ಒಟ್ಟು 2545 ಕಡೆಗಳಲ್ಲಿ , 113 ದಾಸರು , 1936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ದರುಶನಕೆ ಬಂದವನಲ್ಲವೊ ಪುಣ್ಯವಂತರ ದಿವ್ಯ ಚರಣ ನೋಡಲಿ ಬಂದೆ ಪ ಎಲ್ಲೆಲ್ಲಿ ನಿನ್ನ ವ್ಯಾಪ್ತತನವಿರಲಿಕ್ಕೆ ಇಲ್ಲಿಗೆ ಬರುವ ಕಾರಣವಾವುದೊ ಸೊಲ್ಲಿಗೆ ಕಂಭದಲಿ ತೋರಿದ ಮಹಾಮಹಿಮ ಅಲ್ಲಿ ಇಲ್ಲೇನಯ್ಯ ಬಲ್ಲ ಭಜಕರಿಗೆ1 ಕರೆದಾಗಲೆ ಓಡಿ ಬಂದೊದಗುವ ಸ್ವಾಮಿ ಮರಳಿ ಗಾವುದ ಎಣಿಸಿ ಬರಲ್ಯಾತಕೊ ನೆರೆ ನಂಬಿದವರಿಗೆ ಆವಲ್ಲಾದರೇನು ಅರಿದವರ ಮನದೊಳಗೆ ನಿಂದಾಡುವ ಚಂದವಾ 2 ಕಠಿನವೊ ನಿನ್ನ ಭಕುತರನ ನೋಡುವ ಲಾಭ ಸಟೆಯಲ್ಲಾ ವೇದಗಳು ಸಾರುತಿವಕೊ ವಟು ಮೊದಲಾದ ವೈಷ್ಣವಾಗ್ರೇಸರಂಘ್ರಿ ತ್ರಿಟಿಯಾದರೂ ಎನಗೆ ಸೋಕಲು ಗತಿಗೆ ದಾರಿ3 ಧ್ಯಾನಕ್ಕೆ ಸಿಲುಕುವನೆ ನಿನ್ನ ಕಾಣಲಿಬಹುದು ಜ್ಞಾನಿಗಳು ಎಂತು ಬರುವರೊ ಅಲ್ಲಿಗೆ ಅನಂತ ಜನುಮದಲ್ಲಿ ಜಪ ತಪ ಹೋಮ ವ್ರತ ಏನೇನು ಮಾಡಿದರು ಇಷ್ಟು ಜನ ಕೂಡುವದೇ4 ನೀನಿದ್ದ ಸ್ಥಾನದಲಿ ಸಕಲ ಪುಣ್ಯಕ್ಷೇತ್ರ ನೀನಿದ್ದ ಸ್ಥಾನದಲಿ ಸರ್ವತೀರ್ಥ ನೀನಿದ್ದ ಸ್ಥಾನದಲಿ ಸಮಸ್ತ ತಾತ್ವಿಕರು ನಾನಿತ್ತ ಬರುವುದು ನಿನಗೆ ತಿಳಿಯದೆ ಸ್ವಾಮಿ5 ಇದನೆ ಲಾಲಿಸು ಜೀಯಾ ನಿನ್ನದೊಂದೇ ಮೂರ್ತಿ ನಿದರುಶನವಲ್ಲದೆ ಮಿಗಿಲಾವುದೊ ಪದೋಪದಿಗೆ ಮಧ್ವಮತ ಹೊಂದಿದ ಸುಜನರ ಹೃದಯದೊಳಗಾನಂತಪರಿ ನಿನ್ನ ರೂಪಗಳು 6 ಭಳಿರೆ ತಿರುಮಲರಾಯ ನಿನ್ನ ಕರುಣಾ ರಸಕೆ ವೊಲಿದು ಭಕುತರಿಗಾಗಿ ಮದುವೆ ಹಮ್ಮಿಕೊಂಡೆ ಸುಲಭ ದೇವರದೇವ ವಿಜಯವಿಠ್ಠಲ ವೆಂಕಟಾ7
--------------
ವಿಜಯದಾಸ
ನಿನ್ನ ದಾಸನಿವನೇ ಅನನ್ಯ ರಕ್ಷಕÀನೇ ಪ ಅನ್ಯರಿಗಾಲ್ಪರಿಯದಂತೆ ಮನ್ನಿಸಿ ಪೊರಿ ಧ್ವರಿಯೇ ಅ.ಪ ಅನ್ಯನಲ್ಲವೊ ಸ್ವಾಮಿ ಮನ್ನಿಸೀ ಪೊರಿ ಪ್ರೇಮೀ ಘನ್ನವಿಪತ್ತಿವಗೆ ಬಹುಬನ್ನಬಡಿಸುತಿಹುದೋ 1 ಬಂದ ವಿಪತ್ತನ್ನು ಈಗ ಛಿಂದಿಸಿಬಿಡು ವೇಗ ಬಂದಾದುರಿತಗಳೆಲ್ಲ ನೀ ನಿಂದ್ರಾದಂತೆ ಮಾಳ್ಪದೋ 2 ಅನ್ಯರಿUಸಾಧ್ಯವಿದು ಎನ್ನ ಮನಕೆ ತೋರುತಿಹದು ನಿನ್ನನುಳಿದು ಕಾಯ್ವೊರಾರಾಪಾನ್ನ ಜನಪಾಲಾ 3 ಇನ್ನು ಸಂದೇಹವ್ಯಾಕೆ ಘನ್ನ ಮಹಿಮಬೇಡಿಕೊಂಬೆ ನಿನ್ನ ಸೇವಾ ನಿರುತವಿತ್ತು ಎನ್ನವಚನ ಲಾಲಿಸಯ್ಯಾ 4 ಭುವನದೊಳಗೆ ಬಪ್ಪೊದಯ್ಯ ತಾನೆ ಪ್ರೀತನಾಗುವನು 5
--------------
ಗುರುಜಗನ್ನಾಥದಾಸರು
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ನಂಬಿದವರ ಕಾಯೊ ನಿಜವುಳ್ಳ ದೇವ ಎನ್ನನು ಉದ್ಧರಿಸಿ ಕಾಯೊ ಕರುಣಿವೆಂಕಟ ಪ. ಸುರಪತಿಯು ಮುನಿದು ಮಳೆಗರೆಯಲೇಳು ದಿನವೂ ಬಿಡದೆ ತುರುಗಳೆಲ್ಲ ಸೊರಗಿ ಬಾಯ ಬಿಡುತಿರಲು ಬೆರಳಿನಿಂದ ಗೋವರ್ಧನ ಗಿರಿಯನ್ನೆತ್ತಿ ಗೋವ್ಗಳನು ದ್ಧರಿಸಿ ಕಾಯ್ದೆ ಕರುಣಾಸಿಂಧು ಕಮಲಲೋಚನ 1 ಮಡುವಿನೊಳಗೆ ಮಲೆತನೀರ ಕುಡಿಯ ಬಂದಾಗಜವ ನೆಗಳು ಪಿಡಿದು ಕಾಲಕಚ್ಚಿ ಭಂಗಬಡಿಸುತ್ತಿರಲು ತಡೆಯಲಾರದೆ ಪ್ರಾಣ ಬಿಡುವ ಸಮಯದಲ್ಲಿ ಬಂದು ಕೆಡಹಿ ಚಕ್ರದಿಂದ ನೆಗಳ ಕರಿಯ ಸಲಹಿದೆ2 ಮಂದ ತುತ್ತು ಮಾಡಿ ಪಿಡಿದು ಕುದುರೆ ಕ್ರೂರ ದಂತದಿ ಕತ್ತರಿಸುವ ಸಮಯದಲ್ಲಿ ಕಡೆಮಾಡಿ ಕಾಯೆನ್ನ ಕರ್ತು ಹೆಳವನಕಟ್ಟೆ ಕರುಣಿ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ನಿನ್ನ ನಾ ಮರೆತರೂ ಎನ್ನ ಕೈ ಬಿಡದಿರು ಕರುಣಿಚನ್ನಕೇಶವ ಶ್ರೀ ವೆಂಕಟಾದ್ರಿನಿಲಯ ಪ ಎನ್ನ ತಪ್ಪುಗಳ ನಾನು ಮರೆಯಲೆಂತು ಎನ್ನಬೆನ್ನ ನೋಡಿಕೊಳ್ಳಲಹುದೆ ಎನ್ನಿಂದ ಅ ಮಂಜು ಮರೆಯಾಗುವುದು ಮಾರ್ತಾಂಡ ಮೂಡೆಕಂಜಲೋಚನ ನಿನ್ನ ಪದಕಮಲ ಸ್ಮರಣೆರಂಜಿಸಿ ಮನವನು ಪಾರಾಗಿಪುದು ಪಾಪಗಳಅಂಜಿಕೆಯ ಬಿಡಿಸುತ ಅನುಗ್ರಹಿಪ ಕರುಣಿ 1 ದಯೆ ನಿನ್ನದಿರೆ ಭಯ ಎನಗಿಲ್ಲ ಹರಿಮಾಯೆ ಮೋಹಗಳಿಗೆ ಮರುಳಾಗಿಹ ಬೊಂಬೆಜಯವಾಗಿಸಿ ಈ ಜನ್ಮ ಕೃತಾರ್ಥವ ಮಾಡುತೋಯಜಾಕ್ಷ ಶ್ರೀ ನೆಲೆಯಾದಿಕೇಶವರಾಯ2
--------------
ಕನಕದಾಸ
ನಿನ್ನ ನಾಮ ವಾಲ್ಮೀಕಿಯನುದ್ಧರಿಸಿದೆ ದೇವನಿನ್ನ ನಾಮ ಘಂಟಾಕರ್ಣನ ಸಲಹಿದೆ ದೇವನನ್ನನೀಗ ಉದ್ಧರಿಸು ರಂಗಧಾಮ ಪ ತಂದೆಯ ಮುಂದೆ ಮಗನನು ಬೈದು ಭಂಜಿಸಲುತಂದೆಯ ಮುಂದೆ ಪತ್ನಿಯ ಪಿಡಿದೆಳೆದು ಅಂಜಿಸಲುಕುಂದು ಗಂಡಗಲ್ಲದೆ ಹೆಂಡತಿಗುಂಟೆನಿಂದನೆ ಎಲೆ ದೇವ1 ದೊರೆ ನೋಡುತಿದ್ದಂತೆ ಬಂಟನನುಪರರು ಕೊಂಡೊಯ್ಯಲು ಕುಂದುಅರಸಗಲ್ಲದೆ ಆಳಿಗೇನುಅರಿಯಂತೆ ಬಂದೆನ್ನ ನಡವಳಿಯಲಿ ಸ್ವಾನದುರಿತಂಗಳೆಲ್ಲ ಕಾಡುತಿವೆ ಪರಿಹರಿಸು ಎಲೆ ದೇವ 2 ಊದುವ ಕಾಳೆಯದನರ್ಥಕವಾದಲ್ಲಿ ನುಡಿಸುವ ಬಿರುದು ಒಡೆಯಂಗಲ್ಲದೆಮಾಧವನೆ ಎನ್ನ ನಡವಳಿಯಲ್ಲಿ ಹುರುಳಿಲ್ಲಓದುವುದು ನಿನ್ನ ನಾಮಸ್ಮರಣೆಯೆ ಎಲೆ ದೇವಆದರಿಸು ನಿನ್ನ ಲೆಂಕನ ಪ್ರತಿ ಲೆಂಕನಭೇದವೇತಕೆ ನಿನ್ನ ದಾಸ ನಾನು ಬಾಡದಾದಿ ಪ್ರಸನ್ನ ಕೇಶವನೆ ಎನಗಾದ ದುರ್ಮತಿಯ ಪರಿಹರಿಸು ಎಲೆ ದೇವ 3
--------------
ಕನಕದಾಸ
ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು
ನಿನ್ನ ನೀ ತಿಳಿದು ನೋಡೋ ಕೇಳಲೋ ಪ್ರಾಣಿ ಪ ನಿನ್ನ ನೀ ತಿಳಿದು ನೋಡೋ ಪನ್ನಗಾದ್ರೀಶನ ಕೂಡೋ ಬನ್ನ ಭವಣೆ ಈಡ್ಯಾಡೋ ಕೇಳೆಲೋ ಪ್ರಾಣಿ 1 ನಾನಾರು ತನುವಾರು ತನುವಿ ನೊಡೆಯನಾರು ನಾನೀ ನೆಂಬುದರೊಳಾರು ಕೇಳೆಲೋ ಪ್ರಾಣಿ 2 ಹಿಂದಿನ ಪುಣ್ಯಗಳಿಂದ ಬಂದು ನರ ದೇಹದಿಂದ ಬಂದೇನಾ ಘಳಿಸಿನಿಂದೇ ಕೇಳೆಲೋ ಪ್ರಾಣಿ 3 ವಿದ್ಯಾ ವಿತ್ಪತ್ತಿ ತೋರಿ ಗದ್ಯ ಪದ್ಯಗಳ ಬೀರಿ ಬಿದ್ದಿ ಗರ್ವಾರಣ್ಯದಾರೀ ಕೇಳೆಲೋ ಪ್ರಾಣಿ 4 ತಂದೆ ಮಹಿಪತಿ ದಯದಿಂದ ಪಡೆಯೋ ವಿಜಯ ಕಾಯ ಕೇಳೆಲೋ ಪ್ರಾಣಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿನ್ನ ನೋಡಿ ಧನ್ಯನಾದೆನೋ | ಶ್ರೀವೇದ ವ್ಯಾಸನಿನ್ನ ನೋಡಿ ಧನ್ಯನಾದೆನೋ ಪ ನಿನ್ನ ನೋಡಿ ಧನ್ಯನಾದೆ | ಯಜ್ಞಕುಂಡ ದೇಶದಲ್ಲಿಘನ್ನ ಮಹಿಮ ಪೂರ್ಣ ಸಂ | ಪನ್ನ ಮೂರುತಿ ಬಾದರಾಯಣ ಅ.ಪ. ಪಾದ ಭಜಿಸಿ ಅರ್ಚಿಸಿರುವ 1 ನವಸುಮೂರ್ತಿಗಳಲಿ ನಿನ್ನ | ನವ ಸುಭಕ್ತಿಗಳನು ಬೇಡೆನವ ಸುಮಹಿಮೆ ತೋರೆ ಕರಗ |ಳವಲಂಬನದಿ ದಯವ ತೋರ್ದ 2 ಅಷ್ಟು ಮೂರ್ತಿಗಳಲಿ ತಮ್ಮ | ಇಷ್ಟ ಮೂರ್ತಿಯನ್ನೆ ಇರಿಸಿಅಷ್ಟದಿಗಿಭದಂತೆ ಮೆರೆದ | ಅಷ್ಟ ಶಿಷ್ಟರಿಗಿತ್ತ ಮುನಿಯು 3 ನಿರ್ಜರ ಅಂಘೇರಿ ಮಣೂರ 4 ವಿನುತ | ವಕ್ರ ಮನದ ಜನಕೆ ಅಮಿತ್ರ 5 ಯೋಗ ಪಟ್ಟಕ ವಸನ ಚೆಲ್ವ | ಯೋಗದಾಸನ ಕೂರ್ಮದುಪರಿನಾಗನಂತೆ ಪೋಲ್ವ ಜಟಾ | ಸೋಗಿನಿಂದ ಮೆರೆವ ದೇವ 6 ಮೂರ್ತಿ ಭೋಕ್ತ ತ್ರಯ ಸುಮೂರ್ತಿಯಜ್ಞ ಗುರು ಗೋವಿಂದ ವಿಠಲ | ಭಗ್ನ ಗೈಸೊ ಮಾಯ ಪಟಲ 7
--------------
ಗುರುಗೋವಿಂದವಿಠಲರು
ನಿನ್ನ ನೋಡಿದೆ ಕನ್ಯಕುಮಾರಿ | ನಿನ್ನ ನೋಡಿದೆ ಎನ್ನ ಪಾಪಗಳ ನೀಡ್ಯಾಡಿದೆ ಪ ಹಿಮರಾಜಪುತ್ರಿ | ಹೇಮಾಭರಣಗಾತ್ರಿ ಆ ಮಹಾ ಪವಿತ್ರಿ | ಆನಂದ ನೇತ್ರೆ 1 ಉಡುರಾಜನಂತೆ ತಿಲಕದಾಕಾಂತಿ ನೋಡುತಾಲಿ ನಿಂತೆ | ಓಡುತಾಲಿ ಬಂದೆ 2 ಕೋಟಿಸೂರ್ಯಕಿಂತ ಮೇಟಿ ಆ ದಂಥ ಮಾಟವಾದ ಮುಖವ ನೋಡುತ್ತಾ ನಿಂತೆ 3 ತಂದೆ ನಾರಸಿಂಹ ವಿಠಲನ್ನದಯದಿ ಬಂದೆ ಈ ದಿನದಿ ನಿಂದು ಕರುಣಿಸಿದೆ 4
--------------
ಓರಬಾಯಿ ಲಕ್ಷ್ಮೀದೇವಮ್ಮ
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನವ ನಾನು ಎನ್ನಯ್ಯ ನೀನು ನಿನ್ನಿಂದೆನಾನಾ ಎಂದೆಂಬೆ ನಾನು ಧ್ರುವ ನಿನ್ನೊಳು ದಾವ ನಾನು ಎನ್ನೊಳಗಿಹೆ ನೀನು ನಿನ್ನಿಂದೆ ಜೀವಿಸುವನಾಗಿಹೆನು 1 ನನ್ನವಿಡಿದು ನಾನು ಎನ್ನ ಬಾಹ್ಯಾಂತ್ರ ನೀನು ಸೂತ್ರ ನೀನು 2 ಎನ್ನ ಪ್ರೇರಕ ನೀನು ನಿನ್ನ ಪ್ರೀತ್ಯರ್ಥ ನಾನು ನಿನ್ನಿಂದಾದೆ ಪವಿತ್ರ ಪಾತ್ರ ನಾನು 3 ನೀನೆ ಸ್ವಯಂ ಭಾನು ನಿನ್ನಿಂದುದಯ ನಾನು ನಿನ್ನಿಂದಾದ ಮಹಿಗೆ ಪತಿಯೇ ನೀನು 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು