ಒಟ್ಟು 1140 ಕಡೆಗಳಲ್ಲಿ , 103 ದಾಸರು , 918 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಲ್ಲಿ ನೋಡಲು ರಾಮ ಅಲ್ಲಿ ನೋಡಲು ರಾಮ |ಎಲ್ಲೆಲ್ಲಿ ನೋಡಲು ರಾಯಚಂದ್ರನು ಪಮೂಲೋಕದಲ್ಲಿ ತ್ರೈಮೂರ್ತಿರೂಪಗಳಲ್ಲಿಎಲ್ಲೆಲ್ಲಿ ನೋಡಲು ಅಲ್ಲಲ್ಲಿ ರಾಮರೂಪ ಅ.ಪರಾವಣನ ಮೂಲಬಲವ ಕಂಡು ಕಪಿಗಳುಆವಾಗಲೆ ಹೊರಟೋಡುತಿರೆಈವಾಗ ನರನಾಗಿ ಇರಬಾರದೆಂದೆನುತದೇವ ರಾಮಚಂದ್ರ ಬಹುರೂಪ ತಾನಾದ 1ಅವನಿಗೆ ಇವ ರಾಮ ಇವನಿಗೆ ಅವ ರಾಮಬುವಿಯೊಳಗೆ ಬೇರೆ ರೂಪವುಂಟೆಅವನಿಯೊಳಿರುತಿಪ್ಪದುರುಳ ಜನರೆಲ್ಲಅವರವರೆ ಹೊಡೆದಾಡಿ ಹತವಾಗಿ ಹೋದರು 2ಹನುಮಂತಾದಿ ಸಾಧುಜನರು ಅಪ್ಪಿಕೊಂಡುಕುಣಿದಾಡಿದರು ಅತಿ ಹರುಷದಲಿಕ್ಷಣದಲಿ ಪುರಂದರವಿಠಲರಾಯನುಕೊನೆಗೆ ರಾಮಚಂದ್ರನೊಬ್ಬನಾಗಿ ನಿಂತ 3
--------------
ಪುರಂದರದಾಸರು
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಎಲೆ ಮನವೇ ಕೇಳು ಕೇಶವನ ನಾಮವ ನುಡಿಸು |ಎಲೆ ಮನವೆ ಮುರವೈರಿಯಂಘ್ರಿಗಳ ಭಜಿಸು |ಎಲೆಲೆ ಕರಗಳಿರ ಶ್ರೀಧರನ ಸೇವೆಯ ಮಾಡಿ |ಎಲೆ ಕರ್ಣಗಳಿರ ಅಚ್ಯುತನ ಕಥೆಕೇಳಿ1ಎಲೆ ನೇತ್ರಗಳಿರ ಶ್ರೀ ಕೃಷ್ಣಮೂರ್ತಿಯ ನೋಡಿ |ಎಲೆ ಪಾದಗಳಿರ ಹರಿಯಾತ್ರೆಯನು ಮಾಡಿ ||ಎಲೆ ನಾಸಿಕವೆ ಮುಕುಂದನ ಚರಣಕರ್ಪಿಸಿದ |ತುಳಸೀ ಪರಿಮಳವನಾಘ್ರಾಣಿಸನುದಿನವು 2ಎಲೆ ಶಿರವೆ ನೀನಧೋಕ್ಷಜನ ಶ್ರೀ ಚರಣದ |ಜಲರುಹದೊಳಗಳಿಯುಂಟೆ ಲೋಲಾಡು |ಎಲೆ ತನುವೆ ನೀನು ಶ್ರೀ ಪುರಂದರವಿಠಲನ |ಸಲೆ ಭಕುತ ಜನರಂಗ ಸಂಗತಿಯಲಿ ಬಾಳು 3
--------------
ಪುರಂದರದಾಸರು
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು
ಏನು ಧನ್ಯಳೊ ಗಿರಿಜೆ ಎಂಥ ಮಾನ್ಯಳೋ ಪಸ್ಥಾಣುವಮೂರ್ತಿಪಾದಸೇವೆತಾನೆನಿರತಮಾಡುತಿಹಳೊ ಅ.ಪಭೂತಗಣದ ಯೂಥವಿರಲುಸೂತಗಣನಾಥಾದ್ಯರಿರಲುಭೂತಪತಿಯಚರಣತೊಳೆದುತೀರ್ಥಕೊಡುತ ಬರುವಳ್ ಸಭೆಗೆ 1ನಾರದರು ದಿಕ್ಪಾಲರಿರಲುವಾರಿಜಾಸನ ವಿಷ್ಣುವಿರಲುಮಾರಹರನಿಗಾರತಿ ಎತ್ತಿತಾನೆ ಸಭೆಗೆ ತೋರಿಸುವಳು 2ವಸುಗಳ್ ಸಪ್ತ ಋಷಿಗಳಿರಲುಅಸುರ ಶಿಕ್ಷರು ನುತಿಸುತಿರಲುಪಶುಪತಿಯ ಲೇಪಿಸಿದ ಭಸ್ಮಗೋವಿಂದಾದ್ಯರಿಗೆ ಪ್ರಸಾದ ಕೊಡುವಳ್ 3
--------------
ಗೋವಿಂದದಾಸ
ಕಂಡೆ ಕಂಡೆ ಕೈಲಾಸ ನಿಲಯನ |ಕಂಡೆ ಪಾರ್ವತಿಯ ಪ್ರಿಯ ಗಂಡನಾ ||ಕಂಡೆ ಕಂಡೆ ಕಾಲಾಗ್ನಿವಿಲಯನ |ಕಂಡೆ ಸರ್ವರೋದ್ದಂಡನಾ ಪಅಂಗಜಾಂಗವನು | ಭಂಗಗೈದಭವ|ಭಂಗಹರನ ಭಸ್ಮಾಂಗನಾ ||ಮಂಗಳಾಂಗ ಭೂ |ತಂಗೊಳೊಡೆಯ ಸುರ | ಗಂಗಾಧರನ ಮಹಾಲಿಂಗನಾ 1ಶಂಭು ಶಿವನ ಪಾ | ದಾಂಬುಜಯುಗಳವ |ನಂಬಿದೆನಂಬರ ಕೇಶನಾ ||ಡಂಬಹರನ ದಿ | ಗಂಬರ ಮೂರ್ತಿಯ |ಸಾಂಬಚಿದಂಬರವಾಸನಾ 2ಪಂಚ ತುಂಡ ತ್ರಿ | ಪಂಚನೇತ್ರನಾ |ಪಂಚಭೂತಕಧಿನಾಥನಾ ||ಪಂಚಲಿಂಗ ಪಂಚಾಕ್ಷರ ಪ್ರೀಯನ |ಪಂಚಮೂರ್ತಿಯೊಳು ಖ್ಯಾತನಾ 3ನಂದಿಸ್ವಾರಿ ಜಾ | ಲಂಧರಾಂತಕ |ಸುಂದರಾಂಗಶುಭಶೀಲನಾ ||ಅಂಧಕಾರಿ ಗೋವಿಂದನ ದಾಸನ
--------------
ಗೋವಿಂದದಾಸ
ಕಾಸು ಕನಕದಾಸೆಯಾದುದೇ | ಹರಿಗೆ |ದಾಸ ಜನರನೆಲ್ಲ ಮರೆತನೇ ಕಡೆಗೆಪವಾಸುದೇವನು ಶ್ರೀನಿವಾಸನೆನಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿರುವವಗೆಅ.ಪಛಪ್ಪನ್ನದೇಶದ ಕಪ್ಪವ ತರಿಸುವ | ಒಪ್ಪಿ ಜನರಸರ್ವ ತಪ್ಪಪಾಲಿಸುವ |ಸರ್ಪಶಯನ ನಮ್ಮ ತಾಪತ್ರೆ ಘನವೆನಲು |ಅರ್ಪಿತವಹುದೇತಿಮ್ಮಪ್ಪ| ವೆಂಕಟ ಪತಿಗೆ ||ಕಾಸು||1ಶನಿವಾರ ಶನಿವಾರ ಮನೆ ಮನೆ ಭಿಕ್ಷೆಗೈದು |ಮಿನುಗುವ ಡಬ್ಬಿಯೊಳಿಟ್ಟು ಜನರು ಪೂಜಿಸೆ ನಲಿದು |ವನಜಾಕ್ಷ ನಿನಗೆಂದು ಕಣಜಕ್ಕೆ ಸುರಿಯೆ ತಂದು |ಮನುಮಥ ಪಿತಗೆ ನಮ್ಮ ನೆನಪು ಎಂತಹುದೋ ||ಕಾಸು||2ಗಂಧಚಂದನನಾಮತೀರ್ಥ ಪ್ರಸಾದ |ಸುಂದರವಾಹನಹರಕೆ ವಿನೋದ |ಚಂದದಿ ನೋಡಲ್ ಹರಿಯ ಧನವಿಲ್ಲದಾಗದ |ಸುಂದರಾಮೂರ್ತಿಗೋವಿಂದಗೆ ಸಾರ್ವದಾ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೋಪವಿದೇಕೆ ಗೋಪಾಲಕ |ರೂಪಮನದಿ |ಕಾಪಾಡು ನೀ ಕೃಪೆಯೊಳ್ ತಾಪಸರ | ಪಾಪಾರಿಯೆ ಪಚದುರೆಯರ್ ವಿಧ ವಿಧ ದೂರುವದನಾಲಿಸುತ |ದಧಿಘೃತ ಕದ್ದನೆಂದು ಬೈದಳೇ ಯಶೋದೆ ನಿನ್ನ 1ನಾರಿಯರ ಸೀರೆಯ ಕದ್ದು | ಏರಿದಾ ಮರವನೆಂದು |ದೂರುವುದಕೇಳಿಪಿತ | ಕ್ರೂರತ್ವವ ತೋರಿದನೇ ||ಕೋಪ| 2ಚಂದದಿಂದ ಬಂದು ಎನ | ಗಿಂದು ದಯತೋರಿಸಯ್ಯಾ |ಸುಂದರಾಂಗಮೂರ್ತಿಗೋವಿಂದ ದಾಸರ್ವಂದಿತನೆ 3
--------------
ಗೋವಿಂದದಾಸ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಘಟಿಕಾಚಲದಿ ನಿಂತ-ಶ್ರೀ ಹನುಮಂತ ಪಘಟಿಕಾಚಲದಿ ನಿಂತ-ಪಟು ಹನುಮಂತ ತನ್ನಪಠನೆಯ ಮಾಡಲುತ್ಕಟದಿ ಪೊರೆವೆನೆಂದು ಅ.ಪಚತುರ ಯುಗದಿ ತಾನು-ಮುಖ್ಯ ಪ್ರಾಣ- ಚತುರ ಮುಖನಯ್ಯನ |ಚತುರಮೂರ್ತಿಗಳನು ಚತುರತನದಿ ಭಜಿಸಿ |ಚತುರ್ಮುಖವಾಣಿ ಜಗಕೆ ಚತುರ್ವಿಧ ಫಲವ ಕೊಡುತ 1ಸರಸಿಜಭವಗೋಸುಗ- ಕರ್ಮಠ ದೂಮವರಚಕ್ರತೀರ್ಥಸರ |ಮೆರೆವ ಛಲದಿನಿತ್ಯನರಹರಿಗೆದುರಾಗಿಸ್ಥಿರ ಯೋಗಾಸನದಲಿ ಕರೆದು ವರಗಳ ಕೊಡುತ 2ಶಂಖಚಕ್ರವ ಧರಿಸಿ-ಭಕ್ತರ ಮನಃ-ಪಂಕವ ಪರಿಹರಿಸಿ |ಪಂಕಜನಾಭಶ್ರೀ ಪುರಂದರವಿಠಲನ |ಬಿಂಕದ ಸೇವಕ ಸಂಕಟ ಕಳೆಯುತ 3
--------------
ಪುರಂದರದಾಸರು
ಙ್ಞÕನವೊಂದೇ ಸಾಕು ಮುಕ್ತಿಗೆ - ಇ - |ನ್ನೇನು ಬೇಕು ಹುಚ್ಚುಮರುಳು ಮಾನವನೆ ಪ.ಪಿತ ಮಾತೆಸತಿ ಸುತರನಗಲಿರಬೇಡ |ಯತಿಯಾಗಿ ಆರಣ್ಯ ಚರಿಸಲು ಬೇಡ ||ವ್ರತ - ನೇಮವ ಮಾಡಿ ದಣಿಯಲು ಬೇಡ |ಸತಿಯಿಲ್ಲದವಗೆ ಸದ್ಗತಿಯಿಲ್ಲೋ ಮೂಢ 1ಜಪತಪವನೆ ಮಾಡಿ ಸೊರಗಲುಬೇಡ |ಕಪಿಯಂತೆ ಅಡಿಗಡಿಗೆ ಹಾರಲುಬೇಡ ||(ಉಪವಾಸಪಾಶಕ್ಕೆ) ಸಿಕ್ಕಲುಬೇಡ |ಚಪಲತನದಲೇನು ಫಲವಿಲ್ಲೋ ಮೂಢ 2ಜಾಗರದಲಿ ನಿದ್ರೆ ಕೆಡಿಸಲು ಬೇಡ |ಓಗರವನು ಬಿಟ್ಟು ಒಣಗಲು ಬೇಡ ||ಸೋಗುಮಾಡಿ ಹೊತ್ತು ಕಳಿಯಲು ಬೇಡ |ಗೊಗೆ ಹಾಗೆ ಕಣ್ಣು ತಿರುಗಿಸಬೇಡ 3ಹೊನ್ನು - ಹೆಣ್ಣು - ಮಣ್ಣು ಜರೆದಿರಬೇಡ |ಅನ್ನ - ವಸ್ತ್ರಗಳನ್ನು ತೊರೆದಿರಬೇಡ ||ಬಣ್ಣದ ದೇಹವ ನೆಚ್ಚಲುಬೇಡ |ತಣ್ಣೀರೊಳಗೆ ಮುಳುಗಿ ನಡುಗಲು ಬೇಡ 4ಮಹಾವಿಷ್ಣುಮೂರ್ತಿಯ ಮರೆತಿರಬೇಡ |ಸಾಹಸದಿಂದಲಿ ಶ್ರಮ ಪಡಬೇಡ ||ಕುಹಕ ಬುದ್ಧಿಯಲಿ ಕುಣಿದಾಡಬೇಡ |ಮಹಿಮ ಪುರಂದರವಿಠಲನ ಮರೆಯದಿರೊ ಮೂಢ 5
--------------
ಪುರಂದರದಾಸರು
ಚಿಂತೆಯ ಪರಿಹರಿಸೊ ತಿಮ್ಮಯ್ಯಚಿಂತಾಯಕಕಂತುಕಮಲೆಯ ರಾಯಪ.ಸಾಧ್ಯವಲ್ಲದುದನ್ನು ಹಂಬಲಿಸಿಬುದ್ಧಿಭ್ರಾಂತಿಲಿ ಬಲು ಸುಖ ಬಯಸಿಕದ್ದ ಕಳ್ಳನಂತೆ ವೃಥಾ ಕುದಿದೆಮದ್ದು ಮೆದ್ದಿಲಿಯಂತೆ ಬಳಲಿದೆ 1ತಿಳಿದು ಮಾಯದ ಬಲೆಗೆ ಮೈಗೊಟ್ಟೆಬೆಲೆಗಟ್ಟಿ ವೃಥಾ ಹುಚ್ಚು ದೈನ್ಯಬಟ್ಟೆಆಲಿಸಿ ಮೋಕ್ಷದ ನೆಲೆಯ ಕೇಳದೆ ನಾಕಳವಳಗೊಂಬೆ ಕರುಣಾಸಂಪನ್ನ 2ಚಿಂತೆಗೆ ಚಿಂತೆ ಸಹಾಯವಾಗಿಅಂತರಂಗದಕ್ಲೇಶಹೇಸಿತು ಬಾಗಿಶಾಂತಮೂರ್ತಿ ಪ್ರಸನ್ವೆಂಕಟೇಶ ಏಕಾಂತದಾಸರ ನೆಳಲನೆ ತೋರಿಸೊ 3
--------------
ಪ್ರಸನ್ನವೆಂಕಟದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಜಯ ಮಂಗಳಂ ಶ್ರೀರಂಗಗೆ ಪ.ಮಂಗಳ ಮಹಿಮ ತ್ರಿವೆಂಗಳ ಮೂರ್ತಿಗೆಮಂಗಳವ್ವೆಯ ವಕ್ಷಾಂಗದೊಳಿಟ್ಟಗೆ 1ಮಂಗಳಾನಂತ ಗುಣಂಗಳಿಂ ಪೂರ್ಣಗೆಹಿಂಗದೆ ಭಕ್ತರ ಸಂಗದಲ್ಲಿಹಗೆ 2ಮಂಗಳ ನೈದಿಲೆಗಂಗಳ ಚೆಲ್ವಗೆರಂಗ ಪ್ರಸನ್ವೆಂಕಟಿಂಗಿತಜÕನಿಗೆ 3
--------------
ಪ್ರಸನ್ನವೆಂಕಟದಾಸರು