ಒಟ್ಟು 4153 ಕಡೆಗಳಲ್ಲಿ , 123 ದಾಸರು , 2573 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವಕಿಯ ಗರ್ಭದಲಿ ಲೋಕವಕಾವ ಕೃಷ್ಣನು ಬಂದು ನಂದನಠಾವಿನಲಿ ತಾ ಬೆಳೆದು ಗೋವನುಕಾವ ನೆವದಲಿ ಗೋಪಗೋಪೀಭಾವವನು ನೆಲೆಗೊಳಿಸಿ ದುಷ್ಟರಜೀವವನು ನೆರೆ ತೆಗೆದ ಹಾಗೆಮಾವ ಕಂಸಗೆ ಮುಕ್ತಿುತ್ತಾಮಾತೃ ಪಿತೃ ಬಂಧನವ ಬಿಡಿಸಿದಭಾಗವತವೂ ಲಾಲಿಸಿದನೂ ದೇವದೇವಾ 1ನಡೆಯಲುಪನಯನಾಖ್ಯ ಕರ್ಮವದೊಡನೆ ವಿದ್ಯವನೋದಿ ದುಷ್ಟರಬಡಿದು ಪತ್ನಿಯರೆಂಟುಮಂದಿಯಪಡೆದು ದ್ವಾರಕಿಯಲ್ಲಿ ಯಾದವರೊಡನೆ ಭೋಗಿಸಿ ಭೋಗಭಾಗ್ಯವತಡುಕಿದರಿಗಳ ತರಿದು ಕೌರವಪಡೆಯ ಮರ್ದಿಸಿ ಪಾಂಡವರನಾಪೊಡವಿಪಾಲರ ಮಾಡಿದಂಥಾಭಾಗವತವೂ ಲಾಲಿಸಿದನೂ ದೇವದೇವಾ 2ಪರಿಹರಿಸಿ ಭಾರವನು ಭೂಮಿಗೆಪರಮ ಭಕತರ ಸಲಹಿ ಕಥೆಯನುಹರಹಿ ಮುಂದಣ ಜನರು ಸಂಸ್ಕ øತಿಶರಧಿಯನ್ನಿದರಿಂದ ದಾಂಟುವತೆರನ ಮಾಡಿಯೆ ಕಾಯ್ದ ಕರುಣಾಶರಧಿ ತಿರುಪತಿ ವೆಂಕಟೇಶನೆನಿರುಪಮಾಮಿತ ಮಹಿಮ ನೀನೇಚರಿಸಿದಂಥಾ ಚಾರುತರವಹಭಾಗವತವೂ ಲಾಲಿಸಿದನೂ ದೇವದೇವಾ 3ಓಂ ಧೇನುಕಾಸುರ ಭಂಜನಾಯ ನಮಃ
--------------
ತಿಮ್ಮಪ್ಪದಾಸರು
ದೇವತಾಸ್ತುತಿ ಅಂಜಿಕೆ ಬರುತಾದವ್ವ ನಿನ್ನನು ನೋಡ ಲಂಜಿಕೆ ಬರುತಾದವ್ವ ಪ ಅಂಜಿಕೆ ಬರುತಿದೆ ಮಂಜುಳಾಂಗಿಯೆ ನಿನ್ನ ಮಂಜುಳ್ವಾಕ್ಯಕೆ ತಪಭಂಗವಾದದ್ದು ಕೇಳಿ ಅ.ಪ ಪತಿಗೆ ನೀ ಮೃತ್ಯುವಾದೆವ್ವ ಮತ್ತು ನೀನು ಸುತರಿಗೆ ಕಷ್ಟಕೊಟ್ಟೆವ್ವ ಸತಿಯಾಗಿ ತಮ್ಮಗೆ ಭಾವನ್ನ ಕೊಲ್ಲಿಸಿದಿ ಮತಿಗೇಡಿ ಅಣ್ಣನ ಸತ್ಯನಾಶನ ಗೈದಿ 1 ಶಾಪಕೊಡಿಸಿದೆವ್ವ ಪತಿಯಿಂದ ಶಾಪವ ಪಡಕೊಂಡೆವ್ವ ಶಾಪಕೊಡಿಸಿ ಮುಖ ಕಪ್ಪು ಮಾಡಿಟ್ಟೆವ್ವ ಬಸಿರು ಮಾಡಿಟ್ಟೆವ್ವ 2 ಪತಿಗೆ ವಂದಕಳಾದೆವ್ವ ಮೀರಿದ ತಾಯಿ ಪತಿ ಪ್ರೀತಿ ಕಳಕೊಂಡೆವ್ವ ಸುತನ ಕತ್ತಿಯಿಂದ ಕುತ್ತಿಗೆ ಕೊಯ್ಸಿಕೊಂಡು ಪತಿತಪಾವನಳಾಗಿ ಮತ್ತೆ ಮುಂದಕೆ ಬಂದಿ 3 ಗರಡಿಯ ಮನೆ ಹೊಕ್ಕೆವ್ವ ಪತಿಯಕೈಲೆ ದುರುಳನ್ನ ವಧಿಸಿದವ್ವ ಧುರಕೆ ನಿಲ್ಲನೆ ಮತ್ತೆ ಕುರುಪನ ಕುಲಮೂಲ ತರಿಸಿದಂಥ ಮಹಮರಗಿ ನೀನವ್ವ 4 ಮಾತ್ಯಾಗಿ ಪಡೆದ್ಹಡದವ್ವ ಮತ್ತು ನೀನು ಸತಿಯಾಗಿ ನಡೆದೆ ಅವ್ವ ರೀತಿ ತಿಳಿಯಿತು ನಿನ್ನದ್ಯಾತರ ಭೀತಿನ್ನು ದಾತ ಶ್ರೀರಾಮನ ಪ್ರೀತಿ ದಾಸರಿಗೆ 5
--------------
ರಾಮದಾಸರು
ದೇವತಾಸ್ತುತಿ ಸರ್ವೋತ್ತಮನ ಸ್ತುತಿಗೆ ಸರಿಬೆಸದಕ್ಷರದೆಣಿಕ್ಯಾಕ ಧ್ರುವ ಯತಿ ಫಲ ಗಣ ಪ್ರಾಸವ್ಯಾಕೆ ಸ್ತುತಿಸ್ತವನ ಕೊಂಡಾಡಲಿಕ್ಕೆ ಹಿತದೋರದು ಮಿತಿ ಮಾಡಲಿಕ್ಕೆ ಅತಿ ಶೋಧಿಸಲಿಕ್ಕೆ 1 ಮುತ್ತಿಗೆ ಬುದ್ಯುಶದೆಂದು ಉತ್ತಮರಪೆಕ್ಷರೆಂದೆಂದು ನೆತ್ತಿಲಿಟ್ಟು ಕೊಂಬರು ಬಂದು ಅತಿ ಪ್ರೀತಿಲೆ ನಿಂದು 2 ಸಾರಸ ಸ್ವಾನಂದದ ಸರಳು ಮತಿ ಹೀನರು ಬಲ್ಲರೇನದರೊಳು ಮಾತಿನ ಮರಳು 3 ಬಾಯಲಿ ಧೂಳಿ ಪರಿ ಸ್ತುತಿಯಲಿ 4 ಮಹಿಪತಿ ಸ್ತುತಿನುಡಿದು ಅಪ್ಪವ್ವನುತಾ ಎನ್ನ ಕಡಿಯ ತಪ್ಪನೆ ತುಸು ಹಿಡಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವದೇವತೆಗಳ ಸ್ತುತಿ ಅಂಬುಧಿಶಯನ ಪೀತಾಂಬರಧರ ಕಮಳಾಂಬಕ ಸಿರಿರಮಣ ನಂಬಿದ ಭಕ್ತರ ಬೆಂಬಿಡದಿಹನೆಂಬುದಕೆ ಸಹಜಗುಣ ಪ ಒರಲುತ್ತಾ ಸಭೆಗೆ ಬರಲು ಒತ್ತಿ ಮುದ್ದಿಸುತಿರಲು ಪೊರೆದೆಯೋ ಧ್ರುವನ1 ಹರಿನಾಮವನು ಬರೆಯೆ ವಿರಚಿಸೆ ಕೇಳದಿರೆ ದುರುಳಬಾಧಿಸೆ ಮಗನ ಮೂರ್ತಿ ವರವಿತ್ತು ಪೊರೆದೆಯೋ ಪ್ರಹ್ಲಾದನ 2 ಶಾಪವನೀಯ ಲಗಸ್ತ್ಯನಿಂದ್ರದ್ಯುಮ್ನ ಭೂಪತಿ ಗಜವಾಗಲು ಕೋಪದಿ ನೆಗಲ್ವಿಡಿಯೊ ಗುಪಿತದಿ ಮೊರೆಯಿಡಲು ಸೀಳ್ದು ಪೊರೆದೆಯೋ ಗಜವ 3 ಮರ್ಮವನರಿತು ಬರಲು ಅನ್ನವನೀಯೆನಲು ಪೊರೆದೆಯೋ ಪಾಂಡುವರ 4 ಹರಿವಾಸವರವ ಮಾಡಲು ನರಿಯೆ ಬಂದು ವರವಿತ್ತು ಪೊರೆದೆಯೋ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ದೇವದೇವನಾ ಭಜಿಸು ಜಾನಕಿ ಪ್ರೇಮನಾ ಬಿಡದೆ ಇನ್ನು ಪ ಇಂದಿರೇಶನಾ ಸಕಲ ವಿಶ್ವನಾಥನಾ ಸುಂದರ ರೂಪನ ಸುಗುಣ ಸುಜನವಂದ್ಯನಾ ಸಿಂಧು ಶಯನನಾ ಚೆಲುವ ಶ್ರೀನಿವಾಸನಾ ಮಂದರಾದ್ರಿಯನೆ ಪೊತ್ತ ಮಹಿಮಾನಂದನ 1 ವಾರಿಜನಾಬನಾ ಘನ ವಾಸುಕಿಶಯನನಾ ನೀರಜ ನಯನನಾ ಕೃಷ್ಣಾ ನಿಗಮಗೋಚರನಾ ನವನೀತ ಚೋರನಾ ಪಾರಮಾರ್ಥಿಕ ಜ್ಞಾನದಲ್ಲಿ ಪ್ರಬಲವಾಗಿ ಮನವು ನಿಲ್ಲಿಸಿ2 ಪನ್ನಗ ಭೂಷಣನಾದ ಪಾರ್ವತೀಶನಾ ಮನ್ನಿಸಿ ಪೊರೆದನ ಮಹಾಮಹಿಮೆಯುಳ್ಳನಾ ಚಿನ್ಮಯ ರೂಪನಾ ಪರಮ ಚಿದ್ವಿಲಾಸನಾ ಹೆನ್ನ ತೀರನಿಲಯ ಸುಪ್ರಸನ್ನ 'ಹೆನ್ನ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ದೇವರಾಗಬಾರದೇನೆಲೇ ದೆವ್ವಿನಂಥ....... ದೇವರಾಗಬಾರದೇನೆಲೇ ಪ ದೇವರಾಗಬಾರದೇಕೋದೇವನ ಪಾದವನಂಬಿ ಕಾವುಮೀರಿ ಹೋದಮೇಲೆ ಬಾಯಬಿಟ್ಟರೆ ಬರುವುದೇನೆಲೆ ಅ.ಪ ತಂದ ಬುತ್ತಿ ಚೆನ್ನಾಗುಣ್ಣೆಲೆ ನೀನದನು ಒಲ್ಲೆ ನೆಂದರೆ ಬಿಟ್ಟ್ಹೋಗ್ವುದೇನೆಲೆ ಹೇ ಪಾಪಿ ನೀನು ಬಂದಹಾದಿ ನೋಡಿಕೊಳ್ಳೆಲೆ ಮುಂದಿದರಿಯೆಲೆ ಬಿಂದುಮಾತ್ರಸುಖಕೆ ಮೋಹಿಸಿ ಪರ್ವತಾಕಾರ ಪಾಪಹೊತ್ತು ಬಂಧಕ್ಕೀಡಾಗುವುದಿದೇನೆಲೆ 1 ನಾಶನಾಗಿ ಹೋಗುತಾದೆಲೇ ಈ ಜಗವು ಒಂದಿನ ಆಸೆಯೆಂಬ ಕುಳಿ ಧುಮುಕ ಬೇಡೆಲೆ ಮಹನೀತಿವಿಡಿದು ನಾಶವಾಗದಪದವಿ ಗಳಿಸೆಲೇ ಸೋಸಿನೋಡೆಲೆ ಮೋಸಮರವೆಯಿಂ ನಾಶವಾಗದೆ ಹೇಸಿಸಂಸಾರ ನಾಮ ಭಜಿಸಿ 2 ಉಟ್ಟ ಸೀರೆಬಿಟ್ಟು ಹೋಗಿದ್ದ್ಯಂತೆ ಹೇ ಹುಚ್ಚು....... ಎಷ್ಟೋಸಾರಿ ಹುಟ್ಟ್ಹುಟ್ಟಿದರಂತೆ ಈ ಕಾಯಧರಿಸಿ ಬಿಟ್ಟುಹೋಗೇದಸ್ತಿ ಪರ್ವತ್ಹೋಲ್ವಂತೆ ಕೆಟ್ಟು ಬಿದ್ದೈತೆ ದುಷ್ಟಭ್ರಷ್ಟತೆಗಳನ್ನು ಬಿಟ್ಟು ಶಿಷ್ಟಸಂಗಕೆ ಮನವಗೊಟ್ಟು ಸೃಷ್ಟಿ ಗೀರೇಳು ಸೂತ್ರನಾದ ದಿಟ್ಟ ಶ್ರೀರಾಮನಡಿಗೆ ಪೊಂದಿ 3
--------------
ರಾಮದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವೇಂದ್ರನ ಸೊಸೆ ದೇವಕ್ಕಿ ತನಯಳು ಏನೇನು ಬಯಸಿದಳು ಪ ಒಂದು ತಿಂಗಳು ತುಂಬಲು ಸುಭದ್ರ ಅಂಜೂರಿ ದ್ರಾಕ್ಷಿ ಕಿತ್ತಳೆ ಜಂಬುನೇರಳು ಬಯಸಿದಳು ಅಂಬುಜಾಕ್ಷನ ತಂಗಿ ಪೈಜಣ ರುಳಿ ಗೆಜ್ಜೆ ಕಾ- ಲುಂಗುರ ಕಿರುಪಿಲ್ಯ ಇಟ್ಟೇನೆಂಬುವಳು 1 ಎರಡು ತಿಂಗಳು ತುಂಬಲು ಸುಭದ್ರ ಪರಡಿ ಮಾಲತಿ ಸಣ್ಣ ಶ್ಯಾವಿಗೆ ಬಯಸಿದಳು ಪರಿವೇಶನ ತಂಗಿ ಹರಡಿ ಕಂಕಣ ಹಸ್ತ ಕಡಗ ಹಿಂಬಳೆ ದ್ವಾರ್ಯ ಇಟ್ಟೇನೆಂಬುವಳು 2 ಮೂರುತಿಂಗಳು ತುಂಬಲು ಸುಭದ್ರ ವಾಲ್ಯ ಪಚ್ಚದ ಚಂದ್ರ ಬಾಳ್ಯವ ಬಯಸಿದಳು ಮಾರನಯ್ಯನ ತಂಗಿ ತೋಳಿಗ್ವಜ್ರದ ವಂಕಿ ಮಾಣಿಕ್ಯದ್ವೊಡ್ಯಾಣ ಇಟ್ಟೇನೆಂಬುವಳು 3 ನಾಲ್ಕು ತಿಂಗಳು ತುಂಬಲು ಸುಭದ್ರ ಆಕಳ ತುಪ್ಪ ಅನಾರಸ ಬಯಸಿದಳು ಶ್ರೀಕಾಂತನ ತಂಗಿ ತೂಕದ ಸರಿಗೆಯಿಟ್ಟು ಏಕಾವಳಿಯ ಸರ ಹಾಕೇನೆಂಬುವಳು 4 ಐದು ತಿಂಗಳು ತುಂಬಲು ಸುಭದ್ರ ಕೆನೆಮೊಸರ್ಹಾಕಿದ ಬುತ್ತಿ ಚಿತ್ರಾನ್ನವ ಬಯಸಿದಳು ಅಸುರಾಂತಕನ ತಂಗಿ ಹಸುರುಪತ್ತಲನುಟ್ಟು ಕುಸುಮ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 5 ಆರು ತಿಂಗಳು ತುಂಬಲು ಸುಭದ್ರ ಚೌರಿ ರಾಗಟೆ ಜಡೆಬಂಗಾರ ಬಯಸಿದಳು ಮಾರನಯ್ಯನ ತಂಗಿ ನಾಗಮುರಿಗೆನಿಟ್ಟು ಜಾಜಿ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 6 ಏಳು ತಿಂಗಳು ತುಂಬಲು ಸುಭದ್ರ ಕ್ಷೀರ ಮಂಡಿಗೆ ಬುಂದ್ಯ ಫೇಣಿಯ ಬಯಸಿದಳು ಕಮಲ ಕ್ಯಾದಿಗೆ ಮುಡಿಯ ನಿಂಬಾವಳಿ ಪತ್ತಲ ನಿರಿದುಟ್ಟೇನೆಂಬುವಳು7 ಎಂಟು ತಿಂಗಳು ತುಂಬಲು ಸುಭದ್ರ ಚಿಂತಾಕು ಪದಕ ಕಟ್ಟಾಣಿಯ ಬಯಸಿದಳು ವೈಕುಂಠಪತಿಯ ತಂಗಿ ಇಂಟರ್ ಪಪ್ಪುಳಿನುಟ್ಟು ಸೀಮಂತದುತ್ಸವ ಮಾಡೆ ಸುಖದಿಂದಿರುವಳು 8 ಒಂಬತ್ತು ತಿಂಗಳು ತುಂಬಲು ಸುಭದ್ರೆಗೆ ಬಂಗಾರದ್ಹೊರಸಿನಲ್ಲಿರಿಸಿ ಆರತಿ ಮಾಡಲು ಮಂಗಳಮಹಿಮ ಭೀಮೇಶಕೃಷ್ಣನ ತಂಗಿ ಕಂದ ಅಭಿಮನ್ಯು ಎಂಬುವನ ಪಡೆದಳು 9
--------------
ಹರಪನಹಳ್ಳಿಭೀಮವ್ವ
ದೇಶ ತಿರುಗಿಸಿ ಪರದೇಶಿ ಮಾಡಲು ಬೇಡೋ ಈಶ ನೀ ಘನ್ನಾ ಸಂಪನ್ನಾ ಪ ಜನಕನಂಶದಿ ಧ್ರುವನು ಸನುಮತವ ಮಂಡಿಸಲು ಘನರೋಷ ತಾಳಿ ಮಲಜನನಿ ಧೂರ್ತೆ ದೂಡಲು ವನವಾಸ ಲೇಸೆಂದು ತಿಳಿದು ನಿನ್ನ ನೆನೆಯೆ ತಾ ನಡೆದ ಘನಮಹಿಮ ಶ್ರೀಮನ್ನಾರಾಯಣ ಸ್ಥಿರಪಟ್ಟವ ನಾಡಿದ 1 ಖಳ ಕುರುಪಗೊಡೆತನವು ಭಲೆ ಧರ್ಮಗೆ ವನವಾಸವು ಬಲು ಮಾನವಂತೆ ದ್ರೌಪದಿಯು ಜಲಜನಾಭನೆ ನೀನೆ ಗತಿಯೆನಲು ಒಲಿದು ಬೆಂಬಲನಾಗಿ ಪಾಂಡವರ ಪೊರೆದೆ 2 ವರಮುನಿಯ ಶಾಪದಿಂದರಸನಿಂ ಪ್ರದ್ಯುಮ್ನ ಕರಿರಾಜನಾಗಿ ಮಡುವೊಳು ಕ್ರೀಡಿಸೆ ಭರದಿ ನೆಗಳಿಯು ಪೀಡಿಸೆ ಶ್ರೀ- ಹರಿಯೆಂದು ಮೊರೆಯಿಡÀಲು ಶ್ರೀ- ಕರದಿಯುದ್ಧರಿಸಿದೆ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ದೇಹ ಭಾವವು ಹೋಗಿ ದೇವನೇ ತಾನಾಗಿದೇಹಗುಣವೆಲ್ಲಿಯದೋ ಮುಕ್ತ ಪ ಗರುಡನ ಮನೆಯೊಳಗೆ ನಾಗರ ಜಾತಿಯಪರಿ ನಡೆವುದೇನೋ ಮುಕ್ತಶರೀರ ಸಹಿತದ ಬ್ರಹ್ಮಾಗಿ ತಾನಿರೆಹರಿವವೆ ಪ್ರಾಣಗಳು ಮುಕ್ತ1 ಉರಿಯದು ಉರಿಯಲು ಉರಿಯಲಿಅರಗದು ಇಹುದೇನೋ ಮುಕ್ತಕರುವಿಟ್ಟೆರಕದಿ ಥಳಥಳ ಹೊಳೆಯದೆಇರುವುದೇ ಈ ಇಂದ್ರಿಯಗಳು ಮುಕ್ತ2 ರವಿಯದು ಬೆಳಗಿರೆ ಕಿರಣ ಕಾಂತಿಯಿಂಗೂಗೆಗಳೆಲ್ಲ ತಿರುಗುವವೋ ಮುಕ್ತಖವ ಖವ ಖವಿಸುತ ಪರವಶವಿರೆವಿವರಿಸೆ ಮನವೆಲ್ಲೊ ಮುಕ್ತ 3 ಈಶನ ಕಣ್ಣುರಿ ಭುಗು ಭುಗು ಭುಗಿಲೆನೆಏಸು ಉಳಿವುದು ಕಾದು ಮುಕ್ತಿಸೂಸುವ ಮುಖದಲಿ ತೃಪ್ತಿಯೆ ತುಂಬಿರೆವಾಸನೆ ಎಲ್ಲಿಹುದೋ ಮುಕ್ತ 4 ಪರಮಾತ್ಮನು ತಾ ಪರಿಪೂರ್ಣನಾನಿರೆಮೆರೆವುದು ಅವಿದ್ಯೆ ಮುಕ್ತಗುರು ಚಿದಾನಂದ ಸಹಜದಿ ತಾನಿರೆಇರುವುದೆ ಜೀವತ್ವ ಮುಕ್ತ 5
--------------
ಚಿದಾನಂದ ಅವಧೂತರು
ದೇಹವ್ಯಾಕೆ ಇಂಥ ದೇಹವ್ಯಾಕೆ ಪ ಹರಿಯ ಪಾದಕೆರಗದಂಥ ಶಿರವು ಏಕೆ ಪರಮ ಪುರುಷನ ಪಾಡದಂಥ ವದನವ್ಯಾಕೆ 1 ಹರಿಯಸ್ಮರಣೆ ಕೇಳದಂಥ ಕರ್ಣವ್ಯಾಕೆ ಹರಿಯಮೂರ್ತಿನೋಡದಂಥ ಕಂಗಳ್ಯಾಕೆ 2 ಹರಿಯ ನಿರ್ಮಾಲ್ಯವಾಘ್ರಾಣಿಸದಂಥ ನಾಸವ್ಯಾಕೆ ಹರಿಯ ನೈವೇದ್ಯ ಭುಂಜಿಸದಂಥಾ ಉದರವ್ಯಾಕೆ 3 ಶರಣಜನರ ಚರಣ ತೊಳೆಯದ ಕರವು ಏಕೆ4 ಜಿಹ್ವೆ ಏಕೆ ಜಾಣರೆಲ್ಲರು ತಿಳಿದು ನೋಡಿ ಬದುಕಿ ಜೋ 5
--------------
ಬಾಗೇಪಲ್ಲಿ ಶೇಷದಾಸರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ