ಒಟ್ಟು 1686 ಕಡೆಗಳಲ್ಲಿ , 112 ದಾಸರು , 1218 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿ ಮಾನವ ಭ್ರಾಂತಿಸುಖವ ಪ. ನಂಬಲಾಗದು ಮಣ್ಣಬೊಂಬೆಯಂದದ ದೇಹ ಡಂಭ ಮೋಹಗಳಿಂದ ಮದಿಸುತ ಹಂಬಲಕ್ಕೀಡಾಗುವಂತಿದ ಅ.ಪ. ನೀರಮೇಲಣಗುಳ್ಳೆ ತೋರಿಹಾರುವ ಬಗೆ ಮಾರನಾಟಿದೊಳಾಡುತ ನಲಿಯುತಲಿಕೆ ಸಾರಿಬರೆ ತನಗಪಮೃತ್ಯುಕಾಲವು ಮೀರಿದುಬ್ಬುಸವಾಂತು ಮಿಡುಹುತ ಬೋರಿಡುತ ಬೊಬ್ಬರಿಸಿ ತರಳರ ಸಾರಿಕೂಗುವ ಕಾಯಧಿರವನು 1 ನಾನು ನನ್ನದಿದೆಂದಭಿಮಾನದಿಂ ಮತಿಗೆಟ್ಟು ಜ್ಞಾನವಿಲ್ಲದೆ ಭುವಿಯೊಳ್ ದೀನನಾಗಿ ನಾನಾಪರಿಯಿಂ ಸೊರಗಿ ನರಳುತಿಹ ನೀ ನಿಜವೆಂದು ನಂಬದೆ ಜ್ಞಾನ ಲಾಭದಿ ಮನುಜನೆನ್ನಿಸೆ 2 ಕಾಮಕ್ರೋಧವ ಬಿಟ್ಟು ರಾಮನೊಳ್ ಮನವಿಟ್ಟು ತಾಮಸಬುದ್ಧಿಯನೀಡಾಡುತೆ ಮತ್ತೆ ಶಮದಮಾದಿಗಳನಭ್ಯಸಿಸುತೆ ಕ್ಷಮೆಯನಾಶ್ರಯಿಸುತೆ ಸುಖದುಃಖದೊಳ್ ಕಮಲನಯನ ಶೇಷಾದ್ರಿನಾಥನ | ವಿಮಲ ಪದದೊಳೈಕ್ಯನಾಗಲು ಅಮಭಕ್ತಿಯೆ ಮುಖ್ಯ ಸಾಧನ ನಮಗೆ ಈ ಭ್ರಾಂತಿ ಸಲ್ಲದು 3
--------------
ನಂಜನಗೂಡು ತಿರುಮಲಾಂಬಾ
ಲೋಕನೀತಿಯ ಪದಗಳು ಚರಣಕಮಲ ಭಜಿಸೋ ಗೋಪಾಲಕೃಷ್ಣನ ಪ ತರುಣಿಯರ ಮನವನು ಮರುಳುಗೊಳಿಸಿದ ಪರಮ ಸುಂದರನ ಧರಿಯೊಳಗೆ ಭಾಸ್ಕರಪುರ ಸುಮಂದಿರನೆಂದು ಕರೆಸುವನ ಕರಿರಾಜವರದನ ಅ.ಪ ಕ್ಷೋಣೆ ಗೀರ್ವಾಣರಿಂದಲಿ ಪೂಜೆಗೊಂಬುವನಾ ಮಾನಸದಿ ತನ್ನನು ಧೇನಿಪರ ಸುರಧೇನು ಎನಿಸುವನಾ ಗಾನವನು ಕೇಳುವ ಧೇನು ವತ್ಸಗಳಿಂದ ಶೋಭಿತನಾ ವೇಣುಗೋಪಾಲನ 1 ವಂದನೆಯ ಮಾಳ್ಪರ ಬಂಧ ಬಿಡಿಶ್ಯಾನಂದ ನೀಡುವನಾ ಮಂದರದಿ ಗಣಪತಿ ಗಂಧವಾಹನರಿಂದ ವಂದಿತನಾ ಮಂದಜಾಸನ ಮುಖ್ಯ ಸುರಗಣದಿಂದ ಸೇವಿತನಾ ಸಿಂದೂರವರದನ 2 ಕೃಷ್ಣಾ ಅಷ್ಟಮಿಯ ಉತ್ಸವ ಮಾಳ್ಪ ಭಕುತರನಾ ಸೃಷ್ಟೀಶನಿವನೆಂದರಿಂದ ಮಹಿಮೆಯ ಪಾಡಿಪೊಗಳುವನಾ ಕಷ್ಟವನು ಪರಿಹರಿಸ್ಯವರ ಸಕಲಾಭೀಷ್ಠಗರಿಯುವನಾ ಪರಮೇಷ್ಠಿ ಜನಕನ 3 ಗರಿಯೆ ಗೋಗಳನಾ ಗಿರಿಯ ಧರಿಸಿದನಾ ಇದ ಕೃಷ್ಣನ್ನ ಪೂಜಿಸಲು ಒಲಿದನ 4 ಶರಣಾಗತ ಜನರ ಪೊರೆಯಲು ಬಂದುನಿಂತಿಹನಾ ಕಾ ರ್ಪರ ಕ್ಷೇತ್ರದಿ ಮೆರಿವ ತರುಪಿಪ್ಪಲ ಸುಮಂದಿರನ ಸುರವಿನುತ ಸಿರಿನರಹರಿಯ ರೂಪಾತ್ಮಕನು ಎನಿಸುವನು ತುರುಪಾಲ ಕೃಷ್ಣನ 5
--------------
ಕಾರ್ಪರ ನರಹರಿದಾಸರು
ವದನದಲಿ ಮನವೇ ನೆನಿನಾಮ ಶ್ರಿಹರಿಯಾ | ಸದಮಲದಲಿ ಮರೆಯದೆ ಬಾವದಲಿ ಪ ದಾವನು ದಾಸರ ದಾಸರ ಪದರಾ | ಜೀವ ಯುಗಳ ದರುಶನದಲಿ | ತೀವಿಕೊಂಡಿಹ ಬಹುಜನ್ಮದು ಷ್ಕøತ | ಲಾವಡಗುತಿಹವು ನಿಮಿಷದಲಿ 1 ನಾಮದ ಮಹಿಮೆಯ ತಿಳಿಯಲು ಅರಸಲು | ಅಮಹಾನಿಗಮಾಗಮದಲಿ | ವ್ಯೋಮ ಕೇಶನಾರದಾಹನುಮರೆ ಬಲ್ಲ | ನಾಮದ ಸುಖವೆಂತೋ ಭುವನದಲಿ2 ಸರ್ವಧರ್ಮಾನ್ ಪರಿತ್ಯಜ್ಯಂಬ ವಾಕ್ಯವಾ | ಅರ್ವವ ಹಿಡದು ತ್ರಿಕರ್ಣದಲಿ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯ | ಮೆರ್ಪಪಾದುಕ ವಿಟ್ಟು ಹೃದಯದಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಂದನೆಯು ವಂದನೆಯು ವಂದನೆಗಳು ನಂದಕುಮಾರ ಗೋವಿಂದನ ಚರಣಕೆ ಪ ವಂದನೆ ಇಂದಿನ ಬಂಧನ ನಾಶಕೆ ಮುಂದಿನ ಭವಗಳ ಮುಂದಿನ ಹರಣಕೆ ಅ.ಪ ಹುಟ್ಟು ಸಾವುಗಳ ಕಟ್ಟಳೆ ಅವನದು ಕೊಟ್ಟುದನು ಪಡೆಯುವದೃಷ್ಟ ನನ್ನದು ಬೆಟ್ಟದ ಗಾತ್ರದ ಪಾಪವು ನನ್ನದು ಇಷ್ಟನು ಕ್ಷಮಿಸುವ ದೃಷ್ಟಿ ಅವನದು 1 ಶರಣರ ಪೊರೆಯುವ ಬಲವಾತನದು ಪರಿಪರಿ ಪಾಪವ ಗಳಿಸುವುದೆನ್ನದು ಕರುಣೆಯ ತೋರುವ ಮನವಾತನದು ವರದ ಮಾಂಗಿರಿರಂಗ ನೀ ಶರಣೆಂಬುದು ನನ್ನದು2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಪೆ ಗುರುವೆ ನೀ ಕಲ್ಪತರುವೇ ಬಂಧನ ಕಳೆಯುವ ಭೋಧಾತ್ಮ ಗುರುವೆ ಅಗಣಿತ ಮಹಿಮಾ ಜಗದಾಧಾರ ಬಗೆಗೆ ನಿಲುಕದಿಹ ಘನನಿರ್ವಿಕಲ್ಪ ಮಾನವ ರೂಪದಿ ಸ್ವಾನುಭವವ ತೋರ್ದ ಮುಕುತಿದಾಯಕನೇ ಪರಮಾತ್ಮ ನೀನೆಂದು ಪರಶೃತಿ ಪೇಳೆ ಸರಿಯಾಗಿ ಬೋಧಿಸಿ ಕರುಣೆದೋರುವನೇ ಜಗವೆಲ್ಲ ಪುಸಿಯೆಂದು ಜಗಕೆಲ್ಲ ಪೇಳುವ ಭಗವಂತ ದಯದೋರಿ ಪೊರೆವುದು ದೇವಾ ಚಿನುಮಯರೂಪನೆ ಸ್ವಾನಂದರೂಪಾ ಮನವು ನಿನ್ನೊಳಗಿರಲಿ ಶಂಕರರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದಿಸುವೆನೆಲೆ ತಾಯೆ ವಂದಿತಾಮರೆಯೆ ಪ. ಶ್ರೀಕಲಶಾಬ್ಧಿಕನ್ಯೆ ಸುರಕುಲಮಾನ್ಯೆ ಶ್ರೀಕರ ಗುಣಪೂರ್ಣೆ ಶೋಕಾಪಹರಣೆ ಲೋಕನಾಯಕೆ ಘನ್ನೆ ಪಾಕಶಾಸನಸುತೆ ಪವನಜಸೇವಿತೆ ಸಾಕೇತನಿಲಯೆ ಸರಾಗದಿ ರಕ್ಷಿಸು 1 ಆನತನುತ ಗೀರ್ವಾಣಿ ಅಂಬುಜಪಾಣಿ ಮಾನಿನೀಮಣಿ ಕಲ್ಯಾಣಿ ಭಯವಾರಿಣಿ ಭಾವಜಾತ ಜನನೀ ಭಾಗವತಾರ್ಚಿತೆ ಭಕ್ತಾಭಯಪ್ರದಾತೆ ಬಾಗುತೆ ಶಿರ ನಿನಗೇಗಳುಂ ಮನವಾರೆ 2 ಅರಿಯೆನು ನಿನಗೆಣೆಯಾರ ಕಾಣೆನು ಹಿತರ ಚರಣವ ನಂಬಿದೆ ಮನವಾರ ಪಿಡಿಯೆನ್ನ ಕರವ ಕರುಣದಿ ನೋಡೆನ್ನಿರವ ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಜಗತ್ಕಾರಿಣಿ3
--------------
ನಂಜನಗೂಡು ತಿರುಮಲಾಂಬಾ
ವಧು ವರರ ಯದ್ಧರಿಸೊ ಉದಧಿಶಯನ ಒದಗಿಸುತಲಾಯುರಾರೋಗ್ಯ ಸುಜ್ಞಾನ ಪ ಯತಿಪೂಜೆ ಕ್ಷಿತಿದೇವ ತತಿಸೇವೆ ತಿಥಿತ್ರಯದ ವೃತನೇಮ ಮೊದಲಾದ ಸತ್ಕಕರ್ಮವ ಮತಿಯಿಂದ ಗೈಯುತಲಿ ಪತಿತಪಾವನ ನಿನ್ನ ಕಥೆಗಳನು ಕೇಳ್ವದಕೆÉ ರತಿಯಿತ್ತು ಪ್ರತಿದಿನದಿ 1 ಹಿರಿಯರಲಿ ವಿಶ್ವಾಸ ಗುರುಮುಖದಿ ಉಪದೇಶ ಮರುತ ಸಚ್ಛ್ಯಾಸ್ತ್ರದಔಯಾಸವ ಸ್ಥಿರವಾದ ಮನವಿತ್ತು ಮರಿಯದಲೆ ಮಾರಮಣ 2 ಸಾಮಗಾನವಿಲೋಲ ಶಾಮಸುಂದರವಿಠಲ ಸ್ವಾಮಿಮನ್ನಿಸಿ ಎನ್ನ ಎನ್ನ ವಿಜ್ಞಾಪನೆ ಯಾಮಯಾಮಕೆ ನಾಮಸುಧೆಯನು ಸವಿಪ ಈ ಮಹಾಸುಖ ಗರೆದು ಪ್ರೇಮದಿಲಿ ಕೈಪಿಡಿದು 3
--------------
ಶಾಮಸುಂದರ ವಿಠಲ
ವನಜನಯನನ ಮನವ ಮಧುಪ ನಂಬುವರೆಮನದೆಗೆದ ಮದನಪಿತ ವಿಠಲರೇಯಾ ಪ ಅರಿಯದ ಬಾಲೇರಿಗೆ ತನ್ನ ಪರಿಯನರುಹಿಸಿ ಮುನ್ನನೆರೆದು ರತಿಪತಿಯ ಸುಖ ನೆರೆದೋರಿದತೊರೆದು ಬದುಕುವೆವೆಂತೋ ರತಿಪತಿಯ ಪಿತನಗಲಿವಿರಹದುರಿ ತಾನಳವಡರಿ ಸುಡುತಿಹುದು 1 ನಡೆ ನಗೆಯ ತುದಿನೋಟ ಬಲೆಯನೆಮ್ಮೊಳು ಬೀಸಿಬಿಡದೆ ಯೆಮ್ಮನು ತನ್ನ ವಶಮಾಡಿದಪಡಿಯಿಲ್ಲದನುಭವದ ಸುಖದ ಸವಿಯನೆ ತೋರಿಮಡದಿ ತಡೆದಳೊ ಮಧುರೆಯಲಿ ನಲ್ಲನ2 ಎಂದೆಂದು ನಿಮ್ಮ ವಶದಲ್ಲಿಹೆನೆಂದಭಯವಿತ್ತುಇಂದುಮುಖಿ ನಾರಿಯರ ನೆರೆ ನಂಬಿಸಿನಂದನಂದನ ನಮ್ಮ ಕಾನನದೊಳೀಡ್ಯಾಡಿಇಂದು ಮಧುರೆಯ ನಾರಿಯರ ನೆಚ್ಚಿದ 3 ಕಪಟ ತಿಳಿಯಲರಿಯದೆ ನಾವುನವ ಹರಿಣಿಯಂತೆ ಮರುಳಾಗಿ ಕೇಳಿವಿವರವರಿಯದೆ ನಾವು ಕಡು ನೊಂದೆವೆಲೊ ಮಧುಪಇವನ ಗುಣವರಿಯದೆ ಕಡುಕರುಣಿ ಎಂಬುವರು 4 ಭವ ಬಂಧನಗಳೆಲ್ಲ ಈಡ್ಯಾಡಿಗತಿ ನಮಗೆ ಅವನೆಂದು ಮನಸೋತೆವೋಕೃತಕವರಿಯದೆ ನಮ್ಮ ವನದೊಳು ನಿಲ್ಲಿಸಿ ಪೋದಪತಿಯೊಡನೆ ಸಂಧಾನವೆಂತೊ ಎಲೊ ಮಧುಪ 5 ಮರುಳುಗಳು ನಾವು ಶ್ರೀಪತಿಯ ಕೂಟವ ಬಯಸಿಇರುಳು ಹಗಲು ಜರಿಜರಿದಳಲುವೆವುಸಿರಿಯವನ ಉಂಗುಟದ ಉಗುರು ಗುಣ ಕಾಣಳೆಲೋಹರಿ ನಮ್ಮ ನೆನೆವುದಚ್ಚರಿಯಲ್ಲವೆ6 ಭೃಂಗ ಮಧುರೆಗೆ ಪೋಗಿರಂಗವಿಠಲನ ತಂದೆಮ್ಮನುಳುಹುವುದೋ 7
--------------
ಶ್ರೀಪಾದರಾಜರು
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರದ ಗುರು ಗೋವಿಂದ ವಿಠಲ ಪೊರೆ ಇವನಾ ಪ ತರಳನನು ಒಪ್ಪಿಸಿಹೆ | ಕರಪಿಡಿಯೊ ಹರಿಯೆ ಅ.ಪ. ಮರುತ ಮತದಲಿ ಭಾವಿ | ಮರುತರೆಂದೆನಿಸುತಿಹಗುರುರಾಜ ಸಚ್ಚರಣ | ಕರುಣ ಪಾತ್ರಾಇರುವ ಈ ಶಿಶುವ ತವ | ಚರಣ ಕಮಲಂಗಳಿಗೆಅರ್ಪಿಸುತ ಭಿನ್ನವಿಪೆ | ನಿರುತ ಪೊರೆಯೆಂದು 1 ಗುರು ಹಿರಿಯರ ಸೇವೆ | ನಿರುತ ಗೈಯ್ಯುವ ಮನವಕರುಣಿಸುತ ಧರೆಯೊಳಗೆ | ಮೆರೆಸೊ ಕೀರ್ತಿಯಲೀಬರ ಬರುತ ವೈರಾಗ್ಯ | ಹರಿ ಗುರೂ ಸದ್ಭಕ್ತಿಉರುತರದ ಸುಜ್ಞಾನ | ಪರಿಪಾಲಿಸಿವಗೇ 2 ಭೃತ್ಯ ವತ್ಸಲನೇ 3 ಸರ್ವಗುಣ ಸಂಪೂರ್ಣ | ಸರ್ವವ್ಯಾಪ್ತ ಸ್ವಾಮಿನಿರ್ವಿಕಾರನೆ ದೇವ | ಶರ್ವ ವಂದ್ಯಾಸರ್ವದಾ ಸರ್ವತ್ರ | ದುರ್ವಿಭಾವ್ಯನೆ ಹರಿಯೆಪ್ರವರ ತವ ಸಂಸ್ಮರಣೆ | ಸರ್ವದಾ ಈಯೋ 4 ಜೀವ ಪರತಂತ್ರತೆಯ | ಭಾವುಕಗೆ ಅರಿವಿತ್ತುಭಾವದೊಳು ಮೈದೋರೊ | ದೇವದೇವೇಶಾಈ ವಿಧದ ಭಿನ್ನಪವ | ನೀ ವೊಲಿದು ಸಲಿಸುವುದುಮಾವಿನೋದಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಸುದೇವ ಸುತನ ಶಶಿ ಮುಖವನುತಂದು ತೋರಿಸೆ ಸಖಿ ತಂದು ತೋರಿಸೆ ಪ ಹೊಸಬೆಣ್ಣೆ ಬುತ್ತಿಯ ಪಶುಪಾಲಗಿತ್ತುಪೊಗಳುವೆ ಕೇಳವನ ಚರಿತೆಯ ಅ.ಪ. ಫುಲ್ಲಾಕ್ಷಿ ಇಟ್ಟ ಮನವನು ಅವನಲ್ಲಿ ತೆಗಿಯೆನೆ ಗೋ-ವಲ್ಲಭ ಬೆನ್ನು ಬಾಗಿ ಮೋಹಿಸುತ ಪೋದನೆ 1 ಸಖಿಕೇಳು ಮತಿಯು ಭ್ರಮಿಸಿತು ಅವನಲ್ಲಿ ಅತಿಶಯಸುಖದಿಂದ ಸ್ಮರಿಸುವೆ ಕೇಳವನ ಚರಿತೆಯ 2 ಸುಕೃತ ಇದ್ದರೀತ ನಾ ಸಖೀತಂದು ತೋರೆ ನೋಡುವೆನಾ ಇಂದಿರೇಶನಾ 3
--------------
ಇಂದಿರೇಶರು
ವಸ್ತು ಕಂಡೆನು ಒಂದು ಕರ್ತೃ ಸದ್ಗುರುವಿನ ಕೃಪೆಯಿಂದ ಧ್ರುವ ತೇಜ:ಪುಂಜದ ರೂಪ ಮೂಜಗದೊಳಗಿದು ಅಪರೂಪ ನಿಜ ನಿರ್ವಿಕಲ್ಪ ಸುಜನರ ಹೃದಯಕ ಸದ್ಛನದೀಪ 1 ರೂಪಕ ನೆಲೆಇಲ್ಲ ವ್ಯಾಪಕವಿದು ಜಗದೊಳಗೆಲ್ಲ ಗುಪಿತಜ್ಞಾನಿಯು ಬಲ್ಲ ಜಪತಪಕಿದು ಸಿಲ್ಕುವದಲ್ಲ 2 ಙÁ್ಞನಕ ಸಾಹೀತ ಮುನಿಜನ ಹೃದಯದಿ ಸದೋದಿತ ಧ್ಯಾನಕೆ ಆಯಿತು ಮನಕಾಮನವಿದು ಪೂರಿತ 3 ಮೂರಕೆ ವಿರಹಿತ ಮೂರುಲೋಕವು ವಂದಿತ ಪರಮ ಸಾಯೋಜ್ಯತ ತಾರಕವಸ್ತು ಸಾಕ್ಷಾತ 4 ಬೈಲಿಗೆ ನಿರ್ಬೈಲ ಭಾವಿಕ ಬಲ್ಲನು ಇದರ್ಹೊಯಿಲ ಮಹಿಪತಿಗನುಕೂಲ ಜೀವನ್ಮುಕ್ತಿಗೆ ಇದು ಮೂಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಸ್ತು ತಾ ಬೇರೆ ಅದೆ | ನಿಜವಸ್ತು ಅರಿತವ ಬಲ್ಲಾ ಪ ಮಣಿ ಎಣಿಸುವದಲ್ಲ ||ಹೊನ್ನು ಹೆಣ್ಣಿಗೆ ಮೆಚ್ಚಿ ಬಣ್ಣದ ಮಾತಾಡಿ |ಚೆನ್ನಿಗ ತನದಿಂದ ತಿರುಗುವದಲ್ಲ 1 ಮಾನ ಮನ್ನಣೆಗಾಗಿ ಜ್ಞಾನದ ಮಾತುಗಳಾಡಿ |ಧ್ಯಾನ ಮೌನವನು ತೋರುವರು |ಮನ್ನಣೆಯಾಗದಿರೆ ಛಾನಸತನದಿಂದ ಜನರ ದೂರುವರಲ್ಲ 2 ಮನವ ಸ್ವಸ್ಥವ ಮಾಡದೆಅನೇಕ ವ್ಯಥೆ ಕೂಡಿ ಕನಕದಾಶೆಗಾಗಿ ಕೆಡಬೇಡ |ಬಲ್ಲ ರಾಯರ ಪ್ರಭು ರುಕ್ಮಭೂಷಣ ಕೂಡಿಕ್ಷುಲ್ಲಕ ತನವ ಬಿಟ್ಟು ಸುಖಿಸಿರಯ್ಯ 3
--------------
ರುಕ್ಮಾಂಗದರು
ವಾದೀಂದ್ರ ಗುರುರಾಜ ನಿನ್ನ ಪಾದವ ತೋರಿಸಯ್ಯಾ ವಾದೀಂದ್ರ ಗುರು ನಿನ್ನ ಪಾದವ ನಂಬಿದೆ ಮೋದವÀ ಕೊಡುವುದು ಮದಗಳೋಡಿಸಿ ಪ ಉಪೇಂದ್ರ ಕರಕಮಲಜಾತ ಪಾಪಗಳೋಡಿಸಯ್ಯ ಪಾಪರಾಶಿಯ ಸುಟ್ಟು ದ್ರೌಪದೀವರದನ ಕೃಪೆಯಾಗುವಂತೆ ಮಾಡೋ ಶ್ರೀಪತಿ ಪ್ರಿಯನೆ 1 ಮೂಲರಾಮರ ಪಾದಪದುಮದಿ ಅಳಿಯಂತಿಪ್ಪ ಧೀರ ಶೀಲಾದಿ ಗುಣವಿತ್ತು ಶ್ರೀ ಲೋಲನಂಘ್ರಿಯ ಮಲಿನ ಮನವ ಕಳದು ಪೊಳೆಯುವಂತೆ ಮಾಡೋ2 ನಿತ್ಯ ಭಂಗಗಳೋಡಿಸುವಿ ಶೃಂಗಾರ ತುಳಸಿಯ ಮಂಗಳ್ಹಾರವ ಧರಿಸಿ ತುಂಗಮಹಿಮ ನರಸಿಂಗ ಮೂರುತಿ ತೋರೊ 3
--------------
ಪ್ರದ್ಯುಮ್ನತೀರ್ಥರು