ಒಟ್ಟು 24701 ಕಡೆಗಳಲ್ಲಿ , 138 ದಾಸರು , 9090 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಖ್ಯಾತಿಯಿಂದಪುರುಹೂತಸಹಿತ ಸುರ |ವ್ರಾತವು ನಿನ್ನನು ಒತ್ತಿ ಓಲೈಸಲು ||ಭೂತಳದೊಳು ಸಂಪ್ರೀತಿಗೆ ಸಿಲುಕಿ ನೀ |ಪಾರ್ಥನ ರಥಕೆ ಸೂತನಾದ ಮೇಲೆ 2ಪರಮಪುರುಷ ಪರಬೊಮ್ಮ ನೀನೆನುತಲಿ |ನಿರುತದಿ ಶ್ರೂತಿಯು ಕೊಂಡಾಡುತಿರೆ ||ವರಪಾಂಡವರರ ಮನೆಯೊಳುಊಳಿಗ|ಕರೆಕರೆದಲ್ಲಿಗೆ ಪೋದಪೋದ ಮೇಲೆ 3ಧುರದಲಿ ಪಣೆಯನೊಡೆದ ಭೀಷ್ಮನ ಸಂ- |ಹರಿಪೆನೆನುತ ಚಕ್ರವ ಪಿಡಿಯೆ ||ಹರಿನಿನ್ನ ಕರುಣದ ಜೋಡು ತೊಟ್ಟಿರಲವ- |ನಿರವ ಕಾಣುತ ಸುಮ್ಮನೆ ತಿರುಗಿದ ಮೇಲೆ 4ತರಳನು ಕರೆಯಲು ಭರದಿ ಕಂಬದಿ ಬಂದು |ನರಮೃಗರೂಪ ಭಕ್ತರ ತೆತ್ತಿಗನೆ ||ವರದ ಪುರಂದರವಿಠಲರಾಯ ನಿನ |ಸ್ಮರಿಪರ ಮನದಲಿ ಸೆರೆಯು ಸಿಕ್ಕಿದ ಮೇಲೆ 5
--------------
ಪುರಂದರದಾಸರು
ಗಂಗಾಧರ ದೇವ ಜಯಗೀಷ ವ್ಯಾನಂಗಾರಿ ಗಿರಿಜಾಧವ |ಮಂಗಳ ಪ್ರದನೆ ಅಮಂಗಳ ಶೀಲ | ಭುಜಂಗ ರೂಪದಿ ಪಾಂಡು |ರಂಗ ಘಾಸಿಗೆಯಾದ ಪವೈಕಾರಿಕಾಹಂಕಾರ ತತ್ವದೊಡೆಯ, ನಾಕುಮೊಗನ ಕುಮಾರ |ಶ್ರೀಕಂಠ, ಸ್ಥಾಣು, ವಿಶ್ಖೋಜನಕ, ಚಂದ್ರಶೇಖರ, ಈಶಪಿನಾಕಿಭಕ್ತವತ್ಸಲ |ಶೋಕನಾಶಕ ಶಂಭು, ಪಶುಪತಿ, ಹೇ ಕರುಣಿ, ಸದ್ಗುಣ ಸುಖಾರ್ಣವ |ಪಾಕಶಾಸನ ಪ್ರಮುಖ ವಂದ್ಯ, ವಿಶೋಕ, ಎನ್ನಭಿಲಾಷೆ ಪೂರ್ತಿಸು1ಪ್ರಾಣನಂದನ ತೈಜಸಾಹಂಕಾರಾಭಿಮಾನಿ ಶ್ರೀಶುಕದೂರ್ವಾಸ|ಕ್ಷೋಣಿಸಂಧೃತ ಧನ್ವಿ, ದಾನವಾಂತಕ, ಶೂಲಪಾಣಿ, ಪ್ರಮಥಾಧಿಪ ಬಾಣವರದಯನ್ನ |ಮಾನನಿನ್ನದು ಚಕ್ರಿ ಪದಕಂಜರೇಣುತೋರಿಸು ತವಕದಿಂದಲಿ |ದ್ರೌಣಿ, ಶಿವ, ಪ್ರಣತ ಜನ ಸುಮನಸಧೇನು, ತವ ಪದ ಸಾರ್ವೆ ಸತತ 2ತಾಮಸಾಹಂಕಾರೇಶ ಸಂಕರ್ಷಣನಾ ಮಗನೇ ಕೊಡು ಲೇಸ ರಾಮನಾಮ ಮಂತ್ರ |ಪ್ರೇಮದಿ ಜಪಿಸುವ ಸ್ವಾಮಿ, ಅನಲ,ವಹ್ನಿಸೋಮಲೋಚನ ಹರ |ವಾಮದೇವ, ಕಪರ್ದಿ,ಭವಭಯ ಭೀಮ ಶ್ರೀ ಪ್ರಾಣೇಶ ವಿಠಲನ |ಪ್ರೇಮ ಪುಟ್ಟಿಸೋ ರೌಪ್ಯ ಪರ್ವತಧಾಮ ಶ್ರೀ ವಿರೂಪಾಕ್ಷ ಗುರುವೇ 3
--------------
ಪ್ರಾಣೇಶದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ಗಂಡಬಿಟ್ಟ ಗೈಯಾಳಿ ಕಾಣಣ್ಣ - ಅವಳಕಂಡರೆ ಕಡೆಗಾಗಿ ದಾರಿ ಪೋಗಣ್ಣ ಪ.ಊರೊಳಗೆ ತಾನು ಪರದೇಶಿಯೊನ್ನವಳುಸಾರುತ ತಿರುಗುವಳು ಮನೆಮನೆಯಕೇರಿ - ಕೇರಿಗುಂಟ ಕಲೆಯತ ತಿರುಗುವಳುನಾರಿಯಲ್ಲವೊ ಮುಕ್ಕಾ ಮಾರಿಕಾಣ್ಣ 1ಅತ್ತೆ ಮಾವನ ಕೂಡ ಅತಿ ಮತ್ಸರವ ಮಾಡಿನೆತ್ತಿಗೆ ಮದ್ದನೆ ಊಡುವಳುಸತ್ಯರ ದೇವರ ಸತ್ಯ ನಿಜವಾದರೆಬತ್ತಲೆ ಅಡ್ಡಂಬಲೂಡೇನೆಂಬುವಳು 2ಹಲವು ಜನರೊಳು ಕಿವಿಮಾತನಾಡವಳುಹಲವು ಜನರೊಳು ಕಡಿದಾಡವಳುಹಲವು ಜನರೊಳ ಕೂಗಿ ಬೊಬ್ಬೆಯನಿಡುವಳುತಳವಾರ ಚಾವಡಿಯಲಿ ಬರಲಿ ಹೆಣ್ಣು 3ಪರಪುರುಷರ ಕೂಡಿ ಸರಸವಾಡುತ ಹೋಗಿನೆರೆದಿದ್ದ ಸಭೆಯಲಿ ಕರೆಯುವಳುಮರೆಸಿ ತನ್ನವಗುಣ ಗಾಡಿಯೆಂದು ಮೆರೆವಳುಕರಿರೂಪದವಳ ನೀ ಕೆಣಕದಿರಣ್ಣ 4ಏಸು ಗೃಹಗಳೆಂದು ಎಣಿಸಿ ನೋಡಿಬಂದುಬೇಸರದೆ ಜನಕೆ ಹೇಳುವಳುಲೇಸಾಗಿ ಪುರಂದರವಿಠಲನು ಹೇಳಿದಹೇಸಿ ತೊತ್ತನು ನೀನು ಕೆಣಕದಿರಣ್ಣ 5
--------------
ಪುರಂದರದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗಂಭೀರೆಯರ ನಿಲ್ಲಿಸಿದಿಪೋರಬುದ್ಧಿಯ ಬಾಲೆನೀರೆಮನಕೆ ತಾರೆ ಪ.ನೀರಜಾಕ್ಷೆಯರ ನಿನ್ನದ್ವಾರದಿ ನಿಲ್ಲಿಸಿದಿಪೋರಬುದ್ಧಿಯನೆಲ್ಲತೋರಿಸಿದೆ ಈಗ 1ನೋಡಿ ನಮ್ಮನು ಕರೆಯದೆಓಡಿದೆ ಒಳಗಿನ್ನುಮಾಡಿದ ಕಪಟದ ಸೇಡುತೆಗೆಯುವೆ ನೀಗ 2ಮೂಡಲಗಿರಿವಾಸನೋಡುವಂತೆಮಾರಿಬಾಡಿಸಿ ಕಳಿಸುವೆನೋಡಿಕೊ ರುಕ್ಮಿಣಿ 3ಹೀನಗುಣದ ಬಾಲೆಮಾನವು ನಿನಗಿಲ್ಲಶ್ರೀನಿವಾಸನು ನಿನ್ನಏನೆಂದು ಮದುವೆಯಾದ 4ರಜವೆಂಬೊಗುಣಸೇರಿರಾಜ್ಯ ಭೋಗವಬಟ್ಟೆತ್ರಿಜಗವಂದನ ಕೂಡಭುಜಗಾಲಿಂಗನೆಯಾಕೆ 5ಸತ್ವಗುಣವ ಸೇರಿಅತ್ಯಂತ ಸುಖಿಸಿದಿಚಿತ್ತಜನಯ್ಯಗೆಪತ್ನಿ ತಕ್ಕವಳಲ್ಲ 6ತಮವೆಂಬೊ ಗುಣಗಳಸುಮ್ಮನೆ ಗುತ್ತಿಗೆ ಹೊತ್ತಿರಮಿ ಅರಸನ ಕೂಡರಮಿಸೋದು ತರವಲ್ಲ 7
--------------
ಗಲಗಲಿಅವ್ವನವರು
ಗರುಡಗಮನಬಂದನೋ-ನೋಡಿರೊ ಬೇಗಗರುಡಗಮನಬಂದನೋಪಗರುಡಗಮನಬಂದ ಧರಣಿಯಿಂದೊಪ್ಪುತಕರೆದು ಬಾರೆನ್ನುತ ವರಗಳ ಬೀರುತ ಅ.ಪಎನ್ನ ರಕ್ಷಿಪ ದೊರೆ ಇಲ್ಲಿಗೆ ತಾ ಬಂದಚಿನ್ನದೊಲ್ ಪೊಳೆವವಿಹಂಗರಥದಲಿ ||ಘನ್ನ ಮಹಿಮ ಬಂದsಚ್ಛಿನ್ನ ಮೂರುತಿ ಬಂದಸಣ್ಣ ಕೃಷ್ಣನು ಬಂದ ಬೆಣ್ಣೆಗಳ್ಳನು ಬಂದ 1ಪಕ್ಷಿವಾಹನ ಬಂದ ಲಕ್ಷ್ಮೀಪತಿಯು ಬಂದಕುಕ್ಷಿಯೊಳೀರೇಳು ಜಗವನಿಟ್ಟವ ಬಂದ ||ಸೂಕ್ಷ್ಮ-ಸ್ಥೂಲದೊಳಗಿರುವನು ತಾ ಬಂದಸಾಕ್ಷೀ ಭೂತನಾದ ಸರ್ವೇಶ್ವರ ಬಂದ 2ತಂದೆಪುರಂದರವಿಠಲರಾಯ ಬಂದಬಂದುನಿಂದುನಲಿದಾಡುತಿಹ ||ಅಂದು ಸಾಂದೀಪನ ನಂದನನ ತಂದಿತ್ತಸಿಂಧುಶಯನ ಆನಂದ ಮೂರುತಿ ಬಂದ3
--------------
ಪುರಂದರದಾಸರು
ಗಾಳಿ ಬಂದ ಕೈಯಲಿ ತೂರಿಕೊಳ್ಳಿರೊ |ನಾಲಗೆಯಿದ್ದ ಕೈಯಲಿ ನಾರಾಯಣನೆನ್ನಿರೊ ಪ.ಕದ್ದು ಹುಸಿಯನಾಡಿಅಪಾರ |ಬುದ್ದಿಯಿಂದ ಕೆಡಲು ಬೇಡಿ ||ಬುದ್ದಿವಂತರಾಗಿ - ಅನಿ |ರುದ್ಧನ ನೆನಯಿರೊ 1ನಿತ್ಯವಿಲ್ಲ ನೇಮವಿಲ್ಲ |ಮತ್ತೆ ಧಾನಧರ್ಮವಿಲ್ಲ ||ವ್ಯರ್ಥವಾಗಿ ಕೆಡದೆ - ಪುರು |ಷೋತ್ತಮನೆನ್ನಿರೊ 2ಭಕ್ತಿಕೊಡುವ ಮುಕ್ತಿಕೊಡುವ |ಮತ್ತೆ ದಾಯುಜ್ಯ ಕೊಡುವ ||ಕರ್ತೃ ಪುರಂದರವಿಠಲನ |ನಿತ್ಯನೆನೆಯಿರೊ3
--------------
ಪುರಂದರದಾಸರು
ಗಿಳಿಯು ಪಂಜರದೊಳಿಲ್ಲ - ಶ್ರೀ ರಾಮ ರಾಮ |ಗಿಳಿಯು ಪಂಜರದೊಳಿಲ್ಲ ಪ.ಅಕ್ಕ ಕೇಳೆ ಎನ್ನ ಮಾತು ||ಚಿಕ್ಕದೊಂದು ಗಿಳಿಯ ಸಾಕಿದೆ ||ಅಕ್ಕ ನಾನಿಲ್ಲದ ವೇಳೆ |ಬೆಕ್ಕು ಕೊಂಡು ಹೋಯಿತಯ್ಯೋ 1ಅರ್ತಿಗೊಂದು ಗಿಳಿಯ ಸಾಕಿದೆ |ಮುತ್ತಿನ ಹಾರವನು ಹಾಕಿದೆ ||ಮುತ್ತಿನಂಥ ಗಿಳಿಯು ತಾನು |ಎತ್ತ ಹಾರಿ ಹೋಯಿತಯ್ಯೋ 2ಹಸಿರು ಬಣ್ಣದ ಗಿಳಿಯು |ಹಸಗುಂದಿ ಗಿಳಿಯು ತಾ |ಮೋಸ ಮಾಡಿ ಹೋಯಿತಯ್ಯೋ 3ಮುಪ್ಪಾಗದ ಬೆಣ್ಣೆಯ |ತಪ್ಪದೆ ಹಾಕಿದೆ ಹಾಲು ||ಒಪ್ಪದಿಂದ ಕುಡಿದು ತಾನು |ಗಪ್ಪನೆ ಹಾರಿ ಹೋಯಿತಯ್ಯೋ 4ಒಂಬತ್ತ ಬಾಗಿಲ ಮನೆಯು |ತುಂಬಿದ ಸಂರ್ದಶಿ ಇರಲು ||ಕಂಬ ಮುರಿದುಡಿಂಬ ಬಿದ್ದು |ಅಂಬರಕಡರಿ ಹೋಯಿತಯ್ಯೋ 5ರಾಮ ರಾಮ ಎಂಬ ಗಿಳಿಯು |ಕೋಮಲ ಕಾಯದ ಗಿಳಿಯು ||ಸಾಮಜಪೋಷಕ ತಾನು |ಪ್ರೇಮದಿ ಸಾಕಿದ ಗಿಳಿಯು 6ಅಂಗೈಯಲಾಡುವ ಗಿಳಿಯು |ಮುಂಗೈಯ ಮೇಲಿನ ಗಿಳಿಯು ||ರಂಗ ಪುರಂದರವಿಠಲನಂತ |ರಂಗದೊಳಿಹ ಗಿಳಿಯು 7
--------------
ಪುರಂದರದಾಸರು
ಗುಜ್ಜಿರುಕ್ಮಿಣಿಗೆ ನಾಚಿ ಲಜ್ಜವಗೈಯ್ಯುತಲೆಮುಂದಕ್ಕೆ ಹೆಜ್ಜೆ ಹಾಕಲೊಲ್ಲಿ ಯಾಕೆಅರ್ಜುನನ ರಾಣಿ ಮುದ್ದು ಅರ್ಜುನನ ರಾಣಿ ಪ.ಒಬ್ಬರಿಗಿಂತ ಒಬ್ಬರ ಚಲ್ವಿಕೆಗೆ ಉಬ್ಬಿಹಳುಐವರ ನಿರ್ಭಯದಿ ನಾಚಿಕೆಯ ಬಿಟ್ಟುಒಬ್ಬಳೆ ಬೆರೆದಾಳು ದ್ರೌಪತಿಒಬ್ಬಳೆ ಬೆರೆದಾಳು 1ತರುಳ ರೈವರ ಚಲ್ವಿಕೆಗೆ ಮರುಳುಗೊಂಡಳುಸಭೆಯೊಳು ಅರಳು ಮಲ್ಲಿಗೆಯ ಮಾಲೆಯನುಕೊರಳಿಗೆ ಹಾಕಿದಳುಐವರ ಕೊರಳಿಗೆ ಹಾಕಿದಳು 2ಪಂಚ ಪಾಂಡವರ ನೋಡಿ ಚಂಚಲಾಗಿಹಳುನಾಚಿ ಹಂಚಿಕೆ ಹಾಕುವಾಗಜಾಣಿ ಮಂಚದಲ್ಲಿಹಳುದ್ರೌಪತಿ ಮಂಚದಲ್ಲಿಹಳು 3ಸರಿಕ ಸರಿಕ ನಾರಿಯರೆಲ್ಲಕರವಹೊಯ್ದರುಹೊರಗೆ ಬರಲ್ಹಾಂಗೆಂದು ಹೋಗಿಒಳಗೆ ಸೇರಿದಳು ದ್ರೌಪತಿಒಳಗೆ ಸೇರಿದಳು 4ಇಂದುರಾಮೇಶನ ಮಡದಿಯರುಬಿದ್ದು ನಗುವಂತೆನಾಚಿಸೆಂದು ಸೇರಿದಳೆ ಹೋಗಿಚಂದಾಗಿ ಆಕಾಂತೆ 5
--------------
ಗಲಗಲಿಅವ್ವನವರು
ಗುಟ್ಟ ಪೇಳಿದಳೊಂದು ಗುಣು ಗುಣು ಗುಣು ಎಂದು |ಗಟ್ಟಿ ಪೇಳಿದರತ್ತೆ ಬೈಯ್ಯುವಳೆಂದು ಪಪಚ್ಚೆ ಮಂಚದಿ ಬಂದು ಮಲಗಿಕೊಳ್ಳೆಂದು |ನಟ್ಟಿರುಳಲಿ ಬಹೆ ಕೃಷ್ಣ ಕೇಳೆಂದು ಅ.ಪಹದಿನಾರು ಸಾವಿರ ಸುದತಿಯರನು ಸೇರಿ |ಮದನಕೇಳಿದೊಳೆನ್ನ ಮರೆತೆಯಶೌರಿ|ಮದುವೆಯಾದವನೂರೊಳಿಲ್ಲ ಬಿಕಾರಿ |ಮದನತಾಪದಿ ಬೆಂದು ಬಳಲಿ ಬಾಯಾರಿ 1ಗುರುಕುಚವನುನೋಡುಹರುಷ ಮಾತಾಡು |ಮರುಗ ಮಲ್ಲಿಗೆ ಜಾಜಿ ಸರವ ತಂದೀಡೊ |ಕರುಪುರ ವೀಳ್ಯವ ಸವಿದು ನೀನೋಡು|ಪರಿಪರಿಯಲಿ ನಿನ್ನ ಕೃಪೆಯನೀಡಾಡು 2ಚಂದ್ರಗಾವಿಯ ಸೀರೆ ನೆರಿ ಹಿಡಿದುಟ್ಟು |ಚಂದದಿ ಕುಪ್ಪಸ ತೊಟ್ಟು ಜಡೆಬಿಟ್ಟು |ಚಂದನಕುಂಕುಮ ಕಸ್ತೂರಿ ಬೊಟ್ಟು |ಮಂದರಧರ ಗೊೀವಿಂದಗೆ ಚುಂಬನ ಕೊಟ್ಟು 3
--------------
ಗೋವಿಂದದಾಸ
ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು