ಒಟ್ಟು 2021 ಕಡೆಗಳಲ್ಲಿ , 115 ದಾಸರು , 1503 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡಬೇಕು ಸ್ತ್ರೀಸಂಗ ಬ್ರಹ್ಮನಾಗುದಕೆಬಿಡದಿರಲು ಕೆಡುತಿಹನು ಬಿಡೆಯವಿಲ್ಲಯ್ಯ ಪ ಕಣ್ಣುಗಳು ತಿರುಹಲಿಕೆ ಕಾಲುಕೈಯುಡುಗುವುದುನುಣ್ಣನೆಯ ಗಂಟೊಲಿಯೆ ಎದೆಗುಂದುವುದು ಅಯ್ಯ ಸಣ್ಣ ಹಲ್ಲನು ಕಾಣೆ ಸರಿವುದು ಶಿವಧ್ಯಾನನುಣ್ಣನೆಯ ಮುಖಕ್ಕೆ ನುಗ್ಗಹುದು ದೃಢ ಚಿತ್ತ 1 ಕಿರುನಗೆಯ ಕಾಣಲು ಕಳಚಿಹೋಹುದು ಬುದ್ಧಿಸೆರಗು ಸಡಿಲಲು ಸೈರಣೆಯು ಅಡಗುವುದು ಅಯ್ಯತಿರುಗಾಡುತಿರಲು ತಿಳಿವಳಿಕೆ ಹಾರುವುದು ಮು-ಕುರ ಮುಖ ಕಾಣಲು ಮುಳುಗುವುದು ಅರಿವು ಅಯ್ಯ 2 ಗಾಳಿಯದು ಹಾಯಲಿಕೆ ಗತವಹುದು ಅನುಭವವುಬೀಳೆ ಅವರ ನೆರಳು ಬಯಲಹುದು ಬೋಧನೆಯುಬಾಲ ನುಡಿಗಳ ಕೇಳೆ ಬೀಳುವುದು ಬಲ್ಲವಿಕೆಬಾಲೆಯರ ಸಂಗವದು ಭವದ ತಿರುಗಣೆಯಯ್ಯ 3 ನವನೀತ ಪುರುಷನು ನಾರಿಯೇ ಅಗ್ನಿಯುನವನೀತ ಕರಗದೆ ಅಗ್ನಿಯೆದುರಿನಲಿಯುವತಿ ಸನಿಹದಲಿರಲು ಎಲ್ಲಿ ಬ್ರಹ್ಮವು ನಿನಗೆಶಿವನಾಣೆ ಸತ್ಯವಿದು ಸುಳ್ಳೆಂದಿಗೂ ಅಲ್ಲ 4 ಪಾತಕದ ಬೊಂಬೆಯು ಫಣಿವೇಣಿಯರ ರೂಪಘಾತಕವು ತಾನಹುದು ಯೋಗಗಳಿಗೆಯಲಯ್ಯಮಾತು ಬಹಳವದೇಕೆ ಮಹಿಳೆಯನು ತ್ಯಜಿಸಿದರೆದಾತ ಚಿದಾನಂದನು ತಾನೆ ಅಹನಯ್ಯ5
--------------
ಚಿದಾನಂದ ಅವಧೂತರು
ಬಿಡಬೇಡೆಲೆ ಮನಸೆ ಶ್ರೀಹರಿಪಾದ ಹಿಡಿ ಬಿಗಿಯಲೆ ಮನಸೇ ಪ ಹಿಡಕೋ ಕಡಕಿಂ ಕಡಲಕಡಿದಮರರ ಪಾದ ಅ.ಪ ಅನುದಿನ ಸಿರಿಯರೊತ್ತುವ ಪಾದ ಪರತರ ಭಕುತಿಯಿಂ ಸುರರುಪೂಜಿಪ ಪಾದ ನೆರೆದು ಋಷಿಸ್ತೋಮರರಸಿನಲಿಯುವ ಪಾದ ಪರಮನಾರದ ತುಂಬುರರು ಪಾಡುವ ಪಾದ ಪಾದ 1 ನೀಲಬಣ್ಣದಪಾದ ಪಿಡಿದೆತ್ತಿ ಮೂಲೋಕಾಳುವ ಪಾದ ತಾಳಿ ವಿಲಸಿತರೂಪ ಖೂಳನ ಎದೆಮೆಟ್ಟಿ ಸೀಳಿ ಉದರಮಂ ಬಾಲನ್ನಪ್ಪಿಕೊಂಡು ಪಾಲಿಸಿದಂಥ ಮಹ ಮೇಲಾದಮಿತಪಾದ ಸುಜನ ತಲೆಮೇಲೆ ಹೊತ್ತಪಾದ 2 ಬಲಿಯತುಳಿದಪಾದ ಮುನಿಯಾಗ ಒಲಿದು ಕಾಯ್ದಪಾದ ಶಿಲೆಯನೊದೆದಪಾದ ವನಕೆ ಪೋದಪಾದ ಖಳರಥಳಿಸಿ ಮುನಿಕುಲವ ಸಲಹಿದಪಾದ ಜಲಧಿದಾಂಟಿ ಸ್ಥಿರಪಟ್ಟ ಭಕ್ತನಿಗೆ ಸುಲಭದೊದಗಿಕೊಟ್ಟ ಚೆಲುವ ಸುದಯಪಾದ 3 ಪಾದ ಬಹು ಜರಮರಣ ನಿವಾರ ಪಾದ ತರಳಗೆ ಸ್ಥಿರವರ ಕರುಣದಿತ್ತ ಪಾದ ಭರದಿಗರಡನೇರಿ ಸರಸಿಗಿಳಿದ ಪಾದ ತರುಣಿಮಣಿಯರವ್ರತ ಹರಣಗೈದ ಪಾದ ಸಿರಿ ಪಾದ 4 ಪಾದ ಭಕುತರ ಮೊರೆಯ ಕೇಳ್ವ ಪಾದ ದುರುಳ ಕುರುಪನ ಗರುವಕಂಡ ಬುವಿ ವಿಶ್ವ ಪಾದ ಪರಮ ತುರಗವೇರಿ ಮೆರೆವ ವಿಮಲ ಪಾದ ಪಾದ 5
--------------
ರಾಮದಾಸರು
ಬಿಡಲಾರೇ ಬಿಡಲಾರೇ ಪ ಕಡಲೊಳು ಪವಡಿಪ ಮೃಡನುತನಾಮನ ಅ.ಪ ಕಾಶಿಯೊಳಗೆ ವಿಶ್ವೇಶನು ಬೋಧಿಪ ದಾಶರಥಿಯ ವರ ಸಾಸಿರ ನಾಮವ 1 ಗೌರವದಿಂದಲಿ ಗೌರಿಯು ಜಪಿಸುವ ಗೌರನೆನಿಪದುರಿತಾರಿಯ ನಾಮವ 2 ಭಕ್ತರು ಸಕಲ ವಿರಕ್ತರು ನಿತ್ಯದಿ ರಕ್ತಿಪಡುವ ಗುಣಯುಕ್ತನ ನಾಮನ 3 ಇಷ್ಟದಿ ನೆನೆವರ ಕಷ್ಟವಳಿದು ಮನ ದಿಷ್ಟ ಕೊಡುವ ಪರಮೇಷ್ಟಿಯ ನಾಮವ 4 ಚರಣವ ನಂಬಿದ ಶರಣರ ಪೊರೆಯುವ ವರದವಿಠಲ ದೊರೆ ವರದನ ನಾಮವ 5
--------------
ವೆಂಕಟವರದಾರ್ಯರು
ಬಿಡು ಬಿಡು ಮನುಜಾ ಜಡದಭಿಮಾನ ಪಡೆ ಗುರುವಿನಲಿ ಸ್ವಾತ್ಮದ ಜ್ಞಾನಾ ಪ ಈ ಸುಖದುಃಖದ ಬಡಿದಾಟದಲಿ ಗಾಸಿಯಾಗುತಲಿ ಸಾಯುವದೇ ದಿಟ ಕ್ಲೇಶವ ನೀಗುವಿ ನಿನ್ನ ನೀ ತಿಳಿವೊಡೆ 1 ಮರಳಿ ದೇಹ ಪಡೆಯದ ದಿವ್ಯ ಬೋಧ ಪರಮಶಾಂತಿ ದೊರಕಿಸುವ ಪ್ರಮೋದ ದುರುಳಸಂಸ್ಕøತಿಯ ಪಾಶದ ಛೇದ ಮರೆಯದೆ ಮಾಳ್ಪುದು ಸ್ವಾತ್ಮದ ಶೋಧ 2 ಘಟ ಮರಣಕೆ ಶಿಲುಕಿದಾದರೂ ಈ ಘಟದಲಿ ನೀ ಅಮರನೆ ಇರುವೀ ಬೇಗನೆ ಜೀವನ್ಮುಕುತಿಯ ಪಡೆಯೈ ಯೋಗಿ ಶಂಕರನ ಸದ್ಬೋಧದಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಬಿಡೋ ಬಿಡು ಮನುಜ ಭ್ರಾಂತಿಯ ಪಡಕೊ ನಿನ್ನೊಳು ತಿಳಿಯುವ್ಹಾಂಗ ಸದ್ಗುರು ಭಕ್ತಿಯ ಧ್ರುವ ಬುಡದಲಿ ಫಲವಿರಲಿಕ್ಕೆ ಅಡರುವದ್ಯಾಕೊ ತುದಿಗೆ ಪಡಬ್ಯಾಡೋ ನಾನಾ ಸಾಯಾಸ ತೊಡಕಿ ಬೀಳುವ 1 ಕಾಶಿಗೆ ಹೋಗಬೇಕೆಂದು ಕಾಸಿನ ಚಾಲವರಿಕ್ಯಾಕ ಆಸಿ ಅಳಿದರೊಂದೇ ಸಾಕು ಭಾಸುದು ತನ್ನೊಳಗೆ 2 ದೇವರೆ ತಾ ದೂರಿದ್ದರೆ ಆವದೊ ನಿನ್ನ ಕಾವ ದೈವ ಠಾವಿಕಿ ಮಾಡಿಕೊಳ್ಳೊ ಸಾವಧ ವಾಗಿ 3 ಹೇಳಿಕೊಡುವ ಸ್ವಾಮಿ ಬೆಳಗ ತಾ ಝಾಡಿ 4 ಸಾಯಾಸವಿಲ್ಲದೆ ಮಹಿಪತಿಗೆ ಶ್ರಯದೋರಿತು ಗುರುವಾಕ್ಯದಲಿ ಆಯಿತು ಮಾಡಿದ ಗುರು ತಾಯಿತಂದೆನಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡ್ವು-ದುತ್ತ ಮವು ಪ ಹೋದಯೋಚನೆ ಮಾಡಲು ಮನದಲ್ಲಿ ಅತಿಶಯವೇನಲ್ಲಿ ಫಲವೇನಿಲ್ಲಾ ಬಹು ಭಾದಕ ವಂದೆ ಬುದ್ಧಿಯು ತಿಳಿಯದೆ ಸುಲಭದಿಂದಲಿ ಮುನಿವಂದ್ಯನ ಸ್ತುತಿಯ ಮಾಡಿದಲ್ಲಿ ಖನಿಯಂತೆ ಭಾಗ್ಯವು ಬೇಗನೆ ಕೊಡುವನು---ಸ್ಥಿರವಲ್ಲಿ 1 ಹೊಟ್ಟಿಯ ದೆಸೆಯಿಂದಾ ಕೃಷ್ಣನ ಚರಣಾರವ ಕ್ರಿಯದಲಿ ಪೂಜಿಸಿ ನಿಷ್ಟವಾಗು---- ಕಷ್ಟವೆಲ್ಲ ಕಳೆದು ಕರುಣಿಸಿ ಶೀಘ್ರದಿ ಕಾಯುವ ಗೋವಿಂದ 2 ಕೂಡಿ ಪುಣ್ಯವು ಕಳೆದು ಪಾಪಕೆ ಹೋಗಬೇಡಾ ಮಂqಲದೊಡೆಯನ ಮಹಿಮ ವುಳ್ಳ ದಾಸರ ಮನ್ನಿಸದಿರ ಬೇಡಾ -------- ಪಾದ ಬಿಡಬೇಡಾ 3
--------------
ಹೆನ್ನೆರಂಗದಾಸರು
ಬಿನ್ನಪ ಕೇಳಯ್ಯಾ ಬಡವನ ಮನ್ನಿಸು ಮಹರಾಯ ಪ ಎನ್ನ ಭವಗುಣಗಳನ್ನು ಕಳೆದು ಪೊರೆ ಸನ್ನುತಾಂಗ ಹರಿ ಉನ್ನತ ಮಹಿಮ ಅ.ಪ ತೊಳಲಿಬಳಲಿ ಬಂದೆ ಸಂಸಾರದ್ಹೊಲಸಿ ನೊಳಗೆ ನಿಂದೆ ಅಳಿಯುವ ದೇಹಕೆ ಕಳವಳಿಸುವ ಮನ ಮಲಿನತೊಳೆದು ನಿರ್ಮಲ ಮಾಡು ತಂದೆ 1 ಹುಟ್ಟಿ ನೀ ಸಾಯ್ವುದಕೆ ಬಂದಿಲ್ಲ ಗಟ್ಟ್ಯಾಗಿರಲಿಕ್ಕೆ ಸಠೆ ಈ ಲೋಕವು ದಿಟವಲ್ಲೆನಗೆ ಬಟ್ಟೆ ತಪ್ಪಿಸು ತಂದೆ 2 ಇಷ್ಟುದಿನವು ಕಳೆದು ತಿಳಿಯದೆ ಭ್ರಷ್ಟತನದಿ ಬಾಳ್ವೆ ಇಷ್ಟು ದಿನ ದಿನಗಳ್ವ್ಯರ್ಥ ಕೆಟ್ಟಿದ್ದೆ ಸಾಕಯ್ಯ ಶಿಷ್ಟಗುಣವಕೊಟ್ಟು ಸಲಹೊ ಶ್ರೀರಾಮ3
--------------
ರಾಮದಾಸರು
ಬಿನ್ನಪ ಲಾಲಿಸಯ್ಯ ಭಕ್ತಪರಾಧ- ವನ್ನು ಕ್ಷಮಿಸಬೇಕಯ್ಯ ಪ. ಅನ್ಯಾಯ ಕಲಿಕಾಲಕ್ಕಿನ್ನೇನು ಗತಿ ಸುಪ್ರ- ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತಅ.ಪ. ಮಕ್ಕಳ ಮಾತೆಯಂದದಿ ಕಾಯುವ ಮಹ- ದಕ್ಕರದಿಂದ ಮುದದಿ ಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತು ರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನು ದಿಕ್ಕಿಲ್ಲದವರ ಧಿಕ್ಕಾರ ಗೈದರೆ ಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ- ವರ್ಕಳಮಣಿ ನಿನಗಕ್ಕಜವಲ್ಲವು ಕುಕ್ಕುಟಧರವರ ಮುಕ್ಕಣ್ಣತನಯ1 ಜಾತಿ ನೀತಿಯನು ಬಿಟ್ಟು ಡಾಂಭಿಕತನದ ರೀತಿಗೆ ಪ್ರೀತಿಪಟ್ಟು ಸೋತು ಹಣವ ಕೊಟ್ಟು ಖ್ಯಾತರೆಂಬುವ ಗುಟ್ಟು ಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿ ಯಾತುಧಾನರ ಗುಣ ಯಾತಕ್ಕರಿಯದು ಭೂತೇಶ್ವರಸಂಜಾತ ಸುರನರ- ವ್ರಾತಾರ್ಚಿತ ಪುರಹೂತಸಹಾಯಕ ನೂತನಸಗುಣವರೂಥ ಪುನೀತ2 ಯಾವ ಕರ್ಮದ ಫಲವೋ ಇದಕಿ- ನ್ಯಾವ ಪ್ರಾಯಶ್ಚಿತ್ತವೋ ಯಾವ ವಿಧವೊ ಎಂಬ ಭಾವವರಿತ ಪುರುಷ ಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲ ದೇವ ಲಕ್ಷ್ಮೀನಾರಾಯಣನ ಪಾದ ಸೇವಕನೀ ಮಹಾದೇವನ ಸುತ ಕರು- ಣಾವಲಂಬಿಗಳ ಕಾವ ನಮ್ಮಯ ಕುಲ- ದೇವ ವಲ್ಲೀಪತಿ ಪಾವಂಜಾಧಿಪ3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ಯೈಪೆ ನಿನಗಾನು ಭೀಮಸೇನ ಪ ಬನ್ನಬಡುತಿಹ ಜನರ ಭಯವ ಪರಿಹರಿಸೆಂದು ಅ.ಪ. ನೀಚರಿಂದಲಿ ಬಂದ ಭಯಗಳಿಂದಲಿ ಜನರು ಯೋಚಿಸುವರೆಮಗಾರು ಗತಿಯೆನುತಲಿ ಕೀಚಕಾಂತಕ ನಿನ್ನ ಕೀರ್ತಿ ಬಹುವಿಧ ಕೇಳಿ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು 1 ಭವ ವಿಮೋಚಕನು ನೀನೆ ಸಚ ರಾಚರಕೆ ಸಂತತ ಪುರೋಚನಾರಿ ಪ್ರಾಚೀನ ಕರ್ಮಾಬ್ಧಿ ವೀಚಿಯೊಳು ಮುಳುಗಿಹ ಖೇಚರೇಂದ್ರಾಹಿಪ ತ್ರಿಲೋಚನರ ಗುರುವೆ 2 ಖಚರೋತ್ತಮನೆ ನಿನ್ನ ಸುಚರಿತೆಗಳನು ಕೇಳಿ ರಚನೆಗೈಯ ಬಲ್ಲೆನೆ ಅಚಲ ಸತ್ವ ಪ್ರಚಲಿಸುತಿಹ ಮನೋವಚನ ಕಾಯುವ ಘಟೋ ಪ್ರಚಯ ಮಾಡುವುದೆಂದು 3 ಲೋಚಿತದ ಧರ್ಮಗಳ ಸೂಚಿಸೆಮಗೆ ಪಾಚಕನೆ ನಿನ್ನಡಿಗೆ ಚಾಚುವೆನು ಶಿರ ಸವ್ಯ ಸಾಚಿ ಸೋದರನೆ ದಯದಿ ಗೋಚರಿಸಿ ಸಲಹೆಂದು 4 ವಾಚಾಮಗೋಚರ ಜಗನ್ನಾಥ ವಿಠ್ಠಲನ ಶ್ರೀ ಚರಣ ಭಜಕನೆ ನಿಶಾಚರಾರಿ ಮೈಚರ್ಮ ಸುಲಿದು ದುಶ್ಯಾಸನನ ರಕುತ ಪರಿ ಷೇಚನೆಯ ಮಾಡಿದೆ ಮಹೋಚಿತವಿದೆಂದರಿದು 5
--------------
ಜಗನ್ನಾಥದಾಸರು
ಬಿಸಜ ಕುಸುಮಾಸ್ತ್ರನÀ ಜನನಿ ಬೇಗ ನೀ ಪ ಎಸೆವ ಪೀಠಕೆ ನಸುನಗುತಲಿ ದಶರಥ ನೃಪನ ಸೊಸೆಯೆ ಕರುಣದಿ ಅ.ಪ ಕಮಲ ಪತಿ ಸಹಿತವಾಗಿ ಆನಳಿನಜಾದಿ ಪರಿವಾರದೊಡನೆ ಆನಂದಾಮೃತ ವೃಷ್ಟಿಯ ಕರೆಸುತೆ 1 ಕಾಲಲಂದಿಗೆ ಗೆಜ್ಜೆಗಳ್ ಮೆರೆಯೆ ಸುರರು ತಾ ಹೊಮಳೆಯ ಸುರಿಯೆ ಕಾಲ ಕಾಲದಿ ನಿನ್ನೋಲಗವಿತ್ತು ಪಾಲಿಸಲ್ಕೆ ಭಕ್ತ ಜನರನು 2 ಕೃತಿ ಶಾಂತಿ ರಮೆ ನಿರ | ಕಾಯುವಳು ನೀನೆಂದು ಶೃತಿ ನಿ | ಕಾಯ ಮುತ್ತೈದೆಯರ್ ಕರೆವರು 3 ತಟ್ಟೆಯೊಳಗರಿಸಿನ ಕುಂಕುಮಾಕ್ಷತೆಗ ಕೃಷ್ಣರಾಯನ ಪಟ್ಟದ ರಾಣಿಯೆ 4 ಹತ್ತುವಿಧದ ವಾದ್ಯಗಳು ಮೊರೆಯೆ ಚಿತ್ಪ್ರಕಾಶ ಜ್ಯೋತಿಗಳು ಹೊಳೆಯೆ ಚಿತ್ತೈಸಮ್ಮ ಚಿತ್ರಮಂಟಪದಲಿ 5
--------------
ಗುರುರಾಮವಿಠಲ
ಬೀಸಿದ ಗುಂಡಗೆ ಬುಕ್ಕಿದ್ದೇ ಲಾಭ ಬೇಸರವಿಲ್ಲದೆ ಪ ವಾಸುಕಿಶಯನನ ಲೇಶವು ಭಜಿಸದೆ ಅ.ಪ ಹಗಲು ಇರುಳು ವಿಷಯಗಳಲಿ ಮುಳುಗಿ ಪೊಗಳದಿರಲು ಹರಿ ನಾಮವನು ಜಗದೊಳೆನಗೆ ಸಮರಾರೆಂದೆನುತಲಿ ಬೊಗಳಿ ನರಕಕ್ಕುರುಳುವೆನೆಂದರಿಯದೆ 1 ಮೋಸದಿಂದ ಧನರಾಶಿಗಳಿಸಿ ಅತಿ ಹೇಸಿಗೆ ಭೋಗಗಳಾಶಿಸುವ ಈಶನಂತೆ ಬಲು ಮೆರೆಯುತ ಮದದಲಿ ಶ್ರೀಶ ಸಹಾಯವ ಬಯಸದ ತನಕ 2 ಗಂಗಾ ಶುಚಿಜಲ ದೊರಕುತಿರೆ ಹಲ ವಂಗವ ನೀರನು ಬಯಸುವರೇ ಮಂಗಳ ಕರ್ಮಗಳಾಚರಿಸದೆ ನೀ ಮಂಗನಂದದಲಿ ಕುಣಿಯುವ ತನಕ 3 ಕಂಗಳಿಲ್ಲದ ಕುರುಡನಿಗೆ ಬೆಳ ದಿಂಗಳ ಸೌಖ್ಯವು ತೋರುವುದೆ ರಂಗನ ಮಹಿಮೆಯನರಿಯದ ಮೂಢನು ತಂಗಳು ಭೋಗವ ಬಯಸುವ ತನಕ 4 ಕನ್ನಡಿಯೊಳಗಿನ ಗಂಟಿನಂತಿರುವುದು ನಿನ್ನ ನಶ್ವರದ ಭೋಗಗಳು ಇನ್ನಾದರು ನಿನ್ನ ಮೂಢತನವ ಬಿಟ್ಟು ಸಂತತ ಭಜಿಸೋ ಪ್ರಸನ್ನ ಶ್ರೀಹರಿಯ 5
--------------
ವಿದ್ಯಾಪ್ರಸನ್ನತೀರ್ಥರು
ಬುದ್ಧಿಮಾತು ಹೇಳಿದರೆ ಕೇಳ ಬೇಕಮ್ಮ ಮಗಳೆ ಮನ ಶುದ್ದಳಾಗಿ ಗಂಡನೊಡನೆ ಬಾಳ ಬೇಕಮ್ಮ ಪ ಮಾತು ಮಾತಿಗೆ ಮಾತ ಜೋಡಿಸಿ ಆಡಬೇಡಮ್ಮಮಗಳೆ ಪ್ರೀತಿ ಪಡುವ ಗಂಡನೆಂದು ಹೆಮ್ಮೆ ಬೇಡಮ್ಮ ನೀತಿ ತಪ್ಪಿ ನಡಿಯಬೇಡ ಯೆಂದಿಗಾದರೂ ಮಗಳೆ ಸೋತು ನಡೆಯಲು ಲೇಸುಯೆಂದು ತಿಳಿಯ ಬೇಕಮ್ಮ 1 ಅತ್ತೆ ಮಾವ ಗಂಜಿ ಕೊಂಡು ನಡಿಯ ಬೇಕಮ್ಮ ಮಗಳೆ ಮತ್ತೆ ಪತಿಯ ಮನವ ಮೆಚ್ಚಿಸಿ ಬಾಳ ಬೇಕಮ್ಮ ದುಡಿಯ ಬೇಕಮ್ಮ ಮಗಳೆ ಚಿತ್ತದಲ್ಲಿ ಹರಿಯ ಭಕ್ತಿ ಬಿತ್ತಬೇಕಮ್ಮ 2 ನೋಟ ಆಟದಲ್ಲಿ ಮಮತೆ ಬಹಳ ಬೇಡಮ್ಮ ಮಗಳೆ ಕೊಟ್ಟು ಕ್ರಯವ ತಿಂಡಿ ತಿಂಬೊ ನಡತೆ ಬೇಡಮ್ಮ ಕೂಟ ಜನರ ಮಾತು ಕೇಳೆ ಕೇಡು ಕೇಳಮ್ಮ ಮಗಳೆ ಸಾಟಿ ನಾನು ಗಂಡಗೆಂದು ಹಠವು ಬೇಡಮ್ಮ 3 ಕ್ಲೇಶ ಕೇಳಮ್ಮ ಮಗಳೆ ಗಂಡ ತಂದುದೆ ದೊಡ್ಡದೆಂದು ಉಂಡು ಬಾಳಮ್ಮ ಗಂಡೀ ನಂತೆ ಮೆರೆಯ ಬಾರ್ದು ತಗ್ಗಿ ನಡೆಯಮ್ಮ ಮಗಳೆ ತೊಂಡಳಾಗಿ ಹರಿಗೆ ಬಾಳೆ ಸುಖವು ನಿನಗಮ್ಮ 4 ಹರಿಯು ಕೊಟ್ಟರೂಪವೆ ಛಂದ ಲಜ್ಜೆ ಬೇಡಮ್ಮ ಮಗಳೆ ಬರಿಯ ವೇಷ ನಾಟಕದಂತೆ ಮೋಸ ಕಾಣಮ್ಮ ಜರಿಯ ಬೇಡ ಹಿರಿಯರ ಮಾತು ಹಾನಿ ಹೌದಮ್ಮ ಮಗಳೆ ಮರಿಯೆ ಹರಿಯ ಭವವು ತಪ್ಪದು ಜೋಕೆ ನೋಡಮ್ಮ 5 ಸೊಲ್ಲು ಕೇಳಮ್ಮ ಮಗಳೆ ನಲ್ಲನ ಬಲುಮೆಗೆ ಒಳ್ಳೆ ಗುಣವೆ ಮುಖ್ಯ ತಿಳಿಯಮ್ಮ ಮಗಳೆ ಒಳ್ಳೆ ಮಾತನಾಡಿ ಸರ್ವರ ಹಿತವ ಕೋರಮ್ಮ 6 ಏನೇ ಬಂದರು ಜರಿದು ಪತಿಯ ನುಡಿಯ ಬೇಡಮ್ಮಮಗಳೆ ನಿನ್ನದೆಂದು ಪುಟ್ಟಿದ ಮನೆಯ ತಿಳಿಯ ಬೇಡಮ್ಮ ಮಾನವೆ ಮುಖ್ಯ ಮಾನಿನೀಗೆ ತಿಳಿದು ಬಾಳಮ್ಮಾ ಮಗಳೆ ಮಾನವು ನೀಡೆ ಮಾನವು ಬಾಹೋದು ಮರ್ಮ ತಿಳಿಯಮ್ಮ 7 ನಾನು ನಾನು ನಾನೆಂಬೋದೆ ಹೀನ ಕೇಳಮ್ಮಾ ಮಗಳೆ ಸಾನುರಾಗದ ನುಡಿಯೆ ಸಕ್ಕರೆ ಕೀರ್ತಿ ಉಳಿಸಮ್ಮ ಸ್ನಾನ ಪಾನದಲ್ಲೇ ಮುಳುಗದೆ ಹರಿಯ ಸೆನೆಯಮ್ಮ ಮಗಳೆ ಶ್ರೀನಿವಾಸನ ಭಕ್ತರ ಪೂಜೆ ಯತ್ನದಿ ಮಾಡಮ್ಮಾ 8 ಪರರ ಸಿರಿಯ ನೋಡಿ ಮನದಿ ಕೊರಗ ಬೇಡಮ್ಮ ಮಗಳೆ ಹರಿಯು ನೀಡಿಹ ಸಿರಿಯೆ ಸಾಕುಯೆಂದು ಸುಖಿಸಮ್ಮ ಯರವಿನಿಂದ ಒಡವೆ ವಸ್ತ್ರ ಧರಿಸ ಬೇಡಮ್ಮ ಮಗಳೆ ಅರಿತು ಹರಿಯ ಗುಣಗಳ ಮನದಿ ನೆನೆದು ನೆನೆಯಮ್ಮ 9 ಸತತ ನಗೆ ಮೊಗಳಾಗಿ ಬಾಳು ಗಂಟು ಬೇಡಮ್ಮ ಮಗಳೆ ಸತತ ಕಾಯುವ ಹರಿಯೇಯೆಂದು ದೃಢದಿ ಭಜಿಸಮ್ಮ ಕೇಳಮ್ಮಾ ಮಗಳೆ ನಿತ್ಯ ಸುಖಿಸಮ್ಮ 10 ಪತಿಯ ಭಕ್ತಿಯೆ ತಾರಕ ನಿನಗೆ ಧೋರಣೆ ಬೇಡಮ್ಮ ಮಗಳೆ ಪತಿಯ ಜರಿಯುತ ವ್ರತಗಳ ಮಾಡೆ ಫಲವೇ ಇಲ್ಲಮ್ಮ ರತಿಯಿಂ ನುಡಿದಿಹೆ ಶೃತಿಗಳಸಾರ ಯುಕ್ತಿಗಳಮ್ಮ ಮಗಳೆ ಮೊರೆಯ ಹೋಗಮ್ಮ 11
--------------
ಕೃಷ್ಣವಿಠಲದಾಸರು
ಬೂಟಾಟಿಗನು ನಾನು ಸತ್ಯಮಾಯ ಝಾಟ ನಾಟಕವಾಡಿ ದಾಟಿ ಬೈಲಿಗೆ ನಿಂತ ಪ ಮಿಥ್ಯ ಪ್ರಪಂಚ ಮರೆದು ಅರ್ತು ನಿತ್ಯಸುಖದಿ ಮನ ಬೆರೆದು ಅರ್ತುಅರಿಯದೆ ಮತ್ರ್ಯದೊರ್ತನದೊಳಗಿರ್ದು ಗುರ್ತಿಟ್ಟು ಪರಲೋಕ ಸುರ್ತುಮಾಡಿಕೊಂಡ 1 ಸಾಧುವರ್ತನದ್ಹಾದಿ ತಿಳಿದು ನಿಜ ಶೋಧಿಸಿ ಕಾಲನ ಬಾಧೆ ಗೆಲಿದು ವಾದಿಮೂರ್ಖರ ಕೂಡಿ ವಾದಿಸದನುದಿನ ಸಾಧಿಸಿ ಪರಸುಖಸ್ವಾದ ಸವಿಯುವಂಥ2 ಕಾಮಕ್ರೋಧಾದಿಗಳಳಿದು ಮಹ ಪ್ರೇಮ ಮೋಹಂಗಳ ತುಳಿದು ಸ್ವಾಮಿ ಶ್ರೀರಾಮನ ಪ್ರೇಮ ಪಡೆದು ಮುಕ್ತಿ ಸಾಮ್ರಾಜ್ಯಸುಖ ಸಂಪಾದಿಸಿಕೊಂಡಂಥ 3
--------------
ರಾಮದಾಸರು
ಬೂದಿ ಮುಚ್ಚಿದ ಕೆಂಡದಂತಿಪ್ಪರು ಪ ಈ ಧರೆಯ ಮೇಲೆ ಶ್ರೀ ಹರಿಭಕ್ತ ಜನರು ಅ.ಪ ಅಂಗ ನೋಡಲು ಅಷ್ಟಾವಕ್ರವಾಗಿಪ್ಪರು ಕಂಗಳಿಂದಲಿ ನೋಡೆ ಘೋರತರರು ಮಂಗಳಾಂಗನ ಅಂತರಂಗದಲಿ ಭಜಿಸುತ್ತ ಹಿಂಗದೆ ಸಂತಜನ ಸಂಗದೊಳಗಿಹರು 1 ನಾಡ ಜನರುಗಳಂತೆ ನಡೆಯರು ನುಡಿಯರು ಕೂಡರು ಕುಟಿಲಜನ ಸಂಘದಲ್ಲಿ ಒಡಲು ತುಂಬಿಸಿಕೊಳರು ರೂಢಿಯೊಳಗೆಂದೆಂದು ಗೂಢವಾಗಿಹರು2 ಡಂಭಕತನದಿಂದ ಗೊಂಬೆನೆರಹಿಕೊಂಡು ಡೊಂಬ ಕುಣಿದಂತೆ ಕುಣಿದಾಡರು ಹಂಬಲಂಗಳ ಬಿಟ್ಟು ಹರುಷವುಳ್ಳವರಾಗಿ ಬಿಂಬ ಮೂರುತಿಯನ್ನು ಕೊಂಡಾಡುತಿಹರು 3 ಶತ್ರು ಮಿತ್ರರುಗಳ ಸಮನಾಗಿ ಎಣಿಸುವರು ಪುತ್ರ ಮಿತ್ರ ಭ್ರಾತೃಗಳ ನೆಚ್ಚರು ಯಾತ್ರೆ ತೀರ್ಥಂಗಳಿಗೆ ಹೋಗುತ್ತ ಶ್ರೀ ಹರಿಯ ಸ್ತೋತ್ರಗಳ ಮಾಡಿ ಸಾಧನೆ ಮಾಡಿಕೊಂಬುವರು 4 ಕಷ್ಟ ಸೌಖ್ಯಂಗಳನು ಕಲಿವರದಗರ್ಪಿಪರು ಇಟ್ಟುಕೊಟ್ಟಿದ್ದನ್ನ ಹರಿಕೊಟ್ಟನೆಂಬುವರು ಸಿರಿ ವಿಜಯವಿಠ್ಠಲನ ಪದಪದ್ಮಾ ಮುಟ್ಟಿ ಭಜಿಸಿ ಮುಕ್ತ ಸಾಮಾಜ್ರ್ಯ ಪಡೆಯುವರು5
--------------
ವಿಜಯದಾಸ
ಬೃಂದಾವನವಿದೆಕೊ ಯತಿವರ ಪ ನಂದ ನಂದನ ಗೋವಿಂದನ ಪಾದಾರ ವಿಂದವ ಪೂಜಿಪ ಶ್ರೀರಾಘವೇಂದ್ರನ ಅ.ಪ ಮಂತ್ರಾಲಯದಿ ಸ್ವತಂತ್ರ ಭೂಮಿಕೆಯಲ್ಲಿ ಯಂತ್ರ ಸ್ಥಾಪನೆಗೈದು ಸಂತೃಪ್ತಿಯಾಂತು ಮಂತ್ರಾರ್ಥ ತತ್ವಗಳನುಪದೇಶ ಗೈಯುವ ಮಂತ್ರ ಸ್ವರೂಪನು ಸೇವಿಪ್ಪ ಪುಣ್ಯದ1 ಗುರುರಾಜರಾಜನು ಕರುಣಾಪಯೋಧಿಯು ನಿರುತ ಭಕ್ತರಿಗೆಲ್ಲ ವರವೀವ ದೊರೆಯು ಸರಸೀರುಹಾಕ್ಷ ಮಾಂಗಿರಿವಾಸ ರಂಗನ ಚರಣವ ತೋರುವ ಕೃಪೆಮಾಡುವಾತನ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್