ಒಟ್ಟು 1497 ಕಡೆಗಳಲ್ಲಿ , 112 ದಾಸರು , 1202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ಕಲ್ಯಾಣಿ 1 ವಿದಿತ ಸುವಿದ್ಯದಾನಿ ಸದಮಲ ಸುಪ್ರವೀಣಿ ಮದಮತ್ತಗಜಗಾಮಿನಿ ಕಲ್ಯಾಣಿ 2 ಸ್ಪಹಿತ ಸುಖಕಾರಿಣೀ ಸಹಕಾರಿ ನಿರಂಜನ ಮಹಿಪತಿಸುತ ಸ್ವಾಮಿನೀ ಕಲ್ಯಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುಲಿಂಗ ಶರಣು ಮುನಿಜನಸಂಗ ಶರಣುಭವ ಭಯ ವಿಭಂಗಾ ಪ ಪಾವನಿ ಜಾನ್ಹವಿಯ ತೀರದಲಿ ಕಾಶೀ | ಪುರ ವಿಶ್ವನಾಥನೆನಿಸೀ | ಹರುಷದಲಿ ನಿಂದು ಮತ್ತೊಂದು ರೂಪದಲಿ ತೆರಳಿ | ಧರೆಯ ದೇಶವ ನೋಡುತಾ ಬರುತಾ 1 ಮೊದಲೆ ತಾ ಕೃಷ್ಣ - ವೇಣಿ ಮ್ಯಾಲುತ್ತರವಾಹಿನಿ | ಸದಮಲ ಸುಖ ಕಾರಿಣೀ | ಇದ ನರಿತು ನಡಿ ಮಧ್ಯೆ - ಉತ್ತರೇಶ್ವರ ನೆನಸಿ | ಮುದದಿಂದ ಬಂದು ನಿಂದು || 2 ಸಖನ ದರುಶನ ನೆವದಿ ಬರುತಿರಲು ನಾ ನಿಮ್ಮ ಪ್ರಕಟದಲಿ ಕಂಡೆ ನಿಂದು | ಭಕುತಿಯಚ್ಚರ ನೀಡು ಗುರು ಮಹೀಪತಿ ಸ್ವಾಮಿ | ಸಕಲ ಸುರರಾಜ ಮಾದ್ಯ ಧನ್ಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಪಾರ್ವತಿದೇವಿಗೆ ಶರಣು ಶಾಂಭವಿಗೌರಿಗೆ | ನಮ್ಮ ಶರ್ವಾಣಿಗೆ ಪ ಲಂಬ ಕರ್ಣನ ಬಿಂಬಛಿದ್ರನ ಸಂಭ್ರಮದಿ ಪಡೆದಮ್ಮಗೆ ಶಂಬರಾರಿಯ ಅಂಬಿಗಾಹರ ನಂಬಿದಾ ಪಟ್ಟದರಸಿಗೆ 1 ಅಮಿತ ಮಹಿಮಳೆ ಜ್ಯೋತಿ ಆದಿಶಕ್ತಿ ದುರ್ಗಾಂಬೆಗೆ ಹೇಮವರ್ಣ ಭವಾನಿಗೆ 2 ಹೊಡೆವ ಮೃಡಾಣಿಗೆ ಸ್ಮರಿಸದವರನ ಕಾಯ್ವಳೆ 3
--------------
ಹೆನ್ನೆರಂಗದಾಸರು
ಶರಣು ಸಹಜಭಾವ ಸಿರಿಯರ ಜೀವ ಶರಣು ಶರಣು ದೇವ ದೇವ ಪ ಶರಣು ನಿನ್ನ ಚರಣಸೇವೆ ಕರುಣಿಸೆನಗೆ ನಿರುತದಭವ ಪರಮಪಾವನ ನಿಮ್ಮ ಚರಿತ ಕರುಣಿಸೆನ್ಹøದಯಕ್ಕೆ ಸತತ ಪೊರೆಯೊ ಪ್ರೇಮದಿ ದುರಿತಪರ್ವತ ತರಿದು ತೊರೆಸಿ ಜಗದ ಮಮತೆ ಅ.ಪ ಸಾರ ಸುರಸಮೂಹಸೇವಿತ ಮಾರಾರಿವಿನುತ ಕ್ಷೀರವಾರಿಧಿ ಸುತೆಯ ಪ್ರಿಯನಾಥ ಸನಕಾದಿನಮಿತ ಸೇರಿ ಭಕ್ತರಗಣದಲಿ ಗುಪ್ತ ನಲಿಯುವಿ ಮಮತೆ ತೋರಿ ಎನ್ನನು ಮಾಡು ಪಾವನ ಮೀರದ ಸಂಸಾರಬಂಧನವಾರಿಯ ದಾಂಟಿಸುಯೀಕ್ಷಣ ಸೇರಿಸದೆ ಎನ್ನ ಮಾಯಾಜಾಲದಿಂ ಸೇರಿಸು ನಿಜಜ್ಞಾನ ದಯದಿ 1 ವೇದವೇದಂಗಳಿಗೆ ಅಗೋಚರ ವೇದಂಗಳಾಧಾರ ವೇದವೇದ್ಯಮಳೈರ್ಕ ಪರತರ ವೇದಗಳ್ಹಿತಕರ ವೇದವೇದಾಂಗ ಶ್ಯಾಮಸುಂದರ ವೇದಾದಿ ಮನೋಹರ ವೇದವಿದ್ಯೆ ಬೋಧಿಸಯ್ಯ ವೇದಸಾಧನ ತೋರಿಸಯ್ಯ ವೇದಮಂತ್ರ ಸಿದ್ಧಿಸಯ್ಯ ವೇದವೇದಾಂತದೊಳು ಗೌಪ್ಯವಾದ ತತ್ವದ ಮೂಲ ತಿಳಹಿ ವಾದಬುದ್ದಿಯ ನೀಗಿಸಿ ನಿಮ್ಮ ಪಾದಭಕ್ತಿಯ ಕರುಣಿಸಭವ 2 ಭುವನತ್ರಯದ ಪರಮ ಸುಸೂತ್ರ ವಾರಿಜನೇತ್ರ ಭುವನತ್ರಯದ ಪಾವನ ಸ್ತೋತ್ರ ಪರಮಪವಿತ್ರ ಭುವನಜಾತೆಯ ಮೋಹದ ಮಿತ್ರ ವನರುಹ ಗಾತ್ರ ಭುವನದ್ಹತ್ತವತಾರ ದೇವ ಭುವನವೀರೇಳು ಹೊತ್ತು ಆಳುವ ಜಯವ ಪೊಂದಿಸಿ ನಿಮ್ಮಯ ಕರುಣದೊರಕಿಸಿ ದಯದಿ ಮುಕ್ತಿಯ ಕೊಡು ಶ್ರೀರಾಮ 3
--------------
ರಾಮದಾಸರು
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಿವ ಶಿವ ಶಂಕರ ಮಹಾದೇವ ಭವ ಭಯಹರ ನಮೋ ಸದಾಶಿವ ಪ ಕಮನೀಯಾನನ ಸುಮನಸಪಾಲನ ಉಮೆಯ ರಮಣ ಘನಸುಮಶರದಹನ ವಿಮಲವಿಲೋಚನ ಶಮಾ ದಮಾ ಭವನ ಪ್ರಮಥಗಣಾನನ ಪಾವನಸದನಾ 1 [ಬಾಲ ಗಣಪಪಿತ ಸರ್ವೇಶ್ವರಾ] ನೀಲಕಂಠ ಸೋಮಶೇಖರಾ ಶೂಲಪಾಶಕರ ಫಾಲಾಂಬಕಹರ ಕರುಣಾಲವಾಲ ಹರ 2 ಸನ್ನುತ ಪಾವನಚರಣ ಸಕಲ ದನುಜಗಣ ಜೀವನಹರಣ ಸಕಲಾನತ ಮಾಂಗಿರಿಪತಿ ಕರುಣ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶುಂಭ ದಮನಿ ದುರ್ಗೆಯೇ ಮಹಾಕಾಳಿ ಪ ಶುಂಭ ದಮನಿ ದುರ್ಗೆ ಅಂಬುಜವದನೆಯೇ ||ಶುಂಭ ಅ.ಪ ವ್ಯಾಳ ವೇಣಿಯೇ ಸು | ರಾಳಿಪೂಜಿತೆಯೆ 1 ಭಕ್ತರ ಪೋಷಿಣಿ ಮುಕ್ತಿದಾಯಕಿಯೆ 2 ಪೋಷಿಸೆನುತ ಪಾವಂಜೇಶನ ದಾಸರ 3
--------------
ಬೆಳ್ಳೆ ದಾಸಪ್ಪಯ್ಯ
ಶುಭ ಯೋಗಿ ಪುಂಗಗೆ | ಮಂಗಳಂ ಪಾಪೌಘ ಭಂಗಗೆ | ಮಂಗಳಂ ಯಾಳಗಿಯ ದೊರೆ ರಾಮಲಿಂಗನಿಗೆ ಪ ಮೋದದಲಿ ದತ್ತಾವಧೂತನು ಪೇಳಿದನು ಶ್ರೀಕಪಿಲ ಮುನಿವರ |ಗಾಧಿಯಂ ಮಣಿಚೂಲ ಶೈಲದ ಗುಹದಿ ತಪಮಾಡಿ ||ಮೇದಿನಿಯ ಜನರಿಂಗೆ ಸಹಜದಿ ವೇದ ವೇದಾರ್ಥವನು ಬೋಧಿಸಿ |ಭೇದ ಬುದ್ಧಿಯ ಬಿಡಿಸಿ ಕೃಪೆಯನು ಮಾಡಿ ಪೊರೆ ಎಂದು 1 ಕಪಿಲಮುನಿ ಲಿಂಗಾಂಬಿಕೆಗೆ ತಾ ಸ್ವಪ್ನದಲಿ ಪೇಳಿದನು ನಿಶ್ಚಯ |ಅಪರಿಮಿತ ವರ ಕೊಡುವ ಬೆಟ್ಟದ ರಾಮಲಿಂಗೇಶ ||ತಪವು ಮಾಡಲು ಕೊಡುವ ನೀ ತಪವು ಮಾಡೆಂದು ಪೇಳಿದ |ಗುಪಿತ ಮೂಲವ ತೋರಿ ಬೋಧಿಸಿ ಸುಖವ ಪಡೆ ಎಂದ 2 ಮೊದಲು ಲಿಂಗಾಂಬಿಕೆಯು ಮನದಲಿ ನೆನೆದು ಬೆಟ್ಟದ ರಾಮಲಿಂಗನ | ಪದುಳದಿಂ ಸೇವಾ ಪ್ರದಕ್ಷಿಣೆ ಭಕ್ತಿಭಾವದಲಿ |ಮುದದಿ ಪ್ರಾರ್ಥಿಸೆಗೈದು ಎನ್ನಗೆ ಸುತನ ಕೊಡಬೇಕೆಂದು ಪ್ರಾರ್ಥಿಸೆ | ಸದಮಲಾತ್ಮರಾಮಲಿಂಗನು ಜನಿಸುತಿಹನೆಂದ 3 ಸತಿ ಲಿಂಗಾಂಬೆ ಗರ್ಭದೊಳುಪಾವನಾತ್ಮಕ ಜನಿಸಿ ಬೆಳೆದುದ್ದಾಮ ಆನಂದಾಭ್ಧಿಯೊಳು ಸ- |ದ್ಭಾವದಿಂ ಮಣಿಚೂಲ ಶೈಲದಿ ತಪವನೆಸಗಿದಗೆ 4 ಕೆಲವು ದಿನ ಮಣಿಚೂಲ ಶೈಲದ ಗುಹೆಯೊಳಗೆ ತಪಗೈಯುತಿರೆ ಶ್ರೀಮಲಹರಿಯು ಪ್ರತ್ಯಕ್ಷರೂಪದಿ ಮಂತ್ರ ಬೋಧಿಸಿದ ||ಚೆಲುವ ರಾಮಪ್ಪಯ್ಯ ಮನದಲಿ ಹರುಷವಂ ಕೈಕೊಂಡು ಸಿದ್ಧಿಯಫಲವ ಪಡೆದನು ಮಂತ್ರ ಮಹಯೋಗಾದಿ ಸಿದ್ಧಿಗಳ 5 ಗೌತಮಾನ್ವಯದಲ್ಲಿ ಜನಿಸಿ ಸುಕೀರ್ತಿ-ಪಡೆದಪ್ಪಯ್ಯ ಗುರುವರ |ಮಾತು ಮಾತಿಗೆ ರಾಮಲಿಂಗನ ನೆನೆ ನೆನೆದು ಮನದಿ ||ಸಾತಿಶಯ ಮಣಿಚೂಲ ಶೈಲವ ಸೇರಿ ಕಂಡಿಹ ರಾಮಲಿಂಗನ |ಮಾತು ತಿಳುಹಿಸಿ ಗ್ರಹಕೆ ಕರಕೊಂಡು ಬಂದಿಹಗೆ 6 ಪರಮ ತಾರಕ ಮಂತ್ರ ಕರ್ಣದೊಳೊರೆದ ಗುರು ಅಪ್ಪಯ್ಯ ಮೂರ್ತಿಯ | ಚರಣವನು ಧ್ಯಾನಿಸುತೆ ಮಹಾ ವಾಕ್ಯಾರ್ಥ ಶೋಧಿಸಿದ | ಪರಿಪರಿಯ ವೇದಾರ್ಥವನು ಬಹು ಹರುಷದಿಂ ಶಿಷ್ಯರಿಗೆ ಬೋಧಿಸಿ | ನಿರುತ ಬ್ರಹ್ಮಾಕಾರ ವೃತ್ತಿಯೊಳಿರುವ ಶರಣಂಗೆ 7 ಪಂಚಲಿಂಗವು ಪಂಚ ತೀರ್ಥಗಳುಳ್ಳ ಯಾಳಗಿ ಕ್ಷೇತ್ರದಲಿ ಪ್ರ- |ಪಂಚವನು ಪರಮಾರ್ಥ ಬುದ್ಧಿಯಲಿಂದ ನೆರೆಗೈದು ||ವಂಚನಿಲ್ಲದ ರಾಮಲಿಂಗ ವಿರಂಚಿ ಭಾವದೊಳಿರ್ದು ಜನರಿಗೆಹಂಚಿಕೆಯ ಪೇಳಿದನು ಇಲ್ಲಿಗೆ ಗಂಗೆ ಬರುತಿಹಳು 8 ಇಂದು ವೇದ ರಸೈಕ ಶಕದ ವಿಕಾರಿವತ್ಸರ ದಕ್ಷಿಣಾಯನ |ಛಂದದಾಶ್ವೀನ ಶುದ್ದ ಸಪ್ತಮಿ ಸೌಮ್ಯ ವಾಸರದಿ ||ಸುಂದರದ ಜ್ಯೇಷ್ಠರ್ಕ ವೃಶ್ಚಿಕ ರಾಶಿ ಶುಭದಿನ ತೃತಿಯ ಪ್ರಹರದಿಹೊಂದಿದನು ಸುಸಮಾಧಿ ಸುಖವನು ರಾಮಗುರುವರನು 9 ಸುರರು ಅಂಬರಕೇರಿ ಪುಷ್ಪದ ಮಳೆಯ ಸುರಿದರು ಹರುಷದಿಂದಲಿಪರಮ ವಿಸ್ಮಯವಾಗೆ ಸುರದುಂದುಭಿಯ ಧ್ವನಿಕೇಳಿ || ಹರುಷ ದಿಂದಲಿ ಶಿರವ ನಲಿಯುತ ದೇವ ಗಣಿಕೆಯರು ನೃತ್ಯ ಮಾಡುತ ತರ ತರದಿ ಜಯ ಘೋಷ ಮಾಡುತ ಜನ ಸಹಿತವಾಗಿ 10|| ಜಯ ಜಯತು ಜಯ ನಿರ್ವಿಕಾರಗೆ ಜಯ ಜಯತು ಜಯ ನಿರ್ವಿಶೇಷಗೆ | ಜಯ ಜಯತು ನಿಃಸೀಮ ಪರಮಾನಂದ ರೂಪನಿಗೆ || ಜಯ ಜಯತು ಭಕ್ತಾಭಿಮಾನಿಗೆ ಜಯ ಜಯತು ಮಹ ಸಿದ್ಧ ವರದಗೆ | ಜಯ ಜಯತು ಸಿಂಧಾಪುರದ ಸಖರಾಮ ಗುರುವರಗೆ 11
--------------
ಗುರುರಾಮಲಿಂಗ
ಶುಭಫಲಪ್ರದಮೌನಿ ಮಾಂ ಪಾಲಯ ಶುಭಫಲಪ್ರದಮೌನೀಅಭಿನವರಂಗನಾಥ ಪರಕಾಲಧೀಮಣಿ ಪ'ಬುಧಜನಾರ್ಚಿತ 'ಮಲ ಸುಗಣ್ಯಾ ಅಭಿನುತಿಚೇಕೊನು ಆರ್ತಶರಣ್ಯಾ 1ಶಮದಮಶಾಂತಾದಿ ಸದ್ಗುಣಭರಿತ ಸುಮಶರಜಿತಯಾಶ್ರಮತ್ರಯತ್ಯಜಿತ 2ನಿಯತಿಯುಕ್ತ ಬ್ರಂಹತಂತ್ರಕೃಪಾಂಗಾಹಯಮುಖಚರಣಸರೊರುಹಭೃಂಗಾ 3ಸಕಲಾಗಮಶಾಸ್ತ್ರಾರ್ಥ ಪುರಾಣಪ್ರಕಟತ ಪರಿಶ್ರಮಪ್ರತಿಭಪ್ರ'ೀಣಾ 4ಧರಿಶ್ರೀಕೃಷ್ಣ ನೃಪದೇಶಿಕ ಪ್ರಮುಖಪರಮಶೀಲವ್ರತಪತಿತೋದ್ಧಾರಕ 5ಸರ್ವತಂತ್ರಸ್ವಾತಂತ್ರಯತೀಂದ್ರಾಯುರ್ವಿಯಾಮ್ಮುಕ 'ತಕರಸಾಂದ್ರಾ 6ನಿಗಮಾಂಗುರುಪದನಿತ್ಯಾರಾಧಕದ್ವಿಗುಣರ'ತಪರತತ್ವಸ್ಥಾಪಕ 7ಮಂಗಳತರಸತ್ಸಂಗಧುರೀಣಾರಂಗಸ್ವಾ'ುದಾಸಾರ್ಚಿತಚರಣಾ 8
--------------
ಮಳಿಗೆ ರಂಗಸ್ವಾಮಿದಾಸರು
ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೋಧಿಸದೆ ನಿಜ ಬೋಧಿಪೆನೆಂಬ ಈ ಹಾದಿಯೆಲ್ಲಿ ಕಲಿತಿರೆಲೊ ಎಲೋ ಆಧರವರಿಯದ ವಾದಿಮೂರ್ಖರಿಗೆ ಬೋಧ ಸಿದ್ಧಿಪುದೇನೆಲೋ ಎಲೋ ಪ ಋತುಯಿಲ್ಲದವಳಲ್ಲಿ ರತಿಕಲಹ ಬೆಳೆಸಲು ಸುತರ ಪಡೆವಳೇನೆಲೋ ಎಲೋ ಅತಿಮಂದಮತಿಗಳಿಗಹಿತವ ಬೋಧಿಸೆ ಸು ಗತಿಗೆ ಬಾಹರೇನೆಲೋ ಎಲೋ ಕತ್ತೆಗೆ ಮುತ್ತಿನ ಕಂಟಲಿ ಹೇರಲು ಅರ್ತೀತೆ ಬೆಲೆಯನು ಎಲೋ ಎಲೋ ಕೃತ್ರಿಮರಿಗಾತ್ಮದ ಸ್ಮøತಿಯ ಬೋಧಿಸೆ ದು ರ್ಗತಿಯು ತಪ್ಪೀತೇನೆಲೋ ಎಲೋ 1 ಕೋಣನ ಮುಂದೆ ವೇಣುಬಾರಿಸಲು ಅನಂದತಾಳೀತೇನೆಲೋ ಎಲೋ ಶ್ವಾನನ ಮುಂದೆ ಸುಗಾನ ಮಾಡಲದು ಧ್ಯಾನಕ್ಕೆ ತಂದೀತೇನೆಲೋ ಎಲೋ ಹೀನಸಂಸಾರಿಗೆ ದಾನಿಗಾಂಭೀರ್ಯದ ಖೂನ ತಿಳಿದೀತೇನೆಲೋ ಎಲೋ ಜ್ಞಾನಬೋಧಾಮೃತ ಅಜ್ಞಾನಿಗೆ ಉಸುರಲು ಹೀನಭವ ಬಿಟ್ಟೇತೇನೆಲೋ ಎಲೋ 2 ಆಸೆಗಾರಗೆ ಮಹ ಶಾಶ್ವತ ಪೇಳಲು ಲೇಸಾಗಿ ತೋರೀತೇನಲೋ ಎಲೋ ದಾಸರ ದೂಷಿಪ ನಾಶಮತಿಗೆ ಯಮ ಪಾಶವು ತೊಲಗೀತೇನೆಲೋ ಎಲೋ ಈಶನೊಲಿಮಿಲ್ಲದೆ ನಿಜಬೋಧಲಂಬಿಸಿ ಮುಕ್ತಿ ಅಸನ ಸಿಕ್ಕೀತೇನೆಲೋ ಎಲೋ ಹೇಸಿಜನರಿಗೆಲ್ಲ ಶ್ರೀಶ ಶ್ರೀರಾಮನ ದಾಸತ್ವ ದೊರಕಿತೇನೆಲೋ ಎಲೋ 3
--------------
ರಾಮದಾಸರು
ಶೋಧಿಸಿ ನೋಡಿರೋ ಸದಾ ಬೋಧದ ನಿಜಬೋಧ ಧ್ರುವ ಸಾಧಿಸಿ ನೋಡಿ ಸದ್ಗುರು ಕೃಪೆಯಿಂದ ಸಾಧನಕೆದುರಿಡುವುದು ಆನಂದ ಭೇದಿಸಿ ನೋಡುವದಿದೇ ತನ್ನಿಂದ ಆದಿ ಅನಾದಿದೇ ಸಹಜಾನಂದ 1 ತಂದುವಿಡಿದರಂತತ್ತೆ ನೋಡಿ ಎಂತೆಂತೀಹ್ಯ ನಿಜದಂತೆ ಗೂಡಿ ಅಂತರಾತ್ಮದಲೆ ಅನುಭವ ಬೆರೆದಾಡಿ ಸಂತತ ಸದಮಲ ಸುಖಸೂರ್ಯಾಡಿ 2 ವಿಹಿತಕೆ ವಿಹಿತಾಗುವ ಸುಪಥ ದ್ವೈತಾದ್ವೈತಕಿದೆ ರಹಿತ ಮಹಾಮಹಿಮರ ಆನಂದಭರಿತ ಮಹಿಪತಿ ಮನೋನ್ಮನದ ಸುವಸ್ತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು