ಒಟ್ಟು 7653 ಕಡೆಗಳಲ್ಲಿ , 131 ದಾಸರು , 4746 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಭವನ ಪಿತನೆ ಸುವ್ವಿ ಅಮರಸುತನ ಸಖನೆ ಪ ಸುವ್ವಿ ಉಮೆಯ ಪತಿಯಸಖನೆ ಸುವ್ವಿರಮೆಯ ಪತಿಯಚ್ಯುತನೆ ಅ.ಪ ಚಂದ್ರಕಾಂತದೊರಳ ಕಡೆದು ಸಾಂದ್ರ ಕುಂತಳೆಯರು ನೆರದು ಸರಸಮಿಗೆ ಯಿಂದ ನಲಿದು ಸುವ್ವಿಲಾಲೆ 1 ಸೇರಿಸಿದ್ದ ಸೆರಗು ಜಾರೆ ಹೊಗರು ಮೀರೆ ಸಾರೆ ಕಸ್ತೂರಿ ಪರಿಮಳವಿರೆ ಸರಸಗುಣದಿಂದ ಮಿತ್ರೆ 2 ಹರಿಣಲೋಚನೆಯರು ಕೂಡಿ ಹರುಷಮಿಗೆ ನಲಿದಾಡಿ ಧರೆಯೊಳಮರ ಪುರಿಯ ನೋಡಿ ಧೊರೆಯು ಲಕ್ಷ್ಮೀಪತಿಯ ಪಾಡಿ 3
--------------
ಕವಿ ಲಕ್ಷ್ಮೀಶ
ಕಮಲ ಲೋಚನನೆ ಎನ್ನತಡಿಯ ಸೇರಿಸೊ ತರಣಿಶತಕೋಟಿ ತೇಜ ಪ ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿಮೇಕೆಯಂದದಿ ಬಾಯಿ ಬಿಡುತಿಪ್ಪೆನುಸಾಕಾರ ರೂಪ ಸರ್ವೋತ್ತಮನೆ ನೀ ಕರುಣಾಕರನೆಂಬ ಪೆಂಪುಂಟಾದಡೀಗೆನ್ನ 1 ಕೇಸರಿ ಎಂಬಛಲ ಬಿರುದು ತಾಳ್ದ ದೇವರ ದೇವ ನೀನೆನ್ನ 2 ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವಬೂದಿಯೊಳಗಾಡಿ ಮುಳುಗಾಡುತಿಹೆನೊಭೂಧರನ ತಾಳ್ದ ಕೂರ್ಮಾವತಾರನೆ ಬಾಡದಾದಿಕೇಶವರಾಯ ಬೆನ್ನಲೆತ್ತಿಕೊಂಡು 3
--------------
ಕನಕದಾಸ
ಕಮಲ ಸಂಭವೆ ಹಿಮನಗಜಾರಮಣ ಸನ್ನುತೆ ತಮರಿಪು ಶತ ಸಮಸನ್ನಿಭೆ ಇಭ ಇಂದಿರೆ ಶೋಭಾನೆ ಪ ಶೃಂಗಾರ ತರಂಗ ಹೆಳಲಾ ಬಂಗಾರವ ಪೊಂಗ್ಲಾದಿಗೆ ಬಲಿ ವಂಗನೆ ಶಿರೋಮಂಗಳ ಮಡಿ ಜಡ ಜಂಗಮ ವ್ಯಾಪ್ತಿ ಅಂಗಜ ಶರ ಕಂಗಳೆ ದ್ವಿಜೋ ತ್ತುಂಗಮ ರಂಗನ ನಿಜ ಅ ರ್ಧಾಂಗಿನಿಯೆ ಬಾ ಹಸಿಯ ಜಗುಲೀಗೆ 1 ಪೊಸುಕುಸುಮ ಶಿರಸದಲೊಪ್ಪುವ ನೊಸಲಲಿ ರಂಜಿಸುವ ಕಸ್ತೂರಿ ದಿಶದುಂಬಿದ ಬಿಸಿಜಾನನ ಪ್ರಭೆ ಎಸೆವ ಕಂಧರ ಕಕ್ಕಜ ಕುಚಕು ಪ್ಪುಸದಲ್ಲತಿ ಶೋಭಿಸುತಿಹ ಪವಳ ದಾ ಸರವ ತೂಗುವ ಅಸಮೇ ಬಾ ಹಸೆಯ ಜಗುಲೀಗೆ 2 ಕರಿಸೊಂಡಿಲುತೆರ ಚತುರಕರ ವರ ಅಭಯಸರಸಿಜಯುಗಧರ ಜಠರಾ ವರತ್ರಿವಳಿ ಗಂಭೀರನಾಭಿ ಕ ಟಸೂತರೆ ಹೇಮಾಂಬರೆ ಚರಣಂದಿಗಿ ಸಪಳಿ ಪೊಂಗೆಜ್ಜೆಯಾ ಮೆರೆಯುತ ಸರಸಳೆ ಬಾಹಸಿಯ ಜಗುಲೀಗೆ 3 ಮೃಗಲಾಂಛನೆ ಮಿಗೆ ಶೋಭಿಪ ಪದ ನಖ ಪಂಕ್ತಿಗಳೊಪ್ಪುವ ಗತ ಅಗಣಿತ ಮಹಿಮಳೆ ಸುಗುಣ ಸಂಪನ್ನೆ ಭಗವಂತನ ಜಘನದಿ ಪೊಳೆಯುತ ಖಗರಾಜನ ಪೆಗಲನೇರಿ ಅಮ ರ ಗಣವ ಚಿರ ಬಾ ಹಸಿಯ ಜಗಲೀಗೆ 4 ಅಂಭೃಣಿ ಸ್ವಾಯಂಭೂ ಸುರ ನಿಕು ರುಂಬಕರ ಅಂಬುಜ ಪೂಜಿತೆ ನಂಬಿದ ಜನರ್ಹಂಬಲಿಸುವ ಫಲ ಸಂಭ್ರಮದಿ ಕೊಡುವಾ ಗಂಭೀರಾ ಸು ಖಾಂಬೋಧಿ ಹರಿ ನಿತಂಬೆ ಪ ಯಾಂಬೋಧಿ ಸುತೆ ಜಗದಂಬೆ ಬಾ ಹಸಿಯ ಜಗುಲೀಗೆ 5 ಮಾಯೆ ನಾರಾಯಣಿ ಶ್ರೀ ಭೂ ಕೃತಿ ಆಯತಾಕ್ಷಳೆ ಕಾಯಜನ ತಾಯೆ ಶರಣೆ ಪ್ರಿಯ ಪಾವನ್ನೆ ವಾಯುಭುಕು ಶಾಯಿ ಅಮರಾಧೇಯಾ ಜಗನ್ನಾಥವಿಠಲನ ಜಾಯೆ ಬಾ ಹಸಿಯ ಜಗುಲೀಗೆ 6
--------------
ಜಗನ್ನಾಥದಾಸರು
ಕಮಲಕಮಲಾಧರನೆ ಕಮಲಭವ ವಂದಿತನೆ ಕಮಲ (?) ನುತನೇ ಕಮಲಶತ ಹಿತಕರನೆ ಪ ಕಮಲಬಾಣನ ಪಿತನೇ ಕಮಲದಳ ಲೋಚನನೇ ಕಮನೀಯನುಪ್ಪವಡಿಸಾ ಹರಿಯೇ ಅ.ಪ ಸಲಹಲೀ ಲೋಕಗಳ ಬಹುವೆನಿಪ ದಾನವರ ಗೆಲಿದು ಪಾಲ್ಗಡಲ ನಡುವಲದ ನೆಲೆವನೆಯ ತಲೆವಣಿಯ ಕಾಂತಿಗಳ ಮಿಗೆ ಜ್ವಲಿಪ ಬೆಳಗುಗಳಿಂದ ಫಲಿತ ಪುಳಕಗಳು ಮಿಗೆ ಬಲಿದ ನಿದ್ರೆಗಳ ಶ್ರೀಲಲನೇಶನುಪ್ಪವಡಿಸ1 ಸಿರಿ ಮುರಿಯುತಿದೆ ಶರಧಿಯೇಳ್ಗೇ ಉದಯಕೆ ಕರೆಯುತಿದೆ ಗಿಳಿವಿಂಡು ಕೊರುಗುತಿವೆ ಕೋಕಗ ಗರೆಯುತಿದೆ ಕೋರಕಂ ವೋಲಗಕೆ ಕರುಣಾಳು ಉಪ್ಪವಡಿಸಾ 2 ತೋರುತಿದೆ ಇನಬಿಂಬ ದೂರುತಿದೆ ಕುಮುದ ಸೊಂ ಪೇರುತಿದೆ ವನರುಹಂ ಬೀರುತಿದೆ ಕಡು ಚೆಲ್ವ ಸೋರುತಿದೆ ಮಕರಂದ ತೋರುತಿದೆ ತನಿಗಂಪ ಪಾರುತಿವೆÉ ಭ್ರಮರಂಗಳೂ ಚೀರುತಿವೆ ಪಕ್ಷಿಗಳು ಮೀರುತಿವೆ ಜನರವಂ ಪೂರ್ಣಧನು ಉಪ್ಪವಡಿಸಾ3 ಆಡುವರೆ ನರ್ತನವ ಪಾಡುವರೆ ಗಾನಗಳ ನೀಡುವರೆ ಪನ್ನೀರ ತೀಡುವರೆ ಸುರಭಿಗಳ ಮಾಡುವರೆ ಸಿಂಗರವ ಪೂಡುವರೆ ಹಾರಗಳನೂ ಕೋಡುವರೆ ಕಾಣಿಕೆಯ ಬೇಡುವರೆ ಸಂಪದವ ಸೂಡುವರೆ ಕುಸುಮಗಳ ನೋಡುವರೆ ಸಮಯಗಳ ಗಾಡಿಮಿಗಲುಪ್ಪವಡಿಸಾ 4 ದೇವ ಸಂಸ್ತುತಲೀಲ ದೇವ ಮುನಿನುತ ಶೀಲ ದೇವತತಿಗನುಕೂಲ ದೇವರಿಪುವನಜಾಲ ಚೇಲ ದೇವ ಗುಣಗಣಜಾಲ ದೇವಪುರಿ ಶ್ರೀಲೋಲ ದೇವ ನಲಿದುಪ್ಪವಡಿಸಾ 5
--------------
ಕವಿ ಲಕ್ಷ್ಮೀಶ
ಕಮಲನಯನನ ಕರತಾರೆ ಕರುಣ ಸಾಗರನ ಕರಿರಾಜ ವರದನ ಪ -------ಪನ ಕಂಬುಕಂಧರನ ಲೋಕನಾಯಕ ಶ್ರೀಯದು ವೀರನಾ ರಾಕೇಂದು ಮುಖಿ ವರ ಲಕ್ಷ್ಮೀನಾಯಕನ ನೀರಜ ನಾಭನಾ 1 ಸುಜನ ವಿಲಾಸನಾ ಕಂದ ಪ್ರಹ್ಲಾದನಾ ಕಾಯ್ದದೇವನಾ ಸುಂದರ ವದನ ಗೋವಿಂದ ಮುಕುಂದನಾ ಮಾಧವ ಕೃಷ್ಣನಾ 2 ಯದುಕುಲಾಬ್ಧಿಚಂದ್ರ ವೇದಗೋಚರನಾ ಮಧÀು ಸೂದನ ರೂಪ ಮಹಿಮ ಪ್ರಕಾಶನಾ ಬುದ್ಧ ಜನರ ಸಿರಿಯ ನಾ ಪೂರ್ಣಾನಂದನ ಚದುರೆ ನೀ ಬೇಗ ಹೋಗಿ ಚಲುವ ಸಂಪನ್ನನಾ 3 ಆನಂದ ನಿಲಯನಾದ ಅಖಿಲವೈಭವನಾ ಜ್ಞಾನಿಗಳ ಪೊರೆವ ಘನ ಗಂಭೀರನಾ ಧೇನು ಪಾಲಕ ದೇವಾದಿ ದೇವನ ಗಾನಲೋಲನಾದ ವೇಣು ಗೋಪಾಲನ 4 ಗರುಡವಾಹನನಾ-----ಜನ ಕಾಯ್ದವನಾ ಸ್ಥಿರ ಹೆನ್ನ ತೀರದಿ ವಾಸವಾಗಿಹನ ದೊರೆ 'ಹೆನ್ನ ವಿಠ್ಠಲನ’ ----ದೇವನಾ ಪೊರೆವನು ನಮ್ಮ ನಿಂದು ಪರಮಹರುಷದಿಂದಾ5
--------------
ಹೆನ್ನೆರಂಗದಾಸರು
ಕಮಲನಾಭ ಕ್ಷಮೆಯಳೆದ ಪಾದ ರಮೆಯರಸನೆ ರಮ್ಯ ಚರಿತ ಕಮಲ ಪಾದವ ತೋರೋ ಅ.ಪ. ಸೂರ್ಯ ತೇಜ ಪೊಳೆವ ಶೇಷಶಯನ ತಲ್ಪದಿ ಹಾಟಕಾಂಬರಧರ ಕಿರೀಟ ಮಾಲ ಶೋಭ ಕೃಷ್ಣನೆ ಸಾಟಿಯಿಲ್ಲದ ಕರದಿ ಲಕುಮಿ ಧಾಟಿಯಿಂದ ವೊತ್ತುವ ಪಾದ ಸಾಟಿಯಿಲ್ಲದೆ ನಿನ್ನ ಭಕ್ತರ ಪೊರೆವ ದೇವ ನಿನ್ನ ಪಾದವು 1 ದುಷ್ಟರನ್ನು ಮೆಟ್ಟಿ ತುಳಿದ ದಿಟ್ಟ ಕೃಷ್ಣನ ಪಾದವು ಮೆಟ್ಟಿ ಕಾಳಿಂಗನ ಹೆಡೆಯ ದಿಟ್ಟ ರಂಗನ ಪಾದವು ಕಟ್ಟಿದ ವರಳನೆಳೆದು ಮತ್ತಿ ಮರವ ಮುರಿದ ಪಾದವು ಕೊಟ್ಟ ಅಭಯ ಭಕ್ತರ ಪೊರೆವಡಿಟ್ಟ ಪಾದವು 2 ಕೂರ್ಮ ವರಹ ನರಹರಿ ಅಚ್ಚವಾಮನ ಪಾದವು ಸಯಿಚ್ಚೆ ಪರಶುಧರ ಶ್ರೀರಾಮ ಕೃಷ್ಣ ನಿನ್ನ ಪಾದವು ಅಚ್ಚವರವನಳಿದು ತೇಜ ಹತ್ತಿ ಮೆರೆವ ಪಾದವು ಅಚ್ಚುತ ಶ್ರೀ ಶ್ರೀನಿವಾಸ ಕೃಷ್ಣ ನಿನ್ನ ಪಾದವು 3
--------------
ಸರಸ್ವತಿ ಬಾಯಿ
ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಕರವ ಪಿಡಿಯೋ |ಮಾ ಕಮಲಭವ ವಂದ್ಯ | ಭಕ್ತರುದ್ಧರಿಸೋ ಪ ನಿನ್ನ ನಾಮಾಮೃತವು ಜಿಂಹ್ವೆಗೆಪೊದಗಲೀ |ನಿನ್ನ ಕಥಾಶ್ರವಣ ಕಿವಿಗಾಗಲೀ ||ನಿನ್ನ ಚಾರಿತ್ರಗಳ ನಿರುತಕೊಂಡಾಡಲಿ |ನಿನ್ನ ದಾಸರು ಕೇಳಿ ಶಿರದೊಗಲೀ 1 ಪಂಚಭೇದ ಜ್ಞಾನವೇ ತಿಳಿಯಲಿ |ಮಾರುತಾ ಮತವನ್ನು ಅನುಸರಿಸಲಿ ||ಆರೆರಡು ನಾಮ ಊಧ್ರ್ವಪುಂಡ್ರವನೆ ಧರಿಸಲಿ |ಧೀರ ಗುರು ಮಧ್ವರಾಯರೇ ಮುಖ್ಯರೆನಲಿ 2 ಏಸುಪರಿ ತುತಿಸಿ ವಾಣೀಶಗಸದಳವೋ ಶ್ರೀ |ವಾಸುದೇವನನು ತುತಿಸಲೊಶವೇ |ಶ್ರೀಶ ಪ್ರಾಣೇಶ ವಿಠ್ಠಲರಾಯ ದಯದಿನ್ನು |ದಾಸರ ದಾಸನೆಂದೆನಿಸಿ ಪೊರಿಯೊ 3
--------------
ಶ್ರೀಶಪ್ರಾಣೇಶವಿಠಲರು
ಕರವ ಮುಗಿಪರಘವ ತೆಗೆವ ಗುರು ವಿಜಯದಾಸರಿಗಿನ್ನು ಪ ಭೇದವಿಲ್ಲಯೆಂಬ ಮಾಯವಾದಿ ರಾಮಶಾಸ್ತ್ರಿ ಬಂದುಪಾದಕೆರಗೆ ಅವನ ತಮವ ಛೇದಿಸಿ ಸುಜ್ಞಾನವಿತ್ತೆ 1 ವಾದಿಗಿರಿಗೆ ಇಂದ್ರಸ್ಥಾನೀಯರಾದ ಗುರುಗಳಿಂದ ಮು-ದ್ರಾಧಾರಣಿಯ ಕೊಡಿಸಿ ಪರಮ ಆದರದಿಂದ ಅವನ ಕಾಯ್ದೆ2 ಭಸುಮವನ್ನೆ ತೆಗಸಿ ಅವನ ನೊಸಲಲೂಧ್ರ್ವ ತಿಲಕ ಪಚ್ಚಿಸಿಎಸವ ಪಂಚಮುದ್ರಿ ದ್ವಾದಶ ನಾಮ ಧರಿಪಂತೆ ಮಾಡಿದೆ 3 ಸುರರು ಆತನತಾಮರಸ ಪದ ಧೂಳಿಗಯೆಂದು ಈ ಮರಿಯಾದಿಗಳ ಪೇಳಿದೆ 4 ಧರೆಯೊಳಿದ್ದ ಭಕ್ತ ಜನರ ಪೊರೆವನೆಂಬ ಬಿರಿದು ವೊಹಿಸಿಸಿರಿ ಮೋಹನ್ನ ವಿಠಲನಂಘ್ರಿ ಸರಸಿರುಹವ ಎನಗೆ ತೊರ್ದೆ 5
--------------
ಮೋಹನದಾಸರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ