ಒಟ್ಟು 1844 ಕಡೆಗಳಲ್ಲಿ , 108 ದಾಸರು , 1387 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನೆಯ ನಿರ್ಮಲಗೈದು ಮೋದಬಡಿಸುವುದು ವನಜನಾಭನ ಭಕ್ತಿಯಂಬವಳ ಬಿರಿದು ಪ. ಬಾಯಿಮೊದಲಾದೈದು ಬಾಗಿಲುಗಳಲ್ಲಿ ವಾಯುವಂದ್ಯನ ಚರಿತ ವರ್ಣನಾದಿಗಳಾ ಛಾಯಗೊಂಬುವ ತೆರದಿ ಚಿತ್ರಕೃತ್ಯವನೂ ನಿತ್ಯ ನಲಿವುದನು 1 ಬುದ್ಧಿ ದೀಪವನು ಬಹು ಶುದ್ಧಕನು ತಾ ತದ್ದಾರಿ ಮನವ ಮೇಲುದ್ಧರಿಸಿಕೊಳುತಾ ಸಿದ್ಧಗಮ್ಯನ ಪದಕೆ ಸರಿಯಾಗಿಸುತಾ ಬದ್ಧ ಬೊಗಳುತಾ ಜನರ ಬಾಯಿ ಮುಚ್ಚಿಸುತಾ 2 ದೋಷ ದುಷ್ಕøತ ಕೆಸರ ಲೇಶವಿಡಗೊಡಳು ಆಶೆಯೆಂಬುವ ಬಲೆಯ ಕೊೈಸಿ ಬಿಸುಟುವಳು ಈಶ ಮಾನಿತ್ವಕವಕಾಶವೇನಿಡಳು ಕೇಶವನ ಕರತಂದು ಕಾವಲಿರಿಸುವಳು 3 ಇವಳಾಶ್ರಯವ ಪೊಂದಲ್ಯಾರಭಯವಿಲ್ಲ ನವರೂಪಳನ್ನುಸರಿಸಿ ನಲಿವ ಸಿರಿನಲ್ಲ ತವಕದಿಂದಲಿ ತಾನೆ ಓಡಿ ಬಂದೆಲ್ಲಾ ಯುವತಿಯರ ಕೂಡಿ ತಾ ಪಾಡುವರೆ ಬಲ್ಲಾ 4 ಕಂಜನಾಭನ ಕರುಣ ಪಂಜರದೊಳಿರಿಸಿ ಸಂಜೀವನೌಷಧವ ಸುಲಭದೋಳ್ ಕುಡಿಸಿ ಅಂಜಿಕೆಯ ಬಿಡಿಸಿ ರಿಪು ಪುಂಜವನ ಕಡಿಸಿ ಮಂಜುಳಾತ್ಮಕ ಮಾಧವನ ಮುಂದೆ ಕರಿಸಿ 5 ದಾನ ವ್ರತಾದಿಗಳನೇನ ಮಾಡಿದರು ಶ್ರೀನಿವಾಸನ ಕರುಣ ಸಾಧ್ಯವಾಗಿರದು ನೀನೆ ರಕ್ಷಕನೆಂಬ ಧ್ಯಾನದಲಿ ಮೆರದು ಜ್ಞಾನ ಭಕ್ತಿಗಳಿಂದ ನಲಿವುದೇ ಬಿರುದು 6 ಯುಕ್ತಿಯಿಂದಲಿ ನೋಡಲೆಲ್ಲ ಶಾಸ್ತ್ರದಲಿ ಭಕ್ತಿಯೋಗವ ಪೇಳ್ವವೇಕಮತ್ಯದಲಿ ಭುಕ್ತಿ ಮುಕ್ತಿಯ ಶೇಷ ಭೂಧರೇಶನಲಾ ಸಕ್ತಿಯಿರೆ ಸಕಲಾರ್ಥವೀವನುತ್ಸವದಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮನೆಯಲಿ ಸುಖವಾಸಿ ಪ ಕೈಯೊಳರ್ಥವು ಮೊದಲಿಲ್ಲ ಹಾಗಾದರು ಮೈಯೊಳಗೇ ನೇನು ಗುಣ ಕಾಂಬುದಿಲ್ಲ ಧೈರ್ಯಲಕ್ಷ್ಮಿಯ ತುದಿಗಿಲ್ಲ ಪರರ ಕೈಯ ಬೇಡಲು ಕಾಣೆ ಕೊಡುವವರಿಲ್ಲ 1 ಹೊಳೆ ಕೆರೆ ಬಾವಿಯಿದ್ದಲ್ಲಿ ಭಾಗೀರಥಿ ನೆಲೆಸಿ ಕೊಂಡಿಹಳಿಲ್ಲಿ ಮುಳುಗಿ ಮಿಂದರೆ ಭಕ್ತಿಯಲ್ಲಿ ಕಾಶಿ ಯೊಳಗೆ ಗಂಗೆಯ ಮಿಂದ ಫಲ ಬಹುದಿಲ್ಲಿ 2 ಜ್ಞಾನವಿಲ್ಲದೆ ಮೋಕ್ಷವಿಲ್ಲ ಮುಕ್ತಿ ಮಾನಿನಿಯನು ಕೂಡಿ ಸುಖಿಸಲು ಬಲ್ಲ ಜ್ಞಾನಿಗಳಿಗೆ ತೋರ್ಪುದೆಲ್ಲ ಹರಿ ಸೂನು ಕೋಣೆಯ ಲಕ್ಷ್ಮೀರಮಣ ತಾನೆಲ್ಲ 3
--------------
ಕವಿ ಪರಮದೇವದಾಸರು
ಮನ್ನಿಸಯ್ಯ ಮದನಜನಯ್ಯ ಘನ ಮುನ್ನೀರಶಯ್ಯ ಸ್ವಾಮಿ ಹಯವದನರಾಯಾ ಪ ಬಾರಿಬಾರಿಗೂ ಈತನ ಮಂದಿರದಲಿ ನಿನ್ನ ಚೆನ್ನಿಗ ರೂಪವ ತೋರೋ ನಿನ್ನ ಕರುಣದಿ ಅ.ಪ. ಈಶಾ ಭವಪಾಶಾ ಎಂಬೋ ಬೀಸಿದ ಬಲೆಯೊಳು ಗಾಸಿಗೆರೆದೆನೂ ರಂಗಾ ಕೃಪಾರಿಣ ವಾಸಿ ಪಂಥಗಳು ವಾಸುದೇವನೆ ಲೇಸ ಮಾರ್ಗವ ಕಾಣೆ ನಿನ್ನಾಣೆ ದಾಶರಥಿಯೇ ನಿನ್ನ ದಾಸರ ಕೂಡಿ ಸಂತೋಷಪಡುವ ಸಿರಿಯೆನಗಿತ್ತು ಸಲೆ ಮೀಸಲವ ಮಾಡೋ ದೇವರ ದಯಾಳೊ1 ಪಂಚಭೂತಗಳಲಿ ಪಂಚಾಗ್ನಿಗಳಲಿ ಪಂಚದ್ವಿಗುಣ ಪಂಚರಲಿ ಮತ್ತೆ ಪಂಚಪ್ರಾಣದಲಿ ಪಂಚವಿಂಶತಿ ಮಾರ್ಗ ತೋರೋ ಶ್ರೀಕಾಂತಾ ಪಂಚ ಹಿಡಿಸಿ ಪಂಚೊಂದೋಡಿಸಿ ಪಂಚನಾಲಕು ಭಕ್ತಿ ಕೊಂಚವಾಗದ ಹಾಗೆ ಸಂಚಿತಾಗಮಾ ಮುಂಚೆ ಓಡಿಸೋ ಶ್ರೀವತ್ಸಲಾಂಛನನೇ2 ಶ್ರೀನಿವಾಸನೇ ನಿನ್ನ ಧ್ಯಾನಮಾತ್ರದಿ ಬರುವೋ ಬಿಗನು ಅಘನಾಶÀನವೆಂದೊ ನಾನಿಂದೂ ಬೆಂಬಿದ್ದ ಅಬಲನ ಮನ್ನಿಸೋದಲ್ಲದೆ ಹೀಗೆ ಮುನಿಸೋರೇನೋ ಶ್ರೀಹರೆ ನಿನ್ನ ಸನ್ನಿಧಿಗೊಪ್ಪಿಸಿದೆನೊ ಮನ ಬಂದುದು ಮಾಡೊ ಘನತೆ ನಿನ್ನದು ದೇವಾ ದೀನ ದಯಾನಿಧೆ ಉರಗಾದ್ರಿವಾಸಾ 3
--------------
ಮಹಾನಿಥಿವಿಠಲ
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ
ಮನ್ಮನೋಹಾರಕ ಪ ರಾಮ ದಶರಥ ರಾಮ ಮಂಗಳನಾಮ ಶ್ರೀ ರಘುರಾಮ ಗುಣಗಣಧಾಮ ಸಜ್ಜನಪ್ರೇಮ ಹೇ ಜಯ ರಾಮ ಸೀತಾರಾಮ ರಘುವರ ಅ.ಪ ಕೂಡಲು ಕೋಪದಿ ಗೌತಮಮುನಿ ತರಳೆಯ ಶಪಿಸಿರಲು ಕಲ್ಲಾಗಿ ಬಿದ್ದಿರೆ ಪಾದಗಳ ರಜದಿಂ ಸುವಾರ್ತೆಯ ಕೇಳಿ ಬಂದಿಹೆ 1 ಗಿಡ ಮರವಲೆದು ತಂದು ಫಲಮೂಲಗಳನು ಒಡೆಯ ನೀ ಬರುವೆಯೆಂದು ಕೇಳುತ ತಾನು | ಬಡವರೊಡೆಯ ನೀನೆಂದರಿತು | ಕಡುಹಿತದೊಳೆಂಜಲ ಫಲಗಳುಣಿಸಲು| ಕೇಳಿ ಬಂದಿಹೆ 2 ಛಲದಲೋಡಿಸಿ ರಾಜ್ಯದಿ ಗೆಳೆಯ ಮಾರುತಿಯಿಂದಲರಿತು ಗಳಿಸಿದ್ವಾರ್ತೆಯ ಕೇಳಿ ಬಂದಿಹೆ 3 ಸತಿ ವರಪತಿವ್ರತೆ ಸೀತೆಯ ಪರಿಪರಿಯಿಂದಲಿರದೆ ದುರುಳ ರಾವಣನ ಭಂಗಿಸಿ ಹೊರದೂಡಲವ ನರಸಿ ನಿನ್ನಯ ಪರಮ ಪಾದಾಶ್ರಯವ ಬೇಡಲು ಪೊರೆದ ವಾರ್ತೆಯ ಕೇಳಿ ಬಂದಿಹೆ4 ಪರಮಪುರುಷ ನೀನೆಂದು ನಂಬಿದೆ ಸಿರಿಯರಸ ಪ್ರಭುವು ನೀನೆಂದು ಚರಾಚರ ಗುರುವು ಪ್ರಭುವು ನೀನೆಂದು ಇಂದು ತರಣಿ ಮಣಿ ಸಾರ್ವಭೌಮನೆ ಶರಣರಘ ಕೋಟಿಗಳ ಕಳೆವನೆ ಶರಣ ಬಂದಿಹೆನೆನ್ನ ಪಾಲಿಸದಿರುವರೇ ರಘುರಾಮ ವಿಠಲ 5
--------------
ರಘುರಾಮವಿಠಲದಾಸರು
ಮರಣ ಕಾಲವ ತಿಳಿಸೋ ಮಧುಸೂದನಾ ಪ ಶರಣು ಬಂದವರ ಭಯಹರಣಾ ಅ.ಪ. ಸ್ನಾನಮಾಡಲಿಬೇಕು ಮೌನದಿಂದಿರಬೇಕು ಹರಿಜ್ಞಾನಪೂರ್ವಕ ಹರಿಯ ಧ್ಯಾನಬೇಕುನಾನಾ ವಿಷಯದ ಚಿಂತೆ ಮಾನಸದಿ ಬಿಡಬೇಕುದಾನ ಧರ್ಮಗಳನು ಮಾನಸದಿ ಮಾಡಬೇಕು 1 ಸುತ್ತಲು ಜನರುಗಳ ಹತ್ತಿರ ಕೂಡುತಲಿನಿತ್ಯ ಭಾಗವತಾದಿ ಶಾಸ್ತ್ರಗಳನುಮೃತ್ಯು ಕಾಲದಿ ಪರಿಸೆ ಶ್ರೋತ್ರದಿಂ ಕೇಳಿ ಯಮ-ಭೃತ್ಯರು ಓಡಲಿಬೇಕು ಎತ್ತಿ ಕಾಲುಗಳು 2 ಮಕ್ಕಳು ಮನೆಗಳಲಿ ಚಿಕ್ಕ ಯುವತಿಗಳಲ್ಲಿಮಿಕ್ಕಾದ ಪಶು ಕೃಷಿ ರೊಕ್ಕಗಳಲ್ಲಿಪೊಕ್ಕಿ ಮನಸಿಲಿ ವಿಷಯ ಸಿಕ್ಕಿ ತೊಡಕೆನೊ ಎನ್ನವಕ್ರವಾ ತೋರಿಸುತ ಮೆಲ್ಲ ಕೈ ಬಿಡಿಸಿನ್ನು 3 ಕಮಲ ಮಂದಹಾಸವ ತೋರೋಸಿಂಧು ಉದ್ಧರನೆ ವೃಂದಾವನೀಯೋ 4 ಸಿಂಧುವಿನ ತಟದಿ ಗೋವೃಂದದೊಳಗೆ ಚಂದದಲಿ ಕೊಳಲೂದೋ ಸುಂದರ ಮುಖ ಕಮಲಒಂದೇ ಮನದಲಿ ನೋಡಾನಂದದಲಿ ಮಾಡೋಇಂದಿರೇಶ ನಿನ್ನ ಮುಂದೆ ನಿಂತಿರುವಾನಾರಂದ ಮುನಿ ಗುರುವರ ಮಂದಸ್ಮøತಿ ನೀಡೋ 5
--------------
ಇಂದಿರೇಶರು
ಮರತರ ತಾ ಮರವಲ್ಲದು ನೋಡಲು | ಅರತರತಾ ಅರವಲ್ಲದು ನಿಜದೊಳು | ಘನದರುವೇ ತಾನಾಗಿ | ಕುರುವಿನೊಳಿರುವಾಗಿಹ ಸ್ವಾನಂದದಿ | ತೆರವಿಲ್ಲದೆ ಸಲೆ ತುಂಬಿತುಳುಕುತಿಹ | ಜಯ ಜಯತು 1 ತೋರುವ ದೃಶ್ಯವ ಕಾಂಬುವ ನಯನಕ | ಸಾರಿಯಮನವನು ನೋಡುವ ಬುದ್ಧಿಗೆ | ನಿತ್ಯ ನಿರಂಜನ ವಿಶ್ವ ಭರಿತನೆಂದು || ಸಾರುವ ಶೃತಿಯಿಂದಾತ್ಮ ಪ್ರಚೀತಿಯ | ಭವ | ವಾರಿಸಿ ಚಿತ್ಸುಖಲಿರಿಸಿದ ಮಹಿಪತಿ | ಸದ್ಗುರು ಜಯ ಜಯತು 2 ಮೊದಲಿಗೆ ಜಯದಾರ್ಜ ಲಕ್ಷಣವನು | ಹೃದಯದಿ ನೆಲೆಗೊಳಿಸಿ | ಇದರದರಿಸಿ ಭವದ್ಹೆದರಿಕೆÉ ಹಾರಿಸಿ | ಸದಮಲ ಬ್ರಹ್ಮನ ಕಳೆಯನು ತೋರಿಸಿ | ಗುರುಮೂರ್ತಿಗೆ ಶರಣು 3 ಆಡುವ ರೇಚಕ ಪೂರ್ವಕ ನಂದಿಯ | ಜೋಡಿಸಿ ಯರಡನೆ ಮೆರೆವಸುಷಮ್ನಿಯ | ನಿಜವiನ ಸಾರಥಿಯಾ | ಕೂಡಿಸಿ ಹರುಷದ ತೇರಿ ನಡಸುತ ಸ | ಫಾಡಿರೆಯಿಂದಲಿ ಮೇಲ್ಗಿರಿಯಾತ್ರೆಯ | ಗುರುಮೂರ್ತಿಗೆ ಶರಣ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮರವೆ ಮರವೆ ಮಾಡಿತೋಅಂತರಂಗದಲಿ ಭೋರೆಂದು ತುಂಬಿಅಂತು ಅಂತೆನಲು ಕೂಡದು ಪ್ರಣವನಾದ ಪ ಹೊಟ್ಟೆಗುಣ್ಣುವುದನೆ ಮರೆಸಿತು ಈ ಪ್ರಣವನಾದಮುಟ್ಟು ಚಟ್ಟನೆ ಮರೆಸಿತುಕೆಟ್ಟಕೇಡನೇನ ಹೇಳಲಿಉಟ್ಟ ಬಟ್ಟೆಯ ಅರಿವೇ ಇಲ್ಲ 1 ಆಸೆಯೆಂಬುದ ಮರೆಸಿತು ಈ ಪ್ರಣವನಾದದ್ವೇಷವೆಂಬುದು ತೊರೆಸಿತುನಾಶವಾಯಿತು ಜಪತಪವೆಲ್ಲಮೋಸವೆನಗಿಂತು ಮಾಡಿತು2 ಧ್ಯಾನವೆಂಬುದು ಮರೆಸಿತು ಈ ಪ್ರಣವನಾದಓಂಕಾರವೆಂಬುದು ಕಲಿಸಿತುಜ್ಞಾನಮೂರುತಿ ಚಿದಾನಂದತಾನೆ ತಾನೆ ತಾನೆ ಎಂಬ 3
--------------
ಚಿದಾನಂದ ಅವಧೂತರು
ಮರೀಬೇಡ ಮಾಧವನ ಅರಿವಿಟ್ಟು ಭಜಿಸೋ ಸ್ಥಿರವಲ್ಲ ಧರೆಭೋಗ ಮೆಚ್ಚಿ ಕೇಡಬೇಡ ಪ ಕೂಡು ನಿಸ್ಸಂಗದೊಳು ಆಡು ಸುಸಂಗದೊಳು ಮಾಡು ನಿಜವರ್ತನಗಳು ಬೇಡು ಬಡತನದೊಳು ದೂಡು ದುವ್ರ್ಯಸನಗಳು ತೋಡು ದುರ್ಗುಣಗಳು ನೋಡು ನಿಜಭಕ್ತರೊಳು ನೀಡು ಮನ ಹರಿಯೊಳು 1 ಹೀರು ಮಹಗರುವವ ತೂರು ಮದ ಮತ್ಸರವ ತೂರು ದುಷ್ಕøತ್ಯವ ಕಾರು ಬಲುವಿಕಾರವ ಮೀರು ಧರೆಭೋಗವ ತೋರು ನಿಜಧ್ಯಾನವ ಏರು ಸನ್ಮಾರ್ಗವ ಸೇರು ಹರಿಪದವ 2 ಕುಂದುಗಳನೊರೆಯದಿರು ನಿಂದೆಗಳನಾಡದಿರು ಬಂಧನಕ್ಕೆ ಬೀಳದಿರು ಮಂದತ್ವದೂರು ತಂದೆ ಶ್ರೀರಾಮನಡಿಗೊಂದಿ ವೈಕುಂಠಪದ ಚಂದದಿಂ ಪಡಕೊಂಡಾನಂದದಲಿ ಸೇರು 3
--------------
ರಾಮದಾಸರು
ಮರೆತೆಯೆನೋ ರಂಗಾ ಮಂಗಳಾಂಗತುರು-ಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ಪ ಕೋಲು ಕೈಯಲ್ಲಿ ಕೊಳಲು ಜೋಲುಗಂಬಳಿ ಹೆಗಲಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿಕಾಲಕಡಗವನಿಟ್ಟು ಕಾಡೊಳಿಹ ಪಶುಹಿಂಡಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ1 ಮಣಿ ಕÀವಡÉಯನು ಕಾಡೊಳಿಹ ಗುಲಗಂಜಿಸಲ್ಲದೊಡವೆಯ ನೀನು ಸರ್ವಾಂಗಕೆಅಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆಅಲ್ಲಿ ಗೊಲ್ಲರ ಕೂಡ ಚೆಲ್ಲಾಟ ಮಾಡುತಲಿ 2 ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿಸಿರಿ ಅರಸನೆಂದು ಸೇವಕರರಿವರೋಶರಣಾಗತರ ಪೊರೆವ ಶ್ರೀರಂಗವಿಠಲಯ್ಯನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು3
--------------
ಶ್ರೀಪಾದರಾಜರು
ಮಲಗಯ್ಯ ಕೇಶವಾಮಲಗಯ್ಯ ಮಾಧವಾ ಮಲಗಯ್ಯ ಚನ್ನಕೇಶವ ರಂಗರಾಯಾ ಪ ಶ್ರೀಲೋಲ ಮಲಗಯ್ಯ ಪಾಡಿ ತೂಗುವೆನಯ್ಯ ಬಾಲನ ಸಲಹಯ್ಯ ಕೂಡಿ ಪರಮ್ಮಾತ್ಮಾ ಅ.ಪ. ಜಗವೆಲ್ಲ ಕತ್ತಲೆಯಿಂದ ಮಸುಕಿಹುದಯ್ಯ ಖಗವೃಂದ ಪಶುವರ್ಗವೆಲ್ಲ ನಿದ್ರಿಪುದೂ ಜಗವೆಲ್ಲ ನಿಃಶಬ್ದವಾಗಿದೆ ಶ್ರೀಹರಿ ಗಗನದಿ ಗೂಗೆಯು ತೂಗುತಿದಯ್ಯ 1 ಜನರೆಲ್ಲ ಹರಿ ನಿಂನ ಸೇವೆ ಮಾಳ್ದುದ ಬಿಟ್ಟು ಘನನಿದ್ರಾಂಗನೆಯನ್ನು ಅಪ್ಪಿ ಕೊಳ್ಳುವರೊ ಪ್ರಣವ ಸ್ವರೂಪನೇ ಮಲಗು ನೀ ಬೇಗದಿ ತನುವೆಂಬ ತೊಟ್ಟಿಲದಿ ತೂಗುವೆನಯ್ಯಾ 2 ಪನ್ನಗಶಯನನೆ ಆದ್ಯಾಂತರಹಿತನೇ ಮನ್ನಿಸಿ ಭಕ್ತರ ಪೊರೆವ ಮಾದವನೇ ಬಿನ್ನರೂಪವ ತಾಳಿ ಕಾಯವು ದಣಿದಿದೆ ಇನ್ನು ನಿದ್ರೆಗೆ ಪೋಗು ತೂಗುವೆನಯ್ಯ 3
--------------
ಕರ್ಕಿ ಕೇಶವದಾಸ
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು