ಒಟ್ಟು 11537 ಕಡೆಗಳಲ್ಲಿ , 136 ದಾಸರು , 5740 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಎಲೆ ಎಲೆ ಥೂ ಪರದೇಸಿ ನೀ ಸುಳ್ಳೆ ಸುಳ್ಳೆ ಮಾಡಬೇಡ ಚೌಕಾಸಿ ಪ ತಿಳಕೊಂಡು ನೋಡು ನೀನು ಸುಧಾರಿಸಿ ಬಲವಾಗಿ ಬರದೇನು ಹಿಂಬಾಲಿಸಿ ಅ.ಪ ಎಷ್ಟು ದುಡಿದಿ ಸತಿಸುತರಿಗಾಗಿ ಗಂಟು ಕಟ್ಟಿಕಟ್ಹ್ಹೂಳಿಟ್ಟಿ ಇವರಿಗಾಗಿ ಅಷ್ಟು ಬಿಟ್ಟು ನಡೀತಿದ್ದಿ ಹಾಳಾಗಿ ನಿನ್ನ ಇಟ್ಟು ಬಂದು ಉಣುತಾರೋ ಹೋಳಿಗಿ 1 ಕಣ್ಣು ಮುಚ್ಚ್ಯಾಟವನಾಡುತಿದ್ದಿ ನೀ ಬಣ್ಣಗೆಟ್ಟು ಖರೆಯೆನುತಿದ್ದಿ ಸುಣ್ಣದ್ಹರಳ್ಹೊತ್ತ ಕೋಣ ಹೋಗಿ ಭರದಿ ಕಂಡು ತಣ್ಣೀರಿನೊಳು ಬಿದ್ದು ಸತ್ತ ಗಾದಿ2 ಘಟ ಇದು ಪುಸಿಯು ಬರಿದೆ ಗಾಳಿಯ ಮಟ್ಟ ವಸುಧೇಯೊಳಧಿಕೆಂದು ತೊಡು ನಿಷ್ಠೆ ನಮ್ಮ ಅಸಮ ಶ್ರೀರಾಮನ ಪಾದ್ಹಿಡಿ ಗಟ್ಟಿ 3
--------------
ರಾಮದಾಸರು
ಎಲೆ ದೇವಿ ಇಂತು ಚಿಂತೆಯು ಯಾಕ| ಸುಲಭದಿ ತಂದು ತೋರುವೆ ನಿನ್ನರಸನಾ ಪ ನಳಿನಗಳಲಿ ಅಪರಾಧವಾಯಿತೆಂದು| ಮುಳಿದು ಬಿಂಕದಿ ಅಳಿಮೊರೆದು ತಾನೆದ್ದು| ಕಲಸಾರುವೇನೇ ನಿನ್ನಯ ತನುಗುಪವ| ತೊಲಗಿಬಿಟ್ಟು ನಿಲ್ಲುವನೇನೇ ರಂಗಾ1 ಹಣ್ಣಾಗಿ ರಂಜಿಸತಿಹಾ ಚೂತದ ಫಲವನ್ನು| ತ್ಯಜಿಸಿ ಬಂದ ತಪ್ಪಾಯಿತೆಂದು| ಉಣಲೋಲ್ಲದೇ ಶುಕಬಿಟ್ಟು ಪೋಪದೇನೇ| ಪೊಂಬಣ್ಣಾಧರಸವಿಯಾ ಬಿಟ್ಟು ನಿಲ್ಲುವನೇ2 ಘನ್ನ ಚಿಂತೆಯಬಿಟ್ಟು ಹರುಷದಲಿರು ತಾಯೆ| ಇನ್ನು ನಾ ಪೋಗಿ ನಾನಾ ಪರಿಯಿಂದಾ| ನಿನ್ನ ಬಳಿಗೆ ಒಪ್ಪಂತೆ ಮಾಡುವೆನೆ ಸಂ| ಪನ್ನ ಕೀರುತಿ ಮಹಿಪತಿ ಸುತ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಎಲೆ ಮನಸೆ ನಾಂ ಪೇಳ್ವ ಬುದ್ಧಿ ಮಾತುಗಳ ಕಲಿತು ಜಾಣನಾಗಿ ನಿಜಸುಖದಿ ಬಾಳು ಪ ಪರನಿಂದೆ ಬೆರೆಸದಿರು ನಿರುತರನು ಜರಿಯದಿರು ದುರಿತದೊಳಗುರುಳದಿರು ಪರಚಿಂತೆ ಮಾಡು ಗುರುಹಿರಿಯ್ಹರಳಿಯದಿರು ದುರುಳರೊಳಗಾಡದಿರು ಹರಿಯಶರಣರ ಸೇವೆ ಸ್ಥಿರವಾಗಿ ಮಾಡು 1 ಮರವೆ ಪರದೆಯ ಹರಿ ಅರಿವಿನಮೃತ ಸುರಿ ಸ್ಥಿರಜಾನ್ಞದೊಳು ಸೇರಿ ಹರಿಚರಿತ ಬರಿ ಹರಿದಾಟವನು ಮರಿ ಜರೆಮರಣದು:ಖ ತರಿ ಪರಮಹರುಷದಿ ಮರೆ ದುವ್ರ್ಯಸನ ತೂರಿ 2 ಕ್ರೋಧವನು ಕಡೆಮಾಡು ವಾದಬುದ್ಧಿಯ ದೂಡು ಸಾಧುಜನರೊಳಗಾಡು ಶೋಧನ ಮಾಡು ಖೇದವನು ಈಡ್ಯಾಡು ವೇದದರ್ಥವ ಮಾಡು ಪಾದಸೇವೆಯ ಮಾಡು ಮಾಧವನ ಕೂಡು 3 ಕಾಮಲೋಭವ ಕಡಿ ಭೂಮಿಮೋಹವ ತೊಡಿ ಭಾಮೆಯರ ಪ್ರೇಮ ಬಿಡಿ ಕ್ಷೇಮಪಥ ಪಿಡಿ ತಾಮಸದೂರಮಾಡಿ ಸಾವಧಾನದ್ಹಿಡಿ ಪಡಿ ನೇಮದ್ಹುಡುಕಾಡಿ 4 ಮೋಸಪಾಶವ ಗೆಲಿ ಕ್ಲೇಶಗುಣಗಳ ತುಳಿ ದಾಸಜನರೊಳು ನಲಿ ಶಾಶ್ವತವ ತಿಳಿ ಹೇಸಿಕ್ವಾಸನೆಯಳಿ ದೋಷರಾಸಿಯಿಂದುಳಿ ಶ್ರೀಶ ಶ್ರೀರಾಮನಲಿ ದಾಸನಾಗಿ ಸೆಳಿ 5
--------------
ರಾಮದಾಸರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಎಲ್ಯಾಡಿ ನೀ ಬಂದ್ಯೋ ಹರಿ ಫುಲ್ಲಲೋಚನ ಕೃಷ್ಣ ಧ್ರುವ ಬಲಿ ಮಹಿಮರನೆಲ್ಲ ಸಂರಕ್ಷಿಸಿ ಮಲ್ಲದೈತ್ಯರ ಹಲ್ಲು ಮುರಿದು ನೀ ಬಂದ್ಯೊ 1 ಸುಗಮ ಸುಪಥದೋರಿ ನಿನ್ನ ಉಗಮ ಸಾರಿ ನೀ ಬಂದ್ಯೊ ನಗ ನೆಗಹಿ ನಿಂದು ಜಗದೋದ್ಧಾರವ ಮಾಡಿ ನೀ ಬಂದ್ಯೋ 2 ಶರಣ ರಕ್ಷಕನಾಗಿ ನಿನ್ನ ಕರುಣ ನೀ ಬೀರಿ ಬಂದ್ಯೋ ತರಳಗೊಲಿದು ಧÀರಿ ಮೂರಡಿಯೆನೆ ಮಾಡಿ ಪರಶುಧರನಾಗಿ ಆಡಿ ನೀ ಬಂದ್ಯೊ 3 ಮೊರೆಯ ಹೊಕ್ಕವರಿಗೆ ಪದ ಸ್ಥಿತವನಿತ್ತುನೀ ಬಂದ್ಯೊ ಸುರರ ಸ್ಥಾಪನೆ ಮಾಡಿ ತುರುಗಳ ಕಾಯಿದು ಪರ ನಾರೇರ ವ್ರತವಳಿದು ನೀ ಬಂದ್ಯೋ 4 ನೀನೆ ರಾವುತನಾಗಿ ನಿನ್ನ ಖೂನ ನೀ ದೋರಿ ಬಂದ್ಯೊ ದೀನ ಮಹಿಪತಿ ಸ್ವಾಮಿ ಭಾನುಕೋಟಿ ತೇಜ ನೀನೆ ನೀನಾಗೆನ್ನ ಹೊರಿಯಲು ಬಂದ್ಯೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಯಾದರು ಮಾಡಬೇಕು ಕೆಲಸ ಪ ಅಲ್ಲೇನು ಇಲ್ಲೇನು ಬಲ್ಲಂಥಾವನಾದರೆ ತಾನು ಅ.ಪ ಶರೀರ ಸಂಬಂಧಿಗಳಿಗಾಗಿ | ಮೂರು ಕರಣದಿಂದಲಿ ಅನುವಾಗಿ ಕರೆಕರೆಪಡುತಲಿ ಅರೆನಿಮಿಷವಾದರೆ ಬಿಡದೆ 1 ತ್ತರವಾದ ಕಟ್ಟಾಜ್ಞೆ ಅಲ್ಲಿ ನ- ರರ ಕಾಟವು ಇಲ್ಲಿ ಸುರರ ನಿಬಂಧನೆಯಲ್ಲಿ 2 ಬಾಲ್ಯ ಯೌವನ ಕೌಮಾರ | ಮುಪ್ಪು ಲೀಲೆಯಿಂದಲಿ ಕೆಲವರು ಗೋಳಾಡುತಲಿ ಕೆಲವರು3 ಸ್ವಲ್ಪಾದರು ಸತ್ಕರ್ಮ ಮಾಡೆ | ಫಣಿ- ಅಲ್ಪರಿವುದು ಯಾಕೆ 4 ಇಪ್ಪತ್ತು ನಾಲ್ಕು ತತ್ವಗಳಿಂದ | ನ- ಕ್ಲುಪ್ತಗೈದಿರುವನು ಆಪ್ತ ಎಂದಿಗೂ ನಮಗವನು 5
--------------
ಗುರುರಾಮವಿಠಲ
ಎಲ್ಲ ದೇವರ ಗಂಡ | ಕೃಷ್ಣ ಚಿಲ್ಲರೆ ದೈವರ ಮಿಂಡ ಪ ಪಾದದಿ ನದಿಯನು ಪೆತ್ತ | ಅದನು ರುದ್ರನು ಶಿರದಲಿ ಪೊತ್ತ ಮಾಧವನ್ಹೊಕ್ಕಳ ಜಾತ | ಶತ ಮೋದನು ಲೋಕ ಪ್ರಖ್ಯಾತ 1 ಸೃಷ್ಟಿ ಸಂಹಾರಗೈದ | ಪರ ಮೇಷ್ಟಿ ರುದ್ರರನಾಳ್ದ ಯೆಟ್ಟ ದೈತ್ಯರ ಶಿರ ಮುರಿದ | ದುರಿತ- ದೃಷ್ಟಿಸಿ ನಾಶಗೈದ 2 ಬಂಟರ ಪಾಲಕನೀತ | ವೈ- ಕುಂಠದ ಒಡೆಯನು ದಾತ ತುಂಟರ ಮಡಹುವ ಸತತ | ನಮಗೆ ನಂಟನು ಗೋಕುಲನಾಥ 3 ಮನಸಿಗೆ ಬಂದುದು ಸಿದ್ಧ | ಪ್ರತಿ ಯೆಣಿಸುವ ಜೀವನೆ ಬದ್ಧ ನೆನೆಸುವರಲಿ ತಾನಿದ್ದ | ದಯ ವನಧಿಯು ಬೆಣ್ಣೆಯ | ಕದ್ದ 4 ಭಂಗ | ತಾ ನಿರುತ ಮಾಡುವ ರಂಗ ಜಯೇಶವಿಠಲ ತುಂಗ | ಮಹಿ ಮಾ ರಕ್ಷಿಸು ದಯಾಪಾಂಗ
--------------
ಜಯೇಶವಿಠಲ
ಎಲ್ಲ ಮಾಡಿದವ ನೀನೊ ನಾನೊ |ಅಲ್ಲ ಅಹುದು ಎಂದು ಆಡುವದೇನೊ ಪ ಪುಣ್ಯಕೆ ಉಗ್ರ ಪಾಪವ ರಚಿಸಿದೆ |ಪುಣ್ಯದಿಂದಲಿ ಪಾಪವ ಕಳೆದೆ 1 ಮಿಥ್ಯ ಹರಿಸಿದೆ 2 ಅರಿವಿನೊಳಗೆ ಒಂದು ಮರವನು ಬೆರಸಿದೆ |ಗುರು ಭವತಾರಕನಾಗಿ ತಾರಿಸಿದೆ 3
--------------
ಭಾವತರಕರು
ಎಲ್ಲ ವಾರ್ತೆಯ ಹೇಳ ಮನ್ನಿಸಿನಮ್ಮ ಫುಲ್ಲನಾಭನ ಗುಣ ವರ್ಣಿಸಿ ದೂತೆ ಪ. ಗೆಜ್ಜೆ ಘಿಲ ಘಿಲಕೆಂದು ಬಂದಳು ದೂತೆಗುಜ್ಜಿ ದ್ರೌಪತಿಗೆರಗಿ ನಿಂತಳುನಮ್ಮ ಅರ್ಜುನಗೆ ಅತಿ ದಯವೆಂದಳು ನಿರ್ಜರೇಶನ ಕಂಡೆನೆಂದಳು1 ಕಳಕಳಿಯ ಸೂಸುತ ತನ್ನ ಥಳ ಥಳ ಮುಖಕಮಲ ಹೊಳೆವುತದೂತೆನಳಿನ ತೋಳಿನ ವಸ್ತ ಝಳ ಝಳಿಸುತಬಂದು ಕುಳಿತಳೆ ಮಾತಿನ ಚಪಲೆ 2 ನಡೆದು ಅಚ್ಯುತನಲ್ಲೆ ಹೋದೆಯಾ ಕೃಷ್ಣನ ಅಡಿಗೆರಗಿ ಮುಖ ನೋಡಿದೆಯನಯ ನುಡಿಯ ಮಾತುಗಳನೆ ಆಡಿದೆಯ ನಿಮ್ಮ ಒಡೆಯರ ಭಕುತಿ ಕೊಂಡಾಡಿದೆಯ ದೂತೆ 3 ಶಾಂತ ಮೂರುತಿ ನಿನ್ನ ನೋಡಿದನೇನಐವರಿಗೆ ಅಂತಃಕರುಣ ಭಾಳ ಮಾಡಿದನೇನಎನ್ನ ಅಂತರಂಗದ ಮಾತು ನುಡಿದೆಯೇನಲಕ್ಷ್ಮಿಕಾಂತನ ಗುಣ ಕೊಂಡಾಡಿದೆಯ ದೂತೆ4 ಎನ್ನ ದ್ರೌಪತಿ ಕಳುಹ್ಯಾಳೆಂದೇನೆ ಸ್ವಾಮಿನಿನ್ನ ಮಾತುಗಳ ಮನಕೆ ತಂದಾನೇನ ಕೃಷ್ಣ ಎನ್ನ ಪ್ರಾಣವು ಐವರದೆಂದನೇನಇನ್ನುದಯದ ಸುಗ್ಗಿ ಸುದ್ದಿ ತಂದೇನ ದೂತೆ 5 ಭಾವೆ ರುಕ್ಮಿಣಿಪಾದ ನೋಡಿದೆಯ ನೀನುಭಾವ ಭಕುತಿಯಲಿ ವಂದನೆ ಮಾಡಿದೆಯ ನಿಮ್ಮ ಮೋಹ ದ್ರೌಪತಿಗಿರಲಂದೆಯ ಮುಯ್ಯಾ ತಾಹೊ ವಿಸ್ತಾರವ ಕೊಂಡಾಡಿದೆಯ 6 ಪಾದ ಕಂಡೆಯಘೃತ ಹಾಲು ಸಕ್ಕರೆ ಸವಿದುಂಡೆಯ ವಸ್ತ್ರ ವೀಳ್ಯ ರಾಮೇಶನಿಂದ ಕೊಂಡೆಯನಿನ್ನ ಕಣ್ಣು ಹಬ್ಬವ ಮಾಡಿಕೊಂಡೇನ ದೂತೆ 7
--------------
ಗಲಗಲಿಅವ್ವನವರು
ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ಎಲ್ಲಮ್ಮ ದಯಮಾಡಮ್ಮ ಕಾಡಬೇಡ ಎನ್ನಮ್ಮ ಪ ಇಲ್ಲದೆ ಪೋದರೆ ನಿಲ್ಲದೆ ಏನನು ಬಲ್ಲಿದನ ಕರೆತಂದು ಕೊಲ್ಲಿಸಿಬಿಡುವೆನೆ ಅ.ಪ ಕೊಡಲಿ ಹೊತ್ತು ಬರುತಾನ ತಾಯಿ ಗಡನೆ ಹೊರಳಿ ನೋಡಿನ್ನ ಬಡವರ ದಯಾನಿಧಿ ಕಡುಬಾಧೆ ಕಂಡರೆ ತಡೆಯದೆ ನಿನ್ನನು ಕಡಿಯದೆ ಬಿಡನವ್ವ 1 ತಂದೆವಚನ ಪರಿಪಾಲನು ಅವ ಬಂದರೆ ನಿನ್ನನು ಕೊಂದಾನು ಕಂದನ ಬಂಧನ ಚಂದದಿ ಕಳೆದಾ ನಂದವ ಕೊಡು ಕೊಡು ಸುಂದರಮುಖಿಯೆ 2 ಕಾರ್ತವೀರ್ಯ ತಂದಾನೇ ಈ ವಾರ್ತೆ ಕೇಳಲು ನಿನ್ನ ಬಿಟ್ಟಾನೇ ಅರ್ತುಭಜಿಪೆ ನಿನ್ನ ಗುರ್ತಿಟ್ಟೀಬಾಧೆ ತುರ್ತು ಕಳೆಯೆ ತಾಯಿ ಅರ್ತು ಶ್ರೀರಾಮನ 3
--------------
ರಾಮದಾಸರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲರ ಮನೆ ದೋಸೆ ತೂತು ಪ ಚಿಲ್ಲರೆಯಲ್ಲವಿದೀ ಮಾತು ಅ.ಪ ಗಾಜಿನ ಮನೆಯಲಿ ವಾಸಿಸುವ ಪರ ಗೇಹಕೆ ಕಲ್ಲುಗಳೆಸೆಯುಬಹುದೇ ಮೂರ್ಜಗನಿಂದಕ ತನ್ನಯ ನಾಶಕೆ ಬೀಜ ಬಿತ್ತಿ ಫಲ ಭೋಜನ ಮಾಡುವ 1 ನೀರ ಕ್ಷೀರ ನ್ಯಾಯವ ಕೇಳದ ಜನ ರ್ಯಾರಿರುವರು ಈ ಧರೆಯೊಳಗೆ ಬಾರಿಬಾರಿಗದ ಮನಕೆ ತಾರದೆಲೆ ದೂರಿನ ನುಡಿಯಲಿ ರುಚಿಯು ಉಚಿತವೆ 2 ಗೂಳಿಯು ಹಳ್ಳಕೆ ಬಿದ್ದ ಕಾಲದಲಿ ಆಳಗೊಂದು ಕಲ್ಲೆಸೆಯುವರು ಬಾಳಿಬಾಳಿಸುವ ನರನ ಪ್ರಸನ್ನನು ಕಾಲಕಾಲದಲಿ ಸಲಹದೇ ಇರುವನೆ 3
--------------
ವಿದ್ಯಾಪ್ರಸನ್ನತೀರ್ಥರು