ಒಟ್ಟು 1028 ಕಡೆಗಳಲ್ಲಿ , 93 ದಾಸರು , 777 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರ ನಂಬುವೆಯ ಹೆಡ್ಡ ಈಸಂಸಾರವಿಹುದು ಮುಕ್ತಿಗೆ ಅಡ್ಡಪಮನೆಯು ಎಂಬುದುವಸ್ತಿ ಮಳಿಗೆಸತಿತನಯಹೋಹರು ಹಾದಿಗಳಿಗೆಎನಿತು ಮಮತೆ ಇದರೊಳಗೆ ಯಮಮನಮುಟ್ಟಿ ಹಿಡಿದಿಹ ಗುದಿಗೆ1ಸುಳ್ಳುಗಳಾಡೋದು ಎಷ್ಟುಮಹಾತಳ್ಳಿಕಾರಿಕೆ ಬೆಟ್ಟದಷ್ಟುಬೆಳ್ಳಿಟ್ಟು ಬಗುಳೋದು ಯಷ್ಟು ಯಮ ಕಕ್ಕಲಿಹಶೀಳುಯಂಬಾಕೊಲ್ಲೆಯಿವನ ಕುಟ್ಟುಕುಟ್ಟು2ಮಕ್ಕಳು ಮನೆಗಿಲ್ಲವೆಂಬ ಎನಗೆತಕ್ಕ ಹೆಂಡತಿ ಅಲ್ಲವೆಂಬರೊಕ್ಕವ ದಿನ ನೋಡಿಕೊಂಬ ಯಮಕಕ್ಕರಲಿರು ಶೀಳುಯೆಂಬ3ಗುರುಹಿರಿಯರ ನಿಂದಿಪನುಸತಿಮರುಕಕೆ ಹಲ್ಲು ತೆರವನುಹೊರಡಿಪ ತಂದೆ ತಾಯಿಯನುಯಮನರಕಕೆ ಹಾಕುಯೆಂಬುವನು4ನಾನಾರುಯೆಂಬುದು ಅಣಕೆ ಹಿಂದಕ್ಕೆನಿದ್ದೆಯೆಂಬುದು ಒಣಗಿಏನೋಮುದೆಂಬುದು ಜಣಗಿ ಚಿದಾನಂದ-ನೆಂಬುದು ಮುಣಗಿ5
--------------
ಚಿದಾನಂದ ಅವಧೂತರು
ಸಂಸಾರ ಸಂಸಾರವೆಂಬೆರಿ ಸರ್ವದಿವಾರಾತ್ರಿಯಲಿಸಂಸಾರ ಎನಗೊಂದೆ ಅಲ್ಲದೆ ಸಂಸಾರ ಎನಗುಂಟೇನಯ್ಯಪಸತ್ಯವೆಂಬುದೆನ್ನಸತಿಯು ಶಾಂತವೆಂಬುದೆನ್ನಸುತನುಸತ್ಯವೆಂಬುದೆನ್ನ ಸೊಸೆಯು ನಿಜವಿದೀಗಅತ್ಯಧಿಕ ಗುಣಿಯೆಂಬ ಅಗಣಿತದ ಪಿತನಿರಲುಮಿಥ್ಯವಾದ ಸಂಸಾರದಲಿ ಮಗ್ನರಹರೇ1ಬುದ್ಧಿ ಎಂಬುದೆನ್ನಭ್ರಾತೃ ಭಾವನೆ ಎಂಬುದೆನ್ನಭಾವಅದ್ವೈತವೆಂಬ ಅತ್ತೆ ಅಂತಃಕರಣವೆಂಬ ಮಾವಶುದ್ಧಾತ್ಮವೆಂಬ ಬಂಧು ಸಂಬಂಧವೆನಗಿರಲಾಗಿಈ ದ್ವೈತಸಂಸಾರದಲ್ಲಿ ಮಗ್ನರಹರೇ2ಇಂತು ಸಂಸಾರ ಸುಖ ನಿಜದೊಳಗೆನಗಿರಲುಭ್ರಾಂತದಲ್ಲವೆ ನಿಮ್ಮ ಮಾತಿದೆಲ್ಲಚಿಂತಯಕ ಚಿದಾನಂದ ಚಿನ್ಮಯನೆ ತಾ ಬಲ್ಲಅಂತರಂಗದ ಮಾಟಕೆ ಅವನೆ ಸಾಕ್ಷಿ3
--------------
ಚಿದಾನಂದ ಅವಧೂತರು
ಸಿದ್ಧಿ ಗಣವರ ಬುದ್ಧಿ ನೀಡೆನ್ನನುದ್ಧಾರಮಾಡು ಬೇಗನೆಬದ್ಧಗುಣಗಳ ತಿದ್ದಿ ಎನಗೆ ಶುದ್ಧಮತಿ ನೀಡು ಬೇಗನೆ ಪವಿಮಲಮನ ಸನಮಿತ ತವಪಾದಕಮಲ ಭಜಿಸುವೆನಭನೆವಿಮಲವಿದ್ಯವ ಕ್ರಮದಿಂ ಪಾಲಿಸು ಹಿಮಜೆಸುತ ಕರಿವರದನೆ 1ಸೋಮಶೇಖರ ಪ್ರೇಮದ ಸುಕುಮಾರ ಸುಮನಸಚಂದ್ರನೆಕಾಮಿತಜನ ಶಾಮಪೂರಿತ ಕೋಮಲಗುಣಸಾಂದ್ರನೆ 2ಕೋಮಲಾಂಗನೆ ಕರ್ಣಕುಂಡಲ ಹೇಮಕಂಕಣಧಾರನೆತಾಮಸದಿ ಗಹಗಹಿಸಿದಾ ಮಹ ಸೋಮನಿಗೆ ಶಾಪವಿತ್ತನೆ 3ಪಾರಬುಧ್ಧಿಲಿ ಸಾರವಿದ್ಯದಧಿಕಾರ ಕುಶಲದಿ ಪಡೆದನೆಗೌರಿಶಂಕರರ್ವಾದ ನಿವಾರಿಸಿದ ಮಹಚದುರನೆ 4ತ್ರಿಕ್ಷೆಯರೊಡಗೂಡಿಭುವನರಥಮಾಡಿಮಣಿಯದ್ಹೋಗ್ವುದು ಕಂಡನೆಘನಕೋಪಾಗ್ರಾದಿ ರಥವನಿಲ್ಲಿಸಿ ತ್ರಿಣಯರಿಂ ಪೂಜೆಗೊಂಡನೆ5ವಿಘ್ನನಾಯಕ ಪ್ರಾಜÕಮೂರುತಿ ಸೂಜÕ ಜನರಾರಾಧನೆಸಂಜೆÕದ್ಹೊಗಳುರ್ವಿಘ್ನ ಛೇದಿಸಿಪ್ರಾಜÕಪದವೀವ ಪ್ರೌಢನೆ6ವರುಷಕೊಂದುಮಾಸಧರೆಯೊಳಿಳಿಯುತಪರಮಪೂಜೆಯ ಕೈಕೊಂಬನೆನರರ ದುರ್ಮತಿ ತರಿದು ಸುಗತಿಯ ನಿರುತಪಥದೋರ್ವ ಧುರೀಣನೆ 7ತಂದೆ ನಿನ್ನನು ಹೊಂದಿ ಭಜಿಪರ ಮಂದಮತಿನಿವಾರನೆಬಂದ ದುರ್ಭವದಂದುಗಂಗಳ ಚಂದದಿಂ ಪರಿಹಾರನೆ 8ಶರಣು ಶರಣು ಶರಣು ಗಣವರ ಶರಣುಕರುಣಾಭರಣನೆಸಿರಿಯರಾಮನ ಚರಿತಪೊಗಳುವ ಪರಮಮತಿದೇ ಗಣಾರ್ಯನೆ 9
--------------
ರಾಮದಾಸರು
ಸುರನಾರಿಯರ ಮಹಿಮೆಪರಿಪರಿ ಹೊಗಳುತಬಿರುದಿನಕೋಲಹೊಯಿದೇವಕೋಲ ಪ.<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉಮಾದಿಗಳಿಗೆಲ್ಲಬೊಮ್ಮ ಹ್ಯಾಂಗ ಶಪಿಸಿದಅಮ್ಮಾ ಇದು ಒಂದುಕೌತುಕಕೋಲಅಮ್ಮಾ ಇದುಕೌತುಕ ಹೇಳೆಂದಝಮ್ಮನೆ ದೂತೆ ನುಡಿದಳುಕೋಲ 1ಭಾರತಿ ದೇಹದಲ್ಲಿ ಸೇರಿದರ್ಹಾಂಗಮ್ಮಪಾರ್ವತಿದೇವಿ ಮೊದಲಾದಕೋಲಪಾರ್ವತಿದೇವಿ ಮೊದಲಾದ ಕೆಲದಿಯರುನಾರಿರುಕ್ಮಿಣಿ ಎನಗ್ಹೇಳಕೋಲ2ಪಾಂಚಾಲಿದೇವಿ ತಾನು ಪಂಚಪಾಂಡವರ ಕೂಡಿಕೆಂಚಿತಾ ಹ್ಯಾಂಗ ರಮಿಸೋಳುಕೋಲಕೆಂಚಿತಾ ಹ್ಯಾಂಗ ರಮಿಸೋಳುಮಹಿಮೆಯ ಕಿಂಚಿತ್ತಾಗಿ ಎನಗ್ಹೇಳಕೋಲ3ಇಂದುಮುಖಿಯರ ಜನ ಚಂದಾಗಿ ಹೇಳಮ್ಮಸಂದೇಹಬ್ಯಾಡ ಎನಕೂಡಕೋಲಸಂದೇಹಬ್ಯಾಡ ಎನಕೂಡ ಅದಕೇಳಿಆನಂದವ ಬಡುವೆಅನುಗಾಲಕೋಲ4ಮತ್ತೆ ರಾಮೇಶನ ಅತ್ಯಂತ ಭಕ್ತಳಉತ್ತಮ ಕಥೆಯ ಎನಗ್ಹೇಳಕೋಲಉತ್ತಮ ಕಥೆಯ ಎನಗ್ಹೇಳ ಹರುಷದಿಬಿತ್ತಿ ಬೆಳೆದೇವಧರೆಮ್ಯಾಲೆಕೋಲ5
--------------
ಗಲಗಲಿಅವ್ವನವರು
ಸ್ವಾಮಿ ನೀ ಮಾಡಿದುಪಕಾರಾ ಕಿಂತು ಪಾಮರನಪ್ರತಿಉಪಕಾರಾ | ಭೀಮಾಶಂಕರ ಗುರುವಾಗುವ ಪ್ರಕಾರಾ |ಈ ಮನಕೆ ಎಂದಿಗೆ ತೋರದಾಕಾರಾ ||ಸ್ವಾಮಿ||ಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲಕ್ಷ ಎಂಬತ್ತು ಮೂರೊಂದನು |ಯೋನಿಕುಕ್ಷಿಯೊಳಗೆಹೊಕ್ಕು ಬಂದೆನೊ | ಭಕ್ಷ್ಯಾಭಕ್ಷ್ಯವ ಮೆದ್ದೆನು |ಅನುಪೇಕ್ಷಿಯೊಳಗೆ ಮುಳುಗಿದ್ದೆನೋ | ಭಿಕ್ಷುಕರೊಡೆಯನಿರೀಕ್ಷಿಸಿ ಕೃಪಾ ಕಟಾಕ್ಷದಿ ಸದ್ಗುರು ರಕ್ಷಿಸಿದಂಥಾ1ನೀರೊಳು ಜೀವಿಸುತಿದೆ ಮೀನಾ |ನೀರು ಕಾರಣವರಿಯದು | ಆ ಮೀನಾ |ಪಾರವಿಲ್ಲದಂಥದೀ ಮೀನಾ |ಪರವಸ್ತುಖೂನನರಿಯದು ಮನ ಮೀನಾ |ನಾರೇರ ನೋಟಕ್ಕೆ ಸೇರಿ ತಾ ಹೋದೀತು |ಸಾರವಸ್ತುವ ತಂದು ತೋರಿಸಿದಂಥ2ತನುವು ತನ್ನೊಳಗೆ ತಾ ತೋರದು |ತನು ಮನದ ವೃತ್ತಿಗೆ ತಾ ಬಾರದು |ಜನನ ಮೃತ್ಯಂಗಳು ದೋರದು |ಎನಗೆ ಸಾಧು ಸಜ್ಜನ ಸಂಗ ದೊರಕದು |ಘನಗುರುಶಂಕರ ಚಿನುಮಯರೂಪ- |ದನುಭವಕೆ ತಂದು ಎನಗೆ ನೀ ಕೊಟ್ಟಂಥ3
--------------
ಜಕ್ಕಪ್ಪಯ್ಯನವರು
ಸ್ವಾಮಿ ಶಂಕರನಿರಲಿಕ್ಕೆಕಾಮದಕಳವಳಿಕೇಕೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರುನಾಮ ನಿಧಾನಿರಲಿಕ್ಕೆ | ಎನಗಿಲ್ಲೆಂಬುವದೇಕೆ ಅ.ಪ.ಅನಾಥ ಬಂಧುಅನುದಿನಎನಗಿರೆ |ಅನುಕೂಲದ ಚಿಂತ್ಯಾಕೆ |ತನುಮನಧನದೊಳು ತಾನೆ ತಾನಿರಲು |ಅನುಮಾನಿಸಲಿನ್ಯಾಕೆ ಸ್ವಾಮಿ1ದಾತನೊಬ್ಬ ಶ್ರೀನಾಥ ಎನಗಿರಲು |ಯಾತಕೆ ಪರರ ದುರಾಶೇ |ಮಾತು ಮಾತಿಗೆ ತೋರುವಸದ್ಗುರು ತೇಜಃ ಪುಂಜಗಳ್ಯಾಕೆ ಸ್ವಾಮಿ2ದೊಡ್ಡದು ಸಣ್ಣದು ಧಡ್ಡನು ಜಾಣನು |ಎಂದೆಣಿಸುವದಿನ್ಯಾಕೆ | ಗುಡ್ಡದ್ಹಾಂಗಶ್ರೀ ಶಂಕರನಿರಲು ದುಡ್ಡಿನ ಹಂಗುಗಳ್ಯಾಕೆ ಸ್ವಾಮಿ3
--------------
ಜಕ್ಕಪ್ಪಯ್ಯನವರು
ಹರಿದಾಸರ ಸಂಗ ದೊರೆಯಿತು ಎನಗೀಗ ಇನ್ನೇನಿನ್ನೇನುವರಗುರು ಉಪದೇಶ ನೆರವಾಯ್ತು ಎನಗೀಗ ಇನ್ನೇನಿನ್ನೇನು ಪಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನುತೋಯಜಾಕ್ಷನ ನಾಮ ಜಿಹ್ವೆಯೊಳ್ನೆಲಸಿತು ಇನ್ನೇನಿನ್ನೇನು 1ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನುಜಲಜನಾಭನ ಧ್ಯಾನ ಹೃದಯದೊಳ್ನೆಲಸಿತು ಇನ್ನೇನಿನ್ನೇನು 2ತಂದೆ ತಾಯೆ ಮುಚುಕುಂದವರದನಾದ ಇನ್ನೇನಿನ್ನೇನುಸಂದೇಹವಿಲ್ಲ ಮುಕುಂದ ದಯಮಾಡಿದ ಇನ್ನೇನಿನ್ನೇನು 3ಏನೆಂದು ಹೇಳಲಿ ಆನಂದಸಂಭ್ರಮಇನ್ನೇನಿನ್ನೇನುಆನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು 4ಎನ್ನವಂಶಗಳೆಲ್ಲ ಪಾವನವಾದುವು ಇನ್ನೇನಿನ್ನೇನುಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು 5
--------------
ಪುರಂದರದಾಸರು
ಹರಿನಾಮದರಗಿಣಿಯು ಹಾರುತಿದೆ ಜಗದಿ|ಪರಮಭಾಗವತರು ಬಲೆಯ ಬೀಸುವರು ಪಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು |ತಾಪವೆಂಬ ಹುಲಿಯು ಕೊಂಡೊಯ್ವುದದನು ||ಕಾಪಾಡಿರದನು ಹೃದಯದೊಳಗಿಂಬಿಟ್ಟು |ಅಪತ್ತಿಗೊದಗುವುದು ಈ ಮುದ್ದು ಗಿಣಿಯು 1ದಾರಿಯ ನಡೆವಾಗ ಚೋರರ ಭಯವಿಲ್ಲ |ಮಾರಿಬಂದರದನು ಹೊಡೆದು ನೂಕುವುದು ||ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು |ದಾರಿ ತೋರುವುದು ಮುರಾರಿಯ ಪಟ್ಟಣಕೆ 2ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು |ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ||ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು |ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು 3ಹರಿಯೆ................................................ ಪಹರಿನಿನ್ನ ಕೃಪೆಯೆನಗೆ ಚಂದ್ರ - ತಾರಾಬಲವು |ಹರಿನಿನ್ನ ಕರುಣವೇ ರವಿಯ ಬಲವು ||ಹರಿನಿನ್ನೊಲುಮೆಯೆನಗೆ ಗುರುಬಲವು ಭೃಗುಬಲವು |ಹರಿನಿನ್ನ ಮೋಹವೇ ಶನಿಯ ಬಲವು 1ಮಂಗಳಾತ್ಮಕ ನಿನ್ನ ಅಂಗದರುಶನವೆನಗೆ |ಮಂಗಳನ ಬಲವು ಎನ್ನಂಗಕೀಗ ||ರಂಗಯ್ಯ ನಿನ್ನ ಚರಣಾರವಿಂದವ ನೋಡೆ |ಹಿಂಗಿ ಪೋಪುದು ಅಘವು ಸೌಮ್ಯಬಲವು 2ಆದಿಪುರುಷನೆ ನಿನ್ನ ಅರಿಪುದೇ ಕೇತುಬಲ |ಅದಿಮೂಲನೆ ನಿನ್ನಗುಣಕಥನವ ||ಆದರಿಸಿ ಕೊಂಡಾಡುವುದೆ ಎನಗೆ ರಾಹುಬಲ |ಆದಿಮೂರುತಿ ಬ್ರಹ್ಮಪುರಂದರವಿಠಲ 3
--------------
ಪುರಂದರದಾಸರು
ಹರಿಯ ಭಕುತರ ಸಂಗ ಎನಗೆ ಇರಲಿ ದೇವಾ ಪಬಿರುದು ಪೊತ್ತಿರುವೋರೊ ಧರೆಯ ಒಳಗೆ ಇಂಥಾ ಅ.ಪವರೆದು ವರೆದುನಿತ್ಯತಿಳಿಸುವರೋಪರಮಪುರುಷ ಹರಿಚರಣಾವು ಮನದಲ್ಲಿಸ್ಥಿರವಾಗಿ ಭಜಿಸುವಾ ವರಯೋಗ ಪೇಳ್ವಂಥ 1ದುರುಳಸಂಸಾರದಿ ಹೊರಳುವ ಜನ ತಮ್ಮಕರೆದು ಕೊಡುತಲಿ ಈ ಧರೆಯೊಳು ಮೆರೆವಂಥ 2ಸುಗಮಾದಿ ಒಲಿವಂಥಾ ಬಗೆಯ ಪೇಳುವರಿಂಥಾ 3
--------------
ಗುರುಜಗನ್ನಾಥದಾಸರು
ಹರಿಯೆ ಎನಗಾರು ಗತಿಯೊ ನೀನಲ್ಲದೆ ಪ.ಹಿಂದಿನಾಪತ್ತು ಮರೆತೆಇಂದುಮಾಯದಿ ಬೆರೆತೆಒಂದುಗೂಡಿದವುಅಘಮುಂದಿನರುಹಿಲ್ಲ1ಹಗಲು ಅಶನದ ಕೃತ್ಯ ಇರುಳು ನಿದ್ರೆಯ ಮಬ್ಬುವಿಗಡಕಾವನ ತಡೆ ತಗಲು ಬಿತ್ತೊ ರಂಗಾ2ಅತ್ತಿತ್ತ ಸುತ್ತುವನಕ ಹೊತ್ತು ಹೋಯಿತು ಯಮನಮುತ್ತಿಗೆ ಬಿದ್ದಾಗ ಮತ್ತಾರಿಲ್ಲೊ ಸ್ವಾಮಿ 3ಅಜ್ಞಾನೆಂಬಹಿ ಕಚ್ಚಿ ಯಜೆÕೀಶ ನಿನ್ನಂಘ್ರಿಸಂಜÕವಿಲ್ಲದೆ ದು:ಖ ಮಗ್ನನಾದೆನಲ್ಲೊ 4ಶ್ರೀ ಪ್ರಸನ್ವೆಂಕಟೇಶ ತಾಪತ್ರಯವಿನಾಶನೀ ಪಾಲಿಸಯ್ಯ ವಿಶ್ವವ್ಯಾಪಕ ಸ್ವಾಮಿ 5
--------------
ಪ್ರಸನ್ನವೆಂಕಟದಾಸರು
ಹುಚ್ಚು ಮಾಡಿದ ಎನ್ನ ಗುರುವುಈ ಹುಚ್ಚನರಿವೊಡೆ ಸಚ್ಚರಿತರಿಗರಿವುಪಆಶ್ರಮ ಧರ್ಮವು ಹೋಯ್ತುನಿರಾಶ್ರಮವೆಂಬುದು ನಿಜವಾಯ್ತುಕುಶ್ರಮಗಳು ನಾಶವಾಯ್ತುಜೀವಭ್ರಮೆಯೆಂಬುದು ಖಿಲವಾಯ್ತು1ಸ್ನಾನವು ಮನದಿಚ್ಛೆಯಾಯ್ತು ಸಂಧ್ಯಾದಿಜಪವೆಲ್ಲ ಮರತೇಹೋಯ್ತುಮೌನವೆಂಬುದು ಬಹಳವಾಯ್ತು ಗುರುತಾನೆಎಂದೆಂಬ ಧ್ಯಾನವುಪೂರ್ಣವಾಯ್ತು2ಕುಲಗಳೆಂಬುವು ಕಾಣದಾಯ್ತುಕುಲಛಲಗಳು ಮರತೇಹೋಯ್ತುಹೊಲೆ ಶುದ್ಧಗಳು ಬರಡುನುಡಿಯಾಯ್ತುನಿಶ್ಚಲನಿಜಾನಂದವೆಂಬುದೇ ಸತ್ಯವಾಯ್ತು3ಭೇದಾಭೇದವು ಮಾಯವಾಯ್ತುಹಾಳುವಾದಗಳು ಕೇಳದಂತಾಯ್ತುಸಾಧುಸಂಗವ ಬಿಡದಂತಾಯ್ತುಸುವಾದವಮಾಡಿ ಸುಖಿಸುವಂತಾಯ್ತು4ದಯೆ ನಿರ್ದಯೆಗಳ ತೊರೆದಾಯ್ತುಭಯ ನಿರ್ಭಯಗಳು ಅದೃಶ್ಯವಾಯ್ತುಜಯಾಪಜಯಗಳು ಕಾಣದಾಯ್ತು ಸ್ವಕ್ಷೇಮಪರಕ್ಷೇಮಗಳ ವಿಚಾರ ಹೋಯ್ತು5ಕೋಪ ತಾಪವು ಶಮವಾಯ್ತುತಾಪತ್ರಯದಬಿತ್ತು ಮೊಳೆಯದಾಯ್ತುಯೋಗ ವಿದ್ಯೆಯ ಹರಿತವಾಯ್ತುನಿರ್ವಾಣವಾಗಿ ಎಲ್ಲ ಇಂತಾಯ್ತು6ಇಂತಹ ಹುಚ್ಚನು ಎನಗೆ ಕವಿಯಿಸಿನಿರಂತರ ಚಿಂತೆಯ ನೆನ್ನ ಪಾಲಿಗಿರಿಸಿಅಂತರಂಗದಿ ತಾನೆ ನೆಲೆಸಿ ಚಿಂತಾಯಕಚಿದಾನಂದ ತಾ ಬೆರೆಸಿ7
--------------
ಚಿದಾನಂದ ಅವಧೂತರು
ಹುಚ್ಚು ಹಿಡಿಯಿತೊ - ಎನಗೆ ಹುಚ್ಚು ಹಿಡಿಯಿತು ಪಅಚ್ಯುತನ ನಾಮವೆಂಬ ಮೆಚ್ಚು ಮದ್ದು ತಲೆಗೆ ಏರಿ ಅ.ಪವಾಸುದೇವನೆಂಬ ನಾಮ ವದನದಲಿ ಒದರುವೆ - ಮಾಯಪಾಶವೆಂಬ ಬಲೆಯ ಹರಿದು ಹರಿದು ಬಿಸುಡುವೆ ||ಕೇಶವನ ಹೂವ ಎನ್ನ ಮುಡಿಗೆ ಮುಡಿಸುವೆ - ಭವದಕ್ಲೇಶವೆಂಬ ಗೋಡೆಯನ್ನು ಕೆದರಿಕೆದರಿ ಬಿಸುಡುವಂಥ 1ಕೃಷ್ಣನಂಘ್ರಿ ಕಮಲಗಳಲಿ ನಲಿದು ನಲಿದು ಬೀಳುವೆ -ಭವಕಷ್ಟವೆಂಬ ಕುಂಭಗಳನು ಒಡೆದು ಒಡೆದು ಹಾಕುವೆ ||ನಿಷ್ಠರನ್ನು ಕಂಡವರ ಹಿಂದೆ ಹಿಂದೆ ತಿರುಗುವೆಭ್ರಷ್ಟ ಮನುಜರನ್ನು ಕಂಡು ಕಲ್ಲು ಕಲ್ಲಿಲಿಕ್ಕುವಂಥ 2ಮಂದಮತಿಗಳನು ಕಂಡರೆ ಮೂಕನಾಗುವೆನು - ಹರಿಯನಿಂದೆ ಮಡುವವರ ಮೇಲೆ ಮಣ್ಣ ಚೆಲ್ಲುವೆ ||ಮಂದರಾದ್ರಿಧರನ ದಿನದೊಳನಶನನಾಗುವೆ ಎನ್ನತಂದೆ ಪುರಂದರವಿಠಲನ ಪೊಗಳಿ ಪಾಡಿ ಆಡುವಂಥ 3
--------------
ಪುರಂದರದಾಸರು