ಒಟ್ಟು 3371 ಕಡೆಗಳಲ್ಲಿ , 119 ದಾಸರು , 2565 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾರೆ ಆರುತಿ ಸಾರಸಾಂಬಕಿ ಭಾರತೀವರಗೆ ಬೆಳಗುವೆನು ಪ ನರಸಿಂಹಾರ್ಯ ಶೇವಿತಗೆ ಅ.ಪ ನೂರುಯೋಜನ ವಾರಿನಿಧಿಯನು ಹಾರಿ ಜಾನಕಿಗೆ ಚಾರು ಮುದ್ರಿಕೆಯನಿತ್ತು ಪುರದಿಭಯ ತೋರಿರಾಕ್ಷಸಗೆ ನಾರಿಮಣಿಯ ಶುಭವಾರುತಿಯ ರಘುವೀರಗರುಹಿದ ಮಾರುತಾತ್ಮಜಗೆ 1 ಇಂದು ಕುಲದಲಿ ಬಂದು ಕುಂತಿಯ ಕಂದನೆಂದೆನಿಸಿ ನಿಂದು ರಣದಿ ಖಳವೃಂದ ಸಹಿತ ಕುರುವೃಂದವನು ಮಥಿಸಿ ಛಂದದಲಿ ಪಡೆದಂಥ ಭೀಮಗೆ 2 ಭೂತಳದಿ ಸುಖತೀರ್ಥರೆನಿಸಿ ಸಚ್ಛಾಸ್ತ್ರವನು ರಚಿಸಿ ಭೀತಿ ಪುಟ್ಟಿಸುತ ಖ್ಯಾತಮಾಯ್ಗಳ ವ್ರಾತವನು ಜಯಿಸಿ ಪೂತ ಕಾರ್ಪರ ಕ್ಷೇತ್ರ ನರ ಮೃಗನಾಥನ ಪರಮಪ್ರೀತಿ ಪಾತ್ರನಿಗೆ 3
--------------
ಕಾರ್ಪರ ನರಹರಿದಾಸರು
ತಾಳು ತಾಳೆಲೊ ಕೋಪ ಜಾಲಮಾಡದೆ ಭೂಪ ಕೇಳಿಕೊಂಬೆನು ನಿನ್ನ ಕಾಲಪಿಡಿವೆನೊ ಪ. ಫಾಲಲೋಚನನುತ ಶ್ರೀಲೋಲ ನಿನ್ನನೇ ಕೇಳಿಕೊಂಬೆನು ಮಾತಕೇಳೋ ಕಾಳುಮಾಡದೆ ಮಾತ 1 ದುರುಳತನದಲಿ ನಿನ್ನ ತೆರೆದಕಣ್ಣಳನೆಂದು ಜರಿದು ಪೇಳಿದೆನೋ ತಿರುಗಿ ನಾ ನಿನ್ನ ಗಿರಿಯ ಬೆನ್ನೊಳು ಪೊತ್ತು ಮೆರೆಯುವ ದಡ್ಡನೆಂದೊರೆದ ಕಾರಣದಿಂದ 2 ಕೋರೆಯೊಳ್ ಕೊರೆದು ಕೊನ್ನಾರಿಗೆಡ್ಡೆಯ ತಿಂದು ಳೀರಡಿ ಮಾಡಿದೆ ಘೋರವಿಕ್ರಮನೆಂದು ದೂರಿದೆನದರಿಂದ3 ಹೆತ್ತತಾಯಿಯ ಕೊಂದು ಮತ್ತೆ ಕಪಿಗಳ ಕೂಡಿ ಚಿತ್ತವಸೆರೆಗೈದ ಮತ್ತನೆಂದೆನಲಾಗಿ 4 ಉತ್ತಮಸತಿಯರ ಚಿತ್ತವ ಕಲಕಿದ ಮತ್ತನೆಂದಾಡಿದೆನೋ ಮತ್ತೆ ಕುದುರೆಯನೇರಿ ಕತ್ತಿಯ ಪಿಡಿದೆತ್ತಿ ಸುತ್ತುವನಿವನುನ್ಮತ್ತನೆಂದುದರಿಂದ 5 ಪಿತ್ತವು ತಲೆಗೇರಿ ಮತ್ತೆ ಮತ್ತೆ ನಾನಿನ್ನ ಒತ್ತೊತ್ತಿಜರಿದೆನೊ ಚಿತ್ತಜಪಿತನೆ ಮತ್ತೊಮ್ಮೆ ಬೇಡುವೆ ಗತಿನೀನೆ ನಮಗೆಂದು ಪತಿಕರಿಸೆನ್ನಪರಾಧವ ಮನ್ನಿಸಿ 6 ಕಂದನಿವಗೈದ ಕುಂದುಗಳೆಣಿಸದೆ ತಂದೆ ಸಲಹಯ್ಯ ಶ್ರೀ ಶೇಷಗಿರಿವರ 7
--------------
ನಂಜನಗೂಡು ತಿರುಮಲಾಂಬಾ
ತಿರುಪತಿಯ ಶ್ರೀ ವೆಂಕಟೇಶ ಕಮಲ ಪ ಹೇಮಮುಖದೀ ನದಿಯ ಕಂಡೇ ಗೋಮಿನೀ ಪದ್ಮಾವತಿ ಕಂಡೆಭೂಮಿಸುರರ ಮೇಳವ ಕಂಡೆ ಆ ಮಹಾ ಗಾಳಿಗೋಪುರ ಕಂಡೆ 1 ಸ್ವಾಮಿ ಪುಷ್ಕರಿಣೀಯ ಕಂಡೆ ಭೂಮಿ ವರಹಾ ದೇವರ ಕಂಡೆರಾಮದೂತನ ಪಾದವ ಕಂಡೆ ಸ್ವಾಮಿಯ ಮಹಾದ್ವಾರವ ಕಂಡೆ 2 ಹರಿಯು ಅಡಗಿದ ಹುತ್ತನು ಕಂಡೆ ಹರಿಯಧ್ವಜದ ಸ್ತಂಭವ ಕಂಡೆಪರಿಪರಿ ವೈಭವವನು ಕಂಡೆ ಪರಮಪುರುಷನಾ ಮೂರ್ತಿಯ ಕಂಡೆ 3 ಹರಿಹರಿ ಎನ್ನುವರನು ಕಂಡೆ ಹರಿದು ಒಳ ಪೋಗುವರನು ಕಂಡೆಹರಿಣಾಂಜನದ ತಾಡನ ಕಂಡೆ ಮಣಿಮಯಿಮುಕುಟವನು ಕಂಡೆ 4 ಹಣೆಯಲ್ಲಿಯ ನಾಮವ ಕಂಡೆ ಅನುಪಮಾದಂಗವನೂ ಕಂಡೆಕೊರಳ ಸರಗೀ ಸರಗಳ ಕಂಡೆ ಹರಳು ರತ್ನದಾಭರಣಗಳನು ಕಂಡೆ 5 ಉರದಿ ಶ್ರೀ ಭೂದೇವಿಯರ ಕಂಡೆ ಕರದಿ ಶುಭಶಂಖ ಚಕ್ರಗಳ ಕಂಡೆಗುರು ಶ್ರೀವಾದಿರಾಜರ್ಪಿಸಿದ ವರ ಶಾಲಿಗ್ರಾಮ ಹಾರವ ಕಂಡೆ 6 ಉದಗಿ ಪೀತಾಂಬರವ ಕಂಡೆ ನಡುವಿನೊಡ್ಯಾಣವನು ಕಂಡೆಜಡಿದ ಮಣಿಗಣ ಭೂಷಣನ ಕಂಡೆ ಜಡಜನಾಭನ ಮೂರ್ತಿಯ ಕಂಡೆ 7 ಅಂದದೀ ಕಾಲ್ಗಡಗವ ಕಂಡೆ ಸುಂದರ ಪಾದಗಳ ಕಂಡೆಮಂದಹಾಸ ಮುಖಾಬ್ಜ ಕಂಡೆ ಇಂದಿರೆಯ ರಮಣನ ಕಂಡೆ 8 ಆಗಮ ಶೃತಿ ಘೋಷವ ಕಂಡೆ ಭಾಗವತರಾ ಮೇಳವ ಕಂಡೆಬಾಗಿಲಾ ಬಲ ಹಸ್ತವ ಕಂಡೆ ಭಾಗೀರಥಿಯಾ ಪಿತನವ ಕಂಡೆ 9 ಚಿನ್ನದ ಕೂಪವನೂ ಕಂಡೆ ಅನ್ನಪೂರ್ಣಾದೇವಿಯ ಕಂಡೆರನ್ನದ ಹರಿವಾಣವ ಕಂಡೆ ಉಂಬುವ ವೈಭವವನು ಕಂಡೆ 10 ಕಪ್ಪದ ಕಣಜವನೂ ಕಂಡೆ ತಪ್ಪದೇಹಾರುವವರನು ಕಂಡೆಇಪ್ಪತ್ತು ದುಡ್ಡಿಗೆ ತೀರ್ಥ ಒಪ್ಪಿಲೇಮಾರುದನುರನು ಕಂಡೆ 11 ಸಾಸಿರ ನಾಮಗಳ ಒಡೆಯಾ ವಾಸುದೇವಾಚ್ಯುತನ ಕಂಡೆಕಾಸಿಗೆ ಕೈಚಾಚುವಂಥ ಕೇಸಕ್ಕ ತಿಮ್ಮಪ್ಪನ ಕಂಡೆ 12 ಆವ ಜನುಮದ ಸುಕೃತವೋ ಎನಗೆ ಭೂವೈಕುಂಠವನ್ನೇ ಕಂಡೆಶ್ರೀವಿಧಿಭವಾದಿ ವಂದ್ಯ ಐಹೊಳಿ ವೆಂಕಟೇಶನ ಕಂಡೆ 13 ಶುಭ ಮಂಗಲಂ ಸಿರಿಗೆಜಯ ಪುದವೀ ಪದ ಕೇಳಿ ಪೇಳಿದರೆ ಒಲಿದು ಫಲವೀವ ಕುಲಸ್ವಾಮಿ ಅವರೀಗೆ 14
--------------
ಐಹೊಳೆ ವೆಂಕಟೇಶ
ತಿರುಮಣಿ ಧರಿಸಿದ ತೀರ್ಥರ ಕಂಡರೆ ತಿರುವಡಿಗಳಿಗೇ ಮಣಿಯುವುದು ಪ ಗುರುತರ ಶ್ರೀಪಾದತೀರ್ಥಸೇವನ ದುರಿತ ಹರವು ತಾ ಪಾವನವು ಅ.ಪ ದೇವರ ಕಡೆಯವರಿವರೆಂದೆನ್ನುತ ಕಾವನ ಕತೆಗಳ ಕೇಳುವುದು ಭಾವಿಸಿ ಭಾಗವತರ ಸಹವಾಸವು ಶ್ರೀವರನೊಲಿಯುವ ಕಾರಣವು1 ಇವರ ದರ್ಶನವು ಪುಣ್ಯಪ್ರದವು ಪವಿತ್ರರಿರುವೆಡೆ ವೈಕುಂಠ ಭುವಿಸುರಪೂಜನ ಹರಿಗಾನಂದವು ಸುವಿಮಲ ಚರಿತರು ಶುಭಕರರು 2 ಶಂಖ ಚಕ್ರಗಳ ಭುಜದಲಿ ಧರಿಸಿ ಪಂಕಜ ತುಳಸೀಮಣಿ ಕೊರಳೊಳ್ ವೇಂಕಟ ಶ್ರೀರಂಗ ವರದ ನಾರಾಯಣ ಕಿಂಕರರೈ ಜಾಜೀಶನಿಗೆ 3
--------------
ಶಾಮಶರ್ಮರು
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತಿಳಿವಳಿಕೆಯಲಿ ನಡಿ ಮನುಜಾ ಯಮ-ನಲಿ ಆಗೊ ಭವಣೆಯು ತಪ್ಪದು ನೈಜಾ ಪ. ಸುಳ್ಳು ಮಾತುಗಳಾಡೋರಿಲ್ಲೆ ನಿನ್ನಹಲ್ಲು ಕಿತ್ತಿಸಿ ಕಡಿ ಘಾಕುವರಲ್ಲೆಕಳ್ಳತನವ ಮಾಡೋದಿಲ್ಲೆ ಬೆನ್ನಸೆಳ್ಳಿಯಬ್ಬಿಸೆ ಕೈಯ ಕಡಿಸುವರಲ್ಲೆ 1 ದತ್ತಾಪಹಾರ ಮಾಡೋದಿಲ್ಲೆ ಜಿಂಹ್ವಕತ್ತರಿಸುವರೆಲೊ ಅಂತಕರಲ್ಲೆವೃತ್ತಿಛೇದನ ಮಾಡೋದಿಲ್ಲೆ ನಿನ್ನಎತ್ತಿ ಹಾಕುವರೊ ಕುಂಭೀಪಾಕದಲ್ಲೆ 2 ಪರಸತಿಯರನಪ್ಪೋದಿಲ್ಲೆ ನಿನ್ನಉರಿವ ಉಕ್ಕಿನ ಕಂಭ ತೆಕ್ಕಿಸೋರಲ್ಲೆಮರವಿ ಮೋಸವ ಮಾಡೋದಿಲ್ಲೆ ನಿನ್ನಪರಿಪರಿ ಭವಣಿಯ ಬಡಿಸುವರಲ್ಲೆ 3 ಪ್ರಾಣಹಿಂಸೆಯ ಮಾಡೋದಿಲ್ಲೆ ಕಲ್ಲಗಾಣದೊಳಗೆ ಇಕ್ಕಿ ತಿರಗಿಸೋರಲ್ಲೆಮಾನಿನಿಯರ ನೋಡೋದಿಲ್ಲೆ ಶಸ್ತ್ರಪೋಣಿಸಿ ಕಂಣಾ ಮೀಟಿಸುವರೋ ಅಲ್ಲೆ 4 ಹೇಸಿ ವಿಷಯ ನಂಬೋದಿಲ್ಲೆ ಸೀಸ ಕಾಶಿ ಹೊಯ್ಯುವರೆನೊ ನಿನ್ನ ಬಾಯಲ್ಲೆದೂಷಣ ನಿಂದಗಳಿಲ್ಲೆ ಬಲುದೋಷಿಯೆನ್ನುತ ನಿನ್ನ ಘಾಸಿಪರಲ್ಲೆ 5
--------------
ಐಹೊಳೆ ವೆಂಕಟೇಶ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ತುಪಾಕಿ ಬಾರೊ ಮಾಡೊ ಮನುಜ ತುಪಾಕಿ ಬಾರೊ ಮಾಡೊ ಪ ತುಪಾಕಿ ಬಾರೊ ಮಾಡೊ ಸೊಬಗಿನಿಂದ ನೀ ಭುಜಗಶಯನ ಶ್ರೀಹರಿಯ ಧ್ಯಾನವೆಂಬ ಅ.ಪ ಚಿತ್ತಶುದ್ಧಿಯೆಂಬ ಮದ್ದು ತುಂಬಿ ಭರ್ತಿಮಾಡಿಕೊಳವೆಯ ಸತ್ಯಗುಣವೆಂಬ ಛಡಿ ಪಿಡಿ ದೊತ್ತಿ ಜಡಿಯೊ ಭಕ್ತಿ ಬಾಹ್ವಿನಿಂದ ಎತ್ತಿ ಸಾಮಥ್ರ್ಯದಿ ಮಿಥ್ಯದೇಹವನು ಹತ್ತಿ ಬೇಂಟೆನಾಡೊ 1 ಅಂಟಿಕೊಂಡು ಬರುವ ಬೇಗ ತಿಳಿ ಎಂಟು ಕೋಣನ ಸುಳಿವ ಗಂಟಲಕ್ಕೆ ಹಾರುತಿರುವ ಆರುಹುಲಿ ಬಂಟನಾಗಿ ತರಿಯೆಲವೊ ವೈ ಕುಂಠನ ಕೃಪೆಯೆಂಬ ಬಂಟಬಲವು ಕೂಡಿ ಬೇಂಟೆನಾಡೆಲೊ 2 ಮೂರುಮಂದಿರವ ಕಟ್ಟಿಕೊಂಡು ಧೀರನಾಗಿ ನಲಿಯೊ ಸಾರಿಬರುವ ಏಳು ಕೊಳ್ಳಗಳ ಹಾರಿ ಮುಂದಕೆ ನಡೆಯೊ ಘೋರ ದುರ್ಗುಣ ಮೃಗ ಸೂರೆಮಾಡಿ ಮಹಧೀರ ಶ್ರೀರಾಮನ ಚಾರುಚರಣ ಸೇರು 3
--------------
ರಾಮದಾಸರು
ತುಂಬಿ ಬಂದಾಗ) ನಂಬಿದೆನೊ ಸ್ವಾಮಿ ನಂಬಿದೆನೊ ಪ. ಅಂಬುಜಾಕ್ಷ ಸ್ವಪ್ನದಿ ನೀ ತುಂಬಿದಾನಂದ ವಾರ್ತೆಯ ಅ.ಪ. ಈರೇಳು ಲೋಕದ ಜನಕೆ ಮೂರಾವಸ್ಥೆಗಳಲಿ ನೀನೆ ಪ್ರೇರೇಪಿಸುವನೆಂದು ವೇದ ಸಾರವಾಗಿದೆ ನಾರದಾದಿ ಸಕಲ ಮುನಿ ವೀರರೆಲ್ಲ ಸ್ವಪ್ನವು ನಿ- ಸ್ಸಾರವಲ್ಲವೆಂದು ಪೇಳ್ವಾಧಾರದಿಂದ ಭ್ರಮೆಯ ಬಿಟ್ಟು 1 ನಾನು ನನ್ನದೆಂಬ ಬಹು ಹೀನ ಮತಿಯ ಪೇಳ್ವ ನರಗೆ ತಾನಾಗಿ ಬಂದುಸುರಲನುಮಾನಕರವೆಂದು ಶ್ರೀನಿಕೇತನ ನಿನ್ನ ಚರಣ ಮಾನಿಯೆಂದು ಮನ್ನಿಸಿ ಸ್ವಪ್ನಾನುಸರಿಸಿ ಶುಭವ ಪೇಳಿ ದೀನಭಾವ ಕಳೆವಿಯೆಂದು 2 ಇಂದಿರೇಶ ಎನ್ನೊಳಿರುವ ಕುಂದನೊಂದನೆಣಿಸದೆ ಈ ಅಂದದಿಂದಲೆಂದೆಂದಿಗು ತಂದೆ ಕರುಣಿಸು ಸುಂದರಾಂಗ ಶೇಷಗಿರಿ ಮಂದಿರ ನಿನ್ನ ಪಾದಾರ ವಿಂದ ಭಕ್ತಿ ಇತ್ತು ನಿತ್ಯಾನಂದಗೊಳಿಸಿ ಸಲಹೊ ಬೇಗ 3
--------------
ತುಪಾಕಿ ವೆಂಕಟರಮಣಾಚಾರ್ಯ
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು
ತುಳಸಿ ತುಳಸಿ ಪೂಜೆ ಮಾಡಿ ಹರಿ ಪ್ರೇಮದ ಪ. ಹಳದಿ ಕುಂಕುಮ ಪರಿಮಳದ ಗಂಧದಿ ಅಂಗಳದಿ ಶೋಭಿಪ ಹರಿಸತಿ ಅ.ಪ. ಆದಿಯಲಿ ತಾ ಮೋದದಿಂದಲೆ ಮಾಧವ ಪ್ರಿಯೆಯನು ದ್ರೌಪದಿ ಪೂಜಿಸೆ ಮೋದದಿಂದಕ್ಷಯ ಪಾತ್ರೆಯೊಳ್ ಪಾಕವ ಸತಿ ತುಳಸಿ 1 ಪರಿಪರಿ ಭಾಗ್ಯಕೆ ಹಿರಿಮೆ ಶ್ರೀ ತುಳಸಿ ಯೆಂ ದರುಹಿದ ನಾರದ ವರ ವಚನವು ಎಂದು ಪರಮಾದರದೊಳು ಪೂಜಿಸಿ ತುಳಸಿಯ ಹರಿಗೆ ಅರ್ಪಿಸೆ ಹರುಷವ ಕೊಡುವ 2 ಉದಯ ಕಾಲದಿ ಮುದದಿ ಪೂಜಿಸಿ ಮಧುರ ಸ್ವರದಿ ಮಾಘದ ಮಾಸದಲಿ ಮುದದಲೊಂದಿಸೆ ವದಗಿದಾಪತ್ತನು ಚದರಿಸಿ ಕಳೆದು ಶ್ರೀ ಶ್ರೀನಿವಾಸನ ಮುದದಿ ತೋರುವ ಶ್ರೀ ತುಳಸಿ 3
--------------
ಸರಸ್ವತಿ ಬಾಯಿ
ತುಳಸಿ ನಿನ್ನ ಭಜಿಸುವೆ | ಬಳಸಿ ಬಳಸಿ ನಮಿಸುವೆ ಪ ಕೊಳಲಬಾಲನರಸಿಯೇ | ನಳಿನವಿಸರಗಂಧಿಯೇ ಅ.ಪ ಗಾನಕೊಲಿದು ನಲಿವಳೇ | ಜ್ಞಾನವಿತ್ತು ಕಾವಳೆ ನಿನ್ನಕರುಣೆ ಕೃಷ್ಣನೊಲವು | ನಿನ್ನಸ್ಮರಣೆ ಪಾಪಹರವು 1 ಮಂಗಳಾಂಗಿ ತುಳಸಿದೇವಿ ರಂಗಗಿರಿಯ ನೀವದೇವಿ ಮಾಂಗಿರೀಶ ದಯಿತೆ ಮಹಿತೆ ಇಂಗಿತಾರ್ಥವೀವ ಮಾತೆ 2 ಬೃಂದಾವನ ದಿವ್ಯಸದನೆ ಇಂದೀವರ ಭವ್ಯವದನೆ ಕುಂದಾವಳಿ ಸದೃಶರದನೆ ನಂದಾತ್ಮಜ ಮನಮೋಹನೆ 3 ಸರಸವಿರಸಭರಿತೆ ನಮಿತೆ ಪರಮಚತುರೆ ಸುರಸನ್ನುತೆ ಮುರಳಿಗಾನಲಸಿತೆ ಮಾತೆ ವಂದೆ ಮಾಂಗಿರೀಶಸಹಿತೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತೆರಳಿ ಪೋದರಿಂದು ಪರಮ ಪದವನರಸುತ ಪ ಸಿರಿ ಶೇಷದಾಸಾರ್ಯರು ಅ.ಪ. ಸಿರಿಯುಕ್ತ ರಕಾಕ್ಷಿ ವರುಷ ಭಾದ್ರಪದಸಿತ ವರಪೌರ್ಣಿಮಾ ಸಹಿತವಾದ ಕವಿವಾರದಿ ಸರು ನಿಶಿಯೊಳು ಶತತಾರ ನಕ್ಷತ್ರ ಬರುತಿರೆ ನರಹರಿಯ ಚರಣಕಾಂಬ ಕಡು ತವಕದಿಂದ 1 ತಂದೆ ಮುದ್ದುಮೋಹನ ದಾಸವರ್ಯರಿಂದ ಕುಂದುರಹಿತನಾದ ಪ್ರಾಣನಾಥವಿಠಲ- ನೆಂದು ಅಂಕಿತೋಪದೇಶವನು ಕೈಕೊಂಡು ಬಂಧುರವಾದನೇಕ ಪದಗಳನು ರಚಿಸಿ 2 ದಾಸವೃತ್ತಿಯ ಕಂಡು ದೇಶ ದೇಶವ ಸುತ್ತಿ ಕರವ ನೀಡದೆ ಲೇಸು ಮಾಡುತಲಿ ಸಚ್ಛಿಷ್ಯರಿಗೆ ತತ್ತ್ವೋಪ- ದೇಶವನು ಪರಮ ಸಂತೋಷದಿಂದಗೈದು 3 ಆಶಪಾಶವ ತೊರೆದು ಮೀಸಲು ಮನರಾಗಿ ವಾಸುದೇವನ ನಾಮ ಸೋಸಿನಿಂದ ಭಜಿಸಿ ಸಾಸುವೆಯಷ್ಟಾದರಾಯಾಸವನುಪಡದೆ ಈ ಶರೀರ ವಿಶ್ವೇಶನಾಧೀನವೆಂದು 4 ಅಂಗೋಪಾಂಗವ ಮರೆದು ನಿಸ್ಸಂಗಯುತರಾಗಿ ಕಂಗಳನು ಮುಚ್ಚುತ ಭಂಗವಿಲ್ಲದ ಸುಖವ ಹಿಂಗದೆ ಕೊಡುವಂಥ ಮಂಗಳನ ಶ್ರೀ ರಂಗೇಶವಿಠಲನಂತರಂಗದಿ ನೋಡುತ5
--------------
ರಂಗೇಶವಿಠಲದಾಸರು
ತೆರಳಿ ಪೋದರು ದಿವ್ಯ ನರಹರಿಯ ಪುರಕೆ ಶ್ರೀ ವರತಂದೆ ಮುದ್ದುಮೋಹನರೂ ಪ. ಕರಿಗಿರಿ ಕ್ಷೇತ್ರದಲಿ ತೊರದು ಭೌತಿಕ ದೇಹ ಪರಮ ಉಲ್ಲಾಸದಿಂದಾ ನಂದಾ ಅ. ಪರಿಪರೀ ಪೂಜಿಸಿದ ಪರಮ ಭಕ್ತರಿಗೆ ತಾವ್ ತೆರಳುವೋಪರಿ ತಿಳಿಸದೇ ಪರಮ ಕರುಣಾಳು ಹೆಂಗರುಳಿನಾ ಖಣಿ ಎಂಬ ತೆರವೆಲ್ಲರಿಗೆ ಮರೆಸದೇ ಪರಮಸುಜ್ಞಾನಿಯಾದಂಥ ಶಿಷ್ಯರಾ ಕರೆಸಿ ಅಗಲಿಸಿಕೊಳ್ಳದೇ ಪರಮ ಸಾಧ್ವೀಪತ್ನಿ ವರ ಪುತ್ರರಿರುತಿರಲು ಕಿರಿಶಿಷ್ಯನೊಬ್ಬನೆದುರೊಳ್ | ಜವದೊಳ್ 1 ಎಂಭತ್ತು ಮೇಲೆರಡು ವತ್ಸರವು ಧರಣಿಯೊಳು ಸಂಭ್ರಮದಿ ಧೃಡ ಕಾಯದೀ ತುಂಬಿ ತತ್ವಾಮೃತವು ಸುಜನರಾ ಹೃದಯದಲಿ ಕುಂಭಿಣಿಯೋಳ್ ದಾಸತ್ವದೀ ನಂಬಿಕೆಗಳಿತ್ತು ಸುಜ್ಞಾನಿಗಳಿಗಂಕಿತವು ಅಂಬುಜಾಕ್ಷನ ನಾಮದೀ ಒಂಭತ್ತು ವರ್ಷದಿಂ ಬೆಂಬಿಡದೆ ಕಾಯ್ದೆನ್ನ ಕುಂಭಿನಿಯ ತೊರೆದು ಈಗಾ | ಬೇಗಾ 2 ಶಾಲಿಶಕ ಸಾಹಸ್ರ ಅಷ್ಟ ಶತ ಅರವತ್ತು ಮೇಲೆರಡು ವಿಕ್ರಮದಲೀ ಕಾಲ ಮಧ್ಯಾಹ್ನ ಚೈತ್ರದ ಶುದ್ಧ ಶ್ರೀ ರಾಮ ನವಮಿ ಭೌಮವಾಸರದಲಿ ಆಲಿಸುತ ದಿವ್ಯ ಮಂತ್ರ ಶ್ರವಣ ಕೀರ್ತನವ ಶೀಲ ಶ್ರೀ ಗೋಪಾಲಕೃಷ್ಣವಿಠಲನ ಪುರಕೆ ಆಯಾಸಗೊಳದೆ ಮುದದೀ ತ್ವರದೀ 3
--------------
ಅಂಬಾಬಾಯಿ