ಒಟ್ಟು 1039 ಕಡೆಗಳಲ್ಲಿ , 99 ದಾಸರು , 825 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಲಹು ವೆಂಕಟರಮಣ ದಯಾಂಬುಧಿಸಲಹು ವೆಂಕಟರಮಣ ಪ.ಮಸ್ತಕದೊಳೊಪ್ಪುವ ಮಾಣಿಕ ಮಕುಟದಕಸ್ತೂರಿನಾಮದ ಚೆಲುವವಿಸ್ತರ ಕದಪಿಲಿ ಹೊಳೆವಕುಂಡಲಪ್ರಶಸ್ತವದನಜಗಜೀವ1ಎಳೆನಗೆ ತಿಂಗಳ ಕಾಂತಿಲಿಹೃತ್ತಾಪಕಳೆವ ಕರುಣಿ ಸಿರಿಕಾಂತಗಳದೊಳು ವನಮಾಲೆವೈಜಯಂತಿಪದಕಗಳೊಲೆವ ಮಂಗಳಮೂರ್ತಿಮಂತ 2ಮುತ್ತಿನ ಸರ ಸರಪಳಿ ಭುಜಕೀರ್ತಿಯುಎತ್ತಿದ ಶಂಖಾರಿಪಾಣೆರತ್ತುನ ಮೇಲೊಡ್ಯಾಣ ಕಂಕಣ ಮುದ್ರೆಒತ್ತೆ ಅಭಯವರದನೆ 3ಉಟ್ಟು ಪೊಂದಟ್ಟಿ ಕಠಾರಿ ಕಟ್ಟಿರುವದುಷ್ಟರ ರಣಜಿತವೀರಇಟ್ಟ ವಜ್ರದ ಕಾಲಂದಿಗೆ ಪಾವುಗೆಮೆಟ್ಟಿದ ಸುರರಮಂದಾರ4ಅಗರುಚಂದನಕಪ್ಪುರ ಕೇಶರ ಸುರಭಿಗಳಿಗೆ ಅತಿಪ್ರಿಯ ಅಂಗಮಘಮಘಿಸುವ ಮಲ್ಲಿಗೆ ಸಂಪಿಗೆಯಮಾಲೆಗಳ ಪ್ರಸನ್ವೆಂಕಟ ರಂಗ 5
--------------
ಪ್ರಸನ್ನವೆಂಕಟದಾಸರು
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು
ಸಂಸಾರ ನಂಬುವೆಯ ಹೆಡ್ಡ ಈಸಂಸಾರವಿಹುದು ಮುಕ್ತಿಗೆ ಅಡ್ಡಪಮನೆಯು ಎಂಬುದುವಸ್ತಿ ಮಳಿಗೆಸತಿತನಯಹೋಹರು ಹಾದಿಗಳಿಗೆಎನಿತು ಮಮತೆ ಇದರೊಳಗೆ ಯಮಮನಮುಟ್ಟಿ ಹಿಡಿದಿಹ ಗುದಿಗೆ1ಸುಳ್ಳುಗಳಾಡೋದು ಎಷ್ಟುಮಹಾತಳ್ಳಿಕಾರಿಕೆ ಬೆಟ್ಟದಷ್ಟುಬೆಳ್ಳಿಟ್ಟು ಬಗುಳೋದು ಯಷ್ಟು ಯಮ ಕಕ್ಕಲಿಹಶೀಳುಯಂಬಾಕೊಲ್ಲೆಯಿವನ ಕುಟ್ಟುಕುಟ್ಟು2ಮಕ್ಕಳು ಮನೆಗಿಲ್ಲವೆಂಬ ಎನಗೆತಕ್ಕ ಹೆಂಡತಿ ಅಲ್ಲವೆಂಬರೊಕ್ಕವ ದಿನ ನೋಡಿಕೊಂಬ ಯಮಕಕ್ಕರಲಿರು ಶೀಳುಯೆಂಬ3ಗುರುಹಿರಿಯರ ನಿಂದಿಪನುಸತಿಮರುಕಕೆ ಹಲ್ಲು ತೆರವನುಹೊರಡಿಪ ತಂದೆ ತಾಯಿಯನುಯಮನರಕಕೆ ಹಾಕುಯೆಂಬುವನು4ನಾನಾರುಯೆಂಬುದು ಅಣಕೆ ಹಿಂದಕ್ಕೆನಿದ್ದೆಯೆಂಬುದು ಒಣಗಿಏನೋಮುದೆಂಬುದು ಜಣಗಿ ಚಿದಾನಂದ-ನೆಂಬುದು ಮುಣಗಿ5
--------------
ಚಿದಾನಂದ ಅವಧೂತರು
ಸುಪುತ್ರನು ಎಂಬುವನಿವನುಸುಪುತ್ರನನು ಹೇಳುವೆ ನಾನುಪತಂದೆ ತಾಯಿಗಳ ಪೂಜಿಸುವಬಂಧುಗಳಿಗೆ ಬಹು ಪ್ರಿಯನಾಗಿ ಇರುವಎಂದಿಗೂ ಕೆಟ್ಟದ್ದ ನುಡಿಯ ಆವ-ಬಂದವರಿಗೆಲ್ಲ ಅನ್ನವ ಕೊಡುವ1ಕುಲದ ಆಚಾರವ ತಪ್ಪಿಸನುಹಲವು ವ್ರತಗಳನವ ತಾ ಬಿಡನುಬಲು ತಿಳುವಳಿಕೆಯನು ತಿಳಿದಿಹನುನೆಲೆಯಿಲ್ಲದ ತಪಮಾಡುವನು2ಅಣ್ಣ ಅತ್ತಿಗೆಗೆ ಉತ್ತರಕೊಡನುಪುಣ್ಯ ಕಥೆಯನು ಕೇಳ್ವುದ ಬಿಡನುತನ್ನ ದೇಹವ ಪೋಷಣೆ ಮಾಡನುಭಿನ್ನ ಬುದ್ಧಿಯನೆಂದಿಗು ತೋರನು3ತತ್ವ ವಿಚಾರವೆಂಬುದೆ ಜೀವನಿತ್ಯಅನಿತ್ಯವ ತಿಳಿದು ಅವನೀವಸತ್ಪುರುಷರೊಳು ಒಡನಾಡುವಎಲ್ಲಮಿಥ್ಯೆಎಂದರಿವ4ಸಂಶಯ ಸಂಕಲ್ಪನೀಗಿಧ್ವಂಸ ಮಾಡಿ ವಾಸನೆಯೆಲ್ಲವಶಿಂಶುಮಾರದ ಚಕ್ರಕೆ ಹೋಗಿಹಂಸ ಚಿದಾನಂದ ಗುರುವಾಗಿ5
--------------
ಚಿದಾನಂದ ಅವಧೂತರು
ಸುರನಾರಿಯರ ಮಹಿಮೆಪರಿಪರಿ ಹೊಗಳುತಬಿರುದಿನಕೋಲಹೊಯಿದೇವಕೋಲ ಪ.<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉಮಾದಿಗಳಿಗೆಲ್ಲಬೊಮ್ಮ ಹ್ಯಾಂಗ ಶಪಿಸಿದಅಮ್ಮಾ ಇದು ಒಂದುಕೌತುಕಕೋಲಅಮ್ಮಾ ಇದುಕೌತುಕ ಹೇಳೆಂದಝಮ್ಮನೆ ದೂತೆ ನುಡಿದಳುಕೋಲ 1ಭಾರತಿ ದೇಹದಲ್ಲಿ ಸೇರಿದರ್ಹಾಂಗಮ್ಮಪಾರ್ವತಿದೇವಿ ಮೊದಲಾದಕೋಲಪಾರ್ವತಿದೇವಿ ಮೊದಲಾದ ಕೆಲದಿಯರುನಾರಿರುಕ್ಮಿಣಿ ಎನಗ್ಹೇಳಕೋಲ2ಪಾಂಚಾಲಿದೇವಿ ತಾನು ಪಂಚಪಾಂಡವರ ಕೂಡಿಕೆಂಚಿತಾ ಹ್ಯಾಂಗ ರಮಿಸೋಳುಕೋಲಕೆಂಚಿತಾ ಹ್ಯಾಂಗ ರಮಿಸೋಳುಮಹಿಮೆಯ ಕಿಂಚಿತ್ತಾಗಿ ಎನಗ್ಹೇಳಕೋಲ3ಇಂದುಮುಖಿಯರ ಜನ ಚಂದಾಗಿ ಹೇಳಮ್ಮಸಂದೇಹಬ್ಯಾಡ ಎನಕೂಡಕೋಲಸಂದೇಹಬ್ಯಾಡ ಎನಕೂಡ ಅದಕೇಳಿಆನಂದವ ಬಡುವೆಅನುಗಾಲಕೋಲ4ಮತ್ತೆ ರಾಮೇಶನ ಅತ್ಯಂತ ಭಕ್ತಳಉತ್ತಮ ಕಥೆಯ ಎನಗ್ಹೇಳಕೋಲಉತ್ತಮ ಕಥೆಯ ಎನಗ್ಹೇಳ ಹರುಷದಿಬಿತ್ತಿ ಬೆಳೆದೇವಧರೆಮ್ಯಾಲೆಕೋಲ5
--------------
ಗಲಗಲಿಅವ್ವನವರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಹಂಗಿಗನಾಗಬೇಡಾ | ಏ ಮನವೇ | ಹಂಗಿಗನಾಗಬೇಡಾ |ಆ ಯಮನಿಗೆ ಹಂಗಿಗನಾಗಬೇಡಾಪಕಾಮಕ್ರೋಧವು ಲೋಭಮದ ಮಾತ್ಸರ್ಯಗಳೆಂಬ |ವ್ಯಾಮೋಹಾದಿಗಳಿಗೆ ಸಿಲುಕಿ ಸುಮ್ಮನೆ ನೀನು1ಪರದಾರಾಂಶದಿ ಮನ | ವಿರಿಸಿ ಕಾಮಾದಿ ವ್ಯರ್ಥ |ಗುರುಹಿರಿಯರಜರೆ| ದಾಡಿ ಗರ್ವದಿ ನೀನು2ಸತಿಸುತರೆಂದೆಂಬ | ಮೋಹಪಾಶಕೆ ಸಿಕ್ಕಿ |ಅತಿಥಿ ಸತ್ಕಾರ ಮಾಡದೆ | ಲೋಭತ್ವದಿ ನೀನು3ಧರಣಿ ದಾನಾದಿಗಳ | ತನು ಶಕ್ತಿ ಮದದಿಂದ |ಪರರಿಗೆ ಕೇಡನ್ನೆ ಬಗೆವ ಮತ್ಸರದಿ ನೀ4ನೆಂಟರಿಷ್ಟರು ಸರ್ವ | ಮಂದಿ ಸೇವಕರೆಂದು |ತುಂಟತನದಿ ಗೋ|ವಿಂದನಾ ಪಾದಮರತು ನೀ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಣ್ಣು ಕೊಂಬುವ ಬನ್ನಿರಿ ಹರಿದಾಸರುಹಣ್ಣು ಕೊಂಬುವ ಬನ್ನಿರಿ ಪ.ಚೆನ್ನ ಬಾಲಕೃಷ್ಣನೆಂಬಕನ್ನೆಗೊನೆಬಾಳೆಹಣ್ಣು ಅಪಸುತ್ತೇಳು ಲೋಕದಿಸುರರು ಬಿತ್ತಿದ ಹಣ್ಣುಭಕ್ತರ ಬಾಯೊಳು ನೆನೆವ ಹಣ್ಣುಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆನಿತ್ಯಮಾಧವನೆಂಬ ಅಚ್ಚಮಾವಿನ ಹಣ್ಣು1ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣುನಿಜಮುನಿಗಳಿಗೆ ತೋರಿಸಿದ ಹಣ್ಣುತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣುಸುಜನಭಕ್ತರೆಲ್ಲಕೊಳ್ಳಬನ್ನಿರಿ ಹಣ್ಣು2ತುರವ ಕಾಯ್ದ ಹಣ್ಣು ಉರಗನ ತುಳಿದಾ ಹಣ್ಣುಕರೆದರೆ ಕಂಬದೊಳು ಓಯೆಂಬ ಹಣ್ಣುಮರುಗುವ ಧೃವನಿಗೆ ಪಟ್ಟಗಟ್ಟಿದ ಹಣ್ಣು
--------------
ಪುರಂದರದಾಸರು
ಹನುಮ - ಭೀಮ - ಮಧ್ವ ಮುನಿಯನೆನೆದು ಬದುಕಿರೊಅನುಮಾನಂಗಳಿಲ್ಲದಲೆ ಮನದಭೀಷ್ಟಂಗಳನೀವ ಪಪ್ರಾಣಿಗಳ ಪ್ರಾಣೋದ್ದಾರ ಪ್ರಾಣರಲ್ಲುತ್ತಮ ಮತ್ತೆಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕøಷ್ಟ ||ಕಾಣಿರೇನೋ ಕಾಯಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಕೊಟ್ಟು ಸಲಹುವ ಜಾಣಗುರುಮುಖ್ಯಪ್ರಾಣ1ಕಾಮಧೇನು ಚಿಂತಾಮಣಿ ಕಲ್ಪವೃಕ್ಷನಾದ ಸ್ವಾಮಿಪ್ರೇಮದಿಂದ ನೆನಯುವವರ ಭಾಗ್ಯಕ್ಕೆಣೆಯುಂಟೇ ? ||ಸಾಮಾನ್ಯವಲ್ಲವೊ ಈಗ ಮೋಕ್ಷಾದಿ ಸಂಪದದಾತಆ ಮಹಾ ಪರೋಕ್ಷಜ್ಞಾನ ದಾಢ್ರ್ಯ ಭಕುತಿ ಕೊಡುವ 2ಅವತಾರ ತ್ರಯಗಳಿಂದ ಶ್ರೀಹರಿಯ ಸೇವಿಸುವತವಕದಿ ಪೂಜಿಪ ಮಹಾಮಹಿಮೆಯುಳ್ಳವನು ||ಕವಿತೆವಾಕ್ಯವಲ್ಲವಿದು ಅವಿವೇಕವೆಂದೆಣಿಸಬೇಡಿಭವಬಂಧನ ಕಳೆದುಕಾವಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ಬಳಗಆನಂದತೀರ್ಥರೆ ನಮ್ಮ ಗತಿಗೋತ್ರರು ಪ.ತಾಯಿ ತಂದೆ ಹಸುಳೆಗಳಿಗೆ ರಸಾಯನುಣಿಸಿ ಸಾಕುವಂತೆಆಯಾಸವಿಲ್ಲದೆ ಸಂಜೀವನವ ತಂದುಗಾಯಗೊಂಡ ಕಪಿಗಣವಪ್ರಿಯದಿಂದ ಪೊರೆದ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಿ 1ಬಂಧು ಬಳಗದಂತೆ ಆಪದ್ಬಾಂಧವನಾಗಿ ಪಾರ್ಥರಿಗೆಬಂದ ಬಂದ ದುರಿತಗಳ ಪರಿಹರಿಸಿಅಂಧಕಜಾತರ ಕೊಂದುಅಂದೆ ಕೃಷ್ಣಾರ್ಪಣವೆಂದಾ ಯದುಕುಲೇಂದ್ರನಂಘ್ರಿಗಳೆ ಸಾಕ್ಷಿ ದ್ವಾಪರಾಂತ್ಯದಿ 2ಗತಿಗೋತ್ರರಂತೆ ಸಾಧುತತಿಗಳಿಗೆ ಸುಜ್ಞಾನವಿತ್ತುಮತಿಗೆಟ್ಟ ಇಪ್ಪತ್ತೊಂದು ಕುಭಾಷ್ಯಂಗಳಗತಿಗೆಡಿಸಿ ವೈಷ್ಣವರಿಗೆ ಸದ್ಗತಿಯ ತೋರಿದ ಪ್ರಸನ್ವೆಂಕಟಪತಿವ್ಯಾಸಾಂಘ್ರಿಗಳೆ ಸಾಕ್ಷಿ ಕಲಿಯುಗದಿ3
--------------
ಪ್ರಸನ್ನವೆಂಕಟದಾಸರು
ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು
ಹರಿಭಕುತಿ ಸುಖವು ಅನುಭವಿಗಲ್ಲದೆ ಮಿಕ್ಕ - |ನರಗುರಿಗಳದರ ಸ್ವಾದವ ಬಲ್ಲವೆ ? ಪ.ಎಸೆವ ತಂಗಿನಕಾಯ ಎತ್ತು ಮೆಲುಬಲ್ಲುದೆ ?ರಸಭರಿತ ಖರ್ಜೂರ ಕುರಿ ಮೆಲ್ಲಬಲ್ಲುದೆ ? ||ಹಸು ಕರೆದ ಪಾಲ ಸವಿಸುಖಿಗಳಿಗೆ ಅಲ್ಲದೆ |ಕಸದಿ ವಸಿಸುವ ಉಣ್ಣೆಗಳು ಬಲ್ಲವೆ ? 1ಸರಸಿಜದ ಪರಿಮಳವ ಮಧುಕರನು ಅರಿವಂತೆ |ನಿರುತ ಬಳಿಯೊಳಗಿರುವ ಕಷ್ಟಗಳು ಬಲ್ಲುವೆ ? |ಸರಸ ಪಂಚಾಮೃತವಶ್ವಾನ ತಾ ಬಲ್ಲುವೆ ? |ಹರಿಕಥಾ ಶ್ರವಣಸುಖ ಕತ್ತಯದು ಬಲ್ಲುದೆ ? 2ಅಂಧ ದೀಪದ ಬೆಳಕ ಮೂಢ ಮಾತಿನ ಸವಿಯ |ಮಂದ ಬದಿರನು ಹಾಡಕೇಳಿ ಸುಖಿಸುವರೆ ? ||ಅಂದ ಮುತ್ತಿನ ದಂಡೆ ಕಪಿಗಳಿಡಬಲ್ಲುವೆ ? |ಮಂದಮತಿ ಪುರಂದರವಿಠಲನನು ಬಲ್ಲನೆ ? 3
--------------
ಪುರಂದರದಾಸರು
ಹರಿಯೆ ಸರ್ವೋತ್ತಮ ಹರಿಯೆ ಪರದೈವತ |ಹರಿಯೆ ಸರ್ವಂ ವಿಷ್ಣುಮಯಂ ಜಗತು ಪ.ಹರಿಯಲ್ಲದನ್ಯತ್ರ ದೈವಗಳುಂಟೆಂದು |ಉರುಗನ ಮುಡಿಯನಾರಾದರೆತ್ತಲಿ ಅಪಜಗಂಗಳ ಪುಟ್ಟಿಸುವಬೊಮ್ಮ ನಿನ್ನ ಮಗ |ಜಗದ ಸಂಹಾರಕ ನಿನ್ನ ಮೊಮ್ಮಗನು ||ಜಗದ ಪಾವನೆ ಭಾಗೀರಥಿ ನಿನ್ನ ಮಗಳು |ಜಗದ ಜೀವನಮಾತೆ ನಿನ್ನರಸಿಯಲೆ ದೇವ 1ವಿಶ್ವತೋಮುಖ ನೀನೆ, ವಿಶ್ವತಶ್ಚಕ್ಷು ನೀನೆ |ವಿಶ್ವತೋಬಾಹುವಿಶ್ವ ಉದರ ನೀನೆ ||ವಿಶ್ವವ್ಯಾಪಾರ ವಿಶ್ವಸೂತ್ರಧಾರಕ ನೀನೆ |ವಿಶ್ವನಾಟಕ ವಿಶ್ವವಿಷ್ಣುವೇ ನಮೋ ನಮೋ 2ಆಗಮನಿಗಮ ಪೌರಾಣ ಶಾಸ್ತ್ರಂಗಳಿಗೆ |ಯೋಗಿಜನಕಗಮ್ಯಮೂರ್ತಿ ನೀನೆ ||ನಾಗಶಯನಸಿರಿ ಭೋಗಿಭೂಷಣವಿನುತ |ಭಾಗವತರ ಪ್ರಿಯ ಪುರಂದರವಿಠಲ 3
--------------
ಪುರಂದರದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು
ಹೇಳಲಾಗದು ತತ್ವ ಹೇಳಲಾಗದು ಜ್ಞಾನಖೂಳಮೂಳರಾದ ಕುಹಕಿಗಳಿಗೆಪನಾರುತಿಹ ತೊಗಲನು ಕಡಿದನಾಯಿ ಮುಖದ ಮುಂದೆದಾರವಟ್ಟದಲಿ ತುಪ್ಪವ ನೀಡಲು ಅರಿವುದೆಘೋರಸಂಸಾರ ವಿಷಗಟ್ಟಾಗಿ ಹಿಡಿದವಗೆಸಾರಬೋಧೆಯನರಿಯಲು ತಿಳಿಯುವುದೇ1ಗೊಜ್ಜಲ ತೃಣವನು ತಿಂಬ ಗಾರ್ಧಭನ ಮುಂದೆಸಜ್ಜಿಗೆಯ ತಂದಿಡಲಿಕೆ ಅದನರಿವುದೆಲಜ್ಜೆಯಹ ನಾನಾ ಮೋಹ ಪಾಶಲಿಪ್ಪರಿಗೆಸಜ್ಜನ ಶಾಸ್ತ್ರವನೊರೆಯಲದು ತಿಳಿವುದೇ2ದೊಡ್ಡಕ್ಕಚ್ಚನೆ ಕುಡಿವ ಗೊಡ್ಡೆಮ್ಮೆಯ ಮುಂದಕೆಲಡ್ಡುಗೆಯ ತಂದಿಡಲಿಕೆ ಅದನು ತಿಳಿವುದೇದಡ್ಡ ಬುದ್ಧಿಯು ಬಲಿತು ದೊಡ್ಡನಾದವಗೆದೊಡ್ಡ ಚಿದಾನಂದ ಬ್ರಹ್ಮವು ತಿಳಿವುದೇ3
--------------
ಚಿದಾನಂದ ಅವಧೂತರು