ಒಟ್ಟು 1314 ಕಡೆಗಳಲ್ಲಿ , 102 ದಾಸರು , 1060 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುಮ್ಮನೆ ಹೋಗುತಾದಲ್ಲೋ ಇಷ್ಟಾರ್ಥಪಡಿದೇ ಸುಮ್ಮನೆ ಹೋಗುತಾದಲ್ಲೋ ಪ ಸುಮ್ಮನೆ ಹೋಗುತಾದೆ ಹೆಮ್ಮಾರಿಗೀಡಾಗಿ ಮರ್ಮವರಿತು ಪರಬ್ರಹ್ಮನ ಕೂಡದೆ ಅ.ಪ ಎಷ್ಟೋ ಸುಕೃತವಡೆದು ಈ ನರಜನ್ಮ ತೊಟ್ಟು ಸೃಷ್ಟಿಗೆ ಇಳಿದು ಹುಟ್ಟಿ ಬಂದಂಥ ಕಾರ್ಯ ಬಿಟ್ಟು ಮರವೆಗೂಡಿ ಕೆಟ್ಟು ಹೋಗ್ಯಾದೋ ವಯ ಕೃಷ್ಣಾರ್ಪಣೆನದೆ ಸುಟ್ಟು 1 ವಯವೆಂಬ ಧನ ಪಡೆದು ಈ ಮಹದನು ಭವದ ಸಂತೆಗೆ ಇಳಿದು ಭವದ ಜಯೆಂಬ ಅನುಭವದ ವ್ಯಾಪಾರ ಮಾಡಿ ಭವಹರನ ಕಾಣದೆ ಜವನಗೀಡಾಗಿ ತಾನು 2 ಅರಿವಿನಾಲಯ ಪೊಕ್ಕು ಸಂಸಾರವೆಂಬ ಮರೆವಿನ ಬಲೆಯೊಳ್ ಸಿಕ್ಕು ಪರಮಪುರುಷ ಸಿರಿಯರಸ ಶ್ರೀರಾಮನ ಚರಣಕಮಲಕ್ಕೆ ಸಲ್ವ ವರಮೋಕ್ಷ ಪಡೆಯದೆ ಲ
--------------
ರಾಮದಾಸರು
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸುಳಾದಿ ತಾಳ-ಝಂಪೆ ನೋಡುವರೆ ನೀರದಶ್ಯಾಮಸುಂದರ ಮೂರ್ತಿ ಪಾಡುವರ ಪರಮಪಾವನ್ನ ಕೀರ್ತಿ ಕೂಡುವರೆ ಕೇವಲಾನಂದ ಚಿನ್ಮಯಗಾತ್ರ ನೀಡುವರೆ ನಿಖಿಳಲೋಕೈಕಪಾತ್ರ ನೋಡಿ ನಮಿಸುವರುಂಟು ಪಾಡಿಹಿಗ್ಗುವರೂಟ ಕೂಡಿ ಸುಖಿಸುವರುಂಟು ನೀಡಿ ನಲಿವವರುಂಟು ನೋಡಿಸುತ ಪಾಡಿಸುತ ಕೂಡಿಸುತ ಬೇಡಿಸುತ ನಾಡದೈವಂಗಳ ಕೊಂಡಾಡಿಸದಲೆ ಬೇಡಿದಿಷ್ಟವ ಕೊಡುತ ಶ್ರೀದವಿಠಲ ದಯ - ಮಾಡಿ ನಮ್ಮನು ಪೊರೆವ ರೂಢಿಗೊಡೆಯ ನಾಡದೈವಂಗಳ ಕೊಂಡಾಡಿಸದಲೆ 1 ತಾಳ-ಮಟ್ಟ ಸಕಲ ಶ್ರುತಿನಿಕರಸಾರಹೋ ಶುಕಮಹಾಮುನೀಂದ್ರ ಸನ್ನುತ ಪ್ರಕಟ ಮಾಡಲ್ಯಾಕೆ ನಿನ್ನನು ಪರಮಪುರುಷ ಪ್ರಕಟಮಾಡಲ್ಯಾಕೆ ನಿನ್ನನು ಭಕ್ತವತ್ಸಲನೆಂಬೆನಲ್ಲದೆ ಮುಕುತವಂದ್ಯ ಶ್ರೀದವಿಠಲ ಯುಕುತಾಯುಕುತವೊಂದನರಿಯದೆ ಪ್ರಕಟಮಾಡಲ್ಯಾಕೆ ನಿನ್ನನು 2 ತಾಳ-ತ್ರಿವಿಡಿ ಆಯನುಭವ ಭಯ ಲಯವರ್ಜಿತ ನಯನೋತ್ಸಹಕಾರಕ ತಾರಕ ಜಯಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾÀಟ ಸಯವೇ ಸೈ ಶ್ರೀದವಿಠಲ ನಿ ನ್ನಯ ಚರಣಕೆ ನಮಿಸುವೆ ನಮಿಸುವೆ ಜಯ ಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾಟ 3 ತಾಳ-ಅಟ ಬಾರೋ ಬಾರೋ ಭವದೂರ ದೀನಜನ ಭಾರ ನಿನ್ನದಯ್ಯಾ ಅಯ್ಯಯ್ಯಾ ಸಾರಿದೆನೊ ನಾ ನಿನ್ನ ಸಾರಿದೆನೊ ನಿನ್ನ 4 ತಾಳ-ಆದಿ ಶ್ರೀರಮಣ ಶ್ರೀದವಿಠಲ ಸಂ - ಚಾರು ಚರಣಗಳ ಸಾರಿದೆನೊ ನಿನ್ನ ಶಿರಿಗುರವಿತ್ತೆ ಪರಮನ ಪೆತ್ತೆ ಗಿರಿಜೇಶಗೆ ನಿನ್ನ ಮೈ ಇತ್ತೆ ಶರಣಾಗತವತ್ಸಲ ಕರುಣಾಕರ ಶ್ರೀದವಿಠಲ ಸರಿಬಂದರೆ ಸಾಕುವದೆಮ್ಮನು ಶರಣಾಗತವತ್ಸಲ 5 ಜತೆ ಸೋಲು ಶ್ರೀದವಿಠಲ ಸೋಲು ಗೆಲುವು ನಿನ್ನ
--------------
ಶ್ರೀದವಿಠಲರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸೂಳೆವೆಂಗಳ ನಂಬಬೇಡಅವರ ಖೇಳಮೇಳವ ಬಿಡೋ ಮೂಢಬಲು ಜಾಲಗಾತಿಯರ ಬಲೆಗೆ ಸಿಕ್ಕದಿರುಯಮನಾಳೆ ಮುಡಿಸುವನೆ ಬಿಡುಬಿಡುಗಾಡ ಪ ಸುರತಸುಖವ ತೋರಿಸುವರುಮನೆಯೊಳಿರುವ ಧನವ ತರಿಸುವರುಪರಪುರುಷನಿದಿರು ಮಾಡುವರುಧನ ಬರಿದಾಗೆ ತಪ್ಪು ಹೊರಿಸುವರುಕಡೆಗೆ ತಿರಿದು ತಾರಂದು ಕೈಯಲಿ ತೂತುಗರಟವಕರೆದು ಕೊಡುವರು ಬೈವರು ದೂರುವರು1 ಗುರುಹಿರಿಯರ ತೊರೆಸುವರುಮನೆಯೊಳಿರುವ ಮಕ್ಕಳ ಮರಸುವರುಧನ ಬರುವತನಕ ನೋಡುವರುಬಾರದಿರೆ ಛಿ ಹೋಗೆಂದು ದೂಡುವರು ಗಂಧಪರಿಮಳ ತಿಲಕ ತಾಂಬೂಲ ಕ್ರಮುಕದೊಳುಮರುಳು ಮದ್ದಿಕ್ಕಿ ಕೈವಶವ ಮಾಡುವರು2 ಹೆಂಡತಿಯನು ತೊರಸುವರುಕಂಡ ಕಂಡ ಪುರುಷರ ಕೂಡುವರುಮಂಡೆಗೆ ಮದ್ದನೂಡುವರು ಕಡೆಗೆಭಂಡಾಟವ ಮಾಡುವರು...........(ಅಸಮಗ್ರ)
--------------
ಕೆಳದಿ ವೆಂಕಣ್ಣ ಕವಿ
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ ಅ- | ಪಾರ ಜನುಮಕ್ಕೆ ನೀನೆ ದೈವವೆಂದು ಪ ಶೂನ್ಯಜ್ಞನು ನಾನು ಅನ್ಯಾಥಾ ಗತಿ ಅರಿಯೆ | ಅನ್ಯರಲ್ಲಿಗೆ ಕೊಡದೆ ಧನ್ಯನ ಮಾಡೊ ಬಿಡದೆ 1 ಕಲ್ಪತರುವೆ ಎಂದು ವಪ್ಪದಿಂದಲಿ ಬಂದೆ | ಆಲ್ಪರಿಯದಂತೆ ನಾಗತಲ್ಪನೆ ಫಲವೀಯೋ 2 ವರುಷಾವರುಷ ಹೀಗೆ ದರುಶನಕೊಡು ಎನಗೆ | ಹರುಷವಾಗಲಿ ಪರಮಪುರುಷ ವಿಜಯವಿಠ್ಠಲಾ 3
--------------
ವಿಜಯದಾಸ
ಸೇವೇ ಶ್ರೀರಮಣಂ ಸದಾ ಸೇವಕಾರ್ತಿಹರಣಂ ಪ ಪಾವನ ವಾಘ್ರಾಚಲವಿಹರಣಂ ಅ.ಪ ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿಪತ್ರಂ ಖಂಡಪರಶುಕೃತಸನ್ನುತಿಪಾತ್ರಂ ಚಂಡಕಿರಣಶತಸನ್ನಿಭಗಾತ್ರಂ7 1 ಕುಲಿಶಧರಾತ್ಮಜ ಮಿತ್ರಂ ಸುಲಲಿತ ಕರಧೃತ ಗೋತ್ರಂ ಕಲಿತರಥಾಂಗಧರಾಸಿತನುತ್ರಂ ಕಲಿಮಲಖಂಡನ ನಿಜಚಾರಿತ್ರಂ2 ಭಾವಿತಜನ ಮಂದಾರಂ ಭಾವಜಜನಕಮುದಾರಂ ಸೇವಕರಕ್ಷಣ ಧೃತಶರೀರಂ ದೇವಸಮೂಹಾಕಲಿತ ವಿಹಾರಂ3 ಶಂಕರಹೃದಯಧ್ಯೇಯಂ ಕಿಂಕರಜನ ಸಮುದಾಯಂ ನಿಜನಾಮಧೇಯ 4 ಪರಮಪುರುಷಮನವಂದ್ಯಂ ಸರಸಗುಣಾಕರಮಾದ್ಯಂ ವರದವಿಠಲಮಖಿಲಾಗಮಬೋಧ್ಯಂ 5
--------------
ವೆಂಕಟವರದಾರ್ಯರು
ಸೇವೇ ಶ್ರೀರಮಣಂ-ಸದಾ-ಸೇವಕಾರ್ತಿಹರಣಂ ಪ ಪಾವಕ ಶತರುಚಿ ರುಚಿರಾಭರಣಂ ಪಾವನವ್ಯಾಘ್ರಾಚಲವಿಹರಣಂ ಅ.ಪ. ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿ ಪತ್ರಂ ಶತ ಸನ್ನಿಭಗಾತ್ರಂ1 ಕುಲಿಶಧರಾತ್ಮಜಮಿತ್ರಂ-ಸುಲಲಿತ ಕರಧೃತ ಗೋತ್ರಂ ನಿಜ ಚಾರಿತ್ರಂ2 ಭಾವಿತ ಜನ ಮಂದಾರಂ-ಭಾವಜ-ಜನಕ ಮುದಾರಂ ಸಮೂಹಾಕಲಿತ ವಿಹಾರಂ3 ಶಂಕರ ಹೃದಯಧ್ಯೇಯಂ ಕಿಂಕರ ಜನ ಸಮುದಾಯಂ ನಿಜನಾಮಧೇಯಂ 4 ಪರಮ ಪುರುಷಮನವದ್ಯಂ ಸರಸಗುಣಾಕರ ಮಾದ್ಯಂ ವಿಠಲ ಮಖಿಳಾಗಮ ಬೋಧ್ಯಂ 5
--------------
ಸರಗೂರು ವೆಂಕಟವರದಾರ್ಯರು
ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು | ಇಂದೆನ್ನ ಜನುಮ ಸಫಲ | ಹಿಂದೆ ಅನಂತೇಶನೆಂದೆಂಬ ನಾಮದಲಿ | ಕಂಬು | ಕಂದರದ | ತಿಮ್ಮನ ಪ ಮಕರ ಕುಂಡಲಧಾರ | ಮಕ್ಕಳಾ ಮಣಿಸು ಕಾಮದಾ | ಅಕಳಂಕ ತುಲಸಿ ಸರ | ಕಮಲ ಅಕುಟಿಲ ಹೃದಯಮಂದಿರ | ಸಕಲಕಾಲದಲಿ ನಿಜ | ಭಕುತರಿಗೆ ಒಲಿದಿಪ್ಪ | ಅಖಿಳ ಲೋಕಾಧೀಶ ಮುಕುತಾರ್ಥ ಮುರವೈರಿ1 ಕರ ಮುಂಗೈಯ ಕಡಗ ಕಂಕಣ ಬಾಹು ಭುಜಕೀರ್ತಿ | ಮುಂಗೈಯ ಫಣಿಯ ತಿಲಕಾ | ಬಂಗಾರದಂಬರ ಭವದೂರಾ ಪದದಲ್ಲಿ | ಪೊಂಗೆಜ್ಜೆ ಸರ್ವಾಭರಣದಿಂದ ಒಪ್ಪುವಾ 2 ಪಾಂಡೆ ದೇಶವಾಸಾ ಪಾಂಡವರ ಸಂರಕ್ಷಕ | ಚಂಡ ಪ್ರಚಂಡ ಮಹಿಮಾ | ಗಂಡುಗಲಿಗಳ ಗಂಡಾ | ಕೊಂಡಾಡಿದವರಿಗೆ ತಂಡ | ತಂಡದ ವರವೀವಾ | ಉದ್ದಂಡ ವಿಜಯವಿಠ್ಠಲ| ಅಂಡಜಗಮನ ಕೃಷ್ಣಾ ತಿಮ್ಮಾ3
--------------
ವಿಜಯದಾಸ
ಸ್ಥಿರ ನೀಡೆನ್ನ್ವದನಾಬ್ಜದಿ ಪರಮ ಪುರುಷ ನಿನ್ನ ಸ್ಮರಣೆ ಪ ಸೌಖ್ಯ ಸುಭೋಗದಿರಲಿ ಬೇನಿಯಿಂದ ಒರಲುತಿರಲಿ ತ್ರಾಣಗುಂದಿ ತೊಳಲುತಿರಲಿ ದಾನವಾಂತಕ ನಿನ್ನ ಧ್ಯಾನ 1 ಭೂಮಿಪರು ಸನ್ಮಾನ ಕೊಡಲಿ ಪಾಮರೆಂದು ಒದೆದು ನೂಕಲಿ ಭೂಮಿಜನರಪಹಾಸ್ಯ ಗೈಯಲಿ ಸ್ವಾಮಿ ನಿಮ್ಮ ಭಜನಾನಂದ 2 ಚಿಂತೆಯಿರಲಿ ಶ್ರೀಮಂತಿಕಿರಲಿ ಸಂತಸೆಂಬುದು ಸಿಗದ್ಹೋಗಲಿ ಅಂತಕಾರಿ ಶ್ರೀರಾಮ ನಿನ್ನ ಚಿಂತನೆ ಎನ್ನ ಅಂತ್ಯಕಾಲದಿ 3
--------------
ರಾಮದಾಸರು
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು