ಒಟ್ಟು 2088 ಕಡೆಗಳಲ್ಲಿ , 110 ದಾಸರು , 1493 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮಂತ್ರಪುಷ್ಪವ ಸಮರ್ಪಿಸುವೆನೊಲವಿನಲಿಯಂತ್ರವಾಹಕ ನಿನ್ನ ದಿವ್ಯಚರಣದಲಿ ಪಮಂತ್ರಂಗಳುದಿಸಿದವು ಮುಖಕಮಲದಲಿ ನಿನ್ನಮಂತ್ರಗಳ ಬ್ರಹ್ಮನಿಗೆ ಕೊಟ್ಟೆ ನೀ ಮುನ್ನಮಂತ್ರಂಗಳನು ಜಪಿಸಿ ನವಬ್ರಹ್ಮರಾದಿಯಲಿಮಂತ್ರಮೂರ್ತಿಗಳಾದರದರಿಂದಲೀ ವಿಧದ 1ಮಂತ್ರಹೃದಯದಿ ನಿಂದು ಮಂತ್ರಿಸಿದ ಜೀವನನುಮಂತ್ರಾರ್ಥವಸ್ತು ಪರಬ್ರಹ್ಮವನೆ ಮಾಡಿಯಂತ್ರತ್ವವನು ಬಿಡಿಸಿ ಯಂತ್ರಿ ತಾನೆಂದೆನಿಸಿಸಂತತಾನಂದಸಾಗರವ ಸೇರಿಸುವ 2ಹಿಂಸಾದಿ ದೋಷಗಳನುಳಿದು ನಿರ್ಮಲವಾಗಿಹಂಸನೊಳು ಬೆರಸಿ ಗುಣಕರಣ ಪುಷ್ಪಗಳಹಂಸಮಂಡಲರೂಪ ತಿರುಪತಿಯಲಿಹ ಪರಮಹಂಸ ವೆಂಕಟರಮಣ ನೀನೆ ನಾನೆಂಬ 3ಓಂ ಗೋವಿಂದಾಯ ನಮಃ
--------------
ತಿಮ್ಮಪ್ಪದಾಸರು
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮಧ್ವೇಶ ವಿಠಲ ಪ ತವ ದಾಸೋಹಂ ಕೃಪಾಂಗರಂಗ ತವ ದಾಸೋಹಂ 1 ಅಗಣಿತ ತವದಾಸೋಹಂ ಜಗತ್ಪಾಲ ತವದಾಸೋಹಂ 2 ತವ ದಾಸೋಹಂ ಸಿರಿ ಮುಕುಂದಮೂರ್ತಿ ತವ ದಾಸೋಹಂ 3 ಅನ್ನಮಯನೆ ಆನಂದಮಯನೇ ವಿಜ್ಞಾನಮಯನೇ ತವದಾಸೋಹಂ ಮನೋಮಯನೇ ಮನ್ಮಥ ಜನಕನೆ ಪ್ರಾಣಮಯನೆ ಶ್ರೀ - ವಾಜ್ಞಯನೇ ತವ ದಾಸೋಹಂ4 ಶ್ರೀಶನೇ ಸರ್ವಮಹೀಶನೇ ವರ ಹನುಮೇಶವಿಠಲ ತವದಾಸೋಹಂ ಲಕುಮಿ ಉಲ್ಲಾಸನೇ ತವ ದಾಸೋಹಂ 5
--------------
ಹನುಮೇಶವಿಠಲ
ಮನ ಬಲಿಯದನಕ ಅನುಕೂಲಾಗದನುಭವ ಧ್ರುವ ಮನವೇ ಮರೆಯ ಮಾಡೇದೆ ನೆನವಿಗೆ ತಾಂ ತಂದು ತೋರದೆ ಹೆಣ್ಣ ಹೊನ್ನದಾಶೆ ಹಚ್ಚ್ಯಾದೆ ಘನತನಗರಸದೆ 1 ಹುಚ್ಚಮಾಡಿಬಿಟ್ಟದೆ ಎಚ್ಚರ ಎಡಿಯಗೊಡದೆ ಕಚ್ಚಿ ವಿಷಯಕೆ ಬಿದ್ದದೆ ಬೆಚ್ಚಿ ಬೆದರದೆ 2 ಮನಸಿಗೆ ಮನಸಿನಿಂದ ಅನುಭವವಾಗಬೇಕಾನಂದ ಘನ ಗುರುವಿನ ಕೃಪೆಯಿಂದ ಮನ ಬಲಿವುದು ಚೆಂದ 3 ಮನೋನ್ಮನವಾಗಿ ತಾ ಘನ ಬೆರೆದು ಸ್ವಹಿತ ಙÁ್ಞನಕಿದೇ ತಾ ಸನ್ಮತ ಮುನಿಜನರ ಸುಪಥ 4 ಮನಬಲಿದು ನೀ ನೋಡೋ ಘನಸುಖ ಮಹಿಪತಿಗೊಡೊ ಅನುಭವಾಮೃತ ಸೂರ್ಯಾಡೊ ಅನುಮಾನೀಡ್ಯಾಡೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವು ನೆಮ್ಮದಿಯಾಗಲಿ ಪ ಅನುದಿನವು ನಿನ್ನ ಮನಸಾರೆ ಪೂಜಿಸುವಂತೆ ಅ.ಪ ಬೆಟ್ಟ ಬಿಸಿಲಿನಲಿ ಬೇಯುವುದ ನೋಡುತ ಮನವು ಕೆಟ್ಟು ಹೋಗದೆ ಸತತ ಶುದ್ಧವಿರಲಿ ಹೊಟ್ಟೆ ಪಾಡಿಗೆ ಕೊರತೆ ಪಡುತಿರುವ ಜನರಲ್ಲಿ ಸಿಟ್ಟುಬಾರದೆ ಮನಕೆ ತಾಳ್ಮೆಯಿರಲಿ 1 ನೀರು ಕಡೆದರೆ ಬೆಣ್ಣೆ ಬಾರದೆನ್ನುವ ಕ್ಲೇಶ ದೂರವಾಗಲಿ ತಿರುಗಿ ಬಾರದಿರಲಿ ವೀರ ಹನುಮನು ತನ್ನ ಸಾರಸೇವೆಗೆ ಫಲವ ಕೋರಿದನೆ ಧನಕನಕ ವೈಭವಗಳ 2 ಗೋಪುರವ ತಾಂಗಿರುವೆನೆಂಬ ಗೊಂಬೆಯ ಹೆಮ್ಮೆ ಈ ಪರಿಯೆ ಮನದ ಕ್ಲೇಶವ ತಂದಿತು ಶ್ರೀ ಪತಿಯು ಮಾಡಿ ಮಾಡಿಸುವೆನೆಂಬುವಜ್ಞಾನ ಲೋಪಪೊಂದದೆ ಮನ ಪ್ರಸನ್ನವಾಗಲಿ ದೇವ 3
--------------
ವಿದ್ಯಾಪ್ರಸನ್ನತೀರ್ಥರು
ಮನವೆ ನಿನಗೇಕಿನ್ನು ಲಜ್ಜೆದೋರದು ಬಳಿಕಕನಲಿ ನಿಂದಿಸುವೆ ಜನರನಿತರಾ ಪಘನಘೋರಮಲಜನಿತ ತನುವಿನೊಳುನೀನಿರುತಲನವರತ ತೊಳಲಬಹುದೇ ಬರಿದೆ ಅ.ಪಓದಿ ಗ್ರಂಥಗಳನು ಪಠಿಸಿಯದರರ್ಥವನುಬೋಧಿಸುವೆ ಪರರಿಗೆಲ್ಲಾ ಸೊಲ್ಲಾಸಾದರದಿ ತನ್ನಿಷ್ಠೆಯಲಿ ನಡೆಯುತನುಭವವನೀದಿನಕು ತಂದುದಿಲ್ಲವಲ್ಲಾಬೋಧೆವಡದಿಹ ಯೋಗಿಗಳ ಜರೆವ ಬಗೆಯಲ್ಲಿನೀ ದೊಡ್ಡ ಜಾಣನಲ್ಲಾ ಬಲ್ಲಸಾಧಿಸಿದ ವಿದ್ಯವನು ವಾದದಲಿ ನೀಗಾಡಿಬೀದಿಯಲಿ ನಿಂತೆಯಲ್ಲಾ ನಲ್ಲಾ 1ಧನಧಾನ್ಯ ದಾಸ ಕತಿಯೊಳಗೊಂದಿಕೊಂದಿರುವಜನರಲವಿವೇಕ ವಿಡಿದೂ ಜರಿದೂತನು ಪಾಶ ಬದ್ದದಲಿ ನರಕ ಭಾಜನರಾಗಿದಿನವ ಕಳೆಯುತ್ತಲಿಹರೂ ುವರೂಎನುತಲನುತಾಪದಲಿ ನೀ ಮತ್ತೆಯನವರತಧನಿಕರಿದ್ದೆಡೆಗೆ ಬಂದೂ ನಿಂದೂಧನವ ಕೊಡಿ ಸತ್ಪಾತ್ರನಾನೆಂದು ವೊಂದುವರೆಹಣವ ಕೈಯೊಡ್ಡಿ ಕೊಂಡೂ ಉಂಡೂ2ತೋರುವ ಜಗತ್ತಿದುವೆ ಪರಮಾತ್ಮನಿಂದಲೆತೋರುವದು ಭ್ರಮೆಗೆ ಹಲವೂ ಕೆಲವೂತೋರದಡಗದ ನಿತ್ಯ ವಸ್ತುವೆ ತಾನೆÀಂದುಧೀರತನದಿಂದಲಿರವೂ ಅರಿವೂಈ ರೀತಿಯಲಿ ತಿಳಿದು ಮುಕ್ತನಾಗದೆ ಬರಿಯಕ್ರೂರ ಬುದ್ದಿಯಲಿ ುರವೂ ಮರವೂದಾರಿಗಾಣದೆ ನಿನ್ನ ಅನುಭವವ ನೀ ಮತ್ತೆಹೊರುವುದೆ ನಿನಗೆ ಮತವೂ ದೃಢವೂ 3ಇಂದ್ರಿಯಂಗಳ ಸುಖವನೆ ಮೆಚ್ಚಿ ನೀನವರಹಿಂದುಗೊಂಡೆರಗಿ ಬಿಡದೆ ಪಡೆದೆಸಂದ ಭೋಗದ ಸವಿಯನೆನನೆನದು ಮತ್ತದನುಮುಂದು ಬೇಕೆಂದು ಹೊರೆದೆ ಬೆರೆದೆಕಂದಿ ಕಾಮಕ್ರೋಧದಗ್ನಿಯಲಿ ನೀ ಬೆಂದುಹೊಂದಿ ನೀಂ ಜನ್ಮಪಿಡಿದೆ ಮರೆದೆಹಿಂದುಗಳೆವಾತ್ಮನನು ಹಿತವೆಂದು ಮಿಥ್ಯವನುನೊಂ[ದು] ನೋಡದೆ ಬರಿದೆ 4ಚದುರ ವಿದ್ಯವ ಕಲಿತೆನೆಂಬುದೊಂದೇ ಘನತೆಸುದತಿ ಸಂಪತ್ತಿನಲ್ಲೆ ರಮತೆಒದಗಿ ಬಹಳೋದ್ಯೋಗಗಳ ಮಾಡಿ ಬಹುದಿವಸಬದುಕಿದವ ನೆಂಬುದರಲೆ ುರತೆಇದ ನಾನು ಸಂಪಾದಿಸಿದೆನೆನ್ನ ಶೌರ್ಯತೆಗೆಇದಿರಿಲ್ಲವೆಂದು ಇದಕೆ ಬೆರತೆಮುದದಿ ಗುರು ವಾಸುದೇವಾರ್ಯವೆಂಕಟರಮಣನೊಡಮೂಡದಿತರ ನಡತೆ ಜಡಕೆ 5
--------------
ತಿಮ್ಮಪ್ಪದಾಸರು
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಮರೆವರೇನೊ ಹರಿಯಾ ಪ ಬಹು ಜನುಮಗಳಲ್ಲಿ ಬಟ್ಟ ಬವಣಿಗಳರಿಯಾ ಅ.ಪ. ವಿಷಯ ಚಿಂತನೆ ಮಾಡಸಲ್ಲ ಮೇಷ ವೃಷನನಾದನು ಹಿಂದೆ ಪೌಲೋಮಿ ನಲ್ಲ ಝಷ ಕೇತುವಿನ ಮ್ಯಾಳ ಹೊಲ್ಲ ನಿರಾ ಶಿಷನಾಗು ಯಮರಾಯನೆಂದೆಂದೂ ಕೊಲ್ಲ 1 ಧನವೆ ಜೀವನವೆಂಬಿ ನಿನಗೆ ಸುಯೋ ಧನ ನೋಡು ಧನದಿಂದ ಏನಾದ ಕೊನೆಗೆ ಅನಿರುದ್ಧ ದೇವನ ಮನೆಗೆ ಪೋಪ ಘನ ವಿಜ್ಞಾನವನೆ ಸಂಪಾದಿಸು ಕೊನೆಗೆ 2 ಹರಿದಾಸನಾಗಿ ಬಾಳೋ ಗುರು ಹಿರಿಯರ ಪಾದಕಮಲಕೆ ನೀ ಬೀಳೋ ನರರ ನಿಂದಾಸ್ತುತಿ ತಾಳೋ ದೇಹ ಸ್ಥಿರವಲ್ಲ ಸಂಸಾರ ಬಹು ಹೇಯ ಕೇಳೋ 3 ಹಲವು ತೀರ್ಥಗಳಲ್ಲಿ ಸ್ನಾನ ಮಾಡೆ ಮಲ ಪೋಯಿತಲ್ಲದೆ ನಿರ್ಮಲ ಜ್ಞಾನ ಫಲಿಸದೆಂದಿಗು ಹೀನ ಬುದ್ಧಿ ಕಳೆದು ಸೇವಿಸು ಸಾಧುಗಳನನುದಿನ 4 ಜಿತವಾಗಿ ಪೇಳುವೆ ಸೊಲ್ಲಾ ಹರಿ ಕಥೆಯಲ್ಲಿ ನಿರತನಾಗಿರು ಲೋಹ ಕಲ್ಲಾ ಪ್ರತಿಮೆ ಪೂಜಿಸಿದರೇ ನಿಲ್ಲ ಪರೀ ಕ್ಷಿತನೆಂಬ ರಾಯ ಈ ಮಹಿಮೆಯ ಬಲ್ಲಾ 5 ಜ್ಞಾನೇಚ್ಛಾ ಕ್ರಿಯಾ ಶಕ್ತಿ ತ್ರಯವಾ ತಿಳಿ ದಾನಂದ ಪಡು ಬಯಸದಿರುಭಯವಾ ಸಾನುರಾಗದಿ ಬೇಡು ದಯವಾ ನೀ ಮ ದ್ದಾನೆಯಂದದಿ ಚರಿಸು ಬಿಟ್ಟು ಭಯವಾ 6 ಭಾವ ಕ್ರಿಯಾ ದ್ರವ್ಯಾದ್ವೈತ ತ್ರಯ ಆವಾಗ ಚಿಂತಿಸು ಭೂಮ್ಯಾದಿ ಭೂತಾ ಜೀವಿಗಳೊಳು ಜಗನ್ನಾಥ ವಿಠಲ ಗಾವಾಸ ಯೋಗ್ಯವೆಂದರಿಯೋ ಸಂತತಾ 7
--------------
ಜಗನ್ನಾಥದಾಸರು
ಮನವೇ ಮೈ ಮರೆಯಲಿ ಬ್ಯಾಡಾ | ನಿನ್ನೊಳು ಘನದೆಚ್ಚರ ಬಲಿ ದೃಢಾ ಪ ಸ್ವಾಪದ ಕನ್ನಡಿ ಮನಿಯಾ ಹೊಕ್ಕು ಬಳಲಿದ ಪರಿಯಾ | ಸಿಂಹನು ಕೂಪದಿ ನೆರಳಿಗೆ ಬೀಳಲಿ ಕಾಜಿನ | ಸೋಪಾನವ ನೋಡಿ ಗಜವಿನ್ನಾಪದ ಬಿಟ್ಟದ ಕೇಳಲೀ 1 ಶುಕನಲಿಕದಲಿ ಬಂದು ಬಿದ್ದಿತು ತಾನಿಂದು | ವಾನ್ನರ ಪರಿ | ಪ್ರಕಟದಿ ವಿಷಯಕ ಮೋಹಿಸಿ 2 ತಂದೆ ಮಹಿಪತಿ ಚರಣ ನಮಿಸಿ | ಪಡಿಯಲೋ ಕರುಣಾ | ಇಂದಿರೆಯರಸನಾ ನಾಮವ ಪಾಡುತ | ಅರುಹಿನ | ಮಂದಿರವನು ಸಾರೀ ಜನುಮಕ | ಬಂದ ಸಾರ್ಥಕ ಮಾಡುತಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನಸಿಜ ಪಿತ ವಿಠಲ | ನೀನಿವನ ಸಲಹೋ ಪ ಅನುಮಾನ ವಿನ್ನಿಲ್ಲ | ಅಣುಗ ನಿನ್ನವನೋ ಅ.ಪ. ಸಿಂಧು ಮೂರುತಿಯೇ 1 ಸ್ವಪ್ನ ಸೂಚನೆಯಂತೆ | ಒಪ್ಪಿದಂಕಿತವಿತ್ತುಅರ್ಪಿಸಿಹೆ ನಿನ್ನಡಿಗೆ | ಸರ್ಪ ಶಯನಾ |ಒಪ್ಪಿಡಿಯ ಅವಲಿಗ್ಯೆ | ಅಪ್ಪಾರವಿತ್ತಿರುವೆಇಪ್ಪರಿಯ ಮಹಿಮೆಗಳು | ಇನ್ನಾರಿಗುಂಟೋ 2 ವಿಷ ಅಮೃತವಾದಂತೆ | ದುಷ್ಕರ್ಮ ಫಲರಹಿತಎಸೆಗುತ್ತ ಸಂತಾಪ | ನಶಿಸುವಂತೆಸಗೋಅಸಮ ಮಹಿಮನೆ ಭಕ್ತಿ | ಪಾಶಕ್ಕಾವಶನಾಗಿಮಿಸುಣಿ ಮೇಲ್ಮಣಿಯಂತೆ | ಭಾಸಿಸೋ ಹರಿಯೇ 3 ಮೋದ ಮೋದ ದ್ವಂದ್ವ | ಬುದ್ಧಿ ಸಮವೆನಿಸೋ 4 ಆವದೇಶವು ಇರಲಿ | ಆವಕಾಲವು ಇರಲಿನೀವೊದಗೊ ಸ್ಮøತಿ ಪಥಕೆ | ಕೋವಿದರ ಒಡೆಯಾಕಾವ ಕೊಲ್ಲುವ ಗುರೂ | ಗೋವಿಂದ ವಿಠ್ಠಲನೆಭಾವದಲಿ ಮೈದೋರೇ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನ್ನಿಸಿ ಸಲಹಯ್ಯ ಎನ್ನ ತಪ್ಪು ಒಪ್ಪಿಕೊ ಮಹರಾಯ ಪ ಮನ್ನಿಸಿ ಸಲಹಯ್ಯ ಪನ್ನಂಗಶಯನನೆ ನಿನ್ನ ಧ್ಯಾನಾಮೃತವನ್ನು ಕರುಣದಿತ್ತು ಅ.ಪ ನಾನಾಜನುಮ ಸುತ್ತಿ ಮತ್ತೆ ಹೀನ ಜನುಮವೆತ್ತಿ ಜ್ಞಾನವಿನಿತಿಲ್ಲದೆ ನಾನಾಪಾಪಗೈದೆ ದೀನಜನರ ಬಂಧು ನೀನೆ ಕ್ಷಮಿಸು ತಂದೆ 1 ಮರವೆ ದೇಹವೊದ್ದು ಸಂಸಾರ ಮರವೆಯೊಳಗೆ ಬಿದ್ದು ಶರಣ ಸತ್ಪುರುಷರ ನೆರವಿನಿತರಿಯದೆ ಮರುಳನಾದೆ ಹರಿ ಮುರಹರ ಕ್ಷಮಿಸಯ್ಯ 2 ಬರಬಾರದು ಬಂದೆ ಬಲು ವಿಧ ದುರಿತದೊಳು ಬೆಂದೆ ಕರುಣದಿ ಕ್ಷಮೆಮಾಡಿ ಪೊರೆಯೊ ಶ್ರೀರಾಮನೆ 3
--------------
ರಾಮದಾಸರು
ಮನ್ನಿಸೆನ್ನ ವೆಂಕಟರನ್ನ ಅನ್ಯಥಾ ಗತಿಗಾಣೆ ನಾ ಪ ಹಲವು ಜನುಮದಿ ಬಂದೆ ಬಲು ಪರಿಯಲಿ ನೊಂದೆ ತೊಳಲಿ ಬಳಲಿ ನಿಂದೆ ಸಲಹೊ ತಂದೆ 1 ವಾಸವ ವಂದಿತ ಕೇಶವ ಅಚ್ಯುತ ದಾಸರ ಮನ ಹಿತ ಬಾ ಶಾಶ್ವತ 2 ಲಕುಮಿಕಾಂತನೆ ಎನ್ನ ಉಕುತಿ ಲಾಲಿಸಿ ಘನ್ನ ಭಕುತಿ ಪಾಲಿಸೊ ಮುನ್ನ ಮುಕುತೀಶನೆ3
--------------
ಲಕ್ಷ್ಮೀನಾರಯಣರಾಯರು