ಒಟ್ಟು 1979 ಕಡೆಗಳಲ್ಲಿ , 113 ದಾಸರು , 1436 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಜಯ ಮಂಗಳಂ ಪ ಪರಮಾಸನದಲಿ ಕುಳಿತವಗೆ ಪರತತ್ವವ ತಾ ತಿಳಿದವಗೆ ಕರುಣದಿಂದ ದುರಿತಾವಳಿಗಳನು ಸ್ಮರಿಸಿದ ಮಾತ್ರದಿ ಪರಿಹರಿಸುವಗೆ 1 ಪೊಡವಿಯಲಿ ಶೋಭಿಸುವವಗೆ ಕಡಲಶಯನನ ಭಕ್ತನಿಗೆ ಅಡಿಗಳ ಬಿಡದೆ ಭಜಿಪ ಸುಜನರಿಗೆಲ್ಲ ಕಡುತರ ಜ್ಞಾನವ ನೀಡುವಗೆ 2 ಸತ್ಯಧೀರರ ಕುವರನಿಗೆ ಸತ್ಯಜ್ಞಾನನೆಂದೆನಿಸುವಗೆ ಅತ್ಯಾದರದಿಂದ ರಾಮನ ಧ್ಯಾನಿಸಿ ಪ್ರತ್ಯಕ್ಷವ ಕರೆಸಿರುವವಗೆ 3 ಕಾಮಕ್ರೋಧವ ಬಿಟ್ಟವಗೆ ಪ್ರೇಮ ಆಶೆಗಳ ಸುಟ್ಟವಗೆ ಧೂಮಕೇತು ಸಖ ಸೂನುವಾಹನನ ನೇಮದಿಂದ ಆರಾಧಿಪಗೆ 4 ದಂಡ ಕಮಂಡಲ ಪಿಡಿದವಗೆ ಪಂಡಿತರಿಂದತಿ ಪೂಜಿತಗೆ ಕೊಂಡಾಡಿದರ್ಯಮ ದಂಡನೆ ತಪ್ಪಿಸಿ ಶೊಂಡನಾದ ನರಹರಿ ತೋರ್ಪಗೆ 5
--------------
ಪ್ರದ್ಯುಮ್ನತೀರ್ಥರು
ಮಂಗಳಂ ಜಯ ಮಂಗಳಂ ಪ ಇಂಗಡಲ ಕುವರಿಗೆ ಮಂಗಳಕಾಯೆಗೆ ಅ.ಪ. ನಿತ್ಯ ಪೂಜಿತದೇವಿಗೆರಾಜೀವ ನಯನೆಗೆ ಭಾಗ್ಯವೀವಳಿಗೆ 1 ಹಸಿರು ಸೀರೆಯನುಟ್ಟು ಹಳದಿ ಕುಪ್ಪುಸತೊಟ್ಟುಎಸೆವ ಚಿನ್ನಾಭರಣನಿಟ್ಟು ಮೆರೆವವಳಿಗೆ 2 ಪ್ರತ್ಯಕ್ಷಾಪ್ರತ್ಯಕ್ಷ ಶಕ್ತಿಯ ದೇವಿಗೆನಿತ್ಯ ಸಂಸಾರಿಗಗತ್ಯವಿರುವವಳಿಗೆ 3 ಕುಲಗೋತ್ರವೆಣಿಸದಲೊಲಿಯುವ ದೇವಿಗೆನೆಲೆಗೊಡದ ಚಂಚಲೆಮಾಲಕುಮಿದೇವಿಗೆ 4 ಮದನನ ಮಾತೆಗೆ ಪದುಮಲಯಳಿಗೆಗದುಗಿನ ವೀರನಾರಾಯಣನ ಸತಿಗೆ 5
--------------
ವೀರನಾರಾಯಣ
ಮಂಗಳಂ ಮಂಗಳಂ ತುಲಸಿದೇವಿಗೆ ಪ ಮಂಗಳಂ ರಂಗನ ಅರ್ಧಾಂಗಿಗೆ ಮಾಧವ ಮಂಗಳ ಭಕ್ತರ ಸಲಹುವ ತಾಯಿಗೆ ಮಂಗಳ ಮಹಿಷಾಸುರಮರ್ದಿನಿಗೆ 1 ಮಂಗಳ ಮಂದಾರ ವನವಾಸಿಗೆ ಶರಧಿ ಉದ್ಭವಳಿಗೆ ಮಂಗಳ ರಾಮದಾಸಗಭಯವಿತ್ತವಳಿಗೆ ಮಂಗಳ ಸಂಜೆಯೊಳ್ ಪೂಜೆಗೊಂಬುವಳಿಗೆ 2 ಮಂಗಳ ನಾರದನುತ ಅಂಬೆಗೆ ಮಂಗಳ ಸೇವಿತ ಸುರ ಸಮುದಾಯಗಳಿಗೆ ಮಂಗಳ ಮನೋಭೀಷ್ಟದಾಯಕಳಿಗೆ ಮಂಗಳ ಹರಿದ್ರಾ ಕುಂಕುಮನಿಡುವಳಿಗೆ 3 ಮಂಗಳ ಕೃಷ್ಣನ ಅಂತಸ್ಥಿತಳಿಗೆ ಮಂಗಳ ಜಗನ್ಮೋಹನ ದೇವಿಗೆ ಮಂಗಳ ಹಾಟಕ ಸಮಕಾಂತ್ಯಾವಳಿಗೆ ಮಂಗಳ ಬೃಂದಾವನ ದೇವಿಗೆ 4 ಕಮಲ ಲೋಚನದೇವಿಗೆ ಮಂಗಳ ಪೀತಾಂಬರಧಾರಿ ಸುಂದರಿಗೆ ಮಂಗಳ ಸರ್ವಾಭರಣ ಭೂಷಿತಳಿಗೆ ಮಂಗಳ ವಿಜಯ ರಾಮಚಂದ್ರವಿಠಲನ ರಾಣಿಗೆ 5
--------------
ವಿಜಯ ರಾಮಚಂದ್ರವಿಠಲ
ಮಂಗಳ ಮುಖ್ಯ ಪ್ರಾಣೇಶಗೆ ಪ ಜಯ ಮಂಗಳ ಶುಭಮಂಗಳ ವಾಯುಕುಮಾರನಿಗೆ ಅ.ಪ ಅಂಜನಾದೇವಿಯ ಕಂದಗೆ ಮಂಗಳಕಂಜಾಕ್ಷ ಹನುಮಂತಗೆ ಮಂಗಳಸಂಜೀವನವ ತಂದಾತಗೆ ಮಂಗಳಸಜ್ಜನ ಪರಿಪಾಲಗೆ ಮಂಗಳ1 ಅತಿ ಬಲವಂತ ಶ್ರೀಭೀಮಗೆ ಮಂಗಳಪ್ರತಿಮಲ್ಲರ ಗೆಲಿದಗೆ ಮಂಗಳಸತಿಯ ಸೀರೆಯ ಸೆಳೆದ ದೈತ್ಯನ ಕೊಂದುಪೃಥ್ವಿ ಮೇಲೆ ಚೆಂಡನಾಡಿದಗೆ 2 ಸೀತಾದೇವಿಯ ಬಾಲಗೆ ಮಂಗಳಶ್ರೀರಾಮನ ಭಂಟಗೆ ಮಂಗಳಗೋಪಾಲ ಕೃಷ್ಣನ ಪೂಜೆಯಮಾಡುವಗುರು ಮಧ್ವ ಮುನಿರಾಯಗೆ ಮಂಗಳ3
--------------
ವ್ಯಾಸರಾಯರು
ಮಂಗಳಂ ವೆಂಕಟೇಶಗೆ ಅಲಮೇಲ್ ಮಂಗಾ ಮನೋಹರಗೆ ಪ ಭವ ಶುಭ ಅ.ಪ ಆಕಾಶರಾಯನಳಿಯಗೆ | ಪಿ ಲೋಕವಿಶೃತಗೆ ಶ್ರೀ ಭೂರಮಣಗೆ 1 ತೊಂಡಮಾನ ನೃಪ ಪೂಜಿತಗೆ | ಬ್ರ ಕುಂಡಲಿ ಶಯನಗೆ ಗೋಪಾಲಗೆ ಮೃ ದ್ಭಾಂಡವ ರಚಿಸುವಗೆ ಭೀಮಗೊಲಿದವಗೆ 2 ವರ ಚಕ್ರಗಧಾಧರ ಹಸ್ತಗೆ 3
--------------
ಗುರುರಾಮವಿಠಲ
ಮಂಗಳಂ ಶುಭಮಂಗಳಂ ಪ ಅಂಜನೆ ಗರ್ಭದಿಂ ಬಂದವಗೆ ಕಂಜಾಕ್ಷಿ ವಾರ್ತೆಯ ತಂದವಗೆ ಸಂಜೀವನ ತಂದು ರಾಮನ ರಂಜನೆಗೈದ ಮುಖ್ಯಪ್ರಾಣಗೆ 1 ಕುಂತಿಯ ಕಂದನೆಂದೆನಿಸಿದವಗೆ ದಂತಿ ಸಾಸಿರ ಬಲವಂತನೆಗೆ ಕಂತು ಪಿತನ ಮಂತ್ರಿಯೆನಿಸಿ ಕುರುಕುಲ ಅಂತಕನಾದ ಭೀಮಸೇನಗೆ 2 ನಡುಮನೆ ವೇದವತಿ ವರಸುತಗೆ ಉಡುದಾರ ಉಪವೀತ ತೊರೆದವಗೆ ಸಿರಿ ರಂಗೇಶವಿಠಲನ ಬಿಡದೆ ಪೂಜಿಪ ಮಧ್ವರಾಯಗೆ 3
--------------
ರಂಗೇಶವಿಠಲದಾಸರು
ಮಂಗಳಂ ಶ್ರೀ ಭಾರತೀಶಗೇ ಬಂಗಾರನೇತ್ರಗೆ ಪ. ರಂಗನಾಥನ ದಾಸೋತ್ತಮಗೆ ಶೃಂಗಾರದಿ ಶೋಭಿಪಗೆ ಅ.ಪ. ಬಿಟ್ಟುನೇಮ ತೊಟ್ಟು ವಸನ ಇಟ್ಟು ಆಭರಣ ಶ್ರೇಷ್ಠ ಪದಕ ಹಾರ ಧರಿಸಿ ದಿಟ್ಟತನದಿ ನಿಂತ ಧೀರಗೆ 1 ಹನುಮ ಭೀಮ ಮುನಿ ಮ ಚಿನುಮಯಾತ್ಮ ರಾಮಕೃಷ್ಣ ಮುನಿದ್ವೈಪಾಯನನು ಪೂಜಿಪಗೆ 2 ಶ್ರೀಪತಿಯ ಭಕ್ತನಿಗೆ ವ್ಯಾಪಕತ್ವಗೆ ಗೋಪಾಲಕೃಷ್ಣವಿಠ್ಠಲನ ರೂಪ ಮನದಿ ಸ್ಮರಿಸುವವಗೆ 3
--------------
ಅಂಬಾಬಾಯಿ
ಮಂಗಳಂ ಶ್ರೀ ಲಕ್ಷ್ಮೀದೇವಿಗೆ ಜಯ ಮಂಗಳಂ ಪಕ್ಷಿವಾಹನರಾಣಿಗೆ ಪ. ಮಂಗಳಂ ಮಂತ್ರಮೂರುತಿಗೆ ಶುಭ ಮಂಗಳಂ ಪರತಂತ್ರರೂಪಿಣಿಗೆ ಅ.ಪ. ಭಾರ್ಗವಿಗೆ ಭಾಗ್ಯದಾಯಿನಿಗೆ ಭಾಗವತರ ಪೂಜೆ ಕೈಗೊಂಬಳಿಗೆ ನಾಗವೇಣಿಗೆ ವರನಾಗಪೂಜಿತೆಗೆ ವರ ಭೋಗಿಭೂಷಣಸುತೆ ಯೋಗೇಶ್ವರಿಗೆ 1 ಸೀತೆಗೆ ಮಂಗಳಗೀತೆಗೆ ಭುವಿ ಜಾತೆಗೆ ಮಂಗಳಂ ಪವನಜಸೇವಿತೆಗೆ ಮಾತೆಗೆ ಸದ್ಗುಣ ಪೂತೆಗೆ ವರಪ್ರ ದಾತೆಗೆ ನಿತ್ಯನಿರ್ಮಲೆಗೆ 2 ವರಶೇಷಗಿರಿವರನ ಉರದಲ್ಲಿ ನೆಲೆಗೊಂಡು ಶರಣಾಗತರಂ ಪರಿಭಾವಿಸಿ ಪರತರ ಸುಖಸೌಭಾಗ್ಯವ ಕರುಣಿಸಿ ಪೊರೆವ ಕಾರುಣ್ಯಮೂರುತಿಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ಶ್ರೀರಾಮಚಂದ್ರ ಭಂಗಿತಾಸುರೇಂದ್ರನೆ ವೀರ ಪ ರಾಜಕಾಂತಿ ಕೋಮಲಾಸ್ಯ ರಾಜರಾಜ ಪೂಜಿತ ರಾಜವಂಶಜಾ ಸಮೇತ ರಾಜ ಹೃದಯ ಮಿತ್ರನೆ 1 ಶಂಕರಾದಿ ಹೃದಯವಾಸ ಪಂಕಜಾನನ ಲಂಕಾನಗರ ಸಂಕಟಾರ್ತಿ ಶಂಕರಾಯ ಮಾಣ ದೇವ 2 ಕಾನನಾ ವಿನೋದ ಶ್ರೀದ ವಾನರಾದಿ ಗೀಯಮಾನ 3
--------------
ಬೇಟೆರಾಯ ದೀಕ್ಷಿತರು
ಮಂಗಳಾರತಿಯ ಬೆಳಗೆ ಮಧುಸೂದನಗೆ ದಿವ್ಯ ಮಂಗಳಾರತಿಯ ಬೆಳಗೆ |ಪ|| ಮಂದರ ಕೃಷ್ಣ ಮಚ್ಛನಾಗಿ ವೇದವ ತಂದಿಟ್ಟು ಅಮೃತ ಬೀರಿದಂಥ ಹರಿಗೆ1 ಎತ್ತಿ ತಂದು ಹರವಿ ಕೃಷ್ಣ ಸುತ್ತಿ ಒಯ್ದ ಸುರುಳಿಭೂಮಿ ಸುತ್ತಿ ಒಯ್ದ ಸುರುಳಿ ಭೂಮಿ ಹೊಟ್ಟೆ ಬಗೆದು ಕರುಳ ತನ್ನ ಕುತ್ತಿಗ್ಯಲ್ಲಿ ಧರಿಸಿದಾತಗೆ 2 ಕೂಸಿನಂತೆ ಬಂದು ಬೆಳೆದಾಕಾಶವ್ಹಿಡಿಯದೆ ಕೃಷ್ಣ ಕೂಸಿನಂತೆ ಬಂದು ಬೆಳೆದ ನಾಶಮಾಡಿ ಕ್ಷತ್ರಿಯರ ಪರಶುರಾಮನೆನಿಸಿದಾತಗೆ 3 ಕುಂಭಕರ್ಣನಣ್ಣ(ನ) ಹತ್ತು ರುಂಡ ಹಾರಿಸಿ ಕೃಷ್ಣ ಕುಂಭಕರ್ಣನಣ್ಣ(ನ) ಚೆಂಡನಾಡುತಲಿ ಕಾಳಿಂಗನ್ಹೆಡೆಯ ತುಳಿದ ಹರಿಗೆ4 ಬಟ್ಟೆ ತೊರೆದು ಬೌದ್ಧನಾಗಿ ಹತ್ತಿ ಹಯವನೇರಿ ಕೃಷ್ಣ ಬಟ್ಟೆ ತೊರೆದು ಬೌದ್ಧನಾಗಿ ದುಷ್ಟಕಲಿಯ (ಕೊಂದ) ಭೀಮೇಶಕೃಷ್ಣನಂಗ ಪೂಜಿಸುತಲಿ5
--------------
ಹರಪನಹಳ್ಳಿಭೀಮವ್ವ
ಮಣಿಗಣ ಭೂಷಣ ಅಣಿಗಾಣೆನಿಮಗಿನ್ನು ಗಣರಾಯ ಗಣರಾಯ ಪ. ರುದ್ರ ಕುಮಾರನೆ ಸಿದ್ಧಿ ನಿನಾಯಕ ವಿದ್ಯವಪಾಲಿಸೊಬುದ್ಧಿದಾತನೆ ಅ.ಪ. ಆನೆಯ ಮುಖದವನ ಧೇನಿಸಿನಮಿಸುವೆ ಗಣರಾಯ1 ಶ್ರೀನಿವಾಸನ ಪ್ರಿಯ ನೀನಮ್ಮಗೆಲಿಸೆಂದು ಗಣರಾಯ2 ಹಸ್ತಿಯ ಮುಖದವಗೆ ಹಸ್ತವ ಮುಗಿದೆವಸ್ವಸ್ಥ ಮನಸು ಕೊಡು ವಿಸ್ತರ ಉದರನೆ ಗಣರಾಯ3 ಗಂಧ ಅಕ್ಷತೆ ಪುಷ್ಪ ತಂದೆ ದುರ್ವಾಂಕುರ ಚಂದದ ವಸ್ತ್ರಗಳ ಒಂದೊಂದು ಕೈಕೊಳ್ಳೊ ಗಣರಾಯ 4 ರನ್ನ ಮಾಣಿಕ ಬಿಗಿದ ಚಿನ್ನದಾಭರಣವ ನಿನ್ನ ಪೂಜೆಗೆ ತಂದೆ ಚೆನ್ನಾಗಿ ಕೈಕೊಳ್ಳೊ ಗಣರಾಯ 5 ಚಕ್ಕಲಿ ತರುಗುಮಿಕ್ಕಾಗಿ ಲಡ್ಡುಗೆ ಚಿಕ್ಕಗಣಪ ಉಂಡು ಚಕ್ಕನೆ ವರಕೊಡು ಗಣರಾಯ 6 ಚಲ್ವ ರಾಮೇಶನನೆಲೆಕಂಡ ಪುರುಷನೆಇಲಿವಾಹನ ನಮ್ಮ ಸಲುಭದಿ ಗೆಲಿಸಯ್ಯ7
--------------
ಗಲಗಲಿಅವ್ವನವರು
ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮತ್ತಾರು ತಿಳಿಯರಲ್ಲಾ ಸದ್ಭಕ್ತಿಯ ಪ ತಂತ್ರಸಾರದಿಂದ ಪೂಜೆ ಮಂತ್ರದಿಂದ ಮಾಡಿ ಡಂಭ | ಯಂತ್ರದೊಳಗ ಸಿಲ್ಕ ಸಿಂತ್ರ ಹೋದರಲ್ಲದೇ 1 ಶಾಸ್ತ್ರವನೋದಿ ಹೇಳಿ ನಿಸ್ತರಿಸಿ ವಾದದಿಂದ | ದುಸ್ತರ ಹಮ್ಮಿನೊಳಗಸ್ತ ವಾದರಲ್ಲದೇ 2 ಇದ್ದು ಉಪವಾಸದಿಂದ ಉಗ್ರತಪವ ಮಾಡಿ | ಸಿದ್ಧಿಗಳ ತೋರಿ ಮೆರೆದು ಬಿದ್ದು ಹೋದರಲ್ಲದೇ 3 ಹಲವು ಕರ್ಮಗಳ ಮಾಡಿ ಫಲವ ಬೇಡಿಕೊಂಡು ತನ್ನ | ಘಳಿಕೆಯ ಸಂಸಾರದಿ ಕಳೆದುಕೊಂಡರಲ್ಲದೇ 4 ಇಂದಿರೆಪತಿಯ ಮನದಿಂದ ಅರಿತು ಪೂಜಿಸುವ | ತಂದೆ ಮಹಿಪತಿ ಪ್ರಭು ಹೊಂದಿದವರಲ್ಲದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ