ಒಟ್ಟು 5968 ಕಡೆಗಳಲ್ಲಿ , 126 ದಾಸರು , 3550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿಸು ಬೇಗಿಲ್ಲಿಗೆ ಹರಿಯೆ ನಿನ್ನವರ ಅರಸಿಕ ದೇಶದಿ ಬಳಲಿಕೊಂಡಿಹನ ಪ. ಸರ್ವಜ್ಞ ನಿನಗರಿಪುವದೇಸು ವಿವರ ಸರ್ವ ಪ್ರಕಾರದಿ ಕಾವೆ ನಿನ್ನವರ ಪೂರ್ವದಂದದಿ ಪರಿಚಾರಕ ಜನರ ಇರ್ವಲ್ಲಿ ತಂದು ಕೂಡಿಸು ದೇವ ಪ್ರವರ 1 ವೇಳೆ ವೇಳೆ ನಿನ್ನ ಪೂಜಾದಿಗಳನು ತಾಳ ಮೃದಂಗಾದಿ ಸನ್ನಹಗಳನು ಮೇಳೈಸಿ ಕೀರ್ತನೆಗೈವ ದಾಸನನು ನಾಳೆ ನಾಡದು ಎಂದು ತಾತ್ಸಾರ ಮಾಡದೆ 2 ಶಕ್ತಿಹೀನ ನಾನೆಂಬುದ ಬಲ್ಲೆ ನೀನು ಭಕ್ತವತ್ಸಲ ನೀನೆಂದರಿತು ನಂಬಿಹೆನು ನಿತ್ಯ ಚಿಂತನೆಯನು ತಪ್ಪಿಸು ಸುರಧೇನು ಶಕ್ತ ವೆಂಕಟರಾಜ ಸಂಶಯವಿನ್ನೇನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣ ಬಾರದೇ ಸ್ವಾಮಿ ಕರುಣ ಬಾರದೆ ಪ ಶ್ರುತಿ ಪುರಾಣ ವೇದ ಶಾಸ್ತ್ರ ಪತಿತಪಾವನ ನೀನೆಯೆಂದು ನುತಿಸಿ ಸಾರಿ ಪೇಳ್ವುದ ಕೇಳಿ ಪಿತ ನೀನೆಂದು ನಂಬಿದೆನಯ್ಯಾ ಅ.ಪ ಕಡಲಿಗುರುಳಿದೆನ್ನ ಕೈಯ ಪಿಡಿವರಿಲ್ಲ ಮಾರನಯ್ಯ ದಡವ ಸೇರಿಸಿ ಪಾಲಿಸೊ ಜೀಯ ಅಡಿಯ ಪಿಡಿದು ಬೇಡುವೆನು 1 ಶತಶತಾಪರಾಧಿ ನಾನು ಸತತ ದೀನದಯಾಮಯನು ಪಿತನು ಹಿತನು ನೀನೇ ಬೇರೆಗತಿಯ ಕಾಣೆ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರುಣ ವಂದಿರೆ ಸಾಕಿನ್ನು ಪ. ಕರುಣ ವಂದಿರೆ ಸಾಕು ಸಿರಿಯರಸನೆ ನಾನಾ ಪರಿಯೊಳನ್ಯರ ಬೇಡಿ ತಿರುಗಲಾರೆನು ಕೃಷ್ಣ ಅ.ಪ. ಪರಮಾಣು ತ್ರುಟಿಲವ ನಿಮಿಷ ಮಾತ್ರ ಯುಗ ಗುರು ಪ್ರಾಣ ಒಳನಾಡಿ ಮುಹೂರ್ತ ಪ್ರಹರ ಮಾಸ ಋತ್ವಯನ ವ- ತ್ಸರಯುಗ ಮಾನವೆಂಬ ಉಪಾದಿಗ ಳಿರಿಸಿ ಭೋಗಗಳನುಂಬ ಮಹಾಕಾಲ ಧುರವಹ ತಾನೆಯೆಂಬಾ ಧೀರತೆಯಿಂದ ಲಿರುವಿ ಲೋಕದಲಿ ತುಂಬಾ ಪಾದ ಪದ್ಮ 1 ತೃಣತರು ಕ್ರಿಮಿಪಕ್ಷಿ ಪಶುನರ ದೇವಕ್ಕ ಳೆಣಿಕಿಯಿಲ್ಲದ ದಿತಿಜಾರಿ ಜೀವರನೆಲ್ಲ ಕುಣಿಸುವ ಬೊಂಬೆಯಂದದಲಾಡಿಸುತ ಲೇಶ ದಣಿವಿಲ್ಲದೆ ಭಕ್ತ ಜನರಿಗೆ ಸುಖಸಾರ ಉಣಿಸಿ ಮದಾಂಧರ ಹಣಿದು ಹಣಿದು ಕುಟ್ಟಿ ಒಣಗಿಸಿ ಬಿಸುಟು ತಿನ್ನುವತ್ತಿದುವಿ ಮೇಲಣ ದುರ್ಗಪತಿಗಳನು ಮನ್ನಣೆಯಿಂದ ತಣಿಸಿ ಕಾಪಾಡುವನು ನೀನಹುದೆಂದು ಮಣಿದು ಬೇಡುವೆ ನಿನ್ನ ಮುರಹರ ಸಲಹಿನ್ನು 2 ಮಾಧವ ಮಂಗಲದಾಯಕ ತವ ಪದ್ಮ ಪಾದ ಸೇವೆಯ ಮಾಡುವಲ್ಲಿಗೆ ಜಾಹ್ನವಿ ಗೋದಾವರಿ ತುಂಗ ಕಾವೇರಿ ಕಲುಷಾವ ನೋದದಿ ಕೃಷ್ಣ ಸರಸ್ವತಿ ಗೋಮತಿ ವೇದವತಿ ಮೊದಲಾದ ನದಿಗಳೆಲ್ಲ ಸಾದರದಲಿ ಸೇರುತ ಬಂದಿಹರೆಂಬ ಗಾಧವಚನ ನಂಬುತ ನಿಂದಿಹೆನು ಕ್ಷೀ ರೋದಧಿ ಗೃಹನಿರತ ಸಾಕಿದೆ ಮುಂದಿ- ನ್ಹಾದಿ ತೋರಿಸು ಸ್ವರತ ಶ್ರೀದ ವೆಂಕಟರಾಜ ಸೇವಕನಾನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಪೊರೆಯೆ ಭಾರತಿ ಸತಿ ಪ ಪರಮ ಮಂಗಾಳೆ ನಿನ್ನ ಚರಣ ಕಮಲಾವ ಮರೆಯ ಹೊಕ್ಕೆನು ಕಣ್ಣ ತೆರೆದು ನೋಡೌ ತಾಯೆ 1 ಸರುವದ ದುರಿತದಿ ಚರಿಸಿದವನೆಂದು ತರಳನಾದೆನ್ನನು ಜರಿದು ನೂಕುವರೆ 2 ದುರಿತದೂರ ಗುಣಪೂರ್ಣ ಸಿರಿ ರಂಗೇಶವಿಠಲನೆ ಸರಿಯೆಂಬ ಮತಿಯನ್ನು ಸ್ಥಿರವಾಗಿ ಕೊಟ್ಟೆನ್ನ 3
--------------
ರಂಗೇಶವಿಠಲದಾಸರು
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣವೇಕೆ ಬಾರದಯ್ಯಾ ಕರಿವರದನೆ ಪ ಶರಣ ರಕ್ಷಕನೆಂದು ನಿನ್ನ ಮೊರೆಯ ಹೊಕ್ಕೆನೊ ಸರಸಿಜಾಕ್ಷ ಮರಣ ಕಾಲದಿ ಮಗನ ಕರೆದ ಪುರುಷ ಪುಣ್ಯ ಶರಧಿಯೇನೊ ಅ.ಪ. ತುತಿಸಸಲಿಲ್ಲವೆಂದು ಎನ್ನ ಹಿತವಗೈಯದೆ ಜರಿಪರೇನೊ ತುತಿಸಲಾಪವೇ ಶ್ರುತಿಗಳನ್ನು ಮಿತಿಗೆ ಸಿಲ್ಕದ ನಿನ್ನ ಮಹಿಮೆ 1 ಏನು ಸಾಧನವವÀ ಮಾಡಲಿಲ್ಲವೆಂದು ಕೈಬಿಡುವೆಯೇನೊ ನೀನು ದಯಮಾಡಿದಲ್ಲದೆ ಏನು ಸಾಧನ ಮಾಡಲಾಪೆನೊ 2 ಪಾಪಪುಣ್ಯ ಕರ್ಮಗಳಿಗೆ ನೀನೆ ಪ್ರೇರಕನಲ್ಲವೇನೊ ಶ್ರೀ ಪರಾತ್ಪರ ನೀ ಸ್ವತಂತ್ರ ನಾ ಪರಾಧೀನನಲ್ಲವೆ 3 ಪುಣ್ಯಗೈದವರಲಿ ಕರುಣವನು ಗೈವುದೇನು ಮಹಿಮೆ ಘನ್ನ ಪಾಪಿಗಳಲಿ ನೀ ಪ್ರಸನ್ನನಾಗಲು ಖ್ಯಾತಿಯಲ್ಲವೆ 4 ಪತಿತಪಾವನ ದೀನರಕ್ಷಕ ಶ್ರಿತ ಜನಮಂದಾರನೆಂಬ ವಿತತ ಬಿರುದು ಬರಿದೆ ಪೇಳೋ ಗತಿ ಪ್ರದಾಯಕನಲ್ಲವೇನೊ 5 ದುರಿತ ರಾಶಿ ನೋಡಿ ಬೆದರಿ ನಿಂತೆಯೇನೊ ನೀನು ದುರಿತ ದೂರನಲ್ಲವೇ ನಿನ್ನ ಸ್ಮರಣೆ ನೋಡದ ದುರಿತವಿಹುದಿ 6 ತರಳತನದ ಸಲಿಗೆಯಿಂದ ಪರಿಪರಿಯಲ್ಲಿ ನುಡಿದೆನಯ್ಯಾ ಪರಮ ತತ್ವವರಿಯೆ ನಾನು ಪೊರೆಯೊ ಎನ್ನ ಕರಿಗೀರೀಶ 7
--------------
ವರಾವಾಣಿರಾಮರಾಯದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾರ್ಣವ ಶ್ರೀ ಗುರುವರ ಕರುಣಿಸೊ ನೀ ಎನ್ನ ಕರುಣಾಗತ ರಕ್ಷಾಮಣಿ ತವ ಚರಣಾಂಬುಜ ತೋರಿನ್ನ ಪ ಆನತಜನತತಿಜ್ಞಾನದ ಎನ್ನ - ಙÁ್ಞನವ ಕಳೆದಿನ್ನ ಮಾನದಿ ಸಲಹೆನ್ನಾ 1 ಕಾಮಿತ ಫಲಪ್ರದ ಕಾಮ್ಯಾರ್ಥವನೂ ಕಾಮಿಪ ಜನಕಿನ್ನ ಪ್ರೇಮದಿ ಅವರಭಿಕಾಮವ ಪೂರ್ತಿಸಿ ಕಾಮಧೇನುತೆರ ತೋರುವಿ ಘನ್ನ 2 ಶಿಷ್ಟೇಷ್ಟ ಪ್ರದನಿಷ್ಟಘ್ನನೆ ನೀ ಕಷ್ಟವ ಪರಿಹರಿಸಿನ್ನಾ ಎಷ್ಟೆಂಥೇಳಲಿ ಸೃಷ್ಟಿ ಯೊಳಗೆ ನಿನ್ನ ಶ್ರೇಷ್ಠ ಮಹಿಮೆಗಳನ್ನಾ 3 ಶಿಷ್ಟನೆ ನೀ ಪರಮೇಷ್ಟಿಯ ಸತ್ಪದಾ - ಧಿಷ್ಟತನೆಂದಿನ್ನಾ ಪ್ರೇಷ್ಟನೆ ಎನ್ನಯಭೀಷ್ಟೆಯ ನಿತ್ತು ಶ್ರೇಷ್ಠನ ಮಾಡಿನ್ನಾ 4 ಪಾತಕವನಕುಲ ವಿತಿಹೋತ್ರ ಸುಖ ದಾತನೆ ನೀ ಇನ್ನಾ ಈತೆರ ಮಾಡದೆ ನೀತ ಗುರುಜಗ - ನ್ನಾಥವಿಠಲ ಪ್ರಪನ್ನಾ 5
--------------
ಗುರುಜಗನ್ನಾಥದಾಸರು
ಕರುಣಾಲವಾಲ ಜಿಷ್ಣುಪರಿಪಾಲ ವಿಷ್ಣು ವಿಶ್ವವ್ಯಾಪಿಸಕಲ ದೃಷ್ಟಾದೀಶ ಕೃಷ್ಣಲೋಲ ಪ. ಪೊಳೆವ ಗರುಡ ಸ್ಕಂಧವೇರಿ ಘಳಿರನೆ ಪೋಗಿ ಜಲಜವ ಹರಿಸೆ ದೈತ್ಯ ಬಲವಕೊಂಡು ಬಂದ ಮುರನ ಥಳಥಳಿಪ ಚಕ್ರದಿಂದ ತಲೆಯ ಭೂಮಿಗಿಳಿಸಿ ಮೆರೆದ 1 ಧುರದಿ ಮಂತ್ರಿ ಸುತರ ತರಿದು ಕರಿಯನೇರಿ ಖತಿಯ ತಾಳ್ದ ನರಕನನ್ನು ನಳಿನಾಂಬಕಿಯ ಕರದಿ ಭಂಗಿಸಿ ಸರಸಿಜ ಸಂಭವದತ್ತ ವರದಿ ಸಕಲ ಸುರರ ಗೆಲಿದ ಗರುವನನ್ನು ನಿಲಿಸಿ ಕ್ಷಣದಿ ಶಿರವ ಚಂಡನಾಡಿದವನೆ 2 ಧಾತ್ರಿದೇವಿ ಬಂದು ನಾನಾ ಸ್ತೋತ್ರ ಗೈಯೈ ಕರುಣದಿಂದ ಪಾತ್ರಗೊಲಿದು ಸತ್ರಾಜಿತನ ಪುತ್ರಿ ಒಡಗೊಂಡು ಸುತ್ರಾಮ ಮಂದಿರವನೈದಿ ಚಿತ್ರ ತಾಟಂಕಗಳ ದಿತಿಗೆ ಪುತ್ರ ತಾನೆಂದಿತ್ತ ಶ್ರೀಕಳತ್ರ ನಿನ್ನ ನಂಬಿರುವೆನು 3 ಸೌಂದರ್ಯಸಾರೈಕ ನಿಲಯಾ ನಂದಬೋಧಾಧಾರಮೂರ್ತಿ ಇಂದಿರಾವತಾರೆ ಭಾಮೆ ಎಂದ ನುಡಿ ಕೇಳಿ ಮಂದಹಾಸದಿಂದ ನಗುತ ಮಂದವಾಯು ಸುಳಿವ ಸುರರ ನಂದನದೊಳಿಂದುಕಿರಣ ಛಂದದೊಳಾನಂದಗೊಂಡ 4 ವಾರಿಜಾಕ್ಷಿಯೆಂದ ನುಡಿಗೆ ಧೀರತನವ ತೋರಿ ದೇವ ಪಾರಿಜಾತ ವೃಕ್ಷವ ಸರ್ಪಾರಿ ಮೇಲಿರಿಸಿ ಸಾರೆ ಸ್ವರ್ಗನಾಥ ಸ್ವಪರಿವಾರ ಸಹಿತ ತಡಿಯೆ ಗೆದ್ದು ದ್ವಾರಾವತಿಗೆ ಪೋಗಿ ಮೆರದ ನೀರಜಾಕ್ಷ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಸಾಗರ ಬಾ ಗುರುವೆ | ಚರಣ ಕಮಲವನು ಸಾರಿದೆನೈ ಸ್ವಾಮಿ ಪ ಏನೆಂದು ಬಣ್ಣಿಪೆ | ದೀನವತ್ಸಲಪ್ರಭುವೆ | ಸಾನುರಾಗದಿ ನಿನ್ನ ಧ್ಯಾನಿಪೆನೈ ಜೀಯ1 ಗುರುರಾಘವೇಂದ್ರನೆ | ಶರಣರ ಸುರತರುವೆ | ನಿರುತ ಎಮ್ಮೊಳು ಕೃಪೆಯ ತೋರಿದಿರೈ ಸ್ವಾಮಿ 2 ಶ್ರೀ ಸುಧೀಂದ್ರಾರ್ಯರ | ಭಾಸುರಪ್ರಿಯತನಯ | ಶ್ರೀಶಕೇಶವನೊಲುಮೆ ಯಾಚಿಸುವೈ ಪ್ರಭುವೆ 3
--------------
ಶ್ರೀಶ ಕೇಶವದಾಸರು
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ