ಒಟ್ಟು 1636 ಕಡೆಗಳಲ್ಲಿ , 112 ದಾಸರು , 1355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಮವ ಮೃಗರಿಪು ಗಿರಿರಮಣ ಮಹಿತಗುಣಾಭರಣ ಪ ಕಾಮಕಲುಷಭವಭೀಮ ಜಲಧಿಗತ ತಾಮಸಾತ್ಮಕಂ ದುರಿತಮಹಿ ಅ.ಪ. ನೀಲಜಲದ ಮದಹೇಳನ ಸುಭಗಶರೀರ ಕುಂದಕುಟ್ಮಲ ಸಮಾನ ಶುಭರದನ 1 ವತ್ಸಲಸಿತ ಶುಭಲಕ್ಷಣ ಲಕ್ಷ್ಮೀಧಾರಾ ಸಾಮಗಾರತ ಸತತಶುಭ ಚರಿತ 2 ಸಂತತಾರ್ತಾದರಚಕ್ರ ವಿಬುಧಗೇಯ ಪಾರಿಜಾತ ದುರಿತಾರಿ ವರದನುತ 3
--------------
ವೆಂಕಟವರದಾರ್ಯರು
ಮಾಮವ ಮೃಗರಿಪು ಗಿರಿರಮಣ-ಮಹಿತ ಗುಣಾಭರಣಪ ಕಾಮ ಕಲುಷಭವ ಭೀಮಜಲಧಿಗತ ತಾಮಸಾತ್ಮಕಂ ದುರಿತಚರಿತ ಮಹಿ ಮಾಮ ಅ.ಪ. ನಿಟಿಲನಯನ ಮಕುಟ ಲಸಿತ ವದನ ನೀರಾ-ಪೂರಾ ನೀಲ ಜಲದ ಮದಹೇಳನ ಸುಭಗಶರೀರ ಕುಂದ ಕುಟ್ಮಲ ಸಮಾನ ಶುಭರದನ 1 ವದನ ವಿಜಿತ ಶರದಮೃತಕಿರಣ ಸುಕುಮಾರಾಕಾರಾ ವತ್ಸಲ ಸಿತ ಶುಭಲಕ್ಷಣ ಲಕ್ಷ್ಮೀಧಾರಾ ಸದಯ ಹೃದಯ ಪರಿತೋಷಿತ ನತಜನ ಸಾಮಗಾನರತ ಶುಭ ಚರಿತ||ಮಾಮವ|| 2 ಕಮಲ ಸಂತತಾರ್ತಾದರ ಚಕ್ರ ವಿಬುಧಗೇಯ ಪ್ರಕಟ ಮಹಿಮ ಮಾಂಡವ್ಯ ಮನೋರಥ ಪಾರಿಜಾತ ದುರಿತಾರಿ ವರದನುತ ||ಮಾಮವ|| 3
--------------
ಸರಗೂರು ವೆಂಕಟವರದಾರ್ಯರು
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾರ ಜನಕನ ನೀರೆ ಪ ಕರವ ಹರುಷದಿಂದಾ ಅ.ಪ ಕ್ಷೀರವಾರ್ಧಿತನಯೆಯೆಂದು ಸಾರಸಾಕ್ಷಿಯರು ಬಂದು ಕೋರಿ ಭಜಿಸುವರು ನಿನ್ನ ಅಪಾರ ಮಹಿಮೆಗಳನು 1 ಸುತ್ತ ಜ್ಯೋತಿಗಳ ಬೆಳಗಿ ಮುತ್ತೈದೆಯರೆಲ್ಲ ಕೂಡಿ ಮುತ್ತು ಮಾಣಿಕ ಪೀಠವಿರಿಸಿ ಭಕ್ತಿಯಿಂದ ಪ್ರಾರ್ಥಿಸುವರು 2 ಜನಕರಾಯನ ಕುಮಾರಿ ಸನಕಾದಿಯೋಗಿ ಜನಾಧಾರೀ ದಿನಕರ ಕೋಟಿ ಪ್ರಕಾಶೆ ದಿವ್ಯಮಣಿಮಯ ಭೂಷೆ 3 ಮಾನಸಾಬ್ಜ ಮಂಟಪದಲಿ ಧ್ಯಾನವೆಂಬೊ ಪೀಠದಲ್ಲಿ ಜ್ಞಾನಿಶಕ್ತಿಗಳು ಪೊಗಳೆ ಸಾನುರಾಗದಿಂದಲೀಗಾ 4 ನಿತ್ಯಸಂಪತ್ಪ್ರದಾಯಿನಿ ಭೃತ್ಯವತ್ಸಲೆ ಜನನೀಸತ್ಯಸಂಕಲ್ಪ ಗುರುರಾಮ ವಿಠಲನ ಪಟ್ಟದರಾಣಿ 5
--------------
ಗುರುರಾಮವಿಠಲ
ಮಾರಕೋಟಿ ರೂಪ ಮೈದೋರು ನೀಂ ಪ ಸೇರಿ ಸುಖಿಸಲೆಂದು ಕೋರಿ ಭಜಿಸುತಿಪರ ಪಾರಕಾಂಕ್ಷಿಯಾದೆನ್ನ ಪಾರಗಾಣಿಸೆ ಅ.ಪ ಮುನ್ನ ಭಕ್ತಬಾಲ ಧ್ರುವನು ಕಷ್ಟದೊಳಗೆ ಯನ್ನ ಕಾಯೊಯೆಂದು ಬಿನ್ನಹಂಗೈಯಲ್ ಚನ್ನರೂಪತೋರಿದೆನ್ನತಾತ ನೀ ನಿನ್ನೂ ಏಕೆ ಬಾರದಿರ್ಪೆ ಜಾಜಿಶ್ರೀಶಾ 1
--------------
ಶಾಮಶರ್ಮರು
ಮಾರಜನಕ ನಂಬಿದೆ ನಿನ್ನ ಪಾರುಮಾಡೆನ್ನ ಪರಮಪಾವನ್ನ ಪ ಮೀರಿತು ಭವಬಾಧೆ ಸೈರಿಸೆನಿನ್ನು ಸಾರಸಾಕ್ಷನೆ ಪರಿಹರಿಸು ಮೋಹನ್ನ ಅ.ಪ ದುಷ್ಟಸಂಸಾರಸಾಗರದೊಳು ಕೆಟ್ಟ ನಿಂದೆಗಳೆಂಬ ಘನತೆರಿಗಳು ಹುಟ್ಟಿ ಏಳುತಲಿಹವು ಸಾಲಿಗೆ ಸಾಲು ಬೆಟ್ಟದಂತೆ ಮಹ ಭೀಕರದೊಳು ಎಷ್ಟಂತ ಈಸಬೇಕಿನ್ನಿದರೊಳು ಸೃಷ್ಟಿಕರ್ತ ನೀನೆ ಮೊರೆ ದಯದೊಳು 1 ವಾಸನ್ಹಿಡಿದು ಸೆಳೆದುನುಂಗ್ವವೈದಾರು ಮೋಸ ಜಲಚರಗಳ ಮೀರಿದ ತೊಡರು ಆಸೆಯೆಂಬ ಮಹ ಸೆಳವಿನ ಜೋರು ಸುಳಿ ಮಡುವು ಸಾವಿರಾರು ಈಸುವುದು ಮುಂದಕ್ಕೆ ಅಗದು ಮಾರು ಶ್ರೀಶನೆ ಪಿಡಿದೆತ್ತಿ ಕರುಣವ ತೋರು 2 ಇಂತು ಭವದ ಸಾಗರವನ್ನು ಎಂತು ದಾಟಿ ನಾ ಪಾರಾಗುವೆನು ನಿಂತುನೋಡಲು ಅಂಜಿ ಮನಸಿಗೆ ಇನ್ನು ಭ್ರಾಂತಿಬಡುತ ನಿನ್ನ ಮರೆಯ ಹೊಕ್ಕೆನು ಚಿಂತಾಯಕ ಭಕ್ತ ತೀವ್ರಬಂದಿನ್ನು ಸಂತಸದಿಂ ಪೊರೆಯೊ ಶ್ರೀರಾಮ ಎನ್ನನು 3
--------------
ರಾಮದಾಸರು
ಮಾರಪಿತನ ತೋರಿದಲ್ಲದೆ ನಾ ಬಿಡೆ ನಿನ್ನ ಪಾದವ ಪ ಧೀರ ಹನುಮ ಘೋರ ರೂಪವ ತೋರಿ ಪಾರಲು ದೂರ ನಾ ಸಾರೆನು ಅ.ಪ. ಭಾರ ಧರಿಸಿ ಕೋರೆ ತೋರುತ ಘೋರ ರೂಪದಿ ಪೋರನೆನ್ನಿಸಿ ನಾರಿ ಹತ್ಯದಿ ಚಾರುವನವ ಸೇರಿದವನ 1 ಜಾರನೆನ್ನಿಸಿ ನಾರಿ ಮಾನವ ಸೂರೆಗೊಳ್ಳುತ ಪಾರಿಪೋಗುವ ಶೂರ ತೇಜಿಯನೇರಿ ಮೆರೆದ ವಾರಿಜಾಕ್ಷನ ಧೀರ ಕಲ್ಕಿಯ 2 ದಾರಿ ತೋರದೆ ಸಾರಿ ನಿನ್ನನು ಕೋರಿ ಭಜಿಪೆನು ಬಾರಿ ಬಾರಿಗೆ ಭಾರತೀಶನೆ ತೋರು ಕರುಣದಿ ಸಾರಸಾಕ್ಷ ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮಾಲೆಯ ಹಾಕುವೆ ಲೀಲೆಯಿಂ ತಳೆವುದು ಶ್ರೀಲಲನಾವರ ಪಾಲಿಸು ಕಂಠವ ಪ ಸಂಪಿಗೆ ಮಲ್ಲಿಗೆ ಮೊಲ್ಲೆಗುಲಾಬಿಯು ಸೊಂಪಿನ ಪಚ್ಚೆಯ ಇಂಪಿನಿಂ ಕಟ್ಟಿದ 1 ಮರುಗ ಸೇವಂತಿಗೆ ಪಾದರಿ ಹೂವಿನ ಮೆರೆವ ಮಂದಾರದ ಪಾರಿಜಾತದ ಸುರ 2 ಸುರಗಿ ಸುಗಂಧರಾಜ ಸುರಹೊನ್ನೆ ದವನವು ಪರಮಗುಣಾಕರ ವರದಹೆಜ್ಜಾಜಿಯ 3
--------------
ಶಾಮಶರ್ಮರು
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಖ್ಯಪ್ರಾಣ ತೋರೋ ಸದಾನಂದಮಯ ಜಗತ್ಪ್ರಾಣ ಪ ನಿಗಮ ತ್ರಿಗುಣ ವ್ಯಾಪಾರ ಶ್ರೀ ರಘುಪತಿ ಪ್ರಿಯನೆ 1 ಮುಕ್ತಿದಾಯಕ ಪರಮಾತ್ಮನು ನೀನೆ 2 (ಉದಾನ) ಸಮಾನ ಸದಾನಂದ ನೀನೆ 3
--------------
ಸದಾನಂದರು
ಮುತ್ತಿ ಎನಗೆ ಬಡಿತವ್ವ ಹರಿ ಭಕ್ತರ ಮನಿಯನ ದೆವ್ವ ಪ ಅತ್ತಿತ್ತಮಾಡಿ ಬೆನ್ನ್ಹತ್ತಿ ಬಿಡದೆ ಎನ್ನ ನೆತ್ತಿಕೊಂಡು ಓಡ್ಹೋಯ್ತವ್ವ ಅ.ಪ ಬಿದ್ದರೆ ಬೀಳಗೊಡಲಿಲ್ಲವ್ವ ಸುಮ್ಮ ನಿದ್ದರೆ ಇರಗೊಡಲಿಲ್ಲವ್ವ ಬುದ್ಧಿಭ್ರಮಿಸಿ ಬಲುಗದ್ದಲಮಾಡೆನ್ನ ಮುದ್ದಿಟ್ಟೆಬ್ಬಿಸಿಕೊಂಡ್ಹೋಯ್ತವ್ವ 1 ಉಟ್ಟದಟ್ಟಬಿಡಿಸೊಗಿತವ್ವ ಬಂದ ಎರವು ಮಾಡಿತವ್ವ ವೊಷ್ಟು ಬಿಡಿಸಿ ಎನ್ನ ಗಟ್ಟ್ಯಪ್ಪಿ ತಿರುಗದ ಬೆಟ್ಟಕ್ಕೆ ಎಳಕೊಂಡ್ಹೋಯ್ತವ್ವ 2 ಭೋರಿಟ್ಟತ್ತರು ಎನ್ನ ಬಳಗವ್ವ ಸಮೀ ಪಾರನು ಬರಗೊಡಲಿಲ್ಲವ್ವ ಸಾರಸೌಖ್ಯಕ್ಕಾಧಾರ ಶ್ರೀರಾಮಪಾದ ಸೇರಿಸಾನಂದಪದವೇರಿಸಿತವ್ವ 3
--------------
ರಾಮದಾಸರು
ಮುತ್ತು ಬಂತಿದೆ ದಿವ್ಯ ಮುತ್ತು ಕೊಳ್ಳಿರೋ ಪ ಮುತ್ತು ಬಂದಿಹುದೀಗ ನೀವೇತ್ತಿಕೊಳ್ಳಿರೆಲ್ಲ ಬಂದು ಉತ್ತಮ ವ್ಯಾಘ್ರಾದ್ರಿ ಪುರುಷೋತ್ತಮನೆಂಬುವ ದಿವ್ಯ 1 ಲೆಕ್ಕವಿಲ್ಲದ ಹಣವಿತ್ತರು ಸಿಕ್ಕದ ದುರ್ಲಭ ಮುತ್ತು ರೊಕ್ಕವಿಲ್ಲದೆ ಭಕ್ತರಿಗೆ ಪುಕ್ಕಟೆಯಲಿ ಸಿಕ್ಕುವಂಥ 2 ಧನವಂತರಿಗೆ ದೊರಕುವದಲ್ಲ ಜನರ ಕೈಗೆ ಸಿಕ್ಕುವದ್ಲ ಮನದಲ್ಲಿ ಧ್ಯಾನಮಳ್ಪ ಮುನಿಗಳ ಸ್ವಾಧೀನವಾದ 3 ಕ್ಷೀರಪಾರಾವಾರದಲ್ಲಿ ತೋರಿ ಮೆರೆವ ಮುತ್ತು ಶ್ರೀರಮಾ ಮನೋಹರನುದಾರ ವರದ ವಿಠಲನೆಂಬ 4
--------------
ವೆಂಕಟವರದಾರ್ಯರು
ಮುತ್ತು ಬಂದಿದೆ-ದಿವ್ಯ ಮತ್ತು ಕೊಳ್ಳಿರೋ ಪ ಮುತ್ತು ಬಂದಿಹುದೀಗನೀವೆತ್ತಿರೊಳ್ಳಿರೆಲ್ಲಬಂದು ಉತ್ತಮವ್ಯಾಘ್ರಾದ್ರಿಪುರುಷೋತ್ತಮನೆಂಬುವ ದಿವ್ಯ 1 ಲೆಕ್ಕವಿಲ್ಲದ ಹಣವಿತ್ತರು ಸಿಕ್ಕದದುರ್ಲಭ ಮುತ್ತು ರೊಕ್ಕವಿಲ್ಲದೆ ಭಕ್ತರಿಗೆ ಪುಕ್ಕಟೆಯಲಿ ಸಿಕ್ಕುವಂಥ 2 ಧನವಂತಗೆ ದೊರಕುವುದಲ್ಲ ಜನರ ಕೈಗೆ ಸಿಕ್ಕುವದಲ್ಲ ಮನದಲ್ಲಿ ಧ್ಯಾನಮಾಳ್ವಮುನಿಗಳ ಸ್ವಾಧೀನವಾದ 3 ಕ್ಷೀರಪಾರಾವಾರದಲ್ಲಿ-ತೋರಿ ಮೆರೆವ ಮುತ್ತು ಶ್ರೀರಮಾಮನೋಹರನುದಾರ ವರದ ವಿಠಲನೆಂಬ 4
--------------
ಸರಗೂರು ವೆಂಕಟವರದಾರ್ಯರು
ಮುದದಿ ನಕ್ರನ ಕೊಂದು ಸಲಹಿದ ಸದುಭಕುತರ ಬಂಧು 1 ನಾರಿಯು ತನ್ನ ಕರೆದಾ ಮಾತ್ರದಿ ಸೀರೆಯ ಮಳೆಗರೆದಾ ಕ್ರೂರ ಖಳರ ಮುರಿದಾ ಪಾಂಡವ- ರಾರಣ್ಯದಿ ಪೊರೆದಾ ನಾರಗೆ ಅಜಮಿಳ ನಾರಾಯಣನೆನೆ ಪಾರುಗಾಣಿಸಿದಪಾರಗುಣನಿಧಿಯಾ 2 ಒಂದು ಬಾರಿಗೆ ಶ್ರೀಶನ ನೆನೆದರೆ ದುರಿತ ನಾಶಾ ಬೆಂದದ್ದು ಬಹುಪಾಶಾ ಅವಗಿ- ನ್ನೆಂದಿಗಿಲ್ಲವೊ ಕ್ಲೇಶಾ ತಂದೆ ಕದರಂಡಲಗಿ ಹನುಮಯ್ಯನೊಡೆಯ ಗೋ- ವಿಂದನ ನೆನೆದವರೆಂದಿಗು ಧನ್ಯರು 3
--------------
ಕದರುಂಡಲಗಿ ಹನುಮಯ್ಯ