ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು
ಒಲಿಯಯ್ಯಾ ರಂಗ ಒಲಿಯಯ್ಯಾನೆಲೆಗಾಣದಭವಜಲದೊಳು ಮುಳುಗುವೆಪ.ಮಾಯದ ಕೈಯಲಿ ಮೇಲೆ ಮೇಲೆ ಸುತ್ತಿಆಯಾಸಬಡುತಿದೆ ಪ್ರಾಣದಾತಬಾಯೆತ್ತಿ ಗೋವಿಂದ ಹರಿಯೆನ್ನಲೀಸದುಕಾಯೊ ದಯಾಳು ಕರಿವರದ ಕೃಷ್ಣ 1ಮನ ನೀರಾನೆಯ ಕಟ್ಟಿನೊಳಗೆ ಸಿಕ್ಕಿಕ್ಷಣ ಕ್ಷಣ ದೈನ್ಯದಿ ಒರಲುತಿದೆತನತನಗೆಳೆದು ದಣಿಸುವ ಇಂದ್ರಿಯ ಜಂತುಮುನಿಸೇವ್ಯ ನಿನ್ನೂಳಿಗಕ್ಕೆ ದೂರಾದೆ ಕೃಷ್ಣ 2ಬುದ್ಧಿ ತಪ್ಪಿದವಗೆ ಅಬದ್ಧ ನಡೆವವಗೆಶುದ್ಧ ಕಾರಣ ದಿವ್ಯನಾಮವಲ್ಲವೆಉದ್ಧರಿಸು ಬೇಗ ಪ್ರಸನ್ವ್ವೆಂಕಟ ಕೃಷ್ಣತಿದ್ದಿಟ್ಟುಕೊಳ್ಳೊ ನಿನ್ನವಗೆ ನಿರ್ಣಯ ನೀನೆ 3
--------------
ಪ್ರಸನ್ನವೆಂಕಟದಾಸರು
ಒಲ್ಲೆನೆಂದರಾಗುವುದೆ ಅಲ್ಲಿ ಪಡೆದು ಬಂದುದನುಎಲ್ಲವನುಂಡು ತೀರಿಸಬೇಕು ಹರಿಯೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಂದೆತಾಯಿ ಬಸಿರಿಂದ ಬಂದ ದಿನ ಮೊದಲಾಗಿಒಂದಿಷ್ಟು ಸುಖವನೆ ಕಾಣೆ ನಾ ಹರಿಯೆಬಂದುದನೆಲ್ಲವನುಂಡು ತೀರಿಸದೆ ಭ್ರಮೆಗೊಂಡ ಮೇಲೇನುಂಟು ಹಗೆಯ ಜೀವನವೆ1ಎಮ್ಮರ್ಥ ಎಮ್ಮ ಮನೆ ಎಮ್ಮ ಮಕ್ಕಳು ಎಂಬಹೆಮ್ಮೆ ನಿನಗೇತಕೊ ವ್ಯರ್ಥ ಜೀವನವೆಬ್ರಹ್ಮ ಪಣೆಯೊಳು ಬರೆದ ವಿಧಿಯು ತಪ್ಪುವುದುಂಟೆಸುಮ್ಮನೆ ಇರು ಕಂಡ್ಯ ಹಗೆಯ ಜೀವನವೆ2ಅಂತರಂಗದಲೊಂದು ಅರ್ಥ ದೇಹದಲೊಂದುಚಿಂತೆಯಾತಕೆ ನಿನಗೆ ಪಂಚರೆದುರುಕಂತುಪಿತ ಕಾಗಿನೆಲೆಯಾದಿಕೇಶವರಾಯಅಂತರಂಗದಿ ನೆಲೆಗೊಳುವ ತನಕ3
--------------
ಕನಕದಾಸ
ಒಳ್ಳೆಯದೊಳ್ಳೆಯದು ಪಎಲ್ಲ ಸ್ಥಳವ ಬಿಟ್ಟು ಇಲ್ಲಿ ಅಡಗಿದುದು ಬಲ್ಲಿದತನವೆ ? ಅ.ಪಬಿಡೆನೊ ಬಿಡೆನೊ ಎನ್ನ ಒಡೆಯ ತಿರುಮಲ ನಿನ್ನ |ಉಡೆಯ ಪೀತಾಂಬರ ಪಿಡಿದು ನಿಲಿಸಿಕೊಂಬೆ 1ಅರಿವುಮರೆವು ಮಾಡಿ ತಿರುಗಿಸಿದೆಯಾ ಎನ್ನ |ಕೊರಳಿಗೆ ನಿನ್ನಯಚರಣಕಟ್ಟಿಕೊಂಬೆ 2ಅತ್ತೆಯ ಮಕ್ಕಳಿಗೆ ತೆತ್ತಿಗ ನಿನಗಾಗಿ |ಎತ್ತದ ರಾಶಿ ತಂದಿತ್ತ ಪರಿಯಲಿ 3ಅತ್ತಲಿತ್ತಲಿ ನೋಡಿನ್ನೆತ್ತ ಪೋಗಲಿ ನಿನ್ನ |ಚಿತ್ತದಲ್ಲಿ ಹೊತ್ತು ಕಟ್ಟಿಕೊಂಬೆನು 4ಇರುಳು ಹಗಲು ಬಿಡೆದೆ ವರಪುರಂದರಗೊಲಿದೆ |ಅರಿದುಏನು ಇಷ್ಟು ಪುರಂದರವಿಠಲನೆ 5
--------------
ಪುರಂದರದಾಸರು
ಒಳ್ಳೆವೀರನೆಂಬೊ ಮಾತು ಸುಳ್ಳು ಕೃಷ್ಣರಾಯಮೈಗಳ್ಳನೆಂದು ಕರೆಯೋರಲ್ಲೊ ಅಜರ್ಂುನರಾಯ ಪ.ವೀರಮಾಗಧಯುದ್ಧಕ್ಕೆ ಬಾರೆಂದು ಕರೆಯಲು ಅಂಜಿನೀರೊಳಗೆ ಹೋಗಿ ಅಡಗಿದೆಯಲ್ಲೊ ಶ್ರೀಕೃಷ್ಣರಾಯ 1ಯುದ್ಧ ಮಾಡುವೆನೆಂದು ಸನ್ನದ್ದನಾಗಿ ಬಂದು ಅಂಜಿಗುದ್ದುಹೊಕ್ಕೆಯಲ್ಲೊ ನೀನು ಅರ್ಜುನರಾಯ2ಜರಿಯ ಸುತನು ಯುದ್ದದಲ್ಲಿ ಕರಿಯೆ ಅಂಜಿಕೊಂಡು ನೀನುಗಿರಿಯಮರೆಯಲ್ಲಡಗಿದೆಲ್ಲೊ ಶ್ರೀ ಕೃಷ್ಣರಾಯ 3ಬಿಂಕದಿಂದ ಬಾಣ ಧರಿಸಿ ಶಂಕಿಸದೆ ಅಂಜಿ ಬಂದುಮಂಕು ಮನುಜರಂತೆ ನಿಂತ್ಯೊ ಅರ್ಜುನರಾಯ 4ದೊರೆಯು ಮಾಗದ ಯುದ್ದಕ್ಕೆ ಬಾರÉಂದು ಕರೆದರೆ ಅಂಜಿವರಾಹನಾಗಿ ಓಡಿದೆಲ್ಲೊ ಶ್ರೀ ಕೃಷ್ಣರಾಯ 5ಪೊಡವಿರಾಯರೆಲ್ಲ ಒಂದಾಗಿ ಬಿಡದೆ ಯುದ್ಧಮಾಡೆನೆಂಬೊಬಡಿವಾರವು ಎಷ್ಟು ನಿನಗೆ ಅರ್ಜುನರಾಯ 6ಬಿಲ್ಲು ಧರಿಸಿ ಮಾಗಧನು ಬಿಲ್ಲಿಗೆ ಬಾ ಎಂದು ಕರಿಯೆಹಲ್ಲು ತೆರೆದು ಹೆದರಿಕೊಂಡ್ಯೊ ಶ್ರೀಕೃಷ್ಣರಾಯ 7ಸಿಟ್ಟಿನಿಂದಕರ್ಣಬಾಣ ಬಿಟ್ಟನಯ್ಯ ನಿನ್ನ ಮ್ಯಾಲೆಕೊಟ್ಟಿಯಲ್ಲೊ ಮುಕುಟವನ್ನು ಅರ್ಜುನರಾಯ 8ಹಲವುರಾಯರೆಲ್ಲ ನಿನ್ನ ನೆಲಿಯುಗಾಣದಂತೆÀ ಮಾಡೆಬಲಿಯ ಹೋಗಿ ಬೇಡಿದೆಲ್ಲೊ ಶ್ರೀ ಕೃಷ್ಣರಾಯ 9ಕರ್ಣನ ಬಾಣವು ನಿನ್ನಹರಣಮಾಡಲೆಂದು ಬರಲುಮರಣ ತಪ್ಪಿಸಿದೆನಲ್ಲೊ ನಾನು ಅರ್ಜುನರಾಯ 10ನಡವಕಟ್ಟಿ ವೈರಿಗಳ ಹೊಡೆಯಲಿಕ್ಕೆ ಅರಿವೊ ಕೃಷ್ಣಕಡಿಯಲಿಕ್ಕೆ ಜಾಣನಯ್ಯ ಶ್ರೀ ಕೃಷ್ಣರಾಯ 11ಎಷ್ಟು ಗರ್ವದಿಂದ ದ್ವಿಜಗೆಕೊಟ್ಟೊ ಭಾಷೆ ಶಪಥ ಮಾಡಿನಷ್ಟವಾಯಿತಲ್ಲೊ ವಚನ ಅರ್ಜುನರಾಯ 12ಎಲ್ಲ ವ್ಯಾಪ್ತಿ ಎಂಬೊ ಮಾತು ಎಲ್ಲಿದೆಯೊ ಈಗನಿನ್ನವಲ್ಲಭೆಯ ಒಯ್ದನ್ಹ್ಯಾಂಗೊ ಶ್ರೀಕೃಷ್ಣರಾಯ 13ಧೀರಾಧೀರರೆಲ್ಲ ಕೂಡಿ ವೀರನೆಂದು ಪೊಗಳಲುನಾರಿಯ ಸೀರೆಯ ಹ್ಯಾಂಗ ಸೆಳಿದಾನಯ್ಯ ಅರ್ಜುನರಾಯ 14ಶಂಭರಾರಿ ಪಿತನೆ ನಿನ್ನಜಂಬವೆಷ್ಟು ಕದ್ದುಕೊಂಡುತಿಂಬೋದಕ್ಕೆ ಜಾಣನಯ್ಯ ಶ್ರೀಕೃಷ್ಣರಾಯ 15ಎಷ್ಟುಗರುವ ನಿಮ್ಮೆಲ್ಲರ ಅಷ್ಟಗುಣವ ನಾನ ಬಲ್ಲೆಹೊಟ್ಟೆಬಾಕ ಭೀಮನಯ್ಯ ಅರ್ಜುನರಾಯ 16ಬತ್ತಲೆಂದು ನಗಲು ಜನರು ಮತ್ತೆನಾಚಿ ಕುದುರೆಯನ್ನುಹತ್ತಿಕೊಂಡು ಓಡಿದೆಲ್ಲೊ ಶ್ರೀ ಕೃಷ್ಣರಾಯ 17ವ್ಯರ್ಥಕೈಪ ಧರಿಸಿ ಕನ್ಯೆ ಎತ್ತಿಕೊಂಡು ಒಯ್ದಮ್ಯಾಲೆಹತ್ತು ಜನರು ನಕ್ಕರಲ್ಲೊ ಅರ್ಜುನರಾಯ 18ಕೃಷ್ಣಾರ್ಜುನರ ಈ ಸಂವಾದ ಸಂತುಷ್ಟನಾಗಿ ರಮಿ ಅರಸುಇಷ್ಟಾರ್ಥವ ಕೊಡಲಿ ನಮಗೆ ಶ್ರೀ ಕೃಷ್ಣರಾಯ 19
--------------
ಗಲಗಲಿಅವ್ವನವರು
ಓಡಿ ಹೋಗುವರೇನೋ ಜಾಣ ಪಾರ್ಥನೋಡಿ ಬಲ್ಲೆವೊ ನಿಮ್ಮತ್ರಾಣಪ.ಹೆಣ್ಣುತನದಿ ಒಳಗೆ ಸೇರಿದಿನಮ್ಮ ಕಣ್ಣಿಗೆ ಬೀಳದೆ ಹಾರಿದಿಬಣ್ಣವ ಬಹಳ ಬಹಳ ತೋರಿದಿನಮ್ಮಣ್ಣ ಬಲರಾಮನ ಇದುರಿಗೆ ಬಾರದೆ 1ಹೊಳೆವು ಎಷ್ಟು ಹೇಳಲೊ ನಿನ್ನಶೌರ್ಯ ತಿಳಿದೀತುಘನಮಹಿಮನಘನಬಳೆಯ ನಿಟ್ಟಿದ್ದು ಮುನ್ನಇಂಥ ಅಳಿಯ ದೊರೆತೆಲ್ಲೊರನ್ನ 2ಗಂಡಸಲ್ಲವೊ ಇಂಥ ಬಾಳು ನಿನಗೆಗಾಂಡೀವಿಯಾತಕೆ ಹೇಳೊಷÀಂಡನೆಂದರೆ ಇಂಥ ಬಾಳುವೆನಾಚಿಕೊಂಡು ಬರಲಿಲ್ಲೇನೊ ಹೇಳೊ 3ಬಿಲ್ಲು ಕಂಡರೆ ನಿನಗೆ ಭೀತಿಯೆಒಳ್ಳೆ ಚಲುವೆಯರ ಮ್ಯಾಲೆ ಅತಿ ಪ್ರೀತಿಯೊನಲ್ಲ ಹೀನಳ ಬೆರೆದ ಖ್ಯಾತಿಯೊಅದಕೆ ಇಲ್ಲೆ ಬರಲಿಲ್ಲಿಯೋ ಸೋತು 4ಏನು ಹೇಳಲಿ ಇಂಥ ನಿಂದ್ಯವನಿನಗೆಮಾನಿನಿಹೆರಳೇನು ಚಂದಧೇನಿಸಿ ನೋಡಲುಕುಂದಹಾಗೆ ತಾನು ರಾಮೇಶ ಅಂದ 5
--------------
ಗಲಗಲಿಅವ್ವನವರು
ಔತುಕೊಂಡಿ ಯಾಕೊ ನರಹರಿಪ್ರಾರ್ಥನೆಯನ್ನು ಕೇಳೊ ಸ್ವಾಮಿ ಪವೇದ ತಂದುಭಾರಪೊತ್ತುಕೋರೆ ತೋರಿ ಕರುಳ ಬಗೆದುಬೇಡಿ ಭೂಮಿ ದೂಡಿನೃಪರಸಾಗರವ ಬಂಧಿಸಿದ ಭಯವೋ 1ಕದ್ದು ಬೆಣ್ಣೆ ಕಳ್ಳನೆನಿಸಿವದ್ದು ತ್ರಿಪುರಾಸುರರ ಸದೆದುಹದ್ದನೇರುವುದನೆ ಬಿಟ್ಟುಹಯವನೇರಿದ ಭಯವೋ ಸ್ವಾಮಿ 2ತರಳಗೊಲಿದು ಬರಲು ನಿನ್ನಇರಿಸಿ ಸ್ನಾನಕೆನುತ ಪೋಗಿತ್ವರದಿ ಬಂದು ನೋಡಲು ಅದ್ಭುತದಿ ಬೆಳೆದ ಭಯವೋ ದೇವ 3ನಿಲುಕದಿರಲು ನಿನ್ನವದನಯುವಕ ನೋಡಿ ಮೊರೆಯನಿಡಲುತವಕಿಸುವಿ ಬಾಲಕನೆ ನಿನ್ನಸಮಕೆ ಎನ್ನ ಮಾಡಿಕೊ ಎಂದು 4ಸಿರದಿ ಕರವನಿಡುತ ತನ್ನಸಮಕೆ ಬರುವ ತೆರದಿ ನಿನ್ನಸಿರವ ಪಿಡಿದು ಬಿತ್ತಿ ಸ್ತುತಿಸೆಕುಳಿತೆ ಕೂಡಲಿಯ ತೀರದಲಿ 5ಭಕ್ತರೆಲ್ಲ ನೆರೆದು ನಿನ್ನಭಕ್ತಿಪಾಶದಿಂದ ಬಿಗಿದುಇಚ್ಛೆ ಬಂದ ತೆರದಿ ಕುಣಿಸೆಮೆಚ್ಚಿಅವರಪೊರೆವೆÀ ದೇವ6ಬಂದ ಜನರು ಛಂದದಿಂದತುಂಗಭದ್ರೆ ಸಂಗಮದಲಿಮಿಂದು ನಿನ್ನ ವಂದಿಸುವರೊತಂದೆ ಕಮಲನಾಭವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಔಪಾಸನವಮಾಡುದಾಸ ನಾನೆಂದುಶ್ರೀಪತಿದಾನ ಧರ್ಮವೆ ಮೋಕ್ಷವೆಂತೆಂದೂ ಪ.ವನಿತೆ ಲಕುಮಿಯು ದಾಸಿ ಮುಕ್ತಾಮುಕ್ತಗಣವೆಲ್ಲ ಹರಿದಾಸರುಹನುಮತ್ ಸ್ವಾಮಿಯು ರಾಮದಾಸತ್ವದ ಭಾಗ್ಯವನು ಹೊಂದಿವಿರಿಂಚಿಪದವಿಯ ಪಡೆದನು1ಅನಾದ್ಯನಂತಕಾಲಸಂಸೃತಿಯಲ್ಲಿಆನಂದವು ಮುಕ್ತಿಲಿನೀನೆಂದಿಗು ಸ್ವಾಮಿ ನಾನು ಭೃತ್ಯರಭೃತ್ಯಅನಿಮಿಷರೆಲ್ಲ ನಿನ್ನೂಳಿಗದವರೆಂದು 2ದಾರಾಪತ್ಯಾದಿ ಬಳಗ ದಾಸಿ ದಾಸರುನಾರಾಯಣ ದೇವನವರವರ ಯೋಗ್ಯತೆಸಾರಸಂಬಳ ಸೇವೆಮೀರದೀವ ದೀನೋದ್ಧಾರ ಕೃಷ್ಣನೆಂದು 3ಕರಣತ್ರಯಗಳಿಂದ ನಿರಂತರಮರೆಯೂಳಿಗವ ಮಾಡಿಸಿರಿದಾರಿದ್ರ್ರ್ಯತೆಗಳಿಗ್ಹಿಗ್ಗಿ ಕುಗ್ಗದೆಪರಮಭಕುತಿ ಭಾಗ್ಯ ದೊರಕಿದುಲ್ಲಾಸದಿ4ದುರಿತಕೋಟಿಗಂಜದೆ ಸಾಧುನಿಕರಹರಿಯ ಸೇವೆಯ ಬಿಡದೆವರವಿರತಿ ಜ್ಞಾನ ಭಕ್ತಿಲಿ ಪ್ರಸನ್ವೆಂಕಟಹರಿಕೊಟ್ಟಷ್ಟೆ ಪರಮಸಂಬಳ ಸಾಕೆಂದು5
--------------
ಪ್ರಸನ್ನವೆಂಕಟದಾಸರು
ಕಕ್ಷಾದೇವತೆಗಳ ಮನನ115ಪ್ರಾಣ ಪಾಲೀಸಿಂದ್ರಾನ ರಾಣೀ ದಕ್ಷಾನಿರುದ್ಧಾ |ಮಾನಿನಿರತಿಮನುಗುರುವಾಯು ಕೋಲೆ ||ಮಾನಿನಿರತಿಮನುಗುರುವಾಯು ಯಮಸೋಮ|ಮಾನವಿ ಭಾಸ್ಕರಗೆರಗೂವೆ ಕೋಲೆ 1ವರುಣ ನಾರದವಹ್ನಿತರುಣಿ ಪ್ರಸೂತಿ ಭೃಗು |ಸರಸೀಜಾಸನನ ಪುತ್ರರಾರೊಂದು ಕೋಲೆ ||ಸರಸೀಜಾಸನನ ಪುತ್ರರಾರೊಂದು ಮಂದಿಗಳ |ವರನಾಮ ವಿಸ್ತರಿಸಿ ವಂದಿಪೆ ಕೋಲೆ 2ಅಂಗೀರಾ ಪುಲಸ್ತ್ಯ ಅತ್ರಿ ಮಂಗಳಾಂಗ ಪುಲಹ ಕೃತು |ತುಂಗವಶಿಷ್ಠಿ ಮರೀಚಿಗೊಂದಿಪೆ ಕೋಲೆ ||ತುಂಗವಶಿಷ್ಠ ಮರೀಚಿ ವಿಶ್ವಾಮಿತ್ರನಿಗೆ ಮತ್ಸ್ಯಾ |ನಂಗ ಕಂಡ ವೈವಸ್ವತಗೊಂದಿಸುವೆ ಕೋಲೆ3ನಿರರುತಿ ಪ್ರಾವಾಹಿಮಿತ್ರಗುರುಪತ್ನೀಗೆ ವಂದಿಸುವೆ |ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಕೋಲೆ ||ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಅಶ್ವಿನೀಗ |ಳಿರಳೂ ಹಗಲೂ ನಾ ಸ್ಮರಿಸೂವೆ ಕೋಲೆ 4ಮರುತೂ ನಾಲ್ವತ್ತೊಂಬತ್ತುಗುರುವಿಶ್ವೇದೇವ ಹತ್ತು |ಎರಡು ಅಶ್ವೀನೀ ರುದ್ರರ್ಹನ್ನೊಂದೂ ಕೊಲೆ ||ಎರಡು ಅಶ್ವೀನೀ ರುದ್ರರ್ಹನ್ನೊಂದೂ ವಸುಯಂಟು |ಎರಡಾರು ಸೂರ್ಯರಿಗೆರಗೂವೆ ಕೋಲೆ 5ಭಾರತೀ ಭರತಾಗೆ ಮೂರು ಪಿತೃಗಳಿಗೆ |ಧಾರೂಣೀ ಋಭುವೀಗೆರಗುವೆ ಕೋಲೆ ||ಧಾರೂಣೀ ಋಭುವೀಗೆರಗೂವೆ ತಿಳೀವದು |ನೂರು ಮಂದೆಂದೂ ಕರಸೋರು ಕೋಲೆ 6ಮೂರು ಮಂದೀ ಉಳಿದೂ ಈರೈದು ಒಂದು ಮನು |ಚಾರುನಾಮಗಳ ವರ್ಣೀಪೆ ಕೋಲೆ ||ಚಾರುನಾಮಗಳ ವರ್ಣೀಪೆ ದಯಮಾಡಿ |ಸೂರಿಗಳೆಲ್ಲಾ ಕೇಳ್ವೋದು ಕೋಲೆ 7ಸ್ವಾರೋಚೀಷೋತ್ತುಮಾನು ಶ್ರೀ ರೈವತ ಚಾಕ್ಷುಷಾ |ನಾರಾಯಣನ ದಾಸ ಸಾವರ್ಣಿ ದಕ್ಷಾ ಕೋಲೆ ||ನಾರಾಯಣನ ದಾಸ ಸಾವರ್ಣಿ ದಕ್ಷ ಬ್ರಹ್ಮ |ಮಾರಾರಿದೇವ ಧರ್ಮ ಇಂದ್ರ ಸಾವರ್ಣೀ ಕೋಲೆ 8ಎಂದಿವರೀಗೊಂದೀಸಿ ಮುಂದೆ ಚವನ ಋಷಿ |ನಂದಾನೋಚಿತ್ಥ್ಯ, ಪಾವಕಾ, ಧೃವ, ನಹುಷ ಕೋಲೆ ||ನಂದಾನೋಚಿತ್ಥ್ಯಪಾವಕಧೃವನಹುಷಶಶಿ|ಬಿಂದೂ ಪ್ರಹ್ಲಾದ ಪ್ರಿಯ ವೃತಗೊಂದಿಸುವೆ ಕೋಲೆ9ಶಾಮಲಾ ಗಂಗಾ ಉಷಾ ಸೋಮರಾಣಿ ಸಂಜ್ಞಾ |ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ಕೋಲೆ ||ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ವಂದಿಸೀ ಅನ |ಭೀ ಮಾನೀ ಸೂರರನ್ನ ಮನದೊಳು ನೆನವೆನೆ ಕೋಲೆ 10ಅನಲರಸೀಬುಧಅಶ್ವಿನಿ ಭಾರ್ಯಾ ಛಾಯಾ ಪುತ್ರ |ಶನಿ ಪುಷ್ಕರಜಾನೂಜ ದೇವತಿಗಳಿಗೆ ಕೋಲೆ ||ಶನಿ ಪುಷ್ಕರಜಾನೂಜ ಮನ ದೇವತೆಗಳಿಗೊಂದಿಪೆ ಸು |ಪ್ರಾಣೇಶ ವಿಠಲಾನಲ್ಲಿರಲೆಂದು ಕೋಲೆ 11ಉರುವಸೀ ಮುಖ್ಯ ಅಪ್ಸರ ಸ್ತ್ರೀಯರೀಗೊಂದಿಸೀ |ಹರಿನಾರಿಯರ ಪಾದಕ್ಕೆರಗೂವೆ ಕೋಲೆ ||ಹರಿನಾರಿಯರ ಪಾದಕ್ಕೆರಗಿ ಪಿತೃಗಂಧರ್ವ |ನರನಾರಪತಿಮನುಷ್ಯೋತ್ತಮರಿಗೊಂದಿಸುವೆ ಕೋಲೆ12ಈ ನಿರ್ಜರರ ಧ್ಯಾನವನ್ನು ಮಾಡುತ್ತಾ |ಪ್ರಾಣೇಶ ವಿಠಲನ ಆ ನಾಭಿಯಿಂದ ||ಪ್ರಾಣೇಶ ವಿಠಲನ ಆ ನಾಭಿಯಿಂದ ಬಂದ |ಜ್ಞಾನಿಗಳ ಸಂತತೀ ನಾ ವರ್ಣಿಸುವೆ ಕೋಲೆ 13
--------------
ಪ್ರಾಣೇಶದಾಸರು
ಕಂಡೀರೆ ನೀವೆಲ್ಲರೂ ಶ್ರೀಕೃಷ್ಣನ ಕಂಡೀರೆ ಪಕಂಡೀರೆ ಪಾಂಡುರಂಗನನೂ ಕಳಕೊಂಡಿರೆಪಾಪ ಸರ್ವವನೂ ಅಂಡಜವಾಹನನಾಗಿಸಂಚರಿಸುವಪುಂಡರೀಕಾಕ್ಷಬ್ರಹ್ಮಾಂಡ ನಾಯಕನನ್ನೂ 1ಎಂಟನೆ ಅವತಾರಿಯೆನಿಸಿ ದೇವಕಿ ಎಂಟನೇಗರ್ಭದಿ ಜನಿಸಿ ಎಂಟನೆಮಾಸಶ್ರಾವಣಕೃಷ್ಣಾಷ್ಟಮಿ ದಿನ ನಟ್ಟಿರುಳಿನಲಿಸೃಷ್ಟಿಗಿಳಿದ ಶ್ರೀಕೃಷ್ಣನ 2ಮಧುರಾ ಪಟ್ಟಣದಿ ಮೈದೋರಿ ಬಹುವಿಧವಾಗಿ ಗೋಕುಲದೊಳಗಾದಧಿಘೃತಚೋರಕನೆಂದು ಯಶೋದೆಗೆಪದುಮಾಕ್ಷಿಯರು ಬಂದು ದೂರುವ ಕೃಷ್ಣನ 3ದನುಜೆ ಪೂತನೆಯಸುಗೊಂಡು ತನ್ನಜನನಿಗೋಪಿಗೆ ಬಾಯೊಳ್ ತೋರ್ದ ಬ್ರಹ್ಮಾಂಡವನಜಾಕ್ಷಿಯರ ಕೂಡಿ ಯಮುನಾ ತೀರದೊಳಾಡಿವನಿತೆಯರುಡುವ ಶೀರೆಗಳೊಯ್ದ ಕೃಷ್ಣನೇ 4ಗೋವಳರರಸನೆಂದೆನಿಸಿ ಶಿರಿಗೋವರ್ಧನವೆತ್ತಿಗೋವ್ಗಳ ಮೇಸಿ ಪಾವಕನುಕಾಳಿಮರ್ದನ ಗೈದು ಮಾವ ಕಂಸನ ಗೆಲ್ದಮಧುರೆಯೊಳ್ ಕೃಷ್ಣನಾ 5ದ್ವಾರಕಾಪುರವೊಂದ ರಚಿಸಿ ಬಲವೀರರಾಮನ ದೊರೆರಾಯನೆಂದೆನಿಸಿನಾರಿಯರ್ ಹದಿನಾರು ಸಾವಿರ ವಡಗೂಡಿಮಾರಕೇಳಿಯೊಳ್ ಮುದ್ದು ತೋರುವ ಕೃಷ್ಣನ 6ಶರದ ಸೇತುವಿಗೆ ಮೈಯ್ಯಾಂತ ಉಟ್ಟಶೆರಗೀಗೆ ವರವ ದ್ರೌಪದಿಗೊಲಿದಿತ್ತನರನ ಸಾರಥಿಯಾಗಿ ಕುರುನೃಪರನು ಗೆಲ್ದುಧರೆಯ ಪಟ್ಟವ ಧರ್ಮಜನಿಗಿತ್ತ ಕೃಷ್ಣನೆ 7ದುಷ್ಟ ನಿಗ್ರಹನೆಂಬ ಬಿರುದೂ ಭಕ್ತರಕ್ಷಕನೆಂದು ಮೂರ್ಲೋಕವದೆಂದೂಸೃಷ್ಟಿಯೊಳ್ ನರಜನರು ನಮಿಸಿ ಪೂಜಿಸಲೆಂದುಬಿಟ್ಟರು ದ್ವಾರಕಾಪುರವ ರಾಮಕೃಷ್ಣರು 8ಹಡಗಿನ ಮೇಲೇರಿ ಬಂದೂ ನಮ್ಮಉಡುಪಿಅನಂತೇಶನಿದಿರಾಗಿ ನಿಂದೂಕಡು ಕೃಪೆಯೊಳ್ ಭಕ್ತ ಕನಕನಿಗೊಲಿದವೊಡೆಯ ಗೊೀವಿಂದ ಗೋಪಾಲಕೃಷ್ಣನ 9
--------------
ಗೋವಿಂದದಾಸ
ಕಂಡೀರೇನೆ ಕಂಡೀರೇನೆ ಹಿಂಡುಗೋಪೇರುಪುಂಡರೀಕವರದ ಶ್ರೀ ಪಾಂಡುರಂಗ ಕೃಷ್ಣಯ್ಯನ ಪ.ಒಮ್ಮೆ ನಾನಂಜಿಸಿಕೊಂಡರಮ್ಮೆಯನುಣ್ಣದೆ ಹೋದನಮ್ಮ ರಂಗ ಸುಮ್ಮಾನದಿ ಭೀಮರಥಿಯಲಿದ್ದಾನಂತೆ 1ಎಡಬಲ ನೋಡದಲೆ ನಡೆದ ಕಾರಣವೇನೆಹಡೆದವರ ಮೇಲೆ ತಾ ಕಡುಕೋಪ ಉಚಿತೇನೆ 2ಗೆಜ್ಜೆ ಘಿಲ್ಲು ಒಡ್ಯಾಣದ ಗುಜ್ಜನ ಕಾಣದೆ ಕಣ್ಣಕಜ್ಜಳ ನೀರಾಗುತಿವೆ ದುರ್ಜನಾರಿ ಕೃಷ್ಣಯ್ಯನ 3ತಾಯಿತಂದೇರಗಲಿ ತಾನು ಬಯಲೊಳಗೆಂತಿಹನೆಮಾಯದ ಲೀಲೆಯ ನೋಡ್ವ ಬಯಕೆ ಕೈಗೂಡಲಿಲ್ಲ 4ಆಡುತಾಡುತ ಬತ್ತಲೆ ಓಡಿದ ವಾಜಿಯನೇರಿರೂಢಿಯೊಳ್ಪ್ರಸನ್ವೆಂಕಟ ಒಡೆಯ ವಿಠಲಯ್ಯನ 5
--------------
ಪ್ರಸನ್ನವೆಂಕಟದಾಸರು
ಕಂಡು ಅಂಜಿದೆವಯ್ಯ ವೆಂಕಟನಿನ್ನ ಕಂಡು ಅಂಜಿದೆವಯ್ಯಪುಂಡರಿಕಾಕ್ಷ ನಿನ್ನ ಸೊಂಡಿಲಮಾರಿಸಾಲದೆ ವದನವ ಪ.ಅಚ್ಯುತನಿನಗುಣ ಸ್ವಚ್ಚವೆÉಂದು ಬರಲುಮಚ್ಚಕೂರ್ಮಅತಿ ಹುಚ್ಚುರೂಪಗಳು1ಮುರಲಿಧರ ನಿನಗೆ ಎರಗಲು ಬಂದರೆಕ್ವಾರಿದಾಡಿಲುರಿಬಾಯಿ ತೆರೆದದ್ದು ನಾವು 2ಸುರತನೆಂದು ನಾವು ನಿರುತಲಿ ಬಂದರೆತಿರಕ ಕೊಡಲಿ ಎತ್ತಿ ಕರಕರ ಬಡಿಸÀುವ 3ಕೊಂಡಾಡೊ ಗುಣವಿಲ್ಲ ಹೆಂಡÀತಿಯನೆ ಒಲ್ಲಿಬಂಡಿ ಮುರಿದು ಅತಿದಿಂಡೆ ಪುರುಷನ 4ಉತ್ತಮನೆ ರಮಿಯರಸು ಬತ್ತಲಿದ್ದ ಮ್ಯಾಲೆಹತ್ತಿ ಕುದುರೆ ಕತ್ತಿ ಸುತ್ತ ಬೀಸುವನ 5
--------------
ಗಲಗಲಿಅವ್ವನವರು
ಕಂಡು ಅಂಜುವರೇನ ದೂತೆಪಾಂಡವರ ಅರಸಿಯಭೂಮಂಡಲದ ಬಾಲೆಯರುಕಂಡರೆಂದು ಕೊಂಡಾಡಮ್ಮ ಪ.ಉಮಾಶಚಿ ಶಾಮಲೆ ಉಷೆಬೊಮ್ಮಶಪಿಸಲು ಅಂಜುತಲೆಅಮ್ಮಭಾರತಿರತಿಸಮ್ಮಿಸಿಟ್ಟಳಾ ದೇವತೆ 1ಇಂದುಮಾರುತನ ರಾಣಿಮುಂದಿನ ಕಲ್ಪದ ವಾಣಿಸಂದೇಹಬ್ಯಾಡಮ್ಮ ಜಾಣೆಇಂದರೇಶನ ಸೊಸೆಯು ಕಾಣೆ 2ಚಂದ್ರಕಾಳಿ ಇಂದ್ರಸೇನ ಬಂದುದ್ರೌಪತಿ ವಿಪ್ರಕನ್ಯಒಂದೊಂದು ರೂಪಗಳೆ ರನ್ನಚಂದ ಬಣ್ಣಿಪರಮ್ಮ ಆಕೆಯನ್ನು 3ಎಲ್ಲರ ನಡೆಒಂದೆ ಎಲ್ಲರ ನುಡಿ ಒಂದೆದೇಹ ನಿಂದೆ ಎಲ್ಲರಹೃದಯದಲಿ ನಿಂತಎಲ್ಲರೊಲ್ಲಭನ ಹೊಂದು 4ಪರಮೇಷ್ಟಿಎಂಬದಾತಾಪರಮಶಾಪ ಹೊಯ್ಸುತ ಶಿರಿರಾಮೇಶನಭಕ್ತ ಮಾರುತ
--------------
ಗಲಗಲಿಅವ್ವನವರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು
ಕಡುಕೃಪೆಯಿಂದಹರಿ ಒಲದರೆ ಸತ್ಯದ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಡೆವಳಿ ಮೌನವೆ ಸಾಕ್ಷಿದೃಡ ಭಕ್ತರಿಗುಣಬಡಿಸಿದಂಥವರಿಗೆಷಡುರ ಸ್ನಾನವೇ ಸಾಕ್ಷಿ ಪಅನ್ನದಾನ ಮಾಡಿದ ಮನುಜಗೆ - ದಿವ್ಯಾನ್ನವುಂಬುವುದೇ ಸಾಕ್ಷಿಅನ್ನದಾನ ಮಾಡದ ಮನುಜಗೆ - ಸರರನ್ನಕೆ ಬಾಯ್ಬಿಡುವುದೆ ಸಾಕ್ಷಿ 1ಕನ್ಯಾದಾನ ಮಾಡದ ಮನುಜಗೆ ಚೆಲ್ವಹೆಣ್ಣಿನ ಭೋಗವೇ ಸಾಕ್ಷಿಕನ್ಯಾದಾನ ಮಾಡದ ಮನುಜಗೆ -ಪರಹೆಣ್ಣಿನ ಹೋರಾಟವೇ ಸಾಕ್ಷಿ 2ಪರರಿಗೊಂದು ತಾನೊಂದುಂಬುವರಿಗೆಜ್ವರ -ಗುಲ್ಮ ರೋಗವೇ ಸಾಕ್ಷಿಪರಿಪರಿ ವಿಧದಿಂದ ಹಿರಿಯರ ದೂರುವಗೆತಿರಿದು ತಿಂಬುವುದೇ ಸಾಕ್ಷಿ 3ಕಂಡ ಪುರುಷಗೆ ಕಣ್ಣಿಡುವ ಸತಿಯು - ತನ್ನಗಂಡನ ಕಳೆಯುದೇ ಸಾಕ್ಷಿಪುಂಡತನದಿಪರ ಹೆಂಗಳೆನುಳುಪುವಗೆಹೆಂಡಿರು ಕಳೆವುದೇ ಸಾಕ್ಷಿ 4ಕ್ಷೇತ್ರದಾನದ ಮಾಡಿದ ಮನುಜಗೆ - ಏಕಛತ್ರದ ರಾಜ್ಯವೇ ಸಾಕ್ಷಿಮುಕ್ತಿ ಪಡೆದು ತಿಳಿ ಪುರಂದರವಿಠಲನಭಕ್ತನಾಗುವುದೇ ಸಾಕ್ಷಿ 5
--------------
ಪುರಂದರದಾಸರು