ಒಟ್ಟು 19445 ಕಡೆಗಳಲ್ಲಿ , 133 ದಾಸರು , 8422 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದದೆಲ್ಲವೊ ಬರಲಿ - ಗೋ -ವಿಂದನ ದಯೆ ನಮಗಿರಲಿ ಪಮಂದರಧರ ಗೋವಿಂದ ಮುಕುಂದನಸಂದರುಶನ ನಮಗೊಂದೇ ಸಾಲದೆ ? ಅ.ಪಆರು ಅರಿಯದಿರಲೆನ್ನ - ಮುರಾರಿಯು ವರದ ಪ್ರಸನ್ನತೋರುವ ದುರಿತದ ಬೆನ್ನ -ಭವಹಾರಿ ಕೃಪಾಂಬುಧಿ ಚೆನ್ನ ||ಶ್ರೀರಮಣನ ಶ್ರೀಚರಣ ಸೇವಕರಿಗೆಘೋರಯಮನು ಶರಣಾಗತನಲ್ಲವೆ ? 1ಅರಗಿನ ಮನೆಯೊಳಗಂದು ಪಾಂಡುವರನು ಕೊಲಬೇಕೆಂದುದುರುಳ ಕುರುಪ ಕಪಟದಲಿ ಹಾಕಿರುತಿರೆ ಆ ಕ್ಷಣದಲಿ ||ಹರಿಕೃಪೆಯವರಲ್ಲಿದ್ದ ಕಾರಣದುರಿತವೆಲ್ಲ ಬಯಲಾದುದಲ್ಲವೆ ? 2ಸಿಂಗನ ಪೆಗಲೇರಿದಗೆ - ಕರಿಭಂಗವೇಕೆ ಮತ್ತವಗೆ |ರಂಗನ ದಯವುಳ್ಳವಗೆ - ಭವಭಂಗದ ಭೀತಿಯ ಹಂಗೆ ||ವiಂಗಳ ಮಹಿಮ ಶ್ರೀಪುರಂದರ ವಿಠಲನಹಿಂಗದ ದಯೆವೊಂದಿದ್ದರೆ ಸಾಲದೆ ? 3
--------------
ಪುರಂದರದಾಸರು
ಬಂದನಕ್ರೂರ ವ್ರಜಕೆ ಗೋಪೀ ಕಂದನ ಚರಣಾರ |ವಿಂದ ಕಾಂಬುವೆ ನಿಂದಿನ ದಿನ ಸುದಿನೆಂದು ಪಎಷ್ಟು ಜನ್ಮದಸುಕೃತಒದಗೀತೋ ಈ |ದುಷ್ಟನ ಸಂಗದಿಂದ ||ಬಿಟ್ಟು ಇಚ್ಛಾನುಸಾರದಿ ಗೋಕುಲದಮಾರ್ಗ|ಮೆಟ್ಟಿದೆಹರಿದಯೆಯಾದದ್ದು ನೋಡೆಂದು 1ಒಂದೊಂದು ಹೆಜ್ಜೆಗಳ ಬರುತ ಕ್ರಮ- |ದಿಂದ ಯಮುನೆಯ ದಾಟಿ ||ವೃಂದಾವನದ ಭೂಮಿ ಕಾಣುತ ಬಹು ಮುದ- |ದಿಂಧರಿ ಹರಿಯೆಂದು ನಯನೋದ (ಕ)ಸುರಿಸುತ್ತ 2ಇಲ್ಲೆಲ್ಲ ಸಂಚಾರವ ಮಾಡಿಹ ಖಳ- |ದಲ್ಲಣನೆಂದು ಧೂಳೀ- |ಯಲ್ಲ್ಯುರುಳುತ ಪೊಗಳುತ ಶ್ರೀ ಪ್ರಾಣೇಶ ವಿ- |ಠಲಗೆರಗಿ ಕೈ ಮುಗಿದು ನಿಂದ ತುತಿಸುತ 3
--------------
ಪ್ರಾಣೇಶದಾಸರು
ಬಂದನೇನೆ-ರಂಗ-ಬಂದನೇನೆ-ಎನ್ನ |ತಂದೆ ಬಾಲಕೃಷ್ಣ ನವನೀತಚೋರ ಪಘಿಲುಘಿಲು ಘಿಲುರೆಂಬ ಪೊನ್ನಂದುಗೆ ಗೆಜ್ಜೆ |ಹೊಳೆಹೊಳೆಯುವಪಾದಊರುತಲಿ ||ನಲಿನಲಿದಾಡುವ ಉಂಗುರ ಅರಳೆಲೆಥಳಥಳ ಹೊಳೆಯುತ ಶ್ರೀಕೃಷ್ಣ 1ಕಿಣಿಕಿಣಿಕಿಣಿಯೆಂಬ ಕರದ ಕಂಕಣ ಬಳೆ |ಝಣಝಣಝಣರೆಂಬ ನಡುವಿನ ಗಂಟೆ ||ಗಣಗಣಗಣಯೆಂಬ ಪಾದದ ತೊಡವಿನ |ಕುಣಿಕುಣಿಕುಣಿದಾಡುತ ಶ್ರೀಕೃಷ್ಣ 2ಹಿಡಿಹಿಡಿಹಿಡಿಯೆಂದು ಪುರಂದರವಿಠಲನ |ದುಡುದುಡುದುಡುದುಡು ಓಡುತ ||ನಡೆನಡೆನಡೆಯೆಂದು ಮೆಲ್ಲನೆ ಪಿಡಿಯಲು |ಬಿಡಿಬಿಡಿ ದಮ್ಮಯ್ಯ ಎನ್ನತಲಿ 3
--------------
ಪುರಂದರದಾಸರು
ಬಂದಿದೆ ದುರಿತಘಸಂಗ ಶ್ರೀರಂಗಮಂದಮತಿಯೆಂದುಪೇಕ್ಷಿಸದುಳುಹೊ ಪ.ಒಲ್ಲೆನೆಂದರೆ ಬಿಡದೀ ಮನ ತಿಳಿದತ್ತೆಕ್ಷುಲ್ಲ ವೃತ್ತಿಯ ಸೇರಿ ಬಿಡಲೊಲ್ಲದುಕಲ್ಲುಗೊಂಡಿದೆ ಪುಣ್ಯಮಾರ್ಗಕ್ಕೆ ಇದರೊಳುಫುಲ್ಲನಾಭನೆ ಆವ ತೆರದಿಂದ ಸಲಹೊ 1ಕೆಂಡವ ಕೊಂಡು ಮಂಡೆಯ ಬಾಚುತಿದೆಪರಹೆಂಡಿರು ವಿತ್ತದಾಸೆಗೆ ತೊಡಕಿಕಂಡರೆ ಸೊಗಸದು ಭಕುತಿ ವೈರಾಗ್ಯವಪುಂಡರೀಕಾಕ್ಷನೆಗತಿನೀನೆ ಬಲ್ಲೆ2ಮೆಲ್ಲ ಮೆಲ್ಲನೆ ದುಷ್ಕರ್ಮವ ಸಾಧಿಸಿಬಲ್ಲಿದಜವನವರ ಬರಮಾಡಿದೆವಲ್ಲಭಪ್ರಸನ್ವೆಂಕಟ ಕೃಷ್ಣನಿಲ್ಲಿಸು ನಿನ್ನ ನಾಮವ ನಾಲಿಗೆಯಲಿ 3
--------------
ಪ್ರಸನ್ನವೆಂಕಟದಾಸರು
ಬಂದು ನಮ್ಮ ಮನೆಗೆ ನಿಂದಿಸಿಲ್ಲಿಗೆ ಬಂದೆಚಂದೇನೆ ಇದು ಚಂದೇನೆ ಪ.ಚಾರುಗುಣಶೀಲೆಯರ ದೂರಿ ಇಲ್ಲಿಗೆ ಬಂದೆಚಾರ್ವಾಕಳೆಂದು ಸಾರಿ ಕೈ ಹೊಯ್ದರು 1ಸುಂದರ ಗುಣದೆಯರಿಗೆ ಅಂದ ಮಾತುಗಳೆಲ್ಲಹೊಂದೋವೇನೆ ವ್ಯರ್ಥ ನಿಂದ್ಯಳಾದಿ ನೀನು 2ಶ್ರೀಶನ ಸತಿಯರ ಮೀಸಲ ಗುಣದೆಯರಹಾಸ್ಯ ಮಾಡಿ ಬಂದು ದೂಷಳಾದಿ ನೀನು 3ಭಾಳಗುಣಾಢ್ಯರಿಗೆ ಅವಹೇಳನವಾಡಿದಿತಾಳೆ ಈ ಮಾತಿಗೆ ನಿವಾಳಿಸುವರ ನಿನ್ನ 4ಮುದ್ದು ರಾಮೇಶನ ಅರ್ಧಾಂಗಿಯರಿಗೆಅವದ್ದ ನುಡಿದು ಬಂದು ಬಿದ್ದು ನಗುವಂತೆ 5
--------------
ಗಲಗಲಿಅವ್ವನವರು
ಬಂದು ನಿಂದಿಹ ನೋಡಿ- ಭೂತಳದಿ ವೆಂಕಟಇಂದಿರೆಯನೊಡಗೂಡಿ- ಒಪ್ಪುವ ನಿರಂತರಪೊಂದಿ ಭಜನೆಯ ಮಾಡಿ- ಆನಂದ ಬೇಡಿ ಪವಂದಿಸುತ ಮನೆದೊಳಗೆ ಇವನಡಿ-ದ್ವಂದ್ವ ಭಜಿಸಲು ಬಂದ ಭಯಹರ |ಇಂದುಧರಸುರವೃಂದನುತ ಗೋ-ವಿಂದಘನದಯಾಸಿಂಧು ಶ್ರೀಹರಿ ಅ.ಪದ್ವಾರದೆಡಬಲದಲ್ಲಿ- ಜಯವಿಜಯರಿಬ್ಬರುಸೇರಿ ಸೇವಿಪರಲ್ಲಿ- ಸನಕಾದಿನುತ ಶೃಂ-ಗಾರನಿಧಿ ಅಂಗದಲಿ- ಮುತ್ತಿನಲಿ ಶೋಭಿಪಹಾರ ಹೊಂದಿಹುದಲ್ಲಿ- ವಿಸ್ತಾರದಲ್ಲಿ ||ವಾರವಾರಕೆ ಪೂಜೆಗೊಂಬುವಹಾರ ಮುಕುಟಾಭರಣ ಕುಂಡಲ-ಧಾರಿ ಭುಜ ಕೇಯೂರ ಭೂಷಿತಮಾರಪಿತಗುಣಮೋಹನಾಂಗ ||ಚಾರುಪೀತಾಂಬರ ಕಟಿಯ ಕರ-ವೀರ ಕಲ್ಹಾರಾದಿ ಹೂವಿನಹಾರ ಕೊರಳೊಳು ಎಸೆಯುತಿರೆ ವದ-|ನಾರವಿಂದನು ನಗುತ ನಲಿಯುತ 1ಎಲ್ಲ ಭಕುತರಭೀಷ್ಟ-ಕೊಡುವುದಕೆ ತಾ ಕೈ-ವಲ್ಯ ಸ್ಥಾನವ ಬಿಟ್ಟ- ಶೇಷಾದ್ರಿ ಮಂದಿರದಲ್ಲಿ ಲೋಲುಪ ದಿಟ್ಟ-ಸೌಭಾಗ್ಯನಿಧಿಗೆದುರಿಲ್ಲ ಭುಜಬಲ ಪುಷ್ಪ-ಕಸ್ತೂರಿಯಿಟ್ಟ ||ಚೆಲ್ವ ಪಣೆಯಲಿ ಶೋಭಿಸುವ ಸಿರಿ-ವಲ್ಲಭನಗುಣಪೊಗಳದಿಹ ಜಗ-ಖುಲ್ಲರೆದೆದಲ್ಲಣ ಪರಾಕ್ರಮಮಲ್ಲಮರ್ದನಮಾತುಳಾಂತಕ||ಫಲ್ಗುಣನಸಖಪ್ರಕಟನಾಗಿಹದುರ್ಲಭನು ಅಘದೂರ ಬಹುಮಾಂಗಲ್ಯ ಹೃಯಯವ ಮಾಡಿ ಸೃಷ್ಟಿಗೆಉಲ್ಲಾಸ ಕೊಡುತಲಿ ಚೆಂದದಿಂದಲಿ 2ಪದಕ-ಕೌಸ್ತುಭದಾರ-ಸರಿಗೆಯ ಸುಕಂಧರಸುದರ್ಶನ-ದರಧಾರ-ಸುಂದರ ಮನೋಹರಪದಯುಗದಿ ನೂಪುರ-ಇಟ್ಟಿಹನು ಸನ್ಮುನಿಹೃದಯ ಸ್ಥಿತ ಗಂಭೀರ-ಬಹುದಾನ ಶೂರ ||ವಿಧಿ-ಭವಾದ್ಯರ ಪೊರೆವ ದಾತನುತುದಿ ಮೊದಲು ಮಧ್ಯವು ವಿರಹಿತನುಉದುಭವಾದಿಗಳೀವ ಕರ್ತನುತ್ರಿದಶಪೂಜೀತ ತ್ತಿಭುವನೇಶ ||ಸದುನಲಾಸದಿ ಸ್ವಾಮಿ ತೀರ್ಥದಿಉದುಸುತಿರೆಸಿರಿಮಹಿಳೆ ಸಹಿತದಿಪದುಮನಾಭಪುರಂದರವಿಠಲನುಮುದದಿ ಬ್ರಹ್ಮೋತ್ಸವದಿ ಮೆರೆಯುತ 3
--------------
ಪುರಂದರದಾಸರು
ಬದುಕಿದೆನು ಬದುಕಿದೆನು ಭವದುರಿತ ಹಿಂಗಿತುಪದುಮನಾಭನ ಪಾದದೊಲಿಮೆ ಎನಗಾಯಿತು ಪಹರಿಯ ತೀರ್ಥ ಪ್ರಸಾದವು ಎನಗೆ ದೊರೆಕಿತು |ಹರಿಕಥಾಮೃತವೆನ್ನ ಕಿವಿಗೊದಗಿತು ||ಹರಿದಾಸರುಗಳೆನ್ನ ಬಂಧು ಬಳಗವಾದರು |ಹರಿಯ ಶ್ರೀ ಮುದ್ರೆಯೆನಗೆ ಆಭರಣವಾಯ್ತು 1ಮುಕ್ತರಾದರು ಎನ್ನ ನೂರೊಂದು ಕುಲದವರು |ಮುಕ್ತಿ ಮಾರ್ಗಕೆ ಯೋಗ್ಯ ನಾನಾದೆನು ||ಸುಕೃತಿದೇಹಕ್ಕೆನ್ನ ಮನವು ತಾನೆಳಸಿತ್ತು |ಅಕಳಂಕ ಹರಿನಾಮ ದಿವ್ಯಕೊದಗಿತ್ತು 2ಇಂದೆನ್ನ ಸಂತತಿಗೆ ಸಕಲ ಸಂಪದವಾಯ್ತು |ಮುಂದೆನ್ನ ಜನ್ನ ಸಾಫಲ್ಯವಾಯ್ತು ||ತಂದೆ ಶ್ರೀಹರಿಪುರಂದರವಿಠಲ ರಾಯನೇ |ಬಂದೆನ್ನ ಹೃದಯದೊಳು ನೆಲೆಯಾಗಿ ನಿಂತ 3
--------------
ಪುರಂದರದಾಸರು
ಬಂದೆ ಭಗವತ್ಪಾದಯುಗಾರವಿಂದಕೆ ಮಿಳಿಂದನಾಗಿವಂದನೀಯರೆ ಯತಿಕುಲಾಬ್ಧಿಚಂದ್ರರ ಭುವನೇಂದ್ರತೀರ್ಥರೆ 1ಪರಮಪಾವನ ಭುವನೇಂದ್ರರಕರಸಂಜಾತ ವರದೇಂದ್ರರಕರಸರೋರುಹಭವರೆ ಮಹಾಕರುಣಾಂತಃಕರಣ ಧೀರರೆ 2ಸುಮತೀಂದ್ರಾದಿ ಯತೀಂದ್ರರವಿಮಲ ಹೃದಯಕಮಲಭಾಸ್ಕರಅಮಮ ನಿಮ್ಮ ಕಾಂಬ ಯೋಗಅಮಿತಸುಕೃತಭೋಗಪೂಗ3ಪೂರ್ಣಪ್ರಜ್ಞಾಚಾರ್ಯವರ್ಯಸನ್ನುತಮತಧೈರ್ಯ ಧುರ್ಯಧನ್ಯನಾದೆನು ನಾನಿಂದುಸನ್ನಿಧಾನವನು ಕಂಡೆನು 4ಶ್ರೀಶ ಲಕ್ಷ್ಮೀನಾರಾಯಣವ್ಯಾಸ ರಘುಪತಿಯ ಚರಣೋ-ಪಾಸಕರೆ ಪಾವನರೆಕಾಶೀವiಠಾಧೀಶ್ವರರೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಂದೆನೇಳೆ ಗೋವಿಂದ ನಾ ಇಂದುಮುಖಿ ನಿದ್ರೆ ಬಿಟ್ಟುಬಂದು ನೀ ಬಾಗಿಲ ತೆಗೆಯೆ ಗೋವಿಂದ ನೀ ಗೋವೃಂದವ ಕಾಯಲು ಹೋಗಯ್ಯ ಪ.ಸೋಮಕ ಖಳನ ಕೊಂದು ನೇಮದಿ ವೇದವ ತಂದಶ್ರೀ ಮತ್ಸ್ಯಾವತಾರ ಬಂದೆನೆ ಮತ್ಸ್ಸ್ಯನಾದರೆಆ ಮಹಾಂಬುಧಿಗೆ ಹೋಗಯ್ಯ 1ಸಿಂಧುಮಥÀನ ಕಾಲಕೆ ವೃಂದಾರಕರಿಗÉೂಲಿದಸುಂದರ ಕೂರ್ಮನು ಬಂದೆನೆ ಕೂರ್ಮನಾದರೆಮಂದರಹೊರಲು ಹೋಗಯ್ಯ2ಪ್ರಳಯಾಂಬುಗಿಳಿದೊಬ್ಬನ ಸುಲಭದಿ ಕೋರೇಲಿ ಸೀಳಿದಚೆಲುವ ವರಾಹನು ಬಂದೆನೆ ವರಾಹನಾದರೆಇಳೆಯ ಕೂಡಾಡ ಹೋಗಯ್ಯ 3ಸೊಕ್ಕಿ ಕಂಬವ ಗುದ್ದ್ದಿದ ರಕ್ಕಸನಂತರ ಮಾಲೆಯನಿಕ್ಕಿದ ನರಹರಿ ಬಂದೆನೆ ನರಹರಿಯಾದರೆಚಿಕ್ಕವನೊಳಾಡ ಹೋಗಯ್ಯ 4ಹೋಮವ ಮಾಡಿ ಮೀರಿದ ಭೂಮಿಪನುಕ್ಕ ಮುರಿದನೇಮದ ವಾಮನ ಬಂದೆನೆ ವಾಮನನಾದರೆನೇಮ ನಿಷ್ಠೆಗೆ ನೀ ಹೋಗಯ್ಯ 5ಭೂಭಾರವನಿಳುಹಿ ದ್ವಿಜರ್ಗೆ ಭಾಗ್ಯವ ಕೊಟ್ಟ ಶೌರ್ಯಶೋಭಿತಭಾರ್ಗವಬಂದೆನೆ ಭಾರ್ಗವನಾದರೆಆ ಬಾಲೇರಂಜಿಸ ಹೋಗಯ್ಯ 6ಸೀತೆಗಾಗಿ ರಾವಣನ್ನ ಘಾತಿಸಿದೆ ಕೇಳೆವಾತಜಾತ ವಂದ್ಯ ರಾಮ ಬಂದೆನೆ ರಾಮನಾದರೆ ಸರಯೂ ತೀರದಲ್ಲಿರ ಹೋಗಯ್ಯ 7ಸೋಳಸಾಸಿರ ಗೋಪೇರನಾಳುವ ಪ್ರೌಢ ಕಾಣೆ ಗೋಪಾಲ ಚೂಡಾಮಣಿ ಬಂದೆನೆ ಗೋಪಾಲನಾದರೆ ಗೋಪಾಲೇರೊಡನಾಡ ಹೋಗಯ್ಯ 8ದೃಢದಲ್ಲಿ ತಪವಿದ್ದ ಮಡದೇರ ಮನಗೆದ್ದಕಡುಮುದ್ದು ಬುದ್ಧ್ದ ಬಂದೇನೆ ಬುದ್ಧನಾದರೆ ಮಿಥ್ಯದಸಡಗರದಲ್ಲಿರ ಹೋಗಯ್ಯ 9ಪದ್ಮಗಂಧಿ ನಿನ್ನ ರತಿಗೊದಗಿದೆ ಬಿಂಕವಿನ್ನ್ಯಾಕೆಕುದುರೆಯೇರಿ ಕಲ್ಕಿ ಬಂದೆನೆ ಕಲ್ಕಿಯಾದರೆಕದನಕೆ ಜಾಣ ಹೋಗಯ್ಯ 10ವಲ್ಲಭನ ನುಡಿಕೇಳಿ ನಲ್ಲೆ ಸತ್ಯಭಾಮೆಪಾದಪಲ್ಲವಕೆರಗಿ ನಿಂತಳು ಪ್ರಸನ್ವೆಂಕಟಚೆಲುವ ನೀನೆಂದರಿಯೆನೆಂದಳು 11
--------------
ಪ್ರಸನ್ನವೆಂಕಟದಾಸರು
ಬಂದೆವಯ್ಯ ಶ್ರೀಕೃಷ್ಣಮೂರ್ತಿ ನಿನ್ನ ಸುಂದರಚರಣಾರವಿಂದ ನೋಡುವುದಕ್ಕೆ ಬಂದೆ ಪಮಂದರೋದ್ಧರ ಅರವಿಂದ ನೇತ್ರಗೆ ನಮ್ಮೊ-ಳಿಂದು ಕೃಪೆಯ ತೋರಿ ಸಲಹೋ ಸಚ್ಚಿದಾನಂದ ಅ.ಪಭಾವಸಂವತ್ಸರ ಪೌಷ ಬಹುಳಮವಾಸೆಮಹಾ ದೃಢದಿ ಸಮುದ್ರವ ಸ್ನಾನಗೈದುಆ ವಡಭಾಂಡೇಶ್ವರದಿಂದ ಬಲರಾಮದೇವರ ಕಂಡು ನಾವೆರಗಿ ಕೈಮುಗಿದೀಗ ಬಂದೆ 1ಮಧ್ವಸರೋವರವೆಂಬ ತೀರ್ಥದಿ ಮಿಂದುಶ್ರದ್ಧೆ ಭಕ್ತಿಯೊಳ್ ನಿನ್ನ ಕಂಡು ಬಲಬಂದುಬದ್ಧಾಂಜಲಿಯ ನೀಡಿ ಸ್ಮರಿಸಿ ವಂದನೆಗೈದುಉದ್ಧರಿಸೆಂದು ವರವ ಬೇಡುವದನೀಗ ಬಂದೆ 2ಅಷ್ಟಾವಧಾನ ಸೇವೆಯೊಳು ನಿನ್ನನುಯತಿಶ್ರೇಷ್ಠರು ಪೂಜಿಸಿ ವರವ ನೀಡಿ ಕೊಟ್ಟಮಂತ್ರಾಕ್ಷತೆ ತೀರ್ಥ ಪ್ರಸಾದವ ಪಡೆದುನಮ್ಮಯ ಭವಕಷ್ಟ ನೀಗುವುದಕ್ಕೆ ಬಂದೆ 3
--------------
ಗೋವಿಂದದಾಸ
ಬಂದ್ಯಾ ವಿಠಲಇಂದುಬಡವನಲ್ಲಿವೃಂದಾವನದಲ್ಲಿ ಗೋವೃಂದಗಳ ಕಾಯಿದವನೆಸುಳಿಗುರುಳು ಮೇಲೆ ಅರಳೆಲೆಯು ಸಿರಿಕಿರೀಟಕೊರಳಲ್ಲಿ ಸರಿಗೆ ಸರಪಳಿ ಪಚ್ಚೆಪದಕವುಮುಂಗಯ್ಯ ಕಡಗ ಸರಪಳಿ ತೋಳಭಾಪುರಿಮಾಳಿಗೆ ಶ್ರೀನಿವಾಸಾರ್ಯರ ಮನೆಯಿಂದಈಸು ಬಗೆ ಪೂಜೆಯು ಎನ್ನಿಂದಲಾಗದು
--------------
ಗೋಪಾಲದಾಸರು
ಬರಬೇಕೋ ರಂಗಯ್ಯ ನೀ - ಬರಬೇಕೊ ಪಬರಬೇಕೊ ಬಂದು ಒದಗಬೇಕೊ ಮಮಗುರು |ನರಹರಿ ನಾರಾಯಣ ನೀನಾ ಸಮಯಕೆ ಅ.ಪಕಂಠಕೆ ಪ್ರಾಣ ಬಂದಾಗ - ಎನ್ನ |ನಂಟರಿಷ್ಟರು ಬಂದಳುವಾಗ ||ಗಂಟು ಹುಟ್ಟಿನ ಕಾಲಬಂಟರು ಕವಿದೆನ್ನ |ಗಂಟಲೌಕುವಾಗ ವೈಕುಂಠನಾರಾಯಣ 1ನಾರಿಯು ಪುತ್ರ ಮಿತ್ರರು -ಬಂಧುಗಳು |ಆರೆನ್ನ ಸಂಗಡ ಬಾರರು ||ಆರಿಗಾರಿಲ್ಲ ಯಮನಾರುಭಟಕೆ ಅಸು-|ರಾರಿ ಮೈಮರೆದಾಗ ನೀರೇರುಹನಾಭ 2ಕರಿಪ್ರಹಲ್ಲಾದಾದಿ ಭಕ್ತರ -ಪತಿ|ಕರಿಸಲು ಒದಗಿದೆ ಶ್ರೀಧರ ||ನೆರೆಹೀನನೆನ್ನ ಉದ್ಧರಿಸಿಅಚ್ಯುತನಿನ್ನ |ಚರಣದೊಳಿಂಬಿಡೊ ಪುರಂದರವಿಠಲ 3
--------------
ಪುರಂದರದಾಸರು
ಬರಿದೆ ಹೋಯಿತು ಹೊತ್ತು - ಹರಿಯೆ |ಶರೀರವೆ ಸ್ಥಿರವೆಂದು ಮರೆತು ನಾನಿದ್ದೆನೆ ಪಆಸೆಯೆಂಬುದು ಎನ್ನ ಕ್ಲೇಶಪಡಿಸುತಿದೆ |ಗಾಸಿಯಾದೆನೊ ಹರಿಯೆ ||ಶೇಷಶಯನನು ನೀನು ನಿನ್ನ ನಂಬಿದೆ ನಾನು |ನಾಶವಾಯಿತು ದಿನ ಮೋಸ ಹೋದೆನಯ್ಯ 1ಸತಿಸುತರೆಂದೆಂಬ ಅತಿ ಭ್ರಾಂತಿಗೊಳಗಾದೆ |ಮತಿಹೀನ ನಾನಾದೆನೊ ||ಸತತ ನಿರಂತರ ಜಡದೇಹ ನಾನಾದೆ |ರತಿಗೆಳೆಯುತಿದೆ ಮನಸು ಹರಿಸರ್ವೋತ್ತಮನೆ 2ಪರರ ಸೇವೆಯ ಮಾಡಿ ಪರರನೆ ಕೊಂಡಾಡಿ |ಮರೆತೆನೊ ನಿನ್ನ ಧ್ಯಾನ |ಕರುಣದಿಂದಲಿ ಎನ್ನ ಕಾಯ್ದು ನೀ ಸಲಹಯ್ಯ |ಪುರಂದರವಿಠಲ ನಿನ್ನನೆ ನಂಬಿದೆ ನಾನು3
--------------
ಪುರಂದರದಾಸರು
ಬರಿಯ ಮಾತಲಿಲ್ಲ ಶ್ರೀಹರಿಯ ಪ್ರೀತಿರಣ್ಣ ಮಧ್ವಾಚಾರ್ಯರುಪದೇಶವೆ ಮುಕ್ತಿಪುರದೊಳು ಖ್ಯಾತಿರಣ್ಣ ಪ.ರಂಗನ ಪ್ರತಿಮೆಯನು ಬಿಡದೆ ಬಹಿರಂಗದಿ ಪೂಜೆಯ ಮಾಡಿಕಂಗಳುತುಂಬಲು ಮೆಲ್ಲನೆ ಅಂತರಂಗದಿ ಪೀಠದಿ ನೋಡಿಹಿಂಗದೆ ಗುರುಶಿಕ್ಷಾಕ್ರಮದಲಿ ಧ್ಯಾನಂಗತನಾಗ್ಯೊಲಿದಾಡಿಲಂಘಿಸಿ ಜನ್ಮಾಯುಷಗಳ ತುದಿಯಲಿಮಂಗಳ ಬಿಂಬವ ನೋಡದೆ ನೋಡಿ 1ಒಮ್ಮಿಂದೊಮ್ಮೆ ಹೃದಯದದ್ದಕೆಧರ್ಮವ ಜರಿದರೆ ಹೀನನಿರ್ಮಳ ಶೌಚಾಚಮನವೆ ಗಳಿಸಿದಸಮ್ಯಕ್‍ಜ್ಞಾನ ನಿಧಾನತಮ್ಮವಗುಣ ರೋಗಕೆ ಔಷಧವುಕರ್ಮದ ಮೂಲವೆ ಸ್ನಾನಹಮ್ಮಿಲಿ ಸನ್ಮಾರ್ಗಕೆ ಕುಂದಿಡದೆಇಮ್ಮಡಿ ಸಾಧಿಸಿ ನವನವೀನ 2ಸದ್ವ್ವ್ರತ ದೀಕ್ಷೆಯು ಧ್ರುವಪದ ಮುಕ್ತಿಯುಸುದ್ವಾರವ ಬಿಡಬಹುದೆಮಧ್ವೇಶನ ಮಹಿಮೆಯ ಕೇಳದೆ ರಕ್ಷಾಧ್ವರ ಕಥೆ ಕೇಳಬಹುದೆವಿಧ್ವಂಸಿಸುವ ಚೋರರು ಹೇಳ್ಯಾಡುವಸದ್ವಚನದಿ ಸುಖವಾಹುದೆಅದ್ವಯ ಪ್ರಸನ್ವೆÉಂಕಟೇಶನ ಪಾದಕಮಲದ್ವಯ ಬಿಟ್ಟಗೆ ತಮಸಹುದಹುದೆ 3
--------------
ಪ್ರಸನ್ನವೆಂಕಟದಾಸರು
ಬಲ್ಲವರಿಗರಿದಲ್ಲ ಪ್ರಮೇಯವಲ್ಲಬೆಳ್ಳಿ-ಭಂಗಾರಲ್ಲ ಮೆಲುವದಲ್ಲ ಪಕಣ್ಣೆವೆಯನಿಕ್ಕದು ಮತ್ಸ್ಯಾವತಾರನಲ್ಲ |ಘನ್ನ ಕಠಿಣವುಕೂರ್ಮರೂಪಿಯಲ್ಲ ||ಮಣ್ಣು ತಿಂಬುವದು ಇಟ್ಟಲ್ಲೆ ವರಹನೂ ಅಲ್ಲ |ಇನ್ನು ಬಾಯ್ದೆರೆದಿಹುದು ನರಸಿಂಹನಲ್ಲ 1ಮದುವೆಯಾಗಿಲ್ಲವು ವಾಮನಾವತಾರಲ್ಲ |ವದಗಿ ಛೇದಿಸುವದು ಭಾರ್ಗವಲ್ಲ ||ಮುದದಿಂದ ಅನ್ನವುಣ್ಣದು ದಾಶರಥಿಯಲ್ಲ |ತುದಿ ಮೊದಲು ಕಪ್ಪು ಶ್ರೀ ಕೃಷ್ಣನಲ್ಲ 2ಬತ್ತಲೆ ಇರುವದು ಬುದ್ಧಾವತಾರಲ್ಲ |ಕತ್ತರಿಸುವುದು ಬಿಡದೆ ಕಲ್ಕಿಯಲ್ಲ ||ಸತ್ಯಸಂಕಲ್ಪಶ್ರೀ ಪ್ರಾಣೇಶ ವಿಠಲನ |ಭೃತ್ಯರೇ ಬಲ್ಲರೀ ಗೋಪ್ಯ ಸೊಲ್ಲ 3
--------------
ಪ್ರಾಣೇಶದಾಸರು