ಒಟ್ಟು 1447 ಕಡೆಗಳಲ್ಲಿ , 105 ದಾಸರು , 1216 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀರಮಣನೆ ರಕ್ಷಿಸೆನ್ನನು ಅಧೋಕ್ಷಜ ಹರಿ ಪ ಮಂದ ಬಿಡಿಸಿ ಸಲಹೋ ದೇವ ಇಂದು ಮುಂದು ಎನಗೆ ನೀ ಗತಿ ಎಂದು ನಂಬಿದೆ ಮಂದರಧರ ಗೋವಿಂದ ಮುಕುಂದ1 ಗರುಡಗಮನ ವಾಸುದೇವ ನಿರುತ ನಿನ್ನ ಭಜಿಪ ಭಕ್ತರ ಸ್ಮರಣೆ ಪಾಲಿಸೊ ಪರಮಪುರುಷ ಹರಿ ಶರಧಿಶಯನ2 ದೇಶದೇಶ ತಿರುಗಿ ಬಹಳ ಬೇಸರದಲೆ ಬಳಲಿದವರ ಕ್ಲೇಶಗಳನೆ ಕಳೆದು ಪರಮೋಲ್ಲಾಸ ನೀಡಿದ ಸಾಸಿರನಾಮದ ಒಡೆಯನೆ ವೆಂಕಟ 3 ಕ್ಷೀರವಾರಿಧಿ ಶಯನದೇವ ಮಾರಪಿತ ಮಹಾನುಭಾವ ಶರಧಿ ಪಾರುಗಾಣಿಸೋ ಪರಿಸರ ನೊಡೆಯನÉ ಉರಗಶಯನ 4 ಶಂಖು ಚಕ್ರಧಾರಿ ಶ್ರೀಹರಿ ಪಂಕಜಾಕ್ಷರೊಳು ವಿಹಾರಿ ಶೌರಿ ಶಂಕರಾನುತ ಪಂಕಜಲೋಚನ ವೆಂಕಟರಮಣ 5 ಕಪಟ ಸೂತ್ರಧಾರಿ ಚಪಲ ಬುದ್ಧಿಯ ಬಿಡಿಸೊ ಶೌರೀ ಅಪರಿಮಿತ ಮಹಿಮೆಗಳ ತೋರಿ ನಟಿಸಿ ಮೆರೆವ ಸಟೆಯಲ್ಲವೊ ನಾರದ ಮುನಿ ಸೇವಿತ 6 ಕಮಲಾಪತೆ ಪ್ರಿಯ ಜೀಯ ಕಮಲಸಂಭವ ಜನಕದೇವ ಕಮಲನಾಭ ವಿಠ್ಠಲ ಕಾಯೋ ಶ್ರಮವ ಹರಿಸೊಸುಮನಸರೊಡೆಯನೆ ಸುರಮುನಿ ಸೇವಿತ 7
--------------
ನಿಡಗುರುಕಿ ಜೀವೂಬಾಯಿ
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ
ಲಾಲಿ ಪಾವನ ಚರಣ ಲಾಲಿ ಅಘಹರಣಲಾಲಿ ವೆಂಕಟರಮಣ ಲಲಿತ ಕಲ್ಯಾಣ ಪ ಮಾಧವ ವಸುದೇವ ತನಯಸನಕಾದಿ ಮುನಿವಂದ್ಯ ಸಾಧುಜನಪ್ರಿಯಇನ ಕೋಟಿಶತತೇಜ ಮುನಿಕಲ್ಪ ಭೂಜಕನಕಾದ್ರಿನಿಲಯ ವೆಂಕಟರಾಯ ಜೀಯ 1 ಜಗದೇಕನಾಯಕ ಜಲಜದಳನೇತ್ರಖಗರಾಜವಾಹನ ಕಲ್ಯಾಣ ಚರಿತಸಗರತನಯಾರ್ಚಿತ ಸನಕಾದಿ ವಿನುತರಘುವಂಶ ಕುಲತಿಲಕ ರಮಣೀಯ ಗಾತ್ರ2 ನವನೀತ ಸತಿ ವಿನುತ ವಿಶ್ವಸಂಚಾರನಂದ ಗೋವಿಂದ ಮುಚುಕುಂದ ನುತಸಾರ 3 ಅಖಿಳ ಲೋಕೇಶಲಕ್ಷಣ ಪರಿಪೂರ್ಣ ಲಕ್ಷ್ಮೀ ಪ್ರಾಣೇಶ4 ನರಮೃಗಾಕಾರಿ ಹಿರಣ್ಯಕ ವೈರಿಕರಿರಾಜ ರಕ್ಷಕ ಕಾರುಣ್ಯಮೂರ್ತಿಹರಿ ಆದಿಕೇಶವ ಗುರು ಅಪ್ರಮೇಯಸಿರಿಧರ ಶೇಷಗಿರಿ ವರ ತಿಮ್ಮರಾಯ 5
--------------
ಕನಕದಾಸ
ಲಾಲಿ ರಂಗನ ರಾಣಿ ಪರಮಕಲ್ಯಾಣಿ ಲಾಲಿ ಕೀರವಾಣಿ ಪಂಕಜಪಾಣಿ ಲಾಲಿ ಪ. ಕ್ಷೀರಸಾಗರದಲಿ ಜನಿಸಿ ತಾ ಬಂದು ವಾರಿಜಾಕ್ಷನ ವಕ್ಷಸ್ಥಳದಿ ತಾ ನಿಂದು ಘೋರ ಪಾತಕಿಗಳನು ಪೊರೆವೆನೆಂತೆಂದು ಶ್ರೀರಂಗಕ್ಷೇತ್ರದಲಿ ಬಂದು ತಾ ನಿಂದು 1 ಶುದ್ಧ ಪಾಡ್ಯ ತುಲಾ ಕಾರ್ತೀಕದಲಿ ಮುದ್ದು ಶ್ರೀರಂಗನ ರಾಣಿ ಹರುಷದಲಿ ದಂತದ ಉಯ್ಯಾಲೆಮಂಟಪದಲ್ಲಿ ಕಂತುಪಿತನರಸಿಯಾಡಿದಳೆ ಉಯ್ಯಾಲೆ 2 ಕಸ್ತೂರಿಯನಿಟ್ಟು ಮುತ್ತಿನ ಮೂಗುಬಟ್ಟು ಹಾರಪದಕಗಳು ಪೀತಾಂಬ್ರವನೆ ಉಟ್ಟು ಕುಂದಣದ ಒಡ್ಯಾಣವನ್ನು ಅಳವಟ್ಟು ಇಂದಿರಾದೇವಿ ಆಡಿದಳೆ ಉಯ್ಯಾಲೆ 3 ರತ್ನದಾ ಕಿರೀಟವನ್ನು ತಾ ಧರಿಸಿ ಕಮಲ ಸರಗಳಳವಡಿಸಿ ಮುತ್ತು ಸುತ್ತಿದ ರತ್ನದಸುಲಿಯನು ಧರಿಸಿ ಅ ಚ್ಚುತನರಾಣಿ ಆಡಿದಳೆ ಉಯ್ಯಾಲೆ 4 ದೋಸೆ ವಡೆ ನೈವೇದ್ಯ ಮೀಸಲನು ಸವಿದು ದಾಸರೆತ್ತಿದ ಪಿಷ್ಟದಾರತಿಯಲಿ ನಲಿದು ಲೇಸಾದ ಕರ್ಪೂರ ವೀಳ್ಯವನು ಸವಿದು ವಾಸುದೇವನರಾಣಿ ಆಡಿದಳೆ ಉಯ್ಯಾಲೆ 5 ವರರಂಗವಂಶದವರು ವರದಿಂದ ಪಾಡೆ ಕರುಣಾಕಟಾಕ್ಷದಿಂ ದೇವಿ ತಾ ನೋಡೆ ಪ್ರಜೆಗಳೆಲ್ಲರು ಬಂದು ವರಗಳನು ಬೇಡೆ ವಜ್ರದಭಯಹಸ್ತಗಳಿಂದ ವರಗಳನು ನೀಡೆ 6 ಕರ್ತ ಶ್ರೀ ಶ್ರೀನಿವಾಸ ರಂಗನಾರಾಣಿ ಸಪ್ತದಿನದುಯ್ಯಾಲೆಯನು ತಾ ರಚಿಸಿ ಭಕ್ತರಿಗೆ ತೀರ್ಥ ಪ್ರಸಾದಗಳನಿತ್ತು ಅರ್ಥಿಯಿಂ ತೆರಳಿದಳು ತನ್ನರಮನೆಗೆ 7
--------------
ಯದುಗಿರಿಯಮ್ಮ
ಲೋಕನೀತಿ ಅಚ್ಯುತಾನಂತ ಗೋವಿಂದ ಅಕ್ಷರೊತ್ತಮ ಸದಾನಂದ ಪ. ನಿಶ್ಚಲ ಭಕ್ತಿಯಿಂ ಮೆಚ್ಚಿಸು ಹರಿಯಂ ನಿಶ್ಚಯ ಪೋಪುದು ಭವಬಂಧ ಅ.ಪ. ಆಧಿವ್ಯಾಧಿಹರಣ ಕಾರಣ ಮಧು ಸೂದನ ಸತ್ಯ ಸದ್ಗುಣವೃಂದ ವೇದಗಮ್ಯ ಪ್ರಹ್ಲಾದ ಕ್ಷೇಮದ ಮ- ಹೋದಧಿಶಯನ ಮುಕುಂದ 1 ಶ್ರೀಬ್ರಹ್ಮಾದಿ ದಿವಿಜಕುಲವಂದಿತ ಶೋಭಿತ ಪಾದಾರವಿಂದ ಈ ಭೂಮಿಯೊಳಗೆ ಜನಿಸಿದಕೆ ಸಫಲ ಲಾಭವೆ ಹರಿಕಥಾನಂದ 2 ಪ್ರಾಣನಿಯಾಮಕ ಸರ್ವತ್ರ ವ್ಯಾಪ್ತ ಧ್ಯಾನಿಸದಿರು ನೀ ಬೇರೊಂದ ದೀನವತ್ಸಲ ಸುಮ್ಮಾನದಿ ಕಾವ ಲ- ಕ್ಷ್ಮೀನಾರಾಯಣ ದಯದಿಂದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಂದಿಪೆ ತವ ಪಾದಕೆ ಭವದ ಬಂಧನ ಕಳೆವುದಕೆಪ ಹಿಂದೆ ಮುಂದೆ ಎಂದೆಂದಿಗು ಎನ್ನಯ ಕುಂದುಗಳೆಣಿಸದೆ ಕರುಣಿಪುದೆನ್ನುತ ಅ.ಪ ಅಪರಾಧಿಯು ಎಂದು ತಿಳಿದರು ಗುಪಿತದಿ ಸಲಹುವದು ಅಪಮೃತ್ಯುವು ಪರಿಹಾರಕೆ ನಿಮ್ಮಯ ಉಪದೇಶದ ಮಂತ್ರವೆ ಪರಮೌಷಧಿ 1 ಕಾಯಕ್ಲೇಶದಿಂದ ಮನಸಿನ ಹೇಯ ವ್ಯಥೆಗಳಿಂದ ಕಾಯಜ ಪಿತನಂಘ್ರಿಯ ಸೇವಿಸದಲೆ ಆಯಾಸದಿ ಮನ ಕಳವಳಗೊಳುತಿದೆ 2 ಆರು ಮಂದಿ ಇಹರು ಮಾಯಾ ಪಾಶಾದಿ ಬಂಧಕ ಪಡಿಸುತ ಹಾಯಲೀಸರೊ ಹರಿ ಅಂಘ್ರಿಗಳಲಿ 3 ಆರಿಗುಸುರಲೇನು ಮಾಡಿದ ಕಾಂiÀರ್iವು ಮುಂದಿನ್ನೂ ಆನಂದಮಯ ವಿಠ್ಠಲದಾಸರ ಕೂಡಿ ಆದರುಸುವುದಿನ್ನೂ ಮುನ್ನೂ4 ಕಮಲನಾಭ ವಿಠ್ಠಲನೊಲುಮೆಯು ಸುಲಭದಿ ಪಡೆವುದಕೆ ಅನುದಿನ ಪ್ರಾರ್ಥಿಸುತ5
--------------
ನಿಡಗುರುಕಿ ಜೀವೂಬಾಯಿ
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಂದಿಸಿ ಬೇಡುವೆ ನವಗ್ರಹರ ಕುಂದುಗಳೆಣಿಸದೆ ಬಂದು ರಕ್ಷಿಸಲೆಂದು ಪ ಭಾಸುರ ಸೂರ್ಯನು ಭಾಸಿಸಲಿ ತತ್ವವನು ಶ್ರೀ ಸಹೋದರ ಚಂದ್ರ ತೋಷವನು ಸೂಸಿ ಕೊಡಲಿ ಮಂಗಳವನು ಮಂಗಳ ಲೇಸಾದ ಪಾಂಡಿತ್ಯ ಪಂಡಿತನೀಯಲಿ 1 ಹಿಂಗದ ಗೌರವ ತುಂಗ ಶ್ರೀಗುರು ಕೊಡಲಿ ಕವಿ ಕೊಡಲಿ ಭಂಗವಿಲ್ಲದ ಸುಖಸಂಪತ್ತು ಶನಿ ಕೊಡಲಿ ಕಂಗೆಡಿಸುವ ರುಜೆ ರಾಹು ತಪ್ಪಿಸಲಿ 2 ಹಿಡಿದ ಕೆಲಸದಲ್ಲಿ ಹಿಡಿಸಲಿ ಜಯಧ್ವಜವ ಬಿಡದಲೆ ಧ್ವಜಿಯು ಸಡಗರದಿ ಕಡು ನವಗ್ರಹಗಳು ಪಿಡಿಗ್ರಹವಾಗಲಿ ಸಿರಿ ದೃಢದಿ ದಿನದಿನದಿ 3 ತರಣಿ ಕುಮಾರ ಮಣಿ ಹಾರ ದಾರಿದ್ರ್ಯದೂರ ಹರಿಸು ಅರಿಷ್ಟವ ಸುರಿಸು ಮನೇಷ್ಟವ ಎರಗುವೆ ಸಂಕಟಗೊಳಿಸದಿರುತ್ಕಟ 4 ಸಿರಿ ವಾದಿರಾಜರು ಒರೆದ ಗ್ರಹಸ್ತ್ರೋತ್ರವ ನಿರುತದಿ ಪಠಿಸಲು ಗ್ರಹ ಪೀಡೆಯು ಸರಿದು ತಾಂ ಪೋಪುದು ಅರಿಯ ನಿಗ್ರಹವಹುದು ತುರುಗಗ್ರೀವನ ದಯದಿ ಸರ್ವ ಸಂಪದಬಹುದು 5 ಗೀರ್ವಾಣ ಭಾಷೆಯಲಿರುವ ಈ ಸ್ತುತಿಯನ್ನು ಚಾರು ಕನ್ನಡ ಗೀತ ರೂಪದಿಂದ ಸಾರಿದ ಲಕ್ಷ್ಮೀನಾರಾಯಣ ಶರ್ಮನು ಕೋರುವ ಕೃಪೆಯನ್ನು ಸಾಧು ಸಜ್ಜನರನ್ನು 6 ನಮೋ ರವಿ ಸೋಮನೆ ನಮೋ ಕುಜಸೌಮ್ಯನೆ ನಮೋ ಗುರು ಭಾರ್ಗವ ನಮೋ ಶನೈಶ್ಚರನೇ ನಮೋ ರಾಹು ಕೇತುವೇ ನಮೋ ಮೃತ್ಯುದೈವವೇ ನಮೋ ಭೂತಗಣನಾಥ ನಮೋ ಲಕ್ಷ್ಮೀಕಾಂತ 7
--------------
ಲಕ್ಷ್ಮೀನಾರಯಣರಾಯರು
ವಂದಿಸು _ ಶ್ರೀ ಹರಿಯ ಪ ಇಂದಿರೆನಾಥ ಮಹೇಂದ್ರ ಪರಾತ್ವರ ಸುಂದರ ಜಗಪಿತ ನಂದ ಮಹೋದಧಿ ಸಿಂಧು ಶಯನ ಅರ- ವಿಂದ ಸುನಾಭ ಮುಕುಂದ ಮುರಾರಿಯ ಅ.ಪ. ವೇದಸುಗೋಚರ _ ಖೇದವಿವರ್ಜಿತ _ ಸಾದರನುತಿಪರ ಖೇದವಿಮೋಚಕ ಮಾಧವ ಗೀತಾ _ ಬೋಧಕ ವಿಧಿಗುರು 1 ನಿರಂಜನ _ ಪಕ್ಷಿ ಧ್ವಜ ಜಗ ಕುಕ್ಷಿ ಪರಾಮೃತ _ ರಕ್ಷಿಸಿ ಜಗವಂ ಭಕಿÀ್ಷಪಧೋಕ್ಷಜ _ ಸಾಕ್ಷಿ ನಿರಪೇಕ್ಷ ಸುಪಕ್ಷನ2 ಸತ್ಯಾಧಾರ ವಿಚಿತ್ರ ಗುಣಾರ್ಣವ _ ಸತ್ಯವ್ರತ ಪುರು ಷೋತ್ತಮ ನಿರ್ಮಲ_ ಸತ್ಯವತೀಸುತ _ ನಿತ್ಯತೃಪ್ತ ಮ ಹಾತ್ಮಜಗಾತತ _ ಭೂತಿದ ಹೃಸ್ಥನ 3 ಭೂಮಿಯ ವರಜಯ ಧಾಮಸಖಖಳಭ್ರಾಮಕ ಕಲ್ಕಿಯೆ4 ಮಾಯಾ ಪರ- ಮೇಷ್ಠ ಜನಕ- ಶ್ರೀ ಕೃಷ್ಣವಿಠಲಪದ ನಿಷ್ಠರ ಸೇರಿ ವಿಶಿಷ್ಠ ಸಮರ್ಪಿಸಿ 5
--------------
ಕೃಷ್ಣವಿಠಲದಾಸರು
ವಂದಿಸುವೆ ಗುರು ರಾಘವೇಂದ್ರಾರ್ಯರಾವೃಂದಾವನದಿ 'ೀಣೆ ನುಡಿಸುತಲಿ ಕುಳಿತವರಾ ಪನಂದಗೋಪನಕಂದ ಗೋ'ಂದ ಗೋಪಾಲಇಂದಿರಾರಮಣ ಮುಚಕುಂದವರದಾ'ಂದರ್ಪಜನಕ ಇಂದೆನಗೆ ನಿನ್ನ ಪಾದಾರ-ವೆಂದವನು ತೋರಯ್ಯ ಎಂದು ಪಾಡುತಲಿಹರ 1ನರಹರಿ ಶ್ರೀಕೃಷ್ಣ ರಾಮ ವೇದವ್ಯಾಸಮೂರೊಂದು ಮೂರ್ತಿಗಳುಪಾಸನೆಯನುಚಾರು ವೃಂದಾವನದಿ ಕುಳಿತು ಸಂತತ ಮಾಳ್ವಧೀರ ಶ್ರೀ ವೇಣುಗೋಪಾಲನನು ಕುಣಿಸುವವರ 2'ೀಣೆಯನು ನುಡಿಸುತಲಿ ಗಾಯನವ ಮಾಡುತ್ತಆನಂದ ಬಾಷ್ಪಗಳ ಉದುರಿಸುತಲಿಆನಂದಕಂದ ಭೂಪತಿ-'ಠಲನ್ನ ಸದಾಕಣ್ಮುಂದೆ ನಿಂದಿರಿಸಿಕೊಂಡ ಗುರುಗಳ ಕಂಡು 3
--------------
ಭೂಪತಿ ವಿಠಲರು
ವಂದಿಸುವೆ ಸುಂದರಾಂಗ ನಿಜಸೌಂದರ್ಯಜಿತಾನಂಗ ಬೃಂದಾರಕಾದಿ ಮುನಿ ಬೃಂದವಂದಿತ ಮುಕುಂದ ಗೋವಿಂದ ನಂದ ಮೂರುತಿ ಹರೆ ಪ ದೇವಾದಿ ಜೀವ ಸುಪ್ರಭಾವ ಭಾಸಿತ ಮುಖ ದೇವಕೀ ವಸುದೇವ ಭಾವನಾ ಗೋಚರ 1 ಹಾರಕುಂಡಲ ಮನ ಮಾಲಾವಿರಾಜಿತ ಕ್ಷೀರಾಬ್ದಿ ಕನ್ಯಕಾ ಲೋಲಾ ಮುರಾಂತಕ2 ಧೇನುನಗರ ಪರಿಪಾಲಕ ವೇಂಕಟೇಶ ಸಾನುರಾಗದಿ ಪೊರೆ ಗಾನವಿನೋದ ಹರೆ 3
--------------
ಬೇಟೆರಾಯ ದೀಕ್ಷಿತರು
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವಂದಿಸುವೆವಿಂದು ಮುದದೆ ಶಾರದೆ ಪ. ವಂದಾರುಮಂದಾರೆ ಎಂದೆಂದಿಗೆಮ್ಮೊಳಿರೆ ಸಂದೇಹವಿಲ್ಲದಂತೇ ಸುಸ್ವಾಂತೀ 1 ಮತ್ತೇರಿ ತಲೆಕೆಟ್ಟು ಕತ್ತಲೆಯೊಳು ಬಿದ್ದು ತತ್ತರಗೊಳ್ವೆವಲ್ಲೇ ಕೋಮಲೆ 2 ಹಾಲಹಲದಂಥ ಆಲಸ್ಯದಿಂದ ಬೀಗಿ ಕಾಲೆತ್ತದಂತೊರಗಿರ್ಪೆನೇ ನೊಂದೆನೇ 3 ಕಂದನ ನುಡಿ ಕೇಳು ಒಂದಿಷ್ಟು ದಯೆ ತಾಳು ಕುಂದುಗಳೆನಿಸದೇ ಪೊರೆ ಶ್ರೀಕರೇ 4 ವರಶೇಷಗಿರೀಶನ ಚರಿತಂಗಳನುದಿನ ಸ್ಮರಿಸಿಕೊಂಡಾಡುವಂತೆ ಮಾಡೆನುತೇ ವಂದಿಸುವೆ5
--------------
ನಂಜನಗೂಡು ತಿರುಮಲಾಂಬಾ