ಒಟ್ಟು 1360 ಕಡೆಗಳಲ್ಲಿ , 103 ದಾಸರು , 1202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮಿ ರಮಣಗೆ ಮಾಡಿದಳು ಉರುಟಾಣಿÉ ಪ. ಇಳೆಯೊಳಗತಿಜಾಣೆ ಸುಂದರ ಫಣಿವೇಣಿ ಅ.ಪ. ಕಚ್ಛಪ ಕಿರನೆ ಕೇಸರಿಯಂದದ ಮುಖನೆ ಸ್ವಚ್ಛಮುಖವ ತೋರೈ ಅರಿಸಿನ ಹಚ್ಚುವೆನು 1 ದುರುಳ ಕ್ಷತ್ರಿಯರನ್ನು ಕೊರಳ ತರಿದ ಹರಿಯೆ ಹರುಷದಿಂ ಕೊರಳ ತೋರೈ ಗಂಧವ ಹಚ್ಚುವೆನು 2 ದಶರಥsÀನಲಿ ಜನಿಸಿ ದಶಮುಖನ ಸಂಹರಿಸಿ ಕುಸುಮ ಮುಡಿಸುವೆನು 3 ಹರಿನಾರು ಸಾಸಿರ ಸುದತಿಯರನಾಳಿದನೆ ಪದುಮಕರವ ತೋರೈ ವೀಳ್ಯವ ಕೊಡುವೆನು 4 ವಸನರಹಿತನಾಗಿ ವಸುಧೆಯ ತಿರುಗಿದೆ ಬಿಸಜನಾಭನೆ ನಿನಗೆ [ವಸನ ಉಡಿಸುವೆನು] 5 ವರ ತುರಗವನೇರಿ ಕಲಿಯ ಸಂಹರಿಸುವಿ ಸಿರಿಹಯವದನನೆ ಆರತಿಯೆತ್ತುವೆನು 6
--------------
ವಾದಿರಾಜ
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀಶ ನರಹರಿ ವಿಠ್ಠಲನೆ ಸಲಹೊ ಪ ಪಕ್ಷೀಂದ್ರ ವಾಹನನೆ ಈಕ್ಷಿಸುತ ಕರುಣದಿಂರಕ್ಷಿಸಲಿ ಬೇಕಿವಳ ಲಕ್ಷ್ಮಣಾಗ್ರಜನೇ ಅ.ಪ. ದೀನಜನ ಮಂದಾರ ಜ್ಞಾನದಾಯಕನೆ ಸುರ-ಧೇನು ಭಕ್ತರಿಗೆ ಕಾಮಿತವ ಕೊಡುವಲ್ಲಿ |ನೀನಿವಳಿಗೇ ಮೋಕ್ಷಜ್ಞಾನವನೇ ಪಾಲಿಸುತಸಾನುರಾಗದಿ ಸಲಹೊ ಪ್ರಾಣಾಂತರಾತ್ಮ 1 ಸೃಷ್ಟಿ ಸ್ಥಿತಿ ಸಂಹಾರ ಕರ್ತನೀನೆಂದೆನಿಪೆವೃಷ್ಟಿಕುಲ ಸಂಪನ್ನ ಜಿಷ್ಣು ಸಖ ಹರಿಯೇ |ಕಷ್ಟನಿಷ್ಠೂರಗಳ ಸಹಿಸುವಡೆ ಧೈರ್ಯವನುಕೊಟ್ಟು ಕೈ ಪಿಡಿಯುವುದು ಕೃಷ್ಣ ಮೂರುತಿಯೇ2 ಪತಿಯೆ ಪರದೈವ ವೆಂಬುನ್ನತದ ಮತಿಯಿತ್ತುಹಿತದಿಂದ ಹರಿಗುರು ಸೇವೆಯಲಿ ರತಿಯಸತತ ನಿನ್ನಯ ನಾಮ ಸ್ಮøತಿಯನ್ನೇ ವದಗಿಸುತಕೃತಿಪತಿಯೆ ನೀನಿವಳ ಉದ್ಧರಿಸು ಹರಿಯೇ 3 ತಾರತಮ್ಯ ಜ್ಞಾನ ವೈರಾಗ್ಯ ಭಕುತಿ ಕೊಡುಮೂರೆರಡು ಭೇಧಗಳ ಅರಿವಿತ್ತು ಹರಿಯೇಮಾರಪಿತ ಇವಳ ಹೃದ್ವಾರಿಜದಿ ತವ ರೂಪತೋರುತಲಿ ಸನ್ಮುದವ ಬೀರುವುದು ಹರಿಯೇ 4 ಸರ್ವಾಂತರಾತ್ಮನೆ ಗುರುಡವಾಹನ ದೇವಸರ್ವಜ್ಞ ಸರ್ವೇಶ ಮಮ ಕುಲ ಸ್ವಾಮೀ |ನಿರ್ವಿಘ್ನದಿಂದೆನ್ನ ಪ್ರಾರ್ಥನೆಯ ಪೂರೈಸೊಸರ್ವಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಂಬೋದರನ ಸಹೋದರನೆ ಪ ಶಂಭುಜಕರುಣಾಸಾಗರನೆ ಅ.ಪ ಶೂರಪದ್ಮನ ಎದೆ ಸೀಳಿದನೆ ಮಾರನ ಪೋಲುವ ಸುಂದರನೆ ಧೀರ ಹಿರಣ್ಯಕನಾರಾಧನೆಗೆ ಮೆಚ್ಚಿ ಸೂರೆಯ ಮುಕ್ತಿಯನಿತ್ತವನೆ 1 ವರವಜ್ರ ಶಕ್ತ್ಯಾಯುಧ ಧರನೆ ಸುರಮುನಿ ನಮಿತ ಸರ್ವೇಶ್ವರನೆ ಸುರುಚಿರ ರತ್ನಾಭರಣ ವಿಭೂಷಣನೆ ಶರಣ ರಕ್ಷ ಕುಮಾರಕನೆ2 ದಾಸ ಜನರ ಮನತೋಷಕನೆ ವಾಸುದೇವನ ಸಖ ಷಟ್ಶಿರನೆ ದೋಷವಿನಾಶನೆ ನಾಶರಹಿತ ಪಾವಂಜೇಶನೆ ಕಾರ್ತಿಕೇಯನೆ ಸ್ಕಂದನೆ 3
--------------
ಬೆಳ್ಳೆ ದಾಸಪ್ಪಯ್ಯ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಪ ಶ್ರೀಲತಾಂಗಿಯೊಡನೆ ಮೆರೆವದೊರೆಯೆ ಲಾಲಿ ಅ.ಪ ನಂದಲಾಲಿ ಗೋವಿಂದ ಲಾಲಿ ಕಂದನಾಗಿ ಲೋಕ ತಂದೆ ಲಾಲಿ 1 ಬಾಲಲಾಲಿ ತುಲಸಿಮಾಲ ಲಾಲಿ ಕಾಲಕಾಲವಂದ್ಯ ಗೋಪೀಲೀಲ ಲಾಲಿ 2 ವಾಸುದೇವ ಲಾಲಿ ದೇವಕೀತನಯ ಸದ್ಭಾವಲಾಲಿ 3 ರಂಗಲಾಲಿ ಮಂಗಳಾಂಗಲಾಲಿ ಗಂಗಾತಾತ ಲೋಕೋತ್ತುಂಗ ಲಾಲಿ4 ರಾಮಲಾಲೀ ಭಕ್ತಪ್ರೇಮ ಲಾಲಿ ಶ್ಯಾಮಸುಂದರಾಂಗ ನಮ್ಮ ಸ್ವಾಮಿ ಲಾಲಿ 5 ಸತ್ಯ ಲಾಲಿ ಮೌನಿಸ್ತುತ್ಯ ಲಾಲಿ ನಿತ್ಯ ನಿಗಮವೇದ್ಯ ಅನ್ಯುಕ್ತಲಾಲಿ6 ರಾಜಲಾಲಿ ರತ್ನತೇಜ ಲಾಲಿ ರಾಜರಾಜಪೂಜ್ಯ ಜಾಜಿಶ್ರೀಶ ಲಾಲಿ 7
--------------
ಶಾಮಶರ್ಮರು
ಲೋಕನೀತಿಯ ಪದಗಳು ಚರಣಕಮಲ ಭಜಿಸೋ ಗೋಪಾಲಕೃಷ್ಣನ ಪ ತರುಣಿಯರ ಮನವನು ಮರುಳುಗೊಳಿಸಿದ ಪರಮ ಸುಂದರನ ಧರಿಯೊಳಗೆ ಭಾಸ್ಕರಪುರ ಸುಮಂದಿರನೆಂದು ಕರೆಸುವನ ಕರಿರಾಜವರದನ ಅ.ಪ ಕ್ಷೋಣೆ ಗೀರ್ವಾಣರಿಂದಲಿ ಪೂಜೆಗೊಂಬುವನಾ ಮಾನಸದಿ ತನ್ನನು ಧೇನಿಪರ ಸುರಧೇನು ಎನಿಸುವನಾ ಗಾನವನು ಕೇಳುವ ಧೇನು ವತ್ಸಗಳಿಂದ ಶೋಭಿತನಾ ವೇಣುಗೋಪಾಲನ 1 ವಂದನೆಯ ಮಾಳ್ಪರ ಬಂಧ ಬಿಡಿಶ್ಯಾನಂದ ನೀಡುವನಾ ಮಂದರದಿ ಗಣಪತಿ ಗಂಧವಾಹನರಿಂದ ವಂದಿತನಾ ಮಂದಜಾಸನ ಮುಖ್ಯ ಸುರಗಣದಿಂದ ಸೇವಿತನಾ ಸಿಂದೂರವರದನ 2 ಕೃಷ್ಣಾ ಅಷ್ಟಮಿಯ ಉತ್ಸವ ಮಾಳ್ಪ ಭಕುತರನಾ ಸೃಷ್ಟೀಶನಿವನೆಂದರಿಂದ ಮಹಿಮೆಯ ಪಾಡಿಪೊಗಳುವನಾ ಕಷ್ಟವನು ಪರಿಹರಿಸ್ಯವರ ಸಕಲಾಭೀಷ್ಠಗರಿಯುವನಾ ಪರಮೇಷ್ಠಿ ಜನಕನ 3 ಗರಿಯೆ ಗೋಗಳನಾ ಗಿರಿಯ ಧರಿಸಿದನಾ ಇದ ಕೃಷ್ಣನ್ನ ಪೂಜಿಸಲು ಒಲಿದನ 4 ಶರಣಾಗತ ಜನರ ಪೊರೆಯಲು ಬಂದುನಿಂತಿಹನಾ ಕಾ ರ್ಪರ ಕ್ಷೇತ್ರದಿ ಮೆರಿವ ತರುಪಿಪ್ಪಲ ಸುಮಂದಿರನ ಸುರವಿನುತ ಸಿರಿನರಹರಿಯ ರೂಪಾತ್ಮಕನು ಎನಿಸುವನು ತುರುಪಾಲ ಕೃಷ್ಣನ 5
--------------
ಕಾರ್ಪರ ನರಹರಿದಾಸರು
ವತ್ಸರ ಸಾರ್ಥಕವಾಗಲಿಪಾರ್ಥ ಸಖನ ಗುಣ ಕೀರ್ತಿಸುತಾ ಪ ಅರ್ಥಿಯಿಂದ ಹರಿಕೀರ್ತನೆ ಮಾಡಲುಆರ್ತೇಷ್ಟದ ಸಕಲಾರ್ಥವ ಕೊಡುವ ಅ.ಪ. ವತ್ಸರ ಸಾರಿತು ಹಿಂದೆಸಾರಿತು ನಮ್ಮಾಯುವು ಮುಂದೇ |ವಾರಿಜಾನಾಭನ ಸೇರಿ ಭಜಿಸಲುಸೇರಲಿಲ್ಲ ನಾವ್ ದಿನ ಒಂದೇ1 ತಂದೆ ವೆಂಕಟನ ಪ್ರೇಮದ ದಾಸರುಸಂದೇಶವನೆ ಕಳುಹಿಸದರೂಇಂದಿರೆಯರಸನ ಭಕ್ತ ವೃಂದದಿಛಂzಸÀದಿ ಭಜಿಸೆಂದರುಹಿದರೂ 2 ಇಂದಿನಿಂದಾದರು ಒಂದು ಗೂಡುತ ನಂದಕಂದನನು ಭಜಿಸುವ ಬನ್ನಿಸುಂದರ ಗುರು ಗೋವಿಂದ ವಿಠಲನದ್ವಂದ್ವ ಚರಣವನು ವಂದಿಸೆ ಬನ್ನಿ 3
--------------
ಗುರುಗೋವಿಂದವಿಠಲರು
ವಂದಿಪೆ ಚರಣಾರವಿಂದಕೆ ಸದ್ಗುರು ವಾದಿರಾಜ ಮಂದ ಮತಿಯ ಬಿಡಿಸಿಂದಿರೇಶನ ತೋರೋ ಪ ದುರುಳ ಬುದ್ಧಿಲಿಂದ ಮರೆದು ಬಿಟ್ಟೆ ನಿನ್ನ ವಾದಿರಾಜ ಧರಣಿಮಂಡಲದೊಳು ಪಾಪಿಷ ನಾನಾದೆ ವಾದಿರಾಜ ಪರಮ ಪುರುಷ ಭಾವಿ ಮರುತ ನೀನೆÉಂದು ವಾದಿರಾಜ ಹಿರಿಯರ ಮುಖದಿಂದ ನಿಶ್ಚೈಸಿದೆ ವಾದಿರಾಜ 1 ಶಿರದೊಳು ಹೂರಣದ್ಹರಿವಾಣ ಧರಿಸುತ ವಾದಿರಾಜ ವರ ಭಕ್ತಿಯಿಂದಲಿ ತುರುಗಾಸ್ಯಗುಣಿಸಿದ ವಾದಿರಾಜ ಗುರು ಜಗನ್ನಾಥ ದಾಸರ ಸ್ವಪ್ನದೊಳು ಬಂದು ವಾದಿರಾಜ ಹÀರಿಕಥಾಮೃತಸಾರವಿರಚಿ ಸೆಂದರು ವಾದಿರಾಜ 2 ಶ್ರೀಮಧ್ವಾರ್ಯಮತ ಸಾಮ್ರಾಜ್ಯ ಧ್ವಜಪೆತ್ತಿ ವಾದಿರಾಜ ಶಾಮಸುಂದರ ಕೃಷ್ಣ ನಾಮದ ಮಹಿಮೆಯ ವಾದಿರಾಜ ಪಾಮರಂಗೆ ಪೇಳಿ ಪ್ರೇಮದಿ ಸಲುಹಿದ ವಾದಿರಾಜ 3
--------------
ಶಾಮಸುಂದರ ವಿಠಲ
ವಂದಿಪೆ ನಿನಗೆ ಗಣನಾಥ ಮೊದಲೊಂದಿಪೆ ನಿನಗೆ ಗಣನಾಥ ಪ ಬಂದ ವಿಘ್ನ ಕಳೆ ಗಣನಾಥ ಅ.ಪ. ಸಿಂಧುರವದನರವಿಂದ ನಯನ ಘನ ಸುಂದರ ಸತಿಯರ ಮಂದಿರ ನಿಲಯನೆ 1 ಹೂಡಿದ ಆಟಕೆ ಮಾಡಿದ ಯೋಚನೆ ಕಡೆಗಾಣಿಸು ಘಟ್ಟಿಕಾಣಿಕೆ ಕೊಡುವೆ 2 ಮಂಗಳಾಂಗ ಮಹಮಾದಗಮನಿಯಳ ತಂದು ತೋರೋ ತಂದೆವರದಗೋಪಾಲವಿಠ್ಠಲಪ್ರಿಯ 3
--------------
ತಂದೆವರದಗೋಪಾಲವಿಠಲರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಂದಿಸು _ ಶ್ರೀ ಹರಿಯ ಪ ಇಂದಿರೆನಾಥ ಮಹೇಂದ್ರ ಪರಾತ್ವರ ಸುಂದರ ಜಗಪಿತ ನಂದ ಮಹೋದಧಿ ಸಿಂಧು ಶಯನ ಅರ- ವಿಂದ ಸುನಾಭ ಮುಕುಂದ ಮುರಾರಿಯ ಅ.ಪ. ವೇದಸುಗೋಚರ _ ಖೇದವಿವರ್ಜಿತ _ ಸಾದರನುತಿಪರ ಖೇದವಿಮೋಚಕ ಮಾಧವ ಗೀತಾ _ ಬೋಧಕ ವಿಧಿಗುರು 1 ನಿರಂಜನ _ ಪಕ್ಷಿ ಧ್ವಜ ಜಗ ಕುಕ್ಷಿ ಪರಾಮೃತ _ ರಕ್ಷಿಸಿ ಜಗವಂ ಭಕಿÀ್ಷಪಧೋಕ್ಷಜ _ ಸಾಕ್ಷಿ ನಿರಪೇಕ್ಷ ಸುಪಕ್ಷನ2 ಸತ್ಯಾಧಾರ ವಿಚಿತ್ರ ಗುಣಾರ್ಣವ _ ಸತ್ಯವ್ರತ ಪುರು ಷೋತ್ತಮ ನಿರ್ಮಲ_ ಸತ್ಯವತೀಸುತ _ ನಿತ್ಯತೃಪ್ತ ಮ ಹಾತ್ಮಜಗಾತತ _ ಭೂತಿದ ಹೃಸ್ಥನ 3 ಭೂಮಿಯ ವರಜಯ ಧಾಮಸಖಖಳಭ್ರಾಮಕ ಕಲ್ಕಿಯೆ4 ಮಾಯಾ ಪರ- ಮೇಷ್ಠ ಜನಕ- ಶ್ರೀ ಕೃಷ್ಣವಿಠಲಪದ ನಿಷ್ಠರ ಸೇರಿ ವಿಶಿಷ್ಠ ಸಮರ್ಪಿಸಿ 5
--------------
ಕೃಷ್ಣವಿಠಲದಾಸರು
ವಂದಿಸುವೆ ನಂದಪುತ್ರ ಇಂದಿರಾಮನೋಹರ ಇಂದಿರಾ ಮನೋಹರ ಪೂರ್ಣೇಂದು ಕೋಟಿ ಸುಂದರ ಪ ನೀಲವಾರಿವಾಹಗಾತ್ರ ಲೋಲಚೇಲ ಭಾಸುರ ಲೋಲ ಚೇಲಭಾಸುರ ವಿಲೋಲ ನೀಲಕುಂತಲ 1 ದೇವ ದೇವಾಧೀಶ ಶೂರ ದೇವಕೀ ಪ್ರಿಯಂಕರ ದೇವಕೀ ಪ್ರಿಯಂಕರ ವಿಭಾವನೈಕ ಗೋಚರ 2 ಧೇನುಪುರ ವರವಿಹಾರಿ ಸೂನಭಾಣ ಜನಕನೆ ಸೂನ ಭಾಣ ಜನಕನೆ ವಿನೋದ ವೇಂಕಟೇಶನೆ 3
--------------
ಬೇಟೆರಾಯ ದೀಕ್ಷಿತರು
ವಂದಿಸುವೆ ಭಾರ್ಗವೀಶ ಸುಂದರಾಂಗ ಲೋಕಾಧೀಶ ಪ ವಂದ್ಯಮಾನ ಪಾದಕಮಲ ಇಂದಿರಾ ಮನೋವಿಹಾರ ಅ ಪ. ಅಷ್ಟಮೂರ್ತಿ ಕಷ್ಟಹರಣ ಕೃಷ್ಣಮೂರ್ತಿ ಶ್ರೀ ಕೇಶವ ದುಷ್ಟದನುಜ ಕುಲವಿನಾಶ ಸೃಷ್ಟಿಪಾಲದೇವಾಧೀಶ 1 ನಿನ್ನ ಪಾದವನ್ನು ಭಜಿಪೆ ಚೆನ್ನಕೇಶವ ಪಾಲಿಸೆನ್ನ ಇನ್ನೂ ಭವದಿ ಶೋಕಗೊಂಬೆ ನಿನ್ನ ಹೊರತಿನ್ಯಾರ ಕಾಣೆ 2 ಪುಟ್ಟ ಧ್ರುವಗೆ ಪಟ್ಟಗಟ್ಟಿ ದಿಟ್ಟತನದಿ ಪೊರೆದ ನೀನು ಕಷ್ಟದಿಂದಜಾಮಿಳನು ಕೂಗೆ ಇಷ್ಟವರವ ನಿತ್ತೆ ದೇವ 3 ಕಾನನದಿ ಸ್ನಾನಗೈದು ಜಪವ ಮಾಡಲಾರೆ ನಾನು ಧೇನುನಗರ ಪತಿಯೆ ನಿನ್ನ ಧ್ಯಾನದಿಂದ ಜ್ಞಾನವೆಂದು 4
--------------
ಬೇಟೆರಾಯ ದೀಕ್ಷಿತರು
ವಂದಿಸುವೆ ಸುಂದರಾಂಗ ನಿಜಸೌಂದರ್ಯಜಿತಾನಂಗ ಬೃಂದಾರಕಾದಿ ಮುನಿ ಬೃಂದವಂದಿತ ಮುಕುಂದ ಗೋವಿಂದ ನಂದ ಮೂರುತಿ ಹರೆ ಪ ದೇವಾದಿ ಜೀವ ಸುಪ್ರಭಾವ ಭಾಸಿತ ಮುಖ ದೇವಕೀ ವಸುದೇವ ಭಾವನಾ ಗೋಚರ 1 ಹಾರಕುಂಡಲ ಮನ ಮಾಲಾವಿರಾಜಿತ ಕ್ಷೀರಾಬ್ದಿ ಕನ್ಯಕಾ ಲೋಲಾ ಮುರಾಂತಕ2 ಧೇನುನಗರ ಪರಿಪಾಲಕ ವೇಂಕಟೇಶ ಸಾನುರಾಗದಿ ಪೊರೆ ಗಾನವಿನೋದ ಹರೆ 3
--------------
ಬೇಟೆರಾಯ ದೀಕ್ಷಿತರು