಿಲ ಶ್ರೀಪತಿಯಉತ್ತಮನಾಮ ಗುರುಗೋಪಾಲ ವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 75ಭಂಗಾರದಂಥ ವೈಷ್ಣವ ಸಂತತಿಯ ಪಡೆದುರಂಗನಾಥನನುಗ್ರಹದಿ ಪಾಲಿಸುವಂಥಾರಂಗಪ್ಪರಾಯರಿಗೆ ತಂದೆ ಗೋಪಾಲವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 76ವಿಜಯರಾಯರ ಪರಮಭಕ್ತಾನುಗ್ರಹಿವಿಜಯಸಾರಥಿಪ್ರಿಯ ಗೋಪಾಲರಾಯರುವಿಜಯಾರ್ಯರ ಸುಪ್ರಸಾದದ ಬಲದಿಂದಅನುಜರಿಗೆ ಒದಗಿಸಿದರುಅಪರೋಕ್ಷ77ಗೋಪಾಲ ವರದಗುರು ಗೋಪಾಲದಾಸರ್ಗಳಅಪರೋಕ್ಷಮಹಿಮೆಗಳ ಸಾಧು ಸಜ್ಜನಗಳತೋರ್ಪಡಿಸಿ ಬೇರೆ ಬೇರೆಯಾಗಿಟ್ಟು ಮೂವರನ್ನುಶ್ರೀಪಪ್ರಿಯ ಕವನವ ರಚಿಸಿಗುರುಹೇಳಿದರು78ಗುರುಅಂತರ್ಗತನಾದ ಗೋಪಾಲನೃಹರಿಯಸ್ಮರಿಸಿ ಮೂವರೂ ಗುರುನಾಮವೂ ತದಂತಸ್ಥಹರಿಗೆ ಸುಪ್ರೀತಿಕರಯೆಂದು ರಚಿಸಿದರುಗುರುಸತ್ಯಬೋಧರ ಪ್ರಭಾವತೋರ್ಪಡಿಸಿ79ಸೂರಿಗಳುಗೋಪಾಲದಾಸಾದಿ ಮೂವರೂಬರೆದ ಕೀರ್ತನೆಯಲ್ಲಿ ಸತ್ಯಬೋಧಾರ್ಯರಸ್ವರೂಪವ ಸೂಕ್ಷ್ಮದಲಿ ಸೂಚಿಸಿಹರು ಎಂದುಅರಿವರು ಜ್ಞಾನಿಗಳು ಬಲ್ಲೇನೇ ನಾನು? 80ನೆರೆÀದಿದ್ದ ಜನರೆಲ್ಲ ಆಶ್ಚರ್ಯ ಚಕಿತರುಪರಿಪರಿ ವಿಧದಲ್ಲಿ ಮೂವರನ್ನು ಕೊಂಡಾಡೆಗುರುಸತ್ಯಬೋಧರು ಯುಕ್ತ ರೀತಿಯಲ್ಲಿಭಾರಿತರ ಭೂಷಣಾನುಗ್ರಹ ಮಾಡಿದರು 81ತಂದೆ ಗೋಪಾಲದಾಸಾರ್ಯರು ಮನೆಯಲ್ಲೇನಿಂದುಸತಿಸುತರಿಗೆ ಹರಿಸೇವೆಯನ್ನಒದಗಿಸುತ ಮಾತ್ರಂತರ್ಯಾಮಿ ಹರಿಯನ್ನ ತಾನುಭಕ್ತಿಪೂರ್ವಕ ಮಾಡುತ್ತಿದ್ದರು ಸೇವಾ ಸುಧ್ಯಾನ ಪರರು 82ಹರಿಕ್ಷೇತ್ರ ಹರಿತೀರ್ಥಯಾತ್ರೆಯಗೈಯ್ಯಲುಸಿರಿವಿಜಯರಾಯರ ಅನುಗ್ರಹ ಕೊಂಡುಹೊರಟರು ಗೋಪಾಲದಾಸಾರ್ಯರುವರದಗುರುಗೋಪಾಲದಾಸರ ಸಮೇತ83ಉಡುಪಿಕ್ಷೇತ್ರಸ್ಥ ಹರಿಮೂರ್ತಿಸ್ಥ ತೀರ್ಥಸ್ಥಕಡಲಶಯನನ್ನ ನೋಡಿ ಸೇವಿಸಲಿಕ್ಕೆಒಡಹುಟ್ಟಿದವರ ಸಹ ನಡೆಯುತ್ತಿರುವಾಗಅಡ್ಡಗಟ್ಟಿದ ಕ್ರೂರನು ಭೀಮಾಭಿದನು 84ಶ್ರೀ ವಿಜಯದಾಸರಿಂ ಮೊದಲೇ ಅನುಗ್ರಹೀತಭಾವುಕಾಗ್ರಣೀ ಗೋಪಾಲಾರ್ಯರು ಹರಿಗುರುಗಳಿತ್ತದಿವ್ಯ ಸಾಮಥ್ರ್ಯದಿಂ ಸಸೈನ್ಯ ಭೀಮನ್ನತೀವ್ರ ನಿಶ್ಚೇಷ್ಟಗೈಸಿ ಶರಣರ ಮಾಡಿದರು 85ಉಡುಪಿಸುಕ್ಷೇತ್ರದಲ್ಲಿ ಗೋಪಾಲಾರ್ಯರುಮಾಡಿದ್ದು ವರ್ಣಿಸಲು ಬಲ್ಲೆನೇ ನಾನು ?ಆಟದಲಿ ಜಗಪಡೆವ ಕೃಷ್ಣ ತಾಸುತನಂತೆಆಟವಾಡಿದ ಬಾಲರೂಪದಿ ಕೃಪಾಳು 86ಪೂರ್ವ ದಕ್ಷಿಣ ವರುಣ ದಿಶೆಯಾತ್ರೆಮಾಡಿಶ್ರೀ ವೇಣೀಸೋಮಪುರಕೆ ಮರಳಿ ಬಂದುಕೋವಿದಕುಲರತ್ನ ವಾಸುದೇವವಿಟ್ಠಲ ರಾಮಶ್ರೀವೇಂಕಟರಾಮಾರ್ಯರನ್ನು ಕಂಡರು 87ಉತ್ತನೂರು ಪೋಗಿ ವೇಂಕಟಕೃಷ್ಣನ್ನವಂದಿಸಿ ಬಂಧುಗಳ ಕೂಡ ತಾ ಇದ್ದುಒಂದುದಿನ ನಿಶ್ಚೈಸಿದರು ಪಂಡರೀಪುರಕ್ಕೆ ಪೋಗಿಇಂದಿರಾಪತಿಯನ್ನ ನೋಡಿ ಸೇವಿಸಲು 88ಪತ್ರಪೂ ಪಲ್ಲವ ಫಲವೃಕ್ಷ ದೇಶವುಸುಪವಿತ್ರ ಶ್ರೀ ತುಳಸೀ ಉತ್ಕøಷ್ಟವನದಿಸುಪುಣ್ಯ ಶ್ಲೋಕ ಶ್ರೀದಾಸಾರ್ಯರನ್ನ ಸುತ್ತಿ ಅಟ್ಟಿಶ್ರೀಪತಿ ಕೇಳ್ದ ಅಲೇನಾಹಿ ಎಂದು 89ಶ್ರೀಹರಿ ಸ್ವೇಚ್ಛೆಯಿಂ ಪ್ರಕೃತಿ ಕ್ಷೋಭಿಸಿ ತ್ರಿಗುಣ ಬೆರೆಸಿಮಹದಹಂಕಾರಾದಿ ತತ್ವ ಸೃಷ್ಟಿಗೈದುಬ್ರಹ್ಮಾಂಡ ನಿರ್ಮಿಸಿ ತದಾಶ್ರಯನಾಗಿ ಇಪ್ಪವನು ತಾನೇಮಹಾದ್ಭುತ ಕುದುರೆ ಸವಾರನಾಗಿ ತೋರಿ ಮರೆಯಾದ 90ಆಲೋಚಿಸಿ ತಿಳಿದು ವಿಟ್ಠಲನೇ ಬಂದವನೆಂದುನೀಲಕುದುರೆ ಎಂಬ ಸ್ತೋತ್ರ ಮಾಡಿದರುಪೇಳ್ವರು ವ್ಯಾಪ್ತೋಪಾಸಕ ಜ್ಞಾನಿಗಳು ಇದರ ರ್ಥಮೊದಲನೇ ನುಡಿಯು ಮೇಲೆ ಹೇಳಿದಹರಿಮಹಿಮೆಯೆಂದು ಬಲ್ಲೆನೇ ನಾನು 91ಭೀಮರಥಿ ಸ್ನಾನವು ಪುರಂದರಾರ್ಯರ ನಮಿಸಿಭೂಯಾದಿ ಗುಣಗಣಾರ್ಣವ ವಿಟ್ಠಲನ್ನಪ್ರೇಮೋತ್ಸಾಹದಲಿ ಸನ್ನಮಿಸಿಸ್ತುತಿಸಿರಮ ರುಕ್ಮಿಣಿಯ ನಮಿಸಿದರು ದಾಸಾರ್ಯ 92ಕೋಲ್ಹಾಪುರ ಪೋಗಿ ಮಹಾಲಕ್ಷ್ಮಿ ಮಂದಿರದಿಶೀಲ ಪರಮಾದರದಿ ಲಕ್ಷ್ಮೀನಾರಾಯಣರನ್ನಕೀಲಾಲಜಾದಿ ಪುಷ್ಪಾರ್ಚನೆಗೈದು ಕಾಪಾಡೆಂದು ಕೀರ್ತನೆಗಳಿಂದ ಸ್ತುತಿಸಿದರು 93ಇನ್ನು ಬಹು ಬಹು ಕ್ಷೇತ್ರಯಾತ್ರೆ ಸೋದರರ ಕೂಡಿಅನವರತಸುವ್ರತ ಧ್ಯಾನಪರರಾಗಿಘನಮಹಿಮ ಗೋಪಾಲ ವಿಟ್ಠಲನ ಸ್ತುತಿಸುತ್ತವೇಣೀ ಸೋಮಪುರಕ್ಕೆ ಬಂದರು ತಿರುಗಿ 94ಗುರುಗಳು ವಿಜಯದಾಸಾರ್ಯರ ದ್ವಾರಾಯಾತ್ರಫಲ ಕೃಷ್ಣನಿಗೆ ಸಮರ್ಪಿಸಿಉದ್ದಾಮಪಂಡಿತವೇಂಕಟರಾಮಾರ್ಯರಲಿಇದ್ದು ಪೋದರು ಉತ್ತನೂರ ಸ್ವಕ್ಷೇತ್ರ 95ಉತ್ತನೂರು ವೇಂಕಟಕೃಷ್ಣನಾಲಯ ಮುಂದೆನಿಂತು ತುಳಸೀ ವನದಿಂದ ಸುಳ್ಳಿ ತೆಗೆವಾಗಬಂದರು ಭ್ಯಾಗವಟ್ಟಿ ಶ್ರೀನಿವಾಸಾಚಾರ್ಯವಂದಿಸಿ ನಿಂತರು ಕೈಮುಗಿದು ವಿನಯದಿ 96ಜ್ಞಾನದಲಿ ಋಜುಮಾರ್ಗ ಗರ್ವದಲ್ಲಿನಿತ್ಯಸಂಸಾರಿಮಾರ್ಗಜ್ಞಾನ ಬೋಧಿಸುವುದರಲ್ಲಿ ಪಂಡಿತರಮಾರ್ಗಮಾನುಷಾನ್ನವನುಂಡು ಮಂದಧೀಯಲ್ಲಿ ಗುರುನಿಂದಾಈ ಶ್ರೀನಿವಾಸಾಭಿದನು ಮಾಡಿ ನರಳುತಿದ್ದ 97ಭಾಗಣ್ಣ ಆರ್ಯರು ಶ್ರೀನಿವಾಸಾಚಾರ್ಯಗೆಅಘನಾಶವಿಜ್ಞಾನಲಭಿಸುವ ಸಾಧನವುನಿಗಮಾರ್ಥ ಬೋಧಕ ಉಪದೇಶ ಮಾಡಿ ಪಂಡರಿಪುರ ಪೋಗಿರಿಜಗನ್ನಾಥ ವಿಟ್ಠಲ ಒಲಿದು ಕಾಂಬ ಎಂದರು 98ಶ್ರೀನಿವಾಸಾಚಾರ್ಯರು ದಾಸಾರ್ಯಾರ್ ಹೇಳಿದಂತೆಸುನಿರ್ಮಲ ಭೀಮ ರಥಿಯಲ್ಲಿ ಸ್ನಾನಗೈದುಇನನಲಿ ಅನಿಲಾಂತರ್ಗತ ನಾರಾಯಣನ್ನಧ್ಯಾನಿಸಿ ಭಕ್ತಿಜ್ಞಾನದಿಂದ ಕೊಟ್ಟರು ಅಘ್ರ್ಯ 99ಐದೆರಡು ಸಾಧು ಭಕ್ತಿ ಪ್ರತಿಪಾದ್ಯ ಶ್ರೀ ನಾರಾಯಣನುವಾಗ್ದೇವಿವರವಾಯುಗಳಿಂದ ಋಕ್‍ಸಾಮದಿಂಸ್ತುತಇಪತ್ತೆರಡಕ್ಷರದಲ್ಲಿ ಎರಡನೇ ಮೂರಕ್ಷರ ಬೋಧಿತಆದಿತ್ಯಸ್ಥ ವಾಯುಸ್ಥನ್ನ ಸ್ಮರಿಸಿಕೊಟ್ಟರು ಅಘ್ರ್ಯ 100ಜಗನ್ನಾಥದಾಸರ್ಗೆ ಗೋಪಾಲದಾಸಾರ್ಯಗುರುಜಗತ್ತಲ್ಲಿ ಕಂಡಿಲ್ಲದ ಉದಾರದಲಿತೆಗೆದು ತನ್ನಾಯುಷ್ಯದಿಂ ಚತ್ವಾರಿವರ್ಷಕೊಟ್ಟರುಗುರುಗ ಶ್ರೀವಿಜಯಗೋಪಾಲ ಶ್ರೀನಿವಾಸನ ಪ್ರೀತಿಗೆ101ಭಕ್ತಿಯಲ್ಲಿ ಭಾಗಣ್ಣನೆಂದು ಸುಪ್ರಖ್ಯಾತಭಕ್ತ ಶಿರೋಮಣಿಯು ಗೋಪಾಲ ದಾಸಾರ್ಯಬೀದಿಯಲಿ ಜರುಗದ ರಥಕೂಢನ್ನ ಬಾರೈಯ್ಯಎಂದು ಸ್ತುತಿಸೆ ರಥ ಓಡೋಡಿ ಬಂತು 102ತಿರುಪತಿ ಶ್ರೀ ಶ್ರೀನಿವಾಸನ ರಥವುಸರಸರ ಬಂದದ್ದು ಜನರು ನೋಡಿಹರಿಭಕ್ತಾಗ್ರೇಸ ಗೋಪಾಲ ದಾಸರನ್ನಪರಿಪರಿ ವಿಧದಿ ಕೊಂಡಾಡಿದರು ಮುದದಿ 103ಕಂಚೀ ವರದರಾಜನ ದೇವಾಲಯದಲ್ಲಿಕಿಚ್ಚು ಸೋಕಿ ಚೀಲ ಉರಿಯಲು ಅದನ್ನದಾಸವರ್ಯ ದೂರದೇಶದಲಿದ್ದರೂ | ತನ್ನ ಚೀಲ |ಕಸಕಿ ಶಾಂತ ಮಾಡಿದರು ಕಂಚಿಯ ಉರಿಯ 104ದಾರಿದ್ರ್ಯ ಋಣರೋಗ ಅಪಮೃತ್ಯು ಅಪಿಚಾರಪರಿಪರಿ ಕಷ್ಟೋಪಟಳ ವಿಘ್ನಗಳಗುರುವಿಜಯರಾಯಾಂತರ್ಗತ ಗೋಪಾಲನ ಒಲುಮೆಯಿಂದಎರಗುವರ್ಗೆ ಕಳೆದಿಹರು ಅದ್ಯಾಪಿ ಒದಗುತಿಹರು 105ಗೋಪಾಲದಾಸರಿಗೆವಿಜಯದಾಸರಲ್ಲಿಇಪ್ಪ ಭಕ್ತಿಯ ವರ್ಣಿಸಲಶಕ್ಯಗೋಪಾಲ ದಾಸರನ್ನು ನಂಬಿದವರನ್ನ ವಿಜಯಾರ್ಯ ಕೈ ಬಿಡರುಗೋಪಾಲವಿಜಯವಿಟ್ಠಲ ಬಂದು ತಾನೇ ಒಲಿವ106ಗೋಪಾಲ ದಾಸಾರ್ಯರೇ ನೀವು ವಿಜಯಾರ್ಯರಲ್ಲಿತಪ್ಪದೇ ಮಾಡಿದ ಭಕ್ತಿಯಿಂದದಿ ಎನಗೆಸ್ವಲ್ಪವಾದರೂ ನಿಮ್ಮಲ್ಲಿ ಪುಟ್ಟುವಂತೆ ಮಾಡಿರಿಗೋಪಾಲ ಪ್ರಿಯತಮರೇ ಪಾಹಿಮಾಂ ಶರಣು 107ಹೆಳವನಕಟ್ಟೆ ಗಿರಿಯಮ್ಮ ಮೊದಲಾದಶೀಲ ಶಿಷ್ಯರು ಬಹುಮಂದಿಗಳುಬಲು ಭಕ್ತಿಶ್ರದ್ಧೆಯಿಂ ಉಪದೇಶಗೊಂಡುಜಲಜನಾಭನ ಒಲುಮೆ ಪಾತ್ರರಾಗಿಹರು 108ಜ್ಞಾನ ಭಕ್ತಿ ವೈರಾಗ್ಯವಂತಳು ಗಿರಿಯಮ್ಮಕ, ೃಷ್ಣ ಮಂತ್ರ ಉಪದೇಶ ದಾಸಾರ್ಯರಿಂದಕೊಂಡು ಶ್ರೀ ರಂಗವಿಟ್ಠಲ ಕೃಷ್ಣನ್ನ ಪ್ರತ್ಯಕ್ಷಕಾಣುವಂಥ ಸೌಭಾಗ್ಯ ಶಾಲಿಯಾಗಿಹಳು 109ಅದ್ವಿಜನು ಶೈವನು ಪತ್ನಿ ಸಹಸೇವಿಸಿಮಂತ್ರಾಲಯ ಗುರುಗಳಿಂ ಅನುಕೂಲ ಹೊಂದಿಕೃತಜÕಭಾವದಿ ಲಕ್ಷ ಬ್ರಾಹ್ಮಣ ಭೋಜನ ಮಾಡಿಸುವೆನುಎಂದು ಹರಕೆ ಮಾಡಿಸಲಿಕ್ಕಾಗಲಿಲ್ಲ 110ಸ್ವಪ್ನದಲಿ ಹೇಳಿದರು ಕರುಣಿ ಶ್ರೀ ರಾಘವೇಂದ್ರಗುರುತಪ್ಪದೇ ಹರಕೆ ಸಲ್ಲುವುದು ಮೂವರು ಬ್ರಾಹ್ಮಣರುಸುಪುಣ್ಯವಂತರು ಮಹಾತ್ಮರು ಮರುದಿನ ಬೆಳಿಗ್ಗೆಈ ಪಥದಿ ಬರುವರ್ಗೆ ಭೋಜನ ಮಾಡಿಸೆಂದು 111ವರದಗುರುಗೋಪಾಲದಾಸರು ದಾಸಾರ್ಯರುಅರಿತುಅಪರೋಕ್ಷಸಾಮಥ್ರ್ಯದಿ ಈ ಸ್ವಪ್ನನೇರಾಗಿ ಬರಲಾಗ ಆಶೈವಗುರುಭಕ್ತನುನಾರೀ ಸಹನಮಸ್ಕರಿಸಿ ಸ್ವಾಗತವನಿತ್ತ 112ಮೂವರಿಗೂ ಅಧಿಕವಾದ ಪದಾರ್ಥಗಳನರ್ಪಿಸಿದೇವರ ನೈವೇದ್ಯ ಮೂವರಿಗೂ ಭೋಜನದೇವಗುರುಬ್ರಾಹ್ಮಣ ಪ್ರೀತಿಯಾಗಲಿ ಎಂದು ನಮಿಸಿದರುಶೈವ ಕುಲೀನ ದಂಪತಿ ಭಕ್ತಿ ಪೂರ್ವಕದಿ 113ಅಂದು ರಾತ್ರಿ ಆ ಭಕ್ತ ದಂಪತಿಗೆ ಸ್ವಪ್ನದಲಿಪ್ರೀತಿ ಆಯಿತು ಕೃಷ್ಣನಿಗೆ ಹರಕೆ ಪೂರ್ಣ ಆಯ್ತುಎಂದು ರಾಘವೇಂದ್ರ ತೀರ್ಥ ಸ್ವಾಮಿಗಳು ಹೇಳಿಮುದದಿ ದಂಪತಿಯ ಕೃತ ಕೃತ್ಯ ಮಾಡಿದರು 114ಮೊದಲು ಆದರ ರಹಿತ ವೆಂಕಟನೃಸಿಂಹಾರ್ಯನಿಂದುಗೋಪಾಲ ದಾಸಾರ್ಯರಹರಿಪೂಜಾಪದ್ಧತಿಯ ನೋಡುತಿರೆ ಹನುಮಂತ ದೇವರುಮೂರ್ತಿಮತ್ ಕುಳಿತಿದ್ದುದು ಕಂಡರು 115ಬಂದು ವೆಂಕಟ ನೃಸಿಂಹಾಚಾರ್ಯರು ಮತ್ತುನಿಂದಿಸಿದ ವೈದಿಕರು ತತ್ವ ಕೀರ್ತನೆಗಳಅದ್ಭುತ ಸುಳಾದಿಕೇಳಿನಿರ್ಮತ್ಸರರಾಗಿಬಂದು ಶಿಷ್ಯತ್ವ ಬೇಡಿದರು ಆರ್ಯರಲಿ 116ವೈರಾಗ್ಯನಿಧಿ ಗಂಗಾಧರನ ಅನುಗ್ರಹದಿವೈರಾಗ್ಯ ಯುಕ್‍ಜ್ಞಾನಹರಿಭಕ್ತಿ ಲಭಿಸಿದ್ದಸೂರಿವರ ಗೋಪಾಲ ದಾಸಾರ್ಯ ಜರಿಗೆ ಶಾಲು ರೇಷ್ಮೆಭಾರಿ ಪಲ್ಲಕ್ಕಿ ವೈಭವದಿ ಮೆರೆದರುಹರಿಪ್ರೀತಿಗಾಗಿ117ಪನ್ನಗಾಚಲಶ್ರೀ ಶ್ರೀನಿವಾಸನ ಭಕ್ತಅನಿಮಿಷಾಂಶರು ಗೋಪಾಲ ದಾಸಾರ್ಯಶ್ರೀನಿವಾಸನಪ್ಪಣೆಕೊಂಡು ಊರಿಗೆ ಬಂದುಅವನೀಸುರರಿಗೆ ಔತಣವಿತ್ತು ಧ್ಯಾನದಿ ಕುಳಿತರು 118ಮುಖ್ಯಕಾರಣ ವಿಷ್ಣು ಸ್ವತಂತ್ರ ಎಂದುತಾ ಭಜಿಸಿಶಿಷ್ಯರಿಗೆ ಬೋಧಿಸಿ ಸಜ್ಜನರ ಪೊರೆದುಪುಷ್ಯ ಬಹುಲಾಷ್ಟಮೀಯಲ್ಲಿ ಪೂಷಯದುಪತಿಧಾಮಕೃಷ್ಣ ಭಕ್ತಿರಿಗೌತಣವಿತ್ತು ಐದಿದರು 119ಗದ್ವಾಲ ರಾಜ ಮೊದಲಾದ ರಾಜ ಪ್ರಮುಖರಿಂದಮೇದಿನೀ ಪ್ರಖ್ಯಾತ ಯತಿಗಳು ಪಂಡಿತರಿಂಎದುರಿಲ್ಲದಸೂರಿಐಜೀಯವರಿಂದಲುಸದಾ ಮರ್ಯಾದೆ ಕೊಂಡವರು ದಾಸಾರ್ಯ 120ವಿಜಯದಾಸಾರ್ಯ ಪೂಜಿಸಿದಹರಿಮೂರ್ತಿವಿಜಯವಿಟ್ಠಲ ಪ್ರತಿಮೆ ಅಂತರ್ಗತನ್ನವಿಜಯಸಾರಥಿಪ್ರಿಯ ಗೋಪಾಲ ದಾಸರು ಪೂಜಿಸಿರಾಜಿಸುತಿಹ ಮೂರ್ತಿಇಹುದುಅವರಮನೆಯಲ್ಲಿ121ಜ್ಞಾನ ಸುಖ ಬಲ ಪೂರ್ಣ ಜನ್ಮಾದಿಕರ್ತಅಜವನರುಹಜ ಪಿತ ಶ್ರೀಶಪ್ರಸನ್ನ ಶ್ರೀನಿವಾಸಅನಘಹಯಮುಖವಿಜಯಗೋಪಾಲ ಸರ್ವಗಗೆಘನ್ನ ಪ್ರಿಯ ಗೋಪಾಲ ದಾಸಾರ್ಯ ಶರಣು 122|| ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ರಘೂತ್ತಮ ತೀರ್ಥರ ಚರಿತ್ರೆ122ಶ್ರೀ ರಘೂತ್ತಮರಂಘ್ರಿ ರಾಜೀವಯುಗ್ಮದಲಿಶಿರಬಾಗಿ ಶರಣಾದೆ ಧನ್ಯನಾದೆಶ್ರೀರಾಮಚಂದ್ರನ ಪೂರ್ಣಾನುಗ್ರಹ ಪೂರ್ಣಪಾತ್ರರು ಎಮ್ಮ ಪಾಲಿಸುವ ಕರುಣಾಳು ಪಶ್ರೀ ಹಂಸ ಲಕ್ಷ್ಮೀಶ ಪರಮಾತ್ಮ ಸರ್ವೇಶಬ್ರಹ್ಮ ಸನಕಾದಿಗಳ ಗುರುಪರಂಪರೆಯಬ್ರಹ್ಮಪದ ಐದುವ ಶ್ರೀ ಆನಂದತೀರ್ಥರನೀರ್ರುಹ ಚರಣಂಗಳಲ್ಲಿ ಶರಣಾದೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶಶ್ರೀ ರಾಮಚಂದ್ರರಿಗೆ ಶರಣು2ಶ್ರೀ ರಾಮಚಂದ್ರರ ಕರಜರು ಈರ್ವರಿಗೂಎರಡನೇಯವರು ವಿದ್ಯಾನಿಧಿಯಹಸ್ತಅರವಿಂದೋತ್ಪನ್ನ ರಘುನಾಥರಿಗೆ ನಮೋ ಎಂಬೆಸೂರಿವರ ರಘುವರ್ಯರಲ್ಲಿ ಶರಣಾದೆ 3ರಘುವರ್ಯ ಗುರುರಾಜ ಕರಕಮಲ ಸಂಜಾತರಘೂತ್ತಮ ತೀರ್ಥರ ಚರಣಕಾನಮಿಪೆಅಗಣಿತಗುಣಾಂಬುಧಿ ಅಘದೂರ ರಘುಪತಿಯಹೃದ್ಗುಹಾ ಒಳಹೊರಗೆ ಕಾಂಬುವಧೀರ 4ರಾಮಚಂದ್ರಾಚಾರ್ಯ ನಾಮ ಬಾಲಕನುಬ್ರಹ್ಮಚಾರಿಯು ಧೃಢÀವ್ರತನು ಹರಿಭಕ್ತಸುಮನೋಹರಮೂರ್ತೇ ಗುಣಗುಣಾಲಂಕೃತನುಈ ಮಹಾವೇದಾಂತ ಪೀಠಕ್ಕೆ ಅರ್ಹ 5ತಮ್ಮ ಮಠ ಶಿಷ್ಯರಲು ಮಾಧ್ವ ಸಜ್ಜನರಲ್ಲೂಸುಮಹಾಪಂಡಿತರು ಇರುತಿದ್ದರೂನುಈ ಮಹಾ ಪುರುಷ ಬಾಲನೇ ತಕ್ಕವನೆಂದುನೇಮಿಸಿದರು ಪೀಠಕ್ಕೆ ರಘುವರ್ಯ ಗುರುವು 6ರಘೂತ್ತಮತೀರ್ಥ ನಾಮದಿ ತುರೀಯಾಶ್ರಮರಘುವರ್ಯರೀ ರಾಮಚಂದ್ರಗೆ ಇತ್ತುರಾಘವನ ಪೂಜಾದಿ ಸಂಸ್ಥಾನ ಅಧಿಕಾರನಿಗಮಾಂತ ಗುರುಗಳು ನಿಯಮನ ಮಾಡಿದರು 8ವೇದವೇದಾಂತ ಸಚ್ಛಾಸ್ತ್ರ ಪಂಡಿತನುವಿದ್ಯಾರ್ಥಿ ಬಹುಮಂದಿಗೆ ಪಾಠ ಪೇಳುವವಿದ್ವಾಂಸ ಓರ್ವನ್ನ ರಘುವರ್ಯ ತೀರ್ಥರುವಿದ್ಯೆಕಲಿಸಲು ಏರ್ಪಾಡು ಮಾಡಿದರು9ಶೇಷಪ್ಪನಾಯಕರ ಮಕ್ಕಳು ಈರ್ವರಲಿಜ್ಯೇಷ್ಠ ಪುತ್ರನು ವಿದ್ವಾಂಸರಲಿ ಪ್ರಮುಖಶಿಷ್ಯರೂ ಬಹು ಜನರು ಈತನಿಗೆ ಉಂಟುಭೂಷಣವೆಂದೆನಿಸಿದನು ಮಾಧ್ವ ಸಮೂಹಕ್ಕೆ 10ಸಾವಿರದ ನಾನ್ನೂರು ಎಪ್ಪತ್ತ ಒಂಭತ್ತುಸಂವತ್ಸರದಲಿ ಶಾಲಿವಾಹನದಿದಿವಸ ತದಿಗೆ ಕೃಷ್ಣ ಜ್ಯೇಷ್ಠ ಪಿಂಗಳದಿಶ್ರೀವರನಪುರಕೆ ತೆರಳಿದರು ರಘುವರ್ಯರು 11ದಯಾಳು ರಘುವರ್ಯರು ಸಮಾಧಿಸ್ಥರಾಗಲುಬಾಲ್ಯಾವಸ್ಥೆಯಲಿ ಇದ್ದ ರಘೂತ್ತಮರುವಿದ್ಯಾವ್ಯಾಸಂಗಗುರುನಿಯಮನದಂತೇಯೆಗೈಯಲಿ ಪೋದರು ಆ ವಿದ್ವಾಂಸನಲ್ಲಿ 12ಮಣೂರು ಎಂದ್ಹೆಸರುಉಳ್ಳಆ ಊರಲ್ಲಿಘನವಿದ್ವನ್ಮಣಿಯಲ್ಲಿ ಕಲಿಯುವಾಗಧನವಂತ ಊರುನಾಯಕರಘೂತ್ತಮರಲ್ಲಿಬಿನ್ನೈಸಿದ ಭೋಜನಕೆ ಬರಬೇಕೆಂದು 13ಸ್ವಾಮಿಗಳಿಗೆ ಪಾಠ ಹೇಳುವ ವಿಪ್ರನೂಆ ಮನೆಯಲಿ ಊಟಕ್ಕೆ ಬಂದಿದ್ದನೇಮ ಆಹ್ನೀಕ ಮುಗಿಸಿ ಬರಲಿಕ್ಕೇತಾಮಸವು ಆಯಿತು ವಿಲಂಬವು ಸ್ವಲ್ಪ 14ಸ್ವಾಮಿಗಳ ಬಾಲ್ಯತ್ವ ವಿದ್ಯಾರ್ಥಿತ್ವವುಆ ಮನೆಯಲಿ ಗೃಹಸ್ಥನನ್ನೂ ವಿಪ್ರನನ್ನೂ ಮೋಹಿಸಿತುತಮ್ಮ ಯೋಗ್ಯತೆ ಸ್ಥಾನ ಮರೆತು ಗರ್ವದಿವಿಪ್ರಸ್ವಾಮಿಗಳ ಲೆಕ್ಕಿಸದೆ ಕುಳಿತನು ಭೋಜನಕೆ 15ಅಂದು ರಾತ್ರಿಸ್ವಪ್ನದಲಿ ರಘುವರ್ಯ ಗುರುಗಳುಬಂದು ಪೇಳಿದರ್ತಮ್ಮ ಪ್ರೇಮಿಶಿಷ್ಯರಿಗೆಇಂದಿನಾರಭ್ಯ ಪಾಠವ ನಿಲಿಸು ವಿಪ್ರನಲಿಕುಂದುಇಲ್ಲದೆ ಹೇಳುವೆ ನೀನೇವೆ16ಈ ರೀತಿ ಸ್ವಪ್ನವು ಆಗೇ ರಘೂತ್ತಮರುವಿಪ್ರನಲಿ ಪಾಠಕ್ಕೆ ಪೋಗುವುದು ತೊರೆದುಆ ಪಂಡಿತವರ್ಯರಿಗಿಂತ ಉತ್ತಮ ರೀತಿತಾಪೇಳಿದರು ಪಾಠ ಮಠದಿ ಶಿಷ್ಯರಿಗೆ 17ಗುರುಗಳಲಿಹರಿಇಷ್ಟ ಗುರುದ್ವಾರ ಒಲಿವನುಗುರುಅನುಗ್ರಹ ಇದ್ದರೇಹರಿಅನುಗ್ರಹಗುರುಪ್ರಸಾದವ ಪಡೆದ ಶ್ರೀ ರಘೂತ್ತಮರಿಗೆಶಾಸ್ತ್ರ ಜ್ಞಾನವು ಪ್ರಜ್ವಲಿಸಿತು ಪೂರ್ಣದಲಿ 18ಜಾತಾಪರೋಕ್ಷಿಗಳು ದೇವತಾಂಶರಿಗೇವೆಜ್ಞಾತವಾಗುವ ಪದ ವಾಕ್ಯದ ತಾತ್ಪರ್ಯಈ ದೇವತಾಂಶ ಶ್ರೀ ರಘೂತ್ತಮ ಗುರುವರರುಸಂದೇಹವಿಲ್ಲದೆ ತಿಳಿದು ಬೋಧಿಸಿದರು 19ತನ್ನಲ್ಲಿ ವ್ಯಾಸಂಗ ಪೂರೈಸದ ಬಾಲಏನು ಪಾಠವ ಹೇಳೇ ಶಕ್ತನೆಂದರಿಯೆಕಾಣದೆ ಮರೆಯಾಗಿ ನಿಂತು ಆವಿಪ್ರಶ್ರವಣ ಮಾಡಿದ ಗುರುಗಳು ಬೋಧಿಸುವುದು 20ಸಂದಿಗ್ಧÀ್ದವಾಗಿ ತನಗಿದ್ದ ವಿಷಯಗಳನ್ನೂಅದ್ಭ್ಬುತ ರೀತಿಯಲಿ ಅನಾಯಾಸವಾಗಿಅತಿವಿಶದದಿ ರಘೂತ್ತಮರು ಪೇಳಲುಕೇಳಿಬಂದು ಮುಂದೆ ನಿಂತು ನಮಿಸಿದನುವಿಪ್ರ21ತಾನು ಮಾಡಿದ ಉದಾಸೀನ ಅಪರಾಧಗಳಘನದಯದಿ ಕ್ಷಮಿಸಬೇಕೆಂದು ಬೇಡುತ್ತತನು ದಂಡವತ್ ಭುವಿಯಲಿ ಬಿದ್ದು ನಮಿಸಿದನುದೀನದಯಾಳುಗುರುಅಭಯನೀಡಿದರು22ದಿಗ್ವಿಜಯ ಮಾಡುತ್ತ ಅಲ್ಲಲ್ಲಿ ದುರ್ಮತದುರ್ವಾದಿಗಳನ್ನು ಖಂಡಿಸಿ ಸಿದ್ಧಾಂತತತ್ವಬೋಧಿಸಿ ಜಗತ್ ಪ್ರಖ್ಯಾತರಾದರುಶಾಶ್ವತ ನಿಜಸುಖ ಮಾರ್ಗದರ್ಶಕರು 23ರಘುವರ್ಯ ಗುರುಗಳು ನೇರಲ್ಲು ಸ್ವಪ್ನದಲುರಘೂತ್ತಸಮರಿಗೆ ಪೇಳಿದ ಪ್ರಕಾರದಿಗ್ವಿಜಯ ಸಮಯದಿ ಸಂಸ್ಥಾನಕ್ಕೆ ಭೂಷಣಬಗೆಬಗೆ ವಸ್ತು ಪರಿವಾರ ಸೇರಿಸಿದರು 24ವೇದಾಂತ ಸಾಮ್ರಾಜ್ಯ ರಾಜಗುರುರಾಜರುಹಸ್ತಿಘೋಟಕ ಕೊಂಬು ವಾದ್ಯಮೇಳಗಳುಸುತ್ತಲೂ ವಿದ್ವಜ್ಜನ ವೇದಘೋಷದ ಮಧ್ಯಮುತ್ತು ಪಲ್ಲಕ್ಕಿಯೊಳು ಕುಳಿತರು ದೇವರ ಸಹ 25ಪೋದ ಕಡೆಗಳಲಿ ದಿಗ್ವಿಜಯ ರಾಮಾರ್ಚನೆವಿದ್ವಜ್ಜನ ಸಭೆ ವಾಕ್ಯಾರ್ಥ ಪಾಠಸಿದ್ಧಾಂತ ಸ್ಥಾಪನೆ ದುರ್ಮತ ನಿರಾಸವುಸಾಧು ಸಜ್ಜನರ ಉದ್ಧಾರ ಪ್ರತಿದಿನವು 26ಬಾದರಾಯಣನಿರ್ಣೀತ ರೀತಿಯಲಿಮಧ್ವರಾಯರು ಬರೆದ ಗ್ರಂಥಗಳಿಗೆಅದ್ಬುತ ಟೀಕೆ ಜಯತೀರ್ಥರು ಮಾಡಿಹರುಸದ್ಭಾವ ಬೋಧವು ರಘೂತ್ತಮರ ರಚನೆ 27ಟೀಕಾ ಭಾವಬೋಧರು ಎಂದು ಪ್ರಖ್ಯಾತರಘೂತ್ತಮರ ಎಲ್ಲೆಲ್ಲೂ ವಿದ್ವಜ್ಜನರುನಗರಪಟ್ಟಣ ಗ್ರಾಮ ನಾಯಕರು ಪ್ರಮುಖರುಸ್ವಾಗತ ಅರ್ಪಿಸಿ ಪೂಜಿಸಿದರು ಮುದದಿ 28ಪುಟ್ಟಿದಾರಭ್ಯಹರಿಪಾದಕಮಲದಿ ಮನಇಟ್ಟು ರಘುವರ್ಯರು ಕೊಟ್ಟ ಸಂಸ್ಥಾನಪಟ್ಟ ಆಳಿ ಸರ್ವೋತ್ತಮನನ್ನ ಸೇವಿಸಿಶ್ರೇಷ್ಠತಮ ಸುಖಪ್ರದಮಾರ್ಗತೋರಿಹರು29ಹದಿನೈದು ನೂರು ಹದಿನೇಳು ಶಕ ಮನ್ಮಥಶುದ್ಧ ಏಕಾದಶಿ ಪೌಷ್ಯದಲಿ ಹರಿಯಪಾದಸೇರಿದರು ಸಂಸ್ಥಾನ ಆಡಳಿತವೇದವ್ಯಾಸ ತೀರ್ಥರು ಮಾಡಲಿಕೆ ಬಿಟ್ಟು 30ಮತ್ತೊಂದು ಅಂಶದಲಿ ವೃಂದಾವನದೊಳುಹತ್ತಾವತಾರಹರಿದ್ಯಾನಪರರಿಹರುಭಕ್ತರು ಅಲ್ಲಲ್ಲಿ ಅರ್ಚಿಸಿ ಸೇವಿಸುವಮೃತ್ತಿಕೆಯಲ್ಲು ಸಹ ಇದ್ದು ಪಾಲಿಪರು 31ವೃಂದಾವನ ತಿರುಕೋಯಿಲೂರ್ ಮಣಂಪೂಂಡಿಎಂದು ಕರೆಯಲ್ಪಡುವ ಗ್ರಾಮದಲಿ ಇಹುದುಇಂದುಶೇಖರ ಚಾಪದಿಂದ ಉದಿಸಿದ ಪುಣ್ಯನದಿಯು ಹರಿಯುತ್ತೆ ಮಜ್ಜನವು ಅಘಹರವು 32ಮಂದಜಾಸನಮೊದಲಾದ ಸುರವೃಂದವಂದಿತ ರಮಾಪತಿಯು ರಘೂತ್ತಮಾಂತಸ್ಥವೃಂದಾವನದಿಗುರುಹರಿಭಕ್ತಿ ಪೂರ್ವಕದಿಬಂದು ಸೇವಿಪರಿಗೆ ವಾಂಛಿತÀಗಳೀವ 33ಗಾಳಿ ಬಿಸಿಲು ಮಳೆ ಮಂಜುಗಳ ಲೆಕ್ಕಿಸದೆಮಾಲೋಲನ ಧ್ಯಾನಿಸುತ ವೃಂದಾವನದೊಳುಕುಳಿತಿಹರುಪರಮಕಾರುಣಿಕಈ ಗುರುಗಳುಪಾಲಿಸುತಿಹರು ಎಮ್ಮಅನುಗಾಲದಯದಿ34ವೃಂದಾವನ ದರ್ಶನ ತೀರ್ಥ ನಮಸ್ಕಾರಪ್ರದಕ್ಷಿಣೆ ಅರ್ಚನೆ ಹಸ್ತೋದಕವಂದನೆ ಸೇವಾದಿಗಳ ಮಾಳ್ಪ ಸಜ್ಜನರಕುಂದುಕೊರತೆಗಳಳಿವ ಇಷ್ಟಾರ್ಥ ಪ್ರದರು35ಪಿಲ್ಲಿ ಶೂನ್ಯಾದಿ ವಾಮಾಚಾರ ಪೀಡೆಗಳುಗಾಳಿದುಷ್ಟಗ್ರಹ ಪೈಶಾಚಾದಿಗಳುಕಳವಳಿಕೆ ಬುದ್ದಿಭ್ರಮೆ ವ್ಯಾಧಿದಾರಿದ್ರ್ಯಾದಿಎಲ್ಲ ದೋಷಗಳನ್ನ ಪರಿಹರಿಸುವರು 36ಸವೈರಾಗ್ಯ ಜ್ಞಾನವ ಭಕುತಿ ಅಪರೋಕ್ಷವಸೇವಿಪ ಯೋಗ್ಯರಿಗೆ ಒದಗಿಸಿ ಉದ್ಧರಿಸಿಸರ್ವವಿಧದಲು ಭಾಗ್ಯ ಆಯುಷ್ಯ ಆರೋಗ್ಯಈವರು ಭಕ್ತಯಲಿ ಸ್ಮರಿಸಿ ವಂದಿಪರ್ಗೆ 37ಉತ್ತಮ ತರಗತಿ ದೇವತಾಂಶರು ಇವರುಮಧ್ವಮತದುಗಾಬ್ಧಿ ಪೂರ್ಣಚಂದ್ರಹತ್ತು ತಿಂಗಳು ಹೊತ್ತು ಹೆತ್ತ ಉತ್ತಮ ಸಾಧ್ವಿಮಾತೆಯ ಭಾಗ್ಯ ಏನೆಂಬೆ ಇಂಥವರ 38ಸೂರಿಸುರವರ ಶ್ರೀ ರಘೂತ್ತಮರ ಚರಣದಲಿಶರಣಾದೆ ಎನ್ನಯ ಎನ್ನಸೇರಿದವರಪರಿಪರಿ ಪೀಡೆಗಳ ಪಾಪಗಳ ಅಳಿದುಕಾರುಣ್ಯ ಔದರ್ಯದಿ ಪಾಲಿಸುವರು 39ಸರಿದ್ವರ ಪಿನಾಕಿನಿಯಲಿ ಕೇಶವ ಜಗವಈರಡಿಯಲಿ ಅಳೆವ ತ್ರಿವಿಕ್ರಮನು ಶಿರಿಯುಇರುತಿಹರು ಹನುಮ ಶಿವಸ್ಕಂಧ ತೀರಗಳಲಿಶರಣೆಂಬೆ ಇವರೆಲ್ಲರ್ಗು ಶ್ರೀ ರಘೂತ್ತಮರಿಗೂ 40ಕಮಲಭವಪಿತ `ಶ್ರೀ ಪ್ರಸನ್ನ ಶ್ರೀನಿವಾಸ 'ಕಮಲಾಯುತವಿಶ್ವರೂಪತ್ರಿವಿಕ್ರಮಗೂಭೀಮ ಶಿವಸ್ಕಂಧರಿಗು ಪ್ರಿಯತಮ ರಘೂತ್ತಮರಈ ಮಂಗಳ ಚರಿತ ಶ್ರೀ ಕೃಷ್ಣಾರ್ಪಿತವು 41 ಪ|| ಇತಿ ಶ್ರೀ ರಘೂತ್ತಮ ತೀರ್ಥ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸದಾಸರ ಶ್ರೀಹರಿ ಪ್ರಾದುರ್ಭಾವಗಳುಪ್ರಸನ್ನ ಶ್ರೀ ಮತ್ಸ್ಯಾವತಾರ4ಲೀಲಾವತಾರನೇ ಪ್ರಳಯಾಬ್ದಿ ಸಂಚರನೇಮಾಲೋಲ ಸುಖಚಿತ್ ತನು ಮತ್ಸ್ಯರೂಪಬಾಲಾರ್ಕ ಕೋಟ್ಯಮಿತ ಜ್ಯೋತಿರ್ಮಯ ಸುಂದರನೇಕಾಲಗುಣದೇಶ ಅಪರಿಚ್ಛಿನ್ನ ಪೂರ್ಣ ಸುಗುಣಾರ್ಣವನೇ ಶರಣು ಪಪ್ರಳಯದಲಿ ಭೂರಾದಿ ಲೋಕಂಗಳುಮುಳಗಿರಲು ಹುಯಗ್ರೀವನಾಮ ದಾನವನುಸೆಳೆದು ವೇದಗಳ ತನ್ನೊಳ್ ಅಡಗಿಸಿದ್ದವನಸೀಳ್ದಿ ನೀ ಬಂದು ವೇದೋದ್ಧರನೇ ಮತ್ಸ್ಯ 1ಗೋವಿಪ್ರಸುರ ಸಾಧು ಜನರ ವೇದಂಗಳ-ಕಾವಸರ್ವೇಶ್ವರನೇ ಪುರುಷಾರ್ಥದಾತಸರ್ವರಿಗೂ ಸುಖವೀವುದು ನಿನ್ನ ಸುಚರಿತ್ರೆಶ್ರೀವರನೇ ಮತ್ಸ್ಯರೂಪಿಯೇ ಶರಣು ಶ್ರೀ ಕೃಷ್ಣ 2ಹಂಸ ಐರಾವತ ತಿತ್ತಿರಾ ಶುಕಗಳುಈ ಪಕ್ಷಿಗಳಲ್ಲಿ ತರತಮ ಉಂಟುಸುಸುಖ ಐಶ್ವರ್ಯೋನ್ನಾಹ ಅದರಂತೇವೇಈ ಸುನುಡಿಗಳ ಪಠನ ಮಾಳ್ಪ ಸುಜನರಿಗೆ 3ಗುರುರ್ಗುರ್ರೋಗುರುಮನುಶುಕಮಧ್ವಾಂತಸ್ಥಪರಮಾತ್ಮಹರಿವಿಷ್ಣೋ ಉದ್ದಾಮಸಾಮಅರದೂರಅನಂತೋರು ನಿಜಶಕ್ತಿ ಪರಿಪೂರ್ಣಉರು ಸುಗುಣ ನಿಧಿಯೇ ಶಫರಿರೂಪ ಮಾಂಪಾಹಿ 4ಸರ್ವೋತ್ತಮನು ನಾರಾಯಣನೇ ಎಂದರಿತುದ್ರವಿಡ ದೇಶಾಧಿಪನು ಸತ್ಯವ್ರತರಾಯಸುವಿವೇಕದಿ ನಿನ್ನ ಕುರಿತು ತಪವಚರಿಸಿದನುಭಾವಶುದ್ಧನು ಸಲೀಲಾಶನ ದೃಢವ್ರತನು5ವಿವಸ್ವಾನ್ ಮಗ ಶ್ರಾದ್ಧದೇವನು ಪ್ರಖ್ಯಾತವೈವಸ್ವತಮನುವೇ ಇಂದಿನ ಮನುವುಪೂರ್ವದಲಿ ಈತನೇ ಸತ್ಯವ್ರತ ಸಾಮ್ರಾಟ್0ಅವನಿಗೆ ನಮೋ ಎಂಬೆ ನಿನ್ನವನೆಂದು 6ರಾಜ ಋಷಿ ಈ ಮಹಾನ್ ಕೃತಮಾಲಾ ನದಿಯಲ್ಲಿನಿಜ ಭಕ್ತಿಯಿಂದ ಜಲತರ್ಪಣವ ಚರಿಸೆಅಂಜಲಿಉದಕದಲಿ ಮುದ್ದು ಮರಿ ಮೀನೊಂದುಸರಿಜ್ಜಲ ಸಹಿತದಿ ಬಂದದ್ದು ಕಂಡ 7ಅರಸ ಕರುಣದಲಿ ಅದನು ನದಿಯಲಿ ಬಿಡಲಿರೆಅರುಹಿತು ತನ್ನ ವೃತ್ತಾಂತವ ಆ ಮೀನುಪರಿಪರಿಯಾಗಿ ತನ್ನ ಸಜಾತೀಯರ ಭಯ ತನಗೆ ಎಂದುನೀರು ಪ್ರವಾಹದಲ್ಲಿ ತನ್ನ ಬಿಡಬೇಡವೆಂದು ಪ್ರಾರ್ಥಿಸಿತು ರಾಜನ್ನ 8ನಾರಾಯಣಾದಿ ಸುಮಂತ್ರಿತ ಅಭಿಯಂತ್ರಿತ ತನ್ನಸ್ಫುರತ್ ಕಲಶ ಕಮಂಡಲು ನೀರಲ್ಲಿ ಮೀನು ಮರಿ ಇಟ್ಟುಕೊಂಡುಆಶ್ರಮಕೆ ಕೃತ ಕೃತ್ಯ ಮನದಿ ರಾಜನು ಬಂದಮರುದಿನ ಉದಯದಲಿ ಕಂಡ ಆಶ್ಚರ್ಯವ 9ಕಮಂಡಲ ಕಲಶ ಪೂರಾವು ಏಕ ರಾತ್ರಿಯಲ್ಲೇವೇಆಮತ್ಸ್ಯಮರಿ ಬೆಳೆದಿದ್ದು ಆಶ್ಚರ್ಯ ಕಂಡಕಮಂಡಲು ಸಾಲದೇ ವಿಸ್ತಾರವಾದ ಸ್ಥಳನಿರ್ಮಾಣ ಮಾಡಿ ನೀರು ತುಂಬಿಸಿ ಅದರೊಳ್ ಮೀನನ್ನ ಬಿಟ್ಟ 10ಉದಕತುಂಬಿದ ಕುಂಟೆ ಸರೋವರವನ್ನುಮತ್ಸ್ಯವು ಪೂರ್ಣ ವ್ಯಾಪಿಸಿದ ಆಶ್ಚರ್ಯಅತಿಶಯ ಲೀಲಾ ವಿನೋದವ ಕಂಡ ರಾಜಉದಧಿಯಲಿ ಬಿಡಲು ನಿಶ್ಚಯಿಸಿ ಕ್ರಮಗೊಂಡ 11ಮಹೋದಧಿಯಲ್ಲಿರುವ ಮಕರಾದಿಗಳು ತನ್ನ ನುಂಗುವನೆಂದುಮಹಾರಾಜನಿಗೆ ಆ ಮೀನು ಹೇಳಿ ತಾನುಆದರೂ ರಾಜನು ಅಷ್ಟರಲ್ಲೇ ಉದಧಿಯೊಳು ಬಿಟ್ಟನುಮೀನನ್ನು ಆಗ ದೊಡ್ಡ ಆಶ್ಚರ್ಯವೊಂದನ್ನ ಕಂಡ ಆಮೀನು ಮತ್ತೂ ದೊಡ್ಡದಾಯಿತು 12ಶತಯೋಜನ ಮಹಾವೀರ್ಯ ಜಲಚರಗಳುಯಾವುದೂ ಕಂಡಿಲ್ಲ ಕೇಳಿಲ್ಲ ಜಗದಿಅತಿ ಅದ್ಭುತ ಮಹಾ ಮೀನರೂಪನು ಸಾಕ್ಷಾತ್ಉದಧಿಶಾಯಿ ಶ್ರೀಮನ್ನಾರಾಯಣ ನೀ ಎಂದ 13ಜೀವರುಗಳಿಗೆ ಅನುಗ್ರಹ ಮಾಡಲಿಕ್ಕೇವೇದೇವ ನೀ ಮತ್ಸ್ಯರೂಪ ಪ್ರಕಟಿಸಿರುವಿಕಾವಕಾರುಣಿಯೇ ಪುರುಷಶ್ರೇಷ್ಠ ಸರ್ವೋತ್ತಮನೇಸರ್ವದಾ ನಮೋ ಜಗಜ್ಜ£್ಮ್ಞಧಿಕರ್ತ14ಶ್ರವಣ ಸಂಸ್ತುತಿಸಿ ಮನನ ಧ್ಯಾನಾದಿಗಳು ಮಾಡಿಶ್ರೀವರನೇ ನಿನ್ನ ಮಹಾತ್ಮ್ಯಾ ಜ್ಞಾನಪೂರ್ವಕ ನಿನ್ನಲ್ಲಿ ಸುಸ್ನೇಹರತನಾದವಿವೇಕಿ ಪ್ರಪನ್ನರ ಸಲಹಿಗತಿಈವಿ15ಯಥಾರ್ಥ ಜ್ಞಾನವ ಭಕ್ತಿಮಾನ್ ರಾಜನು ಸ್ತುತಿಸಲುಮುದದಿಂದ ಇನ್ನೂನು ನಿನ್ನವೃತತಿಜೇಕ್ಷಣ ಜಗತ್ಪತಿಯೇ ನೀನು ಆಮತಿವಂತನಿಗೆ ಪೇಳಿದಿ ಅವತಾರಕಾರ್ಯ 16ಏಳುದಿನವಾಗಲು ಭೂರಾದಿ ಲೋಕಗಳುಪ್ರಳಯಜಲದಲ್ಲಿ ಮುಳುಗಿ ಹೋಗುವವುಒಳ್ಳೇ ಓಷಧಿ ಸರ್ವವೀರ್ಯತರ ಬೀಜ -ಗಳಸಪ್ತಋಷಿ ಸಹ ಕಾದಿರು ಎಂದಿ17ಕಾದುಕೊಂಡು ಇರುವಾಗ ವಿಶಾಲ ನೌಕವು ಒಂದುಶ್ರೀದ ನೀ ಕಳುಹಿಸೆ ಜಲದ ಮೇಲ್ ಬರುವದುಅದರಲಿ ಅರೋಹಿಸಬೇಕು ಬೀಜಗಳಸಪ್ತಋಷಿ ಸಹ ರಾಜ ಎಂದು ಬೋಧಿಸಿದಿ 18ಎಲ್ಲೆಲ್ಲೂ ಪ್ರಳಯಜಲತುಂಬಿತುಳಕಾಡುವುದುಲೋಲ್ಯಾಡುವುದು ನೌಕ ಗಾಳಿರಭಸದಲಿಅಲ್ಲಿ ಸಮೀಪಿಸುವ ಮತ್ಸ್ಯರೂಪನ ನಿನ್ನಹೊಳೆವ ಶೃಂಗದಿ ನಾವೆಯನು ಕಟ್ಟು ಎಂದಿ 19ನಾವೆಯನು ಬಂಧಿಸಲುರಜ್ಜುಸರ್ಪವು ಎಂದುಸುವ್ರತ ರಾಜನಿಗೆ ಉಪಾಯ ಪೇಳಿದಸರ್ವಗುಣ ಪರಿಪೂರ್ಣ ನಿರ್ದೋಷ ಪರಬ್ರಹ್ಮವಿಶ್ವವಿಷ್ಣೋ ಸೃಷ್ಟಾ ಪಾತಾ ರಮೇಶ20ಈ ರೀತಿ ಆ ಮಹಾನ್ ಸತ್ಯವ್ರತರಾಜನಿಗೆಹರಿನೀನು ಬೋಧಿಸಿ ಅಂತರ್ಧಾನವು ಆಗೇಆ ರಾಜಋಷಿ ತಾನು ಮತ್ಸ್ಯರೂಪ ಹೈಷಿಕೇಶಸಿರಿವರನೇ ನಿನ್ನನ್ನೇ ಧ್ಯಾನಿಸುತಲಿದ್ದ 21ಯುಕ್ತ ಕಾಲವು ಬಂತು ಉಕ್ಕಿತು ಸಮುದ್ರವುಸುತ್ತು ಮುತ್ತು ಎಲ್ಲೂ ಪೊಕ್ಕಿತು ಭೂಮಿಯಲಿಅತ್ತ ಇತ್ತ ಇಲ್ಲೂ ಸುತ್ತಿ ಸುಳಿವ ನೀರುಭೀತಿಕರ ನೆನೆಯಲಿಕೆ ನೋಡೆ ಮತ್ತೆಷ್ಟೋ 22ಚಂಡಮಾರುತ ಪ್ರಚಂಡ ಮೇಘವುಕರಿಸೊಂಡಲಂತೆ ಹನಿ ಕಂಡಿಲ್ಲ ಇಂಥಾ ಮಳೆಕಂಡು ನಾವೆಯ ರಾಜಕೊಂಡು ಬೀಜಗಳಕರಕೊಂಡು ಋಷಿಗಳ ಏರಿಕೊಂಡನು ಬೇಗ 23ಕೇಶವನೇ ನಿನ್ನ ಧ್ಯಾನಿಸಲು ಆಗಕೌಶೇಯ ಶೃಂಗಿ ಮಹಾಮತ್ಸ್ಯ ನೀ ಬರಲುಈಶ ನಿನ್ನಯ ಶೃಂಗಕ್ಕೆ ನೌಕವಕಟ್ಟಿಸಂಸ್ತುತಿಸಿದನು ಮಧುಸೂಧನನೇ ನಿನ್ನ 24ಶ್ರೀ ಭಾಗವತಾಷ್ಟಮ ತ್ರಯೋವಿಂಶತ್ ಅಧ್ಯಾಯಶುಭತಯವಿಜ್ಞಾನಬೋಧಕವು ಅದರಸೊಬಗರಿತು ಯೋಗ್ಯರು ಪಠಿಸೆ ಪ್ರೇರಿಸು ಸ್ವಾಮಿಸೌಭಾಗ್ಯಪ್ರದ ಶ್ರೀಶ ಮಾಂಪಾಹಿ 25ಏಕಶೃಂಗಧರ ಸ್ವರ್ಣ ಮತ್ಸ್ಯನಿಗೆ ಸರ್ಪದಿಂಲಕ್ಷ ಯೋಜನೆ ಮೇಲಿನ ವಿಸ್ತಾರದಿ ಬಂಧಿಸಿದಸತ್ಯವ್ರತ ರಾಜನು ಸಂತೋಷದಲಿ ಸ್ತುತಿಸಿದಅನಾದಿಅವಿದ್ಯಾಪೀಡಿತ ಜನ ಸಂರಕ್ಷನ್ನ26ಪರಮಹಂಸನ ಮೂಲ ಗುರೋ ಲಕ್ಷ್ಮೀಹಯವದನಮೇರು ಇತರಾ ದೇವಹೂತಿ - ಸುತ ಶರಣುಘೋರಸಂಸಾರ ಬಂಧಮೋಚಕಹರಿಯೇವರಸುಖಪ್ರದ ಸಂರಕ್ಷಕ ಮಾಂಪಾಹಿ27ಶಕ್ರಾದಿ ಜಗತ್ತಿಗೆಗುರುಗಂಗಾಧರನುಗಂಗಾಧರನಿಗೆಗುರುಪ್ರಾಣ ಪದ್ಮಜರುಪಂಕಜಾಸನ ಪ್ರಾಣರಿಗೆಗುರುರಮೇಶನು ಹರಿಯೇಆಗುರುಮೂಲಗುರು ಪರಮಗುರ್ರೋಗುರುವು28ನಿನ್ನ ಅನುಗ್ರಹ ಹೊಂದಿದರು ನೀ ಪರಮಗುರುಎಂದು ತಿಳಿದುಬದ್ಧಜೀವರ ಮೋಕ್ಷ ಪುರುಷಾರ್ಥಅವಿದ್ಯಾsಜ್ಞಾನ ಕಳೆದು ಪುಟವಿಟ್ಟಸ್ವರ್ಣರಜತಪೋಲ್ ಶುಚಿ ಆಗಿಸುವಿ ದಯದಿ 29ಸರ್ವಲೋಕ ಜನರಿಗೆ ಹಿತಕರ ಸುಹೃತ್ ನೀನೇಪ್ರಯೇಶ್ವರ ಆತ್ಮಾಗುರು ಜ್ಞಾನ ಅಭೀಷ್ಟಸಿದ್ಧಿಯುನೀ ಸುಹೃತ್ ಅಂದರೆ ಪ್ರತ್ಯುಪಕಾರ ಶೂನ್ಯನುಇನ್ನೂ ಬಹು ವಿಧದಿ ಪರಮಸಾಧು ಸ್ತುತಿಗೈದಿ 30ಸರ್ವಲೋಕಕೆ ನೀನೇ ಸುಹೃತ್ ಪ್ರಯೇಶ್ವರನುಶರ್ವಅಜಶಕ್ರಾದಿಗಳ ನಿಯಾಮಕನುಸರ್ವಾದಾನಂದಮಯ ಗುಣನಿಧಿ ಆತ್ಮನುಸರ್ವಾಭೀಷ್ಟಪ್ರದ ಜ್ಞಾನಸಿದ್ಧಿದನು 31ದೇವದೇವೋತ್ತಮನೇ ಆದಿಪೂರುಷ ಶ್ರೀಶವಿಶ್ವೇಶ್ವರ ಮತ್ಸ್ಯರೂಪ ಭಗವಂತನೀ ವಿಹಾರವು ಮಾಡಿ ಪ್ರಳಯಾರ್ಣವದಲಿಕವಿವರ್ಯ ರಾಜನಲಿ ಸುಪ್ರೀತನಾದಿ 32ವೇದ ಉದ್ಧರಿಸಿದಿ ಹಿಂದೆ ಅಸುರನ್ನ ಕೊಂದುಯುಕ್ತ ಕಾಲದಿ ಈಗ ಪ್ರಳಯವು ತೀರೆಸಾಧುವರ್ಯನು ಜ್ಞಾನವಿಜ್ಞಾನ ಕೋವಿದನುಸತ್ಯವ್ರತನಿಗೆ ಮನು ಪದವಿಯನು ಇತ್ತಿ 33ಮತ್ಸ್ಯಾವತಾರ ಸಂಕೀರ್ತನೆ ಮಾಳ್ಪರಿಗೆಸಿಧ್ಧಿ ಆಗುವುದು ಸರ್ವೇಷ್ಟ ಸದ್ಗತಿಯುಎಂದು ಪೇಳಿರುವಿ ಶುಕಪದ್ಮಭವಪತಿ ಶ್ರೀಶಸಾತ್ಯವತಿ ಮೀನ ವೇಧಪಿತ ಪ್ರಸನ್ನ ಶ್ರೀನಿವಾಸ 34- ಇತಿ ಶ್ರೀ ಮತ್ಸ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಾಘವೇಂದ್ರರಾಯ- ಎನ್ನ-ಭವxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭಾರನಿನ್ನದೊ ಜೀಯ್ಯಾದೂರನೋಡದಲೀಗ ಕೈಯಾ - ಪಿಡಿದು ನೀಸಾರೆಗರಿಯೋ ಸೂರಿಧ್ಯೇಯಾ 1ನಿನ್ಹೊರತು ಗತಿಯಾರೊ ಎನಗೆ - ಈಗಬಿನ್ನಪವ ಮಾಳ್ಪೆ ನಾ ನಿನಗೆ - ಭವದಿಬನ್ನಬಡುವವನ ನೋಡಿ ಹೀಗೆ 2ಈಸುವತ್ಸರವ್ಯರ್ಥ ಕಳದೆ- ನಾನಿನ್ನಈಶ ನೀನೆಂಬುದನು ಮರೆದೆ - ಬಹುಕ್ಲೇಶಬಟ್ಟೀಪರಿಯಲುಳದೆ 3ಸರಸ ವಿಙ್ಞÕನಭಕುತಿನೇಮಾ - ನೀನಿತ್ತುಪೊರೆಯೊ ನೀ ಭಕ್ತವತ್ಸಲ 4ಎನು ಕರುಣಾನಿಧಿಯೊ ನೀನು - ಜಗದೊಳಗೆಸಾನುರಾಗದಿ ಭಜಿಪೆ ನಾನು - ತವಚರಣಧ್ಯಾನ ಪಾಲಿಪದೀಗ ನೀನು 5ಕೃಷಿಯಾದಿ ಸತಿ-ಸುತರ ಪ್ರೇಮಿ - ಎನಿಸಿತೃಷೆಯಗೊಂಡೆನೊ ಅಂತರಯಾಮಿ 6ನರರ ಯಾಚನೆ ಮಾಡಸಲ್ಲ - ದೇಶವನುಪರಿಪರಿಯ ಭವಣೆ ಸುಳ್ಳಾಗದಲ್ಲ- ಸರ್ವಙÕಸರ್ವ ನೀ ತಿಳಿದಿರುವಿಯಲ್ಲ 7ನೀಚಜನ ಮನೆ ಮನೆಗೆ ಪೋಗಿ - ನಾನುಯಾಚಿಸಿದೆ ನಾಚಿಕೆಯನೀಗಿಯೋಚನಿಲ್ಲದೆ ನಾನು ಕೂಗಿ - ಈಗ!ನೀಚನಾದೆನೊ ಕಾಯೋ ಪರಮಯೋಗಿ 8ಶೇಷಾದ್ರಿನಿಲಯ ವಾಸ - ಪದದೂತವಾಸವಾಗೆಲೊ ಮನದಿ ತೋಷ - ಪೊರೈಸೊದಾಸಜನಪ್ರಿಯ ಯೋಗೀಶಾ 9ದುಷ್ಟ ಜನ ತತಿಯ ಸಂಗ - ಬಿಡಿಸಿಇಷ್ಟು ಪಾಲಿಸ್ಯನ್ನಂತರಂಗ - ದೊಳಗೆತುಷ್ಟನಾಗಿರು ನೀನೆಕರುಣಾಪಾಂಗ10ಪೋತನಾ ನಿನಗಲ್ಲೆ ಜೀಯಾ- ಎನಗೆತಾತನೀನೆಂಬೊ ಮಾತು ಖರಿಯನ್ನಾಥ ವಿಠಲಗೆ ನೀನೆ ಪ್ರಿಯ 11
--------------
ಗುರುಜಗನ್ನಾಥದಾಸರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು
ಸಂಕ್ಷಿಪ್ತ ವಿರಾಟಪರ್ವಕೇಳು ಜನಮೇಜಯರಾಜ ಭೂಮಿ-ಪಾಲ ಪಾಂಡವರ ಸತ್ಕಥೆಯ ಪ.ಶ್ರೀಲಲಾಮನ ನೆನೆದುಭೂರಿವ-ನಾಳಿಯನು ಸಂಚರಿಸಿ ಸಜ್ಜನಕೇಳಿಯಲಿ ವನವಾಸದವಧಿಯಕಾಲವನು ಕಳೆಕಳೆದು ಬಂದರು ಅ.ಪ.ದರ್ವೀಧರಹಸ್ತನಾಗಿ ಮಹಾಪರ್ವತದಂತುರೆ ಮಸಗಿನಿರ್ವಹಿಸಿ ಸೂದತ್ವವನು ಸಲೆಗರ್ವಿತಾಧಮ ಕೀಚಕನ ಕುಲಸರ್ವವನು ಸಂಹರಿಪ ಭೀಮ ಪೆ-ಸರ್ವಡೆದ ಗುರುವರ್ಯ ಬಂದನು 1ಕಡುಗಲಿ ಕಲಿಮಲಧ್ವಂಸ ಎದ್ದುನಡೆದು ಬಂದನು ಪರಮಹಂಸನಿಡುಕಿ ಮನದಿ ವಿರಾಟರಾಯನಪೊಡವಿಗಿಡೆ ಪದ ಕೀಚಕಾಖ್ಯನಎಡದ ಭುಜ ಕಂಪಿಸಿತು ಮೂಜಗದೊಡೆಯನುಡುಪತಿಕುಲಶಿಖಾಮಣಿ 2ಗಂಗಾದಿ ನದಿಗಳ ತೀರ ಪಟ್ಟಣಂಗಳ ಗೈದ ಸಂಚಾರತುಂಗಬಲ ಮಲ್ಲರುಗಳನು ಸಲೆಸಂಘಟಿಸಿ ಜೀಮೂತವೀರಪ್ಪಸಂಗದಲಿ ವೈರಾಟಪುರ ರಾಜಾಂಗಣಕೆ ಭದ್ರಾಂಗ ಬಂದನು 3ಇಂತು ಮಲ್ಲರನೆಲ್ಲ ಸದೆದು ಬಲವಂತರಿರಲು ನೃಪಗೊಲಿದುಸಂತಸವ ಬಡಿಸುತ್ತಲಿರಲ್ವಾಕುಂತಿತನಯರು ಹರಿಯ ನಾಮವಚಿಂತಿಸುತ ದಶಮಾಸ ಕಳೆದಾನಂತರದ ವೃತ್ತಾಂತವೆಲ್ಲವ 4ಕಥೆಯಂತೆ ಹಿಂದೆ ರಾವಣನ ಕೆಟ್ಟಗತಿಗನುಚರ ಕೀಚಕನಸ್ಥಿತಿಯು ದ್ರುಪದಜೆಗಾದಮಾನಚ್ಯುತಿಗೆ ಕಾರಣನಾದ ಜಡ ದು-ರ್ಮತಿ ಖಳಾಧಮನೊಂದು ದಿನನೃಪಸತಿಸಭೆಗೆ ಅತಿ ಹಿತದಿ ಬಂದನು 5ಪಾಪಿ ಕೀಚಕನಿಗಿಂತುಸುರಿ ದ್ರುಪದಭೂಪಾಲಕನ ಕಿಶೋರಿಶ್ರೀಪತಿಯ ನಾಮವನು ಸ್ಮರಿಸುತ-ಲಾ ಪತಿವ್ರತೆ ತೊಲಗಲಂಗಜತಾಪತಪ್ತಾಂತಃಕರಣನಾ ಪರಿಯ ಮತಿ ವ್ಯಾಪಿಸಿದನು 6ಲಾಲಿಸಿ ಮಾಲಿನಿವಚನ ತೋಷತಾಳಿದ ದುರ್ಗುಣಸದನಕಾಲಪಾಶದಿ ಬಿಗಿವಡೆದು ಹೇ-ರಾಳ ಮುದಕೀಲಾಲ ಸಲೆ ಕ-ಲ್ಲೋಲಜಾಲದಿ ಮುಳುಗಿ ನರ್ತನಶಾಲೆಗಾಗಿ ಕರಾಳ ಬಂದನು 7ಮಥಿಸಿ ಕೀಚಕನ ಮಂಟಪದಿ ದ್ರುಪದಸುತೆಗೆ ತೋರಿಸಲತಿ ಮುದದಿಸತಿಶಿರೋಮಣಿ ಕಂಡು ಮನದೊಳ-ಗತುಳ ಹರುಷವನಾಂತು ಸರ್ವೋನ್ನತಭುಜನ ಚುಂಬಿಸಿದಳುಪತಿವ್ರತೆಯರ ಶಿರೋರತುನೆ ಪಾವನೆ 8ಇತ್ತ ವಿರಾಟನಗರದ ಸರ್ವವೃತ್ತಾಂತವೆಲ್ಲವ ತಿಳಿದಧೂರ್ತದುರ್ಯೋಧನ ದುರಾಗ್ರಹಚಿತ್ತಗ್ರಹಿಸಿದ ಕಾರ್ಯಕಾರಣವೃತ್ತಿಯಲ್ಲಿ ಪಾಂಡವರು ನಿಜವೆಂ-ದಾಪ್ತಜನರೊಳು ವಿಸ್ತರಿಸಿದನು 9ಸುರನದೀಸುತಕರ್ಣದ್ರೋಣ ಕೃಪಾದ್ಯರು ಕೂಡಿ ಕುಜನಪ್ರವೀಣಪೊರಟ ಪರಮೋತ್ಸಾಹ ಸಾಹಸಭರತಿ ಕೌರವರಾಯ ಮತ್ಸ್ಯನಪುರವರ ಸಮೀಪದಿ ಸುಶರ್ಮನಕರೆದೊರೆದ ಭೂವರ ನಿರ್ಧರ 10ನುಡಿಯ ಕೇಳುತಲಿ ಸುಶರ್ಮ ನಿಜಪಡೆಯ ನೆರಹಿ ವೈರಿವರ್ಮದೃಢಕರಿಸಿ ದಿನಮಣಿಯು ಪಶ್ಚಿಮ-ಕಡಲ ಸಾರುವ ಸಮಯ ಗೋವ್ಗಳಪಿಡಿದು ಗೋಪರ ಕೆಡಹಿ ಬೊಬ್ಬಿ-ಟ್ಟೊಡನೊಡನೆ ಪಡಿಬಲವನರಸಿದ 11ಹಾರಿಸಿದನು ರಥ ಪಾರ್ಥನರನಾರಿವೇಷದ ಪುರುಷಾರ್ಥತೋರಿಸುವೆನೆಂಬುತ್ಸಾಹದೊಳುಬ್ಬೇರಿ ಮನದೊಳು ಕೃಷ್ಣನಂಘ್ರಿಸ-ರೋರುಹಕೆ ಮಣಿದುತ್ತರನ ಸಹಸೇರಿ ನಗರದ್ವಾರ ದಾಟಿದ 12ಭೀತಿಯ ಬಿಡು ಬಾರೆಂದು ಪುರುಹೂತಸುತನು ಎಳತಂದುಘಾತಿಸುವೆ ರಿಪುಬಲವನೆಂದು ವ-ರೂಥದಲಿ ಕುಳ್ಳಿರಿಸಿ ನೃಪತನುಜಾತಸಹ ಪಿತೃವನದ ಮಧ್ಯ ಶ-ಮೀತರುವಿನೆಡೆಗೋತು ಬಂದರು 13ಇಂತು ತಿಳಿಸುತಲರ್ಜುನನು ಬಲವಂತನು ಧನುಶರಗಳನುತಾಂ ತವಕದಿಂ ಧರಿಸಿವಿಜಯಮ-ಹಾಂತ ವೀರಾವೇಶಭೂಷಣವಾಂತು ಶಂಖನಿನಾದದಿಂರಿಪುತಿಂಥಿಣಿಯ ಭಯಭ್ರಾಂತಗೊಳಿಸಿದ 14ಹೂಡಿ ಬಾಣವನುರ್ಜುನನು ಚೆಂ-ಡಾಡಿದ ರಿಪುಬಲವನ್ನುಮೂಢ ದುರ್ಯೋಧನನ ಕಣೆಗಳಜೋಡಣೆಗಳಿಂ ಬಿಗಿದು ತನ್ನೋಶಮಾಡಿಕೊಂಡನು ಗೋಪಗೋವ್ಗಳನಾಡಲೇನದ ಪ್ರೌಢತನವನು 15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸತ್ಕರ್ಮವೆಂಬುದು ಸಾಧನವಲ್ಲದಲೆಸತ್ಕರ್ಮವೀಗ ಶುದ್ಧಬ್ರಹ್ಮವಲ್ಲವುಸತ್ಕರ್ಮ ಭಕ್ತಿಭಾವ ಸುಗುಣವಾದ ಮಾರ್ಗವುಸತ್ಕರ್ಮತ್ಯಾಗ ನಿಶ್ಯಬ್ದ ವಸ್ತುಪಗಾರುಡಿಯನರಿವೆನೆಂದು ಮಹೋರಗನ ಮೇಳವೇಆರು ನಂಬಲು ಬಹುದು ವಿಕಾರ ಮನವನುನಾರಿ ಪುತ್ರರೊಳಗೆ ಕೂಡಿ ನಾನು ಮುಕ್ತನು ಎನಲುಸೇರುವುದು ಎಂತು ಪೂರ್ಣ ಬ್ರಹ್ಮ1ಬ್ರಹ್ಮನರಿದು ಸಂಸಾರವಮಾಡುಈಗ ಎಂಬನುಬ್ರಹ್ಮಘಾತನು ಅವನು ಮಿಥ್ಯವಲ್ಲವುನಿಮ್ಮ ಮನಕೆ ತಿಳಿದು ನೋಡಿ ನಿಶ್ಚಿತದ ಮಾತ ಪೇಳ್ವೆಸುಮ್ಮನೆ ಬಿಡಲಿಬೇಕುಸತಿಸುತರನು2ವಾಸನಾಕ್ಷಯವು ವಸ್ತು ಎಂಬ ಮಾತು ದಿಟವದಿರಲುವಾಸನಾಕ್ಷಯವು ಎಂತು ಸಂಸಾರದಿಗೋಪನಾರಬೇಡವೆನಲು ನಾರುವುದು ಬಿಡುವುದೇಕಾಸ ವೀಸಿಯಲ್ಲದಲೆ ನಿಶ್ಚಯಿಲ್ಲವು3ಸಾಕ್ಷಿ ತಿಳಿದ ಬಳಿಕ ಸಂಸಾರವನೀಗ ತ್ಯಜಿಸಿದೆಅಕ್ಕಿನೀರುವಗ್ಗಿದಂತೆ ಆಗಬಾರದುರಕ್ಷಕನು ಇಲ್ಲದಲೆ ಸಂಸಾರವ ಬ್ರಹ್ಮವೆನಲುಭಕ್ಷಣಹುದುಬ್ರಹ್ಮಜ್ಞಾನಬಿಡುವುದಿಲ್ಲವು4ಸಂಸಾರದಿಮುಕ್ತನಾನು ಎನಲುತಿಲಾಂಶ ಮಾತ್ರ ಅನ್ನವಾಸನ ಅಂಟದಿಹುದೇಸಂಸಾರವ ತ್ಯಜಿಸಿದರೆ ಸಾಧ್ಯವಹುದು ವಸ್ತುಹಂಸಪರಮ ಚಿದಾನಂದ ತಾನೆಯಾಹನು5
--------------
ಚಿದಾನಂದ ಅವಧೂತರು
ಸತ್ಯ ಜಗತಿದು ಪಂಚಭೇದವು,ನಿತ್ಯ ಶ್ರೀ ಗೋವಿಂದನ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕೃತ್ಯ ತಿಳಿದು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ ಪ.ಜೀವ ಈಶಗೆ ಭೇದ ಸರ್ವತ್ರ ಜೀವ ಜೀವಕೆ ಭೇದವು |ಜೀವ ಜಡರೊಳು ಭೇದ ಜಡರೊಳು ಭೇದಜಡ ಪರಮಾತ್ಮಗೆ 1ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವ ಗಂಧರ್ವರು |ಜಾನಪಿತರಜಾನ ಕರ್ಮಜರ್ದಾನವಾರಿ ತತ್ತ್ವೇಶರು 2ಗಣಪ ಮಿತ್ರರು ಸಪ್ತಋಷಿಗಳುವಹ್ನಿ - ನಾರದ ವರುಣನು |ಇನಜಗೆ ಸಮ ಚಂದ್ರ - ಸೂರ್ಯರು ಮನುಸುತೆಯು ಹೆಚ್ಚು ಪ್ರವಹನು 3ದಕ್ಷಸಮ ಅನಿರುದ್ಧಗುರು ಶಚಿರತಿ ಸ್ವಾಯಂಭುವರಾರ್ವರುಕಕ್ಷಪ್ರಾಣನಿಗಿಂತ ಕಾಮನು ಕಿಂಚಿದಧಿಕನು ಇಂದ್ರನು 4ದೇವ ಇಂದ್ರನಿಗಧಿಕ ಮಹರುದ್ರ ದೇವರಿಗೆ ಸಮ ಗರುಡನು |ಕೇವಲವು ಈಶೇಷ- ರುದ್ರರು ದೇವಿ ಹೆಚ್ಚು ಸರಸ್ವತೀ5ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರು |ವಾಯುಮುಕ್ತಗೆ ಕೋಟಿಗುಣದಿಂದಧಿಕ ಶಕ್ತಳು ಶ್ರೀ ರಮಾ 6ಅನಂತ ಗುಣದಿಂ ಲಕುಮಿಗಧಿಕನು ಶ್ರೀ ಪುರಂದರವಿಠಲನು |ಘನರು ಸಮರೂ ಇಲ್ಲ ಜಗದೊಳು ಹನುಮಹೃತ್ಪದ್ಮವಾಸಗೆ 7
--------------
ಪುರಂದರದಾಸರು
ಸತ್ಯಜಗತಿದು ಪಂಚಭೇದವುನಿತ್ಯಶ್ರೀಗೋವಿಂದನಕೃತ್ಯ ತಿಳಿದು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ ಪಜೀವ ಈಶಗೆ ಭೇದ ಸರ್ವತ್ರ ಜೀವಜೀವಕೆ ಭೋದವುಜೀವ ಜಡರೊಳು ಭೇದ ಜಡರೊಳು ಭೇದ ಜಡಪರಮಾತ್ಮಗೆ 1ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವಗಂಧರ್ವರುಜಾನ ಪಿತರsಜಾನ ಕರ್ಮಜರ್ದಾನವಾರಿ ತತ್ಪೇಶರು 2ಗಣಪಮಿತ್ರರು ಸಪ್ತ ಖಷಿಗಳು ಮಹ್ನಿ ನಾರರವರುಣನುಇನಜಗೆ ಸಮಚಂದ್ರ ಸೂರ್ಯರುಮನುಸುತೆಯು ಹೆಚ್ಚುಪ್ರವಹನು 3ದಕÕಸಮ ಅನಿರುದ್ಧ ಗುರುಶಚಿರತಿಸ್ವಾಯಂಭುವರಾರ್ವರುಕಕ್ಷಪ್ರಾಣನಿಗಿಂತ ಕಾಮನು ಕಿಂಚದಧಿಕನು ಇಂದ್ರನು 4ದೇವ ಇಂದ್ರನಿಗಧಿಕ ಮಹರುದ್ರ ದೇವರಿಗೆ ಸಮ ಗರುಡನುಕೇವಲವು ಈಶೇಷರುದ್ರರು ದೇವಿ ಹೆಚ್ಚು ಸರಸ್ವತೀ5ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರುವಾಯು ಮುಕ್ತಗೆ ಕೋಟಿಗುಣದಿಂದಧಿಕ ಶಕ್ತಳು ಶ್ರೀರಮಾ 6ಅನಂತ ಗುಣದಿಂ ಲಕುಮಿಗಧಿಕನು ಶ್ರೀಪುರಂದರವಿಠಲನುಘನರು ಸಮರೂ ಇಲ್ಲ ಜಗದೊಳು ಹನುಮಹೃತ್ವದ್ಮವಾಸಗೆ 7
--------------
ಪುರಂದರದಾಸರು
ಸತ್ಯಪ್ರಜÕರಾಯರಂಘ್ರಿಗಳ ಸಂತತಹೃತ್ಪದ್ಮದಲಿ ನೆನೆಯಿರಯ್ಯ ಪುನರಪಿಭವ.....ತ್ವತಿಯಂ ತೋರಿ ಸಾಪ್ರಾಯ ಪದ್ಧತಿಯ ವಿಪ್ರತಿಯಂ ತೋರುವಹೊರೆವಪ.ಸೂತ್ರಾರ್ಥಸ್ತೇಯ ದಾನವರಿಳೆಗೆ ಭಾರಾಗಿವೇತ್ತøಜನಗಳ ಮತಿಗೆಡಿಸಿ ಬಾಧಿಸುತಿರಲುಗೋತ್ರಧರನಾಜÕದಿಂ ಶ್ರೀ ಮಾರುತನು ತನ್ನಯ ತೃತೀಯಾವತಾರದಿಂದ್ವಾತ್ರಿಂಶತ್ ಲಕ್ಷಣಾನ್ವಿತನಾಗಿ ಋಜುಗಣದಗೋತ್ರದಲ್ಲೆಸೆದು ನಿಜಜನನಿಗ್ಹರುಷವನಿತ್ತುಧಾತ್ರಿಗೆ ಭೂಷಣದ ಮಣಿಯಂತೆ ಹೊಳೆ ಹೊಳೆವಸುತ್ರಾಮಾಶೇಷವರದ ಅಭಯದ 1ವಿಶ್ವವೆಲ್ಲ ಮಿಥ್ಯಪ್ರತಿಷ್ಠಿತವು ಅಲ್ಲವು ನಿರೀಶ್ವರ ಭುವನವೆಂಬ ಕುಮತಿಘಟಿಗಳ ಮಾತರಿಶ್ವಕಂಠೀರವನೀ ಯತಿ ರೂಪದಲಿ ಸದೆದುಸುಸ್ವಭಾವದಲ್ಲಿ ಒಪ್ಪುತ ಸುಶಶ್ವದೇಕ ಶ್ರೀ ಹರಿಯು ಜೀವ ಜಗದೊಡೆಯನಶ್ವರಾನಶ್ವರಾರ್ಥೇತರ ಮುಕುಂದೆನ್ನುತತಾ ಸ್ವಕೀಯರಿಗೆಲ್ಲಶ್ರುತಿಸ್ಮøತಿಸುವಾಕ್ಯದಿಂವಿಶ್ವಾಸವಂ ಬಲಿಸಿದ ಸುಬೋಧ 2ಮತ್ರ್ಯದ ಬುಧರು ಬುದ್ಧಿಭ್ರಂಶದಲಿ ಮಾಯಿಮತಗರ್ತದಲಿ ಬಿದ್ದಿರಲು ಕಂಡು ಕರುಣದಲಿ ಸುಖತೀರ್ಥ ಮಧ್ವಾನಂದ ದಶಪ್ರಮತಿಯೆಂಬ ವೇದಾರ್ಥ ನಾಮದಲಿ ಮೆರೆದುಧೂರ್ತದುರ್ಭಾಷ್ಯಾಂಧಕಾರವಂ ಬಿಡಿಸಿ ವಿದ್ಯಾರ್ಥಿಗಳಿಗೊಲಿದು ಸದ್ಭಾಷ್ಯಗಳ ರಚಿಸಿಪರಮಾರ್ಥ ವ್ಯಾಖ್ಯಾನಗಳ ಪೇಳಿ ಉದ್ಧರಿಸಿದ ಸಮರ್ಥ ಮಾರ್ತಾಂಡನಾದ ಸುಖದ 3ಮಬ್ಬು ಮುಸುಕಿದ ಪರೆಯ ತೆರೆದ ಸುಜನರ ಹೊರೆದಕೊಬ್ಬಿದ ಕುತರ್ಕಿಗಳ ತರಿದ ಇಂದುವ ಜರಿದÀಸಭ್ಯರಿಗೆ ತತ್ವಸುಧೆಯೆರೆದ ಮಂತ್ರವನೊರೆದನಬ್ಬಗುರುಪೂರ್ಣಬೋಧದುಬ್ಬಿ ತಮಸಿನೊಳು ಮಿಥ್ಯಾತ್ಮಕ ದುರಾತ್ಮರಿಳೆಗುಬ್ಬಸದ ದರ್ಶನಗಳೊರೆಸಿ ಸತ್ಯವ ಮೆರೆಸಿಅಬ್ಬರದ ತಪ್ತ ಮುದ್ರೆಯನಿತ್ತಘವ ಕಿತ್ತುನಿರ್ಭಯವ ಪದವನೀವಕಾವ4ಇಂಥ ಸಂಕರ್ಷಣನ ಪ್ರೀತಿಯ ಕುವರ ಅಮಲವಾತನಿಖಿಳಪ್ರಾಣನಾಥ ರಘುಪತಿಯಸೇವ್ಯತ್ರೇತೆಯಲಿ ಮೂಡಿ ಪ್ರಖ್ಯಾತಾಕ್ಷಯ ಪ್ರಮುಖಭೂತಳದ ಭಾರರೊದೆದಪೂತನಾರಿಯ ಪಕ್ಷಪಾತದಿಂ ಬಕ ಜರಾಜಾತ ಗಾಂಧಾರ್ಯರಂ ಘಾತಿಸಿದ ಶ್ರೀಸವಿತನಯನಾಜÕದಲಿ ಪಾತಕಿಗಳೊರಸಿದಾದ್ವೈತ ಮತ ಕಾಲನೆನಿಪ್ಪ 5ಹತ್ತುಪನಿಷದ್ಭಾಷ್ಯಸೂತ್ರಗೀತಾಭಾಷ್ಯಮತ್ತೆ ಅಣುಭಾಷ್ಯ ಋಗ್ಭಾಷ್ಯಭಾಗವತತಾತ್ಪರ್ಯ ವಿಷ್ಣುಸ್ತೋತ್ರದ್ವಯಂ ಕಲ್ಪದ್ವಯಂಹತ್ತು ಪ್ರಕರಣವು ಕೃತಿಯುತಂತ್ರಸಾರಕೃಷ್ಣಾಮೃತಾಬ್ಧಿಯ ಮಹಾಭಾರತಾನ್ವಯ ವಿವರ್ಣನವೆಂಬ ಸದ್ಗ್ರಂಥ ಮೂವತ್ತೇಳು ರಚಿಸಿ ಮೋಕ್ಷೋಪಾಯವರುಹಿದ ವಿಧಾತ್ರ ಪದಕರ್ತನೀತತಾತ6ಭಾಟ್ಟ ಪ್ರಭಾತ ಛೆರಾನಾಯತ ? ಪ್ರತ್ಯಕ್ಷ ಮತಿ............... ಚಾರ್ವಾಕ....................ಚೌದ್ಧನೆ............ಶಂಕರನೆ ಕಡೆಯಾಗಿಪ್ಪತ್ತೊಂದುನಷ್ಟ ಭಾಷ್ಯವನಂಘ್ರಿಯಲಿಮೆಟ್ಟಿ ಸದ್ಗುಣಶರಧಿಹರಿಯು ಭುವನಂಗಳನುಹುಟ್ಟಿಸೆತ್ತಿಳಿದಾಡಿ ಮುಕುತಿಯ ನಿಜರ್ಗಿತ್ತುಕಷ್ಟವ ಖಳರ್ಗೀವನೆಂದು ಡಂಗುರಿದದಿಟ್ಟಾಲವಬೋಧ ರಾಜತೇಜ 7ಶ್ರುತಿವೇದನಿಕರ ಚಕ್ರವ ಪಿಡಿದು ಬ್ರಹ್ಮತರ್ಕಾವಳಿಯ ಶಂಖದ ಭೀಕರ ಘೋಷದಿಂದ ಜಗತ್ಪ್ಪಾವನನ ಪುರಾಣಗದೆ ಇತಿಹಾಸ ಪಂಚರಾತ್ರಭಾವಶಾಙ್ರ್ಗವಿಡಿದುಜೀವೇಶ ಭೇದಶರಪಂಚಕದಿ ಬ್ರಹ್ಮಸೂತ್ರಾವಳಿಯಿಂಬಿನ ನಂದಕವ ಧರಿಸಿ ಬೆಂಬತ್ತಿದೇವರಿಪುದುರ್ಮತವ ಓಡಿಸಿದಮಧ್ವನಾರಾಯಣ ಪಾರಾಯಣ ಯತಿ ಸುಮತಿ 8ತರುಣರವಿತೇಜಸುಸ್ಮಿತ ಸುಂದರ ನಾನಾ ಸುವರ್ಣಕಾಪಿನ ಭ್ರಾತ ಪ್ರಬೋಧ ಮುದ್ರಾಭಯಕರಸರೋರುಹದಿಂದ ಮೆರೆವ ವಿಧಿಪನಶರಣಜನ ಮಂದಾರನಪರಮನವರತ್ನದ ಪದ್ಮದ ಮಾಲೆಯಿದು ಪುಣ್ಯಕರವು ವೈಷ್ಣವರ್ಗೆ ಅಘದೋಟ ಮುಕ್ತಿಯ ಕೂಟಗುರುಮೂರ್ತಿಯ ಕೀರ್ತಿ ಪ್ರಸನ್ನವೆಂಕಟಪತಿಯವರಪ್ರಧಾನಾಂಗ ಮೂರ್ತಿಯ ವಾರ್ತಿ9
--------------
ಪ್ರಸನ್ನವೆಂಕಟದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು