ಒಟ್ಟು 5968 ಕಡೆಗಳಲ್ಲಿ , 126 ದಾಸರು , 3550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಂಸಾರಿ ಪ. ಶೌರಿ ಸುರ ನರವಂದಿತ ಚರಣವ ಕೋರಿ ಪರಿಪರಿ ಬೇಡುವೆ ನಿನ್ನೆಡೆ ಸಾರಿ ಅರಿಯದ ಕಂದನ ಪೊರೆ ದಯೆತೋರಿ ಅರಿಯೆನದಾರನು ಮರೆಯೆನು ನಿನ್ನನು ಕರುಣಾಕರನೆಂಬೀ ಬಿರುದುಳಿಸಿನ್ನು 1 ಮನ್ಮಥಪಿತ ಬಾ ಸುಂದರಕಾಯ ಮನ್ನಿಸು ಎನ್ನಪರಾಧವ ಜೀಯ ಚಿನ್ಮಯರೂಪನೆ ಚೆನ್ನಿಗರಾಯ ಅನ್ಯರ ನೆರೆಯೆನು ನೀ ಕೇಳಯ್ಯ ಎನ್ನೊಳಗೀಪರಿ ಛಲವೇಕಯ್ಯ ಇನ್ನಾದರು ಕೈಪಿಡಿ ದಮ್ಮಯ್ಯ 2 ಮಂದರಗಿರಿಧರ ಗೋವಿಂದನೆ ಬಾ ನಂದಕುಮಾರನೆ ತಡೆಯದೆ ನೀ ಬಾ ನಂದಿನಿಗೊಲಿದಾನಂದವ ಕೊಡು ಬಾ ವೃಂದಾವನ ವಿಹಾರನೇ ಬಾ ಬಾ ಇಂದಿರೆಯರಸನೆ ಶೇಷಗಿರೀಶನೆ ಇಂದೆನಗೊಲಿದೈ ತಂದೆಯೆ ಭಳಿರೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಕು ದೇಹದ ಮೇಲೆ ಪ ಲೋಕೇಶ ನಿಮ್ಮಯ ಶ್ರೀಪಾದಕಮಲಕ್ಕೆ ಜೋಕೆ ಮಾಡೆನ್ನೆಂದು ಮರೆಹೊಕ್ಕೆ ಸ್ವಾಮಿ ಅ.ಪ ಹೀನ ಬವಣೆಯ ಕಳೆದು ಜ್ಞಾನಪಾಲಿಸೆಂದು ದೈನ್ಯಬಡುವೆನು ನಿನಗೆ ನಾನಾ ಪರಿಯಲಿಂದ ಏನು ಕಾರಣ ನಿನಗೆ ದಯ ಬಾರದೆನ್ನೊಳು ದೀನಜನರ ಬಂಧು ಧ್ಯಾನಿಸುವ ಪ್ರಾಣ 1 ರಿಣದಿ ಮುಕ್ತನ್ನ ಮಾಡೆಂದ್ವಿಧವಿಧ ಬೇಡುವೆ ದಿನ ದಿನ ಮತ್ತಿಷ್ಟು ಘನವಾಗುತಿಹ್ಯದು ಮನಸಿಜಪಿತ ನಿನಗಿನಿತು ಭಾರನೆ ನಾನು ಕನಿಕರಬಡದಿಹಿ ಅನುಗನೋಳ್ವನಜಾಕ್ಷ 2 ಇಂತು ನಿರ್ದಯನಾಗಿ ಚಿಂತೆಯೆಂದೆಂಬುವ ಚಿಂತೆಚಿತೆಯೊಳು ನೂಕಿ ಎನ್ನ ಭ್ರಾಂತಿಪಡಿಸಬೇಡೋ ಅಂತ:ಕರಣದ ದೇವ ಅಂತ:ಕರುಣಿಸಿ ಎನ್ನ ಅಂತರಂಗದೊಳಿಹ್ಯ ಚಿಂತೆಯಳಿ ಶ್ರೀರಾಮ 3
--------------
ರಾಮದಾಸರು
ಕಾಕು ನಿನ್ನಮನವ ನಿಲ್ಲಿಸಿ ಅನ್ಯವನೆಲ್ಲವ ನೂಕುಅ.ಪಗುರುವಿನ ಚರಣಸೀಮೆಯಲಿ ನಿತ್ಯಪರಿಪೂರ್ಣರೂಪವಿದೆಂಬ ನೇಮದಲಿಅರಿಷಡುವರ್ಗದಂತ್ಯದಲಿ ತೋರುವರಿವೆ ತಾನೆಂಬ ಘನವಿವೇಕದಲಿ 1ಕರಣ ಜಯದ ಬಳಿಸಂದು ಸಂಸರಣ ಚಿಂತೆಯ ಬಿಟ್ಟು ಮುದದಿಂದ ನಿಂದುಅರಿಯ ಪಡುವದಲ್ಲವೆಂದು ತನ್ನಿರವೆಯಾನಂದದ ಘನಪದವೆಂದು 2ತಾಪಗಳೆಲ್ಲವ ಬಿಟ್ಟೂ ಸಾಧುಗೋಪಾಲಾರ್ಯರ ಹೃದಯದೊಳಿಟ್ಟುವ್ಯಾಪಕದಲಿ ವೃತ್ತಿ ನೆಟ್ಟೂ ುಂದೀಪರಿಯ ನಿರ್ವಿಕಲ್ಪದಲಳವಟ್ಟೂ 3
--------------
ಗೋಪಾಲಾರ್ಯರು
ಕಾಕು ನೀಮೀನ ಮೇಷಂಗಳನೆಣಿಸದೆ ನೂಕು 1ಸಾಕು ಮಂದನಾಗಬೇಡ ನಿನಗೆಬೇಕಾದ ಸುಖವಿದೆ ನಿನ್ನೊಳು ನೋಡಶೋಕ ಮೋಹಗಳನೀಡಾಡ ನಿನ್ನನೀ ಕಂಡು ನಿಜ ಸುಧೆಯೊಳಗೋಲಾಡ2ನಿನ್ನೊಳು ನಿಜ ಸುಖವುಂಟು ನೀನನ್ಯವನಳಿದು ನೋಡಲು ಕೈಗಂಟು ಭಿನ್ನ ಬುದ್ಧಿಯನೆಲ್ಲದಾಂಟುಸನ್ನುತಾನಂದಾಮೃತವನೊಲಿದೀಂಟು 3ಗುರುವಿನ ಕೃಪೆುಲ್ಲದಿಲ್ಲಾ ಮುಕ್ತಿಕರೆದರೆ ಬರುವರೆ ಕಾಮಿನಿಯಲ್ಲಪರಮ ಧೈರ್ಯವ ಮಾಡುವನಲ್ಲ ನಿನ್ನಮರೆಯದೆ ನೋಡು ನಾನೆಂದಿದನೆಲ್ಲಾ 4ಈ ಪಾಳು ಕರ್ಮದಲೇನು ಈಗನಾ ಪೇಳಿದೆ ಕಂಡುದ ಮಾಡು ಮಾಣುಕೋಪವ ಬಿಡು ಸುಖಿ ನೀನು ಸದ್ಯಗೋಪಾಲಾರ್ಯರ ಕಂಡೆ ಇನ್ನೇನೂ 5
--------------
ಗೋಪಾಲಾರ್ಯರು
ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು
ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಡುತಲಿಹ್ಯದು ಬೆಡಗಿನ ಕೋಡಗ ಬಡವರಿಗಳವಲ್ಲ ಪೊಡವಿಯಲಿ ಧ್ರುವ ಮಾಯದ ಮುಖವದು ಮೋಹದ ನಾಸಿಕ ಮಾಯಮಕರ ಕಿವಿಕಣ್ಣುಗಳು ಹ್ಯಾವ ಹೆಮ್ಮೆಯ ಹುಬ್ಬು ಕಪಿಕಣ್ಣಯೆವೆಗಳು ಬಾಯಿ ನಾಲಿಗೆ ಹಲ್ಲು ಬಯಕಿಗಳು 1 ಗಾತ್ರ ಸರ್ವಾಂಗವು ದುರುಳ ದುರ್ಬುದ್ಧಿಯ ಬೆರಳುಗಳು ಎರಡು ತುಟಿಗಳೆಂಬ ನಿಂದೆ ದೂಷಣಗಳು ಕೊರಳು ಕುತ್ತಿಗೆ ದುಷ್ಕರ್ಮಗಳು 2 ಹಣಿಯು ದಾಡಿಯು ಗಲ್ಲ ಪ್ರಪಂಚ ಶೋಭಿತ ಕಣ್ಣಭಾವಗಳಿವು ಚಂಚಲವು ಬಣ್ಣಬಣ್ಣದಿ ಕುಣಿದಾಡುವ ಕಪಿ ಗುಣ ಏನೆಂದ್ಹೇಳಲಿ ಕಪಿ ವಿವರಣ£ 3 ಉದರಬೆನ್ನುಗಳಿವು ಸ್ವಾರ್ಥಬುದ್ಧಿಗಳು ಮದಮತ್ಸರಗಳೆಂಬ ಕೈಗಳು ಪಾದ ಕಾಲುಗಳಿವು ಕಾಮಕ್ರೋಧಗಳು ಮೇದಿನಿಯೊಳು ಕುಣಿದಾಡುವದು 4 ಆಶಿಯೇ ಪಂಜವು ವಾಸನೆ ಬಾಲವು ಮೋಸಮೂಕರ ಗುಣಕೇಶಗಳು ಏಸು ಮಂದಿಯ ಕಪಿ ಘಾಸಿಯ ಮಾಡಿತು ಮೋಸಗೈಸಿತು ಭವಪಾಶದಲಿ 5 ಅಶನ ವ್ಯವಸನ ತೃಷಿ ಕಪಿಗಿದು ಭೂಷಣ ಮೀಸಲಾಗಿಡಿಸಿತು ಸುವಾಸದ ಹಸಗೆಡಿಸುದು ಯತಿ ಮುನಿಗಳ ತಪಸವು ಮುಸುಕಿತು ಮೋಸವು ಕಪಿಯಿಂದಲಿ 6 ಕಂಡದ್ದು ಬೇಡುತಾ ಅಂಡಲಿಯುತಿಹುದು ಮಂಡಲದೊಳು ತಾ ಕಾಡುತಲಿ ಪಿಂಡ ಬ್ರಹ್ಮಾಂಡದಿ ಲಂಭಿಸುತಿಹದು ಹಿಡದು ಬಿಡದು ಮುಷ್ಟಿಬಿರುದುಗಳು 7 ಪಂಡತನದಿ ಬಲು ಪುಂಡನಾಗಿಹದು ಹಂಡೀಗತನದಲಿ ಬಾಳುವದು ಭಂಡಿನಾ ಅಟಿಗೆ ಗಂಡಾಗಿಹುದು ಕಂಡಕಡಿಗೆ ಹರಿಡಾಡುತಲಿ 8 ಮೂಢಮಹಿಪತಿಯ ಕಾಡುವ ಕಪಿಗಿನ್ನು ಜಡಸೀದ ಗುರುಜ್ಞಾನ ಸಂಕೋಲಿಯು ಕಾಡುವ ಕಪಿಕೈಯ ಬಿಡಿಸಿದ ಗುರು ಎನ್ನ ಕಡೆಯ ಮಾಡಿದ ಬ್ರಾಹ್ಮಣ ಜನ್ಮಲಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಪ ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ 1 ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ 2 ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ3
--------------
ಕನಕದಾಸ
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಣಿ ನಿನ್ನಂಥವಳ ಪ. ಮುದ್ದು ರುಕ್ಮಿಣಿಯು ದೂತೆಗೆ ತಿದ್ದಿ ಮಾತುಗಳ ಹೇಳಿ ಬುದ್ಧಿವಂತಳೆ ರಾಯಗ ಸುದ್ದಿ ಹೇಳಮ್ಮ ಹೋಗಿ1 ಮಾನ ಮಾಡಿ ದೂತೆಗೆ ಆನೆ ಅಂಬಾರಿ ಕೊಟ್ಟುನಾನಾ ಭೂಷಣಗಳಿಟ್ಟು ತಾನು ವಸ್ತ್ರಗಳನೆ ಕೊಟ್ಟು2 ಹರದಿ ರುಕ್ಮಿಣಿಯು ದೂತೆಗೆ ತುರಗ ಬಿರುದುಗಳೆ ಕೊಟ್ಟುಎರಗಿ ಹೇಳಮ್ಮ ಅಷ್ಟು ಹಿರಿತನಗಳಟ್ಟು 3 ರಂಗ ಬಂದಿಳಿದಾನೆಂಬೊ ಮಂಗಳವಾರ್ತೆಯಸಂಗೀತಲೋಲರಾಯನ ತಂಗಿಗ್ಹೇಳಮ್ಮ ಹೋಗಿ 4 ಭರದಿ ದ್ರೌಪತಿಗೆ ಮುಯ್ಯಾ ತಿರುಗಿಸಿ ತಂದಾರೆಂದು ಎರಗಿ ಹೇಳಮ್ಮ ಮೈಯ್ಯ ಮರೆತಿರಬ್ಯಾಡಿರೆಂದು5 ಮಂದಗಮನೆಯರು ಮುಯ್ಯ ತಂದಾರೆ ತಾರಾರೆಂದು ಸಂದೇಹ ಬಿಟ್ಟು ಊಟ ಚಂದಾಗಿ ಮಾಡಿರೆಂದು6 ಧೀರರಾಯಗೆ ಮುಯ್ಯ ನಾರಿಯರು ತಂದಾರೆಂದು ಬಾರಿ ಬಾರಿಗೆ ನಮಿಸಿ ಸಾರಿ ಹೇಳಮ್ಮ ಹೋಗಿ 7 ಧಿಟ್ಟೆಯರು ಮುಯ್ಯ ಉತ್ಕøಷ್ಟದಿ ತಂದಾರೆಂದು ಕೃಷ್ಣರಾಯನ ಬಂದದ್ದಷ್ಟು ಹೇಳಮ್ಮ ಹೋಗಿ8 ಇಂದು ರಾಮೇಶನ ಮಡದಿಯರು ಬಂದರು ದ್ವಾರದಿ ಒಂದೊಂದು ಮಾತುರಾಯಗೆ ಚಂದಾಗಿ ಹೇಳಮ್ಮ ಹೋಗಿ9
--------------
ಗಲಗಲಿಅವ್ವನವರು
ಕಾಣಿಕೆಯನು ತಂದೆ ನಿನ್ನಡಿಗೆ ಪ ಹಾರಿಸಿಕೊಂಬುವ ಶೂರನೆಂದು ತಂದೆ ಮುರಾರಿ ವಿಚಾರಿಸಿ 1 ಇಲ್ಲದ ವಸ್ತುವಿಗಲ್ಲವೆ ಲೋಕದೊಳೆಲ್ಲರ ಮಾನಸರುಲ್ಲಾಸವೂ ನಿಲ್ಲದೆ ದುರಿತಗಳೆಲ್ಲ ಸೇರಿಸಿಕೊಂಡು 2 ಬರಿಕೈಯೊಳೆಂದಿಗು ಬರಲಾಗದೆಂದು ತಂದೆನೈ ವರದ ವಿಠಲ ಹರಿ3
--------------
ಸರಗೂರು ವೆಂಕಟವರದಾರ್ಯರು
ಕಾಣೆವಾವಿದನು ಕಾಣೆವಾವಿದನಾವ ಶಾಸ್ತ್ರದಲಿ ವಿದುಗಳ ಪ್ರಮಾಣ ವಚನದಲಿ ಮೂರನೆಯ ಪಥದಾಪಜಾಣಿಲಾತ್ಮನ ಸಮಾಧಿಯಲನುಭವಿಸಿ ಸುಖವಕಾಣದೆ ಬರಿದೆ ಮುಕುತರಾವೆಂಬ ಪರಿಯಾ ಅ.ಪತಾನೆ ಚೇತನವಂತೆ ತನಗೆ ಕರ್ಮಗಳಂತೆತಾನೆ ಸುಖಮಯನಂತೆ ತಾಪವನಂತೆತಾನೆ ಬೋಮವದಂತೆ ಹಾನಿವೃದ್ಧಿಗಳಂತೆತಾನೆ ನಿರ್ಲೇಪಸ್ತುತಿನಿಂದೆ ತನಗಂತೊ 1ಬೋಧೆಯು ತಾನಂತೆ ಸಾಧನವು ಬೇಕಂತೆಭೇದವಿಲ್ಲವದಂತೆ ಭೀತಿ ತನಗಂತೆನಾದ ಬಿಂದುಗಳನರಿದಿಪ್ಪಗತಿಯಂತೆಪಾದಾಭಿಮಾನ ಚಿಂತೆಯು ಪೋಗದಂತೆ 2ಕಾಯ ಕರುಣಾಭಿಮಾನಗಳಿಲ್ಲ ತನಗಂತೆಮಾಯೆ ಬಾಧಿಪುದಂತೆ ಮನಸಿನೊಳಗೆಈಯಹಂಕಾರವಿಲ್ಲದ ಬೊಮ್ಮಪದವಂತೆಹೇಯವಿದುಪಾದೇಯವೆನಿಪ ಭ್ರಮೆಯಂತೆ 3ಈಶ ತಾನಂತೆ ತನ್ನಾಶೆಗಳು ಬಿಡವಂತೆಕೋಶ ಸಾಕ್ಷಿಕನಂತೆ ಕೋಪ ತನಗಂತೆಪಾಶವಿಲ್ಲವದಂತೆ ಪಾಡುಪಂಥಗಳಂತೆಈ ಸಕಲ ತಾನಂತೆ ಇನ್ನು ವಿಧಿಯಂತೆ 4ಚೇತನವೆ ತಾನಂತೆ ಚಿತ್ತನಿಲ್ಲದುದಂತೆಪಾತಕಗಳಿಲ್ಲವಂತೆ ಪರಪೀಡೆಯಂತೆಜಾತಿಸೂತಕವೆಂಬ ಜಂಜಡಗಳಿಲ್ಲವಂತೆಮಾತಿನ ರಿಪು ಮತ್ಸರಗಳು ಬಿಡವಂತೆ 5ವಿಶ್ವಾತ್ಮತಾನೆಂಬ ವಿಶ್ವಾಸವುಂಟಂತೆವಿಶ್ವತ್ರೈಜಸರ ನಿಜವರಿಯನಂತೆನಶ್ವರದ ಭೋಗಂಗಳೆಂಬ ನಂಬಿಗೆಯಂತೆವಿಶ್ವಾದಿಗಳ ರೀತಿಯಲ್ಲಿ ಪಗೆಯಂತೆ 6ಅಂಡಪಿಂಡಗಳೈಕ್ಯವೆಂಬ ಬುದ್ಧಿಗಳಂತೆಚಂಡಾಲನಿವನೀತ ಮೇಲೆಂಬುದಂತೆಪಂಡಿತನು ಪ್ರವುಢ ತಾನೆಂಬ ಭಾಷೆಗಳಂತೆಕುಂಡಲಿಯ ಹೆಳವ ಕೇಳ್ದಡೆ ಕುದಿವನಂತೆ7ಚಿನ್ಮಯಾತ್ಮಕನು ತಾನೆಂಬ ಚಿಂತೆಗಳಂತೆತನ್ನವರು ತಾನೆಂಬ ಭ್ರಮೆಪೊಗದಂತೆಸನ್ಮುದ್ರೆಯಂತೆ ಸತ್ಯಾಸತ್ಯವೆರಡಂತೆತನ್ಮಯತೆಯಂತೆ ಲಕ್ಷಣೆಯರಿಯನಂತೆ 8ಗುರುಭಕುತಿಯಂತೆ ವರಕರುಣವಿಲ್ಲವದಂತೆಗುರುಶರಣನಂತವರನುಗೇಳನಂತೆಪರಮಪದ ತಾನಂತೆ ಪಿರಿದು ಸಂಶಯವಂತೆವರ ಮುಕ್ತಿಯಂತೆ ವಾಸನೆಯು ಬಿಡದಂತೆ 9ಈ ಪರಿಯ ಸಂಭಾವನೆಗಳ ಪರಿಹರಿಸಿ ಶ್ರೀಗೋಪಾಲಾರ್ಯ ಜನರಿಗೆ ದಯದಲಿತಾಪಂಗಳನು ಸವರಿ ದಾಟಿಸಯ್ಯಾ ಚಿತ್ಪ್ರತಾಪದಿಂ ನಿಜಪಾದ ಬೋಧೆಯನು ಕೊಟ್ಟು10
--------------
ಗೋಪಾಲಾರ್ಯರು
ಕಾಂತೆ ದ್ರೌಪತಾದೇವಿಗೆಂತು ಮರುಳಾದಿರಿಭ್ರಾಂತಿ ಹಿಡಿತೇನೊ ಏ ಹೀನ ಎಂಥ ನ್ಯಾಯವಯ್ಯಈ ಮಾತಿಗಿನ್ನೆಂತು ನಕುಲರಾಯ ಪ. ಹೆಣ್ಣು ಮಕ್ಕಳು ಹೊಳೆವೋದುತಪ್ತ ಸುಣ್ಣದಂತೆ ತಿಳಿವೋದುಸಣ್ಣವರೆನೀವು ಅಣ್ಣನ ಮಡದಿಗೆ ಕಣ್ಣು ಹಾಕುವರೇನೊ ಏ ಹೀನಾ 1 ಜಾತಿ ಮಾಣಿಕ ಮಾಲೆ ಕೊಡಲು ತಂದು ಕೋತಿ ರಾಜನ ಕೈಲಿಚಾತುರ್ಯದ್ವಸ್ತವು ನೀತಿಲೆ ಹಿಡಕೊಂಡುಆತುರ ಮಾಡಿದಂತೆ ನಿಮ್ಮಂತೆ2 ನಕುಲರಾಯನೆ ಕೇಳೊಸುಂದರಿಯಲ್ಲೆ ಕಕುಲಾತÉ ಭಾಳೊಸುಖಚಂದ್ರವದನಳೆ ಸಕಲರು ಬೆರೆಯಲು ನಕಲಿ ಆಯಿತು ಕಾಣೊನಿನ್ನಾಣೆ 3 ಅದ್ಬುತ ಮಹಿಮಳೊ ಧರ್ಮರಾಯಗೆಮುದದಿಕೊಟ್ಟರು ಕೇಳೊಅದ ತಾಳಲಾರದೆ ಇದು ನಿಮಗೈವರುಸುದತಿಯ ಬೆರೆಯುವರೇನೊ ಏ ಹೀನ4 ಪತಿ ನಗುವನು ಭಾಳೆ ಏ ತಾಳೊ 5
--------------
ಗಲಗಲಿಅವ್ವನವರು
ಕಾಪಾಡೆಲೊ ದೇವ ಕರುಣಾರ್ಣವ ಪ ನಾ ಪಾಪಿಯು ಎಂದು ನೀ ಪರಿ ಪಾಲಿಸದೀಪರಿಗೈದರೆ ಆಪದ್ಭಾಂಧವ ಅ.ಪ. ಮೊರೆಯಿಡುವೆನು ಇನ್ಯಾರಿಗೆ | ನೀನಿಲ್ಲದೆ ಪೊರೆವ ಪ್ರಭುವಾರೆನಗೆ | ಶರಣ ಮಂ ದಾರನೆಂದರಿತು ನಿನ್ನಯ ಪಾದ ನೆರೆ ನಂಬಿದೆನು ಇನ್ನು ಪೊರೆಯಬೇಕೆನ್ನನು 1 ಕರಿರಾಜನ ಭಯ ಪರಿಹರಿಸಿದ | ವರ ಗರುಡಗಮನ ಸಿರಿವರದ | ಜನಾದರ್Àನ ಪರಮ ಪುರುಷ ಶ್ರೀ ಕರಿಗಿರಿ ಮಂದಿರ ನರಹರಿ ನಮಿಪೆನು ಚರಣ ಸರಸಿಜಕೆ 2
--------------
ವರಾವಾಣಿರಾಮರಾಯದಾಸರು