ಒಟ್ಟು 1260 ಕಡೆಗಳಲ್ಲಿ , 99 ದಾಸರು , 1013 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸರಸಿಜಾಲಯೆ ಪೊರೆಯೆ ಬೇಗನೇ ಹೇ ಮಾತೆ ಪ ಸಾರಸಭವನ ವೀರ ಮಾತೆಯೆ ನೀರಜಾಕ್ಷಿಯೆ ಹೇ ಮಾತೆ ಸಾರಸಾಕ್ಷ ಪರಮಪ್ರಿಯಳೆ ಸಾರಿಬಾರೆನ್ನ ಹೇ ಮಾತೆ 1 ತುರುವು ತನ್ನ ಕರುವ ಧ್ವನಿಯಂ ಅರಿತು ಬಾರದೆ ಹೇ ಮಾತೆ ಈ ತೆರದಿ ಎನ್ನ ಮೊರೆಯ ಕೇಳಿ ಕರವ ಹಿಡಿಯೆ ಹೇ ಮಾತೆ 2 ಪರಿಯು ಯಾರೆ ಸಿರಿಯು ನಿನಗೆ ಪರಮಪಾವನೆ ಹೇ ಮಾತೆ ಕರುಣದಿಂದ ಪೊರೆದು ತೋರೆ ಸಿರಿರಂಗೇಶವಿಠಲನ ಹೇ ಮಾತೆ 3
--------------
ರಂಗೇಶವಿಠಲದಾಸರು
ಸರಸ್ವತಿ ನಲಿಯೆ ನೀ ಜಿಹ್ವೆಯಲಿ ಚತುರಾನನ ಪ್ರಿಯ ರಾಣಿ ನಾನಾ ಧನಕನಕಾದಿ ವಿಭವಗಳು ಹಿರಿದುಕ್ಕುತಲಿರಲು ಪ ನೀನೊಲಿಯದಿರಲು ಮಾನವನಿಗೆ ಸ ನ್ಮಾನವೆಂತು ಬರುವುದು ಜಗದೊಳಗೆ ಅ.ಪ ಕರ ಧೃತ ವೀಣಾಪಾಣಿ ಉನ್ನತ ಮಹಿಮ ಪ್ರಸನ್ನ ಹರಿಗೆ ಸತಿ 1
--------------
ವಿದ್ಯಾಪ್ರಸನ್ನತೀರ್ಥರು
ಸರಸ್ವತಿ ಸ್ತುತಿ ಅಂಬ ಬ್ರಹ್ಮಾಣಿ ನಿನ್ನ ನಂಬಿದೆನು ವಾಣಿ ವದ- ನಾಂಬುಜದಿನೀನಿಂಬುಗೊಂಡು ಪರಾಂಬರಿಸು ಜನನೀ ಪ. ಶೋಕಭಯದೂರೆ ಭಕ್ತಾನೀಕಮಂದಾರೆ ಜಗ- ದೇಕನಾಥೆ ಪಿನಾಕಿಮುಖ್ಯ ದಿವೌಕಸಾಧರೆ 1 ಶಾರದೆ ವರದೆ ಶ್ರುತಿಸಾರೆ ಸುಗುಣನಿಧೇ ಮಮ- ಕಾರ ಮೋಹವಿಕಾರಭಿದೆ ಜಂಭಾರಿವಿನುತಪದೆ 2 ಮಂಗಲಪ್ರದೆ ಸಾರಂಗನೇತ್ರೆ ಬುಧೆ ಕನ- ಕಾಂಗಿ ಸದಯಾಪಾಂಗಿ ಹಂಸತುರಂಗಿ ಸರ್ವವಿದೆ 3 ಪುಸ್ತಕಪಾಣಿ ನಮಸ್ತೇ ಕಲ್ಯಾಣಿ ಪರ- ವಸ್ತುವಿನ ಗುಣವಿಸ್ತರೈಕಪ್ರಶಸ್ತಫಣಿವೇಣಿ 4 ಪ್ರೀಯೆ ಶ್ರೀ ಲಕ್ಷ್ಮೀನಾರಾಯಣೀಪ್ರೇಮಿ ನಿಧಿ- ಜಾಯೆ ಚತುರೋಪಾಯೆ ಪಾವನಕಾಯೆ ನಿಷ್ಕಾಮಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಸರಸ್ವತಿ ಸ್ತುತಿ ಅಂಬ ಬ್ರಹ್ಮಾಣಿ ನಿನ್ನ ನಂಬಿದೆನು ವಾಣಿ ವದ- ನಾಂಬುಜದಿನೀನಿಂಬುಗೊಂಡು ಪರಾಂಬರಿಸು ಜನನೀ ಪ. ಶೋಕಭಯದೂರೆ ಭಕ್ತಾನೀಕಮಂದಾರೆ ಜಗ- ದೇಕನಾಥೆ ಪಿನಾಕಿಮುಖ್ಯ ದಿವೌಕಸಾಧರೆ 1 ಶಾರದೆ ವರದೆ ಶ್ರುತಿಸಾರೆ ಸುಗುಣನಿಧೇ ಮಮ- ಕಾರ ಮೋಹವಿಕಾರಭಿದೆ ಜಂಭಾರಿವಿನುತಪದೆ 2 ಮಂಗಲಪ್ರದೆ ಸಾರಂಗನೇತ್ರೆ ಬುಧೆ ಕನ - ಕಾಂಗಿ ಸದಯಾಪಾಂಗಿ ಹಂಸತುರಂಗಿ ಸರ್ವವಿದೆ 3 ಪುಸ್ತಕಪಾಣಿ ನಮಸ್ತೇ ಕಲ್ಯಾಣಿ ಪರ- ವಸ್ತುವಿನ ಗುಣವಿಸ್ತರೈಕಪ್ರಶಸ್ತಫಣಿವೇಣಿ 4 ಪ್ರೀಯೆ ಶ್ರೀ ಲಕ್ಷ್ಮೀನಾರಾಯಣೀಪ್ರೇಮಿ ನಿಧಿ- ಜಾಯೆ ಚತುರೋಪಾಯೆ ಪಾವನಕಾಯೆ ನಿಷ್ಕಾಮಿ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸರಸ್ವತಿ-ಭಾರತಿ ನಿತ್ಯ ಕಾವುದೆಮ್ಮನು ಪ ನಿತ್ಯ ಪಾವಿತರನ್ನ ಮಾಡುವಿ ನೋವ ಕೊಡದಲೆ ಕಾಯೇ ಅ.ಪ ಪದ್ಮನಾಭನ ನಾಭಿ ಪದ್ಮಜನ ಸಹ ಹೃ ತ್ಪದ್ಮದೊಳಗೆ ನೆಲಸಿ ಛದ್ಮವ ಕಳೆಯೆ ನಿರುತ 1 ಮಾರಮಣನ ದಿವ್ಯ ಚರಣ ಸರೋಜವ ತೋರಿ ಕರುಣವ ಮಾಡೆ ವಾರಿಜಾಸನನ ರಾಣಿ2 ಲಕುಮೀ ನಾರಾಯಣನ ಸುಕುಮಾರ ಚತುರ್ಮುಖ ನ್ವಾಕಿಗಾಗಿ ಬ್ರಾಹ್ಮೀ ಎನಿಸಿ ಸಾಕುವಿ ಲೋಕವ ಕಾಯೆ 3 ವಾಸುದೇವ ಕಾಲ ಪುರುಷರ್ಗೆ ಗಾಯಿತ್ರಿ ಸಾವಿತ್ರಿಯಾಗಿ ತೋಯಜಾಸನ ವಿಹಾರಿ 4 ಸನ್ನುತ ಜಯಾ ಸಂಕರುಷಣನ್ನ ಪಾದ ಕಿಂಕರನ್ನ ಮಾಡಿ ಎನ್ನ ಸಂಕಟ ಪರಿಹಾರ ಮಾಡೆ 5 ಕೃತಿಪತಿ ಪ್ರದ್ಯುಮ್ನನ ಸುತೆ ನುತಿಪೆನು ಸದಾ ಖ್ಯಾತಿಯನ್ನಿತ್ತನ್ಯಥಾ ಖ್ಯಾತಿಯ ಕಳೆಯೆ ಮಾತೆ 6 ಶಾಂತಿಪತಿ ಅನಿರುದ್ಧನಾಂತುದಿಸಿ ವಿರಂಚಿ ದುರಿತ ತರಿದು ಶಾಂತ ಮನಸನು ಕೊಡೆ7 ವಾಣಿ ವೀಣಾಪಾಣಿಯೇ ಕಾಣಿಸನುದಿನವೆನಗೆ ಮೃಡ ಇಂದ್ರಮುಖ ಗಣರಾರಾಧಿತಳೇ ತಾಯೆ 8 ಹೀನಗುಣವೆಣಿಸದೆ ಜ್ಞಾನ ಭಕ್ತಿ ವೈರಾಗ್ಯವ ಸಾನುರಾಗದಲಿ ಇತ್ತು ಶ್ರೀ ನರಹರಿಯ ತೋರೆ 9
--------------
ಪ್ರದ್ಯುಮ್ನತೀರ್ಥರು
ಸರುವದ ಪಠಿಸಿರೊ ಚತುರವಿಂಶತಿನಾಮ ಸಿರಿವಿರಿಂಚಾದಿಗಳಿಗೇ ಪ್ರಿಯಕರ ನಾಮ ಪ ಮಾಧವ ಗೋವಿಂದನ ಶ್ರೀಶ ವಿಷ್ಣು ಮಧುಸೂಧನ ತ್ರಿವಿಕ್ರಮನ 1 ವಾಮನ ಶ್ರೀಧರ ಹೃಷಿಕೇಶ ಪದುಮನಾಭ ದಾಮೋದರ ಸಂಕರುಷಣ ವಾಸುದೇವನ 2 ಅನಿರುದ್ಧ ಪುರುಷೋತ್ತಮ ದೇವನ ಅಧೋಕ್ಷಜ ನಾರಸಿಂಹ ಅಚ್ಯುತರಾಯನ 3 ಜನಾರ್ಧನ ಉಪೇಂದ್ರ ಹರಿ ಶ್ರೀ ಕೃಷ್ಣಸ್ವಾಮಿಯ ಜನನ ಮರಣ ರಹಿತನಾದ ಶ್ರೀನಿವಾಸನ 4 ಈ ಮಹಾನಾಮಂಗಳ ಪ್ರೇಮದಿಂ ಪಾಡಲು ಕಾಮಿತಾರ್ಥವೀವ ಶ್ರೀ ರಂಗೇಶವಿಠಲ 5
--------------
ರಂಗೇಶವಿಠಲದಾಸರು
ಸಾಕು ಬಿಡು ಭಾವೆ ಸಾಕು ಬಿಡು ನಿನ್ನ ಹೋಕೆ ಮಾತುಗಳೆಷ್ಟುಸಾಕು ಬಿಡು ಪ ಮದಗಜಗಮನೆ ನೀ ಒದೆವೋದ್ಯಾತಕೆ ಕಲಿತೆಬದಿಯಲಿದ್ದವರು ಇದಕೆ ನಗರೇನೆ ಸಖಿಯೆ ಬದಿಯಲಿದ್ದವರು ನಗರೇನೆ ನಿನ್ನ ಬುದ್ದಿಅದ್ಬುತವಾಗಿ ಈಗ ಬೆಳೆದಿದೆ ಸಖಿಯೆ1 ಸುದತಿ ಸುಭದ್ರಾಗೆ ಕದನ ಕಠೋರಿ ಸರಿಯೇನ ಸಖಿಯೆ2 ಎತ್ತಿ ಒಯ್ದವ ನಿನ್ನ ಅತ್ಯಂತ ಸುಖಿಸಿದ ಲತ್ತಿತಿಂದೊಬ್ಬ ಬಳಲುವಲತ್ತಿತಿಂದೊಬ್ಬ ಬಳಲುವ ನಿನ್ನ ನಡತೆವಿಸ್ತಾರವಾಗಿ ಈಗ ತಿಳಿಸಿದೆ ಸಖಿಯೆ3 ತಾಯಿ ಮಕ್ಕಳೊಳು ನ್ಯಾಯವನಿಕ್ಕುವಿಮಾಯಗಾರುತಿಯೆ ಬಲು ಮೂದೇವಿಮಾಯಗಾರುತಿಯೆ ಬಲು ಮೂದೇವಿ ನಿನಕಂಡುಬಾಯಿ ಬಿಡುತಾರೆ ಜನರೆಲ್ಲ ಸಖಿಯೆ4 ಖ್ಯಾತ ರಾಮೇಶ ಈಗ ಈ ಮಾತೆಲ್ಲಿ ಕಲಿತೆಂದ ಚಾತುರ್ಯದಲ್ಲಿ ಚಪಲನೆಚಾತುರ್ಯದಲ್ಲಿ ಚಪಲ ಚನ್ನಿಗನೆಂಬೊಪಾರ್ಥನು ನಿನಗೆ ಗುರುವೇನ ಸಖಿಯೆ 5
--------------
ಗಲಗಲಿಅವ್ವನವರು
ಸಾಕು ಸಾಕು ಸ್ವಾಮಿ ಸಂಸಾರವು ಪ ಸಾಕಿದರೊಳು ಲೇಶ ಸೌಖ್ಯವು ಕಾಣೆನು ಬೇಕು ನಿನ್ನ ಪಾದಭಜನೆ ನಿರಂತರ ಅ.ಪ ಚತುರಶೀತಿ ಲಕ್ಷಯೋನಿಗಳಲಿ ಪು- ಟ್ಟುತ ಬೆಳೆಯುತ ಮೃತಿ ಪೊಂದುವ ಕಷ್ಟವು 1 ಮಾಂಸರಕ್ತ ಪೂರಿತ ಕೂಪದಿ ನವ- ಮಾಸ ಮಾತೃಗರ್ಭಯಾತನೆಯಿನ್ನು 2 ಬಾಲರ ಕೂಡುತ ಬಾಲ್ಯದಲ್ಲಿ ಚೆಂಡು ಗೋಲಿ ಗಜ್ಜುಗಗಳಾಡಿದ ಆಟವು 3 ಗರ್ವದಿಂದ ಮೈಮರೆತು ತಿರುಗುವುದು 4 ಸೇರಿ ಇರುವ ಕೌಮಾರಾವಸ್ಥೆಯು 5 ಕಿವಿಗಳು ಕೇಳದು ಕಣ್ಕಾಣದು ಬಾಂ- ಧವರಧೀನದಲಿ ಬಾಳುವ ಕಷ್ಟವು 6 ಮರಣವಾದ ಮೇಲೆ ನರಕವು ಸ್ವರ್ಗವು ಧರಣಿಯಲಿ ಪುಟ್ಟುವುದೋ ತಿಳಿಯದು 7 ಎಂತಾದರು ನಿನ್ನವರೊಳಿಡು ಸದಾ ಪಂಥವೆ ದೀನರ ಮೇಲೆ ದಯಾನಿಧೆ 8 ಭಾಗ್ಯವಲ್ಲಿ ಹನುಮಂತನೊಡೆಯ ಶರ- ಣಾಗವÀತ್ಸಲ ಗುರುರಾಮವಿಠಲ9
--------------
ಗುರುರಾಮವಿಠಲ
ಸಾಗಿ ಬಾರಯ್ಯ ನೀ | ಬಾಗಿ ನಮಿಸುವೇಯೋಗಿಗಳರಸನೇ ಶ್ರೀನಿವಾಸ ಪ ಭೋಗಿಶಯನನೆ ನಿನ್ನ ಭಾಗವತರು ಬಂದುಜಾಗು ಮಾಡದೆ ನಿನ್ನ ಬಾಗಿಲೊಳು ನಿಂತಿಹರೋ ಅ.ಪ. ಇಂದಿರೇ ರಮಣಗೋವಿಂದ ನೀನೇ ಗತಿಯೆಂದು ಭಜಿಸುತಿರಲುಆನÀಂದದಿಂದತÀಂದೆಯ ಬಾಧೆಗೆ ತಂದು ತೋರಲು ಸ್ತಂಭ ತಂದೆ ತಾಡನೆಯ ಮಾಡಲುಬಂದೆಯಾ ಪರಿಪರಿ ವಿಧ ಭಯದಿಂದವೋಡಲು ಬಂದು ಅಸುರನ್ನಆರ್ಭಟಿಸಿ ಕೆಡಹುತಛಂದದಲಿ ಬಗೆಯುತಸುರನ್ನ ಕೊರಳೊಳು ಮಾಲೆ ಅಂದು ಧರಿಸಿದ ಅಧಿಕ ಸಂಪನ್ನಪ್ರಳಯಾಗ್ನಿಯಂತಿರೆ ನಿನ್ನ ಸ್ತುತಿಸಲು ಅರಿಗೊಸೆದಿನ್ನು ಅನುತಿರಲುನಿನ್ನಯಮುಂದೆ ಭಜಿಸುತ ಕಂಡು ಬರಲಾನಂದದಿಂದಲಿ ಚಂದದಿ ಸಲಹಿದಾನಂದದಲಿ ಮಂದರೋದ್ಧರ ಎನ್ನ ಸಲಹೋ 1 ಮೃಗ ಬೇಡಲು ಬಾಣ ಎಸೆಯಲು ಅದು ಲಕ್ಷ್ಮಣಾಯೆಂದು ಕೂಗಲುಮತ್ತಾತ ಪೋಗಲು ಇತ್ತ ರಾವಣನು ಕರೆದೊಯ್ಯೆ ಸತಿಯಳ ವಾತಸುತ ತಾನೆನಿಸೇ ನೀ ಮುನ್ನಾ ಅವ ಪೋಗೆ ಉಂಗುರ ಖ್ಯಾತಿಯಿಂದಲಿನೀಡಲದಕಿನ್ನು ತನುಮನದ-ಲತಿ ಭೋಗದಿ ಶಿಖೆಯ ಶಿರೋಮಣಿಯನ್ನೆ ಕೊಡಲನುಗ್ರಹದಲಿಛಾತಿಯಿಂದಲಿ ಅವಗೆ ವಿಧಾತ ಪದವಿಯ ಪಾಲಿಸಿದೆ ಜಗನ್ನಾಥಇಂದ್ರಾದ್ಯಮರ ವಂದಿತ ವೀತಭಯ ಜಗನ್ನಾಥ ಸಲಹೋ2 ಮಂಗಳಾಂಗನೆ ನಿನ್ನ ಸುಖವ ಕೊಟ್ಟು ಅಂಗನೆಯರಬಾಧೆಬಿಡಿಸೊ ಇಂದುಅಂಗನೇಯರು ಬಂದು ಭಂಗಪಡಿಸಲದಕೆ ಪೋಗುತಾ ಮಾರನ್ನಬಾಧೆಯ ಕಳೆಯುತಾಪರಿಪರಿಯ ಸುಖಗಳ ಸಂಗಡಿಲ್ಲದೇ ನೀಡಿಯೊ ಮಲ್ಲಮರ್ದನನೇ ಎನುತಿರೆಬೇಗದಿಂದಲಿ ಓಡಿಪೋದೆಲ್ಲೊ ಭಕ್ತರನು ಸಲಹುವೆನೆಂಬೋಬಿರುದು ನಿನಗೆ ಉಂಟಲ್ಲಾಅನುತಿರಲು ನಿನ್ನಯ ಎನ್ನ ಮನ ಉತ್ತಂಗಸುತಸತ್ಸಂಗ-ವೀವುದು ವಿಹಿತ ದೇವನೇತುರಂಗನಾಥನೇ ರಂಗವಿಠಲನೆ ದೇವ ದೇವರ ದೇವ ಸಲಹೋ3
--------------
ಶ್ರೀಪಾದರಾಜರು
ಸಾಧು ಸಜ್ಜನ ಸತ್ಯಗುಣಕಿದಿರುಂಟೆಆದಿಕೇಶವನ ಪೋಲುವ ದೈವವುಂಟೆ ಪ ಸತ್ಯವ್ರತವುಳ್ಳವಗೆ ಮೃತ್ಯುಭಯವುಂಟೆಚಿತ್ತಶುದ್ಧಿಯಿಲ್ಲದವಗೆ ಪರಲೋಕವುಂಟೆವಿತ್ತವನರಸುವಂಗೆ ಮುಕ್ತಿಯೆಂಬುದುಂಟೆಉತ್ತಮರ ಸಂಗಕಿಂತಧಿಕ ಧರ್ಮವುಂಟೆ 1 ಸುತಲಾಭಕಿಂತಧಿಕ ಲಾಭವುಂಟೆಮತಿರಹಿತನೊಳು ಚತುರತೆಯುಂಟೆಪತಿಸೇವೆಗಿಂತಧಿಕ ಸೇವೆಯುಂಟೆಸತಿಯಿಲ್ಲದವಗೆ ಸಂಪದವೆಂಬುದುಂಟೆ 2 ಪಿಸುಣಗಿನ್ನಧಿಕ ಹೀನನುಂಟೆವಸುಧೆಯೊಳನ್ನದಾನಕೆ ಸರಿಯುಂಟೆಅಶನವ ತೊರೆದ ಯೋಗಿಗೆ ಭಯವುಂಟೆವ್ಯಸನಿಯಾದ ನೃಪನಿಗೆ ಸುಖವುಂಟೆ 3 ಧನಲೋಭಿಗಿನ್ನಧಿಕ ಹೀನನುಂಟೆಮನವಂಚಕ ಕಪಟಿಗೆ ನೀತಿಯುಂಟೆಸನುಮಾನಿಸುವ ಒಡೆಯಗೆ ಬಡತನವುಂಟೆವಿನಯವಾಗಿಹ ಸಂಗದೊಳು ಭಂಗವುಂಟೆ4 ಹರಿಭಕ್ತಿಯಿಲ್ಲದವಗೆ ಪರಲೋಕವುಂಟೆಪರಮಸಾತ್ತ್ವಿಕ ಗುಣಕೆ ಪಿರಿದುಂಟೆಪರನಿಂದೆಗಿಂತಧಿಕ ಪಾತಕವುಂಟೆವರದಾದಿಕೇಶವನಲ್ಲದೆ ದೈವವುಂಟೆ 5
--------------
ಕನಕದಾಸ
ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ ಸೂಸುವದ್ಯಾತಕೆ ಹರಿಭಕುತಿಗೆ ಧ್ರುವ ಬಲಮುಣುಗುವದಿದ್ಯಾಕೆ ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ ತಲೆ ಮುಸಕ್ಯಾತಕೆ ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1 ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2 ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3 ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4 ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ ಸಾರ ಯೋಗಿ ಮಾನಸಜೀವನ ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರವಲ್ಲ ಸಂಸಾರವಿದು ಪ ತನುವಿನ ಪಾಶವು ವನಿತೆರ ಪಾಶವು | ಉಣಲುಡುಪಾಶಾ ಹಣಗಳ ಪಾಶವು | ಮನೆ ಪಶು ಪಾಶಾ ಇನಿತಿಹ ಪಾಶದ | ಮನುಜಗ ಸುಖವೆ 1 ಭ್ರಾಂತಿಯ ಮಂದಿರ ಚಿಂತೆಯ ಮಡುವು | ಪಂಥವು ನರಕದ ಕಂತುವಿನಾಶ್ರಯ | ಖಂತಿಯ ನೆಲೆಭವ ಜಂತುರ ನೋಡಲು | ಸಿಂತರ ಬೀಳುವಂತಿನಾ ಜನುಮಾ 2 ತಾಪತ್ರಯ ನಾನಾ ಪರಿಯಿಂದಲಿ | ವ್ಯಾಪಿಸಿಕೊಂಡಿಹ ದೀಪರಿ ಭವಣಿ | ಆ ಪರಗತಿ ನಿನಗಾಪೇಕ್ಷಾದರ | ಪಡಿ ತಂದೆ ಮಹಿಪತಿ ಬೋಧಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1 ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2 ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿ ಭಜಿಸಿರೋ | ವಿಜಯ ಗುರುಗಳೆಂಬರಾ ಪ ಚಾರು | ಚರಣ ತೊರ್ಪರಾ ಅ.ಪ. ಸತ್ರಯಾಗದೀ ಗಂಗೆ | ಕ್ಷೇತ್ರ ತೀರದಿಭ್ರಾತೃವರ್ಗವೂ ಅವರ ತುತಿಸಿ ಕಳುಹಲೂ 1 ಗಿರಿಜೆ ರಮಣನಾ ಪುರವ | ಸಾರಿ ಬೇಗನೇಮಾರ ಕೇಳಿಯಾ ನೋಡಿ | ಗಿರಿಯ ತ್ಯಜಿಸಿದಾ 2 ಚತುರವದನನಾ ದಿವ್ಯ | ಸತ್ಯಲೋಕವಾಚತುರ ಸೇರುತಾ ಅವನ | ಸ್ತುತಿಯ ಮಾಡಿದ 3 ವೇದ ಪಠಿಸುತಾ | ಬಧಿರನಂತಿರೇವದಗಿ ಸಾಗಿದಾ | ನಾರ್ದ ದೂತನೂ4 ಹರಿಯೆ ಕಾಣುವೆ ಎಂದು | ತ್ವರದಿ ಬಂದನೂಹರಿಯ ಮಾಯವಾ ಜಗದಿ | ಯಾರು ಅರಿವರು 5 ನಿದ್ರೆ ಬಂದವಾ | ನಂತೆ ಮಲಗಿಹಾಭದ್ರ ಮೂರ್ತಿಯಾ ತಾನು ಕಾಲಿಲೊದ್ದನು 6 ಪಾದ ಒತ್ತುತಾಮೋದ ಬಡಿಸಿದಾ ತಾನು | ಸಾಧು ಮುನಿಯನು 7 ಹರಿಯೆ ಪರನೆಲ್ಲಾ | ಹರಿಯ ಸರ್ವಜ್ಞಾಹರಿಗಿನ್ನಿಲ್ಲವೋ | ಸಮರು ಅಧಿಕರವಾ 8 ಎಂದು ಸ್ಥಾಪಿಸೀ | ತಾನು ಬಂದು ನಿಂತನುಛಂದದಿಂದಲಿ ಯಜ್ಞ | ಸಾಂಗಗೈಸಿದಾ 9 ಪದಸುಳ್ಹಾದಿಯಾ | ರಚಿಸಿ ಮೋದದಿಂದಲೀವೇದ ಸಾರವಾ | ಜನಕೆ ಬೋಧಿಸೀರುವಾ 10 ಪವನನಯ್ಯನಾ ಗುರು | ಗೋವಿಂದ ವಿಠಲನಾಸ್ತವನ ಮಾಡುತ ತಾನು | ಭವವ ಕಳದನಾ 11
--------------
ಗುರುಗೋವಿಂದವಿಠಲರು