ಒಟ್ಟು 36191 ಕಡೆಗಳಲ್ಲಿ , 138 ದಾಸರು , 9678 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹರಿವಾಸರದ ಮಹಿಮೆಯೆನು ಅರಿತಷ್ಟು ಪೇಳುವೆನು ತರಳರಾಡುವ ನುಡಿಯೆಂದು ಗುರುಜನರು ಮನ್ನಿಸಿರಿನ್ನು ಪ. ಹಿಂದೆ ತಾನಜಾಮಿಳನು ಮಂದಮತಿಯಾಗಿ ಜಗದಿ ನಿಂದಿತಾಚಾರದಲಿ ಮನವಿರಿಸಿ ನಲಿದು ಬಂಧುಮಿತ್ರರ ನುಡಿಗೊಂದಿಷ್ಟು ಕಿವಿಗೊಡದೆ ಮನ ಬಂದಂತೆ ಚರಿಸಿದರನು ಮದಮೋಹದಿಂದ 1 ಮಂದಿರವ ನೊಳಪುಗಲು ಗಂಗೆಯಂತು ದಂದುಗದಿನೊಂದು ಮಡದಿ ಮಕ್ಕಳಿಗಾಗಿ ನಿಂದಂತೆ ತಾನುಪವಾಸ ಜಾಗರದಿ ಕಳೆದು ಮರುದಿನ ದ್ವಾದಶೀ2 ಮರಣದಾಹದಿ ಹರಿವ ನೀರ ಕುಡಿಯೇ ಹರಿಗರ್ಪಿಸಿದ ತುಳಸಿದಳವೊಂದದರೊಳಿರೆ ದುರಿತಕೋಟಿಗಳೆಲ್ಲ ದೂರಸಾರೆ 3 ಅಂತ್ಯಕಾಲದೊಳೈತಂದ ಅಂತಕನದೂತರಂ ಕಂಡು ಇಂದಿರೇಶನಾಣತಿಯಂತೆ ಕಿಂಕರರು 4 ಅರಿಯದಾಚರಿಸಿದೊಡಂ ಹರಿವಾಸರದ ಮಹಿಮೆ ಪರಮಪದನಾಥನೇ ವಶನಪ್ಪನಯ್ಯಾ 5 ಹರಿಭಕ್ತ ರುಕ್ಮಾಂಗದನ ಪರಿಭವಿಸೆ ಬರೆ ಮೋಹಿನಿ ತರಳ ಧರ್ಮಾಂಗದನ ಶಿರವತೆಗೆಯೆಂದೆನಲು ವರಧರ್ಮದೇವನೇ ಕರವಿಡಿದು ಪೊರೆದಂ6 ದಶಮಿ ದ್ವಾದಶೀ ದಿನದಲ್ಲಿ ಅಶನವೊಂದೇಸಾರಿ ಏಕಾ ಕುಸುಮನಾಭನಾ ಶೇಷಗಿರಿವಾಸ ಕೈಬಿಡನೊ 7
--------------
ನಂಜನಗೂಡು ತಿರುಮಲಾಂಬಾ
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹರಿಸಂಕೀರ್ತನೆ ಸೇವೆಗೆ ಜನರೊದಗುವರೆ ಪ ದೊರೆತನವಾಗಬೇಕೆನಲಿಲ್ಲ-ಬಲು ಸಿರಿತನವನು ವಾಂಛಿಸಲಿಲ್ಲ ಯೊಂದಿತ್ತರೆ ಸಾಕಲ್ಲ 1 ಅನ್ನವಸ್ತ್ರವಕೇಳುವುದಿಲ್ಲ ಒಳ್ಳೆ-ಚಿನ್ನ ಬಣ್ಣವ ಕೊಡುಎನಲಿಲ್ಲ ನೀನೊಲಿದರೆ ಸಾಕಲ್ಲ 2 ವರದ ವಿಠಲ ಬಲ್ಲೆ ನೀನಿದನೆಲ್ಲ 3
--------------
ಸರಗೂರು ವೆಂಕಟವರದಾರ್ಯರು
ಹರಿಸರ್ವೋತ್ತಮನೆಂದರಸುವರು ಪ ಹರಿದಾಸರಿವರು ಧರೆಯೊಳಿವರಿಗೆ ಸರಿಗಾಣೆ ಕೇಳಮ್ಮ ಜಾಣೆ ಅ.ಪ ಸಾಧುಸಜ್ಜನರಿಗೆ ಬಾಗುವರು ವೇದಕೆ ನಮಿಸುವರು ವಾದವಾಂಛಲ್ಯವ ತೊಡದಿಹ್ಯರು ಭೇದಿಲ್ಲದಿವರು 1 ಕಾಮ ಕ್ರೋಧಾದಿಗಳು ಜೈಸಿಹ್ಯರು ತಾಮಸಬಿಟ್ಟಿಹರು ಭೂಮಿ ಮೋಹಾದಿಗಳನಳಿದಿಹ್ಯರು ಸ್ವಾಮಿನ ಭಜಿಸುವರು 2 ಕ್ಲೇಶಪಂಚಕದಿಂದುಳಿದಿಹ್ಯರು ಮೋಸಕೆ ಒಳಪಡರು ಅಶಪಾಶಗಳೆಲ್ಲ ತುಳಿದಿಹ್ಯರು ವಾಸನೆ ತೊಳೆದಿಹ್ಯರು 3 ಮೆಚ್ಚದೆ ಸಂಸಾರ ತುಚ್ಛೀಕರಿಸಿಹ್ಯರು ಎಚ್ಚರಗೊಂಡಿಹ್ಯರು ಅಚ್ಚುತಾನಂತನೆ ಗತಿಯೆಂಬುವರು ಬಚ್ಚಿಟ್ಟು ನೆನೆಯುವರು 4 ಹರಿಯೆ ಪರದೈವವೆಂದರಿತಿಹ್ಯರು ಹರಿಯ್ಹೊರತಿಲ್ಲೆಂಬುವರು ಸರುವ ಜಗಭರಿತನೆಂದವರು ಸಿರಿರಾಮನ್ನ ತಿಳಿದಿಹ್ಯರು 5
--------------
ರಾಮದಾಸರು
ಹರಿಸಿರಿ ರಮಣಿಯೆ ಕರಗಳ ಮುಗಿಯುವೆ ವರಮತಿ ನೀಡೆನಗೆ ಪ ಸರಸಿಜಾಕ್ಷನ ವಕ್ಷಸ್ಥಳದಿ ನಿವಾಸಿಯೆ ನಿರುತದಿ ಹರಿಪಾದ ಸ್ಮರಣೆ ಎನಗೆ ಕೊಡು ಅ.ಪ ಮಂದರೋದ್ಧರ ಗೋವಿಂದ ಗುಣಗಳಾ- ನಂದದಿ ಸ್ತುತಿಸಿ ಹಿಗ್ಗುವ ಜನನಿ ಇಂದಿರೆ ರಮೆ ಭಾರ್ಗವಿಯೆ ನಿನ್ನಯ ಪಾದ ದ್ವಂದ್ವಕೆ ನಮಿಪೆ ಸುಗಂಧಿ ಸುಂದರಿಯೆ 1 ಪರಮಪುರುಷ ಪುರುಷೋತ್ತಮನರಸಿಯೆ ಪಾವನಿ ಜನನಿ ಸುರರು ಕಿನ್ನರರು ಕಿಂಪುರುಷರು ಸ್ತುತಿಪರು ವರ ಮಹಾಲಕ್ಷ್ಮಿ ಸುಂದರಿ ಜಯ ಜಯ ಎಂದು 2 ಗಂಗಾಜನಕ ಪಾಂಡುರಂಗ ನಿಜ ಸತಿ ಭೃಂಗಕುಂತಳೆ ಭಾಗ್ಯದ ಖಣಿಯೆ ಅಂಗಜಜನಕ ವಿಹಂಗವಾಹನನ ಪಾ- ದಂಗಳ ಸ್ಮರಣೆಲಿ ನಲಿವ ಮನವ ಕೊಡು 3 ಪಕ್ಷಿವಾಹನ ಕಮಲಾಕ್ಷನ ಮಹಿಮೆಯ ವೀಕ್ಷಿಸಿ ಮನದಿ ಹಿಗ್ಗುವ ಜನನಿ ರಾಕ್ಷಸನಾಮ ವತ್ಸರದಲಿ ಭಕುತರ ಮೋಕ್ಷದಾತನು ಸಲಹುವ ಸುಜನರನು4 ಕಮಲಸಂಭವ ಕಮಲಾಲಯೆ ಹರಿಪಾದ ಕಮಲಭೃಂಗಳೆ ಹಿರಣ್ಯಹರಿಣಿ ಕಮಲನಾಭ ವಿಠ್ಠಲನೊಡಗೂಡಿ ಹೃ- ತ್ಕಮಲದಿ ಶೋಭಿಸು ಎನುತ ಸ್ತುತಿಸುವೆನು 5
--------------
ನಿಡಗುರುಕಿ ಜೀವೂಬಾಯಿ
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಹರಿಹರಾ | ಪಾಲಿಸೊ ಎನ್ನ | ಭವಹರಾ ಪ ಸುರರು ಭೂಸುರರೆಲ್ಲಕರವ ಮುಗಿದು ನಿನ್ನ ವರಗಳ ಬೇಡೋರು ಅ.ಪ. ಸಿರಿ | ಪತಿಯು ಮತ್ತೆ ಪಶುಪತಿಯಿಂದಲೂ ತಾನೂ | ಹತನಾಗದವನಂತೆ 1 ಪರ | ಮೇಷ್ಠಿ ಪಿತನೆ ನಮ್ಮಕಷ್ಟವ ಕಳೆದು ಸಂ | ತುಷ್ಟಿಯ ಪಡಿಸಯ್ಯ 2 ಸುರರ ಭೂಸುರರ ಜಂಗಳಿಯ | ನೋಡಿಪೊರೆವೆನೆಂದವರಿಗೆ ಅಭಯ | ವಿತ್ತುಹರಿಯು ತಾನೇ ರೂಪದ್ವಯ | ದಿಂದಹರಿಹರಾಭಿಧತಾನೆ ಖರೆಯ | ಆಹಸುರರು ರೂಪವ ನೋಡಿ | ಉರುತರದಾಶ್ಚರ್ಯಭರವಾ ಮೈಮರೆಯುತ | ಕರವನೆ ಮುಗಿದರು 3 ಕಾಲ ನಿರೀಕ್ಷಿಸುತ್ತಿದ್ದು | ಬಲ್ಕರಾಳ ರೂಪನ ತಾನು ಗೆದ್ದು | ತಲೆಕಾಲಿನೊಳಗೆ ಮೆಟ್ಟುತಿದ್ದೂ | ಪಾ-ತಾಳಕ್ಕವನ ತಾನು ಒದ್ದು | ಆಹಕಾಲಮೀರುವ ಮುನ್ನ | ಕೇಳಲೊ ವರವನ್ನೆಫಾಲಾಕ್ಷ ಹರಿಯನ್ನು | ಕೇಳಿದನೀಪರಿ 4 ಮಲ್ಲಮರ್ದನ ಗುರು | ಗೋವಿಂದ ವಿಠಲನು ಸಲ್ಲೀಸೂವ ಭಕ್ತ | ರೆಲ್ಲರಭೀಷ್ಟವ 5
--------------
ಗುರುಗೋವಿಂದವಿಠಲರು
ಹರಿಹರಿ ಎನ್ನಿ ಹರಿವದು ಪಾಪ ಧರೆಯೊಳು ಧರೆಯೊಳು ಕರಮುಗಿದು ಗುರುವಿಗೆ ಕೇಳುವುದು ಬಲುಮೇಲು ಧ್ರುವ ಮೂಢಗೆ ಉಪಾಯ ಹೇಳಿದರೆ ತಿಳುವದೆ ತಿಳುವದೆ ಖೋಡಿಗೆ ಸುಲಕ್ಷಣದ ಮಾತು ಹೊಳೆವದೆ 1 ಬಿಸಲು ಬೀಳುದೆ ಬೀಳುದೆ ಗೂಢ ಗುರುವಿನ ಮಾತಿದು ನಾಡಿಗೆ ತಿಳುವದೆ 2 ವಿಷ ಕಚ್ಚಿದ ಮನಕೆ ಸುಘನ ಭಾಸುದೆ ಭಾಸುದೆ ತುಸು ಝರಿ ಇಲ್ಲದೆ ಬಾವಿಲಿ ನೀರು ಸೂಸುದೆ ಸೂಸುದೆ 3 ಹಸಗೆಟ್ಟಹ್ಯ ಕುಕ್ಕಡಿನೂಲ್ಹಾಸಿಗೆ ಬಾಹುದೆ ಬಾಹುದೆ ಕಸಕಡ್ಡಿಲ್ಲದ ಮುಗಿಲೆಂದಿಗೆ ತಾ ಮಾಸುದೆ 4 ಮೀಸಲ ಮನ ಒಂದಾದರೆ ಸಾಕು ತಿಳಿಕೊಳ್ಳಿ ತಿಳಿಕೊಳ್ಳಿ ಭಾಸ್ಕರ ಗುರುರಾಯನ ಶ್ರೀಪಾದಕೆ ಬಲಗೊಳ್ಳಿ ಬಲಗೊಳ್ಳಿ 5 ಲೇಸಿನ ನಿಜಸುಖ ನೆರೆಗೊಳ್ಳು ಮಹಿಪತಿ ನಿನ್ನಲ್ಲಿ ನಿನ್ನಲ್ಲಿ ಹೇಸಿ ಮುಖದೋರದೆ ಹೋಗುವುದು ಭವದ ತಳ್ಳಿ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1 ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2 ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3 ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4 ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಹರಿ ಹರಿಯೆನ್ನಿ ಮಂದರಧರನೆ ಗತಿಯೆನ್ನಿ ದೀನ ದಯಾಕರನು ದಿವಿಭುವಿ ಪ. ಮಾನ ಭರಾಕರನು ನೀನೆಂದೊರವರನು ದುರಿತ- ಹೀನರ ಮಾಡುವನು 1 ತರಳನ ಮೊರೆ ಕೇಳಿ ವರ ನರ ಹರಿಯ ರೂಪವ ತಾಳಿ ದುರುಳ ಹಿರಣ್ಯಕನಾ ಕರುಳನು ಕೊರಳೊಳು ಧರಿಸಿದನಾ 2 ಗಜರಾಜನ ಕಾಯ್ದಾ ಬಾಣನ ಭುಂಜ ಪುಂಜವ ಕೊಯ್ದಾ ಗಜಪುರವರಗೊಲಿದಾ ಚರಣಾಂ- ಬುಜವೀವುತ ನಲಿದಾ 3 ನೆನೆದಲ್ಲಿಗೆ ಬರುವಾ ನಂಬಿದ ಜನರ ಸಂಗಡವಿರುವಾ ಅನುಗಾಲವು ಪೊರೆವಾ ಮನಸಿಜ ಜನನಿಯನಪ್ಪಿರುವಾ 4 ದಾಸರ ಸಲಹುವದು ಶೇಷ ಗಿ- ರೀಶನ ಮಹಾ ಬಿರುದು ದೋಷಗಳನು ತರಿದು ಈರೆರ- ಡಾಸೆ ಪೂರಿಪ ನೆರೆದೂ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹರುಷದಿ ತಾರೆ ಆರುತಿಪುರವೈರಿ ಗೌರೀಶಾ ಧವಳಾಂಗಗೆ ಪ ಅಶುಭನೇತ್ರ ಶಶಿಧರಗೆ | ವೃಷಭೇಂದ್ರ ಶ್ಯಂದನಗೆಕುಸುಮಬಾಣ ಮದಹರಗೆ ಬಿಸಜಾಕ್ಷಗೆ 1 ಭುಜಗಮಾಲಾ ಖಳಕಾಲಾ | ವಿಜಿತ ಗೋ ಶಂಕರಗೆರಜತ ಶೈಲ ಮಂದಿರಗೆ | ಕಮಲಾಂಬಿಕೆ 2 ಮಣಿ 3
--------------
ಶಾಮಸುಂದರ ವಿಠಲ