ಒಟ್ಟು 4560 ಕಡೆಗಳಲ್ಲಿ , 125 ದಾಸರು , 2918 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಮಣಿ ಧರಿಸಿದ ತೀರ್ಥರ ಕಂಡರೆ ತಿರುವಡಿಗಳಿಗೇ ಮಣಿಯುವುದು ಪ ಗುರುತರ ಶ್ರೀಪಾದತೀರ್ಥಸೇವನ ದುರಿತ ಹರವು ತಾ ಪಾವನವು ಅ.ಪ ದೇವರ ಕಡೆಯವರಿವರೆಂದೆನ್ನುತ ಕಾವನ ಕತೆಗಳ ಕೇಳುವುದು ಭಾವಿಸಿ ಭಾಗವತರ ಸಹವಾಸವು ಶ್ರೀವರನೊಲಿಯುವ ಕಾರಣವು1 ಇವರ ದರ್ಶನವು ಪುಣ್ಯಪ್ರದವು ಪವಿತ್ರರಿರುವೆಡೆ ವೈಕುಂಠ ಭುವಿಸುರಪೂಜನ ಹರಿಗಾನಂದವು ಸುವಿಮಲ ಚರಿತರು ಶುಭಕರರು 2 ಶಂಖ ಚಕ್ರಗಳ ಭುಜದಲಿ ಧರಿಸಿ ಪಂಕಜ ತುಳಸೀಮಣಿ ಕೊರಳೊಳ್ ವೇಂಕಟ ಶ್ರೀರಂಗ ವರದ ನಾರಾಯಣ ಕಿಂಕರರೈ ಜಾಜೀಶನಿಗೆ 3
--------------
ಶಾಮಶರ್ಮರು
ತಿಳಿ ನೀನೆ ಪರಬ್ರಹ್ಮ ರೂಪ ಏ ಜೀವಾ ತಿಳಿ ನೀನೆ ಪ ಪ್ರಾಣಕ್ಕೂ ಪ್ರಾಣ ಇದೆ ನೋಡು ಜಾಣ ಈ ವಿಶ್ವದಲ್ಲೇಕ ತಾಣಾ ಒಳ ಹೊರಗೂ ತುಂಬಿರ್ದ ಘನವೇ ನಿರಾಕಾರ ವಿಭುವೇ ಈ ಬ್ರಹ್ಮ ತಿಳಿ ನೀನೆ 1 ಕಲ್ಪನಾ ನೀಗಿ ತಾನೊಂದೆ ಆಗಿ ಅಲ್ಪತ್ವವೆಲ್ಲವು ಪೋಗಿ ಅದೇ ನೋಡು ಸುಖರೂಪಬ್ರಹ್ಮ ಅದೇ ಪೂರ್ಣಬ್ರಹ್ಮ ಆ ಬ್ರಹ್ಮ ತಿಳಿ ನೀನೆ ಪರಬ್ರಹ್ಮರೂಪಾ 2 ಸರ್ವಾಧಾರಾ ನಭದಂತೆ ಪೂರಾ ನಿರ್ವಿಕಲ್ಪ ಸುಖಸಾರಾ ಅದೇ ನೋಡು ಘನಾನಂದರೂಪ ಶಂಕರರೂಪಈ ರೂಪಾ ತಿಳಿ ನೀನೆ ಪರಬ್ರಹ್ಮರೂಪಾ3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿ ಸತ್ಯರೂಪವÀ ಪರಮಾನುಭವವ ಸುವಿಚಾರದಿಂದ ಯೋಚಿಸು ಜೀವಾ ಪ ನಾ ನೀನು ಎನುವಾ ಇದು ಅದು ಎನುವ ನಾನಾತ್ಮಭಾವಾ ಪುಸಿಯಿದು ಜೀವಾ ಏನೊಂದು ಮಿಲ್ಲದೆ ತಾನುಳಿದಿರುವ ಸ್ವಾನುಭವಾತ್ಮಾ ಸತ್ಯನಾಗಿರುವ 1 ಕರ್ತೃವೆನಿಸದ ಭೋಕ್ತøವೆನಿಸದ ಅನಿಸಿಕೆಯಳಿದಾ ನಿತ್ಯನಿರಂಜನ ಮಾಯಾವಿಲಾಸದಿ ತೋರುವನೀಪರಿ ಕನಸಿನೊಲಿದುವೇ ಪುಸಿ ಈ ಜಗವು 2 ಅವಿಚಾರಗಳಿಗೆ ಬೇರಾಗಿ ತೋರೇ ಸುವಿಚಾರದಿಂ ನೋಡೇ ತಿಳಿವುದು ಇದುವೇ ಅದೇ ಪರಮಾತ್ಮನೇ ನೀನಿರುವಿಯಿದೋ ಗುರು ಶಂಕರರಾರ್ಯನ ವರಬೋಧವಿದೋ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿವುದನ್ನಮಯ ಕೋಶಗಳನು ಇಳೆಯೊಳಚ್ಯುತನ ದಾಸರು ನಿತ್ಯದಲಿ ಪ ಮೇದಿನಿ ಸಲಿಲನ್ನಮಯ ವಿಹಾಯಸ ವಾಯು ಮುಖ್ಯಪ್ರಾಣ ಮನೋಮಯಕೆ ಆದುದು ಮನ ಅಹಂಕಾರ ವಿಜ್ಞಾನಮಯ ವೇದ್ಯ ತತ್ತ್ವಾನಂದ ಮಯಕೆ ಅವ್ಯಕ್ತವನು1 ಕೃತಿ ಸಂಕರು ವಾಸುದೇವ ಮಾಯಾ ಘನ ಸುಲಕ್ಷಣ ಲಕ್ಷ್ಮೀ ನಾರಾಯಣರು ಮುಖ್ಯ ರೆನಿಸುವರು ಪಂಚಕೋಶದಲಿ ಎಂದೆಂದೂ 2 ಪ್ರಾಣಾಪಾನ ವ್ಯಾನೋದಾನ ಸಮಾನ ಪಂ ಚಾನಿಲರೂ ಅಲ್ಲಿಹರು ಮತ್ತು ದಾನವಾದಿಗಳಿಹರು ಭೂತ ಮಾತ್ರ ಕರ್ಮ ಜ್ಞಾನೇಂದ್ರಿಯಗಳು ತನ್ನಿಷ್ಟವಾಗಿಹವಲ್ಲಿ 3 ಅಬುಜ ಭವಾಂಡ ಪಿಂಡಾಂಡಕ್ಕೆ ಈ ತತ್ತ್ವ ಒಂಬತ್ತು ಆವರಣವೆಂದೆನಿಪವು ಕಂಬುಪಾಣಿಯ ರೂಪ ಲಕ್ಷ್ಮೀ ರೂಪವು ಪಂಚ ಇಂಬುಗೊಂಡಿಹವು ಚಿಂತಿಪುದು ಭೂಸುರರು 4 ಭೂಶನೇಶ್ವರ ವರುಣ ಸುರನದಿಗಳನ್ನಮಯ ಕೋಶದೊಳಗಿರುತಿಹರು ಪ್ರಾಣಮಯದಿ ಮೇಷವಾಹನ ಪ್ರವಹವಾಯು ಪ್ರಾವಹಿ ಮಹಾ ಕಾಶಾಧಿಪತಿ ಗಣಪರಧಿಪರೆಂದೆನಿಸುವರು 5 ಕಾಮೇಂದ್ರ ಶಿವ ರತೀಂದ್ರಾಣಿ ಪಾರ್ವತಿ ಮುಖ್ಯ ಈ ಮನೋಮಯಕಧಿಪರೆನಿಸುತಿಹರು ತಾಮರಸಭವ ವಾಯು ವಾಣಿ ಭಾರತಿ ಮುಖ್ಯ ಸ್ವಾಮಿಗಳೆನಿಸುವರು ವಿಜ್ಞಾನಕೋಶದಲಿ 6 ಆನಂದಮಯ ಕೋಶಕಭಿಮಾನಿ ಶ್ರೀನಿವಾಸನು ಪಂಚರೂಪಾತ್ಮಕಾ ಈ ನಿರ್ಜರರೊಳಿದ್ದು ತತ್ತದಾಹ್ವಯನಾಗಿ ಪಾನೀಯಜಾಂಡದೊಳಿಪ್ಪ ಕರುಣೀ 7 ಪೃಥಿವಿ ಗಂಧ ಘ್ರಾಣೋಪಸ್ಥಪ್ಪುರ ಸಂಜೀವಾ ಪ್ರಥಮ ಕೋಶದಿ ವಾಯು ಅಷ್ಟತತ್ತ್ವ ದ್ವಿತೀಯ ಕೋಶದಿ ತೇಜರೂಪ ಚಕ್ಷುಪಾದ ಪ್ರಥಮಾಂಗ ಸ್ಪರ್ಶ ತ್ವಕು ಪಾಣಿ ತತ್ವಗಳಿಹವು 8 ಆಕಾಶ ಶಬ್ದ ಶ್ರೋತ್ರವು ಪಿಂತೆ ಪೇಳ್ದಷ್ಟು ವಾಕು ಪ್ರಾಣಾದಿ ತತ್ತ್ವ ದ್ವಾದಶ ಕಾಮ ಶ್ರೀ ಕಂಠ ತತ್ವ ಮನ ಮನೋಮಯದಿ ವಿಜ್ಞಾನ ಕಮಲ ಭವ ನಂದ ಮಯತೆ ಅವ್ಯಕ್ತವನು 9 ಸ್ಥೂಲ ದೇಹಕೆ ಇನಿತು ಲಿಂಗ ತನುವಿನಲಿ ತತ್ತ ್ವ ಜಾಲ ಸೂಕ್ಷ್ಮಗಳಿಹವು ಗುಣ ಭೇದದಿ ಪೇಳುವೆನು ಅವ್ಯಕ್ತ ಮಹದಹಂಕಾರ ಮನ ಮೇಳೈಸಿಹವು ಸತ್ವಪರಿ ಭೇದದಲಿ 10 ರಜೋಪರಿಚ್ಛೇದದಲಿ ಜ್ಞಾನ ಕರ್ಮೇಂದ್ರಿಯವು ರಜನೀ ಗುಣದ ಮಾತ್ರ ಭೂತ ಇಹವು ಯಜಿಸು ಈ ತತ್ತ್ವ ಮಾನಿ ದಿವಿಜರನರಿತು ವೃಜಿನವರ್ಜಿತನಾಗಿ ಸುಪದವೈದುವಿ ಮನುಜ11 ಭೂಮ್ಯಭ್ರನ್ನ ಮಯನಳನೀಳಾಗಸ ಪ್ರಾಣ ಮಯ ಮ ನೋಮಯ ಮಹಾ ಅವ್ಯಕ್ತ ಸಮ್ಯಗಾನಂದ ವಿಜ್ಞಾನಮಯನೆನಿಸಿ ಗುರು ಸಮೀರನೊಳಗಿದ್ದು ಪಾಲಿಸುವ ಜಗವಾ 12 ಪಂಚಕೋಶದ ವಿವರ ತಿಳಿದ ಮಹಾತ್ಮರಿಗೆ ಕಿಂಚಿತಾದರು ದೋಷ ಬರಲರಿಯದು ಮಾರ್ಗಣ ಪಿತ ಜಗನ್ನಾಥ ವಿಠಲನು ಸಂಚತಾಗಾಮಿ ಕರ್ಮಗಳ ಫಲ ಬಿಡಿಸುವನು 13
--------------
ಜಗನ್ನಾಥದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತುಂಗಭದ್ರೆ ಸುತರಂಗಿಣಿ ತೀರಗನ್ಯಾರೇ ಪೇಳಮ್ಮಯ್ಯ ಪ ಮಂಗಳ ಮಹಿಮ ಶುಭಾಂಗ ಮೂರುತಿ | ಶ್ರೀ ಹರಿಹರ ಇವ ಕಾಣಮ್ಮ ಅ.ಪ. ಬಹು ಕಂಟಕಿ ಆ ಗುಹನ ತಪಸಿಗೆ | ಮೆಚ್ಚಿದ ಹರ ನೋಡಮ್ಮಮ್ಮ |ಅಹಿ ಭೂಷಣ ತಾ ವರವನು ಕೊಟ್ಟನು | ಬಹು ಬೇಗನೆ ನೋಡಮ್ಮಮ್ಮ|ವಿಹಗವಾಹ ಹರಿ ಮತ್ತೆ ರುದ್ರನಿಂ | ಇವನ ಜೇಯ ನೋಡಮ್ಮಮ್ಮ |ಮಹಿಯೊಳು ಸುರರಾಹವ ಕೆಡಸುತ | ಬಹು ಹಿಂಸಕ ನೋಡಮ್ಮಮ್ಮ 1 ಸುರಲೋಕಕು ಈ ಅಸುರನ ಬಾಧೆಯು | ತಟ್ಟಿತು ನೋಡಮ್ಮಮ್ಮ |ಸುರ ಭೂಸುರರೆಲ್ಲರು ಮೊರೆಯಿಟ್ಟರು | ಹರಿಯಲಿ ನೋಡಮ್ಮಮ್ಮ |ಸಿರಿಯರಸನು ತಾನಭಯವನಿತ್ತವರನು | ಕಳುಹಿದ ನೋಡಮ್ಮಮ್ಮ | ಕರುಣಾಕರ ತಾ ಹರಿಹರ ರೂಪದಿ | ದುರುಳನ ತರೆದ ನೋಡಮ್ಮಮ್ಮ 2 ಕೃತ್ತಿವಾಸ ತಾ ನಿತ್ತ ವರವ ಹರಿ | ಪಾಲಿಸಿದನು ನೋಡಮ್ಮಮ್ಮ | ದಿತಿಸುತನಾಯುವು ದಶಶತಕಳೆಯಲು | ವತ್ತಿದ ಕೆಳಗವನಮ್ಮಮ್ಮ |ಹಿತದಿಂದಲಿ ತಾ ಭಕುತರ ಪೊರೆಯುವ | ಹರಿಹರನ ನೋಡಮ್ಮಮ್ಮ | ದೈತ್ಯನ ಪೆಸರಿಲಿ ಪಾವನವಾಯಿತು | ಈ ಕ್ಷೇತ್ರವು ಕಾಣಮ್ಮಮ್ಮ 3 ದಕ್ಷಿಣ ಪಾಶ್ರ್ವದಿ ಅಭಯ ಹಸ್ತ | ತ್ರಿಶೂಲ ಧರನ ನೋಡಮ್ಮಮ್ಮ | ಅಕ್ಷಿಯ ಮಾನಿಯು ದಕ್ಷಿಣ ಶಿರದಲಿ | ಮೆರೆಯುವನು ನೋಡಮ್ಮಮ್ಮ | ದಕ್ಷಸುತೆಯು ತಾ ವಿರೂಪಾಕ್ಷನ | ಸೇವಿಪಳೂ ನೋಡಮ್ಮಮ್ಮ |ಪಕ್ಷಿವಾಹಗೆ ತಾನರ ಮೈಯ್ಯಾದನು | ತ್ರ್ಯಕ್ಷನು ಕಾಣಮ್ಮಮ್ಮ 4 ಕಂಬು | ಧರನಾ ನೋಡಮ್ಮಮ್ಮ ಲಕ್ಷ್ಮೀವನಿತೆಯು ಕಾಮನ ಜನಕನ | ಸೇವಿಪಳೂ ನೋಡಮ್ಮಮ್ಮ ಶುಮಲಾಂಗ ವನಮಾಲೆಗಳನು | ಧರಿಸಿಹ ನೋಡಮ್ಮಮ್ಮ |ಸಾಮಸನ್ಮುತ ಗುಣಧಾಮನ ಲೀಲೆ | ಇದೆಲ್ಲವು ಕಾಣಮ್ಮಮ್ಮ 5 ಕ್ರೋಶ ಪಂಚ ನಾಲ್ಕಾರದಿ ಮೀಸಲು | ಸುಕ್ಷೇತ್ರವ ನೋಡಮ್ಮಮ್ಮ | ಭಾಸಿಸುವವು ಇಲ್ಲೆಕಾದಶ ವರ | ತೀರ್ಥಂಗಳು ನೋಡಮ್ಮಮ್ಮ | ಈ ಸುಕ್ಷೇತ್ರವು ಆ ಮಹಕಾಶಿಗೆ | ಸಮವೆನಿಸಿದೆ ನೋಡಮ್ಮಮ್ಮ |ಅಸಮ ಮಹಿಮ ಹರಿ ಅಸುರಗೆ ಕೊಟ್ಟನು | ಈ ಪರಿವರ ಕಾಣಮ್ಮಮ |6| ಕೃತಿ ವಿಧಿ ಜನಕನಿಗೂ | ಭೇದವೆ ಸರಿ ಕೇಳಮ್ಮಮ್ಮ ಮೋದಮಯ ಗುರು ಗೋವಿಂದ ವಿಠಲನ | ಲೀಲೆಗಳಿವು ಕಾಣಮ್ಮಮ್ಮ 7
--------------
ಗುರುಗೋವಿಂದವಿಠಲರು
ತುಂಗೆ ಮಂಗಳ ತರಂಗೆ | ಕರುಣಾಂತರಂಗೆ ರಂಗನಾಥನ ಪದಭೃಂಗೆ ಪ. ಅಂಗಜಪಿತನ ಅಂಗದಿ ಉದ್ಭವೆ ಭವ ಭಂಗ ಹರಿಸೆ ಅಂಗನೆ ಎನ್ನಂತರಂಗದಿ ಹರಿಪಾ- ದಂಗಳ ತೋರಿಸೆ ಶೃಂಗೆ ಶುಭಾಂಗೆ ಅ.ಪ. ಆದಿ ದೈತ್ಯನು ಖತಿಯಲಿ | ಮೇದಿನಿಯ ಸುತ್ತಿ ಒಯ್ದು ಪಾತಳ ಪುರದಲಿ ಮಾಧವ ಕರುಣದಿ ಆದಿವರಾಹನೆಂದೀ ಧರೆಯೊಳು ಬಂದು ಮೇದಿನಿ ಪೊರೆಯಲು ಶ್ರೀದನ ದಾಡೆಯಿಂ ನೀನುದುಭವಿಸಿದೆ 1 ಸ್ನಾನಪಾನದಿ ನರರನು | ಪಾವನಗೈವ ಮಾನಿನಿ ನಿನ್ನ ಕಂಡೆನು ನಾನಾ ದುಷ್ಕøತಗಳ ನೀನೋಡಿಸಿ ಮತ್ತೆ ನಾನು ಎಂಬುವ ನುಡಿ ನಾಲಗೆಗೀಯದೆ ಮಾನವ ಕಾಯೆ ಶ್ರೀನಾಥನ ಪದಧ್ಯಾನವನೀಯೆ 2 ಹರನ ಪೆಸರಿನ ಪುರದಲಿ | ಹರಿದು ಬಂದು ವರ ಶ್ರೀ ಕೂಡಲಿ ಸ್ಥಳದಲಿ ಭರದಿ ಭದ್ರೆಯ ಕೂಡಿ ಪರಿದಲ್ಲಿಂದಲಿ ಹರಿಹರ ಕ್ಷೇತ್ರವ ಬಳಸಿ ಮಂತ್ರಾಲಯ ಪುರಮಾರ್ಗದಿ ಸಾಗರವನೆ ಸೇರಿ ವರ ಗೋಪಾಲಕೃಷ್ಣವಿಠ್ಠಲನೆ ಧ್ಯಾನಿಪೆ 3
--------------
ಅಂಬಾಬಾಯಿ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುಂಬಿ ಬಂದಾಗ) ನಂಬಿದೆನೊ ಸ್ವಾಮಿ ನಂಬಿದೆನೊ ಪ. ಅಂಬುಜಾಕ್ಷ ಸ್ವಪ್ನದಿ ನೀ ತುಂಬಿದಾನಂದ ವಾರ್ತೆಯ ಅ.ಪ. ಈರೇಳು ಲೋಕದ ಜನಕೆ ಮೂರಾವಸ್ಥೆಗಳಲಿ ನೀನೆ ಪ್ರೇರೇಪಿಸುವನೆಂದು ವೇದ ಸಾರವಾಗಿದೆ ನಾರದಾದಿ ಸಕಲ ಮುನಿ ವೀರರೆಲ್ಲ ಸ್ವಪ್ನವು ನಿ- ಸ್ಸಾರವಲ್ಲವೆಂದು ಪೇಳ್ವಾಧಾರದಿಂದ ಭ್ರಮೆಯ ಬಿಟ್ಟು 1 ನಾನು ನನ್ನದೆಂಬ ಬಹು ಹೀನ ಮತಿಯ ಪೇಳ್ವ ನರಗೆ ತಾನಾಗಿ ಬಂದುಸುರಲನುಮಾನಕರವೆಂದು ಶ್ರೀನಿಕೇತನ ನಿನ್ನ ಚರಣ ಮಾನಿಯೆಂದು ಮನ್ನಿಸಿ ಸ್ವಪ್ನಾನುಸರಿಸಿ ಶುಭವ ಪೇಳಿ ದೀನಭಾವ ಕಳೆವಿಯೆಂದು 2 ಇಂದಿರೇಶ ಎನ್ನೊಳಿರುವ ಕುಂದನೊಂದನೆಣಿಸದೆ ಈ ಅಂದದಿಂದಲೆಂದೆಂದಿಗು ತಂದೆ ಕರುಣಿಸು ಸುಂದರಾಂಗ ಶೇಷಗಿರಿ ಮಂದಿರ ನಿನ್ನ ಪಾದಾರ ವಿಂದ ಭಕ್ತಿ ಇತ್ತು ನಿತ್ಯಾನಂದಗೊಳಿಸಿ ಸಲಹೊ ಬೇಗ 3
--------------
ತುಪಾಕಿ ವೆಂಕಟರಮಣಾಚಾರ್ಯ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ತುಳಸೀ ದೇವಿ ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ಸತಿ ಉದ್ಧರಿಸೆನ್ನನೆಂದು ಉದಕವೆರೆದು ನಮಸ್ಕರಿಸಿ ವಂದಿಸುತಲಿ ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ ಉದಿಸಿದೆ ಆನಂದ ಅಶ್ರುಗಳಿಂದಲಿ ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ
--------------
ಅಂಬಾಬಾಯಿ
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ತೂಗೋಣ ಬನ್ನಿ ರಾಯರ | ರಾಯರ ತೂಗೋಣ ಬನ್ನಿ ಪ ಪ್ರಥಮದಿ ಪ್ರಹ್ಲಾದನಾಗಿ | ಭಕುತಿಯಿಂದ ಹರಿಯಕೂಗಿ | ಪಿತಗೆ ಮುಕುತಿ ಪಥವಾ ತೋರಿದಾ ರಾಯರ 1 ಚಂದ್ರಿಕಾರ್ಯ ಭೂಮಿಯೊಳುಭ ಪೂರ್ಣಚಂದ್ರನಂತೆ ಮೆರೆಯುತಿರುವಾ | ಆನಂಧತೀರ್ಥ ಮತೋದ್ಧಾರರ | ರಾಯರ ತೂಗೋಣ ಬನ್ನಿ 2 ಬೋಗ ಭಾಗ್ಯವೆಲ್ಲ ತೊರೆದು ಯೋಗಿವರ್ಯರಾಗಿ ಮೆರೆದ | ರಾಘವೇಂದ್ರ ಯತೇಂದ್ರರ | ರಾಯರ ತೂಗೋಣ ಬನ್ನಿ 3 ಮಂತ್ರಪುರದಿ ನಿಂತು ಭಜಿಪರಂತರಂಗವನ್ನೆ ತಿಳಿದು ಸಂತಸದಿ ಪೂರ್ಣಗೊಳಿಪ ರಾಯರ ತೂಗೋಣಬನ್ನಿ 4 ನಾಮಸ್ಮರಣಿ ಮಾತ್ರದಿಂದ ಕಾಮಿತಾಥ್ವರ್ಥವನ್ನೆ ಕೊಡುವ | ಶಾಮಸುಂದರ ಹರಿಗೆ ಪ್ರಿಯರ | ರಾಯರ ತೂಗೋಣ5
--------------
ಶಾಮಸುಂದರ ವಿಠಲ