ಒಟ್ಟು 4031 ಕಡೆಗಳಲ್ಲಿ , 123 ದಾಸರು , 2537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರ ಭಾಗ್ಯವಿದು ಪ ತಂದೆ ಮುದ್ದು ಮೋಹನ ದಾಸರ ಭಾಗ್ಯವಿದು ಅ.ಪ. ಕರಿಗಿರಿ ನರಹರಿ ಸಂದರ್ಶನವು | ನರಹರಿ ಭಕುತರ ವಿಹಿತದಸೇವೆ |ಪರಿಪರಿ ಗೈಯ್ಯುತ ಹಿಗ್ಗುತ ನಾನು | ಧರಿಸಿರುವಂಕಿತ ಭಾಗ್ಯವು ಎಲ್ಲಾ 1 ಉರುಗಾದ್ರಿವಾಸನ ಶರಣರ ಕೂಡೆ | ಸರಸದಿ ಕೇಳುತ ಹರಿ ಮಹಿಮೆಯನುಉರುತರ ಸುಖಸಂತೋಷದಿ ಕೀರ್ತನೆ | ಹಿರಿದಾಗಿ ಪಾಡುತ ನರ್ತಿಪುದೆಲ್ಲ2 ಭವನಿಧಿ ದಾಟಿಪ ಹವಣೆಯು ಎನಿಸುವ | ಭುವನ ಮೋಹನನ | ಗುಣರೂಪಗಳನವನವ ಕೀರ್ತನೆ ಸ್ತವನದಲಿ ಗುರು | ಗೋವಿಂದ ವಿಠಲ ನುಡಿಸುವುದೆಲ್ಲಾ 3
--------------
ಗುರುಗೋವಿಂದವಿಠಲರು
ದಾಸರಾಗಿರಿ ದಾಸರಾಗಿರಿ ದಾಸರಾಗಿರಿ ಬೇಗನೆ ಪ. ದಾಸರಾಯರ ಪದವ ನಂಬಿ ವಾಸುದೇವಗೆ ಬೇಗನೆ ಅ.ಪ ದುಷ್ಟಮನ ಕಲ್ಮಷವ ಕಳದು ಸೃಷ್ಟಿಕರ್ತನ ಭಜನೆ ಮಾಡುತ ಕಷ್ಟಗಳನೀಡಾಡಿರಿ 1 ತಂದೆ ಮುದ್ದುಮೋಹನರೆಂ- ತೆಂದು ಮೆರೆಯುವ ಗುರುಗಳ ದ್ವಂದ್ವ ಪಾದವ ಭಜಿಸಿ ಈ ಭವ ಬಂಧನವನೀಗಾಡುತ 2 ಜನನ ಮರಣ ನೀಗುವುದಕೆ ಕೊನೆಯ ಮಾರ್ಗವು ದಾಸತ್ವ ಘನಮನದಿ ಸ್ವೀಕಾರ ಮಾಡಿ ವನಜ ನಯನನ ಪಾಡಿರಿ 3 ಅಂಕಿತವ ಸ್ವೀಕಾರ ಮಾಡಿರಿ ಶಂಕಿಸದೆ ಶ್ರೀಗುರುಗಳಿಂ ಶಂಖ ಚಕ್ರಾಂಕಿತನ ಗುಣಮನ ಪಂಕಜದೊಳು ಸ್ಮರಿಸಿರಿ 4 ಆದಿಯಿಂದಲಿ ಇಹುದು ಜೀವಗೆ ಶ್ರೀಧರನ ದಾಸತ್ವವು ಈ ಧರ್ಮ ತಿಳಿಯದಲೆ ಗರ್ವದಿ ಹಾದಿ ತಪ್ಪಲಿ ಬೇಡಿರಿ 5 ಜಗದೊಡೆಯ ಶ್ರೀ ಹರಿಯು ಸರ್ವದ ನಿಗಮಗಳಿಗಾಧಾರನು ಬಗೆಬಗೆಯ ಜೀವರೊಳಗಿರುತಲಿ ಸುಗುಣವಂತರ ಪೊರೆವನು 6 ಈ ಪರಿಯ ದಾಸತ್ವ ಹೊಂದಿ ನಿ ರ್ಲೇಪರಾಗಿರಿ ಕರ್ಮದಿಂ ಗೋಪಾಲಕೃಷ್ಣವಿಠ್ಠಲನು ರೂಪ ತೋರ್ವನು ಹೃದಯದಿ 7
--------------
ಅಂಬಾಬಾಯಿ
ದಾಸರಾಯ ಪುರಂದರದಾಸರಾಯ ಪ. ಘಾಸಿಗೊಳಿಸದೆ ಇತ್ತು ಕರುಣಿಸಿ ವಾಸುದೇವನ ಕೃಪೆಗೈಸಿರಿ ಅ.ಪ. ದಾಸಕೂಟಕೆ ಮೊದಲನೆ ಗುರು ದೊಷವರ್ಜಿತ ಭಕ್ತರೆನಿಸಿ ಆಶಪಾಶವೆ ತೊರೆದು ಹರಿಯ ದಾಸತನವನು ತೋಷದಲಿ ಕೊಂಡು ಕೇಶವನು ಸರ್ವೋತ್ತಮನು ಎನ್ನುತ ಶ್ರೀಶನ ಗುಣಗಳನೆ ಪೊಗಳುತ ಭೂಸುರರ ರಕ್ಷಿಸುತ ಭಕ್ತರ ಕ್ಲೇಶಗಳೆÉದಂಥ ಗುರುವರ 1 ವೀಣೆ ಕರದಲಿ ಗಾನಮಾಡುತ ಜಾಣತನದಲಿ ಕೃಷ್ಣನೊಲಿಸುತ ಆನಂದದಲಿ ನರ್ತಿಸುತ್ತ ಧ್ಯಾನದಲಿ ಶ್ರೀ ಹರಿಯ ನೋಡುತ ಆನನವ ತೂಗುತ್ತ ವೇದ ವಿ- ಧಾನದಲಿ ಪದಗಳನೆ ರಚಿಸುತ ಮೌನಿವ್ಯಾಸರ ಶಿಕ್ಷೆಯಿಂದಲಿ ದಾನವಾಂತಕ ಹರಿಯನೊಲಿಸಿದ 2 ಪಾಪಿಗಳ ಪಾವನಗೈಸುತ ಶ್ರೀ ಪತಿಯ ಅಂಕಿತವ ನೀಡುತ ಈ ಪರಿಯಲಿ ಮೆರೆದ ಮಹಿಮೆಯ ನಾ ಪೇಳಲಳವಲ್ಲವಿನ್ನು ನಾ ಪಿರಿಯರಿಂ ಕೇಳಿದುದರಿಂ ದೀಪರಿ ನುಡಿದಿರುವೆನಲ್ಲದೆ ಗೋಪಾಲಕೃಷ್ಣವಿಠ್ಠಲನ ರೂಪ ನೋಡುತ ಸುಖಿಸುವಂಥ 3
--------------
ಅಂಬಾಬಾಯಿ
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದಾಸರಿವರ ನೋಡಿರೊ | ಗುರು ವಿಜಯ |ದಾಸರಿವರ ಪಾಡಿರೋ ಪ ವ್ಯಾಸರಾಜ್ಞೆಯಲಿಂದ | ವ್ಯಾಸ ಕಾಶಿಗೆ ಪೋಗಿ |ಶ್ರೀಶಾನುಗ್ರಹದಲಿ | ಭಾಸಿಸೀ ಮೆರೆದಂಥ ಅ.ಪ. ಎರಡನೆ ಯುಗದೊಳಗೆ | ಸುರಲೀಲ | ವರಕಪಿ ಎಂದೆನೆಸಿ |ಶಿರಿ ರಾಮಚಂದ್ರನ್ನ | ಚರಣ ಸೇವಕರಾಗಿಸುರ ವಿರೋಧಿಗಳ ಬಹಳ ಸಂಹರಿಸಿದ 1 ಯಾದವರಲಿ ಜನಿಸಿ | ನಿಕಂಪಾಖ್ಯ | ಶ್ರೀದಕೃಷ್ಣನ ಭಜಿಸಿ |ಮಾಧವ ಗೆದುರಾಂತ | ದೈತ್ಯರ ಸದೆಬಡಿದುಯಾದವೇಶನ ಪದ | ಕರ್ಪಿಸಿ ಮೆರೆದಂಥ 2 ಪುರಂದರ ದಾಸರ | ವರ ಗೃಹದಲಿ ಇದ್ದುಹರಿಚರಿತೆ ಶ್ರವಣದಿ | ವಿಪ್ರನಾಗ್ಯುದೀಸಿದ 3 ಮಧ್ವಪತಿಯ ನಾಮದಿ | ಭೃಗ್ವಂಶದಿ | ಮುದ್ದು ಮಗನೆನಿಸಿಮಧ್ವೇಶ ಹರಿಪಾದ | ಶ್ರದ್ಧೆಯಿಂದಲಿ ಭಜಿಸಿಮಧ್ವರಾಯರ ಮತ | ತುತಿಸಿ ಮೋದಿಸಿದಂಥ 4 ಚೀಕನಪರಿ ಕ್ಷೇತ್ರದೀ | ದಾಸಪ್ಪನು | ಆ ಕೂಸಮ್ಮನ ಉದರದಿಬೇಕಾಗಿ ಜನಿಸುತ್ತ | ಪ್ರಾಕು ಪ್ರಾರಬ್ದವನೇಕ ಬಗೆಯಲಿ ಉಂಡ | ಮಾಕಳತ್ರನ ಕಂಡ 5 ಪುರಂದರ | ದಾಸರೂಪಿಯಲಿಂದ |ಸೂಸಿ ಶಾಸ್ತ್ರವ ಮಧ್ವ | ಭಾಷ್ಯಾನು ಸಾರದಿ |ಭಾಷೆ ಕನ್ನಡದಲ್ಲಿ | ಮೀಸಲೆನಿಸಿ ಪೇಳ್ದ 6 ಧ್ಯಾನೋಪಾಸನೆ ಕರ್ಮವ | ಯೋಗ್ಯರಿಗೆ | ಗಾನಗೈದಿಹ ಸುಜ್ಞಾನೀ | ಮಾನ್ಯ ಮಾನದ ದುಷ್ಟ | ಗಾನಕೆ ಮನ ಕೊಡದೆಮೌನಿಯಾಗುವ ಮಾರ್ಗ | ದಾನವ ಮಾಡೀದ 7 ಸ್ವಪ್ನದಲ್ಲೆನಗವರೂ | ದರ್ಶನದಿ | ಕೃಪ್ಪೆಯಲನುಗ್ರಹಿಸಿ |ಅಪ್ಪಾರ ಮಹಿಮರು | ತಪ್ಪದೆ ತ್ರಯ ಬಾರಿಒಪ್ಪಿ ತೀರ್ಥವನಿತ್ತು ಕಳುಹಿದ ಮಹಾಂತ 8 ವತ್ಸರ ಕಾರ್ತೀಕ | ಸಿತ ದಶಮಿ | ಆವಗುರುವಾಸರದಿಭಾವಜ ಪಿತ ಗುರು | ಗೋವಿಂದ ವಿಠಲನಭಾವದಿ ಕಂಡು ಸುಯೋಗದಿ ಪೊರಟಂಥ 9
--------------
ಗುರುಗೋವಿಂದವಿಠಲರು
ದಾಸರು ಭಜಿಸುವೆ ನಿನ್ನನು ವಿಜಯದಾಸಾರ್ಯನೆ ಪೊರೆಯೊ ಪ ಭಜಿಸುವೆ ನಿನ್ನ ಪಾದಭಜಕಜನರ ಪಾದ ರಜದೊಳಿಟ್ಟು ನನ್ನ ರಜತಮ ಹರಿಸೊಅ.ಪ ವಿಜಯಸಾರಥಿಪ್ರಿಯ ನಿಜದಾಸ ನೀನೆಲೋ ಗುರುವೆ ಅಜಪಿತನಜಸುತ ನಿಜಲೋಕಗಳೆಲ್ಲ ಬಿಜಯ ಮಾಡಿ ನಿಜಗತಿಪ್ರದನಾರೆಂದು ನಿಜವನರಿತು ದೈವಾವೆಂದರುಹಿದ ಭೃಗುಮುನಿ1 ರಕ್ಷಿಸಬೇಕೋ ಶ್ರೀ ಲಕ್ಷ್ಮೀಶ ದಾಸನೆ ಗುರುವೆ ಪಕ್ಷಿವಾಹನನ ನೀ ವಕ್ಷತಾಡನ ಮಾಡೆ ತಕ್ಷಣ ಕ್ಷಿತಿ ಕುಕ್ಷಿಯೊಳು ಜಗದ್ರಕ್ಷಕನಾದ ಮು ಮುಕ್ಷುಗಳೊಡೆಯನೆ ನೀಕ್ಷಿಸಿದಾ ಧೀರಾ2 ದ್ವಾಪರದಲ್ಲಿ ನಿಕಂಪನೆಂದೆನಿಸಿದೆ ಮೆರೆದೆ ಶಾಪತನದಿ ವ್ಯಾಧರೂಪದಿಂದ ಶ್ರೀ ಗೋಪಾಲಗೆ ಬಾಣ ಮ್ಮಪ್ಪನೆಂದು ತ್ರಿಜಗಕೆ ತೋರ್ದೆ 3 ಉದ್ಧರಿಸಲು ನೀನುದ್ಭವಿಸಿದೆಯೋ ಮಧ್ವಪತಿಯ ಅಭಿದಾನದಿ ನೀನು ಮಧ್ವಾಗಮ ಶೋಧಿಸಿ ಸುಧೆಯ ತಂದು ಶುದ್ಧ ದುಗ್ಧರನೆಲ್ಲ ಉದ್ಧಾರಮಾಡಿ ಪ್ರ ಸಿದ್ಧಿ ಪಡೆದ ಅನಿರುದ್ಧನ ದಾಸನೆ 4 ಪುರಂದರದಾಸರ ವರ ಸುಕುಮಾರ ಧೀರಾ ಉರಗಾದ್ರಿವಾಸವಿಠಲನ ದಾಸ ಭೂಸುರನಾಗಿ ಚಿಪ್ಪಗಿರಿಯೊಳು ಪರಿಪರಿ ಸಾಧನ ತೋರಿ ಮೆರೆವ ಗುರು 5
--------------
ಉರಗಾದ್ರಿವಾಸವಿಠಲದಾಸರು
ದಾಸೋಹಂ ತವ ದಾಸೋಹಂ ಪ ವಾಸುದೇವ ವಿತತಾಘಸಂಘ ತವ ಅ ಜೀವಾಂತರ್ಗತ ಜೀವ ನಿಯಾಮಕ ಜೀವವಿಲಕ್ಷಣ ಜೀವನದ ಜೀವಾಧಾರಕ ಜೀವರೂಪ ರಾ ಜೀವ ಭವಜನಕ ಜೀವೇಶ್ವರ ತವ 1 ಕರ್ಮಕರ್ಮಕೃತ ಕರ್ಮಕೃತಾಗಮ ಕರ್ಮ ಫಲಪ್ರದ ಕರ್ಮಜಿತ ಕರ್ಮಬಂಧ ಮಹಕರ್ಮ ವಿಮೋಚಕ ಕರ್ಮನಿಗ್ರಹ ಕರ್ಮಸಾಕ್ಷಿ ತವ 2 ಕಾಲಾಹ್ವಯ ಮಹಕಾಲ ನಿಯಾಮಕ ಕಾಲಾತೀತ ತ್ರಿಕಾಲಜ್ಞ ಕಾಲಪ್ರವರ್ತಕ ಕಾಲನಿವರ್ತಕ ಕಾಲೋತ್ಪಾದಕ ಕಾಲಮೂರ್ತಿ ತವ 3 ಧರ್ಮಯೂಪ ಮಹಧರ್ಮ ವಿವರ್ಧನ ಧರ್ಮ ವಿಧೋತ್ತಮ ಧರ್ಮನಿಧೇ ಧರ್ಮ ಸೂಕ್ಷ್ಮ ಮಹಧರ್ಮ ಸಂರಕ್ಷಕ ಧರ್ಮಸಾಕ್ಷಿ ಯಮಧರ್ಮಪುತ್ರ ತವ 4 ಮಂತ್ರಯಂತ್ರ ಮಹ ಮಂತ್ರ ಬೀಜ ಮಹ ಮಂತ್ರರಾಜಗುರು ಮಂತ್ರ ಧೃತ (ಜಿತ) ಮಂತ್ರಮೇಯ ಮಹಮಂತ್ರಗಮ್ಯ ಫಲ ಮಂತ್ರಮೇಯ ಜಗನ್ನಾಥ ವಿಠಲ ತವ 5
--------------
ಜಗನ್ನಾಥದಾಸರು
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದು:ಖರೂಪಿನ ರೊಕ್ಕ ದಕ್ಕಗೊಡದಖಿಲರನು ತಿಕ್ಕಾಡುತಿಹ್ಯದಕಟ ಒಕ್ಕಲಿಕ್ಕಿ ಬಿಡದೆ ಪ ಇದ್ದರುಣಗೊಡದಿಲ್ಲದಿದ್ದರು ಸುಖಕೊಡದು ಶುದ್ಧಪದ್ಧತಿಯವರರ ಬದ್ಧರೆನಿಸುವುದು 1 ಮರಿಯಾದೆ ತಗಿತಿಹ್ಯದು ಮರಿಯಾದೆಲಿರಗೊಡದು ಜರಜರಕೆ ನರರಿಗೆ ಶಿರವ ಬಾಗಿಸುವುದು 2 ಸತಿಸುತರ ತರಿಸುವುದು ಹಿತದಿಂದ ಇರಗೊಡದು ಮತಿಗೆಡಿಸಿ ಸತತ ದುರ್ಗತಿಗೆ ಎಳಸುವುದು 3 ವಂದನೆಯ ಕೊಡಿಸುವುದು ಕುಂದು ನಿಂದ್ಹೊರಿಸುವುದು ಒಂದುಸ್ಥಿರಮಿಲ್ಲದರ ಅಂದಮೇನಿಹ್ಯದು 4 ಕಲ್ಪಿಸಿದರಾರಿದನು ಅಲ್ಪಮತಿಯಿಂ ಬಯಸಿ ಕಲ್ಪತರುಶ್ರೀರಾಮನಾಲ್ಪರಿದು ಒಲಿಸಿ 5
--------------
ರಾಮದಾಸರು
ದುಂಡು ಮುಖವುಳ್ಳ ಹುಡುಗನ ಕಂಡಿರಾಚಂಡನಾಡುತ ಬಂದ ಚದುರೆಯರ ಓಣಿಯಲಿ ಪ ಕರದೊಳಗೆ ಕೊಳಲಿಹುದು ಚರಣದೊಳು ರುಳಿಗೆಜ್ಜೆಕೊರಳೊಳಗೆ ಸರಪದಕ ಗುರುಳು ಮುಖದಿಜರದೊಲ್ಲಿ ಹೊದ್ದಿಹನು ಸ್ಮರನ ಮೋಹಿಪ ರೂಪಸಿರಿಯ ಕಂಡರೆ ಅವನ ಪರರು ಬಿಡರಮ್ಮ 1 ವಾರಿಜಾಕ್ಷೆರೆ ಬಹಳ ಜಾರಚೋರೆನ್ನ ಮಗವಾರೆನೋಟದಿ ಮನಸು ಹಾರಿಸುವನುಸಾರಿದರೆ ಮನೆಗಳಿಗೆ ದ್ವಾರಯಿಕ್ಕುತೆ ಬನ್ನಿದೂರು ಪೇಳಲು ಕೇಳಿ ಸಾರಿದೆನು ಮೊದಲೆ 2 ಕಂದನಾಗುವ ಕ್ಷಣದಿ ಒಂದೆ ಪ್ರಾಯದ ಪುರುಷಸುಂದರಾಂಗಿಯಳಾಗಿ ಬರುವನಂದಬಾಲನ ಮಹಿಮೆ ಬಂದು ನಂಬಲಿ ಬೇಡಿಇಂದಿರೇಶನು ಬಹಳ ಮಂದಿ ಮೋಹಿಸುವ 3
--------------
ಇಂದಿರೇಶರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ನಿವಾರಣಗೆ ಪಮಾಯಾರಹಿತನಿಗೆ ಮನಕಗೋಚರನಿಗೆಕಾಯ ಕರಣ ಕೃತ್ಯ ದೂರನಿಗೆಹೇಯಾದಿ ಭೇದ ರಹಿತನಿಗೆ ನಿಜ ಭಕ್ತಿದಾಯಕನಾದ ಶ್ರೀ ಗುರುವರ್ಯಗೆ 1ಜ್ಞಾನಸ್ವರೂಪಗೆ ಜ್ಞಾನದಾಯಕನಿಗೆಜ್ಞಾನಶಕ್ತಿಯೊಳೊಡಬೆರದಿಹಗೆಜಾನಿಸುತಿಪ್ಪರಜ್ಞಾನವಿರೋಧಿಗೆತಾನೆ ತಾನಾಗಿ ನಲಿವ ಮೂರ್ತಿಗೆ 2ಸ್ವಾನುಭವಾನಂದ ಪರಿಶುದ್ಧನಾದಗೆದೀನಜನರ ಪರಿಪಾಲಿಪಗೆಮಾನರಹಿತನಿಗೆ ಮಾನ್ಯ ಸನ್ನುತನಿಗೆಭಾನುವಿನಂದದಿ ಹೊಳೆವನಿಗೆ 3ಪುಣ್ಯ ಪಾಪಗಳೆಂಬ ಕಣ್ಣಿಯ ಕಟ್ಟನುಚೆನ್ನಾಗಿ ಕಳಚಿದ ಚಿನ್ಮಯಗೆತನ್ನವರನ್ಯರೆಂತೆಂಬ ಭೇದವ ಬಿಟ್ಟುತನ್ನಂತೆ ತನ್ನವರನು ಮಾಳ್ಪಗೆ 4ಸುರತರು ರೂಪಗೆ ಸುರಭಿಯಂತಿರುವಗೆಪುರುಷಾರ್ಥ ದಾನಿಗೆ ಪುಣ್ಯಾತ್ಮಗೆತಿರುಪತಿ ನಿಲಯ ಶ್ರೀ ವೆಂಕಟರಮಣಗೆಗುರು ವಾಸುದೇವ ರೂಪಿನ ದೇವಗೆ 5ಕಂ||ಇಂತೀ ಪೂಜಾ ಸ್ತುತಿಗಳಸಂತಸದಿಂ ಪಾಡಿ ಪೊಗಳಿ ಕೇಳುವ ಜನರಿಗೆಸಂತತ ಕಾಮಿತ ವರಗಳಸಂತೋಷದಿ ಕೊಡುವ ನೊಲಿದು ವೆಂಕಟರಮಣಂಓಂ ಪರಾತ್ಪರಾಯ ನಮಃ
--------------
ತಿಮ್ಮಪ್ಪದಾಸರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದುರ್ಗೆ ಪಾಲಿಸೆ ಕರುಣದಿ | ಮಹಾ ಲಕುಮಿ ದುರ್ಗೆ ಪಾಲಿಸೆ ಕರುಣದಿ ಪ. ಅಪವರ್ಗ ಪದವಿ ಇತ್ತು ದುರ್ಗಮವಾಗಿಹ ದುಃಖವ ಬಿಡಿಸಿ ಭಾರ್ಗವಿರಮಣನ ಮಾರ್ಗವ ತೋರೆ ಭೋರ್ಗರೆಯುತ ಖಳರ ನಿಗ್ರಹಿಸುವಳೆ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ರಮಣನ ಜಾಯೆ ನಾರಸಿಂಹನ ಅರಸಿಯೆ ಸಾರಿದೆ ನಿನ ಪದ ತೋರಿಸೆ ಹರಿಪದ ಕಾರುಣ್ಯಾತ್ಮಳೆ ಕರುಣವ ಬೀರೆ ವಾರವಾರಕೆ ನಿನ್ನ ಆರಾಧಿಸುವಂಥ ಚಾರುಮತಿಯ ನೀಡೆ ನಾರಿರನ್ನಳೆ 1 ಪದ್ಮಾವತಿಯೆ ಪದ್ಮಿನಿ | ಪದ್ಮಾಕ್ಷಿದೇವಿ ಪದ್ಮಸಂಭವೆ ಕಾಮಿನಿ ಪದ್ಮನಾಭ ಶ್ರೀ ಶ್ರೀನಿವಾಸನ ಪದ್ಮಪಾದವ ಹೃತ್ಪದ್ಮದಿ ತೋರೆ ಪದ್ಮಸರೋವರ ತೀರವಾಸಿ ಕರ ಪದ್ಮಯುತಳೆ ಮುಖಪದ್ಮವ ತೋರೆ2 ರೂಪತ್ರಯಳೆ ಕಾಮಿನಿ | ಕಾಮಪೂರಿಣೀ ತಾಪಹರಿಸೆ ಭಾಮಿನಿ ಪಾಪಗಳÉಲ್ಲವ ನೀ ಪರಿಹರಿಸುತ ಗೋಪಾಲಕೃಷ್ಣವಿಠ್ಠಲನನು ತೋರುತ ನೀ ಪರಿ ನುಡಿವೆನೆ ನೀ ಪಾಲಿಸುವುದು ಆಪವರ್ಗದಲಿ 3
--------------
ಅಂಬಾಬಾಯಿ