ಒಟ್ಟು 1912 ಕಡೆಗಳಲ್ಲಿ , 106 ದಾಸರು , 1402 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿನ್ನಪ ಲಾಲಿಸಯ್ಯ ಭಕ್ತಪರಾಧ- ವನ್ನು ಕ್ಷಮಿಸಬೇಕಯ್ಯ ಪ. ಅನ್ಯಾಯ ಕಲಿಕಾಲಕ್ಕಿನ್ನೇನು ಗತಿ ಸುಪ್ರ- ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತಅ.ಪ. ಮಕ್ಕಳ ಮಾತೆಯಂದದಿ ಕಾಯುವ ಮಹ- ದಕ್ಕರದಿಂದ ಮುದದಿ ಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತು ರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನು ದಿಕ್ಕಿಲ್ಲದವರ ಧಿಕ್ಕಾರ ಗೈದರೆ ಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ- ವರ್ಕಳಮಣಿ ನಿನಗಕ್ಕಜವಲ್ಲವು ಕುಕ್ಕುಟಧರವರ ಮುಕ್ಕಣ್ಣತನಯ1 ಜಾತಿ ನೀತಿಯನು ಬಿಟ್ಟು ಡಾಂಭಿಕತನದ ರೀತಿಗೆ ಪ್ರೀತಿಪಟ್ಟು ಸೋತು ಹಣವ ಕೊಟ್ಟು ಖ್ಯಾತರೆಂಬುವ ಗುಟ್ಟು ಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿ ಯಾತುಧಾನರ ಗುಣ ಯಾತಕ್ಕರಿಯದು ಭೂತೇಶ್ವರಸಂಜಾತ ಸುರನರ- ವ್ರಾತಾರ್ಚಿತ ಪುರಹೂತಸಹಾಯಕ ನೂತನಸಗುಣವರೂಥ ಪುನೀತ2 ಯಾವ ಕರ್ಮದ ಫಲವೋ ಇದಕಿ- ನ್ಯಾವ ಪ್ರಾಯಶ್ಚಿತ್ತವೋ ಯಾವ ವಿಧವೊ ಎಂಬ ಭಾವವರಿತ ಪುರುಷ ಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲ ದೇವ ಲಕ್ಷ್ಮೀನಾರಾಯಣನ ಪಾದ ಸೇವಕನೀ ಮಹಾದೇವನ ಸುತ ಕರು- ಣಾವಲಂಬಿಗಳ ಕಾವ ನಮ್ಮಯ ಕುಲ- ದೇವ ವಲ್ಲೀಪತಿ ಪಾವಂಜಾಧಿಪ3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನೈಪೆ ನಿನಗಾನು ಭಕ್ತ ಬಂಧು ನಿನ್ನ ವಿಸ್ಮøತಿ ದೋಷ ಕೊಡದಿರೆಂದೆಂದು ಪ ಭಾರ ತಾಳುವಾಗಲಿ ಎಡಹಿ ಕಾಲ ಕಾಲಗಳಲ್ಲಿ ಕಾಲನಾಮಕ ನಿನ್ನ ಲೀಲೆಗಳ ಮರೆಯದೆ ನಾಲಿಗ್ಗೆ ಬರುವಂತೆ 1 ನಿಲ್ಲುವಾಗ ಕುಳಿತು ಮೈದೊಳೆವಾಗ ಅನ್ನಗಳ ಮೆಲುವಾಗ ವಿದ್ಯೆಗಳ ಕಲಿವಾಗ ಮಲಗಿ ಸುಖದಿಂದ ನಲಿವಾಗ ಭಕ್ತವ ತ್ಸಲ ನಿನ್ನ ಮಹಿಮೆಗಳ ತಿಳಿವಂತೆ ಮಾಡಯ್ಯ 2 ಖೇದ ಮೋದಗಳು ಸಂತೋಷ ಸಂಪಾದಿಸಿದ ವೈದೀಕವೈದಿಕಗಳು ಸ್ತ್ರೀ ಧನಗಳೆಲ್ಲ ಶ್ರೀಧವನ ಆರಾಧನೆಗೆ ನಿ ವೇದಿಪುದ ತಿಳಿಸೆಂದು 3 ಮೃಗ ಚೋರ ಮುಂತಾದ ಭಯಗಳಲಿ ಭ್ರಾಂತಿಗೊಳಿಸುವ ವಿಷಯ ಸಂತತಿಯಲಿ ಪ್ರಾತಃ ಕಾಲದಿ ರಮಾರಮಣ ನಿನ್ನ ಮೂರ್ತಿ ಚಿಂತನೆಗೆ ಬರಲೆಂದು ಸಂತೋಷದಾತ 4 ಶ್ವಾನ ಸೂಕರ ಜನ್ಮ ಬರಲಿ ಯಮ ದಂಡ ದೂತರ ಪಾಶಕಂಜೆ ನಾನು ಪಾಂಡವ ಪ್ರಿಯ ಜಗನ್ನಾಥ ವಿಠಲನೆ ಪಾ ಷಂಡಿ ಮತಗಳಲಿ ಚೆನ್ನ ಕೊಡದಿರೆಂದು 5
--------------
ಜಗನ್ನಾಥದಾಸರು
ಬೃಂದಾವನಾನಂದ ಬಾ | ಬೃಂದಾರಕಾನಂದ ಬಾ ಪ ಮಂದಾಕಿನೀಪಾದ ಗೋಪೀಜನಾನಂದ ನಂದಾತ್ಮ ಗೋವಿಂದ ಬಾ ಅ.ಪ ನಂದನ ವನದಲ್ಲಿ ಬೆಳೆದ ಮಂದಾರಾ ಸುಂದರಿಯ ತಲೆಯ ಜಡೆಯ ಬಂಗಾರ ಮಂದಮಾರುತನಿಂದ ನಲಿವು ಶೃಂಗಾರ ಸಾರ 1 ಕತ್ತಲೆಯಲಿ ಹೊಳೆವ ರನ್ನದ ದೀಪ ಮತ್ತಗಾಮಿನಿಯರ ಸರಸ ಸಲ್ಲಾಪ ಎತ್ತೆತ್ತ ಸಡಗರ ಸೊಗದ ಪ್ರತಾಪ ತಾಪ 2 ಗೋಪಾಲ ಘನಲೀಲ ಬಾ ಮುರಹರ ತಾಪತ್ರಯಕಾಲ ಬಾ ಪರಂಧಾಮ ದಿತಿಸುತಭೀಮಾ ಆಪತ್ಸಖಾ ಭಕ್ತಪಾಲಾ ಮಾಂಗಿರಿನಾಥ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೃಹತಿ ನಾಮಾ ಪ್ರಾಣ ಕಾಯೊ ಯೆನ್ನಾ ಪ ಮಹತಿ ಧಾರೀ ಸ್ತುತ್ಯ ಗುರು ಮುಖ್ಯ ಪ್ರಾಣಾ ಅ.ಪ. ಕರ್ಮ ಬೀಜವನೂ 1 ಸಿರಿ | ಅನ್ನ ನಾಮಕಗೇ |ಅನ್ನ ದನ್ನಾದನಿಗೆ | ಅನ್ನ ನೆನಿಸುತ ನೀನುಲೀನ ಗೈಸುವಿ ಜಗವ | ಮಾನ ನಿಧಿ ಪ್ರಾಣಾ 2 ವ್ಯಾಪ್ತೋಪವಾಸಿ ನಿ | ರ್ಲಿಪ್ತ ಬಲದೇವ ಸಂ-ತಪ್ತ ಸುಜನರ್ಗೆ | ಆಪ್ತ ಬಂಧೋ |ಗೋಪ್ತ ನಾಮಕ ಗುರು | ಗೋವಿಂದ ವಿಠಲನಪ್ರಾಪ್ತ ಮಾಡಿಸೊ ದೇವ | ದೀಪ್ತ ಮಾರುತಿಯೇ 3
--------------
ಗುರುಗೋವಿಂದವಿಠಲರು
ಬೆಡಗು ಅಗಮ್ಯವಿದು ಶ್ರೀ ಗುರುವಿನ ಬೆಡಗು ಅಗಮ್ಯವಿದು ಧ್ರುವ ಶೂನ್ಯಾಕಾರದ ಬಾಲೆ ಗಗನವ ಹಡೆದಳು ಏನೆಂದ್ಹೇಳಲಿ ಸೋಜಿಗೆ ಘನಲೀಲೆಯು 1 ವ್ಯೋಮಸುಂದರಿ ಜನಿಸಿದಳು ಮಾರುತನ ಭೀಮ ಪರಾಕ್ರಮನ ನೇಮದಿಂದಲಿ 2 ನಿಜ ವಾಯುಕುಮಾರಿ ಜನಿಸಿದಳು ತಾನೊಂದು ತೇಜ:ಪುಂಜದ ರೂಪವ ಮೂಜಗದೊಳು 3 ಥಳಥಳಿಸುವ ತೇಜದ ಖನಿಯು ಹಡೆದಳು ಜಲಮಯದ ರೂಪವ ನಲಿದಾಡುವ 4 ನಿರಾಕಾರದ ಕೂಸು ಭೂಮಿ ಹಡೆದುದ ಕಂಡು ಬೆರಗಾದ ಮೂಢ ಮಹಿಪತಿಯ ಗುರುಜ್ಞಾನದ 5 ಬೆಡಗು ತೋರಿದ ಗುರು ಒಡಿಯ ಸರ್ವೋತ್ಮನು ಪೊಡವಿಯೊಳೊಂದು ಸೋಜಿಗ ಗೂಢವಾಗಿಹ 6 ಕೌತುಕವನು ಕಂಡು ಕೈ ಮುಗಿದು ಮಹಿಪತಿ ತ್ರಾಹಿ ತ್ರಾಹಿ ತ್ರಾಹಿಯೆಂದ ಮನದೊಳಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಬೇಗನೆ ಬಾರೊ ದೇವ ಜಾಗೂ ಮಾಡದೆ ಪ ಬೇಗನೆ ಬಾರೊ ನೀನು ನಾಗಶÀಯನ ಕೃಷ್ಣ ಯೋಗಿ ಜನರು ಕಂಡು ಪೋಗಲೀಸರೆ ನಿನ್ನ ಅ.ಪ. ಹತ್ತಾವತಾರವಾಯ್ತು ಮತ್ತಗಜವ ಪೊರೆದೆ ಉತ್ತಮಪದ ಧ್ರುವಗಿತ್ತೆ ಮತ್ತೇನು ಕಾರ್ಯವೈಯ್ಯ 1 ತರಳ ಪ್ರಹ್ಲಾದನ ಕರುಣಾದಿ ಸಲಹಿದೆ ದುರುಳರ ಸದೆದ ಪರಿಯೆಲ್ಲವಾಯಿತು2 ಪರಿ ರೂಪವ ಧರಿಸಿದ ಎನ್ನದೇವ ಸಿರಿರಂಗೇಶವಿಠಲನೆ ಕರವೆತ್ತಿ ಮುಗಿಯುವೆ 3
--------------
ರಂಗೇಶವಿಠಲದಾಸರು
ಬೇಡಿದೆನು ಕೊಡುಕಂಡ್ಯ ಬೇಡಿದೆನು ಕೊಡುಕಂಡ್ಯಬೇಡಿದೆನು ನೀ ನೀಡು ಕಂಡ್ಯಾ ಪ ನಿನ್ನ ಹಾಡನು ಹಾಡಿ ನಿನ್ನ ನಿಜದೊಳಗಾಡಿನಿನ್ನನೇ ಕಾಡಿ ನಿನ್ನನೇ ಬೇಡಿನಿನ್ನ ಓಲಗವ ಮಾಡಿ ನಿನ್ನ ನಿಟ್ಟಿಸಿ ನೋಡಿನಿನ್ನ ಲೀಲೆಯೊಳು ನಾನಿರುತಿಹುದದನಾ 1 ನೋಟದೊಳಗಿನ ನೋಟ ಕೂಟದೊಳಗಿನ ಕೂಟಆಟದೊಳಗಿನ ಆಟ ಇಂಥ ಆಟನೀಟದೊಳಗಿನ ನೀಟ ನಿನ್ನಲ್ಲಿ ಬೆರೆದಾಟಪಾಟ ಮಾಡಿಯೆ ಎನಗೆ ಪಾಲಿಸುವುದನ2 ಶರೀರದಿಚ್ಚೆಯನುಳಿದು ಶರೀರ ವಾಸನೆ ಕಳೆದುಶರೀರ ವಿಷಯದ ಹೊಲಬೆಲ್ಲ ಬಳಿದುಶರೀರದ ನೆಲೆಯು ತಿಳಿದು ಶರೀರದೊಳೊಬ್ಬನನುಳಿದುಶರೀರದ ಸಂಗ ದೊರಕದಿಹದದನಾ 3 ನಾದಲಕ್ಷಿಸಿ ಹಿಡಿದು ನಾದ ಸಂಗವ ಪಡೆದುನಾದಾಮೃತವ ಕಿವಿತುಂಬ ಕುಡಿದುನಾದ ದಾರಿಯ ನಡೆದು ನಾದ ದೊಳ್ವೆಳ ಗೊಡದುನಾದವನೆ ಮರೆತು ಸುಖಿಸುತಿಹದದನ 4 ನಿನ್ನ ನೀನುಳಿದಿಲ್ಲ ನೀ ದೈವ ಜಗಕೆಲ್ಲನಿನ್ನಂತೆ ಆಪ್ತರಿಲ್ಲ ನಿನ್ನ ನಂಬಿದೆನಲ್ಲನೀ ಕಾಯಬೇಕಲ್ಲ ಚೆನ್ನ ಚಿದಾನಂದನೆನೆಹಂಬತಾತ್ವಿಕ ಹಿನ್ನೆಲೆಯ ಕೀರ್ತನೆಗಳುದದನಾ 5
--------------
ಚಿದಾನಂದ ಅವಧೂತರು
ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
ಬೋಧ ಪ ಶ್ರೀನಿವಾಸನ ನಾಮ ಲೀಲೆಯಸಾನುರಾಗದಿ ವಾಣಿಜಾಣೆಸೂನೂನ ಪಾಪವ ಹಾನಿಯ ಮಾಡುತ 1 ಹತ್ತು ನಾಲ್ಕು ಸುತ್ತದೇಶದಿಚಿತ್ರ ಚರಿತನ ವೃತ್ತಿ ನಿತ್ಯದಿವಿಸ್ತರಿಸಿ ಹೇಳುತ ಚಿತ್ತದಿ ಸುಖಿಸುವಿ 2 ಇಂದಿರೇಶನ ತಂದು ತೋರುವಿಎಂದು ನಿನ್ನನು ಪೊಂದಿ ಬಂದೆನಂದನ ಕಂದನ ಬಂದೀಗ ತೋರಿಸು 3
--------------
ಇಂದಿರೇಶರು
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬ್ರಹ್ಮಣ್ಯ ತೀರ್ಥ ಗುರು ರಾಜಾ | ನಿನ್ನನಮ್ಮಿದೆನೊ ಭಾಸ್ಕರ ಸುತೇಜಾ | ಭಾವಿಬೊಮ್ಮ ಮತವರುಹಿ ಮಹೋಜಾ | ಸಲಹೊಪ್ರಮ್ಮೇಯಂಗಳ ನಿಧಿಯ ಸಹೋಜಾ ಪ ಓದ್ದಾಡುತಿಹೆನೊ ಈ ಭವದೀ | ಸುಖಗದ್ದುಗೆಯನೇರ್ವಂಥ ಹಾದೀ | ತೋರಿಉದ್ಧರಿಸೊ ಬಲು ಕೃಪಾಜಲಧೀ | ಗುರುವೆಶುದ್ಧ ಬುದ್ಧಿಯ ನೀಯೊ ಮುದದೀ 1 ಯಾತ್ರೆಗಳ ಮಾಡ್ದೆನೆಂಬ | ಬಿಂಕದ್ವಾರ್ತೆಯೊಂದಲ್ಲದಲೆ ಇಂಬ | ಕಾಣೆಕ್ಷೇತ್ರ ಮೂರ್ತಿಯ ಕಾಂಬನೆಂಬ | ಆಶೆಪೂರ್ತಿ ಮಾಡೆನ್ನ ಗುರು ಬಿಂಬ 2 ಧನವನಿತೆ ವಿಷಯದಲ್ಲೀ | ಬಹಳ ಮನ ಮಾಡಿ ನೊಂದೆನಲ್ಲೀ | ಹರಿಯಮನ ಮುಟ್ಟೊ ಭಜಿಸು ಎಂಬಲ್ಲೀ | ಇನ್ನುಘನ ಜ್ಞಾನ ಭಕುತಿ ಇಲ್ಲಲ್ಲೀ 3 ಜೀವಗೆಲ್ಲಿಯ ಸ್ವತಂತ್ರಾ | ಹರಿಗುರುತಾವಲ್ಲಿ ಮಾಡುತಿಹ ತಂತ್ರ | ದಿಟವಿದುಜೀವನೇ ಮಾಳ್ಪುನೆಂಬುದೆ ಕುತಂತ್ರ | ತಿಳಿಸೊಭಾವ ಜಾನಯ್ಯನ ಸ್ವತಂತ್ರ 4 ಸಾರ ವ್ರಾತ | ತಿಳಿಸೊಜ್ಞಾನ ನಿಧಿ ಪುರುಷೋತ್ಮ ತಂತ್ರ 5 ಕಾರಕ ಕ್ರಿಯ ದ್ರವ್ಯವೆನಿಪ | ಭ್ರಮವುಮೂರರಿಂದಲಿ ದೂರ ಮಾಳ್ಪ | ಮಾರ್ಗತೋರಿಸಲಹುವುದು ಯತಿ ಭೂಪ | ತವಪದವಾರಿ ಜತೆ ಈ ನೀಚ ಬೀಳ್ಪ 6 ತ್ರ್ಯಕ್ಷಾಂಶ ಭೂತರಾದ | ಸನ್ಯಾಸಿಅಕ್ಷೋಭ್ಯ ಕರಜರಾದ | ಅಜೇಯಇಕ್ಷುಚಾಪನ್ನ ಗೆಲಿದ | ಜಯಾರ್ಯಭಿಕ್ಷುವಿನ ಮಾರ್ಗರಾದ7 ಮೋದ | ಪಡೆವದಾಯ ತೋರಿದಿ ನಿರ್ವಿವಾದ | ಇನ್ನುಗಾಯನದಿ ಮಹಿಮೆ ಅಗಾಧ | ಪೇಳ್ವಆಯತವ ನೀಯೋ ಸುಭೋಧ 8 ಬೃಹತೀ ಸಹಸ್ರ ಮಂತ್ರ | ಜಪಿಪಮಹಯೋಗದಾತ ಮಹಾಂತ | ಬೇಡ್ವೆಬೃಹತಿನಾಮಕನು ಎಂಬಂಥ | ಹರಿಯಮಹ ಮಹಿಮೆ ಕಂಡು ಹಿಗ್ವಂಥ 9 ಸೃಷ್ಟ್ಯಾದಿ ಅಷ್ಟಕಗಳ | ಗೈವಕೃಷ್ಣನ್ನ ಮಹಿಮೆಗಳ | ಕೇಳಿಹೃಷ್ಟರಾಗುವ ಜನಗಳ | ಸಂಗಕೊಟ್ಟುದ್ಧರಿಸೊ ನಮ್ಮಗಳ 10 ಸದನ 11
--------------
ಗುರುಗೋವಿಂದವಿಠಲರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಬ್ರಾಹ್ಮಣನುಣಲಿಕೆ ರಾಗಿ ಹಿಟ್ಟು ತನ್ನ ಬಂಧು ಜನಕ್ಕೆ ಒಬ್ಬಟ್ಟು ಪ ಪಾಮರ ಜನರಲಿ ವಾಡಿಕೆಯಿದು | ಶ್ರೀ ರಾಮನೊಲಿವನೆ ಎಂದಿಗಾದರು ಅ.ಪ ಮಾತು ಮಾತಿಗೆ ಸಾಲಮಾಡಿ | ಬಹ ಳಾತುರದಲಿ ಓಡಾಡಿ ಜಾತುಕನಂದದಿ ಜನಗಳ ಮೆಚ್ಚಿಸಿ ಪಾತಕವಾದರು ಲಾಭವಧಿಕ 1 ದೊಡ್ಡದಾಗಿ ಮನೆಕಟ್ಟಿದರೆ -ಸಾಲ ಹೆಡ್ಡಗಾದರು ಹುಟ್ಟುವುದು ದುಡ್ಡುದೇವರಿಗಿಂತ ದೊಡ್ಡದೇವರು ಯಾವುದು? ಬಡ್ಡಿ ಹಚ್ಚು ಬರುವನೆ ಮಹರಾಯನು2 ಹೊಟ್ಟೆಗೆ ತಿಂಬುವದ್ಯಾರು ಬಲ್ಲರು? ವುಟ್ಟ ಬಟ್ಟೆಯಲ್ಲರು ನೋಡುವರು ಸಿಟ್ಟು ಬಂದರೆ ಬೆಂಕಿಯಂತವ ನಾನು ಹೊಟ್ಟೆ ಚಿಕ್ಕದು ಕಣ್ಣು ದೊಡ್ಡದು 3 ಪರಲೋಕವು ಉಂಟೆಂದು ಪೇಳು ವರರಿಯದವರು ತಾವು ಮುಂದು ನರಕವುಸ್ವರ್ಗವು ಯಾರು ನೋಡಿರುವರು ಪುರಾಣ ಶಾಸ್ತ್ರಗಳು ಯಾತಕೆ ಬಿಡಿ4 ಅತಿಥಿಗಳಿಗೆ ನೀರುಮಜ್ಜಿಗೆ | ಮೊಸರು ಸತಿಸುತರಿಗೂ ಮತ್ತು ತನಗೆ ಯಿತರರಿಗೆಲ್ಲಾ ಎಣ್ಣೆಕರೆದ ಭಕ್ಷ್ಯ ಘೃತಭಕ್ಷ ತನಗೆ ಮಾತ್ರ 5 ಎಣ್ಣೆಯು ಬಲುರುಚಿ ನಮಗೆ | ತುಪ್ಪ ವಿನ್ನೇತಕೆ ಹೆಚ್ಚು ಬೆಲೆಗೆ ಕಣ್ಣಲಿ ಕಂಡದು ಮಾತ್ರ ಸತ್ಯ | ನಾ ವನ್ಯರ ನುಡಿ ನಂಬುವುದಿಲ್ಲವು 6 ವೊರಿಗೆಲ್ಲ ನಾ ಮೇಟಿ | ಯನ್ನ ನಾರು ಪೋಲುವರು ಸಾಟಿ ನೂರೆಲೆ ಬೀಳ್ವುದು ನಮ್ಮ ಮನೇಲೀ ಘೋರ ಕ್ಷಾಮದಲಿ ನಾನೆ ಪೊರೆವೆ 7 ಪರರಂತೆ ನಾನಿರಬೇಕು | ಶ್ರೀ ಹರಿ ಇಷ್ಟು ಕೊಟ್ಟರೆ ಸಾಕು ಗುರುಹಿರಿಯರು ನುಡಿಯೇತಕವರು ಮುದು- ಕರು ಏನು ಬಲ್ಲರು ಲೌಕೀಕವ 8 ಗುರುರಾಮವಿಠಲೆಲ್ಲಿ ಭ್ರಾಂತು -ಈ ಕರೆಕರೆ ನಮಗೇಕೆ ಬಂತು ಸೇರಿತು ಬಡವರಾವು 9
--------------
ಗುರುರಾಮವಿಠಲ
ಭಕ್ತರ ಭಾಗ್ಯಕೆ ಯೆಣೆಯಂ ನಾ ಕಾಣೆನೀಜಗದಿ ನಿತ್ಯ ಸ್ತುತ್ಯದ ಮಾರ್ಗವತಿವೈಚಿತ್ರ್ಯವು ಪ ನಿತ್ಯ ಕರ್ಮವನಡಸಿ ಗೀತಾಪಾರಾಯಣ ಮಾಡುತ್ತಿಹ 1 ಸುಂದರ ಶ್ಯಾಮನ ಕಂಡಾನಂದದಿ ಮಹಿಮೆಯ ಕೊಂಡಾಡಿ ಹೃದಯದಿ ನೋಡುವ2 ನಡೆವಾಗ ನುಡಿವಾಗ ಮಡದಿ ಮಕ್ಕಳ ಕೂಡಿ ತಮ್ಮೊಡೆಯನ ನೆನೆಯುವ 3 ಹರಿಕಥೆಯಂ ಕೇಳುವರು ಶರಣರ ಕಂಡು ನಮಿಸುವರು ಪರಿ ಸಿರಿಯರಸನಿರುವನೆಂದರಿತ ಮಹಾತ್ಮರ4 ನಗಧರಲೀಲೆಗೆ ನಗುತ ಹಗರಣಹರ ಎಲ್ಲೆಂದಳುತ ಒಗೆದಾಮೋದದಿ ಕುಣಿದಾಡುತ್ತಿಹ 5 ಹೆಜ್ಜಾಜೀಶನು ಕೃಪೆಯಿಂ ಸಜ್ಜನರಂ ಪಾಲಿಸಿದ ಮಜ್ಜನಗೈಯುವ ಪುಣ್ಯ ಚರಿತ್ರರ 6
--------------
ಶಾಮಶರ್ಮರು