ಒಟ್ಟು 1587 ಕಡೆಗಳಲ್ಲಿ , 108 ದಾಸರು , 1227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಲ್ಲಭೆ ಬಲು ಸುಲಭೆ ಪ ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ 1 ಕೋಲ ಮುನಿಗೊಲಿದಮಲ ಮೃಗನಾಭಿ ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ2 ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ ರವರವ ನರಕದಲ್ಲಿ ಬವಣೆಪಟ್ಟ ಮೇಲೆ ಸವಿಯದಂತೆ ತಮಸುನಿವಹದೊಳಗೆ ಇಪ್ಪನು 3 ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ 4 ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ ನಿತ್ಯ ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ 5
--------------
ವಿಜಯದಾಸ
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾದಿರಾಜರ ಪದವ ಸ್ಮರಿಸುವೆ ಅ- ಗಾಧ ಮಹಿಮರ ಸದಯ ಹೃದಯರ ಪ ಸಾಧು ಜನರಿಗೆ ಬೋಧಿಸಿರ್ಪರ ಗೆದ್ದು ಮುತ್ತಿನ ಪೀಠವೇರ್ದರ 1 ಮೋದದಿಂದ ಚರಿಸಿ ತೀರ್ಥ ಪ್ರ- ಬಂಧ ಗ್ರಂಥವ ರಚಿಸಿ ಮಾನ್ಯರಾ ಗಿರ್ದ ಗುರುಗಳನೆಂತು ಬಣ್ಣಿಪೆ 2 ರಾಜಸಭೆಯೊಳು ರಾಜಭೀಷ್ಮಕ ತನುಜೆಯರಸನ ಸ್ತುತಿಪ ಕಾವ್ಯವ ಈ ಜಗತ್ತಿನೊಳ್ ಶ್ರೇಷ್ಠ ಕಾವ್ಯವೆಂ ದಿದನೆ ಗಜದೊಳು ಮೆರೆಸಿದರಸನು 3 ಒಂದುನೂರ ಇಪ್ಪತ್ತು ವರ್ಷದೊಳ್ ಸಿಂಧುಶಯನನ ಸೇವಿಸುತ್ತಲಿ ಇಂದ್ರದತ್ತ ವಿಮಾನದಿಂದಲಿ ಸತ್ಯಲೋಕವನೈದಿದ ಗುರುವರ 4 ರಾಜೇಶ ಹಯಮುಖಾನಂತ ಗುಣಗಳ ಪೊಗಳುತಿರ್ಪರ ರಾಗಶೂನ್ಯರ ಋಜು ಗಣೇಶರ ಜ್ಞಾನಪೂರ್ಣರ 5
--------------
ವಿಶ್ವೇಂದ್ರತೀರ್ಥ
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಾರಿಧಿ ಸುತಿಗೆ ಸಾರ ಸಂಗೀತದಿಂದಲಿ ಪ ಸಕಲ ವಸ್ತುವೆನಿಸಿ ಮುಕುತಿದಾಯಕ ಹರಿಗೆ ಭಕುತಿಯಿಂದಲಿ ಬಿಡದೆ | ಸದಾಪೂಜಿಪ ಸಿರಿಗೆ ವಿಖನ ಸಾದ್ಯಮರ ಗಣಕೆ | ಸುಖ ಕೊಡುವಳಿಗೆ ಮಕರಧ್ವಜನ ಮಾಲೆಯಾದ ರುಕುಮನನುಜಗೆ 1 ಚಾರುಶ್ರಾವಣ ಭಾರ್ಗವ ಶುಭವಾರದ ದಿನದಿ ಭೂರಿ ಭಕ್ತಿ ಭರಿತಳಾಗಿ ನಮಿಸುತ ಮನದಿ ನೀ ಆರಾಧಿಸೆ ಘೋಡಶ ಉಪಚಾರದಿ ಮುದದಿ ಕೋರಿಕೆಯನು ಗರೆಯುವ ವರಲಕ್ಷ್ಮಿಗೆ ಜಯದಿ2 ತಾಮರಸ ಸುಧಾಮಳಾದ ಸೋಮವದನಿಗೆ ಗೋಮಿನಿ ಸೌದಾಮಿನಿ ಸಮ ಕೋಮಲಾಂಗಿಗೆ ಶಾಮಸುಂದರ ಸ್ವಾಮಿಯ ಸುಪ್ರೇಮದ ಸತಿಗೆ ಕಾಮಿತ ಫಲದಾಯಿನಿ ಶ್ರೀ ಭೂಮಿಜೆ ರಮಗೆ3
--------------
ಶಾಮಸುಂದರ ವಿಠಲ
ವಾಸುದೇವ ಎನ್ನ ಘಾಸಿಗೊಳಿಸದೆ ನೀ ಸಲಹಲಿ ಬೇಕೊ ಪ. ಈ ಶರೀರದೊಳು ಮಾಯಾಸಹಿತ- ದಿ ಶ್ವಾಸನಾಡಿಯೊಳು ವಾಸವಾಗಿಹ ಅ.ಪ. ಅನಿರುದ್ಧ ನಾಮದಿ ಅನುದಿನ ಸಲಹುತಲಿ ದನುಜನಾದ ಪಾಪಾತ್ಮನ ನಾಭಿಯೊಳ್ ಅನಿಲನಿಂದಲಿ ಶೋಷಿಸುವೆ ಪ್ರದ್ಯುಮ್ನ 1 ಹೃದಯದಿ ರಕ್ತವರ್ಣದಲಿ ನೀನಿರುತಲಿ ಸಂಕರ್ಷಣನೆನಿಸಿ ಪದೋಪದಿಗೆ ಪಾಪಾತ್ಮಕನನು ಸುಟ್ಟು ಸದಮಲ ಹೃದಯವ ಶುದ್ಧಿಗೈಯ್ಯುವ 2 ಮಧ್ಯದಿ ನಾಡಿಯ ಮಧ್ಯದ ಹೃದಯ ಪದ್ಮ ಮಧ್ಯ ಎಂಟು ದಳದಿ ವಿದ್ಯಮಾನನಾಗಿ ಬಿಂಬನೆನಿಸಿ ನಿನ್ನ ಪೊದ್ದಿಹ ಜೀವರ ಭಾವನೆಯಂತೆ ಕಾಂಬೆ 3 ಕೊಳಲನೂದುವ ನಿನ್ನ ಚಲುವರೂಪದ ಕಾಂತಿ ಪೊಳಲೆಲ್ಲ ತುಂಬುವುದೊ ನಳಿನಾಕ್ಷಿಯರ ಕೂಡಿ ಥಳಥಳಪ ನಿನ್ನ ಬಲು ಸಂಭ್ರಮದೊಳು ಸುರರೆಲ್ಲ ಸ್ತುತಿಪರೊ 4 ಸಿರಿ ಸಹಿತದಿ ಇರುವೆ ವರನಾಡಿ ಮಾರ್ಗದಿ ಅರಿತು ಭಜಿಸೆ ಮುಕ್ತಿ ಪೊರೆಯುವ ಬಿರುದುಳ್ಳ ಗೋಪಾಲಕೃಷ್ಣವಿಠ್ಠಲ5
--------------
ಅಂಬಾಬಾಯಿ
ವಾಸುದೇವ ವಾರಿಜಾಕ್ಷನಾ ಸ್ತುತಿಸು ಮನದಿ ಪ ಸಾಸಿರನಾಮದೊಡೆಯ ಸಕಲಲೋಕಕರ್ತನಾದ ಸುಜನ ಪೋಷಕ ಭಕ್ತವಿಲಾಸ ಅ.ಪ ಪಂಕಜೋದರ ಪರಮ ಪಾವನ ಸರ್ವಜಗವ ಬಿಂಕದಿಂದ ಪೊರೆವ ದೇವನಾ ಶಂಕೆಯಿಲ್ಲದ ದನುಜ ಮರ್ದನನಾದ ತನ್ನ ಕಿಂಕರರÀನು ಬಿಡದೆ ಕಾಯುವಾ ವೆಂಕಟಾದ್ರಿ----ದ ವೇಣುನಾದದಲಿ ಬುಧವಂದ್ಯ ಶಂಕರಾದಿ ದೇವ ದೇವ ಶರಧಿಶಯನ ಶಾಶ್ವತನಾದ 1 -----ಶ್ವ ರೂಪನಾ ಎಂದು ಎಂದಾನಂದ ದಿಂದ ಅನುದಿನ ಚಂದದಿಂದ ---ಸನಾ |----ಭವ ಬಂಧಕವನೆ ಪರಿಹರಿಸುವನಾ ಕಂದ ಕೂಗಲು ಕಂಭದಿಂದಾ ಬಂದ ನಾರಸಿಂಹನ ಮೂರ್ತಿ 2 ----------ಮಹಾನುಭಾವ ಕಂಡ ಮುನಿಗಳಂತರ್ಭಾವನಾ ಕುಂಡಲೀಶÀ ಭೂಷಣ ಪ್ರೀಯನಾಕರ ಘನಾ ಕೋದಂಡಧರ ಶ್ರೀರಾಮನಾದನಾ ಪುಂಡಲೀಕ ವರದಹರಿ-----ತನಾದ ವೇದವೇದ್ಯ ಅಂಡಜನ--------ಹರಿ 'ಹೊನ್ನಯ್ಯ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ವಿಘ್ನೇಶಾ - ಪಾಲಿಸೊ - ಎನ್ನ - ವಿಘ್ನೇಶಾ ಪ ವಿಘ್ನೇಶ ಪಾಲಿಸೊ ಯೆನ್ನಾ | ದೋಷಭಗ್ನವ ಗೈಸಯ್ಯ ಮುನ್ನಾ | ಆಹಲಗ್ನವಾಗಲಿ ಯೆನ್ನ ಮನ ಆದೀಂದ್ರಿಯಗಳುಯಜ್ಞೇಶ ಶ್ರೀಹರಿ ಪದದ್ವಯ ವನಜದಿ ಅ.ಪ. ಶಿರಿವ್ಯಾಸ ಹೃದ್ಗತ ಅರ್ಥಾ | ನೆರೆಅರಿತು ಲಿಖೀಸಿದೆ ಗ್ರಂಥಾ | ನೋಡುಕರುಣಾಳು ಹರಿಕೃಪಾ ಪಾತ್ರಾ | ಬಾಗಿಶರಣೆಂಬೆ ತಿಳಿಸ್ಯದರರ್ಥಾ | ಅಹತಾರಕಾಂತಕನನುಜ | ವೀರ ವೈಷ್ಣವ ನಿನ್ನಪರಮಾನುಗ್ರಹವನ್ನ | ಕರುಣಿಸಿ ಕಾಯೆನ್ನ 1 ಚಾರುದೇಷ್ಣನ ನಾಮದಲ್ಲೀ | ಅವತಾರ ಮಾಡಿದೆ ರುಕ್ಮಿಣೀಲಿ | ಸಿರಿಅರಸನಾಜ್ಞೆಯ ಪೊತ್ತು ಅಲ್ಲೀ | ದೈತ್ಯದುರುಳರ ತರಿದ್ಯೋಧುರದಲ್ಲೀ | ಅಹಧರೆಯ ಭಾರವ ನಿಳುಹಿ | ಮೆರೆದಂಥ ಗುರುವರಪರಮ ಕಾರುಣ್ಯದಿ | ಹರಿಸೆನ್ನ ಭವತಾಪ 2 ಶೇಷಶತ ದೇವೋತ್ತಮಾ | ಬಾಪುಶ್ರೀಶನ ನಾಭಿಯೆ ಧಾಮಾ | ವಿಶ್ವೋಪಾಸಕ ಖೇಶ ನಿಸ್ಸೀಮಾ | ಪ್ರಾಣಾವೇಶಯುತನೆ ಗುಣಧಾಮಾ | ಅಹಮೂಷಕ ವರವಾಹ ಭೇಶ ಗರ್ವಹರಶ್ರೀಶನ್ನ ಹೃದಯಾವ | ಕಾಶದಲಿ ತೋರೊ 3 ಪರಿ | ಶುದ್ಧ ಭಕ್ತಿಯನಿತ್ತು 8 ಸಿರಿ ರಮಣನಾ | ಗುರು ಗೋವಿಂದ ವಿಠಲಾಭಿಧನ್ನಾ | ನಿಲ್ಲಿಸಿಅವಿರತವನ ಧ್ಯಾನವನ್ನಾ | ಆಹಗೈವಂಥ ಸೌಭಾಗ್ಯ | ಪಾಲಿಸೊ ವಿಘ್ನೇಶಶ್ರೀವರನಂಘ್ರಿ ಸರೋಜ | ಭೃಂಗನೆ ಕರುಣೀ 5
--------------
ಗುರುಗೋವಿಂದವಿಠಲರು
ವಿಜಯರಾಯ ಭಜಿಸೋ ಹೇ ಮನುಜಾ ನೀ ಪ ಪಾದ ಭಜಿಸುವ ಮನುಜರ ವೃಜಿನ ವಾರಿಧಿಗೆ ಕುಂಭಜರೆನಿಸಿದ ಗುರು ಅ.ಪ ಮೊದಲು ಬೃಗುಮುನಿರೂಪದಿ ಶೀ- ಘ್ರದಿ ಪೋಗಿ ಬರಲು ಶ್ರೀಹರಿ ಲೋ- ವಿಧಿ ವಿಷ್ಣು ಶಿವರೊಳು ಪದುಮನಾಭನಕಿಂತ ಅಧಿಕರಿಲ್ಲೆಂದು ನಾ ರದ ಮುನಿಗರುಹಿದ 1 ಜಗದೊಳು ಸಕಲ ಕ್ಷೇತ್ರ ತೀರ್ಥಗಳ ಮಹಿಮೆಯ ವರ್ಣಿಸುತ ಖಗರಾಜ ಗಮನ ಶ್ರೀ ಭಗವದ್ಗುಣಗಳನ್ನು ಬಗೆ ಬಗೆ ಪದಸುಳಾದಿಗಳಿಂದ ತುತಿಸಿದ 2 ಕಾಶಿಯೊಳಗೆ ಸಂಪ್ರಾಪ್ತ ಪುರಂದರ ದಾಸರಿಂದಲಿ ಅಂಕಿತ ಶೇಷಶಯನ ಶ್ರೀನಿವಾಸ 'ಕಾರ್ಪರನರ- ಕೇಸರಿ ' ಗತಿ ಪ್ರಿಯ ದಾಸರೆಂದೆನಿಸಿದ 3
--------------
ಕಾರ್ಪರ ನರಹರಿದಾಸರು
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿನತಾನುತ ಮಣಿವರೂಥ ಜನಕಸುತಾ ನಾಥಪ್ರೀತ ಪ ಕನಕಾಂಬರ ಪಾರ್ಥಸೂತ ವನಮಾಲಾ ಮಣಿರಾಜಿತ ಅ.ಪ ಶುಕ ಶೌನಕ ಪರಿಪೂಜಿತ ಸಕಲಾಗಮ ವೇದವಿದಿತ ವಕುಳಸುಮಾಭರಣಾಯತ ಸುಕರಾರ್ಜಿತ ಮೋಕ್ಷದಾತ 1 ಪಾಹಿ ಪಾಹಿ ಪರಮನಾಮ ಪಾಹಿ ಪಾಹಿ ಪೂರ್ಣಕಾಮ ಪಾಹಿ ಪಾಹಿ ದನುಜಭೀಮ ಪಾಹಿ ಪಾಹಿ ಮಾಂಗಿರಿಧಾಮ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ವಿಷ್ಣು ತೀರ್ಥರಪಾದ | ನಿಷ್ಠೆಯಿಂದಲಿ ಭಜಿಸೆಇಷ್ಟಾರ್ಥ ಸಲಿಸೂವರ್ | ಕೃಷ್ಣಪೂಜಕರೂ ಪ ಜಿಷ್ಣುಸಖ ಶ್ರೀ | ಕೃಷ್ಣ ಭಕುತರುಶ್ರೇಷ್ಠ ದಂಪತಿ | ಗರ್ಭಜಾತರುಸುಷ್ಠಜಯಮುನಿ | ಸೇವೆಯಿಂದಲಿಇಷ್ಟವರದಿಂ | ದುದಯರಾದರು 1 ಬಾಲ್ಯದಲ್ಲು ಪನೀತ | ಆರ್ಯರಿಂದು ಪದಿಷ್ಟಆರ್ಯ ಐಜೀವರ್ಯ | ಗುರುಕುಲವಸಿತ |ಕ್ರೌರ್ಯ ಹರಿಜಪ | ದೈರ್ಯದಿಂದಲಿವೀರ್ಯವತ್ತರ | ಜಪಿಸಿ ಗುರುಸುತವರ್ಯನಪಮೃತಿ | ಕಳೆದು ಗುರುವಿಂಮಾನ್ಯವಂತನು | ಎನಿಸಿ ಮೆರೆದ 2 ಮಲದ ಅಪಹಾರಿಯ | ಜಲಪ್ರವಾಹದಿ ನಿಂದುಘಳಿಗೆ ಇರಲು ಉದಯ | ವಲಿಸಿ ಮಧ್ವವಿಜಯಒಲಿಮೆಯಿಂದಲಿ | ಸೂರ್ಯನಘ್ರ್ಯವಕಾಲಮೀರದೆ | ತಾನು ಕೊಡುತಲಿಮೂಲಗ್ರಂಥವ | ತಿಳಿಯ ಬೋಧವಇಳೆಯ ಸುರರಿಗೆ | ಪೇಳ್ದ ಮಹಿಮಾ 3 ಅವಧೂತ ಚರ್ಯದಿ | ಅವನಿಯೊಳ್ಚರಿಸುತ್ತಭುವನ ಪಾವನ ಸುಧೆ | ದಿವಿಜರಿ ಗುಣಿಸೀ |ಶ್ರವಣ ಗೈಸುತ | ಸುಧೆಯ ಗ್ರಂಥವಅವನಿಯೊಳು | ತತ್ವಾರ್ಥಬೋಧಿಸಿಪ್ರವರ ಭೂಸುರ | ಮುಕ್ತಿಮಾರ್ಗದಹವಣೆ ಗೈದಿಹ | ಭುವಿಯದಿವಿಜ 4 ವನವನಚರಿಸುತ್ತ | ಮುನಿವಳ್ಳಿಯಲಿಮುನಿಯೋಗ್ಯವೆನಿಸುವ | ವಾನಪ್ರಸ್ಥಾಶ್ರಮದಿ |ಘನಸುವ್ರತವನೆ | ಅಸಿಯಪತ್ರದಿಮನವನಿರಿಸುತ | ಗಣ್ಯನಾದೆಯೊಅನಘ ಹರಿಕಾ | ರುಣ್ಯ ನಿನ್ನಲಿಗಣನೆಗೈಯ್ಯಲು | ಮನುಜಗಸದಳ 5 ಯತಿ ಸತ್ಯವರರಿಂದ | ಯತಿ ಆಶ್ರಮವ ಪೊಂದಿಕ್ಷಿತಿಯ ಸಂಚರಿಸುತ್ತ | ಅನ್ನಾಳಿಗಾಗಮೀಸೀ |ಹಿತನು ದೇಶಾದಿ | ಪತಿಯ ರೋಗವಹತಗೈದು ಅನ್ನವ | ಜೊತೆಲುಂಬುವಯತನ ಸಾಧಿತ | ಪ್ರಾಪ್ತಕ್ಷಾಮವಹತವ ಗೈಸಿದೆ | ರಮೆಯನೊಲಿಸೀ 6 ಬೋಧ | ಗ್ರಂಥಗಳ್ರಚಿಸೀ |ಮೋದದಿಂ ವೃಂದಾವನಸ್ಥರುಸಾದು ಸೇವೆಗೆ ಅಭಯನೀಡುತನಾದಗುರು ಗೋವಿಂದ ವಿಠಲನಮೋದ ಧ್ಯಾನಾಸಕ್ತರಾಗಿಹ7
--------------
ಗುರುಗೋವಿಂದವಿಠಲರು