ಒಟ್ಟು 11458 ಕಡೆಗಳಲ್ಲಿ , 137 ದಾಸರು , 6242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿರುವೇನೋ ಮಾರುತಿ ಸುವ್ರತಿ ಎಲ್ಲಿರುವನೇನೋ ಮಾರುತಿ ಪ. ಎಲ್ಲಾ ಕಡೆಯಲ್ಲಿ ವ್ಯಾಪ್ತಿ ಯುಳ್ಳವ ಭಾರತೀಪತಿ ಅ.ಪ. ನಿತ್ಯ ರಾಮಪದೈಕಾಸಕ್ತಿ- ಚಿತ್ತನು ಸದಾ ಜಾಗರ್ತಿ ಧೂರ್ತರಿಪುದಲ್ಲಣ ಜೀ- ವೋತ್ತಮ ವಿಚಿತ್ರಗತಿ 1 ಪ್ರಾಣಸಮಾನ ಸಂಪ್ರೀತಿ ಜ್ಞಾನಪೂರ್ವಕ ಸದ್ಭಕ್ತಿ- ವಾನ ವಾನರೇಂದ್ರ ಸುಪ- ರ್ವಾಣಕುಲಚಕ್ರವರ್ತಿ 2 ಲಕ್ಷುಮಿನಾರಾಯಣನ ಪಕ್ಟ್ರೆಕಧೃತಿ ಸುಮತಿ ಅಕ್ಷೀಣ ತ್ರಾಣದ ನಿರ- ಪೇಕ್ಷ ಲಕ್ಷಣಮೂರುತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಿಹನು ದೇವನೆಂದೆಲ್ಲು ಜನ ನುಡಿವರು ಸಲ್ಲುವುದೆ ಆಲಿಸಲು ಬಲ್ಲಗೀ ನುಡಿಯು ಇಲ್ಲೆಂದು ನುಡಿವರ್ಗೆ ಬಲ್ಲನಿತು ಪೇಳುವೆನು ಪುಲ್ಲನಾಭನ ಚರಿತವಾ ಹಿತವಾ ಪ ಕಲ್ಲಾಗಿ ಬಿದ್ದಿಪ್ಪಹಲ್ಯೆ ತಾ ಬಲ್ಲಳು ಎಲ್ಲ ಜಗ ಪಾವನನ ಸುಳ್ಳೆನ್ನಬಹುದೇ ಅಲ್ಲೆಂದರೀ ನುಡಿಗೆ ಹೊಲ್ಲ ಜಗವ ತುಂಬುವನು ಕಲ್ಲು ಮುಳ್ಳನು ಉದರದಿ ಜವನಿ 1 ತೋರೆಲವೊ ಹರಿಯನೆಂದೊದರಾಡೆ ರಕ್ಕಸನು ಘೋರ ಕಂಭದಿ ತೋರೆ ಹಾರಿ ತಲ್ಹಣವು ಘೋರ ರೂಪವ ತಾಳಿ ನಾರಸಿಂಹಾಖ್ಯದಿ ಚೂರ ಮಾಡಿದವನÀನು ಪರನು 2 ಧsÉೀನಿಪರ ಮನದೊಳಗೆ ಸಾನುರಾಗದಿ ಹರಿಯು ಸ್ಥಾನಗೊಳಿಪನು ಮನಕೆ ಆನಂದವೀವಾ ದಾನವಾಂತಕ ಶ್ರೀ ನರಸಿಂಹವಿಠಲನು ಆನತರ ನೆರೆ ಪೊರೆವನು ಬಿಡನು 3
--------------
ನರಸಿಂಹವಿಠಲರು
ಎಲ್ಲೊ ಎಲ್ಲೊ ಎನ್ನ ಸಾಲವೆತ್ತದೊ | ನಿಲ್ಲೊ ನಿಲ್ಲೊ ನಿನ್ನ ಕಂಡ ಮ್ಯಾಲಕೆ ಬಿಡೆ ಪ ಮೀನ ನಡೆದ ಹೆಜ್ಜೆಗಳು ಕಾಣದಂತೆ ಪೋಗಿ ನಡಗಿದೆ | ಬೆಟ್ಟದಡಿಯ ಅಂದು ಒಡನೆ ಮಣ್ಣುಕಚ್ಚಿ ಬಾಯಿದೆರದು ಆ | ರ್ಭಟಿಸಿದರೆ ನಿನ್ನ ಪೋಗಗೊಡುವೆವೇನೊ 1 ಬಲು ಉದ್ದ ಬೆಳೆದರೆ ನ್ಯಾಯದಿ ಸೋಲಿಸಿ | ಹೆಗ್ಗಲಿದಾ ಗಿಡದ ಬೇರು ಕಡಿಸುವೆನೊ | ಕಲಕಾಲಾ ಉಪವಾಸ ಮಾಡಲು ನಮಗೇನು | ಕಳವು ಹಾದರದಲ್ಲಿ ನಿಸ್ಸೀಮ ಪುರುಷನೇ 2 ಮಾಣಿಯ ತೋರಿಸಿದರೆ ನಿನಗಾರುರಂಜೋರೋ | ಪಾಣಿಯೊಳಗೆ ಖಡ್ಗ ಇದ್ದರಂಜೆ | ಕಾಣಿ ಪಾದಿದ್ದರೆ ಹಿಂದೆ ಸುಮ್ಮನಿದ್ದೆ | ಇಂದು 3
--------------
ವಿಜಯದಾಸ
ಎಲ್ಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀಎಲ್ಲ್ಯಾಡಿ ಬಂದ್ಯೋ ಎನ್ನ ಕಣ್ಣಮುಂದಾಡದೆ ಪ ಆಲಯದೊಳಗೆ ನೀನಾಡದೆ ಚಿನಿ-ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕಬಾಲರೊಡನೆ ಕೂಡ್ಯಾಡದೆ ಮುದ್ದುಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ1 ಬಟ್ಟ್ಟಮುತ್ತಿನ ಬೊಗಸೆ ಕಂಗಳು ಪಣಿಯೊ-ಳಿಟ್ಟ ಕಸ್ತೂರಿ ತಿಲಕದಂದವುದಿಟ್ಟತನದಿ ಕೂಡ್ಯಾಡಲುಪುಟ್ಟ ಕೃಷ್ಣಯ್ಯ ನೀ ಎನ್ನ ಕಣ್ಣ ಮುಂದಾಡದೆ2 ಅಷ್ಟ ದಿಕ್ಕಲಿ ಅರಸಿ ಕಾಣದೆ ಬಹಳದೃಷ್ಟಿಗೆಟ್ಟೆನು ನಿನ್ನ ನೋಡದೆ ಇ-ನ್ನೆಷ್ಟು ಹೇಳಲಿ ಕೇಳಬಾರದೆ ರಂಗ-ವಿಠಲ ನೀ ಎನ್ನ ಕಣ್ಣ ಮುಂದಾಡದೆ3
--------------
ಶ್ರೀಪಾದರಾಜರು
ಎಲ್ಲ್ಯಾಡಿ ಬಂದ್ಯೋ ನೀ ಹೇಳಯ್ಯನಿಲ್ಲು ನಿಲ್ಲು ಗೋಪಾಲಕೃಷ್ಣಯ್ಯಾ ಪ ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿಹೊಸಪರಿ ಸುದ್ದಿಯು ಹುಟ್ಟಿದೆಪುಸಿಯಲ್ಲ ಈ ಮಾತು ಮುಟ್ಟಿದೆ ನಿನ್ನ ನಸುನಗೆ ಕೀರ್ತಿ ಹೆಚ್ಚಿದೆ1 ಬೆರಳ ಉಂಗುರವೆಲ್ಲಿ ಹೋಗಿದೆ ನಿನ್ನಕೊರಳ ಪದಕವೆಲ್ಲಿ ನೀಗಿದೆಸರಕೆಲ್ಲ ಅವಳಲ್ಲಿ ಸಾಗಿದೆ ಆತರುಣಿ ಮಹಿಮೆ ಹೀಂಗಾಗಿದೆ 2 ಕಳ್ಳತನವ ಹೀಗೆ ಮಾಡಿದೆ ನಿನ್ನಸುಳ್ಳು ಕಡೆಗೆ ನಾ ನೋಡಿದೆಎಲ್ಲರಿಗೂ ಠಕ್ಕು ಮಾಡಿದೆಚೆಲುವ ರಂಗವಿಠಲ ನಗೆಗೀಡಾದೆ 3
--------------
ಶ್ರೀಪಾದರಾಜರು
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಎಷ್ಟು ಪುಣ್ಯ ಮಾಡಿ ಇಲ್ಲಿ ಇಟ್ಟಿಗೆ ನೆಲಸಿತೋ ವಿಠ್ಠಲನ್ನ ಚರಣ ಶಿರದಿ ಮೆಟ್ಟಿಸಿ ಕೊಂಡಿತೋ ಪ. ಭಕ್ತನಾದ ಪುಂಡಲೀಕನ ಕರಕೆ ಸೋಕಿತೋ ಚಿತ್ತಧೃಡನು ಎಸೆಯೆ ರಂಗನ ಪಾದಕೆರಗಿತೋ 1 ಹರಿಯೆ ಎನ್ನ ಶಿರವ ಮೆಟ್ಟೆಂದ್ಹರಿಕೆ ಮಾಡಿತೋ ಪರಮ ಪುರುಷ ಬಂದು ನಿಲ್ಲೆ ಖ್ಯಾತಿ ಪೊಂದಿತೋ 2 ಪಾದ ಶಿರದಿ ಪೊತ್ತಿತೋ ಪಾದ ಇಲ್ಲಿ ಅಡಿಗಿಸಿಕೊಂಡಿತೋ 3 ಪಾದ ಸೋಕಿಸಿಕೊಂಡಿತೋ ಪಾದ ನನ್ನದೆಂದಿತೋ 4 ಯಮುನ ದಡದಿ ಸುಳಿದ ಪಾದಯತ್ನದಿ ಪೊಂದಿತೋ ಪಾದ ರಜವ ಧರಿಸಿತೋ 5 ಬಂಧ ಬಿಡಿಸುವಂಥ ಪದದಿ ಬಂಧಿಸಿಕೊಂಡಿತೋ ಪಾದ ಸೂಕ್ಷ್ಮದಿ ಪೊತ್ತಿತೋ 6 ಪಾದ ಘಳಿಗೆ ಬಿಡದಾಯ್ತೋ ಜಗದಲಿಟ್ಟಿಗೆ ನಿಲಯನೆಂಬೊ ಲಾಭ ಹೊಂದಿತೋ 7 ನಂದ ಕಂದ ಬಂದನೆಂದು ನಲಿದು ನಿಂತಿತೋ ಇಂದಿರೇಶ ಪೋಗದಿರೆಂದು ಇಲ್ಲೆ ಹಿಡಿದಿತೋ 8 ಪಾಪ ಕಳೆದು ಪಾವನ್ನದಲಿ ಮುಕ್ತಿ ಪೊಂದಿತೋ ಗೋಪಾಲಕೃಷ್ಣವಿಠ್ಠಲನ ಚರಣ ಸೇರಿತೋ9
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ ಪ ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು ಅ ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣವಿಷ ಸಮಾನವಾದ ಬಹಳ ವ್ಯಸನ ಮೆರವಣಿಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊಂಬ ರೋಗವಿಷಯದೊಳಗೆ ಕ್ಲೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ 1 ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು2 ಕುಸುಮ ಗಂಧಮಾಲೆ ಕಸ್ತೂರಿಯನು ಪೂಸಿಕೊಂಡುವಸ್ತ್ರ ಒಡವೆ ಇಟ್ಟು ಬಹಳ ಶಿಸ್ತು ನರಕಿಯೆನಿಸಿ ಮೆರೆವುದು3 ಕಾಯ ಸೌಖ್ಯದಿಆಯಾಸಪಟ್ಟು ಗಳಿಸಿದರ್ಥ ಹೇಯವೆನದೆ ಭೋಗಿಸುತ್ತಬಾಯ ಸವಿಯನುಂಡು ಕಡೆಗೆ ನಾಯ ಸಾವು ಸಾಯೋ ಬಾಳಿಗೆ 4 ಮನ್ನಿಸಿ ಗುರುಹಿರಿಯರುಕ್ತಿಯನ್ನು ಕೇಳದೆ ಕಿವುಡುಗೆಟ್ಟುಜೊನ್ನೆಯ ತುಪ್ಪ ಅನ್ನ ಒಲ್ಲದೆ ಎಲುವು ಮಾಂಸವನ್ನು ತಿಂಬಕುನ್ನಿಯಾದೆನಯ್ಯ ಕೃಷ್ಣ ನಿನ್ನ ಮಾಯದೊಳು ಸಿಲ್ಕಿದಎನ್ನನುದ್ಧರಿಸೊ ಸುಪ್ರಸನ್ನ ಆದಿಕೇಶವ5
--------------
ಕನಕದಾಸ
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಎಷ್ಟು ಸುಖವ ಕೃಷ್ಣನ ನೋಡಿನೋಡಿಸುಖಿಸುವ ಜನರು ಎಷ್ಷು ಎಷ್ಟು ಭಾಗ್ಯದಿಂದ ತುಷ್ಟರು ಉತ್ಕøಷ್ಟರಿವÀರು ಪ. ಬಾಜಾರದೊಳಗೆಲ್ಲ ತೇಜಿ ಆನೆಯ ಸಾಲುಕಾಜಿನ ಕಂಬ ಕಿಡಕಿ ಕಮಲಾಕ್ಷಿಕಾಜಿನ ಕಂಬ ಕಿಡಕಿ ಮಹಲೊಳು ಜೂಜಾಡುವರು ಕಡೆಯಿಲ್ಲ 1 ನೀಟಾದ ಬೀದೀಲಿ ಥಾಟಾದ ಮನೆಗಳುಮಾಟಾದ ಪಗಡಿ ಚದುರಂಗ ಕಮಲಾಕ್ಷಿಮಾಟಾದ ಪಗಡಿ ಚದುರಂಗ ಜೂಜಿನ ಆಟ ಆಡೋರು ಕಡೆಯಿಲ್ಲ2 ಹಿಂಡು ಕಡೆಯಿಲ್ಲ 3 ಲಿಂಬೆ ಪೊಪ್ಪುಳಿ ಸೀರೆಯನ್ನುಟ್ಟು ತುಂಬ ವಸ್ತ್ರಗಳಿಟ್ಟುಕಂಬು ಕಂದರನ ಪುರದೊಳು ಕಮಲಾಕ್ಷಿಕಂಬುಕಂದರನ ಪುರದ ಬೀದಿಯೊಳಗೆಗೊಂಬೆ ಯಾಡುವರು ಕಡೆಯಿಲ್ಲ 4 ಮ್ಯಾಲಿನ ಬೀದೀಲಿ ಬಾಲಕಿಯರಿಂದೆಷ್ಟುಶ್ರೀಲೋಲ ರಾಮೇಶನ ಪುರದೊಳಗೆ ಕಮಲಾಕ್ಷಿಶ್ರೀಲೋಲ ರಾಮೇಶನ ಪುರದ ಬೀದಿಯೊಳಗೆ ಗೋಲಿಯಾಡುವರು ಕಡೆಯಿಲ್ಲ 5
--------------
ಗಲಗಲಿಅವ್ವನವರು
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಎಷ್ಟು ಹೇಳಲಿ ವೆಂಕಟಗಿರಿಯ ದೃಷ್ಟಿಗೆ ಬಹು ಸಿರಿಯ ಬೆಟ್ಟವನೆ ಮನಸಿಟ್ಟೇರಲು ಬೇಡಿದ ಇಷ್ಟಾರ್ಥಗಳ ಈಡಾಡುವ ದೊರೆಯ ಪ ಚಿತ್ರ ವಿಚಿತ್ರದ ಮಹಾದ್ವಾರ ಚಿನ್ನದ ಗೋಪುರ ಸ್ವಚ್ಛವಾದ ಸ್ವಾಮಿ ಪುಷ್ಕರಣಿ ತೀರ ಸುತ್ತಲು ಪ್ರಾಕಾರ ಹೆಚ್ಚಿನ ತೀವ್ರತವೆ ಮನೋಹರ ಮಾರುವ ವಿಸ್ತಾರ ಚಿತ್ತಜನಯ್ಯನ ಶೈಲವೆ ದೂರದಿಂ- ದ್ಹತ್ತಿ ಬರುವುದೀತನ ಪರಿವಾರ 1 ಕಟ್ಟಿದ ಉಡಿದಾರ ಉಟ್ಟಿದ್ದ ನಿರಿಜರಪೀತಾಂಬರ ಕೌಂಸ್ತುಭ ಮಣಿಹಾರ ಗಟ್ಟಿ ಕರಕಂಕಣ ಕುಂಡಲಧರ ಚತುರ್ಭುಜದಲಂಕಾರ ವಕ್ಷಸ್ಥಳದಲ್ಲಿ ಹೊಂದಿದ ಶ್ರೀ ಮಹಾ- ಲಕ್ಷ್ಮಿದೇವಿಯರಿಂದೊಲಿವ ಶೃಂಗಾರ 2 ಆಕಾಶರಾಜನ ಕಿರೀಟ ಚಿತ್ರವು ಬಹುಮಾಟ ಹಾಕಿದ್ದ ಹರಿ ಕಡೆಗಣ್ಣಿನ ನೋಟ ಭಕ್ತರ ಕುಣಿದಾಟ ಭವ ಪಡಿಪಾಟ ಬಿಡಿಸುವ ಯಮಕಾಟ ಕೋಟಿ ಜನರ ಓಡ್ಯಾಟವೆ ನಮ್ಮ ಕಿ- ರೀಟಿಯ ಸಖ ಕೇಶವನ ಮಂದಿರದೊಳ್ 3 ತಪ್ಪುಗಾಣಿಕೆಯ ಬೇಡುವ ಸರ್ಪ ಶೈಲದ ತಿಮ್ಮಪ್ಪ ಕಪ್ಪವ ಕಾಸು ಕವಡೆ ಮುಡುಪು ಹಾಕದೆ ತಾನೊಪ್ಪ ಜಪ್ಪಿಸಿ ನೋಡುವ ಜನರ ತಪ್ಪ ಹುಡಿಕ್ಯಾಡುತಲಿಪ್ಪ ಅಪ್ಪ ಮಹಿಮಾನಂತ ಮೂರುತಿ ತಾ- ನೊಪ್ಪಿದರೊಲಿದು ಕೊಡುವ ಸಾರೂಪ್ಯ 4 ದೇಶದೇಶದೊಳು ಈತನ ವಾರುತೆಯು ತುಂಬಿದ ಕೀರುತಿಯು ಆಸೆಯ ದೈವ ಈ ಮೂರುತಿಯು ಫಲ್ಗುಣ ಸಾರಥಿಯು ಲೇಸಾಗಿ ಜನರ ನೋಡುವ ರತಿಯು ಕರ್ಪುರದಾರತಿಯು ವಾಸವಾಗಿರುವ ಈ ಶೇಷಾದ್ರಿಯಲಿ ಭೀ- ಮೇಶ ಕೃಷ್ಣ ಶ್ರೀನಿವಾಸ ಕೃಪಾಳು 5
--------------
ಹರಪನಹಳ್ಳಿಭೀಮವ್ವ
ಎಷ್ಟೆಂದು ಸಾರುವೆ ನಿಮ್ಮ ನಾಮ ಮಹಿಮಾ| ಶ್ರೀ ಪರಬೊಮ್ಮಾ ಶಿಷ್ಟ ಜನರ ಸಂಭ್ರಮಾ ಪ ಹರಿಹರಿಯಂದೊದರೆ ಮರೆದರಿದೊಮ್ಮಾ| ಹರದ್ಹರ ದೋಹುದುಪಾಪ ಪುಣ್ಯವು ಮೋಪಾ| ತಿರು ತಿರುಗಿ ಯಾತ್ರೆಗಳಾ ಮಾಡಿದ ಫಲಾ| ಪರತರಾಸುಖ ನೀವುದು ರಕ್ಷಿಸುವುದು 1 ರಮ ರಾಮಯಂದು ಕಾಮಿಕಾಮಿ ಅಂದು| ನಾಮಾ ನೇಮದಿ ನುಡಿಯೆ ಗಿಳಿಯ ಕರಿಯೆ| ಪ್ರೇಮ ಪ್ರೇಮಕರ ತಂದೆ ಗತಿ ನೀಡದೇ| ಸೋಮ ಸೋಮಾರಿ ಕುಲೇಶ ಕೋಟಿ ಪ್ರಕಾಶಾ 2 ಪರಿ ಪರೀವದಾನಂದಾ| ಕರೆ ಕರೆದುಂಡು ನಲಿದರು ನಾರದಾದ್ಯರು| ತರಿಸಿ ತಾರಿಸುತಿಹರು ಸಾಧು ಸಂತರು| ಗುರುವರ ಮಹಿಪತಿ ಜನು ಧನ್ಯನಾದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು