ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏರ ರಂಗಕಿಷನ್ ದಾರಿ ಚೂಪರಾ ಮಾರ ಸುಂದರ ಪ ಮೊರೆ ಗಾಣರೆ ವಶವೊ ಮಾರಜನಕನೇ ಅ ಸುಜನ ಭಜಕನೆ 1 ರಾರಯನುಚು ಮೇರೆ ಮೂಮೆ- ಕರಿಯಲೇದೆರಾ ಕೋರ ಅನುಚು ತೇರೆ ಚರಣ-ಲೇದು ಕಾದುರಾ 2 ಓಡಿಬನ್ನಿ ಸುಜನರೆಲ್ಲ ಭಜನೆ ತ್ರಿಜಗ ಪೂಜಿತನೆಂಬೊ ಅಜನಪಿತನಗೂಡುವಾ 3 ಧರೆಯೊಳಧಿಕ ಮಧುರ ನಗರ ಪುರಿಯವಾಸನೇ ಯನ್ನ ಭವವಿನಾಶನೇ ಕೋಟಿ ರವಿಪ್ರಕಾಶನೆ ನಿನ್ನ ಚರಣ ಗುರುವು ತುಲಶಿರಾಮದಾಸನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಏಸು ಜನ್ಮದಲೇನು ಪುಣ್ಯಮಾಡಿದೆವೊ ಲೇಸಾಗಿನ್ನು ಸ್ವಾಮಿ ನಿಮ್ಮನ ಕಂಡೆವೊ ಧ್ರುವ ಸಾಧನವೆಂಥಾದೆಂಬುದು ನಾವಿನ್ನರಿಯೆವೊ ನಿಮ್ಮ ದರುಶನದಲಿ ಪಾವನಾದೆವೊ ಇದೆ ಸಕಲ ಸಾಧನದ ಸುಫಲವೊ ಸ್ವಾಮಿ ನಿಮ್ಮ ದಯಕ ಸಾನುಕೂಲವೊ 1 ಮನೋಹರ ಮೋಹನಮೂರ್ತಿ ಕಂಡೆವೊ ಕೃಷ್ಣ ನಿಮ್ಮನ ಬಿಗಿದಪ್ಪಿಕೊಂಡೆವೊ ನಾನಾಸವಿಯ ನೆಲೆಗಳೂಟ ಉಂಡೆವೊ ಎಂದೂ ಬಿಡದೆ ಹೃದಯಲಿಟ್ಟುಕೊಂಡೆವೊ 2 ಹೆಣ್ಣು ಪ್ರಾಣಿಗಳು ನಾವೇನು ಬಲ್ಲ್ಲಿವೊ ನಿಮ್ಮ ವಿನಾ ಇನ್ನೊಂದು ನಾವೊಲ್ಲಿವೊ ಚನ್ನಾಗೊಲಿದ ಭಾನುಕೋಟಿ ನಮ್ಮಲ್ಲಿವೊ ಚಿಣ್ಣಮಹಿಪತಿಗಿದೆ ಸಾಫಲ್ಯವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳಮ್ಮ ಕೊಲ್ಲಾಪುರಧೀಶೆ | ಇನ್ನೂ ಭಾಳ ಹೊತ್ತಾಯಿತು ವೈಕುಂಠವಾಸೆ ಪ. ಸೃಷ್ಟಿಸೆಂದೆನುತ ಆಂಬ್ರಣಿರೂಪದಿಂದ್ಹರಿ ಗಿಷ್ಟ ಸ್ತೋತ್ರವ ಮಾಡಿ ಎಬ್ಬಿಸಬೇಕು ಅಷ್ಟ ಭುಜದ ಲಕುಮಿ ಪ್ರಕೃತಿರೂಪಿಣಿಯಾಗಿ ಸೃಷ್ಟಿಕಾರ್ಯಕೆ ಅನುವಾಗಬೇಕು 1 ಸಕಲ ದೇವತೆಗಳ ಸೃಷ್ಟಿ ಮಾಡಲಿಬೇಕು ಮುಕುತಿಯೋಗ್ಯರ ಸೇವೆ ಕೊಳ್ಳಬೇಕು ಸಕಲರೂಪದಲಿ ಶ್ರೀಹರಿಯ ಸೇವಿಸಬೇಕು ಅಕಳಂಕÉ ಆದಿದೇವತೆ ಎನಿಸಬೇಕು 2 ಶ್ರೀ ಪದ್ಮಭವೆ ವೆಂಕಟೇಶನ ಕೂಡುತ ನೀ ಪರಿಪರಿ ಲೀಲೆಗೈಯ್ಯಬೇಕು ಗೋಪಾಲಕೃಷ್ಣವಿಠ್ಠಲನ ವಕ್ಷಸ್ಥಳ ವ್ಯಾಪಿಸಿ ಭಕ್ತರ ಕಾಪಾಡಬೇಕು 3
--------------
ಅಂಬಾಬಾಯಿ
ಏಳಮ್ಮ ತಾಯೆ ಮುದದಿಂದೆಮ್ಮನು ಕಾಯೆ ಕೋಳಿ ಕೂಗುತಲಿದೆ ಕೇಳಮ್ಮಯ್ಯಾ ಪ ಕಾಲನಾಮಕ ಸೂರ್ಯದೇವನ ರಥದ ಕೆಂ- ಧೂಳಿಯೇಳುವಂತೆ ಅರುಣೋದಯವಾಯ್ತು ಅ.ಪ. ಮರುತಸುತನೆದ್ದು ಪರಾಕ್ಹೇಳುತಿಹನು ಗರುಡನು ಹೊರಬಾಗಿಲೊಳು ಕಾದಿರುವನು ಪರಿವಾರದವರೆಲ್ಲ ಕರಕಟ್ಟಿ ನಿಂದಿಹರು ಹಿರಿಯ ಸೊಸೆ ವಾಣಿ ವಾರಿ ಕಲಶ ಪೊತ್ತಿಹಳು1 ಸಾರಭಕ್ತರು ಎಲ್ಲ ಸಾಲಾಗಿ ನಿಂದಿಹರು ಭೂರಿ ಕುತೂಹಲದಿ ನಿನ್ನ ದರುಶನಕಾಗಿ ವಾರಿಜಭವ ಮುಖ್ಯ ಸರುವ ದೇವತೆಗಳು ಸಾರಿ ಬರುತಿರುವರು ನೀನೇಳಮ್ಮಯ್ಯಾ 2 ನೀ ಪೋಗಿ ಆತನ ಕರಪಿಡಿದೆಬ್ಬಿಸಾದೊಡೆ ಶ್ರೀಪತಿಯು ಶೇಷತಲ್ಪದಿಂದೇಳನು ಅಪಾರಮಹಿಮ ಶ್ರೀ ರಂಗೇಶವಿಠಲನ ವ್ಯಾಪಾರಂಗಳನರಿತವರಿನ್ನ್ಯಾರಮ್ಮ 3
--------------
ರಂಗೇಶವಿಠಲದಾಸರು
ಏಳಯ್ಯ ಮಹಾರಾಜ ಬೆಳಗಾಯಿತೇಳಯ್ಯ ರಂಗ ಬಾ ಪ ಬಾಗಿಲಲಿ ಕೂಗುವರು ಸನಕಾದಿ ಮುನಿವರರು ಜಾಗರವ ಮಾಡಿರ್ಪ ಸುರರೆಲ್ಲ ಬಂದಾಯ್ತು ಯೋಗಿಗಳು ಪೊಗಳುವರು ನಿನ್ನಂಘ್ರಿಯ 1 ಲಂಕೆಯನು ಬಿಟ್ಟು ವಿಭೀಷಣನು ನಿಂತಿರ್ದ ಗಂಗೆಯನು ಬಿಟ್ಟೇಳು ಜಗದೀಶನೆ | ತಂಗಿಯನು ಬೇಡುವರೆ ಭಾವ ಪಾರ್ಥನು ಬಂದ ಮಂಗಳದ ನುಡಿ ನಿನಗೆ ಕೇಳಲಿಲ್ಲವೊ ಹರಿಯೆ 2 ಥಟ್ಟನೆ ಏಳು ಯಾದವರಿಗರಸ | ಸೃಷ್ಟಿಗೊಡೆಯನೆ ಕೇಳು ಭೂಸುರನು ರುಕ್ಮಿಣಿಯ ಪುಟ್ಟ ವಾಲೆಯ ತಂದ ನೀ ನೋಡು ನೋಡು 3 ಕೋಪಿಗಳರಸಾದಿ ದುರ್ವಾಸ ಮುನಿ ಬಂದ | ಇಂಪಾಗಿ ಪಾಡುತಿಹ ಸುರಮುನಿಯು ಬಂದ | ಕೋಪದೊಳೊದೆದ ಮುನಿ ಬಂದ ಬೇಗೇಳು ಪುಷ್ಪಶರ ಮಗ ಬಂದ ಬೇಗೇಳು ರಂಗ 4 ಸಿರಿದೇವಿ ನಿನ್ನಂಘ್ರಿಗಳನೊತ್ತ ಬಿಡಳೇನೊ | ಮಾರುತಿಯ ಜಪವಿನ್ನು ಮುಗಿಯಲಿಲ್ಲೊ | ನರರೆಲ್ಲ ನಗುವಂತೆ ಮಾಡದಿರೊ ರಂಗ 5
--------------
ವಿಶ್ವೇಂದ್ರತೀರ್ಥ
ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಏಳಯ್ಯ ಸ್ವಾಮಿ ಏಳಯ್ಯ ಪ ಏಳು ಇಂದ್ರಾದಿ ಸುರಾಳಿಗಳೆಲ್ಲ ನಿ- ನ್ನೂಳಿಗ ಬಯಸಿ ಕಾದಿರುವರೊ ಕೃಷ್ಣಾ ಅ.ಪ ವಕ್ಕಿತನಯ ಬೇಗ ಏಳಯ್ಯ ಜಾಕೃತಿ ತೋರುವೆ ಏಳಯ್ಯ 1 ಮುರಿದ ಮಹಾತ್ಮನೆ ಏಳಯ್ಯ ತರುಣಿಯರೊಡನೆ ರಾಸಕ್ರೀಡೆಯಾಡಿದ ಪರಮ ರಸಿಕನೀನು ಏಳಯ್ಯ 2 ಬಲ್ಲಿದನು ನೀನಂತೇಳಯ್ಯ ನಿಲ್ಲಿಸುವರೆ ಬೇಗ ಏಳಯ್ಯ 3 ದೇವಿ ಕೈ ಪಿಡಿಯಲು ಏಳಯ್ಯ ಭಾವಜಪಿತ ಕೃಷ್ಣ ಏಳಯ್ಯ 4 ನರಗೆ ಸಾರಥಿಯಾಗಿ ಜಯವ ಕೊಡಿಸಿ ಯುಧಿ | ಷ್ಠಿರಗೆ ಪಟ್ಟವಗಟ್ಟು ಏಳಯ್ಯ ನರನಂತೆ ನಟಿಸಿ ದಾಸರ ಪರಿಪಾಲಿಪ | ಗುರುರಾಮ ವಿಠಲನೆ ಏಳಯ್ಯ 5
--------------
ಗುರುರಾಮವಿಠಲ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ. ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ ಮನುಜರೆಲ್ಲರೂ ಕಾದಿಹರು ದರುಶನಕೆ ಸನಕಾದಿ ವಂದಿತ ಸರ್ವೇಶನೆಂತೆಂದು ವಿನಯದಿಂದಲಿ ನುತಿಪರು ಭಾಗವತರು 1 ತಾರೆಗಳಡಗಿತು ಕಮಲಗಳರಳಿತು ಪೂರ್ವ ದಿಕ್ಕಿನಲಿ ತೋರುವ ರವಿ ಉದಯ ಭೇರಿ ತುತ್ತೂರಿ ನಗಾರಿ ಬಾರಿಸುತಿದೆ ಸಾರಿ ಕೂಗುತಲಿದೆ ಕೋಳಿ ವೃಂದಗಳು 2 ಬಾಲಲೀಲೆಗಳಿಂದ ಗೋವಳರೊಡನಾಡಿ ಭಾಳ ಆಯಾಸವಾಗಿಹುದೆ ಕಂದಯ್ಯ ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ ಬಾಲಯತಿಗಳು ಪೂಜಿಸುವರೇಳಯ್ಯ 3 ಬಿಸಿಬಿಸಿ ನೀರು ಪಂಚಾಮೃತವೆರೆಯುತ ಹಸನಾದ ಪಾಲು ಸಕ್ಕರೆ ಉಂಡೆಗಳು ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4 ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ ಶ್ರುತಿ ವೇದತತಿಗಿಂತ ಚತುರ ಮಾತಿನೊಳು ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5
--------------
ಅಂಬಾಬಾಯಿ
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಏಳು ಮಾರುತಿ ಎಂದೆಬ್ಬಿಸಿದಳಂಜನೆಯು ಪ. ಶ್ರೀರಾಮರ ಸೇ[ವೆ]ಗೆ ಹೊತ್ತಾಯಿತೇಳೆಂದುಅ.ಪ. ಸೇತುವೆಯ ಕಟ್ಟಬೇಕು ಸಮುದ್ರವನೆ ದಾಟಬೇಕುಸೀತೆಗುಂಗುರವನ್ನು ಕೊಡಲಿಬೇಕುಪಾತಕಿ ರಾವಣನ ವನವ ಕೀಳಬೇಕುಸೀತೆಯನು ರಾಮರಿಗೆ ಒಪ್ಪಿಸಲಿಬೇಕು 1 ನಿಂತು ಮಾಡಲಿಬೇಕು ಅಜ್ಞಾತವಾಸವನುಅಂತು ಕೀಚಕರನ್ನ ಸವುರಬೇಕುಕಂತುಪಿತನಾಜ್ಞದಿಂ ಕೊಲ್ಲಬೇಕು ಕೌರವರಕುಂತಿ ಸುತನು ಎಂದೆನಿಸಬೇಕಯ್ಯ 2 ಮಧ್ವರಾಯರು ಎಂದು ಪ್ರಸಿದ್ಧರಾಗಲಿ ಬೇಕುಅದ್ವೈತಮತವನು ಗೆದ್ದು ಮುರಿಯಲಿ ಬೇಕುಶುದ್ಧಮಾಡಲಿ ಬೇಕು ಸಕಲ ಶಾಸ್ತ್ರಗಳನೆಲ್ಲಮುದ್ದು ಹಯವದನನ ದಾಸನೆನಿಸಬೇಕು 3
--------------
ವಾದಿರಾಜ