ಒಟ್ಟು 6014 ಕಡೆಗಳಲ್ಲಿ , 123 ದಾಸರು , 4195 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಸುಖಸಾರ ಮಾಯಾವಿದೂರ ಭಾವಜನಯ್ಯ ಭಕುತರ ಪ್ರಿಯಕರ ಪ ಕಾಯಕಾಂತಾರದೊಳು ನೋಯುತ ವಿಧ ವಿಧ ಬಾಯ ಬಿಡುವೆನಯ್ಯ ತೋಯಜಾಕ್ಷನೆ ನೋಡೊ 1 ಸಂಸಾರತೆರೆಯೊಳು ಹಿಂಸೆ ಪಡುತ ಮತಿ ಕಂಸಾರಿ ಕರುಣಿಸೊ 2 ಜಡಭವತೊಡರನು ಕಡೆಹಾಯ್ಸಿ ಕೊಡುಮುಕ್ತಿ ಕಡುದಯಾನಿಧೆ ಎನ್ನೊಡೆಯ ಶ್ರೀರಾಮನೆ 3
--------------
ರಾಮದಾಸರು
ಕಾಯೊನೀನೆ ಕರುಣದಿ ಪ ರಾಮರಾಮಯೆಂದು ಪೊಗಳುವನು ಮಹಾರಾಜ ಸಾರ್ವಭೌಮ ಪೂರ್ಣ ಕಾಮನೆ ದಶರಥಾವನೀಶ ಕುಮಾರ 1 ದೇವದೇವನೆ ಕೃಪಾವಲೋಕನದಿ ದೀನಜನರ ನೋಡೊ ನೀದಯಮಾಡೊ ನೀಡೋಯನ್ನದುರಿ- ಜಯಜಯ ಪ್ರಭೋ ಭಂಜನ ಜಗ ಜ್ಜೀವನ ನತಜನ ಸಂಜೀವನಸು- ಶುಭ ಕುಶೀಲವರತಾತ ಸುಪ್ರೀತ2 ಸರಿಸಿಜೋದ್ಭವಾದ್ಯಮರನಾಯಕ ಸಾಧುರಕ್ಷಸ್ಸದ್ಧರ್ಮ ಪಾಲಕ ಮನುಜವೇಷ ದುರ್ಜನ ಕಾಲ ಶರಧಿ ಸೇತು ಬಂಧನ ಕಂಜೇಕ್ಷಣ ಮಾಂ ಪಾಹಿ ರಘುವೀರ 3
--------------
ಗುರುರಾಮವಿಠಲ
ಕಾಯೋ ಕರುಣ ಕೃಪೆಯಿಂದ ಹರಿ ಮುಕುಂದ ಧ್ರುವ ಕರುಣಾನಂದದ ಸಾಗರ ಕರಿವರ ಶರಣಾಗತಜನರ ಮಂದಾರ ಪರಮ ಉದ್ಧಾರ ಸುರ ಸಂಸಾರಾಯದಾಗರ ಪರಾತ್ಪರ ತರಣೋಪಾಯದಾಧಾರ 1 ಅನಾಥ ಜನರಾಶ್ರಯ ನೀನೆ ನಿಶ್ಚಯ ಅನುಭವಾನಂದಾ ಹೃದಯ ಘನಮಯ ದಿನಕರಕೋಟಿ ಪ್ರಭೆಯೆ ಜನವನಲಿಹ್ಯ ಮುನಿಜನರ ಹೃದಯ ಅನುದಿನದಲಕ್ಷಯ 2 ವಿಹಿತವಿಚಾರದ ವಿವರ ಈಹ್ಯಶ್ರೀಧರ ಸ್ವಹಿತ ಸುಖದ ಸುಸಾರ ಬಾಹ್ಯಾಂತರ ಮಹಿಮೆ ನಿನ್ನದು ಅಪಾರ ಮಹೇಶ್ವರ ಇಹ್ಯ ಪರದ ದಾತಾರ ಮಹಿಪತಿ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಕರುಣಾನಿಧೆ | ಶ್ರೀ ಹರಿ | ಖಗವರ ಗಮನಾ ಪ ಘೋರ ಸಂಸಾರದ ತಾಪದಿ ನೊಂದೆ | ಭವ ಭಯ ಅಘಕುಲ ಶಮನಾ 1 ಜ್ಞಾನ ಧ್ಯಾನದ ನಿಜ ಸಾಧನವರಿಯೆ | ನೀನೆ ಗತಿಯೆನುತ ಮಾಡುವೆ ನಮನಾ2 ಗುರು ಮಹೀಪತಿ ಪ್ರಭು ಅನಾಥ ಬಂಧು | ಚರಣದ ಭಜನೆಯ ಲಿರಿಸೆನ್ನ ಮನ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಕರುಣಿಸಿ ಎನ್ನ ರಂಗಾ | ಬೇಗನೇ ಪಾದವದೋರಿಸಿ | ನಮನಕ ಭವಬಲಿಯನು ಬಿಡಸಿ ರಂಗಾ ಪ ಶರಣೆಂದು ಸಕಲರು ಬಂದು ಪೋಗುವಾ | ನಿನ್ನ ಮಹಾದ್ವಾರದಲಿ | ಇರುತಿಹ ನಿನ್ನಯ ಭಕುತ ಬಲೆಯಲಿ | ಇರಿಸಿ ನೀ ಇಟ್ಟು ಅಚಲದಲಿ ರಂಗಾ | ಸಂಬಳನಿತ್ತಿಹ ಧನವ ನಾನೊಲ್ಲೆ | ಬೇಡುವೆ ಒಂದÀನೋ ರಂಗಾ | ಹಂಬಲ ದಣಿವಂತೆ ನಾಮ ಭಾಂಡಾರವ | ಮಾಡೆನ್ನ ಆಧೀನವ ರಂಗಾ 1 ಕರಿದಲಿಧೃತಿ ಚಿತ್ತವನಿತ್ತು ಅನುದಿನಾ | ಹರಿಪಾದ ಸದ್ಬಕ್ತಿಯಾ ರಂಗಾ | ಮೆರೆವ ಮಂಟಪದೊಳು ನಿಲಿಸೆನ್ನ | ದುರಿತವ ತಟ್ಟದಂದದಿ ಪೊರೆಯೋ ರಂಗಾ2 ಇಹಪರದಲ್ಲಿ ಏಕೋದೇವನೆಂಬ ಮುದ್ರೆಯಾ ಭಾವದ ಬಲದಿಂದಲಿ | ಮಹಿಪತಿ ಸುತ ಪ್ರಭು ಕೊರಳಿಗೆ ಹಾಕಿನ್ನು | ಸಲಹು ನೀ ಕೃಪೆಯಿಂದಾ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಕಾಯೋ ಪ ಕಾಯೋ ಕಾಯೋ ಕಮಲಯತಾಕ್ಷ ಭವ ತೋಯಧಿಯೊಳು ಬಿದ್ದು ಬಾಯ ಬಿಡುವನ ಅ ಅದ್ವೈತ ತ್ರಯದಧ್ವ ಪ್ರವರ್ತಕ ಸದ್ವೈಷ್ಣವರ ಪದದ್ವಯತೋರಿ 1 ಸಂಜೆಯ ತೋರಿ ಧನಂಜಯನುಳುಹಿದ ನಿರಂಜನ ಮೂರ್ತೆ 2 ಸತ್ಯಕಾಮ ತವ ಭೃತ್ಯೆಗೆ ಬಂದಪ ಮೃತ್ಯು ಕಳೆದು ಸಂಪತ್ತು ಪಾಲಿಸಿದೆ 3 ಕುಕ್ಷಿಯೊಳಂದು ಪರೀಕ್ಷಿದ್ರಾಜನ ರಕ್ಷಿಸಿದಂತೆ ಪ್ರತಿಕ್ಷಣದಲಿ 4 ಎಲ್ಲರೊಳಿಹ ಕೈವಲ್ಯದರಸು ನೀ ಬಲ್ಲಿದನೆಂಬುದ ಬಲ್ಲೆ ಬಹು ಬಗೆ 5 ನೀ ದಯ ಮಾಡದಿರೀ ದಿವಿಜರು ಒಲಿ ದಾದರಿಸುವರೆ ವೃಕೋದರ ವಂದ್ಯ 6 ಅಧಮ ನಾನಹುದುದಧಿ ಮಥನ ಸ ನ್ಮುದ ಮುನಿಮತ ಪೊಂದಿದವರಣುಗನು 7 ಕ್ಷುದ್ರ ಭೂಮಿಪರುಪದ್ರವ ಕಳೆದು ಸು ಭದ್ರವೀಯೋ ಕ್ಷುದ್ರುಮದಂತೆ 8 ವೀತಭಯ ಜಗನ್ನಾಥ ವಿಠಲ ಸುಖೇತರ ಕಳೆದು ಮಹಾತಿಶಯದಲಿ 9
--------------
ಜಗನ್ನಾಥದಾಸರು
ಕಾಯೋ ತೋಯಜ ನೇತ್ರ ಪ ಸುಮಿತ್ರ ಪವಿತ್ರ ಚರಿತ್ರ ಅ.ಪ. ಮಾನವ ಜನುಮದಿ ನೀ ತಂದೆಯೊಎನ್ನ ಗ್ಲಾನಿಯ ಕಳೆದು ಸುಜ್ಞಾನವನಿತ್ತು 1 ಕಠಿಣ ಸಂಸಾರದ ಕಟು ಅನುಭವವ ಸೈಸೆಸಟಿಯಲ್ಲೋ ಇದ ಸಂಕಟವ ಪರಿಹರಿಸಿ 2 ಹೃದಯದಿ ನೆಲಿಸಿ ನೀ ಸದಾವಕಾಲದೊಳುಗದುಗಿನೊಳ್ಮೆರೆಯುವ ವೀರನಾರಾಯಣ 3
--------------
ವೀರನಾರಾಯಣ
ಕಾಯೋ ನೀ ಅನಸೂಯಾ ಪುತ್ರನೇ ಜೀಯಾ ದತ್ತಾತ್ರೇಯ ದೇವನೇ ಪ ಪತ್ರೇಂದ್ರ ಗಮನಾ ಪರಮಾನಂದಾ ಶತ ಪತ್ರದಳ ನಯನಾ ಕೇಶವಾ ಮಿತ್ರ ಶತಕೋಟಿ ಪ್ರಕಾಶ ಸುರೇಶನೇ ಅತ್ರಿ ಗೋತ್ರ ಸಮುದ್ಭವಾ 1 ಸರ್ವಾಧಾರವ್ಯಯ ತ್ರಯ ಮೂರು ಸರ್ವ ಲೋಕ ವ್ಯಾಪ್ತನು ಚಾರು ತತ್ವರಿತ ಸರ್ವಾತೀತ ಮುಕುಂದನೇ 2 ಯೋಗಿ ಜನರ ಮಾನಸ ಹಂಸಾ ಸಂತ ಗುಣ ಸಂಪನ್ನನು ಅನಂತ ರೂಪ ಮಹಿಪತಿ ನಂದನ ಪ್ರಭು ಅನಂತ ಮಹಿಮ ಶ್ರೀ ಕೃಷ್ಣನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಪ್ರಾಣೇಶ ಕೀಶಕುಲೇಶ ವಾಯುಸುತನೆಂದು ಮೆರೆವ ಜೀವೇಶ ಪ ಅಂಜನಾದೇವಿಯೊಳ್ ಜನಿಸಿಕೊಂಡಿರುವಿ ಅಂಜದೆ ಲಂಕೆಗೆ ಬೆಂಕಿ ಹಚ್ಚಿರುವಿ ಸಂಜೀವನವ ತಂದು ಕಪಿಗಳನುಳಿಸಿದಿ ಕಂಜಾಕ್ಷಿ ಸೀತೆಗುಂಗುರವ ತಂದಿತ್ತೆ 1 ಕುಂತಿದೇವಿಯ ಗರ್ಭದೊಳಗುದ್ಭವಿಸಿದಿ ಪಾರ್ಥರೊಳ್ನೀನಗ್ರಗಣ್ಯನೆಂದೆನಿಸಿ ಪಂಥದಿ ಮಗದಾಧಿಪತಿಯ ಸಂಹರಿಸಿ ಕಾಂತೆಯ ತಲೆಯ ಕೂದಲನೆ ಕಟ್ಟಿಸಿದಿ2 ಪಾಜಕ ಕ್ಷೇತ್ರದೊಳ್ ನೀನವತರಿಸಿ ರಾಜತಾಸನದಿ ಶ್ರೀಕೃಷ್ಣನನಿರಿಸಿ ರಾಜೇಶ ಹಯಮುಖ ಕಿಂಕರನೆನಿಸೀ ಮೂಜಗದಲಿ ಶ್ರೇಷ್ಠಗುರು ನೀನೆಂದೆನಿಸಿ 3
--------------
ವಿಶ್ವೇಂದ್ರತೀರ್ಥ
ಕಾಯೋ ಶ್ರೀಹರಿ ಪ ಕೈ ಮುಗಿವೆ ಮುರಾರಿ ಕರುಣದಿ ಅ.ಪ. ನೊಂದೆನೋ ಈ ಭವ ಬಂಧನದೊಳಗೆ ಶಿಲುಕಿ ಮುಂದಿದಕೇನೋ ದಾರಿ 1 ತುಂಬಿದ ಭಕ್ತ ಕು- ಟುಂಬಿ ನಾಚಿಕೆಯ ಕೊಂಬುವದೇನಿದ ಕುಸುರೊ2 ಎಷ್ಟು ನಿನಗೆ ಮೊರೆ- ಯಿಟ್ಟರೂ ಶ್ರೀದ- ವಿಠ್ಠಲ ಮನಸಿಗೆ ತಾರಿ 3
--------------
ಶ್ರೀದವಿಠಲರು
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲ ಪ ಏಳು ಏಳು ಎಂದು ಯಮನ ಆಳು ಬಂದು ಪಾಶವಿಕ್ಕಿ ಕಲ್ಲು ಮುಳ್ಳು ಮೇಲೆ ಎಳೆದು ಒಯ್ವ ಹೊತ್ತು 1 ಅಷ್ಟಪುರದ ಕಾವಲವರು ಕಟ್ಟ ಕಡೆಗೆ ತೊಲಗೆ ಬಾಯ ಬಿಟ್ಟು ಹೊರಗೆ ಜೀವ ಕೆಂಗಟ್ಟು ಹೋಗುವಂಥಕಾಲ 2 ದಾರಿಯೊಳಗೆ ಪಾಪಿಗಳನು ಘೋರ ಬಡಿಸಿ ದಂಡದಿಂದ ಗೊಯ್ವ ಹೊತ್ತುವ್ಯಾಳ್ಯಾ 3 ಹೆಂಡಿರಿಲ್ಲ ಮಕ್ಕಳಿಲ್ಲ ಬಂಧು ಬಳಗವಿಲ್ಲವಲ್ಲಿ ಕಾಲ 4 ಬುದ್ದಿವಂತರಾದರೆಚ್ಚರಿದ್ದು ಪಾಪವನ್ನು ಮಾಡ ಭವನಗೆಲವ ಹೊತ್ತು 5
--------------
ಕವಿ ಪರಮದೇವದಾಸರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲ ಮೃತ್ಯು ಗೆಲಿಯಲಿಲ್ಲ ಕಾಲ ಪ ಪೃಥ್ವಿಯಮೇಲೆ ಕೃತಕೃತ್ಯನಾಗಲು ಬಂದ ವೃತ್ತಾಂತ ತಿಳಿಯಲಿಲ್ಲಅ.ಪ ನಂಬಿಕೊಂಡೆಯಲ್ಲ ಈ ಜಗ ಬೆಂಬಲ ಬರೋದಲ್ಲ ಜಂಬಬಡುವಿ ಸುಳ್ಳೆ ಮನದ ಡಂಬವ ಬಿಡಲಿಲ್ಲ ಕುಂಭಿನಿಸುಖದ ಹಂಬಲದಲಿ ದಿನ ಶುಂಭತನದಿಗಳೆದಿಂಬಿಲ್ಲದ್ಹೋಗುವಿ 1 ಕುಮತಿಯ ಬಿಡಲಿಲ್ಲ ಮಾಯಮಮತ ಕಡಿಯಲಿಲ್ಲ ನಮಿಸಿ ಬಿಡದೆ ಸದಾ ಸುಮನಸರೊಳಗಾಡಿ ಭ್ರಮೆಯನಳಯವಿಲ್ಲ ಬಂದ ಸಮಯ ತಿಳಿಯಲಿಲ್ಲ ವಿಮಲಸುಖದನಿಜ ಕ್ರಮವ ತಿಳಿಯಲಿಲ್ಲ 2 ಆಸೆ ನೀಗಲಿಲ್ಲ ವಿಷಯದ್ವಾಸನ್ಹಿಂಗಲಿಲ್ಲ ಕ್ಲೇಶ ತೊಡೆಯಲಿಲ್ಲ ಲಂಪಟ ಮೋಸದಿಂದುಳಿಲಿಲ್ಲ ಶೇಷಶಯನ ಮಮ ಶ್ರೀಶ ಶ್ರೀರಾಮನ ದಾಸನಾಗಿ ಭವಪಾಶ ಗೆಲಿಯಲಿಲ್ಲ 3
--------------
ರಾಮದಾಸರು